Author: Author AIN

ನವದೆಹಲಿ: ಮೂರು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ನಾಯಕರ ಭೇಟಿ ಮಾಡುತ್ತಿದ್ದಾರೆ. ನಿನ್ನೆಯಷ್ಟೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ, ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಹಂಗಾಮ, ಖಾಲಿ ಇರುವ ವಿಶಧಾನಪರಿಷತ್‌ ಸ್ಥಾನಗಳಿಗೆ ನಾಮನಿರ್ದೇಶನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೈಕಮಾಂಡ್ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್‌ ೫ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಗಾಧಿ ಮೇಲೆ ಕಣ್ಣಿಟ್ಟಿರುವ ಹಲವು ನಾಯಕರು ಡಿಕೆಶಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಮತ್ತೊಂದೆಡೆ, ಅಸಮರ್ಥ ಸಚಿವರಿಗೆ ಕೊಕ್‌ ನೀಡಿ, ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿರುವ ಶಾಸಕರಿಗೆ ಅವಕಾಶ ನೀಡುವ ಬಗ್ಗೆ ಬೇಡಿಕೆ ಹೆಚ್ಚುತ್ತಿದೆ. ಆದರೆ, ಸದ್ಯಕ್ಕೆ ಸಂಪುಟ ವಿಸ್ತರಣೆಯಾಗಲೀ, ಪುನಾರಚನೆಯಾಗಲಿ ಮಾಡೋದು…

Read More

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಈಗ ಬಿಡುಗಡೆಗೆ ಸಜ್ಜಾಗಿರುವ ಅಜ್ಞಾತವಾಸಿ ಸಿನಿಮಾ ಕೂಡ ಮರ್ಡರ್ ಮಿಸ್ಟರಿ ಕಥಾಹಂದರವನ್ನು ಹೊಂದಿದೆ. ಆದರೆ ಈ ಚಿತ್ರ ಬೇರೆಯದ್ದೇ ಕಂಟೆಂಟ್ ಹೊಂದಿದೆ ಅನ್ನೋದನ್ನು ಟ್ರೇಲರ್ ಹೇಳುತ್ತಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಜ್ಞಾತವಾಸಿ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆಯಿತು. ಈ ವೇಳೆ ಇಡೀ ಚಿತ್ರತಂಡ ಹಾಜರಾಗಿತ್ತು. ಟ್ರೇಲರ್ ಬಿಡುಗಡೆ ಬಳಿಕ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಮಾತನಾಡಿ, ಮಲೆನಾಡಿನಲ್ಲಿ ನಡೆಯುವ ಕಥೆ. ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಕಾಲ್ಪನಿಕ ಕಥೆ. ಹಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಸ್ಥಾಪನೆಯಾಗಿ 25 ವರ್ಷವಾಗಿರುತ್ತದೆ. ಯಾವುದೇ ಸಣ್ಣ ಕೇಸ್ ಕೂಡ ಅಲ್ಲಿ ರಿಪೋರ್ಟ್ ಆಗಿರುವುದಿಲ್ಲ. 1997ರಲ್ಲಿ ಮರ್ಡರ್ ಕೇಸ್ ದಾಖಲಾಗುತ್ತದೆ. ಅನುಭವಿ ಇಲ್ಲದ ಪೊಲೀಸ್ ಅಲ್ಲಿಗೆ ಬಂದಾಗ ಈ ಕೇಸ್ ಹೇಗೆ ಬಗೆಹರಿಸುತ್ತಾರೆ ಎಂಬುವುದೇ ಕಥೆ. ಗುಲ್ಟು ಬಳಿಕ ಏನೂ ಮಾಡಬೇಕು ಅಂದುಕೊಂಡಾಗ ಈ ಕಥೆ ನನ್ನನ್ನು ಎಕ್ಸೈಟ್ ಮಾಡಿತು. ಹೇಮಂತ್ ಅವರಿಗೆ ಕಥೆ…

