ಕ್ರಿಶ್ 4 ಹೃತಿಕ್ ರೋಷನ್ ಅವರ ಇದುವರೆಗಿನ ಅತ್ಯಂತ ಮಹತ್ವಾಕಾಂಕ್ಷೆಯ ಚಿತ್ರವಾಗಿ ರೂಪುಗೊಳ್ಳುತ್ತಿದೆ – ಮತ್ತು ಅವರು ಈ ಚಿತ್ರದೊಂದಿಗೆ ನಿರ್ದೇಶನ ಮಾಡುವುದರಿಂದ ಮಾತ್ರ ಅಲ್ಲ. ಹಿಟ್ ಫ್ರಾಂಚೈಸ್ನ ನಾಲ್ಕನೇ ಭಾಗವು ಸಮಯ ಪ್ರಯಾಣದ ಸುತ್ತ ಸುತ್ತುತ್ತದೆ ಎಂದು ಹೇಳಲಾಗುತ್ತದೆ. ಹೌದು ‘ಕ್ರಿಶ್’ ಮತ್ತು ‘ಕ್ರಿಶ್ 3’ ಸಿನಿಮಾಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಟಿಸಿದ್ದರು. ಆದ್ದರಿಂದ ಈ ಚಿತ್ರತಂಡದ ಜೊತೆ ಅವರಿಗೆ ಪರಿಚಯ ಚೆನ್ನಾಗಿದೆ. ಹೃತಿಕ್ ರೋಷನ್ ಅವರು ‘ಕ್ರಿಶ್ 4’ ಆಫರ್ ನೀಡಿದಾಗ ಪ್ರಿಯಾಂಕಾ ಚೋಪ್ರಾ ಅವರು ಎರಡನೇ ಆಲೋಚನೆ ಮಾಡದೇ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಚಿತ್ರತಂಡದ ಕಡೆಯಿಂದ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಹೃತಿಕ್ ರೋಷನ್ ತಂದೆ ರಾಕೇಶ್ ರೋಷನ್ ಅವರು ‘ಕ್ರಿಶ್ 3’ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಈಗ ‘ಕ್ರಿಶ್ 4’ ಚಿತ್ರಕ್ಕೆ ಸ್ವತಃ ಹೃತಿಕ್ ರೋಷನ್ ಅವರು ಆ್ಯಕ್ಷನ್-ಕಟ್ ಹೇಳಲು ಮುಂದಾಗಿದ್ದಾರೆ. ಆದ್ದರಿಂದ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಮೂಡಿದೆ. ಪ್ರಿಯಾಂಕಾ ಚೋಪ್ರಾ…
Author: Author AIN
ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿಯಾದ್ರೆ ಸಿದ್ದರಾಮಯ್ಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಈ ವರದಿ ಸಿದ್ದರಾಮಯ್ಯಗೇ ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದು ಲೇವಡಿ ಮಾಡಿದ್ದಾರೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ನನಗೆ ಎಂದು ಹೇಳಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದ ಒಡತಿ ಹಾಗೂ ಬಾಲಿವುಡ್ ನಟಿ ಪ್ರೀತಿ ಜಿಂಟಾ ಶನಿವಾರ ಸಿಕಂದರಾಬಾದ್ನಲ್ಲಿರುವ ತಡ್ಬಂದ್ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಹನುಮಾನ್ ಜಯಂತಿಯಂದು ಅವರು ವಿಶೇಷ ಪೂಜೆಗಳನ್ನು ಮಾಡಿದರು. ದೇವಾಲಯಕ್ಕೆ ಭೇಟಿ ನೀಡಿದ ಪ್ರೀತಿ ಜಿಂಟಾ ಅಲ್ಲಿನ ಭಕ್ತರೊಂದಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ತಾಯತಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ದೇವಾಲಯದ ಅಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ನೀಡಿದರು. ಆದರೆ, ಭಕ್ತರು ಅವಳನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಈ ಸಂದರ್ಭದಲ್ಲಿ ಪ್ರೀತಿ ಮುಖಕ್ಕೆ ಮಾಸ್ಕ್ ಹಾಕಿ, ಹೆಡ್ ಬ್ಯಾಂಡ್ ಧರಿಸಿ ಸರಳವಾಗಿ ಕಾಣಲು ಪ್ರಯತ್ನಿಸಿದರು. ಇದನ್ನು ಬೋಯಿನಪಲ್ಲಿ ಇನ್ಸ್ಪೆಕ್ಟರ್ ಬಿ. ಲಕ್ಷ್ಮಿನಾರಾಯಣ ರೆಡ್ಡಿ ದೃಢಪಡಿಸಿದ್ದಾರೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಇಂದು ಉಪ್ಪಳದಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿರುವ ಪ್ರೀತಿ ಜಿಂಟಾ, ತಮ್ಮ ತಂಡಕ್ಕೆ ಜಯವಾಗಲಿ ಎಂದು ಹಾರೈಸಲು ಈ ಪೂಜೆಗಳನ್ನು ಮಾಡಿದರು. ಪ್ರಸ್ತುತ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಫಾರ್ಮ್ನಲ್ಲಿದೆ. ಇದುವರೆಗೆ…
ವಾಷಿಂಗ್ಟನ್: ಆಪಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ. ನಿಮ್ಮ ನೆಚ್ಚಿನ ಐಫೋನ್ಗಳು ಇನ್ನು ಮುಂದೆ ದುಬಾರಿಯಲ್ಲ. ಕಳೆದ ಕೆಲವು ವಾರಗಳಿಂದ, ಅಮೆರಿಕ ಸರ್ಕಾರವು ಚೀನಾದ ಉತ್ಪನ್ನಗಳ ಮೇಲೆ ಹೊಸ ತೆರಿಗೆಗಳನ್ನು ವಿಧಿಸುತ್ತದೆ ಎಂಬ ಆತಂಕಗಳು (ಯುಎಸ್ ಚೀನಾ ವ್ಯಾಪಾರ ಯುದ್ಧ) ಇದ್ದವು. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಇದರಿಂದಾಗಿ ಐಫೋನ್ಗಳು ಮತ್ತು ಇತರ ಗ್ಯಾಜೆಟ್ಗಳ ಬೆಲೆಗಳು ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಇದು ಸಂಭವಿಸಿದ್ದರೆ, ಆಪಲ್ ಈ ಉತ್ಪನ್ನಗಳ ಮೇಲೆ 145% ವರೆಗಿನ ಭಾರಿ ತೆರಿಗೆಯನ್ನು ಪಾವತಿಸಬೇಕಾಗಿತ್ತು. ಗ್ರಾಹಕರಿಂದ ಈ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು ಆಪಲ್ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸಬಹುದು ಎಂಬ ಊಹಾಪೋಹವಿದೆ. ಆದರೆ ಸಮಾಧಾನವೆಂದರೆ ಇದು ನಡೆಯುತ್ತಿಲ್ಲ. ತಂತ್ರಜ್ಞಾನ ಉದ್ಯಮಕ್ಕೆ ಟ್ರಂಪ್ ನೀಡಿದ ದೊಡ್ಡ ರಿಯಾಯಿತಿ: ಬ್ಲೂಮ್ಬರ್ಗ್ ವರದಿಯ ಪ್ರಕಾರ, ಡೊನಾಲ್ಡ್ ಟ್ರಂಪ್ ಆಡಳಿತವು ಸ್ಮಾರ್ಟ್ಫೋನ್ಗಳು, ಲ್ಯಾಪ್ಟಾಪ್ಗಳು ಮತ್ತು ಇತರ ಕೆಲವು ತಂತ್ರಜ್ಞಾನ ಉತ್ಪನ್ನಗಳಿಗೆ ಪರಸ್ಪರ ಸುಂಕಗಳಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಇದರರ್ಥ ಪ್ರಸ್ತುತ ಅವರ ಮೇಲೆ ಯಾವುದೇ ಹೆಚ್ಚುವರಿ ಶುಲ್ಕಗಳನ್ನು ವಿಧಿಸಲಾಗಿಲ್ಲ. ಈ ವಸ್ತುಗಳು ಚೀನಾದ…
