Author: Author AIN

ಬೆಂಗಳೂರು: ʻಈ ಬಾರಿಯ ಬಿಬಿಎಂಪಿ ಬಜೆಟ್ ನಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಹಣ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ ನೀಡುವ ಯೋಜನೆ ತರಲಾಗಿದೆ. ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು. “ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ  6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ ಕಲ್ಯಾಣಕ್ಕೆ ರೂ. 64 ಕೋಟಿ…

Read More

ಬೆಲೆ ಏರಿಕೆಯಿಂದ ಬೆಂದಿರುವ ಜನತೆಗೆ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಎರಡು ರೂಗಳಷ್ಟು ಹೆಚ್ಚಿಸಿದೆ. ಹೀಗಾಗಿ ರಾಜ್ಯದ ಜನರಿಗೆ ಡಬಲ್ ಶಾಕ್ ಎದುರಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಡೀಸೆಲ್ ಮೇಲೆ ಎರಡು ರೂ ಹೆಚ್ಚುವರಿ ತೆರಿಗೆ ಹೇರಿತ್ತು. ಈಗ ಕೇಂದ್ರದಿಂದ ಎರಡು ರೂ ಅಬಕಾರಿ ಸುಂಕ ಹೆಚ್ಚಳ ಆಗಿದೆ. ಗ್ರಾಹಕರಿಗೆ ಹೊರೆ ಆಗಲ್ಲ ಕೇಂದ್ರ ಸ್ಪಷ್ಟನೆ! ಎರಡು ರೂ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ ಗ್ರಾಹಕರ ಮೇಲೆ ಯಾವುದೇ ಹೊರೆಯಾಗುವುದಿಲ್ಲ ಎಂದು ಕೇಂದ್ರ ಸ್ಪಷ್ಟನೆ ಕೊಟ್ಟಿದೆ. ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 2 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಏಪ್ರಿಲ್ 8, 2025 ರಿಂದ ಹೊಸ…

Read More

ಗೇಮ್ ಚೇಂಜರ್ ಬಳಿಕ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಭತ್ತಳಿಕೆಯಿಂದ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ ಗ್ಲಿಂಪ್ಸ್ ಯೂಟ್ಯೂಬ್ ಅಂಗಳದಲ್ಲಿ ಧೂಳ್ ಎಬ್ಬಿಸುತ್ತಿದೆ. ರಾಮನವಮಿ ಪ್ರಯುಕ್ತ ನಿನ್ನೆ ಬಿಡುಗಡೆಯಾದ ಪೆದ್ದಿ ಝಲಕ್ ಹಳೆ ರೆಕಾರ್ಡ್ ಗಳೆಲ್ಲವನ್ನೂ ಉಡೀಸ್ ಮಾಡುತ್ತಿದೆ. ರಾಮ್ ಆಕ್ಟಿಂಗ್, ಬುಚ್ಚಿ ಬಾಬು ಟೇಕಿಂಗ್ ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದಾರೆ. ಪೆದ್ದಿ ಫಸ್ಟ್ ಶಾರ್ಟ್ ಬಿಡುಗಡೆಯಾದ 24 ಗಂಟೆಯಲ್ಲಿ ಬರೋಬ್ಬರಿ 36.5 ಮಿಲಿಯನ್ಸ್ ಕಂಡು ರಾಕಿಭಾಯ್ ಟಾಕ್ಸಿಕ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯಾಷನಲ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆಯಾಗಿತ್ತು. ಟಾಕ್ಸಿಕ್ ಬಿಡುಗಡೆಯಾದ 24 ಗಂಟೆಯಲ್ಲಿ ಬರೋಬ್ಬರಿ 36 ಮಿಲಿಯನ್ಸ್ ವೀವ್ಸ್ ಕಂಡಿತ್ತು. ಈ ಮೂಲಕ ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಟೀಸರ್ ಎಂಬ ರೆಕಾರ್ಡ್ ಯಶ್ ಚಿತ್ರಕ್ಕೆ ಸೇರಿತ್ತು. ಆದರೆ ರಾಮ್ ಚರಣ್ ಪೆದ್ದಿ ತುಣುಕು 24 ಗಂಟೆಯಲ್ಲಿಯ 36.5 ಮಿಲಿಯನ್ಸ್ ವೀಕ್ಷಣೆ ಕಂಡಿದೆ. 50 ಸಾವಿರಕ್ಕೂ ಹೆಚ್ಚು ವೀವ್ಸ್…

