Author: Author AIN

ಬೆಂಗಳೂರು: ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ‌ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ಏ. 3ರಂದು ಮಧ್ಯರಾತ್ರಿ ಯುವತಿಯನ್ನು ಹಿಂಬಾಲಿಸಿ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಪರಮೇಶ್ವರ್‌ ದೊಡ್ಡ ನಗರದಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು. https://ainkannada.com/do-you-have-sugar-too-if-so-dont-drink-these-three-juices/ ಇನ್ನೂ ಈ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಒಂದು ವೇಳೆ ನನ್ನ ಹೇಳಿಕೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಅದಲ್ಲದೆ ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ‌. ಬಿಜೆಪಿಯವರು ಉದ್ದೇಶಪೂರ್ವಕವಾಗಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Read More

ಭಾರತೀಯ ಚಿತ್ರರಂಗದ ಹೆಸರಾಂತ ಒಟಿಟಿ ಫ್ಲಾರ್ಟ್ ಫಾರಂಗಳಲ್ಲೊಂದು ZEE5. ಹಲವು ಸೂಪರ್ ಹಿಟ್ ಸಿನಿಮಾಗಳು ಈ ಒಟಿಟಿ ಫ್ಲಾರ್ಟ್ ನಲ್ಲಿ ಲಭ್ಯವಿದೆ. ಇದೀಗ ZEE5 ಮತ್ತೊಂದು ಹೊಸ ಸಾಹಸ ಮಾಡಿದ್ದು, ಕನ್ನಡ ಸಿನಿಮಾಪ್ರೇಮಿಗಳಿಗಾಗಿ ಮಿನಿ ವೆಬ್ ಸೀರೀಸ್ ನ್ನು ಪರಿಚಯಿಸಿದೆ. ZEE5 ನಿಂದ ಬರ್ತಿರುವ ಮೊದಲ ಕನ್ನಡ ಮಿನಿ ವೆಬ್ ಸೀರೀಸ್ ನ್ನು ಖ್ಯಾತ ನಿರ್ದೇಶಕ ಹಾಗೂ ಕಲಾವಿದರ ರಮೇಶ್ ಇಂದಿರಾ ನಿರ್ಮಾಣ ಮಾಡಿದ್ದಾರೆ. ಆ ಸೀರೀಸ್ ಗೆ ಅಯ್ಯನ ಮನೆ ಎಂದು ಟೈಟಲ್ ಇಡಲಾಗಿದೆ. ಪ್ರತಿ ಮನೆಯೂ ಸ್ವರ್ಗವಾಗಿರುವುದಿಲ್ಲ. ಅಲ್ಲಿ ಎಷ್ಟೋ ಮುಚ್ಚಿಟ್ಟ ವಿಷಯಗಳು ಇರುತ್ತವೆ ಅನ್ನೋದನ್ನು ಈ ಮಿನಿ ಸೀರೀಸ್ ಮೂಲಕ ರಮೇಶ್ ಇಂದಿರಾ ಹೇಳಲು ಹೊರಟಿದ್ದಾರೆ. ರಮೇಶ್ ಇಂದಿರಾ ನಿರ್ದೇಶನದಲ್ಲಿ ಮೂಡಿ ಬರ್ತಿರುವ ʼಅಯ್ಯನ ಮನೆʼ ವೆಬ್ ಸೀರೀಸ್ ಗೆ ಶೃತಿ ನಾಯ್ಡು ಪ್ರೊಡಕ್ಷನ್ ನಿರ್ಮಾಣ ಮಾಡಿದೆ. ಏಳು ಎಪಿಸೋಡ್ ಹೊಂದಿರುವ ವೆಬ್ ಸೀರೀಸ್ ನಲ್ಲಿ ಖುಷಿ ರವಿ, ಅಕ್ಷಯ್ ನಾಯಕ್, ಮಾನಸಿ ಸುಧೀರ್ ಅಭಿನಯಿಸಿದ್ದಾರೆ. ಇದು…

