2025 ರ ಐಪಿಎಲ್ನಲ್ಲಿ ಎಂಎಸ್ ಧೋನಿ ದಯನೀಯವಾಗಿ ವಿಫಲರಾದರು. ಈ ಋತುವಿನಲ್ಲಿ ಇಲ್ಲಿಯವರೆಗೆ ಅವರು ಫಿನಿಷರ್ ಪಾತ್ರದಲ್ಲಿ ಪ್ರಭಾವ ಬೀರಿಲ್ಲ. ಇದು ಅವರ ಆಟದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಕ್ರಮಾಂಕದಲ್ಲಿ ಧೋನಿ ಮತ್ತೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. https://ainkannada.com/information-collected-from-94-17-of-people-for-caste-census-shivraj-thangadgi/ ಇದರೊಂದಿಗೆ, ಚೆನ್ನೈನ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಕೆಲವು ಆಘಾತಕಾರಿ ಕಾಮೆಂಟ್ಗಳನ್ನು ಮಾಡಿದ್ದಾರೆ. ಧೋನಿಯನ್ನು ನಾಯಕನನ್ನಾಗಿ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳುವ ಮೂಲಕ ಪ್ರೇಕ್ಷಕರನ್ನು ಆಘಾತಗೊಳಿಸಿದರು. ಚೆನ್ನೈನಲ್ಲಿ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ. ಐಪಿಎಲ್ನಲ್ಲಿ 5 ಬಾರಿ ಪ್ರಶಸ್ತಿ ಗೆದ್ದಿರುವ ಚೆನ್ನೈ ತಂಡ, ಐಪಿಎಲ್ 2025 ರ ಗುಂಪು ಹಂತದಲ್ಲಿಯೇ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಪಾಯಿಂಟ್ಸ್ ಟೇಬಲ್ನಲ್ಲಿ ಈ ತಂಡದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಚೆನ್ನೈ ತಂಡ -0.889 ನಿವ್ವಳ ರನ್ ದರದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9 ನೇ ಸ್ಥಾನವನ್ನು ತಲುಪಿತು. ಏತನ್ಮಧ್ಯೆ, ಚೆನ್ನೈ ನಾಯಕ ರುತುರಾಜ್ ಗಾಯಕ್ವಾಡ್ ಗಾಯಗೊಂಡಿದ್ದಾರೆ. ಇದರೊಂದಿಗೆ, ಚೆನ್ನೈನಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ…
Author: Author AIN
ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊತ್ತ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಅದೂ ಕೂಡ ನಮ್ಮ ಬೆಂಗಳೂರಿಗೆ. ಅನಿರುದ್ಧ್ ಮೊದಲ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಮ್ಯೂಸಿಕ್ ಜಾತ್ರೆ ಮಾಡಲು ರೆಡಿಯಾಗಿದ್ದಾರೆ. ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ನಡೆಯುವ ಮ್ಯೂಸಿಕ್ ಕನ್ಸರ್ಟ್ ಈಗಾಗಲೇ ಬೃಹತ್ ದಾಖಲೆ ಕ್ರಿಯೇಟ್ ಮಾಡಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕನ್ಸರ್ಟ್ ನ್ನು ಕೆವಿಎನ್ ಸಂಸ್ಥೆ ಪ್ರಸ್ತುಪಡಿಸಿದೆ. ವಿಶೇಷ ಅಂದರೆ ʼಅನಿರುದ್ಧ್ ಅವರ ಹುಕುಂ ಟೂರ್ ಬೆಂಗಳೂರು ಅವತರಣಿಕೆಯ 16 ಸಾವಿರಕ್ಕೂ ಅಧಿಕ ಟಿಕೆಟ್ಗಳು ಕೇವಲ 60 ನಿಮಿಷದಲ್ಲೇ ಮಾರಾಟವಾಗಿದೆ ʼ ಅಂತ ಕೆವಿಎನ್ ಸಂಸ್ಥೆ ನಿರ್ಮಾತೃ ವೆಂಕಟ ಕೆ ನಾರಾಯಣ ಖಚಿತಪಡಿಸಿದ್ದಾರೆ. ಅನಿರುದ್ಧ್ ರವಿಚಂದರ್ ಅವರ…
