Author: Author AIN

ಬೆಂಗಳೂರು: ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ. ಸಂತೋಷ್ ಡೇನಿಯಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಶೋರೂಮ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಳೆದ ಏಪ್ರಿಲ್‌ 3ರ ಮಧ್ಯರಾತ್ರಿ ಬೆಂಗಳೂರಿನ ಬಿಟಿಎಂ ಲೇಔಟ್‌ನ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಯುವಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಈತನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. https://ainkannada.com/girls-are-you-also-using-medimix-soap-this-is-definitely-not-for-you/ ಘಟನೆ ಸಂಬಂಧ ಪ್ರಕರಣದ ದಾಖಲಿಸಿಕೊಂಡಿದ್ದ ಪೊಲೀಸರು ಬೀದಿ ಕಾಮಣ್ಣನಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. 4 ವಿಶೇಷ ತಂಡಗಳನ್ನು ರಚಿಸಿ ಆರೋಪಿ ಮತ್ತು ಸಂತ್ರಸ್ತ ಯುವತಿಯ ಪತ್ತೆಗೆ ಇಳಿದಿದ್ದರು. ತನಿಖೆ ವೇಳೆ ಸುಮಾರು 700 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಕೊನೆಗೆ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ತಮಿಳುನಾಡಿನ ಹೊಸೂರಿಗೆ ಪರಾರಿಯಾಗಿದ್ದ, ನಂತರ ಸೇಲಂ, ಬಳಿಕ ಕೇರಳದ ಕೋಝಿಕೋಡ್‌ಗೆ ಪರಾರಿಯಾಗಿದ್ದ. ಕೊನೆಗೆ ಕೇರಳದ ಹಳ್ಳಿಯೊಂದರಲ್ಲಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ…

Read More

ಮಲಯಾಳಂ ಚಿತ್ರರಂಗದ ಮನಮೋಹಕ ನಟಿ ಅನುಪಮಾ ಪರಮೇಶ್ವರನ್. ಡ್ರಾಗ್ಯನ್ ಸಿನಿಮಾ ಸಕ್ಸಸ್ ಖುಷಿಯಲ್ಲಿರುವ ಅನುಪಮಾ ಕನ್ನಡ ಚಿತ್ರರಂಗಕ್ಕೂ ಚಿರಪರಿಚಿತ. ನಟಸಾರ್ವಭೌಮ ಚಿತ್ರದಲ್ಲಿ ಅಪ್ಪು ಜೊತೆ ಅಭಿನಯಿಸಿದ್ದ ಈ ಮಲ್ಲು ಕುಟ್ಟಿ ತೆಲುಗು, ತಮಿಳು ಸೇರಿದಂತೆ ದಕ್ಷಿಣ ಚಿತ್ರರಂಗದ ಬ್ಯುಸಿಯೆಸ್ಟ್ ನಟಿ. ಅನುಪಮಾ ಸಿಕ್ಕಾಪಟ್ಟೆ ಬೋಲ್ಡ್ ಪಾತ್ರದಲ್ಲಿ ನಟಿಸುತ್ತಾರೆ. ತಮ್ಮ ಗುಂಗುರು ಕೂದಲಿನ ಜೊತೆಗೆ ಅಭಿನಯದಿಂದ ಮೋಡಿ ಮಾಡಿರುವ ಅನುಪಮಾ ಈಗ ಪ್ರೀತಿಯಲ್ಲಿ ಬಿದ್ದಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಪುತ್ರ ಧ್ರುವ್ ವಿಕ್ರಮ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ. ಅದಕ್ಕೀಗ ಪ್ರೋವ್ ಸಿಕ್ಕಿದೆ. ನೀಲಿ ಚಂದಿರನ ನೆರಳಲ್ಲಿ ಅನುಪಮಾ ಹಾಗೂ ಧ್ರುವ್ ಚುಂಚಿಸುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದ್ರೆ, ಈ ಫೋಟೋ ನಕಲಿಯೋ ಅಸಲಿಯೋ ಎಂಬ ಕ್ಲಾರಿಟಿ ಇಲ್ಲ. ಕಿಡಿಗೇಡಿಗಳು ಎಐ ಅಂತಹ ತಂತ್ರಜ್ಞಾನವನ್ನು ಬಳಸಿ ಇಂತಹ ಕೃತ್ಯವನ್ನು ಮಾಡಿದ್ದಾರಾ? ಇದೆಲ್ಲದರ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ. ಆದರೆ, ಇದೂವರೆಗೂ ಅನುಪಮಾ ಪರಮೇಶ್ವರನ್ ಹಾಗೂ…