Read More

ಬೆಂಗಳೂರು: ಜಾತಿಗಣತಿ ವರದಿ ವರದಿ ಸ್ವೀಕಾರ ಮಾಡಬೇಕೋ ಬೇಡವೋ ಎಂಬುದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲವೇ ಹೊತ್ತಲ್ಲಿ ನಿರ್ಧಾರವಾಗಲಿದೆ. ಆದರೆ, ಜಾತಿ ಗಣತಿ ವರದಿ ಬಗ್ಗೆ ಸಚಿವರು ತಮ್ಮದೇ ಅಭಿಪ್ರಾಯ ಹೇಳಿದ್ದಾರೆ.  ಜಾತಿ ಗಣತಿ ವರದಿ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯುತ್ತೆ. ಕ್ಯಾಬಿನೆಟ್ ನಲ್ಲಿ ಚರ್ಚೆಯಾದ ಬಳಿಕ ಮಾತನಾಡುತ್ತೇನೆ. ವರದಿ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಿದೆ ಎಂದ ಸಚಿವ ಶಿವರಾಜ್ ತಂಗಡಗಿ, ವರದಿ ಎಲ್ಲಿಯೂ ಬಹಿರಂಗ ಆಗಿಲ್ಲ. ಈಗ ಬರುತ್ತಿರುವ ಅಂಕಿ ಸಂಖ್ಯೆ ಊಹಾಪೋಹ. ಇದು ಜಾತಿಗಣತಿ ಅಲ್ಲ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದಕ್ಕೆ ಯಾರು ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ವರದಿ ಓಪನ್ ಆಗಲಿ, ಆಮೇಲೆ ನೋಡೋಣ ಜಾತಿ ಗಣತಿ ವರದಿ ಜಾರಿಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲರೂ ಒಟ್ಟಾಗಿ ತೀರ್ಮಾನ ಮಾಡುತ್ತೇವೆ. ವರದಿ ಜಾರಿ ಬಳಿಕ ನೋಡೋಣ ಏನು ಆಗುತ್ತದೆ ಎಂದು ಹೇಳಿರುವ ಸಚಿವ ಸತೀಶ್ ಜಾರಕಿಹೊಳಿ‌,  ಪ್ರಬಲ ಸಮುದಾಯದ ವಿರೋಧದ ಬಗ್ಗೆ ವರದಿ ಓಪನ್…

