Author: Author AIN

ಗದಗ: ರಾಜ್ಯದಲ್ಲಿ ಅಕ್ರೋಶದ ಜ್ವಾಲೆ ಹೊತ್ತಿಸಿರುವ ಜಾತಿಗಣತಿ ವರದಿಗೆ ಲಿಂಗಾಯತ ವೀರಶೈವ-ಸಮುದಾಯ ಕೊತ ಕೊತ ಅಂತ ಕುದಿಯುತ್ತಿದೆ. ಇದೀಗ  ಗದಗನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಶ್ರೀಗಳು ಜಾತಿ ಗಣತಿ ವರದಿಗೆ ಅಸಮಾಧಾನ ಹೊರಹಾಕಿದ್ದಾರೆ. ಜಾತಿ ಗಣತಿ ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಅಂತ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಶ್ರೀಗಳು, ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿ ಗಣತಿ ಸಿದ್ದಪಡಿಸಿದ್ದಾರೆ. ಆ ಜಾತಿ ಗಣತಿ ವರದಿ ಸಮರ್ಪಕವಾಗಿ ಇಲ್ಲ/ ಆ ವರದಿಯನ್ನ ಸಿದ್ದಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನ ಸಂಪರ್ಕಿಸಿಲ್ಲವೆಂಬ ಆರೋಪವಿದೆ. ಕರ್ನಾಟಕದಲ್ಲಿ ಲಿಂಗಾಯತರು ಬಹು ಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಇದ್ದಾರೆ. ಆದರೆ ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರೋ ಕಾರಣವಾಗಿರಬಹುದು. ಹೀಗಾಗಿ…

Read More

ಬೆಂಗಳೂರು: ನಗರದಲ್ಲಿ ನಕಲಿ ಬ್ರಾಂಡೆಡ್ ಬಟ್ಟೆ ಮಾರಾಟ  ಮೇಲಿನ ದಾಳಿ ಮುಂದುವರಿದೆ. ಪ್ರತಿಷ್ಟಿತ ಬ್ರಾಂಡ್ ಗಳ ತಲೆ ಮೇಲೆ ಹೊಡೆದಂಗೆ ಅದೇ ಬ್ರಾಂಡ್ ಗಳ ಲೇಬಲ್ ಬಳಜೆ ಮಾಡಿ ನಕಲಿ ಸಿದ್ದ ಉಡುಪು ತಯಾರಿಕೆ ಮಾಡ್ತಿದ್ದ ಘಟಕದ ಮೇಲೆ ಮಾದಾನಾಯನಹಳ್ಳಿ ಪೊಲೀಸ್ರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು ನಲವತ್ತು ಲಕ್ಷ ಮೌಲ್ಯದ ನಕಲಿ ಬ್ರಾಂಡೆಂಡ್ ಬಟ್ಟೆಗಳನ್ನ ಸೀಜ್ ಮಾಡಿದ್ದಾರೆ. ಪ್ರತಿಷ್ಠಿತ ಬ್ರಾಂಡ್ ಗಳಾದ ಪೋಲೋ, ಬಾರ್ಬೆರಿ ಲೇಬಲ್ ಬಳಕೆ ಮಾಡಿ ಗಾರ್ಮೇಂಟ್ ತಯಾರು ಮಾಡ್ತಿರೋ ಬಗ್ಗೆ ಕಂಪನಿಯವರು ಮಾಹಿತಿ ಕಲೆ ಹಾಕಿ ಮಾದನಾಯಕನಹಳ್ಳಿ ಪೊಲೀಸ್ರಿಗೆ ದೂರು ನೀಡಿದ್ರು. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಮಾದನಾಯಕನಹಳ್ಳಿ ಠಾಣವ್ಯಾಪ್ತಿಯ ತೋಟದ ಗುಡ್ಡದಹಳ್ಳಿಯಲ್ಲಿ ಆಶ್ರಫ್, ಶರ್ಪುದ್ದೀನ್ ಮತ್ತು  ಸರವಣ ಎಂಬುವವರು ಈ ನಕಲಿ ಗಾರ್ಮೆಂಟ್ ಫ್ಯಾಕ್ಟರಿ ನಡೆಸ್ತಿದ್ರು. ಮಾದನಾಯಕನಹಳ್ಳಿ ಪೊಲೀಸ್ರ ದಾಳಿ ವೇಳೆ ಅನಧಿಕೃತವಾಗಿ ಫ್ಯಾಕ್ಟರಿಯಲ್ಲಿ ಪೋಲೋ, ಬಾರ್ಬೆರಿ ಬ್ರಾಂಡ್ ಗಳ ಶರ್ಟ್ ಗಳು ಗಾರ್ಮೆಂಟ್ ಉತ್ಪನ್ನಗಳು ಪತ್ತೆಯಾಗಿವೆ. ಈ ವಸ್ತುಗಳ ಅಂದಾಜು ಮೌಲ್ಯ ಸುಮಾರು 40 ಲಕ್ಷ…