Read More

‌ಬೆಂಗಳೂರು: ಬೆಲೆ ಏರಿಕೆ, ಅನುದಾನದ ದುರ್ಬಳಕೆ ಆರೋಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಆರಂಭಸಿದ್ದಾರೆ. ಬಿಜೆಪಿ ನಾಯಕರ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಟಕ್ಕರ್‌ ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ, ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ಕುಟುಕಿದಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್ ʼನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…

Read More

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಭಾರತೀಯ ಚಿತ್ರರಂಗದ ದುಬಾರಿ ನಟರಲ್ಲಿ ಒಬ್ಬರು. ಒಂದು ಸಿನಿಮಾಗೆ 100 ಕೋಟಿ ಅಧಿಕ ಸಂಭಾವನೆ ಪಡೆಯುವ ಬಾದ್ ಷಾ ಮನ್ನತ್ ನಿವಾಸವೇ ಬರೋಬ್ಬರಿ 100 ರಿಂದ 200 ಕೋಟಿ ಬೆಲೆ ಬಾಳುತ್ತದೆಯಂತೆ. ಮುಂಬೈನ ಬಾಂದ್ರಾದಲ್ಲಿರುವ ಈ ಬಿಲ್ಡಿಂಗ್ ಬರೋಬ್ಬರಿ 6 ಅಂತಸ್ತನ್ನು ಹೊಂದಿದ್ದು, 27 ಸಾವಿರ ಚದರ ಅಡಿಗಳಿಷ್ಟಿದೆಯಂತೆ. ವಿಂಟೇಜ್ ಹಾಗೂ ಮಾರ್ಡನ್ ಅರ್ಟಿಕೆಕ್ಟ್ ಸಮ್ಮಿಶ್ರಣವಾಗಿರುವ ಮನ್ನತ್ ನಿವಾಸವನ್ನು ಶಾರುಖ್ ಹಾಗೂ ಇಡೀ ಕುಟುಂಬ ತೊರೆದಿದೆ ಎಂಬ ಸುದ್ದಿ ಮುಂಬೈ ಅಂಗಳದಲ್ಲಿ ಜೋರಾಗಿದೆ. ದೇಶ-ವಿದೇಶಗಳಲ್ಲಿ ಕೋಟ್ಯಾನು ಕೋಟಿ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಐಷಾರಾಮಿ ಮನ್ನತ್ ನಿವಾಸ ತೊರೆಯುವುದಕ್ಕೂ ಕಾರಣವಿದೆ. ಈ ನಿವಾಸದ ನವೀಕರಣ ಕೆಲಸಗಳು ಆರಂಭವಾಗಿದ್ದು, ಹೀಗಾಗಿ ಶಾರುಖ್ ಮುಂಬೈನ ಪಾಲಿ ಹಿಲ್ಸ್‌ನಲ್ಲಿರುವ ಬಾಲಿವುಡ್ನ ಭಗ್ನಾನಿ ಕುಟುಂಬದ ಎರಡು ಐಷಾರಾಮಿ ಡ್ಯೂಪ್ಲೆಕ್ಸ್ ಅಪಾರ್ಟ್ಮೆಂಟ್ಗಳನ್ನು ಬಾಡಿಗೆಗೆ ಪಡೆದಿದ್ದಾರೆ. ಈ ಅಪಾರ್ಟ್ಮೆಂಟ್ಗಳಲ್ಲಿ ಒಂದು ನಿರ್ಮಾಪಕ ಜಾಕಿ ಭಗ್ನಾನಿ ಅವರಿಗೆ ಸೇರಿದ್ದು, ಇನ್ನೊಂದು ಅವರ ಸಹೋದರಿ ದೀಪ್ಶಿಖಾ ದೇಶ್ಮುಖ್…

Read More

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ-1 ಸಿನಿಮಾದ ಅಕ್ಟೋಬರ್‌ 2ರಂದು ವಿಶ್ವಾದ್ಯಂತ ತೆರೆಗೆ ಬರ್ತಿದೆ. ಅದಕ್ಕಾಗಿ ಚಿತ್ರತಂಡ ಭರದಿಂದ ಶೂಟಿಂಗ್‌ ನಡೆಸುತ್ತಿದೆ. ಆದರೆ ಕಾಂತಾರ ಪ್ರೀಕ್ವೆಲ್‌ ಸೆಟ್ಟೇರಿ ಶೂಟಿಂಗ್‌ ಅಖಾಡಕ್ಕೆ ಇಳಿದಾಗಿನಿಂದಲೂ ಭಾರೀ ವಿಘ್ನಗಳು ಎದುರಾಗುತ್ತಿವೆ. ಈ ವಿಘ್ನಗಳ ನಿವಾರಣೆಗೆ ರಿಷಬ್‌ ಶೆಟ್ಟಿ ಮುಂದಾದ್ರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಬಹು ನಿರೀಕ್ಷಿತ ಕಾಂತಾರ- 2 ಚಿತ್ರಕ್ಕೆ ಎದುರಾಗಿರುವ ವಿಘ್ನಗಳ ದಮನಕ್ಕೆ ರಿಷಬ್‌ ಶೆಟ್ಟಿ ಪಂಜುರ್ಲಿ ನೇಮಕ್ಕೆ ಬಂದು ಬೇಡಿಕೊಂಡಿದ್ದಾರೆ. ನಸುಕಿನ ಜಾವ 4 ಗಂಟೆವರೆಗೂ ದೈವದ ಉತ್ಸವದಲ್ಲಿ ರಿಷಬ್‌ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಭಾಗಿಯಾಗಿದ್ದಾರೆ.  ಕದ್ರಿ ಬಾರೆಬೈಲ್ ವಾರಾಹಿ ಪಂಜುರ್ಲಿ, ಜಾರಂದಾಯ ದೈವದ ಉತ್ಸವದಲ್ಲಿ ರಿಷಬ್‌ ದಂಪತಿ ಮಕ್ಕಳ ಸಮೇತ ಪಾಲ್ಗೊಂಡಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ, ವಾರಾಹಿ ಪಂಜುರ್ಲಿ ದೈವದ ಬಳಿ ಕಷ್ಟ ಹೇಳಿಕೊಂಡಿದ್ದಾರೆ. ʼನಿನಗೆ ದುಶ್ಮನ್ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ,…

Read More

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೆದ್ದಿ. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಭಾರೀ ಸದ್ದು ಮಾಡಿದೆ. ಇದೀಗ ಚಿತ್ರತಂಡ ರಾಮನವಮಿ ಪ್ರಯುಕ್ತ ಫಸ್ಟ್ ಝಲಕ್ ರಿಲೀಸ್ ಮಾಡಿದ್ದು, ಜೊತೆಗೆ ಬಿಡುಗಡೆ ದಿನಾಂಕ ಕೂಡ ರಿವೀಲ್ ಮಾಡಲಾಗಿದೆ. ಪವರ್ ಫುಲ್ ಡೈಲಾಗ್ ಹೊಡೆಯುತ್ತಾ ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ಭರ್ಜರಿ ಆಕ್ಷನ್ ಮಾಡುತ್ತಾ ರಗಡ್ ಲುಕ್ ನಲ್ಲಿ ರಾಮ್ ಚರಣ್ ಎಂಟ್ರಿ ಕೊಟ್ಟಿದ್ದಾರೆ. ರಾಮ್ ಅಬ್ಬರ ನೋಡಿ ಫ್ಯಾನ್ಸ್ ಪೆದ್ದಿ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಚೆರ್ರಿ ಹುಟ್ಟುಹಬ್ಬದ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ, ಮುಂದಿನ ವರ್ಷದ ಮಾರ್ಚ್ 27ಕ್ಕೆ ಪೆದ್ದಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ರಾಮ್ ಚರಣ್ ಗೆ ಜೋಡಿಯಾಗಿ ಪೆದ್ದಿಯಲ್ಲಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್…

Read More

ರಶ್ಮಿಕಾ ಮಂದಣ್ಣ ನಿನ್ನೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ದೂರದ ಓಮನ್ ದೇಶದಲ್ಲಿ ತಮ್ಮ 29ನೇ ಜನ್ಮೋತ್ಸವವನ್ನು ಸೆಲೆಬ್ರೆಟ್ ಮಾಡ್ಕೊಂಡಿದ್ದಾರೆ. ಸಿಕಂದರ್ ಸಿನಿಮಾ ಸೋಲಿಗೆ ತಲೆಕೆಡಿಸಿಕೊಳ್ಳದೇ ಧಾಮ್ ಧೂಮಾಗಿ ಬರ್ತಡೇ ಆಚರಿಸಿಕೊಂಡಿದ್ದಾರೆ. ಬೀಚ್ ನಲ್ಲಿ ಕುಳಿತು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಈ ಫೋಟೋ ನೋಡಿದ ಫ್ಯಾನ್ಸ್ ಖುಷಿಯಾಗಿದ್ದಾರೆ. ಅಷ್ಟಕ್ಕೂ ಈ ಫೋಟೋಗಳನ್ನು ಸೆರೆಹಿಡಿದವರು ವಿಜಯ್ ದೇವರಕೊಂಡನಾ ಎಂದು ಕೇಳುತ್ತಿದ್ದಾರೆ. ರಶ್ಮಿಕಾ ವಿಜಯ್ ನಡುವೆ ಏನೋ ಇದೆ ಅನ್ನೋದು ಸಿನಿರಸಿಕರು ಕುತೂಹಲ. ಕದ್ದು ಮುಚ್ಚಿ ಟ್ರಿಪ್, ಡೇಟಿಂಗ್, ಔಟಿಂಗ್ ಹೋಗುವ ಜೋಡಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದು ಇದೇ. ಹೀಗಾಗಿ ರಶ್ಮಿಕಾ ವಿಜಯ್ ಪ್ರೀತಿಯಲ್ಲಿ ಬಿದಿದ್ದಾರೆ ಎಂಬ ಗುಲ್ಲಿದೆ. ಸದ್ಯ ಓಮನ್ ನಲ್ಲಿರುವ ರಶ್ಮಿಕಾಗೆ ವಿಜಯ್ ಸಾಥ್ ಕೊಟ್ಟಿದ್ದಾರೆ ಅನ್ನೋ ಮಾತಿದೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಹೋಟೆಲ್ ವೊಂದರಲ್ಲಿ ಲಾಂಚ್ ಡೇಟಿಂಗ್ ನಲ್ಲಿ ಈ ಜೋಡಿ ತಗ್ಲಾಕೊಂಡಿದ್ದರು. ಆದ್ರೂ ನಮ್ಮ ನಡುವೆ ಏನೂ ಇಲ್ಲ ಅಂತಾನೇ ಅವರು ಪ್ಯಾಚಪ್ ಮಾಡಿಕೊಳ್ಳುತ್ತಾರೆ. ಕಿಂಗ್ ಡಮ್ ಚಿತ್ರದಲ್ಲಿ…