Read More

ದೀಕ್ಷಿತ್ ಶೆಟ್ಟಿ ದಿಯಾ ಸಿನಿಮಾದಿಂದ ಕನ್ನಡ ನೆಲದಲ್ಲಿ ಭರವಸೆ ಹುಟ್ಟಿಸಿದ ನಟ.. ತೆಲುಗಿನ ದಸರಾ ಮೂಲಕ ಇಡೀ ಸೌತ್ ಸಿನಿಮಾ ದುನಿಯಾದಲ್ಲಿ ಸೆನ್ಸೇಷನ್ ಸೃಷಿಸಿದ ನಟ. ನಟನೆಯನ್ನೇ ಉಸಿರಾಗಿಸಿಕೊಂಡಿರೋ ಸಿನಿಮಾವನ್ನೇ ಬದುಕನ್ನಾಗಿಸಿಕೊಂಡಿರೋ ದೀಕ್ಷಿತ್ ಶೆಟ್ಟಿಯ ಸಿನಿಮೋತ್ಸಾಹದ ಕನಸು.  ಬಹುಭಾಷೆಯಲ್ಲಿ ಚಾಚಿ ಕೊಂಡಿದೆ. ಕತೆಗೆ ಮೊದಲ ಆದ್ಯತೆ ಉತ್ತಮ ತಂಡಗಳೊಂದಿಗೆ ಕೆಲಸ ಮಾಡೋ ಆಶಯದಲ್ಲಿ ದೀಕ್ಷಿತ್ ಆಯ್ಕೆಗಳು ನಿಧಾನವಾದ್ರೂ ತುಂಬಾ ಗಟ್ಟಿಯಾಗಿ ನೆಲೆ ನಿಲ್ಲೂ ಪ್ರೇಕ್ಷಕರ ಮನಗೆಲ್ಲೋವಂತಹ ಪ್ರಯೋಗಗಳೇ ಆಗಿರುತ್ತವೆ. ಅದಕ್ಕೆ ಈಗಾಗ್ಲೇ ಇವ್ರು ಮಾಡಿರೋ ಪ್ರಯತ್ನಗಳೇ ಸಾಕ್ಷಿ. ಇತ್ತಿಚೆಗಿನ ಬ್ಲಿಂಕ್, ಕೆ.ಟಿ.ಎಂ ಕನ್ನಡ ಪ್ರೇಕ್ಷಕರ ಮನ ಗೆದ್ದವು.. ಇನ್ನೂ ತೆಲುಗಿನಲ್ಲಿ ಮುಗ್ಗುರು ಮೊನಗಾಳ್ಳು ಸಿನಿಮಾದ ಪಾತ್ರದಿಂದ ಗಮನ ಸೆಳೆದಿದ್ದ ದೀಕ್ಷಿತ್ ಅಭಿನಯದಲ್ಲಿ, ತೆಲುಗಿನಲ್ಲಿ KJQ ಮತ್ತು ರಷ್ಮಿಕಾ ಮಂದಣ್ಣ ಜೋಡಿಯಲ್ಲಿ ದಿ ಗರ್ಲ್ ಫ್ರೆಂಡ್ ಚಿತ್ರಗಳು ರಿಲೀಸ್ಗೆ ರೆಡಿಯಾಗಿದ್ದು, ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಬರಲು ಸಿದ್ದವಾಗ್ತಿವೆ. ಜೊತೆಗೆ ತಮಿಳು ಹಾಗೂ ಮಲಯಾಳಂನ ಸಿನಿಮಾಗಳೂ ಸೆಟ್ಟೇರಿವೆ. ಈ ನಡುವೆ ಬ್ಲಿಂಕ್ ಡೈರೆಕ್ಟರ್ ಜೊತೆಗೆ…