Read More

ಬೆಂಗಳೂರು: “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನ್ಯಾಷನಲ್ ಹೆರಾಲ್ಡ್ ಜವಾಹರ್ ಲಾಲ್ ನೆಹರು ಅವರು ಹುಟ್ಟುಹಾಕಿದ ಸಂಸ್ಥೆ. ಅವರ ಕುಟುಂಬ ಇದನ್ನು ಎಂದೂ ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ಅವರು ಈ ಸಂಸ್ಥೆಯಿಂದ ಆಸ್ತಿ ಮಾಡಿಕೊಂಡಿಲ್ಲ. ಅನೇಕರ ಸಹಕಾರದಿಂದ ಈ ಸಂಸ್ಥೆ ನಡೆಸಿಕೊಂಡು ಬರಲಾಗಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಅನಗತ್ಯವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ನಾವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗ ಪ್ರತಿಭಟನೆ ಮಾಡುತ್ತೇವೆ” ಎಂದು ತಿಳಿಸಿದರು. “ನಾಡಿದ್ದು, ಅಂದರೆ ಏ.17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ ನಿಗದಿ ಮಾಡಲಾಗುವುದು” ಎಂದು ಹೇಳಿದರು.

Read More

ಪೋಷಕರು ತಮ್ಮ ಮಕ್ಕಳಿಗೆ ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸುತ್ತಾರೆ. ಆದರೆ ಪೋಷಕರು ಎಷ್ಟೇ ಪ್ರಯತ್ನಿಸಿದರೂ, ಕೆಲವೊಮ್ಮೆ ಪೋಷಕರು ತಿಳಿಯದೆ ತಪ್ಪುಗಳನ್ನು ಮಾಡುತ್ತಾರೆ. ಅದು ಮಕ್ಕಳ ಮನಸ್ಸಿನಲ್ಲಿ ಅವರನ್ನು ಖಳನಾಯಕರಂತೆ ಚಿತ್ರಿಸುತ್ತದೆ. ಇದು ಪೋಷಕರು ಮತ್ತು ಮಕ್ಕಳ ಸಂಬಂಧದಲ್ಲಿ ಬಿರುಕುಗಳನ್ನು ಉಂಟುಮಾಡುತ್ತದೆ. ತತ್ವಜ್ಞಾನಿ, ಆಧ್ಯಾತ್ಮಿಕ ಮತ್ತು ತಂತ್ರಜ್ಞ ಆಚಾರ್ಯ ಚಾಣಕ್ಯ ಅವರು ಬರೆದ ನೀತಿ ಶಾಸ್ತ್ರ ಎಂಬ ಪುಸ್ತಕದಲ್ಲಿ ಪೋಷಕರು ಮತ್ತು ಮಕ್ಕಳ ನಡುವಿನ ಸಂಬಂಧವನ್ನು ಉಲ್ಲೇಖಿಸಲಾಗಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯದು ಎಂದು ಭಾವಿಸುವ ಕೆಲಸಗಳು ಅವರಿಗೆ ತಿಳಿಯದೆಯೇ ಪೋಷಕರು-ಮಗುವಿನ ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಬಹುದು ಎಂದು ಅವರು ಹೇಳಿದ್ದಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಮಾಡಬಾರದ 4 ಕೆಲಸಗಳು ಯಾವುವು ಎಂಬುದನ್ನು ಕಂಡುಹಿಡಿಯೋಣ. ಹೋಲಿಕೆ: ಪೋಷಕರು ತಮ್ಮ ಮಕ್ಕಳನ್ನು ಎಂದಿಗೂ ಇತರರೊಂದಿಗೆ ಹೋಲಿಸಬಾರದು. ಪೋಷಕರು ಮಾಡುವ ದೊಡ್ಡ ತಪ್ಪು ಎಂದರೆ ತಮ್ಮ ಮಕ್ಕಳನ್ನು ಪಕ್ಕದ ಮನೆಯ ಮಕ್ಕಳೊಂದಿಗೆ ಅಥವಾ ಅವರ ಸಂಬಂಧಿಕರ ಮಕ್ಕಳೊಂದಿಗೆ ಹೋಲಿಸುವುದು. ಇದರಿಂದ ಮಕ್ಕಳು ತಮ್ಮ ಹೆತ್ತವರ ಮೇಲೆ ಕೋಪ…

