Author: Author AIN

ಬೆಂಗಳೂರು: ಲಿಂಗಾಯತ, ಒಕ್ಕಲಿಗ ಸಮುದಾಯಗಗಳ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾತಿ ಗಣತಿ ವರದಿ ಸ್ವೀಕಾರ ಮಾಡೋ ಬಗ್ಗೆ ಏಪ್ರಿಲ್‌ 17ರಂದು ವಿಶೇಷ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜಾತಿ ಗಣತಿ ವರದಿ ಬಗ್ಗೆ ಕೂಲಂಕಶ ಚರ್ಚೆ ನಡೆಸಬೇಕಿದೆ. ಹೀಗಾಗಿ ಏ.17ರಂದು ವಿಶೇಷ ಸಂಪುಟ ಸಭೆ ನಡೆಸಿ ಮುಂದಿನ ನಿರ್ಧಾರಕ್ಕೆ ಬರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ. ಜಾತಿ ಗಣತಿ ವರದಿ ಬಹಳ ಸೂಕ್ಷ್ಮ ವಿಷಯವಾಗಿರುವ ಹಿನ್ನೆಲೆಯಲ್ಲಿ ಆತುರ ತೋರದೆ, ಸುದೀರ್ಘವಾಗಿ ಚರ್ಚೆ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಮತ್ತೆ ಜಾತಿಗಣತಿ ವರದಿಗೆ ಹಿಡಿದ ಗ್ರಹಣ ಸದ್ಯಕ್ಕೆ ಕಳೆಯೋ ಲಕ್ಷಣಗಳು ಕಾಣುತ್ತಿಲ್ಲ. https://www.youtube.com/watch?v=a4Tmd3wB6tM

Read More

ಲಕ್ನೋ: ಇಂದು ವಾರಣಾಸಿಯಲ್ಲಿ ಬಂದಿಳಿದ ತಕ್ಷಣ, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ನಗರದಲ್ಲಿ ಇತ್ತೀಚೆಗೆ ನಡೆದ ಕ್ರಿಮಿನಲ್ ಅತ್ಯಾಚಾರ ಘಟನೆಯ ಕುರಿತು ವಿವರವಾದ ಮಾಹಿತಿ ಪಡೆದರು. ಅಪರಾಧಿಗಳ ವಿರುದ್ಧ ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಜಾರಿಗೆ ತರಲು ಅವರು ಸೂಚನೆ ನೀಡಿದರು. https://ainkannada.com/do-you-have-sugar-too-if-so-dont-drink-these-three-juices/ 19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಸಂಬಂಧ ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ವಾರಣಾಸಿ ಏರ್‌ಪೋರ್ಟ್‌ನಲ್ಲೇ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್‌ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು,…

Read More

ಐಪಿಎಲ್ 2025 ಸೀಸನ್ ಮುಂದುವರೆದಂತೆ, ಕೆಲವು ಯುವ ಕ್ರಿಕೆಟಿಗರು ತಮ್ಮ ಫಾರ್ಮ್ ಬಗ್ಗೆ ನಿರಾಶೆಗೊಂಡರು. ಅವರಲ್ಲಿ ಒಬ್ಬರು ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್. ಅವರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಮಿಂಚಿದರು ಮತ್ತು ಟೀಮ್ ಇಂಡಿಯಾದ ಭವಿಷ್ಯದ ಆರಂಭಿಕ ಆಟಗಾರರಾಗಿ ಗುರುತಿಸಲ್ಪಟ್ಟರು, ಆದರೆ ಪ್ರಸ್ತುತ ಅವರು ಮಾಡಬೇಕಾದ ಮಟ್ಟದಲ್ಲಿ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಐಪಿಎಲ್ 2025 ರ ಮೊದಲ ಮೂರು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕ್ರಮವಾಗಿ 1, 29 ಮತ್ತು 4 ರನ್ ಗಳಿಸುವ ಮೂಲಕ ನಿರಾಸೆ ಮೂಡಿಸಿದ್ದ ಯಶಸ್ವಿ, ನಾಲ್ಕನೇ ಪಂದ್ಯದಲ್ಲಿ 67 ರನ್ ಗಳಿಸಿ ಮತ್ತೆ ತಂಡಕ್ಕೆ ಮರಳುವಂತೆ ತೋರಿತು. ಆದರೆ ಐದನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 6 ರನ್‌ಗಳಿಗೆ ಔಟಾಗಿರುವುದು ಅವರ ಪ್ರದರ್ಶನದ ಮೇಲೆ ಅನುಮಾನ ಮೂಡಿಸಿದೆ. https://ainkannada.com/do-you-have-sugar-too-if-so-dont-drink-these-three-juices/ ಈ ಸಂದರ್ಭದಲ್ಲಿ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ಯಶಸ್ವಿ ವಿರುದ್ಧ ಕಠಿಣ ಟೀಕೆಗಳನ್ನು ಮಾಡಿದರು. “ಅವನ ಹೊಟ್ಟೆ ತುಂಬಿದೆ. ಈಗ…