Read More

ಉತ್ತರ ಪ್ರದೇಶ: ಆಹಾರಕ್ರಮ ವ್ಯಕ್ತಿಯಿಂದ ವ್ಯಕ್ತಿಗೆ ವಿಭಿನ್ನವಾಗಿರುತ್ತದೆ. ಒಬ್ಬೊಬ್ಬರು ಒಂದೊಂದು ರೀತಿಯ ಆಹಾರಕ್ರಮವನ್ನು ಅನುಸರಿಸುತ್ತಾರೆ. ಕೆಲವೊಬ್ಬರು ಸಸ್ಯಾಹಾರಿಗಳು, ಇನ್ನು ಕೆಲವೊಬ್ಬರು ಮಾಂಸಾಹಾರಿಗಳು. ಮತ್ತೆ ಕೆಲವರು ಮೊಟ್ಟೆಯನ್ನು ಮಾತ್ರ ಸೇವಿಸುತ್ತಾರೆ. ನಿರ್ಧಿಷ್ಟ ಆಹಾರವನ್ನು ಇಷ್ಟಪಡುವವರು ಅಂಥಾ ಫುಡ್‌ನ್ನು ಮಾತ್ರ ಆರ್ಡರ್ ಮಾಡುತ್ತಾರೆ. ಆದ್ರೆ ಆನ್‌ಲೈನ್‌ನಲ್ಲಿ ವೆಜ್ ಬಿರಿಯಾನಿ ಆರ್ಡರ್ ಮಾಡಿದ್ದಕ್ಕೆ ನಾನ್ ವೆಜ್ ಬಿರಿಯಾನಿ ಬಂದಿರುವ ಘಟನೆ ಉತ್ತರ ಪ್ರದೇಶ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾ ವೆಸ್ಟ್‌ನ ಸೆಕ್ಟರ್ 1ರ ಅರಿಹಂತ್ ಆರ್ಡೆನ್ ನಿವಾಸಿ ಛಾಯಾ ಶರ್ಮಾ ಎಂಬವರು ಆನ್‌ಲೈನ್‌ನಲ್ಲಿ ವೆಜ್ ಬಿರಿಯಾನಿಯನ್ನು ಆರ್ಡರ್ ಮಾಡಿದ್ದರು. ಆದರೆ ಅವರ ಆರ್ಡರ್‌ನಲ್ಲಿ ನಾನ್ ವೆಜ್ ಬಿರಿಯಾನಿ ಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಯುವತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು ತನಗಾಗಿರುವ ಅನುಭವವನ್ನು ತಿಳಿಸಿದ್ದಾರೆ. https://ainkannada.com/do-you-have-sugar-too-if-so-dont-drink-these-three-juices/ ನಾನು ಶುದ್ಧ ಸಸ್ಯಾಹಾರಿ ಹಾಗೂ ಇದು ನವರಾತ್ರಿಯ ಸಮಯವಾಗಿದ್ದರಿಂದ ನಾನು ವೆಜ್ ಬಿರಿಯಾನಿ ಆರ್ಡರ್ ಮಾಡಿದೆ. ಆರ್ಡರ್ ಬಂದ ತಕ್ಷಣ ನಾನು ಸ್ವಲ್ಪ ಬಿರಿಯಾನಿಯನ್ನು ತಿಂದೆ.…

Read More

ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಅಮೆರಿಕದಲ್ಲಿ ಹಲವು ಬದಲಾವಣೆಗಳಾಗಿವೆ. ಟ್ರಂಪ್ ಅವರ ನಿರ್ಧಾರಗಳಿಂದಾಗಿ ಜಗತ್ತಿನಾದ್ಯಂತ ಅನೇಕ ದೇಶಗಳು ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಈಗಾಗಲೇ ವಲಸಿಗರ ಮೇಲೆ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವ ಅಮೆರಿಕ ಸರ್ಕಾರ, ಈ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಅಮೆರಿಕಕ್ಕೆ ಬರುವವರು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪೋಸ್ಟ್ ಮಾಡಿದರೆ ಅವರಿಗೆ ವೀಸಾ ಅಥವಾ ಗ್ರೀನ್ ಕಾರ್ಡ್‌ಗಳನ್ನು ನೀಡಲಾಗುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಈ ನೀತಿಯನ್ನು ತಕ್ಷಣವೇ ಜಾರಿಗೆ ತರಲಾಗುತ್ತಿದೆ ಎಂದು ಹೇಳಲಾಗಿದೆ. ಅಮೆರಿಕಕ್ಕೆ ಬರುವ ವಿದ್ಯಾರ್ಥಿಗಳು ಮತ್ತು ಗ್ರೀನ್ ಕಾರ್ಡ್ ಅರ್ಜಿದಾರರ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ. https://ainkannada.com/do-you-have-sugar-too-if-so-dont-drink-these-three-juices/ ಅಮೆರಿಕ ಸರ್ಕಾರದ ಇತ್ತೀಚಿನ ನಿರ್ಧಾರದ ಪ್ರಕಾರ. ಹಮಾಸ್, ಹೆಜ್ಬೊಲ್ಲಾ ಮತ್ತು ಹೌತಿಗಳಂತಹ ಅಮೆರಿಕದಿಂದ ಭಯೋತ್ಪಾದಕ ಸಂಘಟನೆಗಳೆಂದು ಪರಿಗಣಿಸಲ್ಪಟ್ಟ ಗುಂಪುಗಳನ್ನು ಬೆಂಬಲಿಸುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಥವಾ ಯೆಹೂದ್ಯ ವಿರೋಧಿ ಉದ್ದೇಶಗಳನ್ನು ಹೊಂದಿರುವ ವ್ಯಕ್ತಿಗಳು ಅಮೆರಿಕಕ್ಕೆ ಪ್ರವೇಶಿಸಲು ಅನರ್ಹರು ಎಂದು…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಜಾತಿಗಣತಿ ವರದಿ ಸ್ವೀಕಾರ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲು ಕೌಂಟ್‌ ಡೌನ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ವಿಧಾನಸೌಧಕ್ಕೆ ಆಗಮಿಸಿದ್ದು ಸಂಪುಟ ಸಭೆ ನಡೀತಿದೆ. ಇನ್ನು ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿ ಅಂದರೆ ಜಾತಿ ಗಣತಿ ವರದಿಯ ಪ್ರತಿಗಳು ವಿಧಾನಸೌಧಕ್ಕೆ ಆಗಮಿಸಿವೆ. ಮುಚ್ಚಿದ ಲಕೋಟೆಯಲ್ಲಿ ವಿಧಾನಸೌಧಕ್ಕೆ ಜಾತಿಗಣತಿ ವರದಿಯನ್ನು ತರಲಾಗಿದೆ.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವರದಿ ತಯಾರಿಸಲಾಗಿದ್ದು ಸಚಿವ ಸಂಪುಟದ ಕೊಠಡಿಗೆ ತೆಗೆದುಕೊಂಡು ಹೋಗಲಾಗಿದೆ.

Read More

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಅವರು ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ವಿವಿಧ ಜಾಗಗಳಲ್ಲಿ ಡೆವಿಲ್ ಸಿನಿಮಾ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಮೆಜೆಸ್ಟಿಕ್‌ನಲ್ಲಿರುವ ಅಣ್ಣಮ್ಮ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು  ಭೇಟಿ ನೀಡಿ, ದೇವಿಗೆ ಹರಕೆ ತೀರಿಸಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ದರ್ಶನ್ ಪತ್ನಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ. https://ainkannada.com/do-you-have-sugar-too-if-so-dont-drink-these-three-juices/ ಇನ್ನೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣ ಸ್ನೇಹಿತ ಧನ್ವೀರ್ ಅಭಿನಯದ ವಾಮನ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಗೆಳೆಯನ ಸಿನಿಮಾ ದರ್ಶನ್ ಸಾಥ್ ನೀಡಿದ್ದು, ಪ್ರೀಮಿಯರ್ ಶೋನಲ್ಲಿ ಭಾಗಿಯಾಗಿದ್ರು. ಆದ್ರೆ ಕೋರ್ಟ್​ಗೆ ಹಾಜರಾಗದ ದರ್ಶನ್​ ಸಿನಿಮಾ ನೋಡಲು ಬಂದಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

Read More

ಬೆಂಗಳೂರು: ಈ ಕೆಲವು ಪ್ರೇಮಿಗಳು ತೋರುವ ಹುಚ್ಚಾಟಗಳು ಅಷ್ಟಿಷ್ಟಲ್ಲ. ತಾವು ಎಲ್ಲಿ ಇದ್ದೇವೆ ಎಂಬುದನ್ನೂ ಕೂಡಾ ಮರೆತು ಸಾರ್ವಜನಿಕ ಸ್ಥಳಗಳಲ್ಲಿ ಕಿಸ್ಸಿಂಗ್, ರೊಮ್ಯಾನ್ಸ್ ಮಾಡುತ್ತಾ ಇತರರಿಗೆ ಮುಜುಗರ ಉಂಟುಮಾಡುತ್ತಿರುತ್ತಾರೆ. ಹೌದು ಮೆಟ್ರೋ, ರೈಲು, ಬಸ್ ಇತ್ಯಾದಿ ಸಾರ್ವಜನಿಕರು ಪ್ರಯಾಣಿಸುವಂತಹ ಸ್ಥಳಗಳಲ್ಲಿ ಪ್ರೇಮಿಗಳು ರಾಜಾರೋಷವಾಗಿ ರೊಮ್ಯಾನ್ಸ್ ಮಾಡಿದಂತಹ ಅಸಹ್ಯಕರ ಘಟನೆಗಳ ಸುದ್ದಿಗಳು ಈ ಹಿಂದೆಯೂ ವೈರಲ್ ಆಗಿದ್ದವು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, https://ainkannada.com/do-you-have-sugar-too-if-so-dont-drink-these-three-juices/ ಮೆಜೆಸ್ಟಿಕ್  ಮೆಟ್ರೋ ನಿಲ್ದಾಣದ ಫ್ಲ್ಯಾಟ್ ಫಾರ್ಮ್ -3ಯಲ್ಲಿ ಜೋಡಿಯೊಂದು ಅಸಭ್ಯವಾಗಿ ವರ್ತಿಸಿದೆ ಎನ್ನಲಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾರ್ವಜನಿಕವಾಗಿ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ. ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿಯೂ ದೆಹಲಿ ಮೆಟ್ರೋ ಮಾದರಿ ಶುರುವಾಗುತ್ತಿದೆಯೇ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. https://x.com/karnatakaportf/status/1910385125482758651?ref_src=twsrc%5Etfw%7Ctwcamp%5Etweetembed%7Ctwterm%5E1910385125482758651%7Ctwgr%5E70f3c1045b7ed45b957b6067a39aa72a836d2174%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fkarnatakaportf%2Fstatus%2F1910385125482758651%3Fref_src%3Dtwsrc5Etfw ಹೌದು ಕರ್ನಾಟಕ ಪೋರ್ಟ್‌ಫೋಲಿಯೋ ಎನ್ನುವ ಎಕ್ಸ್‌ ಹ್ಯಾಂಡಲ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದ್ದು, ‘‘ಬೆಂಗಳೂರು ಮೆಟ್ರೋ ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ?’’ ಎಂದು ಪ್ರಶ್ನಿಸಿ ಪೋಸ್ಟ್ ಮಾಡಲಾಗಿರುವ…

Read More

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮದಲ್ಲಿ KIADB ಭೂಸ್ವಾಧೀನ ನಡೆಸುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ನಿನ್ನೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಬಸ್‌ ನಲ್ಲಿ ಹೊರಟ್ಟಿದ್ದ ರೈತರನ್ನು ಪೊಲೀಸರು ಮಾರ್ಗಮಧ್ಯೆ ತಡೆದಿದ್ದರು. ಈ ವೇಳೆ ರೈತರ ಮತ್ತು ಪೋಲಿಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಇಷ್ಟಾದರೂ ಸಹ, ಸಚಿವ ಕೆ.ಹೆಚ್‌ ಮುನಿಯಪ್ಪ, ರೈತರ ಮನವಿ ಸ್ವೀಕರಿಸಲು ಬಂದಿಲ್ಲ. ನಮ್ಮ ಸ್ವೀಕರಿಸಿ ಭೂಸ್ವಾಧೀನ ವಾಪಸ್‌ ಪಡೆಯೋವರೆಗೂ ಹೋರಾಟ ನಿಲ್ಲಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ನಿನ್ನೆಯಿಂದ ಇಡೀ ರಾತ್ರಿ ನಡುರಸ್ತೆಯಲ್ಲೇ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮದ 1777 ಎಕರೆ ಕೃಷಿ ಭೂಮಿಯನ್ನು ಭೂ‌ಸ್ವಾಧೀನದಿಂದ ಕೈ ಬಿಡಬೇಕೆಂದು ಕಳೆದ 1113 ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಸರ್ಕಾರ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. https://www.youtube.com/watch?v=Tr-4ErU5FaA

Read More