ಹುಬ್ಬಳ್ಳಿ : ಮಾದಕ ವಸ್ತುಗಳ ಸೇವನೆ, ಸರಬರಾಜು ತಡೆಗೆ ಹುಬ್ಬಳ್ಳಿ ಪೊಲೀಸರು ಕ್ರಮ ಕೈಗೊಂಡಿದ್ದು, ಇದರ ಮೊದಲ ಹಂತವಾಗಿ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. https://ainkannada.com/official-vendors-urge-curb-on-illegal-liquor-sales/ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮಾದಕ ವಸ್ತುಗಳ ಚಟುವಟಿಕೆಗಳಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಂಜಾ, ಡ್ರಗ್ಸ್ ಸರಬರಾಜು ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ಇಂದು ಹುಬ್ಬಳ್ಳಿ ಪೊಲೀಸರು ರೌಡಿಗಳ ಪರೇಡ್ ನಡೆಸಿದ್ದು, ಹುಬ್ಬಳ್ಳಿ ಧಾರವಾಡ ಅವಳಿನಗರದ ವ್ಯಾಪ್ತಿಯಲ್ಲಿ ನೂರಾರು ಆರೋಪಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಹಿಳೆ ಮೇಲೆ ಅತ್ಯಾಚಾರ, ಕಳ್ಳತನ, ಕೊಲೆ, ಜೂಜು, ದರೋಡೆ ಸೇರಿದಂತೆ ಇತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರ ಮೇಲೆ ಸಹ ಕ್ರಮ ಕೈಗೊಳ್ಳಲಾಗುವುದು. ಎನ್ಡಿಪಿಎಸ್ (ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಅಡಿ ಕ್ರಮಕೈಗೊಳ್ಳಲಾಗುವುದು ಎಂದರು.
Author: Author AIN
ಧಾರವಾಡ : ಅನಧಿಕೃತ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಸರ್ಕಾರದಿಂದ ಪರವಾನಿಗಿ ಪಡೆದು ಸನ್ನದು ಹೊಂದಿರುವ ಮದ್ಯ ಮಾರಾಟಗಾರರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಜಿಲ್ಲಾ ಮದ್ಯ ಮಾರಾಟಗಾರರು ಸಂಘದ ಸದಸ್ಯರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೂರಾರು ಮದ್ಯ ಮಾರಾಟಗಾರರು, ಅಕ್ರಮವಾಗಿ ಎಲ್ಲೆಲ್ಲಿ ಮದ್ಯ ಮಾರಾಟ ಆಗುತ್ತಿದೆಯೋ ಅದೆಲ್ಲವನ್ನೂ ಸರ್ಕಾರವಾಗಲಿ ಜಿಲ್ಲಾಡಳಿತವಾಗಿ ಕೂಡಲೇ ಬಂದ್ ಮಾಡಿಸಬೇಕು. https://ainkannada.com/fraudsters-take-money-by-saying-they-will-make-ration-cards-public-outraged/ ಇದೇ ವೇಳೆ ಮಾತನಾಡಿದ ಟಿಎಂ ಮೆಹರವಾಡೆ, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20ರಷ್ಟು ಲಾಭಾಂಶ ನೀಡಬೇಕು ಹೆಚ್ಚುವರಿ ಅಬಕಾರಿ ಶುಲ್ಕ ಕಡಿಮೆ ಮಾಡಬೇಕುಯಾವುದೇ ಕಾರಣಕ್ಕೂ ಸನ್ನದು ಶುಲ್ಕವನ್ನು ಹೆಚ್ಚಳ ಮಾಡಬಾರದು. ಅಬಕಾರಿ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿ ಅನಧಿಕೃತ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿರುವುದು ಗಮನಕ್ಕೆ ಬಂದಿದ್ದು ಸರ್ಕಾರ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ : ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಹಣ ಪಡೆದು ವಂಚಿಸಿದವನಿಗೆ ಹಿಗ್ಗಾ ಮುಗ್ಗಾ ಥಳಿಸಿದದ ಘಟನೆ ನಡೆದಿದೆ. ಹುಬ್ಬಳ್ಳಿಯ ನೆಹರೂ ಮೈದಾನದ ಬಳಿ ಅಹಾರ ಇಲಾಖೆಯ ಏಜೆಂಟ್ ಎಂದು ಸಾರ್ವಜನಿಕರಿಂದ ರೇಷನ್ ಕಾರ್ಡ್ ಮಾಡಿಸಲು ಒಂದು ಸಾವಿರ, ಎರಡು ಸಾವಿರ ಪಡೆದು ಯಾಮಾರಿಸಿದ್ದವನಿಗೆ ಜನರೇ ಥಳಿಸಿದ್ದಾರೆ. ಅಹಾರ ಇಲಾಖೆಯ ಕೂಗಳತೆ ದೂರದಲ್ಲಿ ಮಲೀಕ್ ಅನ್ನೋ ಏಜೆಂಟ್ ನಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಸಿದ್ದಾರೆ. ಸುಮಾರು 30 ಕ್ಕೂ ಹೆಚ್ಚು ಸಾರ್ವಜನಿಕರ ಬಳಿ ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಮಲೀಕ್ ಹಣ ಪಡೆದಿದ್ದ,ಹಣ ಪಡೆದು ಮೂರು ತಿಂಗಳಾದರೂ ರೇಷನ್ ಕಾರ್ಡ್ ಮಾಡಸಿಕೊಟ್ಟಿಲ್ಲ, ಹೀಗಾಗಿ ರೊಚ್ಚಿಗೆದ್ದ ಜನ,ನಕಲಿ ಏಜೆಂಟ್ ಗೆ ಸಾರ್ವಜನಿಕರು ಥಳಿಸಿದ್ದಾರೆ. https://ainkannada.com/woman-kidnapping-case-high-court-gives-big-relief-to-bhavani-revanna/ ಸರ್ಕಾರ ಬಡವರ ಅನುಕೂಲಕ್ಕೆ ರೇಷನ್ ಕಾರ್ಡ್ ನೀಡ್ತಾ ಇದ್ರೆ, ಕೆಲವರು ಅದನ್ನೆ ದಂಧೆ ಮಾಡಿಕೊಂಡಿದ್ದಾರೆ. ಇನ್ನು ಇಂತಹ ನಕಲಿ ಏಜೆಂಟ್ ಗಳಿಗೆ ಅಹಾರ ಇಲಾಖೆ ಅಧಿಕಾರಿಗಳು ಸಾಥ್ ನೀಡತಿದಾರೆ. ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಪಕ್ಕ ಇರೋ ಅಹಾರ…
ಕೊಚ್ಚಿ: ಎಂಪುರಾನ್ ಸಿನಿಮಾದ ನಿರ್ಮಾಪಕ ಗೋಕುಲಂ ಗೋಪಾಲಂ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಇದೇ ಪ್ರಕರಣದಲ್ಲಿ ಚೆನ್ನೈನಲ್ಲಿರುವ ಗೋಕುಲಂ ಗ್ರೂಪ್ ಕಚೇರಿಯಲ್ಲಿ ಶೋಧ ನಡೆಸಿದೆ. ಕೋಡಂಬಾಕಂನಲ್ಲಿರುವ ಗೋಕುಲಂ ಗ್ರೂಪ್ ಕಚೇರಿ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಚೆನ್ನೈನ ಸಹವರ್ತಿಗಳೊಂದಿಗೆ ಸಮನ್ವಯದೊಂದಿಗೆ ಜಾರಿ ನಿರ್ದೇಶನಾಲಯದ ಕೊಚ್ಚಿ ಘಟಕವು ಇದರ ನೇತೃತ್ವ ವಹಿಸಿತ್ತು. ಗೋಕುಲಂ ಗೋಪಾಲನ್ ನೇತೃತ್ವದ ಗೋಕುಲಂ ಗ್ರೂಪ್ 2023 ರಿಂದ ಇಡಿಯ ತನಿಖೆಯನ್ನು ಎದುರಿಸುತ್ತಿದೆ. https://ainkannada.com/woman-constable-arrested-with-heroin-worth-crores/ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಬಾರಿ ವಿಚಾರಣೆಗೆ ಒಳಪಟ್ಟಿದ್ದು, ವ್ಯವಹಾರ ಮತ್ತು ಮನರಂಜನಾ ಕ್ಷೇತ್ರದಲ್ಲಿ ಪ್ರಸಿದ್ಧ ವ್ಯಕ್ತಿ, ಚಿಟ್ ಫಂಡ್ಗಳು, ಹಣಕಾಸು, ಚಲನಚಿತ್ರ ನಿರ್ಮಾಣ, ಕ್ರೀಡೆ ಮತ್ತು ಆತಿಥ್ಯವನ್ನು ಒಳಗೊಂಡಿರುವ ಅವರು ಇತ್ತೀಚಿನ ವಿವಾದಾತ್ಮಕ ಚಿತ್ರ ಎಂಪುರಾನ್ನ ನಿರ್ಮಾಪಕರೂ ಆಗಿದ್ದಾರೆ.
