ಬೆಂಗಳೂರು: ಜಾತಿ ಗಣತಿ ಬೆಂಕಿ ಪ್ರಬಲ ಜಾತಿಗಳನ್ನು ಮಾತ್ರವಲ್ಲ, ಆಡಳಿತಾರೂಡ ಕಾಂಗ್ರೆಸ್ ನಲ್ಲೂ ಕಿಚ್ಚು ಹಚ್ಚಿದೆ. ಜಾತಿ ಗಣತಿ ವರದಿ ಬಗ್ಗೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದಲ್ಲೇ ಅಸಮಾಧಾನ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಒಕ್ಕಲಿಗ ಶಾಸಕರ ಜತೆ ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಲಿದ್ದಾರೆ. ಸದಾಶಿವನಗರದ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಸಂಜೆ ನಡೆಸಲಿರುವ ಡಿಕೆ ಶಿವಕುಮಾರ್, ಒಕ್ಕಲಿಗ ಶಾಸಕರ ಅಭಿಪ್ರಾಯ ಪಡೆಯಲಿದ್ದಾರೆ. “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ಹೀಗಾಗಿ ಸಂಜೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ ಎಂದು ಡಿಕೆಶಿ ನಿನ್ನೆ ಹೇಳಿದ್ದರು. ಹೀಗಾಗಿ ಜಾತಿಗಣತಿ ಬಗ್ಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಹೊಗೆಯಾಡಲು ಶುರು ಮಾಡಿದೆ. ಕಳೆದ ವರ್ಷವೂ ಒಕ್ಕಲಿಗ ಶಾಸಕರು, ಸಚಿವರು, ಸೋರಿಕೆಯಾಗಿದ್ದ ಜಾತಿ ಗಣತಿ ವರದಿಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ…
Author: Author AIN
ತುಮಕೂರು: ಕಾಲಿಗೆ ಟವೆಲ್ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ವೀರಚಿನ್ನೇನಹಳ್ಳಿಯಲ್ಲಿ ನಡೆದಿದೆ. ರಾಜು (40) ಕೊಲೆಯಾದ ವ್ಯಕ್ತಿಯಾಗಿದ್ದು, ಇಂದು ಬೆಳಗಿನಜಾವ 4.30ರ ವೇಳೆಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಕಾಲಿಗೆ ಟವೆಲ್ ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಂದಿದ್ದಾರೆ. ಮೂರು ಜನರಿಂದ ನಡೆದಿರುವ ಕೃತ್ಯ ಎನ್ನಲಾಗಿದ್ದು, ಯಾವ ಕಾರಣಕ್ಕೆ ಕೊಲೆ ನಡೆದಿದೆ, ಕೊಲೆ ಮಾಡಿದವರ್ಯಾರು ಎಂದು ತಿಳಿದು ಬಂದಿಲ್ಲ. ಸದ್ಯ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಎರಡು ದಿನಗಳ ಹಿಂದೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬಡ್ಡಿದರಗಳನ್ನು ಕಡಿಮೆ ಮಾಡಲು ನಿರ್ಧರಿಸಿದೆ ಎಂದು ತಿಳಿದಿದೆ. ರೆಪೊ ದರ ಕಡಿತದ ನಂತರ, ನಾಲ್ಕು ಸಾರ್ವಜನಿಕ ವಲಯದ ಬ್ಯಾಂಕುಗಳು ಸಾಲ ದರಗಳಲ್ಲಿ ಶೇಕಡಾ 0.25 ರಷ್ಟು ಕಡಿತವನ್ನು