Read More

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ ಟಿಆರ್ ಸಿನಿಮಾಗಾಗಿ ಪ್ರೇಕ್ಷಕಪ್ರಭು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಕ್ಕಿರುವ ಬಗ್ಗೆ ಸ್ವತಃ ಚಿತ್ರತಂಡವೇ ಅಪ್ ಡೇಟ್ ಕೊಟ್ಟಿತ್ತು. ಮೊದಲ ದಿನ ಶೂಟಿಂಗ್ ಫೋಟೋ ಹಂಚಿಕೊಂಡು ಯಂಗ್ ಟೈಗರ್ ಅಭಿಮಾನಿಗಳಿಗೆ ಥ್ರಿಲ್ ಹೆಚ್ಚಿಸುವಂತೆ ಮಾಡಿತ್ತು. ಬರೋಬ್ಬರಿ 2 ಸಾವಿರ ಜೂನಿಯರ್ ಆರ್ಟಿಸ್ಟ್ ಗಳನ್ನು ಅಖಾಡಕ್ಕೆ ಇಳಿಸಿ ನೀಲ್ ಮತ್ತೊಂದು ಮೆಗಾ ಸಿನಿಮಾವನ್ನು ಪ್ರೇಕ್ಷಕರ ಮುಂದೆ ಹರವಿಡಲು ಹೊರಟಿದ್ದಾರೆ. ವಿಷಯ ಹೀಗಿರುವಾಗ್ಲೇ ತಾರಕ್ ದೇವರ-2 ಮ್ಯಾಟರ್ ಮುನ್ನೆಲೆಗೆ ಬಂದಿದೆ. ಜೂನಿಯರ್ ಎನ್ ಟಿಆರ್ ಹಾಗೂ ಕೊರಟಾಲ ಶಿವ ಕಾಂಬೋದ ದೇವರ ಪಾರ್ಟ್ 1 ಚಿತ್ರ ಕಳೆದ ವರ್ಷ ತೆರೆಗೆ ಬಂದಿತ್ತು. ಚಿತ್ರತಂಡ ನಿರೀಕ್ಷಿಸಿದಷ್ಟು ಸಕ್ಸಸ್ ಸಿಕ್ಕಿರಲಿಲ್ಲ. ಹೀಗಾಗಿ ಪಾರ್ಟ್ 2 ಬರೋದು ಡೌಟ್ ಎನ್ನಲಾಗಿತ್ತು. ಆದರೀಗ ಪ್ರಶಾಂತ್ ನೀಲ್ ಸಿನಿಮಾ ಪಕ್ಕಕ್ಕಿಟ್ಟು ಟಾಲಿವುಡ್ ಸಿಂಹಾದ್ರಿ ದೇವರ-2 ಪಾರ್ಟ್ ಅಂಗಳಕ್ಕೆ ಇಳಿಯುವ ತಯಾರಿಯಲ್ಲಿದ್ದಾರಂತೆ. ಈ ಚಿತ್ರದ ಚಿತ್ರೀಕರಣವನ್ನು ನಮ್ ರಾಜ್ಯದಲ್ಲಿಯೇ…

Read More

ಕೊಡಗು : ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ ಸಂಬಂಧ ಕೂಲಂಕುಶವಾಗಿ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಕೊಡಗಿನಲ್ಲಿ ಮಾತಾಡಿದ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದರು. ವಿನಯ್‌ ಸೋಮಣ್ಣ ನನಗೆ ಕಾಂಗ್ರೆಸ್‌ನ ನಾಯಕರಿಂಧ ಒತ್ತಡ ಇದೆ ಎಂದು ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ  ಪಾರದರ್ಶಕವಾಗಿ ನಡೆಯಬೇಕೆಂದು ಗೃಹಸಚಿವರಿಗೆ ಆಗ್ರಹಿಸುತ್ತೇನೆ ಎಂದರು. https://ainkannada.com/bjp-worker-commits-suicide-at-office-virajpet-mla-ponnannas-name-is-implicated-in-the-case/ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ…