ತಮಿಳುನಾಡು: ರಾಜ್ಯಾಧ್ಯಕ್ಷ ಸ್ಥಾನ ಚುನಾವಣೆಗೆ ಎಐಎಡಿಎಂಕೆ ಮಾಜಿ ನಾಯಕ, ಹಾಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನೈನಾರ್ ನಾಗೇಂದ್ರನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರಿಗೆ ಪಟ್ಟಕಟ್ಟುವುದು ಖಚಿತ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗುವುದು. ಅಣ್ಣಾಮಲೈ ತಾವು ಬಿಜೆಪಿ ರಾಜ್ಯಾಧ್ಯಕ್ಷನ ರೇಸ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದರಿಂದ ಈ ಹುದ್ದೆಗೆ ವನತಿ ಶ್ರೀನಿವಾಸನ್ ಮತ್ತು ತಮಿಳಿಸೈ ಸೌಂದರರಾಜನ್ ಅವರಂತಹ ಹೆಸರುಗಳ ಬಗ್ಗೆ ಊಹಾಪೋಹಗಳಿದ್ದರೂ ಅಂತಿಮವಾಗಿ ನಾಗೇಂದ್ರನ್ ಆಯ್ಕೆಯಾಗಿದ್ದಾರೆ. https://ainkannada.com/information-collected-from-94-17-of-people-for-caste-census-shivraj-thangadgi/ ತಿರುನಲ್ವೇಲಿಯ ಪ್ರಮುಖ ತೇವರ್ ಸಮುದಾಯದ ನಾಯಕ ಮತ್ತು ಬಿಜೆಪಿಯ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಕೂಡ ಒಲವು ಹೊಂದಿತ್ತು ಎಂದು…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುಮಾರು ಒಂದು ತಿಂಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣವನ್ನು ಭೇದಿಸಲು ಮೃತರ ದೇಹದ ಮೇಲೆ ಪತ್ತೆಯಾದ ಮೂಗಿನ ಪಿನ್ ಅನ್ನು ಬಳಸಲಾಗಿದೆ. ಸುಳಿವು ಆಧರಿಸಿ ಪ್ರಕರಣ ಭೇದಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆಕೆಯ ಕುಟುಂಬ ಸದಸ್ಯರಿಗೆ ಶವವನ್ನು ಹಸ್ತಾಂತರಿಸಲಾಯಿತು. ವಿವರಗಳಿಗೆ ಹೋದರೆ… ಅನಿಲ್ ಕುಮಾರ್ ದೆಹಲಿಯ ಉದ್ಯಮಿ. ಅವರ ಪತ್ನಿ ಸೀಮಾ ಸಿಂಗ್. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಈ ಹಿನ್ನೆಲೆಯಲ್ಲಿ, ಅನಿಲ್ ಕುಮಾರ್ ಸುಮಾರು ಒಂದು ತಿಂಗಳ ಹಿಂದೆ ಸೀಮಾ ಸಿಂಗ್ ಅವರನ್ನು ಕತ್ತು ಹಿಸುಕಿ ಕೊಂದರು. ನಂತರ ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿ, ಅದಕ್ಕೆ ಕಲ್ಲುಗಳು ಮತ್ತು ಇಟ್ಟಿಗೆಗಳನ್ನು ಕಟ್ಟಿ, ಕಾರಿನಲ್ಲಿ ತೆಗೆದುಕೊಂಡು ಹೋಗಿ ದಕ್ಷಿಣ ದೆಹಲಿಯ ಚರಂಡಿಯಲ್ಲಿ ಎಸೆದಿದ್ದಾನೆ. ಕಳೆದ ತಿಂಗಳು 15 ರಂದು ಕಾಲುವೆಯಲ್ಲಿ ಶವವನ್ನು ಕಂಡುಕೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. https://ainkannada.com/information-collected-from-94-17-of-people-for-caste-census-shivraj-thangadgi/ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಮರಣೋತ್ತರ…
