ಕೋಲಾರ: ನಮಗೆ ಮಾತ್ರ ಆಚರಣೆ ಮಾಡಲು ಅವಕಾಶ ಮಾಡಿಕೊಡಿ ಎಂದು ಕೋಲಾರದಲ್ಲಿ ವಹ್ನಿಕುಲ ತಿಗಳ ಸಮುದಾಯದಿಂದ ಬೃಹತ್ ಪ್ರತಿಭಟನೆ ಮಾಡಲಾಗಿತು. ಕೋಲಾರ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಮಂದಿ ಜಮಾಯಿಸಿ ನಮ್ಮ ಕರಗ ನಮ್ಮ ನಮ್ಮ ಸಂಪ್ರದಾಯ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ಮಾಡಿದರು. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಎಲ್ಲಾ ಜಾತಿ ಜನಾಂಗದವರು ಕರಗ ಹೊರುವ ಪದ್ದತಿ ಶುರುವಾಗಿದೆ. ಹಾಗಾಗಿ ನಮಗೆ ಮಾತ್ರ ಆಚರಣೆ ಮಾಡಲು ಅವಕಾಶ ಮಾಡಿಕೊಡಿ ಎಂದು ಬೇಡಿಕೆಯಿಟ್ಟಿದ್ದು, ಕೋಲಾರದ ಕಾರಂಜಿಕಟ್ಟೆ ದರ್ಮರಾಯಸ್ವಾಮಿ ದೇವಾಲಯದಿಂದ ಡಿಸಿ ಕಚೇರಿಗೆ ರ್ಯಾಲಿ ಮಾಡಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ. ಕರಗವನ್ನ ಈಗಾಗಲೆ ರಾಜ್ಯ ಸರ್ಕಾರದ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿರುವ ವಹ್ನಿಕುಲ ಕ್ಷತ್ರಿಯ ಸಮಾಜ ಮಾತ್ರ ಹೊರುವಂತೆ ಒತ್ತಾಯ ಮಾಡಿದ್ದಾರೆ.
Author: Author AIN
ದಕ್ಷಿಣ ಭಾರತದಲ್ಲಿ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ಹಾಗೂ ಇತ್ತೀಚೆಗೆ “CWKL” “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಅದ್ದೂರಿಯಾಗಿ ಆಯೋಜಿಸಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿರುವ ನವರಸನ್ ತಮ್ಮ ಈಗಲ್ ಮೀಡಿಯಾ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಚಿತ್ರ “ಸೂತ್ರಧಾರಿ”. ಇದು ನವರಸನ್ ಅವರ ನಿರ್ಮಾಣದ ಐದನೇ ಚಿತ್ರ. ತಮ್ಮ ಗಾಯನ ಹಾಗೂ ಸಂಗೀತ ನಿರ್ದೇಶನದ ಮೂಲಕ ಮೋಡಿ ಮಾಡಿರುವ ಚಂದನ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಟ್ರೆಂಡಿಂಗ್ ನಲ್ಲಿದೆ. “ಡ್ಯಾಶ್” ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಟೀಸರ್ ಹಾಗೂ ಹಾಡುಗಳ ಮೂಲಕ ಮೋಡಿ ಮಾಡಿರುವ “ಸೂತ್ರಧಾರಿ” ಚಿತ್ರದ ಬಿಡುಗಡೆಗೆ ಚಂದನ್ ಶೆಟ್ಟಿ ಅಭಿಮಾನಿಗಳು…
