ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ 2008 ನವೆಂಬರ್ 26ರಂದು ಮುಂಬೈ ಸರಣಿ ಬಾಂಬ್ ದಾಳಿಯ ಸಂಚುಕೋರರಲ್ಲಿ ಒಬ್ಬನಾದ ತವಾವುರ್ ಹುಸೈನ್ ರಾಣಾನನ್ನು ಕೊನೆಗೂ ಭಾರತಕ್ಕೆ ಎಳೆದು ತರಲಾಗಿದೆ. ಅಮೇರಿಕದಿಂದ ಗಡಿಪಾರಾದ ಉಗ್ರ ರಾಣಾನನ್ನು ವಿಶೇಷ ವಿಮಾನದ ಮೂಲಕ ನವದೆಹಲಿಗೆ ತರಲಾಯಿತು.ರಾಣಾನನ್ನು ಕರೆ ತಂದ ವಿಶೇಷ ವಿಮಾನ ಮಧ್ಯಾಹ್ನ 2.50ಕ್ಕೆ ದೆಹಲಿಯ ಪಾಲಂ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಯಿತು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಎನ್ಐಎ ಅಧಿಕಾರಿಗಳು ತವಾವುರ್ ರಾಣಾನನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ. ಹೀಗಾಗಿ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈಅಲರ್ಟ್ ಮಾಡಲಾಗಿದೆ. ಪಾಕಿಸ್ತಾನ ಮೂಲದ 64 ವರ್ಷದ ರಾಣಾ, ಕೆನಡಾದಲ್ಲಿ ವಾಸವಾಗಿದ್ದ. ಈತನನ್ನು ಅಮೆರಿಕದ ಗುಪ್ತಚರ ಸಂಸ್ಥೆಗಳು ಬಂಧಿಸಿ ಜೈಲಿಗೆ ಅಟ್ಟಿದ್ವು. ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ರಾಣಾ ಅಮೆರಿಕದ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಆತನ ಅರ್ಜಿಯನ್ನು ಕೋರ್ಟ್ ವಜಾ ಮಾಡಿತ್ತು. ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಪಾಕಿಸ್ತಾನಿ ಅಮೆರಿಕನ್ ಪ್ರಜೆ ಡೇವಿಡ್ ಕೋಲ್ಮನ್ ಹೆಡ್ಲಿ…
Author: Author AIN
ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ರಾಜ್ಯ ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಖಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆ ಉದ್ಘಾಟಿಸಿದ ಸಿಎಂ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು. ಕೃಷ್ಣಬೈರೇಗೌಡರು ಕಂದಾಯ ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು…
ಮುಂಬೈ: ಭಾರತದ ಆತಿಥ್ಯ ಕ್ಷೇತ್ರವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಜಾಗತಿಕ ಆತಿಥ್ಯ ಕ್ಷೇತ್ರದ ಅಕ್ಕೊರ್ ಮತ್ತು ಭಾರತದ ಇಂಟರ್ ಗ್ಲೋಬ್ ಜತೆ ಮಹತ್ವದ ಸಹಯೋಗಕ್ಕೆ ಸಹಿ ಹಾಕಲಾಗಿದೆ ಇಂದು ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆತಿಥ್ಯ ಉದ್ಯಮ ಸೃಷ್ಟಿಸಲು ಅವರ ಸಹಯೋಗವನ್ನು ಸದೃಢಗೊಳಿಸುವುದನ್ನು ಪ್ರಕಟಿಸಿದ್ದು ಇದರಿಂದ ಸರಿಸಾಟಿ ಇರದ ಜಾಲ, ಬ್ರಾಂಡ್ ಗಳ ಪೋರ್ಟ್ ಫೋಲಿಯೊ ಮತ್ತು ಎಲ್ಲ ಮಾರುಕಟ್ಟೆ ವಲಯಗಳಲ್ಲೂ ವಿತರಣೆಯನ್ನು ಒದಗಿಸುತ್ತದೆ. ಭಾರತದ ಏರುಗತಿಯಲ್ಲಿರುವ ಆತಿಥ್ಯ ಮಾರುಕಟ್ಟೆಯನ್ನು ಸ್ವಾಧೀನಪಡಿಸಿಕೊಳ್ಳುವ ಮಹತ್ವಾಕಾಂಕ್ಷೆ ಮತ್ತು ಉದ್ಯಮಗಳಲ್ಲಿ ಜಾಗತಿಕ ನಾಯಕರ ಶಕ್ತಿಗಳನ್ನು ಸಂಯೋಜಿಸಿರುವ ಈ ಪ್ಲಾಟ್ ಫಾರಂ 2030ರ ವೇಳೆಗೆ ಅಕ್ಕೊರ್ ಬ್ರಾಂಡ್ಸ್ ಅಡಿಯಲ್ಲಿ 300 ಹೋಟೆಲ್ ಗಳ ಜಾಲ ನಿರ್ಮಿಸುವ ಗುರಿ ಹೊಂದಿದೆ. ಈ ಮಹತ್ತರ ಸಹಯೋಗವು ಪ್ರತಿ ಪಾಲುದಾರರ ವಿಶಿಷ್ಟ ಶಕ್ತಿಗಳನ್ನು ಒಗ್ಗೂಡಿಸುತ್ತದೆ: ಅಕ್ಕೊರ್, ಮುಂಚೂಣಿಯ ಜಾಗತಿಕ ಆತಿಥ್ಯ ಸಮೂಹವಾಗಿದ್ದು ಭಾರತದಲ್ಲಿ ಕಳೆದ ಹಲವು ವರ್ಷಗಳಿಂದ ಪರಿಣಾಮಕಾರಿ ವ್ಯಾಪ್ತಿ ಹೊಂದಿದೆ ಮತ್ತು ಪ್ರಸ್ತುತ ದೇಶದಲ್ಲಿ 71 ಹೋಟೆಲ್ ಗಳನ್ನು ನಿರ್ವಹಿಸುತ್ತಿದ್ದು 40ಕ್ಕೂ…
ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಆಗಾಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಗೆ ಕೊನೆಗೂ ಮೋಕ್ಷ ಸಿಗುವ ಲಕ್ಷಣ ಕಾಣುತ್ತಿದೆ. ಗುಜರಾತ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಜಾರಿಗೆ ತರುವ ಸಂಬಂಧ ಹೈಕಮಾಂಡ್ ನಾಯಕರಿಂದ ಒಪ್ಪಿಗೆ ಪಡೆದಿದ್ದು, ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್ ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಕಳೆದ 2015 ರ ಏಪ್ರಿಲ್ 11ರಿಂದ ಮೇ. 30ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗಿತ್ತು. ಬಳಿಕ ಕೆ.ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷರಾಗಿ ಸಲ್ಲಿಸಿದ್ದ ದತ್ತಾಂಶ ಅಧ್ಯಯನ ವರದಿಯೈನ್ನು ಸಂಪುಟದಲ್ಲಿಅಂಗೀಕರಿಸಲು ತಯಾರಿ ನಡೆದಿದೆ. ಆ ಮೂಲಕ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಿ ಗಣಕೀಕರಣಗೊಳಿಸಲಾಗಿದೆ. ಕ್ಯಾಬಿನೆಟ್ ಸಭೆಯ ಕಾರ್ಯಸೂಚಿ ಲಿಸ್ಟ್…
ದೇವನಹಳ್ಳಿ: ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಸಾವಿರಾರು ದಿನಗಳಿಂದ ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ಧರಣಿ ನಡೆಸುತ್ತಿದ್ದ ರೈತರು ಸಚಿವ ಕೆ.ಹೆಚ್ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ, ಪೊಲೀಸರು ತಡೆದ ಹಿನ್ನೆಲೆ ವಿಷಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ ಘಟನೆ ನಡೆದಿದೆ. ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಿಂದ ಬೆಂಗಳೂರಿನಲ್ಲಿರುವ ಸಚಿವ ಕೆ.ಹೆಚ್ ಮುನಿಯಪ್ಪ ಮನೆಗೆ ಹೊರಟಿದ್ದ ನೂರಾರು ರೈತರನ್ನು ಪೊಲೀಸರು ತಡೆದಿದ್ದಾರೆ. ಬಸ್ ಮೂಲಕ ಧರಣಿ ಸ್ಥಳದಿಂದ ಹೊರಟಿದ್ದ ನೂರಾರು ರೈತರನ್ನ ತಡೆದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ರೈತರು ಚನ್ನರಾಯಪಟ್ಟಣ-ದೇವನಹಳ್ಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು. ವಿಷ ಸೇವಿಸಿದ ಅನ್ನದಾತರು ಚನ್ನರಾಯಪಟ್ಟಣ ಗ್ರಾಮದಲ್ಲಿ 777 ಎಕರೆ ಭೂಮಿಯನ್ನು ಕೆಐಎಡಿಬಿ ಭೂಸ್ವಾಧೀನ ಮಾಡುತ್ತಿರುವುದನ್ನು ವಿರೋಧಿಸಿ ಸಾವಿರಾರು ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಲು ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ರೈತರು ಹೊರಟಿದ್ಸಬಸ್ ತಡೆದ ಹಿನ್ನೆಲೆಯಲ್ಲಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ…
ಬೆಂಗಳೂರು: ಉದ್ದೇಶಿತ ಬೆಂಗಳೂರಿನ ೨ನೇ ಏರ್ ಪೋರ್ಟನ್ನು ಕನಕಪುರದಲ್ಲೇ ಆರಂಭಿಸಿ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಡೆಗೆ ಕಾಂಗ್ರೆಸ್ ನಲ್ಲೇ ಅಪಸ್ವರ ತೀವ್ರಗೊಂಡಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಗಳ ತಂಡ ಈಗಾಗಲೇ ಕನಕಪುರ ಹಾಗೂ ನೆಲಮಂಗಲ-ಕುಣಿಗಲ್ ಬಳಿ ಉದ್ದೇಶಿತ ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದೆ. ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿರುವಾಗಲೇ ಕಾಂಗ್ರೆಸ್ ನ ಮತ್ತೊಂದು ಬಣ ಡಿ.ಕೆ ಶಿವಕುಮಾರ್ ಗೆ ಟಕ್ಕರ್ ಕೊಡಲು ಮುಂದಾಗಿದೆ. ತುಮಕೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಕನಪುರದಲ್ಲಿ ಹೊಸ ಏರ್ ಪೋರ್ಟ್ ಮಾಡೋದು ಬೇಡ. ನೆಲಮಂಗಲ ಅಥವಾ ಶಿರಾದಲ್ಲಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈಗ ನೆಲಮಂಗಲ ಹೊಸ ಎರ್ ಪೋರ್ಟ್ ಮಾಡಿದರೆ ಮತ್ತಷ್ಟು ಟ್ರಾಫಿಕ್ ಹೆಚ್ಚಾಗುತ್ತದೆ. ಹೀಗಾಗ ಶಿರಾ ಸೂಕ್ತ ಸ್ಥಳ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಹೇಳಿದ್ದಾರೆ. ದೇವನಹಳ್ಳಿ ಏರ್ ಪೋರ್ಟ್…