ಬೆಂಗಳೂರು: ರಾಜ್ಯದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಅಥವಾ ಜಾತಿ ಗಣತಿ ವರದಿ ಜಾರಿ ತರುವ ಸಂಬಂಧ ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಏ.17ರಂದು ಜಾತ ಗಣತಿ ವರದಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಮುಂದಿನ ಸಾಧಕ-ಬಾಧಕಗಳ ಬಗ್ಗೆ ಹೆಜ್ಜೆ ಇಡಲು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.. ಹಿಂದುಳಿದ ವರ್ಗದ ಆಯೋಗದ ನಡೆಸಿದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿಯನ್ನ ಕ್ಯಾಬಿನೆಟ್ನಲ್ಲಿ ಮಂಡಿಸಲಾಗಿದೆ. ಎರಡು ಬಾಕ್ಸ್ ವರದಿಯನ್ನು ನೀಡಲಾಗಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿ & ಜಾತಿವಾರು ವರದಿ ನೀಡಲಾಗಿದೆ. 50 ಸಂಪುಟಗಳ ವರದಿಯನ್ನ ಕ್ಯಾಬಿನೆಟ್ನಲ್ಲಿ ಓಪನ್ ಮಾಡಿದ್ದೇವೆ..ಅದರಲ್ಲಿ ಕೆಲವು ವಿಚಾರಗಳನ್ನ ಚರ್ಚೆ ಮಾಡಿದ್ದೇವೆ ಎಂದರು. ಜಾತಿ ಗಣತಿಯಲ್ಲಿ ಒಟ್ಟು 5 ಕೋಟಿ 98ಲಕ್ಷ ಜನ ವರದಿಯಲ್ಲಿ ಒಳಪಟ್ಟಿದ್ದಾರೆ. 1 ಕೋಟಿ 35 ಲಕ್ಷ ಕುಟುಂಬಗಳು ಈ ವರದಿಯಲ್ಲಿ ಒಳಪಟ್ಟಿವೆ. ಈ…
ಬೆಂಗಳೂರು: ಈ ಕಾಂಗ್ರೆಸ್ ಸರ್ಕಾರ ಸಾಕಪ್ಪ ಸಾಕು ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾಕಪ್ಪ ಸಾಕು ಈ ಕಾಂಗ್ರೆಸ್ ಸರ್ಕಾರ ಅನ್ನೋ ಭಾವನೆ ಜನರ ಮನಸಿನಲ್ಲಿ ಬಂದಿದೆ. ಜನ ವಿರೋಧಿ ಸರ್ಕಾರ ಜನರನ್ನು ಕಿತ್ತು ತಿನ್ನುತ್ತಿದೆ. ಕಾಂಗ್ರೆಸ್ಸಿನ ದುರಾಡಳಿತಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಹೋರಾಟಕ್ಕೆ ನಮ್ಮ ಜತೆ ಕೈ ಜೋಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಅಭಿಯಾನವನ್ನು ಯಶಸ್ವಿಗೊಳಿಸೋಣ. ಭ್ರಷ್ಟ ಕಾಂಗ್ರೆಸ್ ನೀತಿಯನ್ನು ಖಂಡಿಸೋಣ ಎಂದು ಅವರು ಕಿಡಿಕಾರಿದ್ದಾರೆ. https://ainkannada.com/do-you-have-sugar-too-if-so-dont-drink-these-three-juices/ ಕಾಕಾ ಪಾಟೀಲ್ ನಿನಗೂ ಫ್ರೀ, ಮಹದೇವಪ್ಪ ನಿನಗೂ ಫ್ರೀ ಅಂತಾ ಪುಂಗಿದ್ದ ಸರ್ಕಾರ ಇವಾಗ ಕಾಣೆ ಆಗಿದೆ. 48 ವಸ್ತುಗಳ ಬೆಲೆ ಏರಿಕೆ ಆಗಿದೆ. ಇದರ ವಿರುದ್ದ ನಮ್ಮ ಹೋರಾಟ. ಯಾವುದೇ ವರ್ಗದಲ್ಲಿ ಬೆಲೆ ಏರಿಕೆ ಬಿಟ್ಟಿಲ್ಲ. ಜನರು ಜೀವನ ಮಾಡೋಕೆ ಆಗ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.