Read More

ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬೈನ ಕೋಕಿಲಾಬೇನ್ ಧೀರಬಾಯಿ ಅಂಬಾನಿ ಕೊನೆಯುಸಿರೆಳದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತ ಇಡೀ ಚಿತ್ರರಂಗ ಮನೋಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದಿದೆ. ಮನೋಜ್ ಕುಮಾರ್ ಮೂಲಕ ಹೆಸರು ಹರಿಕೃಷ್ಣನ್ ಗೋಸ್ವಾಮಿ. ಸಿನಿಮಾಗಾಗಿ ಇವರ ಹೆಸರು ಬದಲಿಸಿಕೊಂಡ ಅವರು 1957ರಲ್ಲಿ ಬಾಲಿವುಡ್ಗೆ ಎಂಟ್ರಿ ಕೊಟ್ಟಿರು. ಮನೋಜ್ ಕುಮಾರ್ ದೇಶಭಕ್ತಿ ಕುರಿತ ಚಲನಚಿತ್ರಗಳಲ್ಲಿ ಹೆಸರು ಮಾಡಿದ್ದರು. ದೇಶಭಕ್ತಿ ಪ್ರಧಾನ ಚಿತ್ರಗಳಿಂದಾಗಿಯೇ ಮನೋಜ್ ಕುಮಾರ್ ಅವರನ್ನು ‘ಭರತ್ ಕುಮಾರ್’ ಎಂದು ಕರೆಯಲಾಗುತ್ತಿತ್ತು. 1957 ರಲ್ಲಿ ಬಿಡುಗಡೆಯಾಗಿದ್ದ ‘ಫ್ಯಾಷನ್’ ಚಿತ್ರದೊಂದಿಗೆ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ‘ಕಚ್ಚಿ ಕಿ ಗುಡಿಯಾ’ 1960 ರಲ್ಲಿ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡರು. ಇದು ಮನೋಜ್ ಕುಮಾರ್ಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. ‘ಉಪ್ಕಾರ್’, ‘ಪತ್ತರ್ ಕೆ ಸನಮ್’, ‘ರೋಟಿ ಕಪ್ಡಾ ಔರ್ ಮಕಾನ್’, ‘ಸನ್ಯಾಸಿ’ ಮತ್ತು ‘ಕ್ರಾಂತಿ’ಯಂತಹ ಅದ್ಭುತ…

Read More

ರಾಯಚೂರು : ರಾಯಚೂರಿನಲ್ಲಿ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ತಮ್ಮ ಫೋನ್‌ ಟ್ಯಾಪಿಂಗ್‌ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಖುದ್ದು ಶಾಸಕ ಶಿವರಾಜ್ ಪಾಟೀಲ್ ಅವರೇ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದ್ದಾರೆ. ರಾಯಚೂರು ಎಸ್ ಪಿ ಪುಟ್ಟಮಾದಯ್ಯ ಎದುರು ಫೋನ್ ಟ್ಯಾಪ್‌ ಬಗ್ಗೆ ಪ್ರಸ್ತಾಪಿಸಿದ್ದು, ಸುಮಾರು‌ 70 ಸಲ ಫೋನ್ ಲೊಕೇಶನ್ ಪರಿಶೀಲಿಸಲಾಗಿ. ಖುದ್ದು ಪೊಲೀಸ್ ಠಾಣೆಗೆ ಹೋಗಿ ಲೋಕೇಶನ್ ತೆಗಿಸ್ತಾರೆ ಅಂತ ಎಸ್‌ಪಿ ಎದುರು ಅಳಲು ತೋಡಿಕೊಂಡಿದ್ದಾರೆ. https://ainkannada.com/raichur-mla-accused-of-phone-tapping-what-did-the-home-minister-say/ ಇದೇ ಏಪ್ರಿಲ್ 1 ರಂದು ಬಿಜೆಪಿ ಶಾಸಕ ಶಿವರಾಜ್‌ ಪಾಟೀಲ್‌ ರಾಯಚೂರು ನಗರದ ಎಸ್ ಪಿ ಕಚೇರಿ ಎದುರು ಪ್ರತಿಭಟಿಸಿದ್ದರು. ಈರೇಶ್ ಅನ್ನೋ ವ್ಯಕ್ತಿಯನ್ನು ಪೊಲೀಸರು ವಿಚಾರಣೆ ವೇಳೆ ಥಳಿಸಿದ್ದಾರೆ. ಇದೇ ಕಾರಣಕ್ಕೆ ಈರೇಶ್ ಮೃತಪಟ್ಟಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಎಸ್ ಪಿ ಪುಟ್ಟಮಾದಯ್ಯ ಜೊತೆ ಘಟನೆ ಬಗ್ಗೆ ವಿವರಿಸೊ ವೇಳೆ ಫೋನ್ ಟ್ಯಾಪ್‌ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