ಚಂಡೀಗಢ: ಕೋಟಿ ಮೌಲ್ಯದ ಹೆರಾಯಿನ್ ಜೊತೆಗೆ ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ನನ್ನು ಪೊಲೀಸರು ಬಂಧಿಸಿದ್ದು, ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಸುಮಾರು 2 ಕೋಟಿ ಮೌಲ್ಯದ 17.71 ಮಿ.ಗ್ರಾಂ ಹೆರಾಯಿನ್ ಜೊತೆಗೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ಬೆನ್ನಲ್ಲೇ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಚರ-ಸ್ಥಿರಾಸ್ತಿಗಳ ಬಗ್ಗೆ ತನಿಖೆ ನಡೆಸಲಾಗಿದ್ದು, ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹ ಮಾಡಿರೋದು ಬೆಳಕಿಗೆ ಬಂದಿದೆ. https://ainkannada.com/massive-explosion-fire-spreads-for-kilometers-from-gas-pipeline/ ಈ ಹಿಂದೆ ಪೊಲೀಸರು ಕಾನ್ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು ಎನ್ನಲಾಗಿದೆ. ಗೌಪ್ಯ ಮಾಹಿತಿಯ ಆಧಾರದ ಮೇಲೆ, ಪೊಲೀಸ್ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್ಪಾಯಿಂಟ್ ಅನ್ನು ಸ್ಥಾಪಿಸಿತು. ಈ ವೇಳೆ, ಅಮನ್ದೀಪ್ ಕಾರನ್ನು ನಿಲ್ಲಿಸಿ ತಪಾಸಣೆಗೆ ಒಳಪಡಿಸಲಾಯಿತು. ಅದರಲ್ಲಿ 17.71 ಮಿ.ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಜಯಪುರ : ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಹಿನ್ನೆಲೆ ವಿಜಯಪುರದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. . ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರ ಸಂಭ್ರಮಾಚರಣೆ ನಡೆಸಿದ್ದು, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. https://ainkannada.com/waqf-bill-passed-in-rajya-sabha/ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಟೋಬರ್ ತಿಂಗಳಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ್ದರು. ಇದೀಗ ವಕ್ಫ್ ಕಾಯ್ದೆ ತಿದ್ದುಪಡಿ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರಿಗೆ ಅಭಿನಂದನೆ ಸಲ್ಲಿಸಿದರು. ರೈತರ ಪರ ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿದ್ದಾರೆ ಎಂದು ಸಂಭ್ರಮಿಸಿದರು.