ಜರ್ಮನಿಯ ಪ್ರಮುಖ ತಂತ್ರಜ್ಞಾನ ಕಂಪನಿಯ ಸಿಇಒ ಆಗಸ್ಟಿನ್ ಎಸ್ಕೋಬಾರ್ ತಮ್ಮ ಕುಟುಂಬದೊಂದಿಗೆ ನ್ಯೂಯಾರ್ಕ್ಗೆ ಆಗಮಿಸಿದ್ದಾರೆ. ಪ್ರವಾಸದ ಭಾಗವಾಗಿ, ಅವರು ನಗರವನ್ನು ನೋಡಲು ಹೆಲಿಕಾಪ್ಟರ್ನಲ್ಲಿ ಹೊರಟರು. ಈ ಅನುಕ್ರಮದಲ್ಲಿ, ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹಡ್ಸನ್ ನದಿಯ ಮೇಲೆ ಹಾರುತ್ತಿರುವಾಗ ಇದ್ದಕ್ಕಿದ್ದಂತೆ ಅಪಘಾತಕ್ಕೀಡಾಯಿತು. ಅದು ಗಾಳಿಯಲ್ಲಿ ಸದ್ದು ಮಾಡುತ್ತಾ ನದಿಗೆ ಬಿದ್ದಿತು. ಎಸ್ಕೋಬಾರ್, ಅವರ ಪತ್ನಿ, ಮೂವರು ಮಕ್ಕಳು ಮತ್ತು ಪೈಲಟ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಂದು ನಂಬಲಾಗಿದೆ. https://ainkannada.com/do-you-have-sugar-too-if-so-dont-drink-these-three-juices/ ಮಾಹಿತಿ ಪಡೆದ ತಕ್ಷಣ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದೋಣಿಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಹೆಲಿಕಾಪ್ಟರ್ ತಲೆಕೆಳಗಾಗಿ ಬಿದ್ದು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಲಿಕಾಪ್ಟರ್ ಗಾಳಿಯಲ್ಲಿದ್ದಾಗ ಅದರ ಒಂದು ಭಾಗ ಮುರಿದುಹೋಯಿತು ಎಂದು ಅವರು ಹೇಳಿದರು. ಬೆಲ್ 206 ಹೆಲಿಕಾಪ್ಟರ್ ಆಗಿದ್ದು, ನ್ಯೂಯಾರ್ಕ್ ಟೂರ್ಸ್ ಇಲಾಖೆಯು ದೃಶ್ಯವೀಕ್ಷಣೆಗೆ ಬಳಸುತ್ತಿದ್ದಂತೆ ತೋರುತ್ತದೆ. ಆದಾಗ್ಯೂ, ಅಪಘಾತದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಆಗಸ್ಟೀನ್ ಮತ್ತು ಅವರ ಕುಟುಂಬ ಸದಸ್ಯರು…
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40% ಕಮೀಷನ್ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಸ್ ಐಟಿಯಿಂದ ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ಪಡೆಯಲು ತೀರ್ಮಾನಿಸಲಾಗಿದೆ. ಸಂಪುಟ ಸಭೆ ಬಳಕ ವಿವರ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಇಂದು 21 ವಿಷಯಗಳನ್ನ ಚರ್ಚಿಸಿ ಹಲವು ನಿರ್ಣಯ ತೆಗೆದುಕೊಂಡಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು ಮಾಡಿರೋ 40% ಕಮೀಷನ್ ಆರೋಪ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಲಾಗಿತ್ತು. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಸಂಪುಟ ಸಭೆಗೆ ಸಲ್ಲಿಸಲಾಯ್ತು ಎಂದು ತಿಳಿಸಿದರು. 1729 ಕಾಮಗಾರಿಗಳಲ್ಲಿ ಅಕ್ರಮ ನಾಗಮೋಹನ್ ದಾಸ್ ನೇನೃತ್ವದ ವಿಚಾರಣಾ ಆಯೋಗ ವಿಶೇಷ ಸಲಹೆಗಳನ್ನ ನೀಡಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆರೋಪ ಬಂದಿದೆ. 40% ಕಮಿಷನ್ ವಿಚಾರವನ್ನು…