Read More

ನವದೆಹಲಿ: ರಾಜ್ಯಸಭೆಯಲ್ಲೂ ಸಹ ವಕ್ಫ್‌ ತಿದ್ದುಪಡಿ ಮಸೂದೆ 2025ರ ಅಂಗೀಕಾರ ಗೊಂಡಿದೆ. ಸುದೀರ್ಘ12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆ ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧ ನಡುವೆ ವಕ್ಫ್‌ ಮಸೂದೆ ಅಂಗೀಕಾರಗೊಂಡಿದ್ದು, ರಾಜ್ಯಸಭೆಯಲ್ಲಿ, ಮಸೂದೆಯ ಪರವಾಗಿ 128 ಮತಗಳು ಮತ್ತು ವಿರೋಧವಾಗಿ 95 ಮತಗಳು ಚಲಾವಣೆಯಾದವು. ಗುರುವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಚರ್ಚೆ ಆರಂಭವಾಗಿ ಇಂದು ನಸುಕಿನ ಜಾವದವರೆಗೆ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಸತತ ಚರ್ಚೆಗಳು ನಡೆದಿವೆ. ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕಾರಕ್ಕಾಗಿ ಮಂಡಿಸುವ ಮೊದಲು, ವಕ್ಫ್ ಆಸ್ತಿಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲಾಗಿಲ್ಲ ಎಂದು ರಿಜಿಜು ಒತ್ತಿ ಹೇಳಿದರು.ವಕ್ಫ್ ಮಂಡಳಿ ಯಾವಾಗಲೂ ಹಾಗೆಯೇ ಇರುತ್ತದೆ. ವಕ್ಫ್ ಮಂಡಳಿಯು ಶಾಸನಬದ್ಧ ಸಂಸ್ಥೆಯಾಗಿದ್ದು, ಮುಸ್ಲಿಮರನ್ನು ಮಾತ್ರ ಶಾಸನಬದ್ಧ ಸಂಸ್ಥೆಯಲ್ಲಿ ಏಕೆ ಸೇರಿಸಬೇಕು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿವಾದವಿದ್ದರೆ, ಆ ವಿವಾದವನ್ನು ಹೇಗೆ ಪರಿಹರಿಸಲಾಗುತ್ತದೆ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರೊಂದಿಗೆ ವಿವಾದಗಳೂ ಇರಬಹುದಲ್ಲವೇ ಎಂದು ಕೇಳಿದರು ಶಾಸನಬದ್ಧ ಸಂಸ್ಥೆಯು…

