ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40% ಕಮೀಷನ್ ಪ್ರಕರಣದ ತನಿಖೆಯನ್ನು ಎಸ್ ಐಟಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಸ್ ಐಟಿಯಿಂದ ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ಪಡೆಯಲು ತೀರ್ಮಾನಿಸಲಾಗಿದೆ. ಸಂಪುಟ ಸಭೆ ಬಳಕ ವಿವರ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಇಂದು 21 ವಿಷಯಗಳನ್ನ ಚರ್ಚಿಸಿ ಹಲವು ನಿರ್ಣಯ ತೆಗೆದುಕೊಂಡಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು ಮಾಡಿರೋ 40% ಕಮೀಷನ್ ಆರೋಪ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಲಾಗಿತ್ತು. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಸಂಪುಟ ಸಭೆಗೆ ಸಲ್ಲಿಸಲಾಯ್ತು ಎಂದು ತಿಳಿಸಿದರು. 1729 ಕಾಮಗಾರಿಗಳಲ್ಲಿ ಅಕ್ರಮ ನಾಗಮೋಹನ್ ದಾಸ್ ನೇನೃತ್ವದ ವಿಚಾರಣಾ ಆಯೋಗ ವಿಶೇಷ ಸಲಹೆಗಳನ್ನ ನೀಡಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆರೋಪ ಬಂದಿದೆ. 40% ಕಮಿಷನ್ ವಿಚಾರವನ್ನು…
Author: Author AIN
ಇದು ನನ್ನೂರು, ನನ್ನ ಗ್ರೌಂಡ್ ಕಣೋ ಅಂತಾ ನೆಲಕ್ಕೆ ಗುದ್ದಿ ವೃತ್ತ ಹಾಕಿ ಆರ್ ಸಿಬಿ ವಿರುದ್ಧ ಅಜೇಯ ದಾಖಲೆ ಬರೆದ ಕನ್ನಡದ ಮಗ ಕೆಎಲ್ ರಾಹುಲ್ ಆಟವನ್ನು ಕ್ರಿಕೆಟ್ ಪ್ರೇಮಿಗಳು ಕೊಂಡಾಡುತ್ತಿದ್ದಾರೆ. ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಹೈವೋಲ್ಟೇಜ್ ಪಂದ್ಯವಿತ್ತು. ಹೈವೋಲ್ಟೇಜ್ ಅನ್ನೋದಕ್ಕಿ ಕಾರಣ ಕನ್ನಡದ ಮಗ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ ಫ್ಲೇಯರ್. ವಿರಾಟ್ ಕೊಹ್ಲಿ ದೆಹಲಿ ಹುಡ್ಗ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ನಿರೀಕ್ಷೆ ಇತ್ತು. ಕನ್ನಡದ ಈ ಹುಡುಗ ಬೆಂಗಳೂರಿನಲ್ಲಿ 9 ವರ್ಷಗಳ ಬಳಿಕ ಅರ್ಧ ಶತಕವೊಂದನ್ನು ದಾಖಲಿಸಿ ತನ್ನ ತಂಡದ ಗೆಲುವಿಗೆ ಕಾರಣರಾದರು. ಕೆಎಲ್ ರಾಹುಲ್ ಅದ್ಭುತ ಆಟವಾಡಿ ಎಲ್ಲರ ಚಪ್ಪಾಳೆ ಗಿಟ್ಟಿಸಿಕೊಂಡರು. ಕನ್ನಡದ ಹುಡ್ಗ ತನ್ನದೇ ನೆಲದಲ್ಲಿ ಅಬ್ಬರಿದ ರೀತಿಗೆ ಇಡೀ ಗ್ರೌಂಡ್ ಸ್ಟನ್ ಆಗಿತ್ತು. ಕೆಎಲ್ ರಾಹುಲ್ ಅವರ ಅಜೇಯ 93 ರನ್ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ರಾಯಲ್ ಚಾಲೆಂಜರ್ಸ್…