Read More

ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದ್ದಾರೆ. ವಯೋಸಹಜ ಕಾಯಿಲೆಯಿಂದ 75 ವರ್ಷದ ಜನಾರ್ಧನ್ ಬದುಕಿನ ಪಯಣ ಮುಗಿಸಿದ್ದಾರೆ. ಸುಮಾರು 800ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ನಟನಾಗಿ ಪಾತ್ರ ಪೋಷಣೆ ಮಾಡಿದ್ದ ಜನಾರ್ಧನ್ ಹೆಸರಿನ ಮುಂದೆ ಬ್ಯಾಂಕ್ ಸೇರ್ಪಡೆಯಾಗಿದ್ದರ ಹಿಂದೆ ಒಂದು ಕಥೆ ಇದೆ. ಜನಾರ್ಧನ್ ಸಿನಿಮಾ ರಂಗಕ್ಕೂ ಬರುವ ಮೊದಲು ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದ ಅವರು ಅಂದು ಬ್ಯಾಂಕ್ ಕೆಲಸಕ್ಕೆ ಸೇರಿಕೊಂಡರು. ಹಿರಿಯ ನಟ ಧೀರೇಂದ್ರ ಗೋಪಾಲ್ ಅವರ ಸಹಕಾರದಿಂದ ಚಿತ್ರರಂಗಕ್ಕೆ ಬಂದರು. ಊರಿಗೆ ಉಪಕಾರಿ ಜನಾರ್ಧನ್ ನಟಿಸಿದ ಮೊದಲ ಚಿತ್ರ. ಹೀಗೆ ಒಂದೊಂದೇ ಸಿನಿಮಾಗಳ ಅವಕಾಶ ಅವರನ್ನು ಹುಡುಕೊಂಡು ಬಂತು. ಚಿತ್ರರಂಗದಲ್ಲಿ ಅವಕಾಶ ಹೆಚ್ಚಾದಂತೆ ತಮ್ಮ‌ ಬ್ಯಾಂಕ್ ಕೆಲಸ ಬಿಟ್ಟರು. ಕನ್ನಡ ಚಿತ್ರರಂಗದಲ್ಲಿ ಜನಾರ್ಧನ್ ಹೆಸರಿನಲ್ಲಿ ಅಂದು ಸಾಕಷ್ಟು ಜನ ಕೆಲಸ ಮಾಡುತ್ತಿದ್ದರು. ಹಾಗಾಗಿ ವಿಭಿನ್ನವಾಗಿರಲಿ, ಗುರ್ತಿಸಲು ಸುಲಭವಾಗಲಿ ಎನ್ನುವ ಕಾರಣಕ್ಕೆ ಪಿಆರ್‌ಓ ಆಗಿದ್ದ ನಾಗೇಂದ್ರ ಅವರು…

Read More

ಭಾರತದ ಸಂವಿಧಾನ ಶಿಲ್ಪಿ ಡಾ. ಭೀಮರಾವ್‌ ರಾಮ್‌ ಅಂಬೇಡ್ಕರ್‌ ಜಯಂತಿಯನ್ನು ಪ್ರತಿ ವರ್ಷ ಏಪ್ರಿಲ್‌ 14ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್‌ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಶಿಕ್ಷಣದಿಂದ ಮಾತ್ರ ಸಾಧ್ಯ ಎನ್ನುವುದನ್ನು ಜಗತ್ತಿಗೆ ತೋರಿಸಿಕೊಟ್ಟ ಧೀಮಂತ ವ್ಯಕ್ತಿ. ಸಮಾನತೆಯ ಮಂತ್ರವನ್ನು ಸಾರಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ಚಿರಪರಿಚಿತರಾದವರು. ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ದೇಶಕ್ಕೆ ನೀಡಿದ ಕೊಡುಗೆಗಳು ಅಗಾಧವಾದದ್ದು. https://ainkannada.com/girls-are-you-also-using-medimix-soap-this-is-definitely-not-for-you/ ಅಂಬೇಡ್ಕರ್‌ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆಯಲ್ಲಿ ರಾಮ್‌ಜಿ ಸಕ್ಪಾಲ್‌ ಹಾಗೂ ಭೀಮಬಾಯಿ ದಂಪತಿಗಳ 14ನೇ ಮಗನಾಗಿ 1891ರ ಏಪ್ರಿಲ್‌ 14ರಂದು ಜನಿಸಿದರು. ಅನ್ಯಾಯ, ಶೋಷಣೆ, ಅಸ್ಪೃಶ್ಯತೆ ಮೊದಲಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದರು. ಓದುವುದರಲ್ಲಿ ಅಪಾರ ಆಸಕ್ತಿ, ಚುರುಕು ತನದಿಂದ ಅಧ್ಯಾಪಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅಂಬೇಡ್ಕರ್‌ ರವರ…