Read More

ಬಳ್ಳಾರಿ : ಬಳ್ಳಾರಿಯ ಕಣೇಕಲ ರಸ್ತೆಯ ರಾಣಿತೋಟ ಏರಿಯಾದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ನಡೆದಿದೆ. 37 ವರ್ಷದ ವೆಂಕಟೇಶ ಎಂಬಾತನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. ರಾಣಿತೋಟದ ಜುಮ್ಮಾಮಸೀದಿ ಮುಂಭಾಗದಲ್ಲೇ ಘಟನೆ ನಡೆದಿದ್ದು, ಮೃತ ವೆಂಕಟೇಶ್‌ ಗೊಲ್ಲರ್‌ ಆರ್ ಜೆ ಕಾಟನ್ ಮಿಲ್ ಇಂಡಸ್ಟ್ರಿನಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಮೂವರು ಮಕ್ಕಳು ಇದ್ದರು ಎಂಬ ಮಾಹಿತಿ ಇದೆ. https://ainkannada.com/young-man-commits-suicide-after-being-questioned-about-taking-iphone/ ಇನ್ನೂ ಕೊಲೆಗೆ ಕಾರಣ ಇನ್ನೂ ಸಹ ಪತ್ತೆಯಾಗಿಲ್ಲ.ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.  ಸ್ಥಳದಲ್ಲಿ ಕುಟುಂಬಸ್ಥರ ಮುಗಿಲು ಮುಟ್ಟಿದ ಆಕ್ರಂದನ ಮುಗಿಲು ಮುಟ್ಟಿದೆ.

Read More

ಬೆಳಗಾವಿ : ಐಫೋನ್‌ ತಗೊಂಡಿದ್ದನ್ನ ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯಗೆ ಶರಣಾಗಿರುವ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ. ಮನೆಯಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್(24) ಆತ್ಮಹತ್ಯೆ. ಇಎಂಐ ಮಾಡಿಸಿ 70 ಸಾವಿರ ಬೆಲೆಯ ಐಫೋನ್‌ ತಂದಿದ್ದ ಮುಸ್ತಫೀಸ್ ಶೇಖ್, ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ಯಾ. ಕಡಿಮೆ ದರದ ಮೊಬೈಲ್ ತಗೋಬೇಕಿತ್ತು ಎಂದು ತಂದೆ  ಬುದ್ದಿ ಹೇಳಿದ್ದದ್ದಾರೆ. ಇದರಿಂದ ಮನನೊಂದು ಯುವಕ ಮನೆಯಲ್ಲೇ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾನೆ. https://ainkannada.com/heavy-rain-likely-in-14-districts-of-karnataka-today-where/ ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಬೀದರ್‌ : ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದ್ದರಿಂದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ತೊಗರಿ ಖರೀದಿಗೆ ಸರಕಾರ ಮುಂದಾಗಿದೆ. ಆದರೆ ಅಧಿ ಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಕೇಂದ್ರವೊಂದರಲ್ಲಿ ಪ್ರತಿ ಕ್ವಿಂಟಾಲ್‌ಗೆ 2.56 ಕೆಜಿ ತೊಗರಿ ರೈತರಿಂದ ಹೆಚ್ಚುವರಿ ಪಡೆಯುತ್ತಿರುವುದು ಸಾಬೀತಾದರೂ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಮುಂದಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. https://ainkannada.com/shiv-sena-mp-arvind-sawant-raised-the-border-dispute-in-the-house/ ಜಿಲ್ಲೆಯ ಭಾಲ್ಕಿ ತಾಲೂಕಿನ ಕೇಸರ ಜವಳಗಾ ಗ್ರಾಮದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿರುವ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಾಯಿತ ರೈತರು ತೊಗರಿ ಮಾರಾಟಕ್ಕೆ ಹೋದಾಗ ತೂಕದಲ್ಲಿ ಗೋಲ್‌ ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನು ವಿರೋಧಿಸಿ ರೈತರು ಪ್ರತಿಭಟಿಸಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಅಧಿಕಾರಿಗಳು 50 ಕೆ.ಜಿ. ಬ್ಯಾಗ್‌ನಲ್ಲಿ ಬರೋಬ್ಬರಿ 1.260 ಗ್ರಾಂ ತೂಕದಲ್ಲಿ ವ್ಯಾತ್ಯಾಸ ಕಂಡುಬಂದಿದೆ ಎಂದು ವರದಿ ನೀಡಿದರೂ ಇದುವರೆಗೆ ಯಾರೊಬ್ಬರ ಮೇಲೂ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ ಡಿಸಿ ಮೋರೆ ಹೋದ ರೈತರು ಇನ್ನೂ ಕೇಸರಜವಳಗಾ ತೊಗರಿ ಖರೀದಿ…

Read More