Read More

ಬೆಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನಾಲ್ವರ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ ಓರ್ವ ಹಾಗೂ ತಲೆಮರೆಸಿಕೊಂಡಿರುವ ಮೂವರು ನಿಷೇಧಿತ ಪಿಎಫ್ಐ ಸಂಘಟನೆ ಆರೋಪಿಗಳು ಸೇರಿ ಒಟ್ಟು ನಾಲ್ವರ ವಿರುದ್ಧ 2ನೇ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ. ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಅಬ್ದುಲ್ ನಾಸೀರ್, ನೌಷದ್, ಅಬ್ದುಲ್ ರೆಹಮಾನ್ ಹಾಗೂ ಕಳೆದ ಜನವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ಅತೀಕ್ ಅಹಮದ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಐಪಿಸಿ) ಹಾಗೂ ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆಯಡಿ (ಯುಎಪಿಎ) ವಿವಿಧ ಸೆಕ್ಷನ್ ಗಳನ್ನ ದಾಖಲಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಈ ಪೈಕಿ 21 ಮಂದಿ ಬಂಧಿಸಿದರೆ ಒಟ್ಟು ಆರು ಮಂದಿ ಆರೋಪಿಗಳು ತಲೆಮರೆಸಿಕೊಂಡರೆ ಮತ್ತೋರ್ವ ಮೃತಪಟ್ಟಿದ್ದಾನೆ ಎಂದು ಎನ್ಐಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಬೆಂಗಳೂರು: ಮೆಟ್ರೋ ಕಾಮಗಾರಿ  ನಿರ್ಲಕ್ಷ್ಯಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಕಾಮಗಾರಿ ಎಡವಟ್ಟಿಗೆ ಆಟೋ ಚಾಲಕ ಬಲಿಯಾಗಿರುವ ಘಟನೆ ಕೋಗಿಲು ಕ್ರಾಸ್ ಬಳಿ ನಡೆದಿದೆ. ಕಾಸಿಂ ಸಾಬ್ (35) ಮೃತ ದುರ್ದೈವಿಯಾಗಿದ್ದು, ರಾತ್ರಿ ಮೆಟ್ರೋ ಕಾಮಗಾರಿಗೆಂದು ಲಾರಿಯಲ್ಲಿ ತರಲಾಗುತಿದ್ದ, ವಯಾಡೆಕ್ಟ್ ಕೆಳಗೆ ಬಿದಿದ್ದು, ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಆಟೋ ಮೇಲೆ ಬಿದ್ದು, ಆಟೋ ಚಾಲಕ ಸಾವನಪ್ಪಿದ್ದಾರೆ. ಸರಿಸುಮಾರು ಮಧ್ಯರಾತ್ರಿ 12 ಗಂಟೆ ದುರಂತ ಸಂಭವಿಸಿದ್ದು, ಘಟನೆ ಬಳಿಕ ಕೊಂಚ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಘಟನೆ ಕಣ್ಣಾರೆ ಕಂಡ ಜನ ಆತನ ರಕ್ಷಣೆಗೆ ದಾವಿಸಿದ್ದರು. ಆದರೆ ಬೃಹತ್ ಗಾತ್ರದ ವಯಾಡೆಕ್ಟ್ ತೆಗೆಯಲು ಕ್ರೇನ್ ಅತ್ಯಗತ್ಯವಾಗಿತ್ತು. ಸ್ಥಳಕ್ಕೆ ಪೊಲೀಸರು ಬಂದರೂ ಸಹ ಕ್ರೇನ್ ಮಾತ್ರ ಬರಲು ತಡವಾಯಿತು. ಇದರಿಂದ ಆಕ್ರೋಶಗೊಂಡ ಜನ ಕಲ್ಲುತೂರಾಟ ಸಹ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಎರಡು ಗಂಟೆ ಬಳಿ ಕ್ರೇನ್ ತರಿಸಿ ವಯಾಡೆಕ್ಟ್ ಪಕ್ಕಕ್ಕೆ ಇಡುವ ಮೂಲಕ ಮೃತದೇಹ ಹೊರ ತೆಗೆಯಲಾಗಿದೆ. ಇನ್ನು ಈ ದುರಂತಕ್ಕೆ ಮೆಟ್ರೋ…

Read More

ಬೆಂಗಳೂರು : ಗೃಹೋಪಯೋಗಿ ಸಾಧನಗಳ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವರ್ಲ್‌ಪೂಲ್ ಭಾರತದ ಅತ್ಯಂತ ವೇಗದ ಕನ್ವರ್ಟಬಲ್ ರೆಫ್ರಿಜಿರೇಟರ್ ಬಿಡುಗಡೆ ಮಾಡಿದೆ. ವರ್ಲ್‌ಪೂಲ್ ನ ಇಂಟೆಲಿಫ್ರೆಶ್ ಪ್ರೋ ಶ್ರೇಣಿಯ ಟಾಪ್ ಮೌಂಟ್(ಫ್ರಾಸ್ಟ್-ಫ್ರೀ) ಫ್ರಿಜ್‌ಗಳು ಹೆಚ್ಚುವರಿ ಆಹಾರವನ್ನು ಸುಧಾರಿತ ರೀತಿಯಲ್ಲಿ ಸಂಗ್ರಹಿಸಲು ಸ್ಮಾರ್ಟ್ ಪರಿಹಾರವನ್ನು ಒದಗಿಸುತ್ತವೆ. ಈ ಫ್ರಿಜ್‌ಗಳು ಕೇವಲ 10 ನಿಮಿಷಗಳಲ್ಲಿ ಫ್ರೀಜರ್ ಅನ್ನು ಫ್ರಿಜ್ ಆಗಿ ಪರಿವರ್ತಿಸಲಿದೆ. ಇಂಡಿಯಾದ ಅತಿ ವೇಗದ ಕನ್ವರ್ಟಬಲ್ ಫ್ರಿಜ್ ಶ್ರೇಣಿ ಈಗ ಸಂಪೂರ್ಣ ಆಹಾರ ಸಂರಕ್ಷಣೆಯೊಂದಿಗೆ ನಿಮ್ಮ ಮನೆಯ ಅಗತ್ಯಗಳಿಗೆ ಅನುಗುಣವಾಗಿ ರೂಪುಗೊಂಡಿದೆ. ಇದರಲ್ಲಿ 2 ಪಟ್ಟು ಹೆಚ್ಚು ವಿಟಮಿನ್‌ ಶೇಖರಣಾ ಸಾಮರ್ಥ್ಯವಿದೆ ಮತ್ತು ಮೈಕ್ರೋಬ್ಲಾಕ್ ತಂತ್ರಜ್ಞಾನವನ್ನು ಒಳಗೊಂಡಿದ್ದು, 99% ಬ್ಯಾಕ್ಟೀರಿಯಾಗಳನ್ನು ತಡೆಯುತ್ತದೆ. ಇದರಿಂದ ಆಹಾರವನ್ನು ಹೆಚ್ಚು ಕಾಲ ತಾಜಾ ಮತ್ತು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ. ಬಳಕೆದಾರರು ತಮ್ಮ ಜೀವನಶೈಲಿಗೆ ಅನುಗುಣವಾಗಿ ಫ್ರಿಜ್ ಸೆಟ್ಟಿಂಗ್‌ಗಳನ್ನು ಕಸ್ಟಮೈಸ್ ಮಾಡಿಕೊಳ್ಳಬಹುದು. ವೈಶಿಷ್ಟಗಳು: ಫ್ರೀಜರ್‌ನಿಂದ ಫ್ರಿಜ್‌ಗೆ ಕೇವಲ 10 ನಿಮಿಷಗಳಲ್ಲಿ ಪರಿವರ್ತನೆಗೊಳ್ಳುತ್ತದೆ. 10-ಇನ್-1 ಕನ್ವರ್ಟಿಬಲ್ ಮೋಡ್‌ಗಳು; ಪ್ರತಿ ಅವಶ್ಯಕತೆಗೆ ಸೂಕ್ತವಾದ…