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದೆ ಎನ್ನಲಾದ ಘರ್ಷಣೆಗಳಲ್ಲಿ ತಂದೆ-ಮಗ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿಂಸಾಚಾರ ಪೀಡಿತ ಸಂಸೇರ್ಗಂಜ್ ಪ್ರದೇಶದಲ್ಲಿರುವ ಜಾಫ್ರಾಬಾದ್ನಲ್ಲಿರುವ ಅವರ ಮನೆಯೊಳಗೆ ತಂದೆ-ಮಗ ಜೋಡಿಯಾದ ಹರೋಗೋಬಿಂದೋ ದಾಸ್ ಮತ್ತು ಚಂದನ್ ಅವರ ಮೃತದೇಹಗಳು ಬಹು ಇರಿತದ ಗಾಯಗಳಿಂದ ಪತ್ತೆಯಾಗಿವೆ ಎಂದು ಅವರು ಹೇಳಿದರು. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಹೌದು ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರದಿಂದಾಗಿ ಮುರ್ಷಿದಾಬಾದ್ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ, ಧುಲಿಯನ್, ಸಂಸರ್ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಆದಾಗ್ಯೂ ಹಿಂಸಾಚಾರ ಪೀಡಿತ ಮುರ್ಷಿದಾಬಾದ್ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್ಎಫ್ ಸಿಬ್ಬಂದಿಯಲ್ಲದೆ, ಪಶ್ಚಿಮ ಬಂಗಾಳ ಸರ್ಕಾರದ ಕೋರಿಕೆಯ ಮೇರೆಗೆ ಇನ್ನೂ 5 ಕಂಪನಿಗಳನ್ನು ನಿಯೋಜಿಸಲಾಗಿದೆ. ಮುರ್ಷಿದಾಬಾದ್, ಮಾಲ್ಡಾ,…
ಬೆಂಗಳೂರು: ಬೋವಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದ ಜೀವಾ ಎನ್ನುವ ವಕೀಲೆಯ ಆತ್ಮಹತ್ಯೆ ಘಟನೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡತೊಡಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಕಾಲ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (SIT) 2,300 ಪುಟಗಳ ಅಂತಿಮ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಿದೆ. ಕೋರ್ಟ್ಗೆ ಸಲ್ಲಿಸಿದ ಅಂತಿಮ ವರದಿಯಲ್ಲಿ ಮೃತ ಜೀವಾ ಡೆತ್ ನೋಟ್ನಲ್ಲಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ. ಅಲ್ಲದೇ ಡಿವೈಎಸ್ಪಿ ಕನಕಲಕ್ಷ್ಮಿ ಅವರು ಕಿರುಕುಳ ನೀಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಇದೆಲ್ಲರ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಲಾಗಿದೆ. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯ ವರದಿಗಳು, ಮರಣೋತ್ತರ ಪರೀಕ್ಷಾ ವರದಿ, ಡೆತ್ನೋಟ್ ಫಾರೆನ್ಸಿಕ್ ರಿಪೋರ್ಟ್ಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಜೀವಾ ವಿಚಾರಣೆ ವೇಳೆ ಚಿತ್ರೀಕರಿಸಲಾಗಿದ್ದ ಕೆಲವು ವಿಡಿಯೋ ಡಿಲೀಟ್ ಆಗಿದ್ದವು. ಜೀವಾರನ್ನು ವಿವಸ್ತ್ರಗೊಳಿಸಿರುವುದು, ಇತರೆ ಕೆಲ ವಿಡಿಯೋಗಳು ಇರಲಿಲ್ಲ. ಎಫ್ಎಸ್ಎಲ್ ಮೂಲಕ ಮರು ಸಂಗ್ರಹಿಸಿದಾಗ ಆ ವಿಡಿಯೋಗಳು ಪತ್ತೆಯಾದವು. ಡೆತ್ನೋಟ್ನಲ್ಲಿ ಜೀವಾ ಮಾಡಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ.…