ಬೆಂಗಳೂರು: ಕಳೆದ ಒಂದು ತಿಂಗಳ ಹಿಂದೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಖಾಸಗಿ ಕಾರ್ಯಕ್ರಮ ಮುಗಿದ ಬಳಿಕ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ವಿಡಿಯೋ ವೈರಲ್ ಆದ ಬಳಿಕ ಬಸವೇಶ್ವರ ನಗರ ಪೊಲೀಸರು, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಿಸಿಕೊಂಡು ಇಬ್ಬರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ವಿನಯ್ಗಾಗಿ ಹುಡುಕಾಟ ನಡೆದಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ರೀಲ್ಸ್ಗೆ ಬಳಕೆ ಮಾಡಿದ್ದ ಶಸ್ತ್ರಾಸ್ತ್ರವನ್ನು ಒಪ್ಪಿಸುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಈ ವೇಳೆ ರಬ್ಬರ್ ಮಚ್ಚು ನೀಡಲಾಯಿತು. ಇದು ಕಣ್ತಪ್ಪಿನಿಂದ ಆಗಿದ್ದು, ನಿಜವಾದ ಮಚ್ಚನ್ನು ನೀಡುತ್ತೇವೆ ಎಂದಿದ್ದರು. ಆ ಬಳಿಕ ರೀಲ್ಸ್ಗೆ ಬಳಕೆ ಆದ ಮಚ್ಚನ್ನು ಎಸೆದಿದ್ದಾಗಿ ರಜತ್ ಒಪ್ಪಿಕೊಂಡಿದ್ದಾರೆ. ಕೇಸ್ನಲ್ಲಿ ಇದುವರೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರವನ್ನು ಪೊಲೀಸರ ಎದುರು ಹಾಜರು ಪಡಿಸಿಲ್ಲ. ಹೀಗಾಗಿ ಸಾಕ್ಷಿನಾಶ ಎಂದು ಸಹ ಪೋಲಿಸರು ಕೇಸ್ ದಾಖಲು…
ಭಾರತೀಯ ಚಿತ್ರರಂಗ ಕಂಡ ವಿಭಿನ್ನ-ವಿಶೇಷ ನಿರ್ದೇಶಕರಲ್ಲಿ ಒಬ್ಬರು ರಿಯಲ್ ಸ್ಟಾರ್ ಉಪೇಂದ್ರ. ಬುದ್ದಿವಂತನ ನಿರ್ದೇಶಿಸಿದ ಚಿತ್ರಗಳೆಲ್ಲವೂ ಮಾಸ್ಟರ್ ಪೀಸ್. ಉಪ್ಪಿ ನಿರ್ದೇಶನವನ್ನು ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಮೆಚ್ಚಿ ಹೊಗಳಿದ್ದಾರೆ. ಅಷ್ಟೇ ಯಾಕೆ ಡೈರೆಕ್ಟರ್ ಡೈರೆಕ್ಟರ್ಸ್ ಅಂತಾ ಕರೆಸಿಕೊಳ್ಳುವ ಉಪೇಂದ್ರ ಇದೇ ತಲೈವಾ ಬಗ್ಗೆ ಸಖತ್ ಮಾತುಗಳನ್ನು ಆಡಿದ್ದಾರೆ. ಯುಐ ಸಿನಿಮಾ ಬಳಿಕ ಉಪ್ಪಿ ಅರ್ಜುನ್ ಜನ್ಯ ನಿರ್ದೇಶನದಲ್ಲಿ ನಟಿಸಿದ್ದಾರೆ. 45 ಚಿತ್ರದಲ್ಲಿ ಶಿವಣ್ಣ, ಉಪ್ಪಿ ಹಾಗೂ ರಾಜ್ ಬಿ ಶೆಟ್ಟಿ ಒಟ್ಟಿಗೆ ತೆರೆಹಂಚಿಕೊಂಡಿದ್ದು, ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಆಗಸ್ಟ್ 15ಕ್ಕೆ ಚಿತ್ರ ತೆರೆಗೆ ಬರ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿರುವುದರಿಂದ ಇಡೀ ತಂಡ ಮುಂಬೈ, ಹೈದ್ರಾಬಾದ್ ಹೀಗೆ ಎಲ್ಲ ರಾಜ್ಯಗಳಲ್ಲಿಯೂ ಪ್ರ ಮೋಷನ್ ನಡೆಸುತ್ತಿದೆ. ನಿನ್ನೆ ಬೆಂಗಳೂರಿನಿಂದ ಫ್ಲೈಟ್ ಹತ್ತಿ ಮುಂಬೈಗೆ ಲ್ಯಾಂಡ್ ಆಗಿದ್ದ ಚಿತ್ರತಂಡ ಅಲ್ಲಿಂದ ಹೈದರಾಬಾದ್ ನಲ್ಲಿ ಪ್ರಚಾರ ನಡೆಸಿದೆ. ಈ ವೇಳೆ ಉಪ್ಪಿಗೆ ಕೂಲಿ ಚಿತ್ರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಲೋಕೇಶ್ ಕನಗರಾಜ್…