Read More

ಬೆಂಗಳೂರು: ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಜಾತಿ ಗಣತಿ ವರದಿ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಈ ವರದಿಯು ವೈಜ್ಞಾನಿಕವಾಗಿ ಆಗಿಲ್ಲ. https://ainkannada.com/do-you-have-sugar-too-if-so-dont-drink-these-three-juices/ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು, ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತಲು ಈ ವರದಿ ರೂಪಿಸಲಾಗಿದೆ. ಕಾಂಗ್ರೆಸ್‌ಗೆ ಇದೇ ಬೇಕಾಗಿದೆ ಎಂದು ಆಕ್ರೋಶ ಹೊರಹಾಕಿದರು. ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಸಭೆ ಮಾಡಿ ಚರ್ಚಿಸಲಿ. ಯಾವ ಖಾತೆಗಳಲ್ಲಿ ಎಷ್ಟು ಲೂಟಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಮಿಷನ್ ಕೊಡುವವರಿಗೆ ಬಿಲ್ ಪಾವತಿಯಾಗುತ್ತದೆ. ಅಬಕಾರಿ ಇಲಾಖೆಯಲ್ಲಿ ಸಚಿವರ ಮಗ ಲೂಟಿ ಮಾಡುತ್ತಿದ್ದಾರೆ. ಸಚಿವರ ಮೇಲೆ ಇಷ್ಟೆಲ್ಲಾ…

Read More

ಬಾಂಗ್ಲಾದೇಶದ ದಿನಾಜ್‌ಪುರದ ಕೊಳವೊಂದರಲ್ಲಿ ವಿಷ್ಣುವಿನ ಪ್ರತಿಮೆ ಪತ್ತೆಯಾಗಿದೆ. ಕೊಳವೊಂದರಲ್ಲಿ ನೆಲದಡಿಯಿಂದ ವಿಷ್ಣುವಿನ ಪ್ರತಿಮೆ ಪತ್ತೆಯಾಗಿದ್ದು… ಮತ್ತು ಇದು ಅತ್ಯಂತ ಹಳೆಯ ಪ್ರತಿಮೆಯಾಗಿದ್ದು, ಜಿಲ್ಲೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಸಿದೆ. ಆದಾಗ್ಯೂ, ಬಾಂಗ್ಲಾದೇಶದಲ್ಲಿ ನೆಲದಿಂದ ಪುರಾತನ ವಿಷ್ಣು ಪ್ರತಿಮೆ ಹೊರಹೊಮ್ಮುತ್ತಿರುವುದು ಇದೇ ಮೊದಲಲ್ಲ. ಕಳೆದ 4 ವರ್ಷಗಳಲ್ಲಿ, ದೇಶದ 4 ವಿಭಿನ್ನ ಭಾಗಗಳಲ್ಲಿ ವಿಷ್ಣುವಿನ ವಿಗ್ರಹಗಳು ಕಂಡುಬಂದಿರುವ ವರದಿಗಳು ಬಂದಿವೆ. https://ainkannada.com/do-you-have-sugar-too-if-so-dont-drink-these-three-juices/ ಬಾಂಗ್ಲಾದೇಶದ ಪತ್ರಿಕೆ ಪ್ರಥಮ್ ಓಲೋ ಪ್ರಕಾರ, ದಿನಜ್‌ಪುರದ ನವಾಬ್‌ಗಂಜ್ ಪ್ರದೇಶದಲ್ಲಿ ಕೊಳವನ್ನು ಅಗೆಯಲಾಗುತ್ತಿದೆ. ಈ ಸಮಯದಲ್ಲಿ, 29 ಇಂಚು ಉದ್ದ ಮತ್ತು 13 ಇಂಚು ಅಗಲದ ವಿಷ್ಣುವಿನ ಪ್ರತಿಮೆ ಹೊರಬಂದಿತು. ಪ್ರತಿಮೆ ಅನಾವರಣಗೊಂಡ ತಕ್ಷಣ, ಕೊಳದ ಸುತ್ತಲೂ ದೊಡ್ಡ ಜನಸಮೂಹ ಜಮಾಯಿಸಿತು. ವಿಷ್ಣು ಪ್ರತಿಮೆಯ ತೂಕ 27 ಕೆ.ಜಿ. ವರದಿಯ ಪ್ರಕಾರ, ಈ ವಿಷ್ಣು ವಿಗ್ರಹವು 27 ಕೆಜಿ ತೂಗುತ್ತದೆ. ವಿಷ್ಣುವಿನ ಜೊತೆಗೆ, ಪ್ರತಿಮೆಯಲ್ಲಿ ಲಕ್ಷ್ಮಿ ದೇವಿಯ ಚಿತ್ರವೂ ಇದೆ. ಕುತೂಹಲಕಾರಿ ವಿಷಯವೆಂದರೆ ಕೊಳವನ್ನು ಬುಲ್ಡೋಜರ್ ಬಳಸಿ ಅಗೆದರೂ, ಪ್ರತಿಮೆಗೆ ಯಾವುದೇ…

Read More

ಬೆಂಗಳೂರು: ಚಿನ್ನಾಭರಣ, ಹಣ, ವಾಹನಗಳನ್ನು ಕಳ್ಳತನ ಮಾಡಿರುವ ಘಟನೆಯ ಬಗ್ಗೆ ನೀವು ಕೇಳಿರಬಹುದು. ಆದ್ರೆ ಇಲ್ಲೊಂದು ಚಾಲಾಕಿ ಕಳ್ಳರು  ಬೆಳಗಿನ ಜಾವ ಸ್ಕೂಟರ್‌ನಲ್ಲಿ ಬಂದು ಹಾಲು ಕದ್ದು ಎಸ್ಕೇಪ್ ಆಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ. ಹಾಲುಗಳ್ಳರ ಕಾಟಕ್ಕೆ ಅಂಗಡಿ ಮಾಲೀಕ ಗಿರಿಗೌಡ ಹೈರಾಣಾಗಿದ್ದು, ನಂದಿನಿ ಬೂತ್ ಒಂದರಲ್ಲಿ ಹಾಲಿನ ಪ್ಯಾಕೆಟ್‌ಗಳನ್ನು ಕಳ್ಳತನ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. https://ainkannada.com/do-you-have-sugar-too-if-so-dont-drink-these-three-juices/ ಬೆಳಗಿನ ಜಾವ ಹಾಲಿನ ಕ್ರೇಟ್ ಇಳಿಸಿದ ಬಳಿಕ ಎಂಟ್ರಿ ಕೊಡುವ ಕಳ್ಳರು ಬೆಳಗಿನ ಜಾವ 4 ಗಂಟೆಯಿಂದ 5 ಗಂಟೆ ಸಮಯದಲ್ಲಿ ಹಾಲು ಕದ್ದು ಎಸ್ಕೇಪ್ ಆಗುತ್ತಾರೆ. ಇದೇ ತಿಂಗಳ 4ರಂದು ಬೆಳಗಿನ ಜಾವ 4.11ಕ್ಕೆ 2 ಸ್ಕೂಟರ್‌ಗಳಲ್ಲಿ ಬಂದಿದ್ದ ಕಳ್ಳರು ನಾಲ್ಕೈದು ಲೀಟರ್ ಹಾಲು ಕದ್ದು ಪರಾರಿಯಾಗಿದ್ದರು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.  