ರಾಸ್್ಬೆರ್ರಿಸ್ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ವಿಟಮಿನ್ ಸಿ, ವಿಟಮಿನ್ ಇ, ಆಂಥೋಸಯಾನಿನ್ ಮತ್ತು ಎಲಾಜಿಕ್ ಆಮ್ಲವನ್ನು ಹೊಂದಿರುತ್ತದೆ. ಇವು ಸ್ವತಂತ್ರ ರಾಡಿಕಲ್ ಹಾನಿಯಿಂದ ರಕ್ಷಿಸುತ್ತವೆ. ರಾಸ್್ಬೆರ್ರಿಸ್ ಕೂಡ ಫೈಬರ್ನಲ್ಲಿ ಸಮೃದ್ಧವಾಗಿದೆ. ಜೀರ್ಣಕ್ರಿಯೆಯ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ರಾಸ್್ಬೆರ್ರಿಸ್ ತಿನ್ನಬೇಕು. ಇದು ಹೃದಯದ ಆರೋಗ್ಯಕ್ಕೂ ಒಳ್ಳೆಯದು. ರಾಸ್್ಬೆರ್ರಿಸ್ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ. ಇದರಲ್ಲಿ ಪೊಟ್ಯಾಸಿಯಮ್ ಇದ್ದು, ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ರಾಸ್ಪ್ಬೆರಿ ಕೇವಲ ರುಚಿಕರವಾದ ಹಣ್ಣು ಮಾತ್ರವಲ್ಲ, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿದೆ. ಆ ಪ್ರಯೋಜನಗಳ ಬಗ್ಗೆ ನೀವು ತಿಳಿದಿರಲೇಬೇಕು.. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ರಾಸ್್ಬೆರ್ರಿಸ್ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳ ವಿರುದ್ಧ ಹೋರಾಡಲು ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಇವು ಮುಖ್ಯವಾಗಿವೆ. ರಾಸ್್ಬೆರ್ರಿಸ್ ಹೆಚ್ಚಿನ ಮಟ್ಟದ ಆಂಥೋಸಯಾನಿನ್ಗಳು, ಕ್ವೆರ್ಸೆಟಿನ್ ಮತ್ತು ವಿಟಮಿನ್ ಸಿ ಅನ್ನು ಹೊಂದಿದ್ದು, ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು…
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ವಿಶೇಷ ಹಸಿರು ಜೆರ್ಸಿ ಸಂಪ್ರದಾಯವನ್ನು ಮುಂದುವರೆಸಲಿದ್ದು, ಏಪ್ರಿಲ್ 13, 2025 ರಂದು ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಹಸಿರು ಜೆರ್ಸಿಯನ್ನು ಧರಿಸಲಿದೆ. ಮರಗಳನ್ನು ನೆಡುವುದು ಮತ್ತು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳನ್ನು ಕಡಿಮೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 2011 ರಲ್ಲಿ ಪ್ರಾರಂಭಿಸಲಾದ ‘ಗೋ ಗ್ರೀನ್’ ಉಪಕ್ರಮದ ಭಾಗವಾಗಿ, RCB ಪ್ರತಿ ಋತುವಿನ ಒಂದು ಪಂದ್ಯಕ್ಕೆ 100% ಮರುಬಳಕೆಯ ವಸ್ತುಗಳಿಂದ ಮಾಡಿದ ಹಸಿರು ಜೆರ್ಸಿಗಳನ್ನು ಧರಿಸುತ್ತದೆ. ಈ ಸಂದರ್ಭದಲ್ಲಿ, ಟಾಸ್ ಸಮಯದಲ್ಲಿ ಎದುರಾಳಿ ನಾಯಕನಿಗೆ ಸಸಿಯನ್ನು ಉಡುಗೊರೆಯಾಗಿ ನೀಡುವುದು ಸಹ ಈ ಪರಿಸರ ಅಭಿಯಾನದ ಒಂದು ಭಾಗವಾಗಿರುತ್ತದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಹಿಂದೆ, ಆರ್ಸಿಬಿ ಹೆಚ್ಚಾಗಿ ಈ ಹಸಿರು ಜೆರ್ಸಿ ಪಂದ್ಯಗಳನ್ನು ತಮ್ಮ ತವರು ಮೈದಾನ ಬೆಂಗಳೂರಿನಲ್ಲಿ ಆಯೋಜಿಸುತ್ತಿತ್ತು. ಆದರೆ ಕೆಲವೊಮ್ಮೆ ಅದು ಇತರ ವೇದಿಕೆಗಳಿಗೂ ಹರಡಿದೆ. 2022 ರಲ್ಲಿ ಮುಂಬೈ ಮತ್ತು 2024 ರಲ್ಲಿ…