Read More

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಪ್ರಸ್ತುತ ಬೆರಳೆಣಿಕೆಯ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ತಿಳಿದಿದೆ. ಕಲ್ಕಿ ಚಿತ್ರದ ಯಶಸ್ಸಿನ ನಂತರ ಡಾರ್ಲಿಂಗ್ ರಾಜಾಸಾಬ್ ಚಿತ್ರೀಕರಣದಲ್ಲಿ ಭಾಗವಹಿಸುತ್ತಿರುವುದು ತಿಳಿದಿದೆ. ನಿರ್ದೇಶಕ ಮಾರುತಿ ನಿರ್ದೇಶನದ ಈ ಸಿನಿಮಾ ಕಳೆದ ಕೆಲವು ತಿಂಗಳುಗಳಿಂದ ವೇಗವಾಗಿ ಚಿತ್ರೀಕರಣಗೊಳ್ಳುತ್ತಿದೆ. ಮಾಳವಿಕಾ ಮೋಹನನ್, ರಿದ್ಧಿ ಕುಮಾರ್ ಮತ್ತು ನಿಧಿ ಅಗರ್ವಾಲ್ ಈ ಚಿತ್ರದಲ್ಲಿ ನಾಯಕಿಯರಾಗಿ ನಟಿಸುತ್ತಿದ್ದಾರೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಈ ಹಾರರ್ ಕಾಮಿಡಿ ಡ್ರಾಮಾ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಜೊತೆಗೆ, ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ರಭಾಸ್ ಅವರ ಮುಂಬರುವ ಯೋಜನೆ ಸ್ಪಿರಿಟ್ ಸುತ್ತಲೂ ಹೆಚ್ಚಿನ ಪ್ರಚಾರವಿದೆ. ಪವರ್‌ಫುಲ್ ಪೊಲೀಸ್ ಕಥೆಯಾಗಿ ಮೂಡಿಬರುತ್ತಿರುವ ಈ ಸಿನಿಮಾದ ಸ್ಕ್ರಿಪ್ಟ್ ಈಗಾಗಲೇ ಪೂರ್ಣಗೊಂಡಿದೆ. ಪ್ರಸ್ತುತ ಪ್ರಿ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ಈ ಚಿತ್ರಕ್ಕೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವಂತೆ ತೋರುತ್ತಿದೆ. ಇದರಲ್ಲಿ ಕೊರಿಯನ್ ಮತ್ತು ಅಮೇರಿಕನ್ ನಟರು ಕೂಡ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಚಲನಚಿತ್ರೋದ್ಯಮದ ಇತರ ಭಾಷೆಗಳ ನಟರು ಸಹ…

Read More

ಬೆಂಗಳೂರು: “ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ನಡೆದ ಭಾರತೀಯ ಸೇವಾದಳದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಮಾಜ ಸೇವೆ ಮಾಡುವವರನ್ನು ಹೆಚ್ಚು ಗುರುತಿಸುತ್ತದೆ. ಹೀಗಾಗಿ ನಮ್ಮ ಸಮಾಜದಲ್ಲಿ ರಾಮನ ತಂದೆ ದಶರಥ ಮಹಾರಾಜನಿಂಗಿಂತ, ರಾಮನ ಭಂಟ ಹನುಮಂತನ ದೇವಾಲಯಗಳು ಹೆಚ್ಚಾಗಿವೆ. ಅದೇ ರೀತಿ ನೀವು ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭ. ಇದನ್ನು ಸೇವಾದಳದ ಎಲ್ಲಾ ಕಾರ್ಯಕರ್ತರು ತಲೆಯಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು. “ದೇಶದ ಭದ್ರತೆ ಉದ್ದೇಶದಿಂದ ಸ್ಥಾಪನೆಯಾದ ವಿಭಾಗ ಸೇವಾದಳ. ನೆಹರೂ ಅವರ ಅವಧಿಯಲ್ಲಿ ಪ್ರಾರಂಭವಾಗಿ ಈಗ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿವರೆಗೆ ನಡೆದುಕೊಂಡು ಬಂದಿದೆ. ಸೇವಾದಳ ಕಾಂಗ್ರೆಸ್ ಪಕ್ಷದ ಕಡೆಯ ಅಂಗ, ನಮ್ಮನ್ನು ಗುರುತಿಸುವುದಿಲ್ಲ ಎಂಬ…

