ಧಾರವಾಡ: ರಾಜ್ಯ ಸರ್ಕಾರ ಕಳೆದ 10 ವರ್ಷಗಳ ಹಿಂದಿನ ಜಾತಿ ಜನಗಣತಿಯನ್ನು ಈಗ ತರುತ್ತಿದೆ ಎಂಬ ಮೈಸೂರು ಸಂಸದ ಯದುವೀರ್ ಒಡೆಯರ್ ಅವರ ಆರೋಪಕ್ಕೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ 10 ವರ್ಷಗಳ ಹಿಂದಿನದು ಎಂದು ಮೈಸೂರು ಮಹಾರಾಜರು ಆರೋಪಿಸಿದ್ದಾರೆ. ಕಳೆದ 14 ವರ್ಷಗಳಿಂದ ಕೇಂದ್ರ ಸರ್ಕಾರ ಜನ ಗಣತಿಯನ್ನೇ ಮಾಡಿಸಿಲ್ಲ. ಅದರ ಬಗ್ಗೆ ಮಹಾರಾಜರು ಮೊದಲು ಮಾತನಾಡಲಿ. https://ainkannada.com/girls-are-you-also-using-medimix-soap-this-is-definitely-not-for-you/ ಹತ್ತು ವರ್ಷಕ್ಕೊಮ್ಮೆ ಜನ ಗಣತಿ ಆಗಬೇಕು. 14 ವರ್ಷದಿಂದ ಕೇಂದ್ರ ಸರ್ಕಾರ ಜನ ಗಣತಿಯನ್ನೇ ಮಾಡಿಲ್ಲ. 2020ರಲ್ಲಿ ಗಣತಿ ಆಗಬೇಕಿತ್ತು. ಬಿಜೆಪಿಯವರು ಗಣತಿ ಮಾಡಿಸಿಲ್ಲ. ಇದನ್ನು ಯಾಕೆ ಮಾಡಿಲ್ಲ ಎಂದು ಮಹಾರಾಜರು ಹೇಳಬೇಕು ಎಂದರು. ನಮ್ಮ ಸರ್ಕಾರದ ಜಾತಿ ಜನಗಣತಿಯಲ್ಲಿ ಲೋಪ ದೋಷ ಇದ್ದರೆ ಹೇಳಲಿ. ಮೊದಲು ವರದಿ ಹೊರಗೆ ಬರಲಿ. ಈ ಬಗ್ಗೆ ಸಿಎಂ ಅವರೇ ಹೇಳಿದ್ದಾರೆ. ಸಂಬಂಧಿಸಿದ ಇಲಾಖೆ ಇದರ ಬಗ್ಗೆ ಮಾಹಿತಿ ಕೊಡಲಿದೆ. ಅಲ್ಲಿಯವರೆಗೂ ಮಹಾರಾಜರು ಸ್ವಲ್ಪ…
Author: Author AIN
ಬೆಂಗಳೂರು: ನಗರದಲ್ಲಿ ರೌಡಿಗಳು ಇತ್ತಿಚೇಗೆ ಬಾಲ ಬಿಚ್ಚಿದ್ದಾರೆ. ಅದ್ರಲ್ಲೂ ಸಿಟಿಯ ಗಡಿ ಭಾಗದಲ್ಲಿ ರೌಡಿಗಳ ಹಾವಳಿ ಹೆಚ್ಚಾದಂಗೆ ಕಾಣ್ತಿದೆ. ನಿನ್ನೆ ರೌಡಿಗಳ ನಡುವೆ ಮಾರಮಾರಿ ನಡೆದಿದೆ. ಯಲಹಂಕ ನ್ಯೂಟೌನ್ ಠಾಣವ್ಯಾಪ್ತಿಯ ಅಟ್ಟೂರು ಮುಖ್ಯರಸ್ತೆಯ ನಾಟಿ ಬಾರ್ ಮುಂದೆ ನಡೆದಿದೆ. ಬಾಣಸವಾಡಿ ರೌಡಿ ಶೀಟರ್ ಆರ್ ಎಕ್ಸ್ ರವಿ ಮೇಲೆ ನ್ಯೂಟೌನ್ ರೌಡಿ ಶೀಟರ್ ಗಾಂಜ ಅಭಿ ಅಂಡ್ ಗ್ಯಾಂಗ್ ಹಲ್ಲೆ ನಡೆಸಿದ್ದಾರೆ. ಮೀಟರ್ ಬಡ್ಡಿ ವ್ಯವಹಾರ ನಡೆಸೋ ಅಭಿ ರವಿ ಕಡೆಯವರಿಗೆ ಫೈನಾನ್ಸ್ ನೀಡಿದ್ದಾನೆ. ಫೈನಾನ್ಸ್ ವಿಚಾರವಾಗಿ ರವಿಯನ್ನ ಮಾತುಕತೆಗೆ ಅಂತ ಕರೆಸಿದ್ದಾರೆ. https://ainkannada.com/girls-are-you-also-using-medimix-soap-this-is-definitely-not-for-you/ ಈ ವೇಳೆ ರವಿ ನಾಟಿ ಬಾರ್ ಮುಂದೆ ಹೋಗ್ತಿದ್ದಂತೆ. ರವಿ ಮೇಲೆ ಅಭಿ,ಶೇಖರ, ಮಲ್ಲಿಕಾರ್ಜುನ, ನಾಗಾರ್ಜುನ, ನಂದೀಶ ಸೇರಿದಂತೆ ಒಂದಷ್ಟು ಜನ ಮಾರಾಣಾಂತಿಕವಾಗಿ ಥಳಿಸಿದ್ದಾರೆ. ಇನ್ನೂ ಈ ವೇಳೆ ರವಿ ಕೂಡ ಕೆಲವರ ಮೇಲೆ ಹಲ್ಲೆ ಮಾಡಿದ್ದಾನೆ. ರವಿ ಮೇಲೆ ಹಲ್ಲೆ ಮಾಡಿದವರ ಪೈಕಿ ನಾಗಾರ್ಜುನ ಸ್ತಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾನೆ.ಇನ್ನೂ ಘಟನೆ ನಂತರ ಆರೋಪಿಗಳು…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಇದೀಗ 5 ವರ್ಷದ ಬಾಲಕಿಯ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯ ದೇವಾಂಗ ಪೇಟ ರುದ್ರಭೂಮಿಯಲ್ಲಿ ನೇರವೇರಿತು. ಕುಟುಂಬಸ್ಥರು ವಿಧಿವಿಧಾನಗಳೊಂದಿಗೆ ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು. https://ainkannada.com/girls-are-you-also-using-medimix-soap-this-is-definitely-not-for-you/ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕಿಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮಗಳ ಶವವನ್ನು ಕೈಯಲ್ಲಿ ಹೊತ್ತು ತಂದ ತಂದೆ, ದೇವಾಂಗ ಪೇಟ ಸ್ಮಶಾನಕ್ಕೆ ತೆರಳಿ ಕುರುಬ ಸಂಪ್ರದಾಯದಂತೆ ಪೂಜೆ ಮಾಡಿದರು. ಬಳಿಕ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಏನು? ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ…
ಧಾರವಾಡ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಶಾಸಕ ಯತ್ನಾಳ ಅವರ ಹೇಳಿಕೆಗೆ ಕೌಂಟರ್ ಕೊಟ್ಟಿರುವ ಸಚಿವ ಸಂತೋಷ ಲಾಡ್, ನನಗಿರುವ ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರು ಇನ್ನೊಂದು ವರ್ಷ ಮಾತ್ರ ಪ್ರಧಾನಿಯಾಗಿರುತ್ತಾರೆ. ಅವರನ್ನೂ ಆ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎಂದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯಾರೂ ಪ್ರಯತ್ನ ನಡೆಸುತ್ತಿಲ್ಲ. ಯತ್ನಾಳ ಅವರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಬೇಕು. ಆದರೂ ಯತ್ನಾಳ ಅವರು ನಮ್ಮ ಸಿಎಂ ಬಗ್ಗೆ ಗೌರವ ಪೂರ್ವಕವಾಗಿ ಮಾತನಾಡಿದ್ದಾರೆ. ಅದು ನನಗೆ ಖುಷಿ ತಂದಿದೆ ಎಂದರು. https://ainkannada.com/girls-are-you-also-using-medimix-soap-this-is-definitely-not-for-you/ ಮೋದಿ ಅವರು ಮುಂದಿನ ವರ್ಷ ಪಿಎಂ ಆಗಿ ಇರುವುದಿಲ್ಲ. ಇದನ್ನು ಬಿಜೆಪಿಯವರು ಯಾರೂ ಹೇಳಿಕೊಳ್ಳುತ್ತಿಲ್ಲ. ಆದರೆ, ಅಲ್ಲಲ್ಲಿ ಸ್ವಲ್ಪ ಬಾಯಿ ಬಿಡುತ್ತಿದ್ದಾರೆ. ಮೊನ್ನೆಯಷ್ಟೇ ಪಿಯೂಷ್ ಗೋಯಲ್ ಮಾತನಾಡಿದ್ದಾರೆ. ಸ್ಕಿಲ್ ಇಂಡಿಯಾ ಸ್ಕಿಲ್ ಡೆವಲಪ್ ಆಗಿಲ್ಲ ಎಂದಿದ್ದಾರೆ. ಮೋದಿ ಅವರ…