ಬೆಂಗಳೂರು: ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಜಿಗಿದಿದ್ದು, 8,225 ರೂವರೆಗೂ ಕುಸಿದಿದ್ದ ಆಭರಣ ಚಿನ್ನದ ಬೆಲೆ ಈಗ 8,770 ರೂಗೆ ಏರಿದೆ. ಬೆಂಗಳೂರಿನಲ್ಲಿ ಮಾರ್ಚ್ ಮೂರನೇ ವಾರದಲ್ಲಿ ದಾಖಲೆಯ 105 ರೂವರೆಗೆ ಹೋಗಿದ್ದ ಬೆಳ್ಳಿ ಬೆಲೆ 94 ರೂಗೂ ಇಳಿದಿತ್ತು. ಈಗ ಮತ್ತೆ 100 ರೂ ಗಡಿ ಮುಟ್ಟಿದೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 87,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 95,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 87,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 13ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,700 ರೂ…
ಬೆಂಗಳೂರು: ಇತ್ತೀಚೆಗಷ್ಟೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಬೆನ್ನಲ್ಲೇ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೇ ಇದೇ ಘಟನೆಗೆ ಸಂಬಂಧಿಸಿದಂತೆ ರಜತ್ ಹಾಗೂ ವಿನಯ್ ಜೈಲಿಗೂ ಕೂಡ ಹೋಗಿ ಬಂದಿದ್ದರು. ಇದಾದ ಬಳಿಕ ಕುಚಿಕು ಗೆಳೆಯರಂತಿದ್ದ ಇವರ ಸ್ನೇಹಕ್ಕೆ ಬಿರುಕು ಮೂಡಿದ್ಯಾ?ಎಂಬ ಪ್ರಶ್ನೆ ಮೂಡಿದೆ. ಇದೀಗ ಇಬ್ಬರ ಸ್ನೇಹದ ಬಿರುಕಿನ ಬಗ್ಗೆ ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ರಜತ್ ಜೊತೆ ನನ್ನ ಫ್ರೆಂಡ್ ಶಿಪ್ ಕಟ್ ಆಗಿಲ್ಲ. ಸಣ್ಣ ಸಣ್ಣ ವಿಷಯಕ್ಕೆ ಫ್ರೆಂಡ್ ಶಿಪ್ ಕಟ್ ಮಾಡ್ಕೊಳ್ಳೋವನು ನಾನಲ್ಲ. ಅವನು ನನ್ನನ್ನ ಎಲ್ಲೂ ಬಿಟ್ಟುಕೊಟ್ಟಿಲ್ಲ. ನಾನೂ ಬಿಟ್ಟು ಕೊಡಲ್ಲ, ಸ್ನೇಹಿತರ ಸಂಬಂಧ ಗಂಡ ಹೆಂಡತಿ ಜಗಳ ಇದ್ದಂತೆ, ಎರಡ್ಮೂರು ದಿನ ಇರುಸು-ಮುರುಸು ಇರುತ್ತೆ, ಹಾಗೇ ಬಿಟ್ರೆ ಅದಾಗೇ ಸರಿ ಹೋಗುತ್ತೆ ಅಂತ ಹೇಳಿದ್ದಾರೆ. https://ainkannada.com/is-the-table-fan-blowing-hot-air-just-do-this-it-blows-cooler-air-than-the-ac/ ನಮ್ಮಿಬ್ಬರ ಮಧ್ಯೆ ಬ್ರೇಕಪ್ ಏನಿಲ್ಲ, ಅವನಿಗಿಂತ ನಾನು ವಯಸ್ಸಿನಲ್ಲಿ ದೊಡ್ಡವನು. ಅವನು ಬ್ಲೇಮ್ ಮಾಡ್ದ ಅಂತ ನಾನ್ ಮಾಡಲ್ಲ. ಅವನು ಕರೆದ ಅಂತ ನಾನ್…