ಬೆಂಗಳೂರು: ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದ್ರೆ ಹೊಸ ಪಕ್ಷದ ಬಗ್ಗೆ ಚಿಂತಿಸ್ತೀವಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಹೇಳಿದ್ರು ಹೊಸ ಪಕ್ಷ ಕಟ್ಟುತ್ತೇವೆ ಅಂತಾ? ನಾವು ಮೊದಲು ಸರ್ವೇ ಮಾಡುತ್ತೇವೆ. ಬಿಜೆಪಿಯಲ್ಲಿ ಈ ಕೆಟ್ಟ ಯಡಿಯೂರಪ್ಪ ಕುಟುಂಬ ಮುಂದುವರೆದರೆ ಹೊಸ ಪಕ್ಷದ ಬಗ್ಗೆ ಚಿಂತನೆ ಮಾಡುತ್ತೇವೆ. ಈ ಕೆಟ್ಟ ಕುಟುಂಬ ತೆಗೆದರೆ ಮಾತ್ರ ಬಿಜೆಪಿಗೆ ಕರ್ನಾಟಕದಲ್ಲಿ ಭವಿಷ್ಯ ಇದೆ. ಇವರು ಭ್ರಷ್ಟಾಚಾರದಲ್ಲಿ ಇದ್ದಾರೆ. ಕೊರೊನಾ, ಡಿ-ನೋಟಿಫಿಕೇಶನ್ ಹಗರಣ ಇದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾತಾಡಲು ಇವರಿಗೇನು ನೈತಿಕತೆ ಇದೆ. ವಿಜಯೇಂದ್ರ ಚೇಲಾಗಳು ಯತ್ನಾಳ್ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಾರೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಡಿಕೆಶಿ ಕೊಟ್ಟ ಭಿಕ್ಷೆಯಿಂದ ಶಾಸಕ ಆಗಿರೋದು. ಹಾಗಾಗಿ ಮೊದಲು ವಿಜಯೇಂದ್ರ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಶಿಕಾರಿಪುರದಿಂದ ಆರಿಸಿ ಬರಲಿ. ಚೇಲಾಗಳ ಕೈಯಲ್ಲಿ ಹೇಳಿಸುವುದನ್ನು ಬಿಟ್ಟು ಧಮ್ ಇದ್ದರೆ ವಿಜಯೇಂದ್ರ ನನ್ನ ಎದುರಿಗೆ ಮಾತಾಡಲಿ, 4 ಚೇಲಾಗಳನ್ನ…
Author: Author AIN
ನವದೆಹಲಿ: ದೆಹಲಿಗೆ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೇಕೆದಾಟು ಸೇರಿದಂತೆ ರಾಜ್ಯದ ಬಾಕಿ ಉಳಿದಿರುವ ನೀರಾವರಿ ಯೋಜನೆಗಳಿಗೆ ಅನುಮತಿ ಸಂಬಂಧ ಸಮಾಲೋಚನೆ ನಡೆಸಿದರು. ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಉಪಸ್ಥಿತರಿದ್ದರು. ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ನೆರೆಯ ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಲೇ ಬಂದಿದೆ. ಇತ್ತೀಚೆಗೆ ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿತ್ತು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. https://www.youtube.com/watch?v=OZlFPcjRM1A
ಅಭಿನಯ ಚಕ್ರವರ್ತಿ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮ್ಯಾಕ್ಸ್ ಮೂಲಕ ಮ್ಯಾಕ್ಸಿಮ್ ಎಂಟರ್ ಟೈನ್ಮೆಂಟ್ ಕೊಟ್ಟಿದ್ದ ಕಿಚ್ಚ ಈಗ ಬಿಲ್ಲ ರಂಗ ಭಾಷಾ ಅವತಾರವೆತ್ತಿದ್ದಾರೆ. ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಟ್ಮೇಲೆ ಸೈಲೆಂಟ್ ಆಗಿದ್ದ ಸುದೀಪ್ ಮಾರ್ಚ್ ಎರಡನೇ ವಾರದಿಂದ ಶೂಟಿಂಗ್ ಅಖಾಡಕ್ಕೆ ಇಳಿಯುವುದಾಗಿ ತಿಳಿಸಿದ್ದರು. ಆದರೆ ಬಿಲ್ಲ ರಂಗ ಭಾಷಾ ಅಂಗಳಕ್ಕೆ ಕಿಚ್ಚ ಇಳಿದೇ ಇಲ್ಲ. ಹೀಗಾಗಿ ಫ್ಯಾನ್ಸ್ ಯಾವಾಗಿನಿಂದ ಶೂಟಿಂಗ್ ಶುರು? ಅಪ್ ಡೇಟ್ ಕೊಡಿ ಅಂತಾ ನಿರ್ದೇಶಕರ ಹಿಂದೆ ಬಿದ್ದಿದ್ದಾರೆ. ಅಭಿಮಾನಿಗಳ ಕಾತರಕ್ಕೆ ಕಿಚ್ಚನ ತೆರೆ ಎಳೆದಿದ್ದಾರೆ.