Read More

ಮೈಸೂರು: ಸಿದ್ದರಾಮಯ್ಯ ಜಾತಿಗಣತಿ ವರದಿ ಮೂಲಕ ಖುರ್ಚಿ ಉಳಿಸಿಕೊಳ್ಳುವ ನಾಟಕ ಆಡ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜಾತಿಗಣತಿ ವರದಿ ಮೂಲಕ ಖುರ್ಚಿ ಉಳಿಸಿಕೊಳ್ಳುವ ನಾಟಕ ಆಡ್ತಿದ್ದಾರೆ. ಜಾತಿಗಣತಿ ಸಂಖ್ಯೆಯನ್ನು ಹೊರ ಹಾಕಿ ಸಿಎಂ ಸಿದ್ದರಾಮಯ್ಯ ತನ್ನ ಪಕ್ಷ ಹಾಗೂ ಪ್ರತಿಪಕ್ಷ ಇಬ್ಬರನ್ನೂ ಕುರಿ ಮಾಡಿದ್ದಾರೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಇಲ್ಲಿ ಒಡೆಯುತ್ತಿರುವುದು ಯಾವುದೇ ಒಂದು ಜಾತಿಯನ್ನಲ್ಲ. ಒಟ್ಟಾರೆ ಹಿಂದು ಧರ್ಮವನ್ನು ಒಡೆಯುವುದಕ್ಕೇ ಸಿದ್ದರಾಮಯ್ಯ ಹೊರಟಿದ್ದಾರೆ. ಹಿಂದುಗಳಲ್ಲಿನ ಎಲ್ಲಾ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಒಡೆದಿದ್ದಾರೆ. ಲಿಂಗಾಯತರು, ಒಕ್ಕಲಿಗರು, ಒಬಿಸಿ ಸಂಖ್ಯೆ ಕಡಿಮೆ ಆಯ್ತು ಎನ್ನುವುದನ್ನಷ್ಟೇ ನೋಡಬೇಡಿ. ಒಟ್ಟಾರೆಯಾಗಿ ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ ಎಂದು ಹೇಳಿದ್ದಾರೆ.