ಘೋಷಿಸಿವೆ. ಬಡ್ಡಿದರಗಳನ್ನು ಕಡಿಮೆ ಮಾಡಿದ ಬ್ಯಾಂಕುಗಳಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್ ಮತ್ತು ಯುಕೊ ಬ್ಯಾಂಕ್ ಸೇರಿವೆ. ಬ್ಯಾಂಕುಗಳ ಈ ನಿರ್ಧಾರವು ಅವರ ಅಸ್ತಿತ್ವದಲ್ಲಿರುವ ಮತ್ತು ಹೊಸ ಸಾಲಗಾರರಿಗೆ ಪ್ರಯೋಜನವನ್ನು ನೀಡುತ್ತದೆ. ಇತರ ಬ್ಯಾಂಕುಗಳು ಶೀಘ್ರದಲ್ಲೇ ಇದೇ ರೀತಿಯ ಪ್ರಕಟಣೆಗಳನ್ನು ನೀಡುವ ನಿರೀಕ್ಷೆಯಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಪ್ರಮುಖ ನೀತಿ ದರ ರೆಪೊವನ್ನು ಶೇಕಡಾ 0.25 ರಷ್ಟು ಕಡಿಮೆ ಮಾಡಿ 6.0 ಕ್ಕೆ ಇಳಿಸಿರುವುದಾಗಿ ಆರ್ಬಿಐ ಘೋಷಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿಯ ಸಾಲ ದರವನ್ನು (ರೆಪೊ ದರ) ಕಡಿಮೆ ಮಾಡಿದ ನಂತರ ಸಾಲ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ಈ ಸಾರ್ವಜನಿಕ ವಲಯದ ಬ್ಯಾಂಕುಗಳು ಷೇರು ಮಾರುಕಟ್ಟೆಗಳಿಗೆ ಪ್ರತ್ಯೇಕ…
ವಿಶಾಖಪಟ್ಟಣಂನ ಮಧುರವಾಡ ಆರ್ಟಿಸಿ ಕಾಲೋನಿಯಲ್ಲಿ ಒಂದು ಭಯಾನಕ ಘಟನೆ ನಡೆದಿದೆ. 9 ತಿಂಗಳ ಗರ್ಭಿಣಿ ಅನುಷಾಳನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೌದು ವಿಶಾಖಪಟ್ಟಣಂನ ಪಿಎಂ ಪಾಲೆಂನ ಉಡಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಆರೋಪಿ ಪತಿ ನಗರದ ಸ್ಕೌಟ್ಸ್ ಮತ್ತು ಸಾಗರ್ನಗರ ವೀಕ್ಷಣಾ ಕೇಂದ್ರದ ಬಳಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ಅನುಷಾಳೊಂದಿಗೆ ಪ್ರೇಮ ವಿವಾಹವಾಗಿದ್ದರು. ಬಳಿಕ ಹಲವಾರು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ನನಗೆ ಕ್ಯಾನ್ಸರ್ ಇದೆ, ನಾನು 1 ವರ್ಷದಲ್ಲಿ ಸಾಯುತ್ತೇನೆ. ನೀನು ನಿನ್ನ ಜೀವನ ಹಾಳು ಮಾಡಿಕೊಳ್ಳಬೇಡ. ಅಪ್ಪ-ಅಮ್ಮನ ಜೊತೆ ಹೋಗು ಎಂದು ಕೂಡ ಜ್ಞಾನೇಶ್ವರ್ ನಾಟಕವಾಡಿದ್ದ. ಆದರೆ, ಅನುಷಾ ನಿನ್ನೊಂದಿಗೆ ಇರುತ್ತೇನೆ ಎಂದು ಹೇಳಿದ್ದಳು. ಅದಾದ 6 ತಿಂಗಳ ನಂತರ, ಅವನು ಮತ್ತೊಂದು ನಾಟಕವನ್ನು ಪ್ರಾರಂಭಿಸಿದ್ದ. ನನ್ನ ಹೆತ್ತವರಿಗೆ ನಮ್ಮ ಮದುವೆ ಇಷ್ಟವಿಲ್ಲ, ಅವರು ನಿನ್ನನ್ನು ಮತ್ತು ನನ್ನನ್ನು ಬದುಕಲು…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಕೇಸ್ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇಯಾಗಿದೆ. ಮುಡಾ ಹಗರಣ ವಿಚಾರದಲ್ಲಿ ಸಿಎಂ ಹಾಗೂ ಸಿಎಂ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್ ಚೀಟ್ ಪ್ರಶ್ನಿಸಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೂರುದಾರ ಸ್ನೇಹಮಹಿ ಕೃಷ್ಣ ಅರ್ಜಿ ಹಾಕಿದ್ದರು. ಇಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ಆದೇಶ ನೀಡಲಿದೆ. ಜನಪ್ರತಿನಿಧಿಗಳ ಸ್ಪೆಷಲ್ ಕೋರ್ಟ್ ಇಂದು ಎರಡು ತಕರಾರು ಅರ್ಜಿಗಳ ಆದೇಶ ಪ್ರಕಟಿಸಲಿದೆ. https://ainkannada.com/white-hair-should-be-dark-from-the-base-it-is-enough-to-boil-this-fruit-plant-in-water-and-apply-it-on-the-head/ ಒಂದು ವೇಳೆ ತಕರಾರು ಅರ್ಜಿಗಳನ್ನ ಕೋರ್ಟ್ ಪುರಸ್ಕರಿಸಿದರೇ ಸಿಎಂಗೆ ಮತ್ತೆ ಟೆನ್ಷನ್ ಶುರುವಾಗಲಿದೆ. ಆಗ ಸಿದ್ದರಾಮಯ್ಯಗೆ ಬಹುದೊಡ್ಡ ಕಾನೂನು ಕಂಟಕ ಎದುರಾಗೋದು ನಿಚ್ಚಳವಾಗಿದೆ. ಒಂದು ವೇಳೆ ಎರಡು ತಕರಾರು ಅರ್ಜಿಗಳು ತಿರಸ್ಕಾರಗೊಂಡಲ್ಲಿ ಸಿಎಂಗೆ ಬಿಗ್ ರಿಲೀಫ್ ಸಿಗಲಿದೆ. ಮುಡಾ ಸೈಟ್ ಹಗರಣದಿಂದ ಸಿಎಂ ಸಂಪೂರ್ಣ ನಿರಾಳಗೊಳ್ಳಲಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನ 30ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ರಿಷಭ್ ಪಂತ್ (63) ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 166 ರನ್ ಕಲೆಹಾಕಿತು. 167 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.3 ಓವರ್ಗಳಲ್ಲಿ 166 ರನ್ ಬಾರಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಇನ್ನೂ ಲಕ್ನೋ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಎಂ.ಎಸ್.ಧೋನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ನಿನ್ನೆ ನಡೆದ ಪಂದ್ಯದಲ್ಲಿ 11 ಬಾಲ್ಗೆ ಧೋನಿ ಗಳಿಸಿದ್ದು 26 ರನ್. ಹೀಗಿದ್ದರೂ ಅವರಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಅವಾರ್ಡ್…