ಬೆಂಗಳೂರು: “ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಒಕ್ಕಲಿಗ ಸಚಿವರು, ಶಾಸಕರು, ರಾಜ್ಯಸಭೆ ಸದಸ್ಯರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. “ಕರ್ನಾಟಕ ರಾಜ್ಯದ 11ನೇ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಈ ವರದಿ ಬಗ್ಗೆ ಚರ್ಚೆ ನಡೆಸಲು ಇದೇ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ” ಎಂದು ತಿಳಿಸಿದರು. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ “ಈ ಮಧ್ಯೆ ಮಾಧ್ಯಮಗಳಲ್ಲಿ ವಿವಿಧ ವರದಿಗಳು ಪ್ರಕಟವಾಗುತ್ತಿದ್ದು, ಬೇರೆ ನಾಯಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಒದಗಿಸಿಕೊಡಬೇಕಾಗಿರುವುದು ನಮ್ಮ ಕರ್ತವ್ಯ. ಈ ವರದಿಯ ಸಾರಾಂಶವನ್ನು ನಮ್ಮ ಶಾಸಕರಿಗೆ ಮನದಟ್ಟು ಮಾಡುವ…
ಜಗತ್ತಿನಲ್ಲಿ ಈಗ ಎಲ್ಲಿ ನೋಡಿದರೂ ಕೃತಕ ಬುದ್ಧಿಮತ್ತೆ (ಎ. ಐ)ಯದ್ದೇ ಮಾತು. ನಿಧಾನವಾಗಿ ಒಂದೊಂದೇ ಕ್ಷೇತ್ರವನ್ನು ಆವರಿಸಿಕೊಂಡು ಬರುತ್ತಿರುವ ಕೃತಕ ಬುದ್ಧಿಮತ್ತೆ (ಎ. ಐ) ಕೆಲ ಸಮಯದ ಹಿಂದೆಯೇ ಚಿತ್ರರಂಗವನ್ನೂ ಸ್ಪರ್ಶಿಸಿದೆ. ಈಗಾಗಲೇ ಸಿನಿಮಾಗಳ ಹಲವು ವಿಭಾಗಗಳಲ್ಲಿ, ಪ್ರೀ-ಪ್ರೊಡಕ್ಷನ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಎ. ಐ ಬಳಕೆ ನಿಧಾನವಾಗಿ ಹೆಚ್ಚಾಗುತ್ತಿದೆ. ಈಗ ಈ ವಿಷಯದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಒಂದು ಚಿತ್ರತಂಡ ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (ಎ. ಐ) ಮೂಲಕವೇ ತಯಾರಾದ ‘ಲವ್ ಯು’ ಎಂಬ ಹೆಸರಿನ ಮೊದಲ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದೆ. ‘ಲವ್ ಯು’ ಎಂಬ ಹೆಸರಿನ ಈ ಸಿನಿಮಾವನ್ನು ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ (ಎ. ಐ) ಬಳಸಿ ನಿರ್ಮಿಸಲಾಗಿದೆ. ಈಗಾಗಲೇ ಜಗತ್ತಿನ ಅನೇಕ ಚಿತ್ರರಂಗಗಳಲ್ಲಿ, ಸಿನಿಮಾಗಳ ವಿವಿಧ ವಿಭಾಗಗಳಲ್ಲಿ ಎ. ಐ (AI) ತಂತ್ರಜ್ಞಾನವನ್ನು ಬಳಸಲಾಗುತ್ತಿದೆಯಾದರೂ, ಸಂಪೂರ್ಣವಾಗಿ ಎ. ಐ ಮೂಲಕವೇ ಇಡೀ ಸಿನಿಮಾವನ್ನು ನಿರ್ಮಿಸುವ ಸಾಹಸ ಎಲ್ಲಿಯೂ ನಡೆದಿರಲಿಲ್ಲ. ಆದರೆ ಇದೇ…
ಬಾಗಲಕೋಟೆ ಜಿಲ್ಲೆ ಜಮಖಂಡಿ ರಬಕವಿ ಬನಹಟ್ಟಿ ಮುಧೋಳ ಬಾಗಲಕೋಟೆಯಲ್ಲಿ ಯಾರ ಭಯಾನು ಇಲ್ಲದೆ ರಾಜಾರೋಷವಾಗಿ ನಡಿತಾಯಿದೆ ಅಕ್ರಮ ತಂಬಾಕು ಮಿಶ್ರಿತ ಮಾವಾ ದಂದೆ. ಚಿಕ್ಕ ಪುಟ್ಟ ಅಂಗಡಿಗಳಲ್ಲೂ ಸಿಗತ್ತೆ ಮಾವಾ. ಇದರಿಂದ ಚಿಕ್ಕ ಮಕ್ಕಳ ಮನಸ್ಸಿನ ಮೇಲೆ ಪರಿಣಾಮವಾಗಿ ದುಷಚಟಕ್ಕೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕಂಡು ಕಾಣದಂತೆ ಕುಳಿತ್ತಿದ್ದು ಯಾಕೆ…? ಈ ಅಕ್ರಮ ಮಾವಾ ದಂದೆ ಕೋರರ ಮೇಲೆ ಸಂಬಂಧ ಪಟ್ಟ ಅಧಿಕಾರಿಗಳ ಕೃಪಾಕಟಾಕ್ಷ ಇರಬಹುದೇನೋ ಎಂದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಅದು ಏನೇ ಆಗಲಿ ಇನ್ನು ಮುಂದಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ಮಾವಾ ದಂದೆಕೋರರನ್ನು ತರಾಟೆಗೆ ತೆಗೆದುಕೊಂಡು. ಸಾರ್ವಜನಿಕರನ್ನು ಅಕ್ರಮ ಮಾವಾದಿಂದ ಮುಕ್ತಿ ಕೊಡಿಸುತ್ತಾರಾ…? ಎಂದು ಕಾದು ನೋಡಬೇಕಿದೆ.
ಬಳ್ಳಾರಿ: ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ರನ್ನು ಬಳ್ಳಾರಿಯಲ್ಲಿ ಅದ್ದೂರಿಯಾಗಿ ಸನ್ಮಾನ ಮಾಡಲಾಯಿತು. ಶಾಸಕ ನಾಗೇಂದ್ರ ಮತ್ತು ಭರತ್ ರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿಮಾನಿಯೊಬ್ಬ ನಾಸೀರ್ ಹುಸೇನ್ ಅವರಿಗೆ ದೃಷ್ಟಿ ತೆಗೆದು ಹಣವನ್ನು ತೂರಿದರು. ಸಾಮಾನ್ಯ ಕಾರ್ಯಕರ್ತರಾಗಿ ಬಳ್ಳಾರಿಯಿಂದ ರಾಜಕೀಯ ಜೀವನ ಆರಂಭ ಮಾಡಿದ ನಾಸೀರ್ ಹುಸೇನ್, ದೇಶದ ಅತಿದೊಡ್ಡ ಪಕ್ಷವಾದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗೋದು ಅಂದ್ರೆ ಸರಳವಾದ ಮಾತಲ್ಲ. ನಿರಂತರ ಹೋರಾಟದಿಂದ ಈ ಸ್ಥಾನಕ್ಕೆ ಬಂದಿದ್ದಾರೆಂದು ಶಾಸಕ ನಾಗೇಂದ್ರ ಹೇಳಿದರು. ಇನ್ನೂ ಈ ವೇಳೆ ಕಾರ್ಯಕರ್ತರ ಒತ್ತಾಸೆ ಮೇರೆಗೆ ನಾಗೇಂದ್ರ ಭರ್ಜರಿ ಸ್ಟೆಪ್ ಹಾಕಿ ರಂಜಿಸಿದರು.