ಬೆಂಗಳೂರು: ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬೀಡುಬಿಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಹ, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ವಿರೋಧಿಗಳ ವಿರುದ್ಧ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಈ ನಡುವೆ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್ ಬಾಯಿ ಬಿಡಿಸುವ ಪ್ರಯತ್ನವನ್ನ ಮಾಧ್ಯಮ ಪ್ರತಿನಿಧಿಗಳು ಮಾಡಿದ್ರು. ಈ ವೇಳೆ ರಿಯಾಕ್ಟ್ ಮಾಡಿದ ಡಿಕೆಶಿ, ಸಿದ್ದರಾಮಯ್ಯ ಅವರು ಹಾಗೂ ನೀವು ವರಿಷ್ಠರನ್ನು ಭೇಟಿಯಾಗುತ್ತಾ ಇದ್ದೀರಿ. ಸಚಿವರ ದಂಡು ಸಹ ದೆಹಲಿಯಲ್ಲಿದೆ. ಸರ್ಕಾರದಲ್ಲಿ ಬದಲಾವಣೆಯಾಗಲಿದೆಯೇ ಎಂದು ಕೇಳಿದಾಗ, “ಪಕ್ಷದ ನಾಯಕರನ್ನು ನಾವು ಭೇಟಿಯಾಗುವುದು ಸಾಮಾನ್ಯ. ನಾನು ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ಭವನದಲ್ಲಿಯೇ ಭೇಟಿ ಮಾಡಲಾಯಿತು” ಎಂದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಶ್ನಿಸಿದಾಗ, “ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಮುನ್ನಡೆಯುವುದು. ಐದು ವರ್ಷ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಒಳ್ಳೆಯದಾಗುವುದು ಮುಖ್ಯ. ವ್ಯಕ್ತಿಗಿಂತ ಪಕ್ಷ ಮುಖ್ಯ” ಎಂದು ಮಾರ್ಮಿಕವಾಗಿ ನುಡಿದರು. ಡಿಕೆಶಿ ಬದಲಾವಣೆ ನಿಶ್ಚಿತವೇ…
ಯಾದಗಿರಿ : ನಾರಾಯಣಪುರ ಡ್ಯಾಂ ನೀರು ಹರಿಸದಂತೆ ಸರ್ಕಾರ ಸ್ಟೇ ತಂದ ವಿಚಾರವಾಗಿ ಮಾಜಿ ಸಚಿವ ರಾಜುಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಯಾದಗಿರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ನಿನ್ನೆ ಕಲಬುರಗಿ ಹೈಕೋರ್ಟ್ ಕಾಲುವೆಗೆ ನೀರು ಹರಿಸಲು ಆದೇಶ ಮಾಡಿತ್ತು. ರೈತರು ಟ್ರ್ಯಾಕ್ಟರ್ ರ್ಯಾಲಿ, ರೈತ ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಸರ್ವ ಸಂಘಟನೆಗಳ ಒಕ್ಕೂಟದಿಂದ ಯಾದಗಿರಿ ಬಂದ್ ಮಾಡಲಾಗಿತ್ತು. ಎಲ್ಲ ರೀತಿಯ ಹೋರಾಟ ಮಾಡಿದ್ರೂ ರೈತರಿಗೆ ನ್ಯಾಯ ಸಿಗಲಿಲ್ಲ. ಹೀಗಾಗಿ ನಾವು ಹೈಕೋರ್ಟ್ ಮೊರೆ ಹೋಗಿದ್ವು. ಕಲಬುರಗಿ ಹೈಕೋರ್ಟ್ ಮೂರು ದಿನ ನೀರು ಹರಿಸಲು ಆದೇಶ ಮಾಡಿತ್ತು. ಏಪ್ರಿಲ್ 4 ರಿಂದ 6 ರವರೆಗೆ ನೀರು ಹರಿಸುವಂತೆ ಆದೇಶ ಮಾಡಿತ್ತು. ಇದರಿಂದಾಗಿ ರೈತರು