ಸಕ್ಕರೆಗಿಂತಲೂ ಕಲ್ಲು ಸಕ್ಕರೆ ಹೆಚ್ಚು ಆರೋಗ್ಯ ಕರ. ಹಾಗಾಗಿ ಸಿಹಿಕಾರಕವಾಗಿ ಸಕ್ಕರೆಯ ಬದಲು ಕಲ್ಲು ಸಕ್ಕರೆಯನ್ನು ಬಳಸುವುದರಿಂದ ಕೆಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ಕಲ್ಲು ಸಕ್ಕರೆಯನ್ನು ಕಬ್ಬಿನ ಹಾಲನ್ನು ಘನೀಕೃತಗೊಳಿಸಿ ಯಾವುದೇ ರಾಸಾಯನಿಕ ವಸ್ತು ಸೇರಿಸದೆ ಹರಳುಗಳ ರೂಪದಲ್ಲಿ ತಯಾರಿಸಲಾಗುತ್ತದೆ! ಇನ್ನು, ಕೆಂಪು ಕಲ್ಲು ಸಕ್ಕರೆ ತಾಳೆ ಮರದ ಹಾಲಿನಿಂದ ತಯಾರಿಸಲಾಗುತ್ತದೆ. ಇದರ ಬೆಲೆ ಜಾಸ್ತಿ , ಸಿಗುವುದು ಅಪರೂಪ. ಕಲ್ಲುಸಕ್ಕರೆ ತಂಪು ಗುಣ ಹೊಂದಿದ್ದು ಶರೀರಕ್ಕೆ ಪುಷ್ಟಿದಾಯಕವಾಗಿದೆ. ಕಲ್ಲು ಸಕ್ಕರೆ, ಒಣ ಕೊಬ್ಬರಿ, ಒಣ ಖರ್ಜೂರ, ಬದಾಮಿ, ಗೋಡಂಬಿ ಚೂರು ಮಾಡಿ ಒಣ ದ್ರಾಕ್ಷಿ ಸೇರಿಸಿ ಬೆಳೆಯುವ ಮಕ್ಕಳಿಗೆ ತಿನ್ನಿಸಬೇಕು. ಕಲ್ಲು ಸಕ್ಕರೆಯ ಪ್ರಯೋಜನಗಳು ಹೀಗಿವೆ: ಕಲ್ಲು ಸಕ್ಕರೆಯ ಆರೋಗ್ಯ ಪ್ರಯೋಜನಗಳು: ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ: ಜೀರ್ಣಕ್ರಿಯೆಗೆ ಸಹಾಯ ಮಾಡುವ ಕಾರಣ ನೀವು ಭಾರೀ ಊಟದ ನಂತರ ಕಲ್ಲು ಸಕ್ಕರೆಯನ್ನು ಸೇವಿಸಬಹುದು. ಇದು ಊಟದ ನಂತರದ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸುತ್ತದೆ. ಸಾಮಾನ್ಯ ಕೆಮ್ಮು ಮತ್ತು ಶೀತಕ್ಕೆ…
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಫೈರ್ ಫ್ಲೈ ಸಿನಿಮಾ ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಇಂಡಸ್ಟ್ರೀಯಲ್ಲಿ ಬಜ್ ಕ್ರಿಯೇಟ್ ಮಾಡಿದೆ. ಅಣ್ಣಾವ್ರ ಜನ್ಮದಿನ ಅಂದ್ರೆ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ನಿನ್ನೆ ಶಿವಣ್ಣನ ನಿವಾಸದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯ್ರಕಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೈರ್ ಫ್ಲೈ ಇಡೀ ತಂಡ ಹಾಗೂ ಶಿವಣ್ಣ ದಂಪತಿ ಭಾಗಿಯಾಗಿ ಹೊಸಪ್ರತಿಭೆಗಳ ಕನಸಿಗೆ ಬೆನ್ನುತಟ್ಟಿದ್ದರು. ಟ್ರೇಲರ್ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್, ಡ್ಯುಯೇಟ್ ಸಾಂಗ್ ಮಾಡಬಹುದು. ಆದರೆ ಫೈರ್ ಫ್ಲೈ ವ್ಯಾಲ್ಯೂ ಸಬ್ಜೆಕ್ಟ್ ಇರುವ ಚಿತ್ರ. ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ್ಮ…
ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಸೋಲಿನಿಂದ ಕಂಬ್ಯಾಕ್ ಆಗೋದಿಕ್ಕೆ ಸರ್ಕಸ್ ಮಾಡುತ್ತಲೇ ಇದ್ದಾರೆ. ಸಾಲು ಸಾಲು ಸೋಲುಗಳು ಸಲ್ಲುಮೀಯಾ ಅವರನ್ನು ಕಾಡುತ್ತಿದೆ. ಈ ಸೋಲುಗಳಿಗೆ ಟಕ್ಕರ್ ಕೊಟ್ಟು ಗೆಲುವಿನ ಹಾದಿಗೆ ಕಂಬ್ಯಾಕ್ ಮಾಡೋದಿಕ್ಕೆ ಟೈಗರ್ ರೆಡಿಯಾಗ್ತಿದೆ. ತಮ್ಮ ಮುಂದಿನ ಚಿತ್ರಕ್ಕಾಗಿ ಸಲ್ಮಾನ್ ಖಾನ್ ದೇಹ ಹುರಿಗೊಳಿಸುವಂತೆ ಕಾಣ್ತಿದೆ. ಸಲ್ಮಾನ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವರ್ಕೌಟ್ ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಹುಬ್ಬೇರಿಸುತ್ತಿದ್ದಾರೆ. 