Read More

ಕೊಪ್ಪಳ: ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು, 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್ ಮೂಲಕ ಹಣ ನೀಡಿದರೆ ರೈತರಿಗೆ ನಷ್ಟವಾಗುತ್ತದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಈ ಬಗ್ಗೆ ಸಿಎಂ ಹಾಗೂ ಮಿನಿಸ್ಟರ್ ಗಮನಕ್ಕೆ ತರಲಾಗಿದೆ. ಅಧಿಕಾರಿಗಳ ಜೊತೆ ಮಾತನಾಡಿ ಸೂಚನೆ ನೀಡಿದ್ದೇವೆ. ಬೆಳೆ ಹಾನಿ ಬಗ್ಗೆ ಪರೀಶಿಲನೆ ನಡೆಸಿ, ವರದಿ ನೀಡಲು ಹೇಳಿದ್ದೇನೆ. ರೈತರ ಹಾನಿಗೆ ವಿಶೇಷ ಪ್ಯಾಕೇಜ್ ಕೇಳಲಾಗಿದೆ. ವರದಿ ಬರುವವರೆಗೂ ಕಾಯೋಣ, ಕ್ಯಾಬಿನೆಟ್ ಮುಗಿದ ಬಳಿಕ ಸಿಎಂ ಜೊತೆ ಮಾತನಾಡಲು ಯೋಜನೆ ಮಾಡಲಾಗಿದೆ ಎಂದು ಹೇಳಿದರು. ಬೋವಿ ನಿಗಮದ ಹಗರಣ ವಿಚಾರವಾಗಿ ಮಾತನಾಡಿ, ಜಾತಿಗಣತಿ ಮುಗಿಯಲಿ, ನಾನು ಆಮೇಲೆ ಮಾತನಾಡುತ್ತೇನೆ. ಇದರಲ್ಲಿ ಯರ‍್ಯಾರು ಬಿಜೆಪಿಯವರು ಇದ್ದಾರೆ, ಎಲ್ಲ ಮಾಹಿತಿ ಒದಗಿಸುತ್ತೇನೆ. ನಾನು ಅದರ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಳ್ತೀನಿ ಎಂದು ತಿಳಿಸಿದರು.

Read More

ಐಪಿಎಲ್ 2025 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್​​ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ರಾಜಸ್ಥಾನ್ ಮೊದಲು ಬ್ಯಾಟಿಂಗ್ ಮಾಡಿದ್ದು, 20ನೇ ಓವರ್‌ನ ಕೊನೆಯ ಎಸೆತದಲ್ಲಿ ನಿತೀಶ್ ರಾಣಾ ಅದ್ಭುತ ಬೌಂಡರಿ ಬಾರಿಸಿದರು. ಈ ಓವರ್‌ನಲ್ಲಿ ರಾಜಸ್ಥಾನ್ 11 ರನ್ ಗಳಿಸಿತು. ಇದರೊಂದಿಗೆ ರಾಜಸ್ಥಾನ ಮೊದಲ ಇನ್ನಿಂಗ್ಸ್‌ನಲ್ಲಿ 173 ರನ್ ಗಳಿಸಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಕೊನೆಯಲ್ಲಿ ಧ್ರುವ್ ಜುರೆಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಅವರು 23 ಎಸೆತಗಳಲ್ಲಿ 35 ರನ್ ಗಳಿಸಿದರು. ಅವರ ಇನ್ನಿಂಗ್ಸ್ ಆಧಾರದ ಮೇಲೆ ರಾಜಸ್ಥಾನ್ ಬೆಂಗಳೂರು ತಂಡಕ್ಕೆ 174 ರನ್‌ಗಳ ಗುರಿಯನ್ನು ನೀಡಿದೆ. ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ಪವರ್​ ಪ್ಲೇನಲ್ಲಿ 45 ರನ್​ಗಳಿಸಿದರು. ಪವರ್​ ಪ್ಲೇನಲ್ಲಿ ರನ್​ಗಳಿಸಲು ಪರದಾಡಿದ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಕೃನಾಲ್ ಪಾಂಡ್ಯ ಬೌಲಿಂಗ್​ನಲ್ಲಿ ಸ್ಟಂಪ್ ಆದರು. ಅವರು 19…