ಆಂಧ್ರ ಉಪಮುಖ್ಯಮಂತ್ರಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಮಗ ಸಿಂಗಾಪುರದಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದು, ಇದೀಗ ಫೋಟೋ ವೈರಲ್ ಆಗುತ್ತಿದೆ. ಪವನ್ ಪುತ್ರ ಮಾರ್ಕ್ ಶಂಕರ್ ಗೆ ಸುಟ್ಟ ಗಾಯಗಳಾಗಿದ್ದು, ನಿನ್ನೆಯೇ ದಂಪತಿ ಸಮೇತ ಪವರ್ ಸ್ಟಾರ್ ಸಿಂಗಾಪುರಕ್ಕೆ ಹಾರಿದ್ದರು, ಇಂದು ಪವನ್ ಸಹೋದರ ಮೆಗಾಸ್ಟಾರ್ ಚಿರಂಜೀವಿ ದಂಪತಿ ಸಿಂಗಾಪುರಕ್ಕೆ ತೆರಳಿ ಮಾರ್ಕ್ ಶಂಕರ್ ಆರೋಗ್ಯ ವಿಚಾರಿಸಿಕೊಂಡಿದ್ದಾರೆ. ಬೆಂಕಿಯ ಅವಘಡದಿಂದ ರಕ್ಷಿಸಲ್ಪಟ್ಟ ಮಾರ್ಕ್ ಶಂಕರ್ ಆಮ್ಲಜನಕ ಮಾಸ್ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪುಟ್ಟ ಮಗುವಿನ ತೋಳಲ್ಲಿ ಗಾಯಗಳಿದ್ದು, ಅದಕ್ಕೆ ಬ್ಯಾಂಡೇಜ್ ಹಾಕಲಾಗಿದೆ. ಈ ನೋವಿನ ನಡುವೆಯೂ ಪವನ್ ಪುತ್ರ ಹೆಬ್ಬೆರಳುಗಳನ್ನು ಮೇಲಕ್ಕೆತ್ತಿ thumbs-up ಸೂಚಿಸಿದ್ದಾರೆ. ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೋವಾ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್. ಬೇಸಿಗೆ ಶಿಬಿರಕ್ಕೆ ಸಿಂಗಾಪುರಕ್ಕೆ ತೆರಳಿದ್ದಾಗ ಅಲ್ಲಿ ಅವಘಡ ಸಂಭವಿಸಿದೆ. ಪವನ್ ಕಲ್ಯಾಣ್ಗೆ ಒಟ್ಟು ನಾಲ್ಕು ಮಂದಿ ಮಕ್ಕಳಿದ್ದಾರೆ. ಎರಡನೇ ಪತ್ನಿ ರೇಣು ದೇಸಾಯಿಗೆ ಒಂದು…
ರಶ್ಮಿಕಾ ಮಂದಣ್ಣ ಹ್ಯಾಟ್ರಿಕ್ ಗೆಲುವು ಬಳಿಕ ಸಿಕಂದರ್ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇತ್ತು. ಪುಷ್ಪ, ಅನಿಮಲ್ ಹಾಗೂ ಛಾವಾ ರೀತಿ ಸಿಕಂದರ್ ಸೂಪರ್ ಡೂಪರ್ ಹಿಟ್ ಆಗುತ್ತೇ ಎಂಬ ಭರವಸೆ ಸುಳ್ಳಾಗಿದೆ. ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಪ್ರೇಕ್ಷಕರಿಂದ ಸೈ ಎನಿಸಿಕೊಳ್ಳುವಲ್ಲಿ ಸೋತಿದೆ. ಇದು ರಶ್ಮಿಕಾ ಕರಿಯರ್ ಗೆ ದೊಡ್ಡ ಪೆಟ್ಟು ಬಿದ್ದಂತಾಗಿದೆ ಎಂಬ ಮಾತು ಕೇಳಿ ಬರ್ತಿದೆ. ಸಿಕಂದರ್ ಸೋಲಿನ ನಡುವೆ ಶ್ರೀವಲ್ಲಿ ಅನಿಮಲ್ ಡೈರೆಕ್ಟರ್ ಶಾಕ್ ಕೊಟ್ಟಿದ್ದಾರೆ. ಪ್ರಭಾಸ್ ಚಿತ್ರದಿಂದ ರಶ್ಮಿಕಾ ಕಿಕ್ ಔಟ್? ಸಿಕಂದರ್ ಸಿನಿಮಾ ಬಾಕ್ಸಾಫೀಸ್ ನಲ್ಲಿ ಹೀನಾಯ ಸೋತಿದೆ. ಹೀಗಾಗಿ ರಶ್ಮಿಕಾ ಕೈಯಲ್ಲಿದ್ದ ಪ್ರಾಜೆಕ್ಟ್ ವೊಂದರು ಜಾರಿ ಹೋಗಿದೆ. ಅನಿಮಲ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಪ್ರಭಾಸ್ ಗೆ ಸ್ಪಿರಿಟ್ ಎಂಬ ಚಿತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣರನ್ನು ನಾಯಕಿಯಾಗಿ ಸಂದೀಪ್ ಆಯ್ಕೆ ಮಾಡಿದ್ದಾರಂತೆ. ಆದರೀಗ ಸಿಕಂದರ್ ಸೋಲಿನ ಬಳಿಕ ರಶ್ಮಿಕಾ ಕೈಬಿಟ್ಟು ಚಿತ್ರತಂಡ ಬೇರೆ ನಾಯಕಿಯರ…
ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಗುಣಮಟ್ಟದ ಕಾಮಗಾರಿ ಆಗುತ್ತಿಲ್ಲ. ಇದೊಂದು ಭ್ರಷ್ಟವಾದ ರಾಜ್ಯವಾದ ವ್ಯವಸ್ಥೆ ಆಗಿದೆ ಎಂದು ರಾಜ್ಯ ಸರ್ಕಾರವನ್ನೇ ಭ್ರಷ್ಟ ಸರ್ಕಾರ ಎಂದು ಟೀಕಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಲ್ಟಾ ಹೊಡೆದಿದ್ದಾರೆ. ನಾನು ನಿನ್ನೆ ದಿನ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಮ್ಮ ಸರ್ಕಾರದಲ್ಲಿ ಡಾ. ನಂಜುಂಡಪ್ಪ ವರದಿಯ ಅನುಷ್ಠಾನ ಆದ ಮೇಲೆ ಏನೆಲ್ಲಾ ಆಗಿದೆ ಎಂದು ಹೇಳಿದ್ದೆ. ಕಲ್ಯಾಣ ಕರ್ನಾಟಕದಲ್ಲಿ ಗುಣಮಟ್ಟದ ಕಾಮಗಾರಿ ಆಗ್ತಿಲ್ಲ. ಹಳೇ ಮೈಸೂರು ಭಾಗದಲ್ಲಿ ಗುಣಮಟ್ಟ ಆಗ್ತಿದೆ ಅಂತಾ ಹೇಳಿದೆ. ಇದೊಂದು ಭ್ರಷ್ಟವಾದ ರಾಜ್ಯವಾದ ವ್ಯವಸ್ಥೆ ಆಗಿದೆ ಅಂತಾ ಹೇಳಿದ್ದೇನೆ. ಈ ವ್ಯವಸ್ಥೆ ಸರಿಯಲ್ಲ, ಸರಿಯಾಗಿ ಕೆಲಸ ಮಾಡಿ ಅಂತಾ ಅಧಿಕಾರಿಗಳಿಗೆ ಹೇಳಿದೆ. ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ರಾಯರಡ್ಡಿ ಸಮರ್ಥನೆ ಮಾಡಿಕೊಂಡಿದ್ದಾರೆ. ನಾನು ಹೇಳಿದ್ದು ಭ್ರಷ್ಟಾಚಾರ ಕ್ಕೆ ಆಸ್ಪದವಿಲ್ಲದಂತೆ ಉತ್ತಮ ವ್ಯವಸ್ಥೆ ಕೊಡಿ ಎಂದು ಹೇಳಿದ್ದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಡಿತಿದೆ, ಅದನ್ನು ಹತೋಟಿಗೆ ತರಬೇಕು. ಕರ್ನಾಟಕಕ್ಕೆ…
ಬಾಲಿವುಡ್ ಚಿತ್ರರಂಗದ ಮೋಸ್ಟ್ ಕಾಂಟ್ರವರ್ಸಿಯಲ್ ಕ್ವೀನ್ ಅಂದ್ರೆ ಎಲ್ಲರೂ ಬೊಟ್ಟು ಮಾಡೋದು ಕ್ವೀನ್ ಕಂಗನಾ ರಣಾವತ್ ಕಡೆಗೆ. ಕಂಗನಾ ಈಗಂತೂ ನಟಿ ಜೊತೆಗೆ ಸಂಸದೆಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಇದರ ಜೊತೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಹೊಸ ಕೆಫೆ ತೆರೆದಿದ್ದಾರಂತೆ. ಆದರೆ ಬಿಜೆಪಿಯ ಸಂಸದೆಗೆ ಹಿಮಾಚಲ ಪ್ರದೇಶದ ಕಾಂಗ್ರೆಸ್ ಕರೆಂಟ್ ಶಾಕ್ ಕೊಟ್ಟಿದೆ. ಮನಾಲಿಯ ಕಂಗಾನ ಮನೆ ಇದೆ. ಆದರೆ ಅವರು ಅಲ್ಲಿ ವಾಸವಿಲ್ಲ. ಆದರೂ ಒಂದು ಲಕ್ಷ ಕರೆಂಟ್ ಬಿಲ್ ಬಂದಿದೆ. ಇದನ್ನು ನೋಡಿ ಕಂಗನಾ ರಂಗ್ ಆಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಅಲ್ಲಿನ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ತಿಂಗಳು ನಾನು ವಾಸಿಸದ ಮನಾಲಿಯ ನನ್ನ ಮನೆಗೆ 1 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದೆ. ಇದು ತುಂಬಾ ಶೋಚನೀಯ ಸ್ಥಿತಿಯಾಗಿದೆ. ನಾನು ಅದನ್ನು ನೋಡಿದೆ. ಇಲ್ಲಿ ಏನಾಗುತ್ತಿದೆಯೋ ಅದು ನಾಚಿಗೆ ಪಡುವ ಸಂಗತಿ. ಆದರೆ…