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಸಾವನ್ನಪ್ಪಿದ್ದಾನೆ, ಆದರೆ ಉಧಂಪುರ ಜಿಲ್ಲೆಯಲ್ಲಿ ಮೂವರು ಉಗ್ರರ ಗುಂಪನ್ನು ಪತ್ತೆಹಚ್ಚಲು ಪ್ರತ್ಯೇಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಪ್ರದೇಶದ ಗುಡ್ಡಗಾಡು ಜಿಲ್ಲೆಗಳ ವಿವಿಧ ಸ್ಥಳಗಳ ನಡುವೆ ಸಂಭಾವ್ಯವಾಗಿ ಚಲಿಸುವ ಭಯೋತ್ಪಾದಕರ ಮೇಲೆ ನಿಗಾ ಇಡಲು ಭದ್ರತಾ ಸಂಸ್ಥೆಗಳು ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶಕ್ಕೆ ಕಣ್ಗಾವಲು ವ್ಯಾಪ್ತಿಯನ್ನು ವಿಸ್ತರಿಸಿವೆ. https://ainkannada.com/do-you-have-sugar-too-if-so-dont-drink-these-three-juices/ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಪ್ರಾರಂಭಿಸಿದ ಗುಪ್ತಚರ ಆಧಾರಿತ ಶೋಧ ಮತ್ತು ನಾಶ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ನಲ್ಲಿ ಎನ್ಕೌಂಟರ್ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷ ಪಡೆಗಳು ಒಬ್ಬ ಭಯೋತ್ಪಾದಕನನ್ನು ಪತ್ತೆಹಚ್ಚಲು ಹೆಚ್ಚಿನ ಹಿಮ ಪ್ರದೇಶಗಳು ಮತ್ತು ವಿಶ್ವಾಸಘಾತುಕ ಭೂಪ್ರದೇಶಗಳನ್ನು ಎದುರಿಸಿದವು, ಆದರೆ ಇನ್ನೂ ಕೆಲವು ಭಯೋತ್ಪಾದಕರು ಭದ್ರತಾ ಪಡೆಗಳ ಗಮನಾರ್ಹ ಒತ್ತಡದಲ್ಲಿ ಚಲಿಸುತ್ತಿದ್ದಾರೆ ಎಂದು ಮೇಲೆ ಉಲ್ಲೇಖಿಸಿದ…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತರ ದೇಶಗಳ ವಿರುದ್ಧ ಸುಂಕ ಯುದ್ಧ ಘೋಷಿಸಿರುವುದರಿಂದ ಪ್ರಪಂಚದಾದ್ಯಂತದ ಷೇರು ಮಾರುಕಟ್ಟೆಗಳು ಭಾರಿ ನಷ್ಟವನ್ನು ಅನುಭವಿಸುತ್ತಿವೆ. ಶತಕೋಟಿ ಡಾಲರ್ ಸಂಪತ್ತು ಈಗಾಗಲೇ ಆವಿಯಾಗಿದೆ. ಇದರ ನಡುವೆ ಅಮೆರಿಕದ ಪ್ರತಿ ಸುಂಕದಿಂದ ಕೆರಳಿರುವ ಚೀನಾ ಶೇ. 125ರಷ್ಟು ಸುಂಕ ಏರಿಕೆ ಮಾಡಿ ದೊಡ್ಡಣ್ಣನಿಗೆ ತಿರುಗೇಟು ನೀಡಿದೆ. ಹೌದು ಅಮೆರಿಕ ವಿಧಿಸಿದ್ದ 145% ತೆರಿಗೆಗೆ ಪ್ರತಿಯಾಗಿ ಈಗ ಚೀನಾ ಅಮೆರಿಕದಿಂದ ಆಮದಾಗುವ ವಸ್ತುಗಳ ಮೇಲೆ 125% ತೆರಿಗೆ ವಿಧಿಸುವುದಾಗಿ ಪ್ರಕಟಿಸಿದೆ. ಹೊಸ ತೆರಿಗೆ ಶನಿವಾರದಿಂದ ಜಾರಿಗೆ ಬರಲಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಅಮೆರಿಕ ಆರಂಭಿಸಿದ ತೆರಿಗೆ ಸಮರದ ವಿರುದ್ಧ ಕೈ ಜೋಡಿಸುವಂತೆ ಯುರೋಪಿಯನ್ ಒಕ್ಕೂಟಕ್ಕೆ (EU) ಮನವಿ ಮಾಡಿದ ಕೆಲವೇ ಗಂಟೆಗಳಲ್ಲಿ ಚೀನಾದ ನಿರ್ಧಾರ ಪ್ರಕಟವಾಗಿದೆ. https://ainkannada.com/do-you-have-sugar-too-if-so-dont-drink-these-three-juices/ ಚೀನಾದ ಮೇಲೆ ಅಮೆರಿಕವು ಅಸಹಜವಾಗಿ ಹೆಚ್ಚಿನ ಸುಂಕಗಳನ್ನು ವಿಧಿಸುವುದು ಅಂತರರಾಷ್ಟ್ರೀಯ ವ್ಯಾಪಾರ ನಿಯಮಗಳು, ಮೂಲಭೂತ ಆರ್ಥಿಕ ಕಾನೂನುಗಳು ಗಂಭೀರವಾಗಿ ಉಲ್ಲಂಘಿಸುತ್ತದೆ ಎಂದು ಚೀನಾ ಹಣಕಾಸು ಸಚಿವಾಲಯ ಹೇಳಿದೆ.…
ಬೆಂಗಳೂರು:- ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್ವೊಂದು ಕಿರಿಕ್ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೇ ಘಟನೆಗೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂದೂ ಯುವಕ ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಐವರು ಪುಂಡರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainkannada.com/do-you-have-sugar-too-if-so-dont-drink-these-three-juices/ ಇನ್ನೂ ಈ ವಿಚಾರವಾಗಿ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿಕೆ ನೀಡಿದ್ದು, ಮೊನ್ನೆ ಪಾರ್ಕ್ ಎದುರುಗಡೆ ಒಂದು ಹುಡುಗ, ಹುಡುಗಿ ಬೈಕ್ ಮೇಲೆ ಕೂತಿರ್ತಾರೆ. ಅದನ್ನ ಒಂದಷ್ಟು ಜನ ಪ್ರಶ್ನೆ ಮಾಡುತ್ತಾರೆ. ಇಲ್ಲಿ ಏಕೆ ಬಂದಿದೀಯಾ, ಮನೆಯಲ್ಲಿ ಹೇಳಿ ಬಂದಿದ್ದೀಯಾ ಅಂತಾ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಯುವತಿಯಿಂದ ದೂರು ಪಡೆಯಲಾಗಿದೆ. ಐವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಹಲ್ಲೆ ಮಾಡಿರುವ ಬಗ್ಗೆ ಕೂಡ ಆರೋಪವಿದೆ. ಎಲ್ಲರೂ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವವರಾಗಿದ್ದಾರೆ. ಆರೋಪಿಗಳು ಗ್ಯಾರೆಜ್, ಡೆಲಿವರಿ ಬಾಯ್ ಆಗಿ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಲ್ಲ ರಂಗ ಭಾಷಾ ಸಿನಿಮಾ ಅಪ್ ಡೇಟ್ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಮ್ಯಾಕ್ಸ್ ಬಳಿಕ ಕಿಚ್ಚ ಯಾವ ಅವತಾರದಲ್ಲಿ ಕಾಣಿಸಿಕೊಳ್ಳಬಹುದೆಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಏಪ್ರಿಲ್ 16ರಂದು ಕಿಚ್ಚ ಬಿಲ್ಲ ರಂಗ ಭಾಷಾ ಅಂಗಳದಿಂದ ಹೊಸ ಅಪ್ ಡೇಟ್ ಸಿಗಲಿದೆ. ಅದು ಏನೂ ಅನ್ನೋದು ಸರ್ ಪ್ರೈಸ್ ಈ ನಡುವೆ ಸುದೀಪ್ ಬಂಗಾರದ ಅಂಗಡಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಟಿಎ ಶರವಣ ಒಡೆತನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಜ್ಯುವೆಲರಿ ಶಾಪ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹೊಸ ಶಾಖೆ ಆರಂಭಿಸಿದೆ. ಈ ಹೊಸ ಬಂಗಾರದ ಅಂಗಡಿಯನ್ನು ಕಿಚ್ಚ ಸುದೀಪ್ ಉದ್ಘಾಟಿಸಿದ್ದಾರೆ. ಈ ವೇಳೆ ಸಚಿವ ದಿನೇಶ್ ಗುಂಡೂರಾವ್ ಕೂಡ ಉಪಸ್ಥಿತರಿದ್ದರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಕೂಡ ಟಿಎ ಶರವಣ ಅವರಿಗೆ ಶುಭ ಹಾರೈಸಿದ್ದಾರೆ. ಸಾಯಿ ಗೋಲ್ಡ್ ಪ್ಯಾಲೇಸ್ ಜ್ಯುವೆಲರಿ ಶಾಪ್ ಉದ್ಘಾಟಿಸಿದ ಬಳಿಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಜ್ಯುವೆಲರಿ ಹಾಕೋಕೆ ಇಷ್ಟ ಇಲ್ಲ ಆದ್ರೆ ಜ್ಯುವೆಲರಿ ಹಾಕೋರನ್ನ…
ಬೇಸಿಗೆಯಲ್ಲಿ ತಾಪಮಾನವು ಗರಿಷ್ಠ ಮಟ್ಟವನ್ನು ತಲುಪುತ್ತದೆ. ಬೇಸಿಗೆಯ ಬಿಸಿಲನ್ನು ಸಹಿಸಲಾಗದೆ, ಅನೇಕ ಜನರು ತಮ್ಮ ದೇಹವನ್ನು ತಂಪಾಗಿಸಲು ತಣ್ಣೀರಿನಲ್ಲಿ ಈಜುತ್ತಾರೆ. ಇದು ಆರೋಗ್ಯಕರ ಅಭ್ಯಾಸ ಮಾತ್ರವಲ್ಲ, ದೇಹಕ್ಕೆ ಉತ್ತಮ ವ್ಯಾಯಾಮವೂ ಆಗಿದೆ. ಆದಾಗ್ಯೂ, ಬೇಸಿಗೆಯಲ್ಲಿ ಈಜುವವರು ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಬೇಕು. ಅದು ಏನೆಂದು ಈಗ ತಿಳಿದುಕೊಳ್ಳೋಣ. ಬೇಸಿಗೆಯ ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿಸಲು ಈಜು ಒಂದು ಉತ್ತಮ ಮಾರ್ಗವಾಗಿದೆ. ನೀರಿನಲ್ಲಿ ಸ್ವಲ್ಪ ಸಮಯ ಕಳೆಯುವುದರಿಂದ ನಿಮ್ಮ ದೇಹದ ಉಷ್ಣತೆ ಕಡಿಮೆಯಾಗುತ್ತದೆ. ಇದು ತ್ವರಿತ ಪರಿಹಾರ ನೀಡುವುದಲ್ಲದೆ, ಆಸ್ತಮಾ ಮತ್ತು ಆಯಾಸದಂತಹ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಈಜುವುದನ್ನು ಪೂರ್ಣ ದೇಹದ ವ್ಯಾಯಾಮವೆಂದು ಪರಿಗಣಿಸಲಾಗುತ್ತದೆ. ಈಜುವಾಗ, ತೋಳುಗಳು, ಕಾಲುಗಳು ಮತ್ತು ಕುತ್ತಿಗೆ ಸೇರಿದಂತೆ ದೇಹದ ಪ್ರತಿಯೊಂದು ಭಾಗವು ಚಲಿಸುತ್ತದೆ. ಇದು ಸ್ನಾಯುಗಳ ಬಲವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹೃದಯ ಮತ್ತು ಶ್ವಾಸಕೋಶದ ಕಾರ್ಯವೂ ಸುಧಾರಿಸುತ್ತದೆ. ದೀರ್ಘಕಾಲದ ಒತ್ತಡದಿಂದ ಬಳಲುತ್ತಿರುವವರಿಗೆ ಈಜು ಉತ್ತಮ ಚಿಕಿತ್ಸೆಯಾಗಿದೆ. ನೀರಿನಲ್ಲಿ ಸಮಯ ಕಳೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇದು ಆಯಾಸ…
ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ ಕಾಂಬೋದ ಹೊಸ ಚಿತ್ರದ ಬಗ್ಗೆ ಲೇಟೆಸ್ಟ್ ಸುದ್ದಿಯೊಂದು ಸಿಕ್ಕಿದೆ. ಯುಗಾದಿ ಹಬ್ಬಕ್ಕೆ ಈ ಜೋಡಿ ಮೊದಲ ಬಾರಿಗೆ ಕೈ ಜೋಡಿಸಿರುವ ಬಗ್ಗೆ ಮಾಹಿತಿ ನೀಡಿತ್ತು. ಇದೀಗ ಪುರಿ ಜಗನ್ನಾಥ್ ಹೊಸ ಪ್ರಾಜೆಕ್ಟ್ ಬಾಲಿವುಡ್ ಪ್ರತಿಭಾನ್ವಿತ ನಟಿ ಟಬು ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದ ಟಬು ವಿಜಯ್ ಸೇತುಪತಿ ನಾಯಕನಾಗಿ ನಟಿಸುತ್ತಿರುವ ಈ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ನಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತಮ್ಮ ಪಾತ್ರ ಹಾಗೂ ಚಿತ್ರದ ಕಥೆ ಕೇಳಿ ಟಬು ಎಕ್ಸೈಟ್ ಆಗಿದ್ದಾರೆ. ಜೂನ್ ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಹಿಂದೆಂದೂ ಕಾಣದ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುವುದು. ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ನಿರ್ಮಾಪಕರಾಗಿ ಚಿತ್ರಕ್ಕೆ ಸಾಥ್ ಕೊಡುತ್ತಿದ್ದಾರೆ.
ಕನ್ನಡದಲ್ಲಿ ಮಿಂಚಿ ಈಗ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿಯರಲ್ಲಿ ಒಬ್ಬರು ನೇಹಾ ಶೆಟ್ಟಿ, ಮಂಗಳೂರು ಮೂಲದ ನೇಹಾ ಮಾಡೆಲಿಂಗ್ ಮೂಲಕ ಬಣ್ಣದ ಜಗತ್ತಿಗೆ ಎಂಟ್ರಿ ಕೊಟ್ಟರು. ಮುಂಗಾರು ಮಳೆ-2 ಚಿತ್ರದ ಮೂಲಕ ಕನ್ನಡ ಸಿನಿಮಾಪ್ರೇಮಿಗಳಿಗೆ ಪರಿಚಯವಾದ ಈ ಬ್ಯೂಟಿ ಮೆಹಾಬೂಬಾ ಚಿತ್ರದ ಮೂಲಕ ತೆಲುಗುರಂಗದತ್ತ ಹೆಜ್ಜೆ ಇಟ್ಟರು. ಆ ಬಳಿಕ ಕನ್ನಡ ಚಿತರಂಗದತ್ತ ತಿರುಗಿ ನೋಡಿಯೇ ಇಲ್ಲ. ಟಿಜೆ ಡಿಲ್ಲು ಸಿನಿಮಾ ಸೂಪರ್ ಸಕ್ಸಸ್ ಬಳಿಕ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಗ್ಯಾಂಗ್ ಆಫ್ ಗೋದಾವರಿ ಚಿತ್ರದ ಮೂಲಕ ಇತ್ತೀಚೆಗೆ ಪ್ರೇಕ್ಷಕರ ಎದುರು ಬಂದಿದ್ದ ನೇಹಾ ಈಗ ಹೊಸ ಫೋಟೋಶೂಟ್ ಮಾಡಿಕೊಂಡಿದ್ದಾರೆ. ಶುಭ್ರ ಬಿಳಿ ಬಣ್ಣದ ಬಟ್ಟೆ ತೊಟ್ಟು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ನೇಹಾ ಟ್ರೆಡಿಷನಲ್ ಲುಕ್ ಫ್ಯಾನ್ಸ್ ಗೆ ಇಷ್ಟವಾಗಿದೆ. ಬಿಳಿ ಬಣ್ಣದ ಲೆಹಂಗದಲ್ಲಿ ಮಂಗಳೂರು ಚೆಲುವೆ ಹಾಟ್ ಗೆಟಪ್ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ. ಮಂಗಳೂರು ಮದನಾರಿಯ ಮನಮೋಹಕ ಭಾವಲಹರಿ ಸೂಪರ್ ಆಗಿದೆ ಎಂದು ಅಭಿಮಾನಿಗಳು ಮೆಚ್ಚುಗೆ…
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಗಾಯದ ಕಾರಣದಿಂದಾಗಿ ಈ ಐಪಿಎಲ್ ಋತುವಿನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ತಿಳಿದಿದೆ. ಮಾರ್ಚ್ 30 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ತುಷಾರ್ ದೇಶಪಾಂಡೆ ಅವರನ್ನು ಬೌಲಿಂಗ್ ಮಾಡುವಾಗ ರುತುರತ್ ಮೊಣಕೈಗೆ ಗಾಯ ಮಾಡಿಕೊಂಡರು. ಇದರಿಂದಾಗಿ ಅವರು ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿದರು. ರುತುರಾಜ್ ಆಟದಿಂದ ಹೊರಗುಳಿದ ಕಾರಣ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಬದಲಿಗೆ ತಂಡದ ನಾಯಕರಾಗಲಿದ್ದಾರೆ. ಪಂದ್ಯಾವಳಿಯಿಂದ ಗೈರುಹಾಜರಾಗಿದ್ದ ರುತುರಾಜ್, ಈ ಅನುಕ್ರಮದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದರು. ರುತುರಾಜ್ ಹೇಳಿದರು.. “ಎಲ್ಲರಿಗೂ ನಮಸ್ಕಾರ, ನಾನು ರುತುರಾಜ್. ದುರದೃಷ್ಟವಶಾತ್, ಮೊಣಕೈ ಗಾಯದಿಂದಾಗಿ ಐಪಿಎಲ್ನ ಉಳಿದ ಪಂದ್ಯಗಳನ್ನು ತಪ್ಪಿಸಿಕೊಳ್ಳಲು ನನಗೆ ನಿಜವಾಗಿಯೂ ಬೇಸರವಾಗಿದೆ. https://ainkannada.com/do-you-have-sugar-too-if-so-dont-drink-these-three-juices/ ಆದರೆ, ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ಈ ಋತುವಿನಲ್ಲಿ ನಾವು (ಸಿಎಸ್ಕೆ) ಸ್ವಲ್ಪ ಸಮಯದಿಂದ ಕಷ್ಟಪಡುತ್ತಿದ್ದೇವೆ, ಆದರೆ ಯುವ ವಿಕೆಟ್ಕೀಪರ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನಿಮಗೆ ತಿಳಿದಿದೆ. ಹಾಗಾಗಿ.. ವಿಷಯಗಳು ಬದಲಾಗುತ್ತವೆ ಎಂದು ನಾನು…