Author: Author AIN

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಜಾತಿಗಣತಿ ವರದಿ ಸ್ವೀಕಾರ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲು ಕೌಂಟ್‌ ಡೌನ್‌ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ವಿಧಾನಸೌಧಕ್ಕೆ ಆಗಮಿಸಿದ್ದು ಸಂಪುಟ ಸಭೆ ನಡೀತಿದೆ. ಇನ್ನು ಸಾಮಾಜಿಕ-ಶೈಕ್ಷಣಿಕ ಸಮೀಕ್ಷಾ ವರದಿ ಅಂದರೆ ಜಾತಿ ಗಣತಿ ವರದಿಯ ಪ್ರತಿಗಳು ವಿಧಾನಸೌಧಕ್ಕೆ ಆಗಮಿಸಿವೆ. ಮುಚ್ಚಿದ ಲಕೋಟೆಯಲ್ಲಿ ವಿಧಾನಸೌಧಕ್ಕೆ ಜಾತಿಗಣತಿ ವರದಿಯನ್ನು ತರಲಾಗಿದೆ.  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವರದಿ ತಯಾರಿಸಲಾಗಿದ್ದು ಸಚಿವ ಸಂಪುಟದ ಕೊಠಡಿಗೆ ತೆಗೆದುಕೊಂಡು ಹೋಗಲಾಗಿದೆ.

Read More

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಅವರು ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ವಿವಿಧ ಜಾಗಗಳಲ್ಲಿ ಡೆವಿಲ್ ಸಿನಿಮಾ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಮೆಜೆಸ್ಟಿಕ್‌ನಲ್ಲಿರುವ ಅಣ್ಣಮ್ಮ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು  ಭೇಟಿ ನೀಡಿ, ದೇವಿಗೆ ಹರಕೆ ತೀರಿಸಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಇದೀಗ ಅಣ್ಣಮ್ಮ ದೇವಿಗೆ ದರ್ಶನ್ ಪತ್ನಿ ಹರಕೆ ಸಲ್ಲಿಸಿದ್ದಾರೆ. ಅಣ್ಣಮ್ಮ ದೇವಿಗೆ ಸೀರೆ ಜೊತೆ ಮಡಿಲಕ್ಕಿ ತುಂಬಿ ಹರಕೆ ತೀರಿಸಿದ್ದಾರೆ. https://ainkannada.com/do-you-have-sugar-too-if-so-dont-drink-these-three-juices/ ಇನ್ನೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣ ಸ್ನೇಹಿತ ಧನ್ವೀರ್ ಅಭಿನಯದ ವಾಮನ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಗೆಳೆಯನ ಸಿನಿಮಾ ದರ್ಶನ್ ಸಾಥ್ ನೀಡಿದ್ದು, ಪ್ರೀಮಿಯರ್ ಶೋನಲ್ಲಿ ಭಾಗಿಯಾಗಿದ್ರು. ಆದ್ರೆ ಕೋರ್ಟ್​ಗೆ ಹಾಜರಾಗದ ದರ್ಶನ್​ ಸಿನಿಮಾ ನೋಡಲು ಬಂದಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

Read More

ಬೆಂಗಳೂರು: ಈ ಕೆಲವು ಪ್ರೇಮಿಗಳು ತೋರುವ ಹುಚ್ಚಾಟಗಳು ಅಷ್ಟಿಷ್ಟಲ್ಲ. ತಾವು ಎಲ್ಲಿ ಇದ್ದೇವೆ ಎಂಬುದನ್ನೂ ಕೂಡಾ ಮರೆತು ಸಾರ್ವಜನಿಕ ಸ್ಥಳಗಳಲ್ಲಿ ಕಿಸ್ಸಿಂಗ್, ರೊಮ್ಯಾನ್ಸ್ ಮಾಡುತ್ತಾ ಇತರರಿಗೆ ಮುಜುಗರ ಉಂಟುಮಾಡುತ್ತಿರುತ್ತಾರೆ. ಹೌದು ಮೆಟ್ರೋ, ರೈಲು, ಬಸ್ ಇತ್ಯಾದಿ ಸಾರ್ವಜನಿಕರು ಪ್ರಯಾಣಿಸುವಂತಹ ಸ್ಥಳಗಳಲ್ಲಿ ಪ್ರೇಮಿಗಳು ರಾಜಾರೋಷವಾಗಿ ರೊಮ್ಯಾನ್ಸ್ ಮಾಡಿದಂತಹ ಅಸಹ್ಯಕರ ಘಟನೆಗಳ ಸುದ್ದಿಗಳು ಈ ಹಿಂದೆಯೂ ವೈರಲ್ ಆಗಿದ್ದವು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, https://ainkannada.com/do-you-have-sugar-too-if-so-dont-drink-these-three-juices/ ಮೆಜೆಸ್ಟಿಕ್  ಮೆಟ್ರೋ ನಿಲ್ದಾಣದ ಫ್ಲ್ಯಾಟ್ ಫಾರ್ಮ್ -3ಯಲ್ಲಿ ಜೋಡಿಯೊಂದು ಅಸಭ್ಯವಾಗಿ ವರ್ತಿಸಿದೆ ಎನ್ನಲಾಗಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾರ್ವಜನಿಕವಾಗಿ ರೊಮ್ಯಾನ್ಸ್ ಮಾಡುತ್ತಾ ಅಸಭ್ಯವಾಗಿ ವರ್ತಿಸಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ. ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿಯೂ ದೆಹಲಿ ಮೆಟ್ರೋ ಮಾದರಿ ಶುರುವಾಗುತ್ತಿದೆಯೇ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. https://x.com/karnatakaportf/status/1910385125482758651?ref_src=twsrc%5Etfw%7Ctwcamp%5Etweetembed%7Ctwterm%5E1910385125482758651%7Ctwgr%5E70f3c1045b7ed45b957b6067a39aa72a836d2174%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fkarnatakaportf%2Fstatus%2F1910385125482758651%3Fref_src%3Dtwsrc5Etfw ಹೌದು ಕರ್ನಾಟಕ ಪೋರ್ಟ್‌ಫೋಲಿಯೋ ಎನ್ನುವ ಎಕ್ಸ್‌ ಹ್ಯಾಂಡಲ್‌ನಲ್ಲಿ ಈ ವಿಡಿಯೋವನ್ನು ಪೋಸ್ಟ್‌ ಮಾಡಲಾಗಿದ್ದು, ‘‘ಬೆಂಗಳೂರು ಮೆಟ್ರೋ ಕೂಡ ದೆಹಲಿ ಮೆಟ್ರೋ ಸಂಸ್ಕೃತಿಯತ್ತ ಸಾಗುತ್ತಿದೆಯೇ?’’ ಎಂದು ಪ್ರಶ್ನಿಸಿ ಪೋಸ್ಟ್ ಮಾಡಲಾಗಿರುವ…

Read More

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಗ್ರಾಮದಲ್ಲಿ KIADB ಭೂಸ್ವಾಧೀನ ನಡೆಸುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ನಿನ್ನೆ ಸಚಿವ ಕೆ.ಎಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಬಸ್‌ ನಲ್ಲಿ ಹೊರಟ್ಟಿದ್ದ ರೈತರನ್ನು ಪೊಲೀಸರು ಮಾರ್ಗಮಧ್ಯೆ ತಡೆದಿದ್ದರು. ಈ ವೇಳೆ ರೈತರ ಮತ್ತು ಪೋಲಿಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಇಷ್ಟಾದರೂ ಸಹ, ಸಚಿವ ಕೆ.ಹೆಚ್‌ ಮುನಿಯಪ್ಪ, ರೈತರ ಮನವಿ ಸ್ವೀಕರಿಸಲು ಬಂದಿಲ್ಲ. ನಮ್ಮ ಸ್ವೀಕರಿಸಿ ಭೂಸ್ವಾಧೀನ ವಾಪಸ್‌ ಪಡೆಯೋವರೆಗೂ ಹೋರಾಟ ನಿಲ್ಲಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ನಿನ್ನೆಯಿಂದ ಇಡೀ ರಾತ್ರಿ ನಡುರಸ್ತೆಯಲ್ಲೇ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮದ 1777 ಎಕರೆ ಕೃಷಿ ಭೂಮಿಯನ್ನು ಭೂ‌ಸ್ವಾಧೀನದಿಂದ ಕೈ ಬಿಡಬೇಕೆಂದು ಕಳೆದ 1113 ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಸರ್ಕಾರ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. https://www.youtube.com/watch?v=Tr-4ErU5FaA

Read More

ಭಾರತದಲ್ಲಿ ಹೋಟೆಲ್ ರೂಮ್‌ʼಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಬುಕ್ ಮಾಡಲು ಆಧಾರ್ ಕಾರ್ಡ್ ಹೆಚ್ಚಾಗಿ ಅಗತ್ಯವಾಗಿರುತ್ತದೆ. ಈ ಪ್ರಕ್ರಿಯೆಯು ತುಂಬಾ ಸಾಮಾನ್ಯವಾಗಿದೆ. ಗ್ರಾಹಕರ ಗುರುತು ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹೋಟೆಲ್ ಕೊಠಡಿಗಳನ್ನು ಬುಕ್ ಮಾಡುವಾಗ ಆಧಾರ್ ಕಾರ್ಡ್ ಅಗತ್ಯವಿದೆ. ಆದರೆ, ಆಧಾರ್ ಕಾರ್ಡ್ ಬಳಸುವಾಗ ಜಾಗರೂಕರಾಗಿರುವುದು ಬಹಳ ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನಿಜವಾದ ಆಧಾರ್ ಕಾರ್ಡ್ ಅನ್ನು ಯಾರಿಗಾದರೂ ನೀಡುವ ಮೊದಲು ನೀವು ಮುಖವಾಡದ ಆಧಾರ್ ಕಾರ್ಡ್ ಅನ್ನು ಬಳಸಬಹುದು. ಮಾಸ್ಕ್ಡ್ ಆಧಾರ್ ಕಾರ್ಡ್ ಎಂದರೇನು? ಮಾಸ್ಕ್ಡ್ ಆಧಾರ್ ಕಾರ್ಡ್ ಒಂದು ಡಿಜಿಟಲ್ ಆಯ್ಕೆಯಾಗಿದೆ. ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಈ ಕಾರ್ಡ್ ನಿಮ್ಮ ಆಧಾರ್‌ನ ಕೊನೆಯ 4 ಅಂಕೆಗಳನ್ನು ಮಾತ್ರ ತೋರಿಸುತ್ತದೆ. ಉಳಿದ 12 ಸಂಖ್ಯೆಗಳನ್ನು ಮರೆಮಾಡಲಾಗಿದೆ. ನಿಮ್ಮ ವೈಯಕ್ತಿಕ ಡೇಟಾವನ್ನು ರಕ್ಷಿಸುವ ವಿಷಯಕ್ಕೆ ಬಂದಾಗ ಈ ವಿಧಾನವು ತುಂಬಾ ಪ್ರಯೋಜನಕಾರಿಯಾಗಿದೆ. ಮಾಸ್ಕ್ಡ್ ಆಧಾರ್ ಕಾರ್ಡ್ ಭದ್ರತೆಯನ್ನು ಖಚಿತಪಡಿಸುತ್ತದೆ: ಡೇಟಾ ಸುರಕ್ಷತೆ: ನೀವು ಹೋಟೆಲ್‌ನಲ್ಲಿ…

Read More

ಬೆಂಗಳೂರು: ಹೆತ್ತು ಹೊತ್ತು ಸಾಕಿದ ತಾಯಿಯನ್ನೇ ಪಾಪಿ ಮಗನೊಬ್ಬ ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಬಗಲಗುಂಟೆಯ ಮುನೇಶ್ವರ ನಗರದಲ್ಲಿ ಜರುಗಿದೆ. ಶಾಂತಬಾಯಿ (82) ಮೃತ ವೃದ್ದ ತಾಯಿ. ಮಹೆಂದ್ರ ಸಿಂಗ್ ಎಂಬಾತ ತಾಯಿ ಕೊಂದ ಪಾಪಿ ಮಗ. ತಾಯಿ ಜೊತೆಯಲ್ಲೇ ವಾಸವಿದ್ದ ಆರೋಪಿ ಮಹೇಂದ್ರ ಸಿಂಗ್, ಕುಡಿತದ ಚಟಕ್ಕೆ ಬಿದ್ದು, ನಿತ್ಯ ಕೆಲಸಕ್ಕಾಗಿ ಅಲೆಯುತ್ತಿದ್ದ. ಅಲ್ಲದೇ ನಿತ್ಯ ಹಣಕ್ಕಾಗಿ ತಾಯಿಯನ್ನು ಹಿಂಸೆ ನೀಡಿ ನಿಂದಿಸುತ್ತಿದ್ದ. https://ainkannada.com/do-you-have-sugar-too-if-so-dont-drink-these-three-juices/ ಆದರೆ ನಿನ್ನೆ ರಾತ್ರಿ ಹಣಕಾಸಿನ ವಿಚಾರಕ್ಕೆ ಜಗಳ ನಡೆದು, ಕಬ್ಬಿಣದ ರಾಡ್ ನಿಂದ ಹೊಡೆದು ತಾಯಿಯನ್ನು ಕೊಲೆಗೈದಿದ್ದಾನೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Read More

