ಬೆಂಗಳೂರು: ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿನ್ನೆಯಿಂದ ಆರಂಭವಾಗಿದ್ದ ರಾಜ್ಯ ಬಿಜೆಪಿ ಬಿಜೆಪಿಯ ಅಹೋರಾತ್ರಿ ಧರಣಿ ಮುಕ್ತಾಯವಾಗಿದೆ. ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್ ಸೇರಿದಂತೆ ಹಲವು ನಾಯಕರು ಅಹೋರಾತ್ರಿ ಧರಣಿ ನಡೆಸಿದ್ದರು. ಇಂದು ಬೆಳಿಗ್ಗೆ ಧರಣಿ ಅಂತ್ಯಗೊಳಿಸಿದ ಬಿಜೆಪಿ ನಾಯಕರು ಸಿಎಂ ಮನೆ ಮುತ್ತಿಗೆ ಹಾಕಲು ಹೊರಟರು. ಬಿಜೆಪಿ ನಾಯಕರ ಜೊತೆ ನೂರಾರು ಕಾರ್ಯಕರ್ತರು ಸಿಎಂ ಮನೆ ಮುತ್ತಿಗೆಗೆ ಹೊರಟರು. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ ಎಲ್ಲಾ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು, ಬಸ್ ಗೆ ಹತ್ತಿಸಿ ಸ್ಥಳದಿಂದ ಕರೆದೊಯ್ದಿದ್ದಾರೆ. ಬ್ಯಾರಿಕೇಡ್ ಹಾಕಿ ತಡೆದ ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮೇಲೆ ಹತ್ತಿ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.…
Author: Author AIN
ರಾಯಚೂರು : ನೀರಿಗಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ನ ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಬೆಂಬಲಿ ನೀಡಿದ್ದಾರೆ. ಕೃಷ್ಣಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲಾಯಿತು. ಶಾಸಕಿ ಕರೆಮ್ಮಾ ನಾಯಕ್ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆದಿದ್ದು, ರಾಯಚೂರು ಹೊರ ಭಾಗದ ಸಾತ್ ಮೈಲ್ ಬಳಿ ಹೆದ್ದಾರಿ ತಡೆದು ಆಕ್ರೋಶವ್ಯಕ್ತಪಡಿಸಿದ್ದರು. ಶಾಸಕಿ ನೇತೃತ್ವದಲ್ಲಿ ರಸ್ತೆ ರೋಖೋ ಚಳುವಳಿ ನಡೆಸಿದರು. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ವರೆಗೂ ಪಾದಯಾತ್ರೆ ನಡೆಸಿದರು. https://ainkannada.com/officials-not-releasing-water-farmers-break-basavasagar-reservoir-canal-gates/ ಕಾಲುವೆಗೆ ನೀರಿಲ್ಲದೇ ಬೆಳೆ ಹಾನಿ ಭೀತಿ ಎದುರಿಸುತ್ತಿರೊ ರಾಯಚೂರು, ಯಾದಗಿರಿ ಜಿಲ್ಲೆ ರೈತರಿಗೆ ಭತ್ತ,ಮೆಣಸಿನಕಾಯಿ, ಶೇಂಗಾ ಬೆಳೆ ಹಾನಿ ಭೀತಿ ಎದುರಾಗಿದೆ. ಸದ್ಯ ಕಟಾವಿನ ಹಂತಕ್ಕೆ ಬಂದಿರುವ ಬೆಳೆಗಳಿಗೆ ಏ.15 ರ ವರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದು, ನೀರು ಹರಿಸಲು ಡೆಡ್ ಲೈನ್ ನೀಡಿದ್ದಾರೆ.