ಬಿಲ್ಲ ರಂಗ ಭಾಷಾ ಸಿನಿಮಾದ ಚಿತ್ರೀಕರಣ ಏಪ್ರಿಲ್ 16ರಂದು ಶುರುವಾಗಲಿದೆ. ಹಾಗಂತ ಕಿಚ್ಚ ಹೇಳಿಲ್ಲ. ಆದರೆ ಏಪ್ರಿಲ್ 16 ಅಂತಾ ಖಡಕ್ ಆಗಿರುವ ಎರಡು ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ. ದೇಹ ಹುರಿಗೊಳಿಸಿ, ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಮಾಣಿಕ್ಯ ಜಬರ್ದಸ್ತ್ ಫೋಟೋ ನೋಡಿ ಸುದೀಪಿಯನ್ಸ್ ಥ್ರಿಲ್ ಆಗಿದ್ದು, ಬಂದ ನೋಡು ಬಿಲ್ಲ ರಂಗ ಭಾಷಾ ಎನ್ನುತ್ತಿದ್ದಾರೆ. ಕಿಚ್ಚನಿಗೆ ವಿಕ್ರಾಂತ್…
ಬೆಂಗಳೂರು: ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದೆ. ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಕರಗ ಹೊರುತ್ತಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ. ಏ.9 ರಂದು ಆರತಿ ದೀಪಗಳು, ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ…
ಬೆಳಗಾವಿ : ತಹಶೀಲ್ದಾರರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕೆಲವರು ಅಪಹರಿಸಿ, ನಂತರ ಅಪಹರಣಕಾರರಿಂದ ಪರಾರಿಯಾಗಿ ವಾಪಸ್ ಬಂದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ನಡೆದಿದೆ. ತಹಶೀಲ್ದಾರ್ ಕಚೇರಿಯ ಅಟೆಂಡರ್ ಬಸಪ್ಪ ಕೋಟಗಿ ಮಾ. 25ರಂದು ಕಚೇರಿಗೆ ಹೋದರೂ ರಾತ್ರಿ ಮನೆಗೆ ಮರಳಲಿಲ್ಲ. ಬಸಪ್ಪ ಮನೆಗೆ ಮರಳದ ಕಾರಣ, ಅವರ ಸಹೋದರ ರಾಮೇಶ್ ಕಚೇರಿಗೆ ಕರೆ ಮಾಡಿದಾಗ, ಸಿಬ್ಬಂದಿ ಅವರು ಸಂಜೆ 4 ಗಂಟೆಯವರೆಗೆ ಕೆಲಸ ಮಾಡಿ, ನಂತರ ಜೆರಾಕ್ಸ್ ತೆಗೆದುಕೊಳ್ಳಲು ಹೊರಟು ಮರಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದರ ನಂತರ, ರಾಮೇಶ್ಗೆ ಬಸಪ್ಪನಿಂದಲೇ ಒಂದು ಆಘಾತಕಾರಿ ಕರೆ ಬಂದಿದ್ದು, ಅವರು ಅಪಹರಣಕ್ಕೊಳಗಾಗಿದ್ದು, ಅಪಹರಣಕಾರರು 2 ಲಕ್ಷ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.1 ಲಕ್ಷ ರೂಪಾಯಿಯನ್ನಾದರೂ ತಲುಪಿಸಬೇಕೆಂದು ಬೇಡಿಕೆ ಇಟ್ಟಿದ್ದರು. https://ainkannada.com/constant-torture-by-a-foreign-young-man-for-rejecting-love-young-woman-attempts-suicide/ ರಾಮೇಶ್ ಹಣವನ್ನು ಒದಗಿಸಲು ಅಸಮರ್ಥನಾದ ಕಾರಣ ತಕ್ಷಣವೇ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಆದರೆ, ಇನ್ನೇನು ತನಿಖೆ ಪ್ರಾರಂಭವಾಗುವಷ್ಟರಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು,…
ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ ನಟ ಶಿವರಾಜಕುಮಾರ್, ಮಹಾನ್ ಚಿತ್ರದ ಸಣ್ಣ ಗ್ಲಿಂಪ್ಸ್ ಕೇಳಿದೆ. ತುಂಬಾ ಚೆನ್ನಾಗಿದೆ. ಶೀರ್ಷಿಕೆ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಮೊದಲಿಗೆ, ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಹೀರೋ, ನಮ್ಮ ಹ್ಯಾಟ್ರಿಕ್ ಹೀರೋ ಶಿವಣ್ಣ ಅವರಿಗೆ ನಮ್ಮ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. “ಮಹಾನ್” ಚಿತ್ರ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಪ್ರತಿಬಿಂಬ. ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು…
ಹುಬ್ಬಳ್ಳಿ : ನಾಲ್ಕು ಪರಿಷತ್ ಸದಸ್ಯ ಸ್ಥಾನ ಖಾಲಿಯಿದೆ ಹೀಗಾಗಿ ಹೈಕಮಾಂಡ್ ಬಳಿ ಆ ಬಗ್ಗೆ ಚರ್ಚೆ ಮಾಡಲು ತೆರಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದರು. ಹುಬ್ಬಳ್ಳಿ ನಗರದಲ್ಲಿ ಇಂದು ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿ ಸಂಪುಟ ವಿಸ್ತರಣೆ ವದಂತಿ ತಳ್ಳಿಹಾಕಿದರು. ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಜೊತೆಗೆ 4 ಎಂಎಲ್ ಸಿ ಸ್ಥಾನ ಖಾಲಿ ಇದೆ. ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ಬಹಳಷ್ಟು ದಿನ ಖಾಲಿಯಿಟ್ಟುಕೊಂಡು ಕೂರಲು ಆಗಲ್ಲ. ಯಾವುದೇ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಇಲ್ಲ ಎಂದರು. ಅದು ಸಿಎಂ ವಿವೇಚನೆಗೆ ಬಿಟ್ಟಿದ್ದು ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ https://ainkannada.com/rahul-gandhi-sidharamaih-meeting-suspencee/ ಇನ್ನೂ ಯತ್ನಾಳ ಕಾಂಗ್ರೆಸ್ ಗೆ ಬರೋದು ಎಲ್ಲಾ ಸುಳ್ಳು ನಮಗ್ಯಾಕೆ ಅವರ ಪಾರ್ಟಿ ಸುದ್ದಿ. ಅವರುಂಟು ಅವರ ಪಾರ್ಟಿ ಉಂಟು ಅವರಿಗೆ ಒಳ್ಳೆಯದಾಗಲಿ ಎಂದರು. ಇದೇ ವೇಳೆ ವಕ್ಪ್ ಬೋರ್ಡ್ ಮಸೂದೆ ಕುರಿತ ಪ್ರಶ್ನೆಗೆ ಉತ್ತರಿಸದೇ ಮೌನವಾಗಿ…
ಐಪಿಎಲ್ 18ನೇ ಆವೃತ್ತಿಯಲ್ಲಿ ಆರ್ ಸಿಬಿ ಅಬ್ಬರ ಜೋರಾಗಿದೆ. ನಿನ್ನೆ ತವರಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಜತ್ ಪಾಟೀದಾರ್ ಪಡೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದ್ರೆ ಜಿಟಿ ಅಬ್ಬರಕ್ಕೆ ಆರ್ ಸಿಬಿ ತತ್ತರಿಸಿದ್ದು, ತವರಿನಲ್ಲಿ ಆರ್ ಸಿಬಿ ಮುಖಭಂಗ ಅನುಭವಿಸುವಂತಾಯ್ತು. ಪಂದ್ಯ ಆರಂಭಕ್ಕೂ ಮುನ್ನ ಕರ್ನಾಟಕದ ಖ್ಯಾತ ಗಾಯಕ ವಿಜಯ್ ಸಂಗೀತ ಕಾರ್ಯಕ್ರಮ ನಡೆಸಿಯಿತು. ಈ ಬಾರಿ ಐಪಿಎಲ್ಗೆ ಆತಿಥ್ಯ ವಹಿಸುವ ಎಲ್ಲಾ 13 ನಗರಗಳಲ್ಲೂ ಬಿಸಿಸಿಐ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಿತ್ತು. ಅದರಂತೆ ಬೆಂಗಳೂರಲ್ಲೂ ಪಂದ್ಯಕ್ಕೂ ಮುನ್ನ ಅದ್ಧೂರಿ ಕಾರ್ಯಕ್ರಮ ನಡೆಯಿತು. ವಿಜಯ್ ಪ್ರಕಾಶ್ ಸಂಗೀತ ಸುಧೆ ಹರಿಸಿದ್ದು, ನೆರೆದಿದ್ದ ಆರ್ ಸಿಬಿ ಅಭಿಮಾನಿಗಳು ಕನ್ನಡ ಹಾಡುಗಳನ್ನು ಕೇಳಿ ನಿಂತಲ್ಲೇ ಹೆಜ್ಜೆ ಹಾಕಿದರು. ಚಿನ್ನಸ್ವಾಮಿ ಅಂಗಳದಲ್ಲಿ ಆರ್ ಸಿಬಿಗಾಗಿ ಹಾಡಿ ಕುಣಿದ ಬಂದ ವಿಜಯ್ ಪ್ರಕಾಶ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, ಪಾದದ ಮೂಳೆ ಉಳುಕಿದ್ದು, ಅದೃಷ್ಟವಶಾತ್ ಪ್ರದರ್ಶನದ ನಂತರ ಈ…