Read More

ನಮ್ಮಲ್ಲಿ ಅನೇಕರಿಗೆ, ಚೂಯಿಂಗ್ ಗಮ್ ಚೂಯಿಂಗ್ ಮಜಾ ನೀಡುತ್ತದೆ. ಇಲ್ಲ.. ದಿನನಿತ್ಯದ ಅಭ್ಯಾಸವೂ ಅಲ್ಲ. ಕೆಲವರು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಇವುಗಳನ್ನು ಪ್ರತಿದಿನ ತಿನ್ನುತ್ತಾರೆ. ಇನ್ನು ಕೆಲವರು ಏಕಾಗ್ರತೆಯನ್ನು ಹೆಚ್ಚಿಸಲು ಗಮ್ ಅಗಿಯುತ್ತಾರೆ, ಆದರೆ ಕ್ರೀಡಾಪಟುಗಳು ಒತ್ತಡವನ್ನು ನಿವಾರಿಸಲು ಗಮ್ ಅಗಿಯುತ್ತಾರೆ. ಅವರೆಲ್ಲರೂ ಚ್ಯೂಯಿಂಗ್ ಗಮ್ ಅನ್ನು ಇಷ್ಟಪಡುತ್ತಾರೆ, ಆದ್ದರಿಂದ ಅವರು ಅದನ್ನು ಆಗಾಗ್ಗೆ ಅಗಿಯುತ್ತಾರೆ. ಆದರೆ ಈ ಅಭ್ಯಾಸ ದೀರ್ಘಕಾಲದವರೆಗೆ ಮುಂದುವರಿದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇವುಗಳನ್ನು ಪ್ರತಿದಿನ ಅಗಿಯುವುದರಿಂದ ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಅಧ್ಯಯನಗಳು ತೋರಿಸಿವೆ. ತಜ್ಞರ ಪ್ರಕಾರ, ಚೂಯಿಂಗ್ ಗಮ್ ಮೈಕ್ರೋಪ್ಲಾಸ್ಟಿಕ್‌ಗಳನ್ನು ಹೊಂದಿರುತ್ತದೆ. ಇದು ನಮ್ಮ ಮೆದುಳಿಗೆ ತುಂಬಾ ಹಾನಿಕಾರಕ. ಸ್ವೀಡನ್‌ನ ಸ್ಟಾಕ್‌ಹೋಮ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ, ಚೂಯಿಂಗ್ ಗಮ್‌ಗಳು ಪ್ಲಾಸ್ಟಿಸೈಜರ್‌ಗಳನ್ನು ಹೊಂದಿರುತ್ತವೆ. ಚೂಯಿಂಗ್ ಗಮ್ ಅನ್ನು ನಮ್ಯವಾಗಿಡಲು ಮತ್ತು ದೀರ್ಘಕಾಲದವರೆಗೆ ಸಂಗ್ರಹಿಸಲು ಈ ಪದಾರ್ಥವನ್ನು ಉದ್ದೇಶಪೂರ್ವಕವಾಗಿ ಬಳಸಲಾಗುತ್ತದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಈ ಗಮ್ ಅನ್ನು ಜಗಿಯುವುದರಿಂದ…

Read More

ಬೆಂಗಳೂರು: “ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಮಹಾಲಕ್ಷ್ಮಿ ಲೇಔಟ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಬಗ್ಗೆ ಕೇಳಿದಾಗ, “ಅವರು ಬಹಳ ದೊಡ್ಡವರು. ದೊಡ್ಡ ಮಾತುಗಳನ್ನು ಆಡುತ್ತಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ನಮ್ಮ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತಗಳನ್ನು ಹೊಂದಿದ್ದು, ಪಕ್ಷದಲ್ಲಿ ಅನೇಕ ತೀರ್ಮಾನ ಮಾಡಲಾಗಿದ್ದು, ಕಾನೂನಿನಲ್ಲಿ ಯಾರು ಯಾವ ಕೆಲಸ ಮಾಡಬೇಕು ಎಂದು ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅನೇಕ ತೀರ್ಮಾನ ಮಾಡಲಿದೆ” ಎಂದು ತಿರುಗೇಟು ನೀಡಿದರು. ನಾನು ಪಂಡಿತನೂ ಅಲ್ಲ, ಸರ್ವಜ್ಞನೂ ಅಲ್ಲ ಒಕ್ಕಲಿಗ ಶಾಸಕರ…

Read More