Read More

ಎಸ್ ಎಸ್ ರಾಜಮೌಳಿ ಈ ಹೆಸರಿಗೆ ಇಂಟ್ರೂಡಕ್ಷನ್ ಕೊಡುವ ಅಗತ್ಯವಿಲ್ಲ ಬಿಡಿ. ಭಾರತೀಯ ಚಿತ್ರರಂಗದಲ್ಲಿ ನಯಾ ಟ್ರೆಂಡ್ ಸೆಟ್ ಮಾಡಿದ ಟ್ರೆಂಡ್ ಸೆಟ್ಟರ್, ಆಸ್ಕರ್ ಗೆದ್ದ ಅದ್ಭುತ ಸಿನಿಮಾ ಮೇಕರ್ ಜಕ್ಕಣ್ಣ ತಾವೇ ಸೆಟ್ ಮಾಡಿದ ಟ್ರೆಂಡ್ ನ್ನು ಬ್ರೇಕ್ ಮಾಡ್ತಿದ್ದಾರಂತೆ. ಎರಡು ಭಾಗದಲ್ಲಿ ಸಿನಿಮಾ ಹೇಳುವ, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ನ್ನು ಹುಟ್ಟುಹಾಕಿದ್ದೇ ಇದೇ ಮೌಳಿ. ಆದ್ರೀಗ ರಾಜಮೌಳಿ ಈ ಕಾನ್ಸೆಪ್ಟ್ ನ್ನು ಬದಲಿಸಲು ಮುಂದಾಗಿದ್ದಾರಂತೆ. ಜಕ್ಕಣ್ಣ ಹಾಗೂ ಪ್ರಿನ್ಸ್ ಕಾಂಬಿನೇಷನ್ ಮೆಗಾ ಪ್ರಾಜೆಕ್ಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಬಾರಿ ಪ್ಯಾನ್ ವರ್ಲ್ಡ್ ಗುರಿ ಇಟ್ಟಿರುವ ಮೌಳಿ ಅದಕ್ಕಾಗಿ ಬೇಜಾನ್ ವರ್ಕೌಟ್ ಮಾಡುತ್ತಿದ್ದಾರೆ. ದೊಡ್ಡದಾಗಿ ಏನೋ ಮಾಡೋದಿಕ್ಕಂತೂ ಹೊರಟ್ಟಿದ್ದಾರೆ ಅನ್ನೋದು ಗೊತ್ತೇ ಇದೆ. ಎಸ್ ಎಸ್ ಎಂಬಿ 29 ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಶೂಟಿಂಗ್ ಗೆ ಬ್ರೇಕ್ ಹಾಕಿ ರಿಲ್ಯಾಕ್ಸ್ ಮೂಡ್ ಗೆ ಜಾರಿದೆ.…

Read More

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಯುದ್ಧಕಾಂಡ” ಪ್ರತಿಯೊಬ್ಬ ಮಹಿಳೆಯು ನೋಡಲೇ ಬೇಕಾದ ಚಿತ್ರ. ಮಹಿಳೆಯರ ಮೇಲೆ ಯಾವ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ ಎಂದು ತೋರಿಸುತ್ತಿರುವ ಚಿತ್ರವೂ ಹೌದು. ನೊಂದ ಮಹಿಳೆಯರನ್ನು ಪ್ರತಿನಿಧಿಸುವ ಪಾತ್ರವನ್ನು ಅರ್ಚನಾ ಜೋಯಿಸ್ ಅದ್ಭುತವಾಗಿ ನಿಭಾಯಿಸಿದ್ದಾರೆ. ಪವನ್ ಭಟ್ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಹಿರಿಯ ನಟರಾದ ಟಿ.ಎಸ್ ನಾಗಾಭರಣ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಬೇಬಿ ರಾದ್ನ್ಯ ಸಹ ಈ ಚಿತ್ರದಲ್ಲಿದ್ದಾರೆ. ಇದೊಂದು ಸಾಮಾಜಿಕ ಕಳಕಳಿಯುಳ್ಳ ಚಿತ್ರವಾಗಿದೆ. “ಯುದ್ಧ ಕಾಂಡ” ತೀರಾ ಕಡಿಮೆ ಬಜೆಟ್ ಅಥವಾ ತೀರಾ ಹೆವಿ ಬಜೆಟ್ ನ ಚಿತ್ರವಲ್ಲ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣವಾಗಿರುವ ಚಿತ್ರ. ಇಂತಹ ಚಿತ್ರಗಳು ಹೆಚ್ಚಾಗಿ ಜನರನ್ನು ತಲುಪಬೇಕು. ಉತ್ತಮ ಸಂದೇಶವಿರುವ ಈ ಚಿತ್ರವನ್ನು…

Read More