ಬೆಂಗಳೂರು: ಆನ್​ಲೈನ್ ವಂಚನೆ ಎನ್ನುವುದು ಕಣ್ಣಿಗೆ ಕಾಣದಂತೆ ನಡೆಯುವ ದಂಧೆ ಆಗಿದೆ. ಕ್ಷಣದಲ್ಲಿ ಹಣವನ್ನು ಮಾಯ ಮಾಡಿ ಬಿಡುತ್ತಾರೆ. ಉದ್ಯೋಗ ಕೊಡುತ್ತೇವೆ, ಹಣ ಡಬಲ್ ಮಾಡಿಕೊಡುತ್ತೇವೆ. ಕಸ್ಟಮರ್ ಅಧಿಕಾರ ಹೆಸರಲ್ಲಿ, ನಿಮ್ಮ ಹೆಸರಲ್ಲಿ ಕೇಸ್​ಗಳಿವೆ, ಆ್ಯಪ್​ನಲ್ಲಿ ಹಣ ಹೂಡಿಕೆ ಮಾಡಿ ಹೀಗೆ.. ಹಲವಾರು ರೀತಿಯಲ್ಲಿ ಖದೀಮರು ಆನ್​ಲೈನ್ ಮೂಲಕ ವಂಚನೆ ಮಾಡುತ್ತಾರೆ. ಈ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. https://ainkannada.com/do-you-have-sugar-too-if-so-dont-drink-these-three-juices/ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್​ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ. ಹೌದು! ಸೈಬರ್​ ಖದೀಮರು ಬೆಂಗಳೂರು ಪೊಲೀಸ್​ ಆಯುಕ್ತರನ್ನು ಬಿಟ್ಟಿಲ್ಲ. ಫೇಸ್​ಬುಕ್​ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರಿದ್ದಾರೆ. ಹಿಂದಿ ಭಾಷೆಯಲ್ಲಿ ಅಕೌಂಟ್ ಓಪನ್ ಮಾಡಿರುವ ಖದೀಮರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿದೆ.

Read More

ನಿಮ್ಮ ಮನೆಗೆ ಗರಿಷ್ಠ ಮಾಸಿಕ ವಿದ್ಯುತ್ ಬಿಲ್ ಎಷ್ಟು? 5 ಸಾವಿರ? 10 ಸಾವಿರ ಆದರೆ ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ವಿದ್ಯುತ್ ಬಿಲ್‌ಗೆ ಎಷ್ಟು ಪಾವತಿಸುತ್ತಾನೆಂದು ನಿಮಗೆ ತಿಳಿದಿದೆಯೇ? ಆ ಹಣವು ಸರಾಸರಿ ಭಾರತೀಯನೊಬ್ಬ ಜೀವಿತಾವಧಿಯಲ್ಲಿ ಗಳಿಸುವ ಮೊತ್ತಕ್ಕೆ ಸಮನಾಗಿರುತ್ತದೆ. ಮುಖೇಶ್ ಮತ್ತು ನೀತಾ ಅಂಬಾನಿ 27 ಅಂತಸ್ತಿನ ಆಂಟಿಲಿಯಾ ನಿವಾಸದ ಮಾಲೀಕರು. ನಿರ್ಮಾಣವು 2005 ರಲ್ಲಿ ಪ್ರಾರಂಭವಾಯಿತು ಮತ್ತು 2010 ರಲ್ಲಿ ಪೂರ್ಣಗೊಂಡಿತು. ಇದು ಮುಂಬೈನಲ್ಲಿದೆ. ಈ 27 ಅಂತಸ್ತಿನ ಕಟ್ಟಡದಲ್ಲಿ ಮುಖೇಶ್ ಅಂಬಾನಿ ಅವರ ಕುಟುಂಬ ಮಾತ್ರ ವಾಸಿಸುತ್ತಿದೆ. ಆದರೆ, ಈ ಮನೆ ಕಟ್ಟಲು ತಗುಲಿದ ವೆಚ್ಚ ಅಕ್ಷರಶಃ 15 ಸಾವಿರ ಕೋಟಿ ರೂಪಾಯಿಗಳು. ಆಂಟಿಲಿಯಾವನ್ನು ಅಮೇರಿಕನ್ ಸಂಸ್ಥೆ ಪರ್ಕಿನ್ಸ್ & ವಿಲ್ ಮತ್ತು ಲಾಸ್ ಏಂಜಲೀಸ್ ಮೂಲದ ನಿರ್ಮಾಣ ಕಂಪನಿ ಹಿರ್ಷ್ ಬೆಟ್ನರ್ ಅಸೋಸಿಯೇಟ್ಸ್ ನಿರ್ಮಿಸಿವೆ. ವೆಚ್ಚದ ದೃಷ್ಟಿಯಿಂದ, ಇದು ಬಕಿಂಗ್ಹ್ಯಾಮ್ ಅರಮನೆಯ ನಂತರ ವಿಶ್ವದ ಎರಡನೇ ಅತ್ಯಂತ ದುಬಾರಿ ನಿವಾಸವಾಗಿದೆ. https://ainkannada.com/do-you-have-sugar-too-if-so-dont-drink-these-three-juices/ ಅಂಬಾನಿಯವರ…

Read More

ಬೆಂಗಳೂರು: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ವಿರುದ್ಧ ಕಾಂಗ್ರೆಸ್‌ ಪಾಳೆಯದಲ್ಲಿ ಕೊತ ಕೊತ ಅಂತ ಕುದಿಯುತ್ತಿದೆ. ಬಿಜೆಪಿ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಗೆ ಬಸವರಾಜ ರಾಯರಡ್ಡಿ ಹೇಳಿಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ನಿಶ್ಚಿತವಾಗಿ ಇದು ಸರ್ಕಾರಕ್ಕೆ ಮುಜುಗರದ ವಿಚಾರ. ರಾಯರಡ್ಡಿ ವಿರುದ್ಧ ಪಕ್ಷ ಕ್ರಮ ತೆಗೆದುಕೊಳ್ಳುತ್ತೆ ಅಂತ ಸಚಿವ ಎಂ.ಬಿ ಪಾಟೀಲ್ ಸುಳಿವು ನೀಡಿದ್ದಾರೆ. ರಾಯರೆಡ್ಡಿ ಯಾವ ಅರ್ಥದಲ್ಲಿ ಹೇಳಿದ್ದಾರೆ, ಅವರೇ ವಿವರಣೆ ನೀಡಬೇಕು. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ. ನಿನ್ನೆಯೇ ಯೂಟರ್ನ ಹೊಡೆದ್ರು ಅಂತ ಕೇಳಿದೆ ಅನ್ನೂ ಮೂಲಕ ರಾಯರಡ್ಡಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. https://www.youtube.com/watch?v=M2wNpM7LdHE

Read More

‌ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ 2008 ನವೆಂಬರ್‌ 26ರಂದು ಮುಂಬೈ ಸರಣಿ ಬಾಂಬ್‌ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ತವಾವುರ್‌ ಹುಸೈನ್ ರಾಣಾನನ್ನು ಕೊನೆಗೂ ಭಾರತಕ್ಕೆ ಎಳೆದು ತರಲಾಗಿದೆ. ಅಮೇರಿಕದಿಂದ ಗಡಿಪಾರಾದ ಉಗ್ರ ರಾಣಾನನ್ನು ವಿಶೇಷ ವಿಮಾನದ ಮೂಲಕ ನವದೆಹಲಿಗೆ ತರಲಾಯಿತು.ರಾಣಾನನ್ನು ಕರೆ ತಂದ ವಿಶೇಷ ವಿಮಾನ ಮಧ್ಯಾಹ್ನ 2.50ಕ್ಕೆ ದೆಹಲಿಯ ಪಾಲಂ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಯಿತು. ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ತವಾವುರ್‌ ರಾಣಾನನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈಅಲರ್ಟ್‌ ಮಾಡಲಾಗಿದೆ. ಪಾಕಿಸ್ತಾನ ಮೂಲದ 64 ವರ್ಷದ ರಾಣಾ, ಕೆನಡಾದಲ್ಲಿ ವಾಸವಾಗಿದ್ದ. ಈತನನ್ನು ಅಮೆರಿಕದ ಗುಪ್ತಚರ ಸಂಸ್ಥೆಗಳು ಬಂಧಿಸಿ ಜೈಲಿಗೆ ಅಟ್ಟಿದ್ವು. ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್‌ ವಜಾ ಮಾಡಿತ್ತು. ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಪಾಕಿಸ್ತಾನಿ ಅಮೆರಿಕನ್‌ ಪ್ರಜೆ ಡೇವಿಡ್‌ ಕೋಲ್ಮನ್‌ ಹೆಡ್ಲಿ…

Read More