ಕಿಚ್ಚ ಸುದೀಪ್ ಅಭಿಮಾನಿಗಳು ಕಾಯ್ತಿದ್ದ ಆ ಕ್ಷಣ ಬಂದೇ ಬಿಟ್ಟಿದ್ದೆ. ಇಂದು ಬಿಲ್ಲ ರಂಗ ಭಾಷಾ ಚಿತ್ರದ ಚಿತ್ರೀಕರಣಕ್ಕೆ ಕಿಕ್ ಸ್ಟಾರ್ಟ್ ಸಿಕ್ಕಿದೆ. ಇಂದಿನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ. ವಿಶೇಷವಾದ ಪೋಸ್ಟರ್ ಮೂಲಕ ಚಿತ್ರತಂಡ ಶೂಟಿಂಗ್ ಆರಂಭವಾಗಿದೆ ಎಂದು ಹೇಳಿದೆ. ನಿರ್ದೇಶಕ ಅನೂಪ್ ಭಂಡಾರಿ ಮಾತನಾಡಿ, ʼ20 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ. ಚಿತ್ರದ ಪ್ರಮುಖ ಆಕ್ಷನ್ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಅದ್ಭುತ ಸೆಟ್ ಕೆಲಸ ನಡೆಯುತ್ತಿತ್ತು. ಅದು ಈಗ ಪೂರ್ಣಗೊಂಡಿದ್ದು ಚಿತ್ರೀಕರಣಕ್ಕೆ ಸಿದ್ಧವಾಗಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ ಬಳಿಕ ಬ್ರೇಕ್ ತೆಗೆದುಕೊಂಡು ಮುಂದಿನ ಹಂತದ ಶೂಟಿಂಗ್ ಗೆ ಸಜ್ಜಾಗುತ್ತೇವೆʼ ಎಂದು ತಿಳಿಸಿದ್ದಾರೆ. ಈ ಹಿಂದೆ ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಬಿಲ್ಲ ರಂಗ ಭಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ.…
ಭಾರತ ಕ್ರಿಕೆಟ್ ತಂಡದ ಬಾಂಗ್ಲಾದೇಶ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಟೀಮ್ ಇಂಡಿಯಾ ಆಗಸ್ಟ್ 13 ರಂದು ಢಾಕಾಗೆ ಆಗಮಿಸಲಿದೆ. ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 17 ರಂದು ಆರಂಭವಾಗಲಿದೆ. ಮೂರು ಪಂದ್ಯಗಳ ಟಿ20 ಸರಣಿ ಆಗಸ್ಟ್ 26 ರಂದು ಆರಂಭವಾಗಲಿದೆ. ಎಲ್ಲಾ ಪಂದ್ಯಗಳು ಮಿರ್ಪುರ್ ಮತ್ತು ಚಿತ್ತಗಾಂಗ್ನಲ್ಲಿ ನಡೆಯಲಿವೆ. ಬಾಂಗ್ಲಾದೇಶ ಪ್ರವಾಸದಲ್ಲಿ ಹಿರಿಯ ಆಟಗಾರರು ಆಡುವುದು ಕಷ್ಟಕರವಾಗಿದೆ. ಇದರಲ್ಲಿ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರ ಹೆಸರುಗಳು ಸೇರಿವೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಇದರೊಂದಿಗೆ ಏಕದಿನ ನಾಯಕ ರೋಹಿತ್ ಶರ್ಮಾ ಅವರ ಪ್ರದರ್ಶನದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಏಕೆಂದರೆ, ಆ ಸಮಯದಲ್ಲಿ, ಭಾರತ ತಂಡವು ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿದ ನಂತರ ಭಾರತಕ್ಕೆ ಮರಳಲಿದೆ. ಇದು ಆಟಗಾರರನ್ನು ಸುಸ್ತಾಗಿಸುತ್ತದೆ. ಇದರೊಂದಿಗೆ, ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಏಕದಿನ ಸರಣಿಯಲ್ಲಿ ಆಡುವುದು ಸಹ ಅನುಮಾನವಾಗಿದೆ. ಏಕೆಂದರೆ, ಈ ಆಟಗಾರರು ಇಂಗ್ಲೆಂಡ್…