ಬೆಂಗಳೂರು: ಆನ್ಲೈನ್ ವಂಚನೆ ಎನ್ನುವುದು ಕಣ್ಣಿಗೆ ಕಾಣದಂತೆ ನಡೆಯುವ ದಂಧೆ ಆಗಿದೆ. ಕ್ಷಣದಲ್ಲಿ ಹಣವನ್ನು ಮಾಯ ಮಾಡಿ ಬಿಡುತ್ತಾರೆ. ಉದ್ಯೋಗ ಕೊಡುತ್ತೇವೆ, ಹಣ ಡಬಲ್ ಮಾಡಿಕೊಡುತ್ತೇವೆ. ಕಸ್ಟಮರ್ ಅಧಿಕಾರ ಹೆಸರಲ್ಲಿ, ನಿಮ್ಮ ಹೆಸರಲ್ಲಿ ಕೇಸ್ಗಳಿವೆ, ಆ್ಯಪ್ನಲ್ಲಿ ಹಣ ಹೂಡಿಕೆ ಮಾಡಿ ಹೀಗೆ.. ಹಲವಾರು ರೀತಿಯಲ್ಲಿ ಖದೀಮರು ಆನ್ಲೈನ್ ಮೂಲಕ ವಂಚನೆ ಮಾಡುತ್ತಾರೆ. ಈ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. https://ainkannada.com/do-you-have-sugar-too-if-so-dont-drink-these-three-juices/ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ. ಹೌದು! ಸೈಬರ್ ಖದೀಮರು ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರಿದ್ದಾರೆ. ಹಿಂದಿ ಭಾಷೆಯಲ್ಲಿ ಅಕೌಂಟ್ ಓಪನ್ ಮಾಡಿರುವ ಖದೀಮರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ.
Author: Author AIN
ನಿಮ್ಮ ಮನೆಗೆ ಗರಿಷ್ಠ ಮಾಸಿಕ ವಿದ್ಯುತ್ ಬಿಲ್ ಎಷ್ಟು? 5 ಸಾವಿರ? 10 ಸಾವಿರ ಆದರೆ ದೇಶದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ವಿದ್ಯುತ್ ಬಿಲ್ಗೆ ಎಷ್ಟು ಪಾವತಿಸುತ್ತಾನೆಂದು ನಿಮಗೆ ತಿಳಿದಿದೆಯೇ? ಆ ಹಣವು ಸರಾಸರಿ ಭಾರತೀಯನೊಬ್ಬ ಜೀವಿತಾವಧಿಯಲ್ಲಿ ಗಳಿಸುವ ಮೊತ್ತಕ್ಕೆ ಸಮನಾಗಿರುತ್ತದೆ. ಮುಖೇಶ್ ಮತ್ತು ನೀತಾ ಅಂಬಾನಿ 27 ಅಂತಸ್ತಿನ ಆಂಟಿಲಿಯಾ ನಿವಾಸದ ಮಾಲೀಕರು. ನಿರ್ಮಾಣವು 2005 ರಲ್ಲಿ ಪ್ರಾರಂಭವಾಯಿತು ಮತ್ತು 2010 ರಲ್ಲಿ ಪೂರ್ಣಗೊಂಡಿತು. ಇದು ಮುಂಬೈನಲ್ಲಿದೆ. ಈ 27 ಅಂತಸ್ತಿನ ಕಟ್ಟಡದಲ್ಲಿ ಮುಖೇಶ್ ಅಂಬಾನಿ ಅವರ ಕುಟುಂಬ ಮಾತ್ರ ವಾಸಿಸುತ್ತಿದೆ. ಆದರೆ, ಈ ಮನೆ ಕಟ್ಟಲು ತಗುಲಿದ ವೆಚ್ಚ ಅಕ್ಷರಶಃ 15 ಸಾವಿರ ಕೋಟಿ ರೂಪಾಯಿಗಳು. ಆಂಟಿಲಿಯಾವನ್ನು ಅಮೇರಿಕನ್ ಸಂಸ್ಥೆ ಪರ್ಕಿನ್ಸ್ & ವಿಲ್ ಮತ್ತು ಲಾಸ್ ಏಂಜಲೀಸ್ ಮೂಲದ ನಿರ್ಮಾಣ ಕಂಪನಿ ಹಿರ್ಷ್ ಬೆಟ್ನರ್ ಅಸೋಸಿಯೇಟ್ಸ್ ನಿರ್ಮಿಸಿವೆ. ವೆಚ್ಚದ ದೃಷ್ಟಿಯಿಂದ, ಇದು ಬಕಿಂಗ್ಹ್ಯಾಮ್ ಅರಮನೆಯ ನಂತರ ವಿಶ್ವದ ಎರಡನೇ ಅತ್ಯಂತ ದುಬಾರಿ ನಿವಾಸವಾಗಿದೆ. https://ainkannada.com/do-you-have-sugar-too-if-so-dont-drink-these-three-juices/ ಅಂಬಾನಿಯವರ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ವಿರುದ್ಧ ಕಾಂಗ್ರೆಸ್ ಪಾಳೆಯದಲ್ಲಿ ಕೊತ ಕೊತ ಅಂತ ಕುದಿಯುತ್ತಿದೆ. ಬಿಜೆಪಿ ವಿರುದ್ಧ ಪೇ ಸಿಎಂ ಅಭಿಯಾನ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಗೆ ಬಸವರಾಜ ರಾಯರಡ್ಡಿ ಹೇಳಿಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ನಿಶ್ಚಿತವಾಗಿ ಇದು ಸರ್ಕಾರಕ್ಕೆ ಮುಜುಗರದ ವಿಚಾರ. ರಾಯರಡ್ಡಿ ವಿರುದ್ಧ ಪಕ್ಷ ಕ್ರಮ ತೆಗೆದುಕೊಳ್ಳುತ್ತೆ ಅಂತ ಸಚಿವ ಎಂ.ಬಿ ಪಾಟೀಲ್ ಸುಳಿವು ನೀಡಿದ್ದಾರೆ. ರಾಯರೆಡ್ಡಿ ಯಾವ ಅರ್ಥದಲ್ಲಿ ಹೇಳಿದ್ದಾರೆ, ಅವರೇ ವಿವರಣೆ ನೀಡಬೇಕು. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ. ನಿನ್ನೆಯೇ ಯೂಟರ್ನ ಹೊಡೆದ್ರು ಅಂತ ಕೇಳಿದೆ ಅನ್ನೂ ಮೂಲಕ ರಾಯರಡ್ಡಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. https://www.youtube.com/watch?v=M2wNpM7LdHE
ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ 2008 ನವೆಂಬರ್ 26ರಂದು ಮುಂಬೈ ಸರಣಿ ಬಾಂಬ್ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ತವಾವುರ್ ಹುಸೈನ್ ರಾಣಾನನ್ನು ಕೊನೆಗೂ ಭಾರತಕ್ಕೆ ಎಳೆದು ತರಲಾಗಿದೆ. ಅಮೇರಿಕದಿಂದ ಗಡಿಪಾರಾದ ಉಗ್ರ ರಾಣಾನನ್ನು ವಿಶೇಷ ವಿಮಾನದ ಮೂಲಕ ನವದೆಹಲಿಗೆ ತರಲಾಯಿತು.ರಾಣಾನನ್ನು ಕರೆ ತಂದ ವಿಶೇಷ ವಿಮಾನ ಮಧ್ಯಾಹ್ನ 2.50ಕ್ಕೆ ದೆಹಲಿಯ ಪಾಲಂ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಯಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಎನ್ಐಎ ಅಧಿಕಾರಿಗಳು ತವಾವುರ್ ರಾಣಾನನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈಅಲರ್ಟ್ ಮಾಡಲಾಗಿದೆ. ಪಾಕಿಸ್ತಾನ ಮೂಲದ 64 ವರ್ಷದ ರಾಣಾ, ಕೆನಡಾದಲ್ಲಿ ವಾಸವಾಗಿದ್ದ. ಈತನನ್ನು ಅಮೆರಿಕದ ಗುಪ್ತಚರ ಸಂಸ್ಥೆಗಳು ಬಂಧಿಸಿ ಜೈಲಿಗೆ ಅಟ್ಟಿದ್ವು. ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್ ವಜಾ ಮಾಡಿತ್ತು. ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಪಾಕಿಸ್ತಾನಿ ಅಮೆರಿಕನ್ ಪ್ರಜೆ ಡೇವಿಡ್ ಕೋಲ್ಮನ್ ಹೆಡ್ಲಿ…
ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ರಾಜ್ಯ ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಖಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆ ಉದ್ಘಾಟಿಸಿದ ಸಿಎಂ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು. ಕೃಷ್ಣಬೈರೇಗೌಡರು ಕಂದಾಯ ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು…
ಮುಂಬೈ: ಭಾರತದ ಆತಿಥ್ಯ ಕ್ಷೇತ್ರವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಜಾಗತಿಕ ಆತಿಥ್ಯ ಕ್ಷೇತ್ರದ ಅಕ್ಕೊರ್ ಮತ್ತು ಭಾರತದ ಇಂಟರ್ ಗ್ಲೋಬ್ ಜತೆ ಮಹತ್ವದ ಸಹಯೋಗಕ್ಕೆ ಸಹಿ ಹಾಕಲಾಗಿದೆ ಇಂದು ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆತಿಥ್ಯ ಉದ್ಯಮ ಸೃಷ್ಟಿಸಲು ಅವರ ಸಹಯೋಗವನ್ನು ಸದೃಢಗೊಳಿಸುವುದನ್ನು ಪ್ರಕಟಿಸಿದ್ದು ಇದರಿಂದ ಸರಿಸಾಟಿ ಇರದ ಜಾಲ, ಬ್ರಾಂಡ್ ಗಳ ಪೋರ್ಟ್ ಫೋಲಿಯೊ ಮತ್ತು ಎಲ್ಲ ಮಾರುಕಟ್ಟೆ ವಲಯಗಳಲ್ಲೂ ವಿತರಣೆಯನ್ನು ಒದಗಿಸುತ್ತದೆ. ಭಾರತದ ಏರುಗತಿಯಲ್ಲಿರುವ ಆತಿಥ್ಯ ಮಾರುಕಟ್ಟೆಯನ್ನು ಸ್ವಾಧೀನಪಡಿಸಿಕೊಳ್ಳುವ ಮಹತ್ವಾಕಾಂಕ್ಷೆ ಮತ್ತು ಉದ್ಯಮಗಳಲ್ಲಿ ಜಾಗತಿಕ ನಾಯಕರ ಶಕ್ತಿಗಳನ್ನು ಸಂಯೋಜಿಸಿರುವ ಈ ಪ್ಲಾಟ್ ಫಾರಂ 2030ರ ವೇಳೆಗೆ ಅಕ್ಕೊರ್ ಬ್ರಾಂಡ್ಸ್ ಅಡಿಯಲ್ಲಿ 300 ಹೋಟೆಲ್ ಗಳ ಜಾಲ ನಿರ್ಮಿಸುವ ಗುರಿ ಹೊಂದಿದೆ. ಈ ಮಹತ್ತರ ಸಹಯೋಗವು ಪ್ರತಿ ಪಾಲುದಾರರ ವಿಶಿಷ್ಟ ಶಕ್ತಿಗಳನ್ನು ಒಗ್ಗೂಡಿಸುತ್ತದೆ: ಅಕ್ಕೊರ್, ಮುಂಚೂಣಿಯ ಜಾಗತಿಕ ಆತಿಥ್ಯ ಸಮೂಹವಾಗಿದ್ದು ಭಾರತದಲ್ಲಿ ಕಳೆದ ಹಲವು ವರ್ಷಗಳಿಂದ ಪರಿಣಾಮಕಾರಿ ವ್ಯಾಪ್ತಿ ಹೊಂದಿದೆ ಮತ್ತು ಪ್ರಸ್ತುತ ದೇಶದಲ್ಲಿ 71 ಹೋಟೆಲ್ ಗಳನ್ನು ನಿರ್ವಹಿಸುತ್ತಿದ್ದು 40ಕ್ಕೂ…
ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ. ಗುಜರಾತ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಜಾರಿಗೆ ತರುವ ಸಂಬಂಧ ಹೈಕಮಾಂಡ್ ನಾಯಕರಿಂದ ಒಪ್ಪಿಗೆ ಪಡೆದಿದ್ದು, ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಬಳಿಕ ಕೆ.ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷರಾಗಿ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿಯೈನ್ನು ಸಂಪುಟದಲ್ಲಿಅಂಗೀಕರಿಸಲು ತಯಾರಿ ನಡೆದಿದೆ. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ. ಕ್ಯಾಬಿನೆಟ್ ಸಭೆಯ ಕಾರ್ಯಸೂಚಿ ಲಿಸ್ಟ್…
ದೇವನಹಳ್ಳಿ: ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಸಾವಿರಾರು ದಿನಗಳಿಂದ ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ಧರಣಿ ನಡೆಸುತ್ತಿದ್ದ ರೈತರು ಸಚಿವ ಕೆ.ಹೆಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ, ಪೊಲೀಸರು ತಡೆದ ಹಿನ್ನೆಲೆ ವಿಷಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆದಿದೆ. ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಿಂದ ಬೆಂಗಳೂರಿನಲ್ಲಿರುವ ಸಚಿವ ಕೆ.ಹೆಚ್ ಮುನಿಯಪ್ಪ ಮನೆಗೆ ಹೊರಟಿದ್ದ ನೂರಾರು ರೈತರನ್ನು ಪೊಲೀಸರು ತಡೆದಿದ್ದಾರೆ. ಬಸ್ ಮೂಲಕ ಧರಣಿ ಸ್ಥಳದಿಂದ ಹೊರಟಿದ್ದ ನೂರಾರು ರೈತರನ್ನ ತಡೆದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ರೈತರು ಚನ್ನರಾಯಪಟ್ಟಣ-ದೇವನಹಳ್ಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು. ವಿಷ ಸೇವಿಸಿದ ಅನ್ನದಾತರು ಚನ್ನರಾಯಪಟ್ಟಣ ಗ್ರಾಮದಲ್ಲಿ 777 ಎಕರೆ ಭೂಮಿಯನ್ನು ಕೆಐಎಡಿಬಿ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ಸಾವಿರಾರು ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಲು ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ರೈತರು ಹೊರಟಿದ್ಸಬಸ್ ತಡೆದ ಹಿನ್ನೆಲೆಯಲ್ಲಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ…