ಯಾದಗಿರಿ : ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕಾಲುವೆಗಳಿಗೆ ನೀರು ಬಂದ್ ಮಾಡಿರುವ ಸರ್ಕಾರದ ವಿರುದ್ದ ಅನ್ನದಾತರ ಆಕ್ರೋಶದ ಕಟ್ಟೆ ಹೊಡೆದಿದೆ. ನೀರು ಬಿಡದಕ್ಕೆ ರೊಚ್ಚಿಗೆದ್ದ ರೈತರು, ಕಾಲುವೆಯ ಗೇಟ್ ಗಳನ್ನೇ ಮುರಿದು ನೀರು ಹರಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರ್ ಗ್ರಾಮದ ಬಳಿ ಘಟನೆ ನಡೆದಿದೆ. ರಾತ್ರೋರಾತ್ರಿ ಬಸವಸಾಗರ ಜಲಾಶಯ ಎಡ ದಂಡೆ ಕಾಲುವೆಯ ಉಪ ಕಾಲುವೆ ನಂಬರ್ 10 A ಹಾಗೂ 11 ಗೇಟ್ ಮುರಿದಿದ್ದಾರೆ. https://ainkannada.com/hukkeri-attendant-kidnapping-case-do-you-know-the-dramatic-twist/ ಕಾಲುವೆ ಮುರಿದ ವಿಷಯ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಬಂದ ಅಧಿಕಾರಿಗಳನ್ನು ಸಹಿತ ಅಲ್ಲಿಂದ ಓಡಿಸಿದ್ದಾರೆ. ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸಹ ನೀರು ಹರಿಸಲಿಲ್ಲ. ಹೀಗಾಗಿ ಕೊನೆಗೆ ಕಾಲುವೆ ಗೇಟ್ ಗಳನ್ನೇ ಮುರಿದು ಜಮೀನುಗಳಿಗೆ ನೀರು ಬಿಟ್ಟುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್,ಕುಮಾರ್ ಅವರನ್ನು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 1.25 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎನ್ ಕುಮಾರ್ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಾಣಿಕ್ಯ, ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ ಸೇರಿದಂತೆ ಹಲವು ಚಿತ್ರಗಳನ್ನು ಎಂ ಎನ್ ಕುಮಾರ್ ನಿರ್ಮಿಸಿದ್ದರು. ಖ್ಯಾತ ನಟ ಜಗ್ಗೇಶ್ ಅವರು ನಿರ್ಮಾಪಕ ಎಂಎನ್ ಸುರೇಶ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು ಎನ್ನಲಾಗುತ್ತಿದೆ. ಈ ಹಿಂದೆ ಕುಮಾರ್ ಅವರು ಕಿಚ್ಚ ಸುದೀಪ್ ಮೇಲೆ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು. ಆ ಬಳಿಕ ನಟ ಸುದೀಪ್ ಅವರು ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ…
ಬೆಂಗಳೂರು: ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದ್ರೆ ಹೊಸ ಪಕ್ಷದ ಬಗ್ಗೆ ಚಿಂತಿಸ್ತೀವಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಹೇಳಿದ್ರು ಹೊಸ ಪಕ್ಷ ಕಟ್ಟುತ್ತೇವೆ ಅಂತಾ? ನಾವು ಮೊದಲು ಸರ್ವೇ ಮಾಡುತ್ತೇವೆ. ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದರೆ ಹೊಸ ಪಕ್ಷದ ಬಗ್ಗೆ ಚಿಂತನೆ ಮಾಡುತ್ತೇವೆ. ಈ ಕೆಟ್ಟ ಕುಟುಂಬ ತೆಗೆದರೆ ಮಾತ್ರ ಬಿಜೆಪಿಗೆ ಕರ್ನಾಟಕದಲ್ಲಿ ಭವಿಷ್ಯ ಇದೆ. ಇವರು ಭ್ರಷ್ಟಾಚಾರದಲ್ಲಿ ಇದ್ದಾರೆ. ಕೊರೊನಾ, ಡಿ-ನೋಟಿಫಿಕೇಶನ್ ಹಗರಣ ಇದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾತಾಡಲು ಇವರಿಗೇನು ನೈತಿಕತೆ ಇದೆ. ವಿಜಯೇಂದ್ರ ಚೇಲಾಗಳು ಯತ್ನಾಳ್ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಾರೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಡಿಕೆಶಿ ಕೊಟ್ಟ ಭಿಕ್ಷೆಯಿಂದ ಶಾಸಕ ಆಗಿರೋದು. ಹಾಗಾಗಿ ಮೊದಲು ವಿಜಯೇಂದ್ರ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಶಿಕಾರಿಪುರದಿಂದ ಆರಿಸಿ ಬರಲಿ. ಚೇಲಾಗಳ ಕೈಯಲ್ಲಿ ಹೇಳಿಸುವುದನ್ನು ಬಿಟ್ಟು ಧಮ್ ಇದ್ದರೆ ವಿಜಯೇಂದ್ರ ನನ್ನ ಎದುರಿಗೆ ಮಾತಾಡಲಿ, 4 ಚೇಲಾಗಳನ್ನ…
ನವದೆಹಲಿ: ದೆಹಲಿಗೆ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೇಕೆದಾಟು ಸೇರಿದಂತೆ ರಾಜ್ಯದ ಬಾಕಿ ಉಳಿದಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಸಂಬಂಧ ಸಮಾಲೋಚನೆ ನಡೆಸಿದರು. ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಉಪಸ್ಥಿತರಿದ್ದರು. ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಲೇ ಬಂದಿದೆ. ಇತ್ತೀಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿತ್ತು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. https://www.youtube.com/watch?v=OZlFPcjRM1A
ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮ್ಯಾಕ್ಸ್ ಮೂಲಕ ಮ್ಯಾಕ್ಸಿಮ್ ಎಂಟರ್ ಟೈನ್ಮೆಂಟ್ ಕೊಟ್ಟಿದ್ದ ಕಿಚ್ಚ ಈಗ ಬಿಲ್ಲ ರಂಗ ಭಾಷಾ ಅವತಾರವೆತ್ತಿದ್ದಾರೆ. ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಟ್ಮೇಲೆ ಸೈಲೆಂಟ್ ಆಗಿದ್ದ ಸುದೀಪ್ ಮಾರ್ಚ್ ಎರಡನೇ ವಾರದಿಂದ ಶೂಟಿಂಗ್ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದ್ದರು. ಆದರೆ ಬಿಲ್ಲ ರಂಗ ಭಾಷಾ ಅಂಗಳಕ್ಕೆ ಕಿಚ್ಚ ಇಳಿದೇ ಇಲ್ಲ. ಹೀಗಾಗಿ ಫ್ಯಾನ್ಸ್ ಯಾವಾಗಿನಿಂದ ಶೂಟಿಂಗ್ ಶುರು? ಅಪ್ ಡೇಟ್ ಕೊಡಿ ಅಂತಾ ನಿರ್ದೇಶಕರ ಹಿಂದೆ ಬಿದ್ದಿದ್ದಾರೆ. ಅಭಿಮಾನಿಗಳ ಕಾತರಕ್ಕೆ ಕಿಚ್ಚನ ತೆರೆ ಎಳೆದಿದ್ದಾರೆ.ಬಿಲ್ಲ ರಂಗ ಭಾಷಾ ಸಿನಿಮಾದ ಚಿತ್ರೀಕರಣ ಏಪ್ರಿಲ್ 16ರಂದು ಶುರುವಾಗಲಿದೆ. ಹಾಗಂತ ಕಿಚ್ಚ ಹೇಳಿಲ್ಲ. ಆದರೆ ಏಪ್ರಿಲ್ 16 ಅಂತಾ ಖಡಕ್ ಆಗಿರುವ ಎರಡು ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ. ದೇಹ ಹುರಿಗೊಳಿಸಿ, ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಮಾಣಿಕ್ಯ ಜಬರ್ದಸ್ತ್ ಫೋಟೋ ನೋಡಿ ಸುದೀಪಿಯನ್ಸ್ ಥ್ರಿಲ್ ಆಗಿದ್ದು, ಬಂದ ನೋಡು ಬಿಲ್ಲ ರಂಗ ಭಾಷಾ ಎನ್ನುತ್ತಿದ್ದಾರೆ. ಕಿಚ್ಚನಿಗೆ ವಿಕ್ರಾಂತ್…