ಪುಲ್ ಖುಷಿ ಆಗಿದ್ದರು. ಆದರೆ ಇದೀಗ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಹೋಗಿ ನೀರು ಹರಿಸದಂತೆ ಸ್ಟೇ ತಂದಿದೆ. ಕೋರ್ಟ್ ನಲ್ಲಿ ತೆಲಂಗಾಣಕ್ಕೆ ನೀರು ಬಿಟ್ಟು ರೈತರಿಗೆ ಯಾಕೆ ಕೊಡಲ್ಲ ಅಂತ ಚರ್ಚೆ ಆಗಿದೆ https://ainkannada.com/yadagiri-band-for-narayanapura-dam-water-store-muggattu-close/…
ಚಾಮರಾಜನಗರ : ಗ್ರಾಮದ ಸಮೀಪದ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಚಾಮರಾಜನಗರ ಜಿಲ್ಲೆಯ ಕಾಳಹುಂಡಿ ಗ್ರಾಮದ ಸಮೀಪದ ಕಟೇಪುರ ಬಳಿ ಹುಲಿ ಪ್ರತ್ಯಕ್ಷವಾಗಿದೆ. ಕಳೆದ ಒಂದು ವಾರದ ಹಿಂದೆ ಗಟ್ಟವಾಡಿ ಹಾಗೂ ಕವಲಂದೆ ಬಳಿ ಭಾರೀ ಗಾತ್ರದ ಹುಲಿ ಕಾಣಿಸಿಕೊಂಡಿತ್ತು. ಇದೀಗ ಕಾಳನಹುಂಡಿ ಸಮೀಪ ಹುಲಿ ಪ್ರತ್ತಕ್ಷವಾಗಿದೆ. https://ainkannada.com/bhoomipuja-for-mrinal-sugar-factory-amid-opposition/ ಗ್ರಾಮದ ಸುತ್ತಾಮುತ್ತಲಿನ ರೈತ ಸಮುದಾಯ ಜಮೀನುಗಳಿಗೆ ತೆರಳಲು ಭಯಪಡುವಂತಾಗಿದೆ. ಅಲ್ಲದೇ ಹುಲಿಗಳನ್ನು ಹಿಡಿಯದೇ ಕೈಕಟ್ಟಿ ಕುಳಿತ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡ : ವಿರೋಧದ ನಡುವೆ ಮೃಣಾಲ್ ಸಕ್ಕರೆ ಕಾರ್ಖಾನೆಗೆ ಭೂಮಿ ಪೂಜೆ ನಡೆದಿದೆ. ಸಕ್ಕರೆ ಕಾರ್ಖಾನೆಯ ಶಂಕು ಸ್ಥಾಪನೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾಗಿದ್ದರು. ಗ್ರಾಮ ಪಂಚಾಯಿತಿ ಮತ್ತು ರೈತರ ವಿರೋಧದ ನಡುವೆ ಧಾರವಾಡ ತಾಲ್ಲೂಕಿನ ಪುಡಕಲಕಟ್ಟಿ, ಕರಡಿಗುಡ್ಡ ಗ್ರಾಮದ ಸರಹದ್ದಿನಲ್ಲಿ ಮೃಣಾಲ್ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಿಸಿದ್ದು, ವಿರೋಧಿಸಿ ಪ್ರತಿಭಟಿಸಿದ ಗ್ರಾಮಸ್ಥರ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತುಕತೆ ನಡೆಸಿದರು. https://ainkannada.com/those-who-gave-land-to-the-hospital-did-not-get-compensation-dhos-car-seized-as-per-court-order%e0%b2%86%e0%b2%b8%e0%b3%8d%e0%b2%aa%e0%b2%a4%e0%b3%8d%e0%b2%b0%e0%b3%86%e0%b2%97%e0%b3%86-%e0%b2%ad/ ಯಾದವಾಡ ಹಾಗೂ ಕರಡಿಗುಡ್ಡ ಗ್ರಾಮದ ಸರಹದ್ದಿನಲ್ಲಿ ಮೃಣಾಲ್ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುರುವಾರ ಪೂಜೆ ನೆರವೇರಿಸಿದರು.