ಇದು ನನ್ನೂರು, ನನ್ನ ಗ್ರೌಂಡ್ ಕಣೋ ಅಂತಾ ನೆಲಕ್ಕೆ ಗುದ್ದಿ ವೃತ್ತ ಹಾಕಿ ಆರ್ ಸಿಬಿ ವಿರುದ್ಧ ಅಜೇಯ ದಾಖಲೆ ಬರೆದ ಕನ್ನಡದ ಮಗ ಕೆಎಲ್ ರಾಹುಲ್ ಆಟವನ್ನು ಕ್ರಿಕೆಟ್ ಪ್ರೇಮಿಗಳು ಕೊಂಡಾಡುತ್ತಿದ್ದಾರೆ. ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಹೈವೋಲ್ಟೇಜ್ ಪಂದ್ಯವಿತ್ತು. ಹೈವೋಲ್ಟೇಜ್ ಅನ್ನೋದಕ್ಕಿ ಕಾರಣ ಕನ್ನಡದ ಮಗ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ ಫ್ಲೇಯರ್. ವಿರಾಟ್ ಕೊಹ್ಲಿ ದೆಹಲಿ ಹುಡ್ಗ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ನಿರೀಕ್ಷೆ ಇತ್ತು. ಕನ್ನಡದ ಈ ಹುಡುಗ ಬೆಂಗಳೂರಿನಲ್ಲಿ 9 ವರ್ಷಗಳ ಬಳಿಕ ಅರ್ಧ ಶತಕವೊಂದನ್ನು ದಾಖಲಿಸಿ ತನ್ನ ತಂಡದ ಗೆಲುವಿಗೆ ಕಾರಣರಾದರು. ಕೆಎಲ್ ರಾಹುಲ್ ಅದ್ಭುತ ಆಟವಾಡಿ ಎಲ್ಲರ ಚಪ್ಪಾಳೆ ಗಿಟ್ಟಿಸಿಕೊಂಡರು. ಕನ್ನಡದ ಹುಡ್ಗ ತನ್ನದೇ ನೆಲದಲ್ಲಿ ಅಬ್ಬರಿದ ರೀತಿಗೆ ಇಡೀ ಗ್ರೌಂಡ್ ಸ್ಟನ್ ಆಗಿತ್ತು. ಕೆಎಲ್ ರಾಹುಲ್ ಅವರ ಅಜೇಯ 93 ರನ್ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ರಾಯಲ್ ಚಾಲೆಂಜರ್ಸ್…
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ, ಆದರೆ ಉಧಂಪುರ ಜಿಲ್ಲೆಯಲ್ಲಿ ಮೂವರು ಉಗ್ರರ ಗುಂಪನ್ನು ಪತ್ತೆಹಚ್ಚಲು ಪ್ರತ್ಯೇಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಪ್ರದೇಶದ ಗುಡ್ಡಗಾಡು ಜಿಲ್ಲೆಗಳ ವಿವಿಧ ಸ್ಥಳಗಳ ನಡುವೆ ಸಂಭಾವ್ಯವಾಗಿ ಚಲಿಸುವ ಭಯೋತ್ಪಾದಕರ ಮೇಲೆ ನಿಗಾ ಇಡಲು ಭದ್ರತಾ ಸಂಸ್ಥೆಗಳು ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶಕ್ಕೆ ಕಣ್ಗಾವಲು ವ್ಯಾಪ್ತಿಯನ್ನು ವಿಸ್ತರಿಸಿವೆ. https://ainkannada.com/do-you-have-sugar-too-if-so-dont-drink-these-three-juices/ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಪ್ರಾರಂಭಿಸಿದ ಗುಪ್ತಚರ ಆಧಾರಿತ ಶೋಧ ಮತ್ತು ನಾಶ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ನಲ್ಲಿ ಎನ್ಕೌಂಟರ್ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷ ಪಡೆಗಳು ಒಬ್ಬ ಭಯೋತ್ಪಾದಕನನ್ನು ಪತ್ತೆಹಚ್ಚಲು ಹೆಚ್ಚಿನ ಹಿಮ ಪ್ರದೇಶಗಳು ಮತ್ತು ವಿಶ್ವಾಸಘಾತುಕ ಭೂಪ್ರದೇಶಗಳನ್ನು ಎದುರಿಸಿದವು, ಆದರೆ ಇನ್ನೂ ಕೆಲವು ಭಯೋತ್ಪಾದಕರು ಭದ್ರತಾ ಪಡೆಗಳ ಗಮನಾರ್ಹ ಒತ್ತಡದಲ್ಲಿ ಚಲಿಸುತ್ತಿದ್ದಾರೆ ಎಂದು ಮೇಲೆ ಉಲ್ಲೇಖಿಸಿದ…