Read More

ಬೆಂಗಳೂರು: “ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಯಾರಾದರೂ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಸಚಿವರಾದ ಸತೀಶ್ ಜಾರಕಿಹೊಳಿ, ಬೋಸರಾಜು ಅವರು ಇದರಲ್ಲಿ ಭಾಗಿಯಾಗಿಲ್ಲಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, “ಬಿಲ್ ಪಾವತಿ ವಿಚಾರವಾಗಿ ಯಾರಾದರೂ ಕಮಿಷನ್ ಕೇಳಿದ್ದರೆ ಅವರು ಲೋಕಾಯುಕ್ತಕ್ಕೆ ದೂರು ನೀಡಲಿ. ಬಿಲ್ ಪಾವತಿ ವಿಚಾರವಾಗಿ ಗುತ್ತಿಗೆದಾರರು ಯಾಕೆ ಸಚಿವರನ್ನು ಕೇಳಬೇಕು. ಅವರಿಗೆ ಇಲಾಖೆಯ ಬಜೆಟ್ ಅರಿವಿಲ್ಲವೇ? ಅನುದಾನವೇ ಇಲ್ಲದಿರುವಾಗ ಅವರು ಗುತ್ತಿಗೆ ಹೇಗೆ ತೆಗೆದುಕೊಂಡರು?” ಎಂದರು. “ಬಿಜೆಪಿ ಅವಧಿಯಲ್ಲಿ ನನ್ನ ಇಲಾಖೆಯೊಂದರಲ್ಲೇ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಗುತ್ತಿಗೆಯನ್ನು ನೀಡಲಾಗಿದೆ. ಈ ಗುತ್ತಿಗೆ ಬಿಲ್ ಪಾವತಿ ಮಾಡಿಸುವಂತೆ ಶಾಸಕರ ಮೂಲಕ ಮನವಿ ಮಾಡಲಾಗುತ್ತಿದೆ” ಎಂದು ತಿಳಿಸಿದರು. “ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಒಂದು ವರ್ಷ ಮುಂಚಿತವಾಗಿಯೇ ನಾವು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದೆವು. ಅನುದಾನ ಇಲ್ಲದೆ ಯಾವುದೇ ಕಾಮಗಾರಿ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದೆವು.…

Read More

ಬೆಂಗಳೂರು: ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ‌ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ಏ. 3ರಂದು ಮಧ್ಯರಾತ್ರಿ ಯುವತಿಯನ್ನು ಹಿಂಬಾಲಿಸಿ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಪರಮೇಶ್ವರ್‌ ದೊಡ್ಡ ನಗರದಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು. https://ainkannada.com/do-you-have-sugar-too-if-so-dont-drink-these-three-juices/ ಇನ್ನೂ ಈ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಒಂದು ವೇಳೆ ನನ್ನ ಹೇಳಿಕೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಅದಲ್ಲದೆ ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ‌. ಬಿಜೆಪಿಯವರು ಉದ್ದೇಶಪೂರ್ವಕವಾಗಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Read More