59ನೇ ವಯಸ್ಸಿನಲ್ಲಿಯೋ ಅದೇನ್ ಫಿಟ್ನೆಸ್ ಗುರು. ಟೈಗರ್ ಕಂಬ್ಯಾಕ್ ಅಂತಾ ಫ್ಯಾನ್ಸ್ ಹುಬ್ಬೇರಿಸುತ್ತಿದ್ದಾರೆ. ಮೋಟಿವೇಷನ್ ನೀಡಿದ್ದಕ್ಕೆ ಧನ್ಯವಾದ ಎಂದು ಎರಡು ಖಡಕ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಸಿಕಂದರ್ ಸೋಲಿನ ಬಳಿಕ ಸಲ್ಮಾನ್ ಖಾನ್ ಮತ್ತೆ ಸೌತ್ ನಿರ್ದೇಶಕರ ಜೊತೆ ಕೈ ಜೋಡಿಸುತ್ತಿದ್ದಾರೆ ಎಂಬ ಸುದ್ದಿ ಇದೆ. ಪವನ್ ಕಲ್ಯಾಣ್ ಗೆ ಗಬ್ಬರ್ ಸಿಂಗ್ ಚಿತ್ರ ನಿರ್ದೇಶಿಸಿದ್ದ ಹರೀಶ್ ಶಂಕರ್ ಸಲ್ಮಾನ್ ಖಾನ್ ಮುಂದಿನ ಚಿತ್ರ ನಿರ್ದೇಶಿಸಲಿದ್ದಾರೆ ಎಂಬ ಸುದ್ದಿ ಇದೆ. ಅಲ್ಲದೇ ಇತ್ತೀಚೆಗೆ ಸಲ್ಲು ಲೋಕೇಶ್ ಕನಗರಾಜ್…
ಬ್ಲಾಕ್ಬಸ್ಟರ್ ಅಮರನ್ ಸಿನಿಮಾ ಬಳಿಕ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿ. ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್ ಭಾರೀ ಸದ್ದು ಮಾಡಿವೆ. ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಆಕ್ಷನ್ ಕಟ್ ಹೇಳಿದ್ದು, ಸಪ್ತ ಸಾಗರದಾಚೆ ಎಲ್ಲೋ ನಾಯಕಿ ರುಕ್ಮಿಣಿ ವಸಂತ್ ಶಿವಕಾರ್ತಿಕೇಯನ್ ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡ ಮದರಾಸಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಸೆಪ್ಟೆಂಬರ್ 5, 2025 ರಂದು ಮದರಾಸಿ ಸಿನಿಮಾ ತೆರೆಗೆ ಬರ್ತಿದೆ. ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕ ರಿವೀಲ್ ಮಾಡಿದೆ. ಪೋಸ್ಟರ್ ನಲ್ಲಿ ಶಿವಕಾರ್ತಿಕೇಯನ್ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿದ್ಯುತ್ ಜಮ್ವಾಲ್ ಖಳನಾಯಕನಾಗಿ ತೊಡೆ ತಟ್ಟಿದ್ದು, ಈ ಹಿಂದೆ ತುಪ್ಪಕ್ಕಿ ಚಿತ್ರದಲ್ಲಿ ಅಬ್ಬರಿಸಿದ್ದ ವಿದ್ಯುತ್ ಜಮ್ವಾಲ್ ಮತ್ತೊಮ್ಮೆ ಮುರುಗದಾಸ್ ನಿರ್ದೇಶನದಲ್ಲಿ ನಟಿಸುತ್ತಿದ್ದಾರೆ. ಬಿಜು ಮೆನನ್, ಶಬೀರ್ ಮತ್ತು ವಿಕ್ರಾಂತ್ ಹಲವರು ತಾರಾಬಳಗದಲ್ಲಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ,…