ಬೆಂಗಳೂರು: ಉದ್ದೇಶಿತ ಬೆಂಗಳೂರಿನ ೨ನೇ ಏರ್ ಪೋರ್ಟನ್ನು ಕನಕಪುರದಲ್ಲೇ ಆರಂಭಿಸಿ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಡೆಗೆ ಕಾಂಗ್ರೆಸ್ ನಲ್ಲೇ ಅಪಸ್ವರ ತೀವ್ರಗೊಂಡಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳ ತಂಡ ಈಗಾಗಲೇ ಕನಕಪುರ ಹಾಗೂ ನೆಲಮಂಗಲ-ಕುಣಿಗಲ್ ಬಳಿ ಉದ್ದೇಶಿತ ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದೆ. ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿರುವಾಗಲೇ ಕಾಂಗ್ರೆಸ್ ನ ಮತ್ತೊಂದು ಬಣ ಡಿ.ಕೆ ಶಿವಕುಮಾರ್ ಗೆ ಟಕ್ಕರ್ ಕೊಡಲು ಮುಂದಾಗಿದೆ. ತುಮಕೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಕನಪುರದಲ್ಲಿ ಹೊಸ ಏರ್ ಪೋರ್ಟ್ ಮಾಡೋದು ಬೇಡ. ನೆಲಮಂಗಲ ಅಥವಾ ಶಿರಾದಲ್ಲಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈಗ ನೆಲಮಂಗಲ ಹೊಸ ಎರ್ ಪೋರ್ಟ್ ಮಾಡಿದರೆ ಮತ್ತಷ್ಟು ಟ್ರಾಫಿಕ್ ಹೆಚ್ಚಾಗುತ್ತದೆ. ಹೀಗಾಗ ಶಿರಾ ಸೂಕ್ತ ಸ್ಥಳ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿದ್ದಾರೆ. ದೇವನಹಳ್ಳಿ ಏರ್ ಪೋರ್ಟ್…
ಆಂಧ್ರ ಉಪಮುಖ್ಯಮಂತ್ರಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಮಗ ಸಿಂಗಾಪುರದಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದು, ಇದೀಗ ಫೋಟೋ ವೈರಲ್ ಆಗುತ್ತಿದೆ. ಪವನ್ ಪುತ್ರ ಮಾರ್ಕ್ ಶಂಕರ್ ಗೆ ಸುಟ್ಟ ಗಾಯಗಳಾಗಿದ್ದು, ನಿನ್ನೆಯೇ ದಂಪತಿ ಸಮೇತ ಪವರ್ ಸ್ಟಾರ್ ಸಿಂಗಾಪುರಕ್ಕೆ ಹಾರಿದ್ದರು, ಇಂದು ಪವನ್ ಸಹೋದರ ಮೆಗಾಸ್ಟಾರ್ ಚಿರಂಜೀವಿ ದಂಪತಿ ಸಿಂಗಾಪುರಕ್ಕೆ ತೆರಳಿ ಮಾರ್ಕ್ ಶಂಕರ್ ಆರೋಗ್ಯ ವಿಚಾರಿಸಿಕೊಂಡಿದ್ದಾರೆ. ಬೆಂಕಿಯ ಅವಘಡದಿಂದ ರಕ್ಷಿಸಲ್ಪಟ್ಟ ಮಾರ್ಕ್ ಶಂಕರ್ ಆಮ್ಲಜನಕ ಮಾಸ್ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪುಟ್ಟ ಮಗುವಿನ ತೋಳಲ್ಲಿ ಗಾಯಗಳಿದ್ದು, ಅದಕ್ಕೆ ಬ್ಯಾಂಡೇಜ್ ಹಾಕಲಾಗಿದೆ. ಈ ನೋವಿನ ನಡುವೆಯೂ ಪವನ್ ಪುತ್ರ ಹೆಬ್ಬೆರಳುಗಳನ್ನು ಮೇಲಕ್ಕೆತ್ತಿ thumbs-up ಸೂಚಿಸಿದ್ದಾರೆ. ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್. ಬೇಸಿಗೆ ಶಿಬಿರಕ್ಕೆ ಸಿಂಗಾಪುರಕ್ಕೆ ತೆರಳಿದ್ದಾಗ ಅಲ್ಲಿ ಅವಘಡ ಸಂಭವಿಸಿದೆ. ಪವನ್ ಕಲ್ಯಾಣ್ಗೆ ಒಟ್ಟು ನಾಲ್ಕು ಮಂದಿ ಮಕ್ಕಳಿದ್ದಾರೆ. ಎರಡನೇ ಪತ್ನಿ ರೇಣು ದೇಸಾಯಿಗೆ ಒಂದು…