Read More

ಉಕ್ರೇನಿಯನ್ ನಗರ ಸುಮಿ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 31 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು 84 ಜನರು ಗಾಯಗೊಂಡಿದ್ದಾರೆ. ವೀಡಿಯೊವನ್ನು ಹಂಚಿಕೊಂಡ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ “ಜಗತ್ತು ದೃಢವಾಗಿ ಪ್ರತಿಕ್ರಿಯಿಸುವಂತೆ” ತುರ್ತು ಮನವಿ ಮಾಡಿದರು. “ರಷ್ಯಾ ನಗರ ಕೇಂದ್ರವನ್ನು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ಹೊಡೆದಿದೆ. ಬೀದಿಯಲ್ಲಿ ಅನೇಕ ಜನರಿದ್ದಾಗಲೇ,” ಉಕ್ರೇನಿಯನ್ ತುರ್ತು ಪರಿಸ್ಥಿತಿ ಹೇಳಿದೆ. “13:40 (1040GMT) ರಂತೆ, 2 ಮಕ್ಕಳು ಸೇರಿದಂತೆ 31 ಜನರು ಸಾವನ್ನಪ್ಪಿದ್ದಾರೆ” ಎಂದು ಅದು ಹೇಳಿದೆ, “10 ಮಕ್ಕಳು ಸೇರಿದಂತೆ 84 ಜನರು ಗಾಯಗೊಂಡಿದ್ದಾರೆ” ಎಂದು ಸೇರಿಸಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಇಂದು ಜನರು ಚರ್ಚ್‌ಗೆ ಹೋಗುವ ದಿನ. ಪಾಮ್‌ ಸಂಡೆ, ಜೆರುಸಲೇಂಗೆ ಭಗವಂತ ಆಗಮಿಸಿದ ದಿನ. ಚರ್ಚ್‌ನ ಪ್ರಮುಖ ಹಬ್ಬದ ದಿನದಂದೇ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ರಷ್ಯಾ ವಿರುದ್ಧ ಗುಡುಗಿದ್ದಾರೆ. ಉಕ್ರೇನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಶೇಷ ರಾಯಭಾರಿಯಾಗಿರುವ ವಿಟ್ಕಾಫ್ ಭೇಟಿ ನೀಡಿದ್ದರು. ಸೇಂಟ್…

Read More

ಬೆಂಗಳೂರು: ಸರ್ಕಾರಕ್ಕೆ ಬುದ್ದಿ ಏನಾದರೂ ಇದ್ದರೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಿ ಎಂದು ವಿಪಕ್ಷ ನಾಯಕ ಆರ್.ಆಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವೇನೂ ಜಾತಿ ಜನಗಣತಿ ವಿರೋಧಿಗಳಲ್ಲ. ಆದರೆ ಯಾರನ್ನೋ ಓಲೈಕೆ ಮಾಡಲು, ವೋಟಿಗಾಗಿ ಸಿದ್ದರಾಮಯ್ಯ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಅಂದರೆ ಅವರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಕಾಂಗ್ರೆಸ್‌ನಲ್ಲಿ ಬ್ರಿಟಿಷ್ DNA ಬಂದಿದೆ ಅದಕ್ಕೆ ಒಡಕು ಮಾಡುವ ಬುದ್ಧಿ ಕಲಿತಿದ್ದಾರೆ. ಈ ಜಾತಿಗಣತಿ ಒಕ್ಕಲಿಗರು, ಲಿಂಗಾಯತರಲ್ಲಿ ಬೆಂಕಿ ಹಚ್ಚುವ ವರದಿ. ಇದು ಯಾರೂ ಒಪ್ಪುವ ವರದಿ ಅಲ್ಲ. ಈಗಲೂ ಸರ್ಕಾರಕ್ಕೆ ಬುದ್ದಿ ಏನಾದರೂ ಇದ್ದರೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಿ. ಪ್ರತೀ ಮನೆಗೆ ಹೋಗಿ ವರದಿ ಕೊಡಲಿ ಎಂದು ಸವಾಲು ಹಾಕಿದರು. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಜಾತಿ ಜನಗಣತಿ ವರದಿಗೆ 150 ಕೋಟಿ ರೂ. ಖರ್ಚು ಮಾಡಿದೀವಿ ಅಂತಿದ್ದಾರೆ, ಇದೇ ಬೋಗಸ್. ಶಾಮನೂರು ಅವರೇ ನಮ್ಮನೆಗೆ ಬಂದು ಸಮೀಕ್ಷೆ ಮಾಡಿಲ್ಲ ಎಂದಿದ್ದಾರೆ. ಹಾಗಾದರೆ 150 ಕೋಟಿ ರೂ. ಹೊಡೆದವರು ಯಾರು? 150 ಕೋಟಿ ರೂ. ಲೂಟಿ…

Read More