ಗುಜರಾತ್ನ ಜಾಮ್ನಗರ ಜಿಲ್ಲೆಯ ಸುವರ್ದಾ ಗ್ರಾಮದಲ್ಲಿ ತೆರೆದ ಮೈದಾನದಲ್ಲಿ ಪತನಗೊಂಡ ಭಾರತೀಯ ವಾಯುಪಡೆಯ (IAF) ಎರಡು ಆಸನಗಳ ಜಾಗ್ವಾರ್ ಯುದ್ಧ ವಿಮಾನದ ಪೈಲಟ್ಗಳಲ್ಲಿ ಒಬ್ಬರು ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು IAF ಮುಂಜಾನೆ ತಿಳಿಸಿದೆ. ವಿಮಾನದಿಂದ ಜಿಗಿದು ರಕ್ಷಿಸಲ್ಪಟ್ಟ ಮತ್ತೊಬ್ಬ ಪೈಲಟ್ ಜಾಮ್ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಾಯುಪಡೆ ಮತ್ತಷ್ಟು ತಿಳಿಸಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ “ಜಾಮ್ನಗರ ವಾಯುನೆಲೆಯಿಂದ ಹಾರಿದ IAF ಎರಡು ಆಸನಗಳ ವಿಮಾನವು ರಾತ್ರಿ ಕಾರ್ಯಾಚರಣೆಯ ಸಮಯದಲ್ಲಿ ಅಪಘಾತಕ್ಕೀಡಾಯಿತು. ಪೈಲಟ್ಗಳು ತಾಂತ್ರಿಕ ದೋಷವನ್ನು ಎದುರಿಸಿದರು ಮತ್ತು ಎಜೆಕ್ಷನ್ ಅನ್ನು ಪ್ರಾರಂಭಿಸಿದರು, ಇದರಿಂದಾಗಿ ವಾಯುನೆಲೆ ಮತ್ತು ಸ್ಥಳೀಯ ಜನರಿಗೆ ಹಾನಿಯಾಗದಂತೆ ತಪ್ಪಿಸಲಾಯಿತು. ದುರದೃಷ್ಟವಶಾತ್, ಒಬ್ಬ ಪೈಲಟ್ ಗಾಯಗಳಿಂದ ಸಾವನ್ನಪ್ಪಿದರು, ಆದರೆ ಇನ್ನೊಬ್ಬ ಪೈಲಟ್ ಜಾಮ್ನಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು IAF ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿದೆ. “ಜೀವನ ನಷ್ಟಕ್ಕೆ IAF ತೀವ್ರವಾಗಿ ವಿಷಾದಿಸುತ್ತದೆ ಮತ್ತು ದುಃಖಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ವಿಚಾರಣಾ…
ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಿನ್ನೆಯೇ ಕರ್ನಾಟಕ ಭವನ-೧ ಉದ್ಘಾಟನೆಗೆಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರ ಭೇಟಿ ಫಿಕ್ಸ್ ಆಗಿದೆ. ಕಳೆದವಾರ ಸಿಎಂ ಆರೋಗ್ಯ ವಿಚಾರಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿಗೆ ಬನ್ನಿ ಮಾತನಾಡೋಣ ಎಂದು ಸೂಚಿಸಿದ್ದರಂತೆ. ಹೀಗಾಗಿ ರಾಹುಲ್ ಗಾಂಧಿ ಭೇಟಿ ಬಳಿಕ ಇದೀಗ ಖರ್ಗೆ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುವ ಸಾಧ್ಯತೆ ಇದೆ. ಜತೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಚಿವ ಕೆ.ಎನ್ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ, ಖಾಲಿ ಇರುವ ವಿಧಾನಪರಿಷತ್ ಸ್ಥಾನಗಳಿಗೆ ನಾಮನಿರ್ದೇಶನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೈಕಮಾಂಡ್ ನಾಯಕರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆಯಂತೆ. ಹೀಗಾಗಿ ಸಿದ್ದರಾಮಯ್ಯ- ರಾಹುಲ್ ಗಾಂಧಿ ಭೇಟಿ ಹಲವು ರಾಜಕೀಯ ಊಹಾಪೋಹಗಳಿಗೆ…