ಪ್ರೀತಿ-ಪ್ರೇಮಕ್ಕೆ ವಯಸ್ಸಿನ ನಿರ್ಬಂಧವಿಲ್ಲ ಅಂತಾರೇ. ಆದರೆ ಮದುವೆ ಹಾಗೂ ಮಕ್ಕಳು ಅನ್ನೋದು ಸರಿಯಾದ ಸಮಯಕ್ಕೆ ಆಗಬೇಕು ಅನ್ನೋದು ದೊಡ್ಡವರ ವಾದ. 46ನೇ ವಯಸ್ಸಿಗೆ ಮದುವೆಯಾಗಿ ಸುದ್ದಿಯಾಗಿದ್ದ ತಮಿಳಿನ ಖ್ಯಾತ ಹಾಸ್ಯ ನಟ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮಿಳಿನ ಡಾಕ್ಟರ್, ಬೀಸ್ಟ್, ಜೈಲರ್ ಸಿನಿಮಾದ ಸ್ಟಾರ್ ಕಾಮೆಡಿಯನ್ ರೆಡಿನ್ ಕಿಂಗ್ಸ್ ಲೇ ಮನೆಗೆ ಹೊಸ ಅಥಿತಿ ಆಗಮಿಸಿದ್ದಾರೆ. ರೆಡಿನ್ ಈಗ ತಂದೆಯಾಗಿ ಬಡ್ತಿ ಪಡೆದಿದ್ದಾರೆ. ತಮಿಳಿನ ಜನಪ್ರಿಯ ಟಿವಿತಾರೆ ಸಂಗೀತ ಅವರನ್ನು ವರಿಸಿದ್ದ ರೆಡಿನ್ ಕಿಂಗ್ಸ್ ಲೇ ಚೊಚ್ಚಲ ಮಗುವನ್ನು ಸ್ವಾಗತಿಸಿದ್ದಾರೆ. 47ನೇ ವಯಸ್ಸಿಗೆ ಅಪ್ಪನಾಗಿರುವ ರೆಡಿನ್ ಕಿಂಗ್ಸ್ ಗೆ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ತಮ್ಮ ಮುದ್ದಾದ ಹೆಣ್ಣು ಮಗುವನ್ನು ತೋಳುಗಳಲ್ಲಿ ಮಲಗಿಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದು, ಫ್ಯಾನ್ಸ್ ವಾವ್, ಮನೆಗೆ ರಾಜಕುಮಾರಿ ಆಗಮನ ಎಂದೆಲ್ಲಾ ಕಮೆಂಟ್ ಮಾಡುತ್ತಿದ್ದಾರೆ. 90 ರ ದಶಕದಿಂದಲೂ ತಮಿಳು ಸಿನಿಮಾ ಇಂಡಸ್ಟ್ರಿಯಲ್ಲಿ ರೆಡಿನ್ ಕಿಂಗ್ಸ್ಲಿ ಜೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡ್ತಿದ್ದಾರೆ. ಅನೇಕ ಸಿನಿಮಾಗಳಲ್ಲಿ…
Author: Author AIN
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆಗೆ ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿದ್ದಾರೆ. ಮುಳಬಾಗಿಲು ನಗರಸಭೆಗೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. https://ainkannada.com/athletics-and-judo-sports-camp-launched-in-kolar/ ಈ ವೇಳೆ ನಗರಸಭೆ ಅವ್ಯವಸ್ಥೆ ಕಂಡು ಉಪಲೋಕಾಯುಕ್ತ ವೀರಪ್ಪ ಅವರು ಆಕ್ರೋಶಗೊಂಡಿದ್ದು, ಸ್ಥಳದಲ್ಲೇ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಬೆಂಗಳೂರು: ನಂದಿನಿ ಹಾಲಿನ ದರವನ್ನು ೪ ರೂ.ಏರಿಕೆ ಮಾಡಿ ಜನರಿಗೆ ಬರೆ ಹಾಕಿದ್ದೇ ಹಾಕಿದ್ದು. ಒಂದು ಕಸಕ್ಕೆ ಟ್ಯಾಕ್ಸ್, ಮತ್ತೊಂದು ಕಡೆ ಡೀಸೆಲ್ ದರ 2 ರೂ. ಹೆಚ್ಚಳ. ಇದರ ಜೊತೆಗೆ ನಂದಿನಿ ಹಾಲಿನ ದರವೂ ಲೀಟರ್ ಗೆ 4ರೂ. ಹೆಚ್ಚಳವಾಗಿದೆ. ಏಪ್ರಿಲ್.1ರಿಂದಲೇ ನಂದಿನಿ ಹಾಲಿನ ದರ ಏರಿಕೆಯಾಗಿದೆ. ಆದರೆ ವಾಸ್ತವದಲ್ಲಿ ನಂದಿನಿ ಹಾಲಿನ ದರ 4 ರೂ. ಏರಿಕೆಯಾಗಿಯೇ ಇಲ್ಲ. ಇದಕ್ಕೆ ಕೆಎಂಎಫ್ ಹೊಸ ಐಡಿಯಾವನ್ನು ಮಾಡಿದೆ. ನಂದಿನಿ ಹಾಲಿನ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಭಾರಿ ಹೋರಾಟಗಳು ನಡೆದ್ವು. ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕ್ತಿದೆ. ಹೌದು, ಕಳೆದ ವರ್ಷದ ಜೂನ್ ಹೊತ್ತಿಗೆ ರಾಜ್ಯದಲ್ಲಿ ನಂದಿನಿ ಹಾಲಿನ ಸಂಗ್ರಹ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿತ್ತು. ರೈತರಿಂದ ಭಾರಿ ಪ್ರಮಾಣದಲ್ಲಿ ಹಾಲು ಡೈರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೆಎಂಎಫ್ ತಲೆ ಮೇಲೆ ಕೈಹೊತ್ತುಕೊಳ್ಳುವಂತೆ ಮಾಡಿತ್ತು. ನಿತ್ಯ ಸಂಗ್ರಹವಾಗುತ್ತಿದ್ದ ಹಾಲಿಗೆ ಬೇಡಿಕೆ ಕಡಿಮೆಯಾಗಿ ಕೆಎಂಎಫ್ ನಿತ್ಯ ನಷ್ಟ ಅನುಭವಿಸುತ್ತು.…
ಕೋಲಾರ : ಎರಡು ದಶಕಗಳ ಹೋರಾಟದ ಫಲವಾಗಿ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಿಂಥೆಟಿಕ್ ಟ್ರ್ಯಾಕ್ ಆಗಿ ಅಭಿವೃದ್ಧಿಯಾಗಿದ್ದು, ಯುವ ಕ್ರೀಡಾಪಟುಗಳು ಕ್ರೀಡಾಂಗಣವನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಪ್ಯಾರಾ ಒಲಂಪಿಕ್ ಅಸೋಸಿಯೇಶನ್ ಜಿಲ್ಲಾದ್ಯಕ್ಷ ಕೆ. ಜಯದೇವ್ ಹೇಳಿದರು. https://ainkannada.com/massive-march-demanding-release-of-water-to-krishna-right-bank-canal/ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡಾ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಪಟುಗಳ ಒತ್ತಾಸೆಯ ಹೋರಾಟದಿಂದಾಗಿ ಸುಸಜ್ಜಿತ ಕ್ರೀಡಾಂಗಣ ರೂಪುಗೊಂಡಿದ್ದು ಇದೇ ಕ್ರೀಡಾಂಗಣದಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸಲು ಸಿದ್ದತೆ ನಡೆಸಿದೆ. ಎಲ್ಲಾ ಕ್ರೀಡಾಪಟುಗಳು ಸಹಕಾರ ನೀಡಬೇಕೆಂದು ಕೋರಿದರು.
ಉಡುಪಿ: ಕರ್ನಾಟಕದ ಕರಾವಳಿಯ ಸುಪ್ರಸಿದ್ಧ ದೇಗುಲ ಕಾಪು ಮಾರಿಗುಡಿಗಿಂದು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ ಕೊಟ್ಟಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಭೇಟಿ ಕೊಟ್ಟ ಮಾರಿಯಮ್ಮನ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಅಶ್ವಿನಿ ಅವರಿಗೆ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಗೌರವಿಸಿದ್ದಾರೆ. ಕಾಪು ಮಾರಿಗುಡಿ ದೇವಸ್ಥಾನಕ್ಕೆ ಇತ್ತೀಚೆಗೆ ಶಿಲ್ಪಾ ಶೆಟ್ಟಿ, ರಕ್ಷಿತ್ ಶೆಟ್ಟಿ, ಕಂಗನಾ ರಣಾವತ್ ಸೇರಿದಂತೆ ಹಲವು ತಾರೆಯರು ಭೇಟಿ ಕೊಟ್ಟಿದ್ದನ್ನು ನಾವಿಲ್ಲಿ ಸ್ಮರಿಸಬಹುದು.
ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನಿರ್ಮಿಸಿ, ನಿರ್ದೇಶಿಸಿರುವ, ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ “MIXING ಪ್ರೀತಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ, ಸಿರಿ ಮ್ಯಾಸಿಕ್ ನ ಸುರೇಶ್ ಚಿಕ್ಕಣ್ಣ, ಡಿವೈಎಸ್ಪಿ ರಾಜೇಶ್, ನಿರ್ಮಾಪಕ – ನಿರ್ದೇಶಕ ಡೇವಿಡ್ ಮುಂತಾದ ಗಣ್ಯರು ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಅನ್ನು ಅನಾವರಣ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಪ್ರೇಮ ಪ್ರಧಾನ ಈ ಚಿತ್ರದ ನಾಯಕನಾಗಿ ಸಿಂಡೊ ಜೇಕಬ್ ನಟಿಸಿದ್ದು, ನಾಯಕಿಯರಾಗಿ ಸಂಹಿತಾ ವಿನ್ಯ, ಪಾವನ, ದಿವ್ಯ ಹಾಗೂ ಪ್ರಿಯಾಂಕ ಅಭಿನಯಿಸಿದ್ದಾರೆ. ಚಿತ್ರ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ. ನಿರ್ದೇಶಕರು ಟ್ರೇಲರ್ ನಲ್ಲಿ ಕಥೆಯ ಬಗ್ಗೆ ಹೆಚ್ಚು ಬಿಟ್ಟುಕೊಟ್ಟಿಲ್ಲ. ಹಾಡುಗಳು ಚೆನ್ನಾಗಿದೆ. ಪಕ್ಕದ ರಾಜ್ಯಗಳ ನಿರ್ಮಾಪಕರು ಸೇರಿ ಕನ್ನಡ ಚಿತ್ರ ನಿರ್ಮಿಸಿರುವುದು ಖುಷಿಯಾಗಿದೆ ಎಂದರು ಕನ್ನಡ ಚಲನಚಿತ್ರ ವಾಣಿಜ್ಯ…
ಹಾವೇರಿ : ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತರ ಪರದಾಡುವಂತಾಗಿದೆ. ಮಳೆಯಿಂದಾಗಿ ಬ್ಯಾಡಗಿಯಲ್ಲಿ ಮಾರಾಟ ಮಾಡಲು ತಂದಿದ್ದ ಮೆಣಸಿನಕಾಯಿ ಉಳಿಸಿಕೊಳ್ಳಲು ರೈತರು, ವರ್ತಕರು ಪರದಾಡುವಂತಾಗಿದೆ. https://ainkannada.com/heavy-rain-in-bengaluru-tree-falls-two-cars-damaged/ ಬ್ಯಾಡಗಿ ಮಾರುಕಟ್ಟೆಗೆ ಬಂದಿದ್ದ2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲಗಳು ಬಂದಿವೆ. ಆದರೆ ಮಳೆಯಿಂದಾಗಿ ಒಣಮೆಣಸಿನಕಾಯಿ ನೆನಯುವ ಆತಂಕ ಎದುರಾಗದ್ದು,ಟಾರ್ಪಲ್ಗಳನ್ನು ಮುಚ್ಚಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕ ಕೀರ್ತಿರಾಜ್ ಪುತ್ರ ಧರ್ಮ ಕೀರ್ತಿರಾಜ್ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಣ್ ಕಣ್ ಸಲಿಗೆ ಅಂತಾ ಕನ್ನಡ ಪ್ರೇಕ್ಷಕರನ್ನು ನವಗ್ರಹ ಸಿನಿಮಾ ಮೂಲಕ ಸೆಳೆದಿದ್ದ ಧರ್ಮ ಬಿಗ್ ಬಾಸ್ ಸೀಸನ್ 11ರಲ್ಲಿ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಬಿಗ್ ಬಾಸ್ ಮನೆಗೆ ಹೋಗಿ ಬಂದ್ಮೇಲೆ ಧರ್ಮ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡದಲ್ಲಿ ವಿಶೇಷ ಪಾತ್ರಗಳ ಮೂಲಕ ಗಮನಸೆಳೆದಿರುವ ಧರ್ಮ ಕೀರ್ತಿ ರಾಜ್ ಮೊದಲ ಬಾರಿಗೆ ಟಾಲಿವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಧರ್ಮ ಮೊದಲ ತೆಲುಗು ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಮೆಚ್ಚಿರುವ ಅಪ್ಸರಾ ರಾಣಿ ನಾಯಕಿ ಅನ್ನೋದು ವಿಶೇಷ.. ಬೋಲ್ಡ್ ಪಾತ್ರಗಳ ಮೂಲಕವೇ ಖ್ಯಾತಿ ಗಳಿಸಿರುವ ಅಪ್ಸರಾ ರಾಣಿ ಹಾಗೂ ಧರ್ಮ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ. ಈ ಜೋಡಿ ಹೊಸ ಚಿತ್ರಕ್ಕೆ ಬ್ಲಡ್ ರೋಸಸ್ ಎಂಬ ಟೈಟಲ್ ಇಡಲಾಗಿದೆ. 2019ರಲ್ಲಿ ಅಪ್ಸರಾ ಚಿತ್ರರಂಗಕ್ಕೆ ಕಾಲಿಟ್ಟರು. ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ಡೇಂಜರಸ್’ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಗ್ಲಾಮರ್…
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಪ್ರಕರಣ ಸಂಭವಿಸಿದ್ದು, ಬೆಂಗಳೂರು ಜೆ.ಪಿ.ನಗರ ಮೂಲದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಹೋಗುವಾಗ ದುರ್ಘಟನೆ ನಡೆದಿದೆ. ಮಂಡ್ಯದ ತೂಬಿನಕೆರೆ ಎಕ್ಸಿಟ್ ಬಳಿ ಕಾರು ಮತ್ತು ಐರಾವತ ಬಸ್ ನಡುವೆ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಸತ್ಯಾನಂದ ರಾಜೇ ಆರಸ್ (51), ಇವರ ಪತ್ನಿ ನಿಶ್ಚಿತಾ (45), ಚಂದ್ರು(62), ಇವರ ಪತ್ನಿ ಸುವೇದಿನಿ ರಾಣಿ(50) ಮೃತರು. https://ainkannada.com/hukkeri-attendant-kidnapping-case-do-you-know-the-dramatic-twist/ ಎಕ್ಸ್ಪ್ರೆಸ್ ವೇ ನಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವುಂಟಾಗಿದ್ದು, ಗೊಂದಲದಿಂದ ಮತ್ತೆ ಎಕ್ಸ್ಪ್ರೆಸ್ ವೇಗೆ ಕಾರು ತಿರುಗಿಸಿದ್ದಾನೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ KSRTC ಐರಾವತ ಬಸ್ ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಐಜಿ ಬೋರಲಿಂಗಯ್ಯ ಹಾಗೂ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮಂಡ್ಯ ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಾಗಲಕೋಟೆ : ದಿನೇ ದಿನೇ ಹೆಚ್ಚಿದ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ನದಿಯಿಂದ ಬೃಹದಾಕಾರದ ಮೊಸಳೆಗಳು ನದಿಯಿಂದ ಹೊರ ಬರುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರ ಆತಂಕ ಹೆಚ್ಚಿಸಿದೆ. ಕೃಷ್ಣಾ ನದಿಯಲ್ಲಿ ನೀರು ವಿರಳವಾಗುತ್ತಿದ್ದಂತೆ ಬೃಹತ್ ಮೊಸಳೆ ಪ್ರತ್ಯಕ್ಷವಾಗಿವೆ, ಬಾಗಲಕೋಟೆ ಜಿಲ್ಲೆಯ ಗಲಗಲಿ ಸಮೀಪದ ರಬಕವಿಯಲ್ಲಿ ಮೊಸಳೆ ಪ್ರತ್ಯಕ್ಷಗೊಂಡಿದೆ. ಗ್ರಾಮದ ಸುರೇಶ ಗುಮ್ಮಡಿ ಎಂಬುವವರ ಹೊಲದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಸ್ಥಳೀಯರ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಮೊಸಳೆ ಸೆರೆ ಹಿಡಿದಿದ್ದಾರೆ. ಸೆರೆ ಹಿಡಿದ ಮೊಸಳೆಯನ್ನ ನದಿಗೆ ಬಿಟ್ಟಿದ್ದಾರೆ. https://ainkannada.com/massive-march-demanding-release-of-water-to-krishna-right-bank-canal/ ನದಿ ತೀರದ ಹೊಲಗದ್ದೆಗಳ ರೈತರಿಗೆ ದಿನೇ ದಿನೇ ಆತಂಕ ಹೆಚ್ಚಾಗುತ್ತಿದ್ದು, ಮೊಸಳೆಗಳ ಬಗ್ಗೆ ಎಚ್ಚರಿಕೆಯಿಂದಿರಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.