ಭಾರತೀಯ ಚಿತ್ರರಂಗದ ಹೆಸರಾಂತ ಒಟಿಟಿ ಫ್ಲಾರ್ಟ್ ಫಾರಂಗಳಲ್ಲೊಂದು ZEE5. ಹಲವು ಸೂಪರ್ ಹಿಟ್ ಸಿನಿಮಾಗಳು ಈ ಒಟಿಟಿ ಫ್ಲಾರ್ಟ್ ನಲ್ಲಿ ಲಭ್ಯವಿದೆ. ಇದೀಗ ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಕನ್ನಡ ಸಿನಿಮಾಪ್ರೇಮಿಗಳಿಗಾಗಿ ಮಿನಿ ವೆಬ್ ಸೀರೀಸ್ ನ್ನು ಪರಿಚಯಿಸಿದೆ. ZEE5 ನಿಂದ ಬರ್ತಿರುವ ಮೊದಲ ಕನ್ನಡ ಮಿನಿ ವೆಬ್ ಸೀರೀಸ್ ನ್ನು ಖ್ಯಾತ ನಿರ್ದೇಶಕ ಹಾಗೂ ಕಲಾವಿದರ ರಮೇಶ್ ಇಂದಿರಾ ನಿರ್ಮಾಣ ಮಾಡಿದ್ದಾರೆ. ಆ ಸೀರೀಸ್ ಗೆ ಅಯ್ಯನ ಮನೆ ಎಂದು ಟೈಟಲ್ ಇಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ. ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರ್ತಿರುವ ʼಅಯ್ಯನ ಮನೆʼ ವೆಬ್ ಸೀರೀಸ್ ಗೆ ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್ ನಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಅಭಿನಯಿಸಿದ್ದಾರೆ. ಇದು…

Read More

ಬೆಂಗಳೂರು: ಜಾತಿಗಣತಿ ವರದಿ ವರದಿ ಸ್ವೀಕಾರ ಮಾಡಬೇಕೋ ಬೇಡವೋ ಎಂಬುದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲವೇ ಹೊತ್ತಲ್ಲಿ ನಿರ್ಧಾರವಾಗಲಿದೆ. ಆದರೆ, ಜಾತಿ ಗಣತಿ ವರದಿ ಬಗ್ಗೆ ಸಚಿವರು ತಮ್ಮದೇ ಅಭಿಪ್ರಾಯ ಹೇಳಿದ್ದಾರೆ.  ಜಾತಿ ಗಣತಿ ವರದಿ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯುತ್ತೆ. ಕ್ಯಾಬಿನೆಟ್ ನಲ್ಲಿ ಚರ್ಚೆಯಾದ ಬಳಿಕ ಮಾತನಾಡುತ್ತೇನೆ. ವರದಿ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಿದೆ ಎಂದ ಸಚಿವ ಶಿವರಾಜ್ ತಂಗಡಗಿ, ವರದಿ ಎಲ್ಲಿಯೂ ಬಹಿರಂಗ ಆಗಿಲ್ಲ. ಈಗ ಬರುತ್ತಿರುವ ಅಂಕಿ ಸಂಖ್ಯೆ ಊಹಾಪೋಹ. ಇದು ಜಾತಿಗಣತಿ ಅಲ್ಲ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದಕ್ಕೆ ಯಾರು ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ವರದಿ ಓಪನ್ ಆಗಲಿ, ಆಮೇಲೆ ನೋಡೋಣ ಜಾತಿ ಗಣತಿ ವರದಿ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡುತ್ತೇವೆ. ವರದಿ ಜಾರಿ ಬಳಿಕ ನೋಡೋಣ ಏನು ಆಗುತ್ತದೆ ಎಂದು ಹೇಳಿರುವ ಸಚಿವ ಸತೀಶ್ ಜಾರಕಿಹೊಳಿ‌,  ಪ್ರಬಲ ಸಮುದಾಯದ ವಿರೋಧದ ಬಗ್ಗೆ ವರದಿ ಓಪನ್…

Read More