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಒಂದು ಸಿನಿಮಾಗೆ 100 ರಿಂದ 200 ಕೋಟಿ ಸಂಭಾವನೆ ಪಡೆಯುವ ದಳಪತಿ ತಮಿಳುಚಿತ್ರರಂಗದ ನಂಬರ್ 1 ಕುಬೇರ. ವಿಜಯ್ ಬಳಿ ಕೋಟಿ ಕೋಟಿ ಕಾರುಗಳಿವೆ. ಆದರೆ ಅವರು ಇಂದು ಸಿಂಪಲ್ ಆಗಿ ಸ್ವೀಪ್ಟ್ ಕಾರಿನಿಂದ ಬಂದು ಎಲ್ಲರ ಗಮನಸೆಳೆದಿದ್ದಾರೆ. ಸಾಮಾನ್ಯ ಸೂಪರ್ ಸ್ಟಾರ್ಸ್ ಗಳು ತಮ್ಮ ಬಳಿ ಇರುವ ಐಷಾರಾಮಿ ಕಾರುಗಳಲ್ಲಿಯೇ ಸುತ್ತುವುದು ಜಾಸ್ತಿ. ಆದ್ರೆ ಈ ವಿಷಯದಲ್ಲಿ ವಿಜಯ್ ಬೇರೆ ರೀತಿ ಕಾಣಿಸಿಕೊಳ್ಳುತ್ತಾರೆ. ಇಂದು ಅಂಬೇಡ್ಕರ್ ಜಯಂತಿ. ಈ ಹಿನ್ನೆಲೆ, ಚೆನ್ನೈನಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ವಿಜಯ್ ಆಗಮಿಸಿದ್ದರು. ಸಾಮಾನ್ಯ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ವಿಜಯ್ ಪುಷ್ಪಾರ್ಚನೆ ಮಾಡಿ ತೆರಳಿದ್ದಾರೆ. ಇನ್ನೊಂದು ವಿಶೇಷ ಎಂದರೆ ವಿಜಯ್ ಒಬ್ಬರೇ ಬಂದಿದ್ದು, ಅವರ ಸುತ್ತ ಬಾಡಿಗಾರ್ಡ್ ಆಗಿರಲಿ. ಅಭಿಮಾನಿಗಳು ಯಾರು ಇರಲಿಲ್ಲ. ವಿಜಯ್ ಒಂದೇ ಕಾರಿನಲ್ಲಿ ಬಂದರು, ಮತ್ತು ಈ ಕಾರ್ಯಕ್ರಮದ ಸುತ್ತಲೂ ಯಾವುದೇ…
ಮೈಸೂರು: ಜಮೀನು ನಮಗೆ ಸೇರಿದ್ದರೂ ಸಹ ಅಲ್ಲಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1950ನೇ ಇಸವಿಯ ದಾಖಲೆಗಳ ಆಧಾರದ ಮೇಲೆ ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ. ತಹಸೀಲ್ದಾರ್ ಹಾಗೂ ರಾಜ್ಯ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ. ಅಂದಿನ ಮಹಾರಾಜರು ಜಮೀನು ಕೊಟ್ಟಿದ್ದರೆ ಕಿತ್ತುಕೊಳ್ಳುವುದಿಲ್ಲ. ಒಂದು ವೇಳೆ ಜಮೀನು ನಮಗೆ ಸೇರಿದ್ದರೂ ಸಹ ಅಲ್ಲಿನ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. https://ainkannada.com/girls-are-you-also-using-medimix-soap-this-is-definitely-not-for-you/ ಆ ಜಮೀನನ್ನು ರಾಜ್ಯ ಸರ್ಕಾರ ನಮಗೆ ನೀಡಿದರೂ ಕೂಡ ಅಲ್ಲಿನ ಜನರಿಗೆ ತೊಂದರೆ ಕೊಡುವುದಿಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳುತ್ತೇವೆ. ಅಲ್ಲಿನ ಜನರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ. ಕಂದಾಯ ಗ್ರಾಮ ಮಾಡುವುದಾಗಿ ಚಾಮರಾಜನಗರ ಜಿಲ್ಲಾಡಳಿತ ಹೇಳಿದ್ದರಿಂದ ನಮ್ಮ ಜಮೀನು ಅಲ್ಲಿರುವ ಕಾರಣ ಚಾಮರಾಜನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ. ಯಾವುದೇ ವಿಚಾರವಿದ್ದರೂ, ಸಮಸ್ಯೆಗಳಿದ್ದರೂ ಆ ಭಾಗದ ಗ್ರಾಮಸ್ಥರು ನಮ್ಮನ್ನು ನೇರವಾಗಿ ಸಂಪರ್ಕಿಸಲಿ. ಗ್ರಾಮಸ್ಥರ ಬಳಿಯಿರುವ ದಾಖಲೆಗಳ ಬಗ್ಗೆ ನಮಗೆ ಗೊತ್ತಿಲ್ಲ. ಯಾವುದೇ…
‘ಒಂದು ರಾಜ್ಯ – ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRB)’ ನೀತಿಯು ಮೇ 1 ರಿಂದ ಭಾರತದ ಎಲ್ಲಾ ರಾಜ್ಯಗಳಲ್ಲಿ ಜಾರಿಗೆ ಬರಲಿದೆ. ಈ ಪ್ರಸ್ತಾವನೆಯ ಪ್ರಕಾರ, 11 ರಾಜ್ಯಗಳಲ್ಲಿ 15 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಈ ವಿಲೀನವು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ವಿಲೀನದಲ್ಲಿ ನಾಲ್ಕನೇ ಹಂತವಾಗಿದೆ. ಇದರ ನಂತರ, ದೇಶದಲ್ಲಿ RRB (ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು) ಸಂಖ್ಯೆ 43 ರಿಂದ 28 ಕ್ಕೆ ಇಳಿಯುತ್ತದೆ. ಈ ಬ್ಯಾಂಕುಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸೇರಿದಂತೆ ಹಲವಾರು ಸರ್ಕಾರಿ ಬ್ಯಾಂಕುಗಳೊಂದಿಗೆ ಸಂಯೋಜಿತವಾಗಿವೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ಬಲಪಡಿಸುತ್ತದೆ. https://ainkannada.com/girls-are-you-also-using-medimix-soap-this-is-definitely-not-for-you/ ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ದೇಶದ 11 ರಾಜ್ಯಗಳಲ್ಲಿ ಇದರ ಪರಿಣಾಮ ಕಂಡುಬರುತ್ತದೆ. ಅವುಗಳೆಂದರೆ ಆಂಧ್ರಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ. ಈ ರಾಜ್ಯಗಳಲ್ಲಿರುವ…
ಶ್ರೀಲೀಲಾ ಸಿಕ್ಕಾಪಟ್ಟೆ ಸ್ಪೀಡ್ ಆಗಿ ಓಡ್ತಿದ್ದಾರಾ? ಕಥೆ ಆಯ್ಕೆಯಲ್ಲಿ ಎಡವುತ್ತಿದ್ದಾರಾ? ಖಂಡಿತ..2019ರಲ್ಲಿ ಕಿಸ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಿಂದ ಸಿನಿ ಜರ್ನಿ ಆರಂಭಿಸಿದ್ದ ಈ ನಟಿ ಈಗ ಟಾಲಿವುಡ್ ಜೊತೆಗೆ ಬಾಲಿವುಡ್ ಅಂಗಳದಲ್ಲಿಯೂ ಧಮಾಲ್ ಮಾಡಲು ರೆಡಿಯಾಗಿದ್ದಾಳೆ. ಚಾಕಲೇಟ್ ಹೀರೋ ಕಾರ್ತಿಕ್ ಆರ್ಯನ್ ಜೊತೆ ಆಶಿಕಿ-3 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 2021ರಲ್ಲಿ ರಿಲೀಸ್ ಆದ ಪೆಳ್ಳಿ ಸಂದಡಿ ಚಿತ್ರ ಮೂಲಕ ತೆಲುಗು ಸಿನಿಮಾಮಂದಿಗೆ ಪರಿಚಿತರಾದ ಶ್ರೀಲೀಲಾ ಆ ಬಳಿಕ ಮಹೇಶ್ ಬಾಬು, ಬಾಲಯ್ಯ, ನಿತಿನ್, ಅಲ್ಲು ಅರ್ಜುನ್ ಹೀಗೆ ದೊಡ್ಡ ಸ್ಟಾರ್ ಜೊತೆ ಅಭಿನಯಿಸಿದ್ದಾರೆ. ಬರೀ 5 ವರ್ಷದಲ್ಲಿ ಬರೋಬ್ಬರಿ 10ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸಿದ್ದಾರೆ. ಆದರರೆ ಈ ಪೈಕಿ ಹೇಳಿಕೊಳ್ಳಿವಂತಹ ಸಕ್ಸಸ್ ಅವರಿಗೆ ಸಿಕ್ಕಿಲ್ಲ. ಅದಕ್ಕೆ ಕಾರಣ ಒಳ್ಳೆ ಕಥೆಗಳನ್ನು ಶ್ರೀಲೀಲಾ ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಬದಲಾಗಿ ಸಿಕ್ಕ ಸಿಕ್ಕ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಅವರ ಸಕ್ಸಸ್ ರೇಟ್ ಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ. ಶ್ರೀಲೀಲಾ ಓಡ್ತಿರುವ ಸ್ಪೀಡ್ ನೋಡಿ ಇಸ್ಮಾರ್ಟ್…
ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದೆ. ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ಮಾತನಾಡಿದರು. ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು ಎಂದು ಬಣ್ಣಿಸಿದರು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ…
ಬೆಂಗಳೂರು: ಜಾತಿಗಣತಿ ವರದಿ ವಿಚಾರವಾಗಿ ರಾಜಕೀಯ ಟೀಕೆ ಟಿಪ್ಪಣಿಗಳಿಗೆ ಉತ್ತರ ಕೊಡಲು ಹೋಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ವರದಿಯ ಬಗ್ಗೆ ನಾವು ಏನು ಹೇಳಲು ಆಗುವುದಿಲ್ಲ. 2018ರಿಂದ ಪ್ರಾರಂಭವಾಗಿದ್ದು, 10 ವರ್ಷಗಳ ಬಳಿಕ ನಾವು ಆಚೆಗೆ ತರುತ್ತಿದ್ದೇವೆ. ಸ್ಟಡಿ ಮಾಡಿ ಚರ್ಚೆ ಮಾಡೋಣ. ರಾಜಕೀಯ ಟೀಕೆ ಟಿಪ್ಪಣಿಗಳಿಗೆ ಉತ್ತರ ಕೊಡಲು ಹೋಗುವುದಿಲ್ಲ. ಸಮುದಾಯದ ಅಭಿಪ್ರಾಯಗಳು, https://ainkannada.com/girls-are-you-also-using-medimix-soap-this-is-definitely-not-for-you/ ರಾಜಕಾರಣಿಗಳ ಅಭಿಪ್ರಾಯಗಳು ಎಲ್ಲವೂ ಬರುತ್ತಿದೆ. ಚರ್ಚೆ ಮಾಡಿ ನಂತರ ನೋಡುತ್ತೇವೆ ಎಂದು ಹೇಳಿದರು. ನಾನು ವರದಿಯನ್ನು ಇನ್ನೂ ಓದುತ್ತಿದ್ದೇನೆ, ನಾಲ್ಕೈದು ಪೇಜ್ ಓದಿದ್ದೇನೆ. ಒಟ್ಟಾರೆ ಇದರಲ್ಲಿ ಎರಡು ಮೂರು ವಿಚಾರಗಳಿವೆ. ಅದರ ಪರಿಣಾಮ, ಯೋಜನೆಗಳು, ಚರ್ಚೆ ಒಂದು ಭಾಗದಲ್ಲಿ ಇಡೋಣ ಎಂದು ತಿಳಿಸಿದರು.