ಬೆಂಗಳೂರು: ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದೆ. ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಕರಗ ಹೊರುತ್ತಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ. ಏ.9 ರಂದು ಆರತಿ ದೀಪಗಳು, ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ…
ಬೆಳಗಾವಿ : ತಹಶೀಲ್ದಾರರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕೆಲವರು ಅಪಹರಿಸಿ, ನಂತರ ಅಪಹರಣಕಾರರಿಂದ ಪರಾರಿಯಾಗಿ ವಾಪಸ್ ಬಂದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ. ತಹಶೀಲ್ದಾರ್ ಕಚೇರಿಯ ಅಟೆಂಡರ್ ಬಸಪ್ಪ ಕೋಟಗಿ ಮಾ. 25ರಂದು ಕಚೇರಿಗೆ ಹೋದರೂ ರಾತ್ರಿ ಮನೆಗೆ ಮರಳಲಿಲ್ಲ. ಬಸಪ್ಪ ಮನೆಗೆ ಮರಳದ ಕಾರಣ, ಅವರ ಸಹೋದರ ರಾಮೇಶ್ ಕಚೇರಿಗೆ ಕರೆ ಮಾಡಿದಾಗ, ಸಿಬ್ಬಂದಿ ಅವರು ಸಂಜೆ 4 ಗಂಟೆಯವರೆಗೆ ಕೆಲಸ ಮಾಡಿ, ನಂತರ ಜೆರಾಕ್ಸ್ ತೆಗೆದುಕೊಳ್ಳಲು ಹೊರಟು ಮರಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದರ ನಂತರ, ರಾಮೇಶ್ಗೆ ಬಸಪ್ಪನಿಂದಲೇ ಒಂದು ಆಘಾತಕಾರಿ ಕರೆ ಬಂದಿದ್ದು, ಅವರು ಅಪಹರಣಕ್ಕೊಳಗಾಗಿದ್ದು, ಅಪಹರಣಕಾರರು 2 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.1 ಲಕ್ಷ ರೂಪಾಯಿಯನ್ನಾದರೂ ತಲುಪಿಸಬೇಕೆಂದು ಬೇಡಿಕೆ ಇಟ್ಟಿದ್ದರು. https://ainkannada.com/constant-torture-by-a-foreign-young-man-for-rejecting-love-young-woman-attempts-suicide/ ರಾಮೇಶ್ ಹಣವನ್ನು ಒದಗಿಸಲು ಅಸಮರ್ಥನಾದ ಕಾರಣ ತಕ್ಷಣವೇ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಆದರೆ, ಇನ್ನೇನು ತನಿಖೆ ಪ್ರಾರಂಭವಾಗುವಷ್ಟರಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು,…
ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ ನಟ ಶಿವರಾಜಕುಮಾರ್, ಮಹಾನ್ ಚಿತ್ರದ ಸಣ್ಣ ಗ್ಲಿಂಪ್ಸ್ ಕೇಳಿದೆ. ತುಂಬಾ ಚೆನ್ನಾಗಿದೆ. ಶೀರ್ಷಿಕೆ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಮೊದಲಿಗೆ, ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಹೀರೋ, ನಮ್ಮ ಹ್ಯಾಟ್ರಿಕ್ ಹೀರೋ ಶಿವಣ್ಣ ಅವರಿಗೆ ನಮ್ಮ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. “ಮಹಾನ್” ಚಿತ್ರ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಪ್ರತಿಬಿಂಬ. ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು…