Author: Author AIN

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ ಮಾತನಾಡಿರುವ ನಟ ಶಿವರಾಜಕುಮಾರ್, ಮಹಾನ್ ಚಿತ್ರದ ಸಣ್ಣ ಗ್ಲಿಂಪ್ಸ್ ಕೇಳಿದೆ. ತುಂಬಾ ಚೆನ್ನಾಗಿದೆ. ಶೀರ್ಷಿಕೆ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಮೊದಲಿಗೆ, ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಹೀರೋ, ನಮ್ಮ ಹ್ಯಾಟ್ರಿಕ್ ಹೀರೋ ಶಿವಣ್ಣ ಅವರಿಗೆ ನಮ್ಮ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. “ಮಹಾನ್” ಚಿತ್ರ ನಮ್ಮ ಭೂಮಿಯ, ನಮ್ಮ ರೈತರ, ಅವರ ಹೋರಾಟದ ಪ್ರತಿಬಿಂಬ. ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು…

Read More

ಹುಬ್ಬಳ್ಳಿ : ನಾಲ್ಕು ಪರಿಷತ್‌ ಸದಸ್ಯ ಸ್ಥಾನ ಖಾಲಿಯಿದೆ ಹೀಗಾಗಿ ಹೈಕಮಾಂಡ್ ಬಳಿ ಆ ಬಗ್ಗೆ ಚರ್ಚೆ ಮಾಡಲು ತೆರಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದರು. ಹುಬ್ಬಳ್ಳಿ ನಗರದಲ್ಲಿ ಇಂದು ಡಿಸಿಎಂ ಡಿಕೆಶಿವಕುಮಾರ್‌ ಮಾತನಾಡಿ ಸಂಪುಟ ವಿಸ್ತರಣೆ ವದಂತಿ ತಳ್ಳಿಹಾಕಿದರು. ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಜೊತೆಗೆ 4 ಎಂಎಲ್‌ ಸಿ ಸ್ಥಾನ ಖಾಲಿ ಇದೆ.  ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ಬಹಳಷ್ಟು ದಿನ ಖಾಲಿಯಿಟ್ಟುಕೊಂಡು ಕೂರಲು ಆಗಲ್ಲ. ಯಾವುದೇ ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಇಲ್ಲ ಎಂದರು. ಅದು ಸಿಎಂ ವಿವೇಚನೆಗೆ ಬಿಟ್ಟಿದ್ದು ಅದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ https://ainkannada.com/rahul-gandhi-sidharamaih-meeting-suspencee/ ಇನ್ನೂ ಯತ್ನಾಳ ಕಾಂಗ್ರೆಸ್ ಗೆ ಬರೋದು ಎಲ್ಲಾ ಸುಳ್ಳು ನಮಗ್ಯಾಕೆ ಅವರ ಪಾರ್ಟಿ ಸುದ್ದಿ. ಅವರುಂಟು ಅವರ ಪಾರ್ಟಿ ಉಂಟು ಅವರಿಗೆ ಒಳ್ಳೆಯದಾಗಲಿ ಎಂದರು. ಇದೇ ವೇಳೆ ವಕ್ಪ್ ಬೋರ್ಡ್ ಮಸೂದೆ ಕುರಿತ ಪ್ರಶ್ನೆಗೆ ಉತ್ತರಿಸದೇ ಮೌನವಾಗಿ…

Read More

ಐಪಿಎಲ್ 18ನೇ ಆವೃತ್ತಿಯಲ್ಲಿ ಆರ್ ಸಿಬಿ ಅಬ್ಬರ ಜೋರಾಗಿದೆ. ನಿನ್ನೆ ತವರಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಜತ್ ಪಾಟೀದಾರ್ ಪಡೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದ್ರೆ ಜಿಟಿ ಅಬ್ಬರಕ್ಕೆ ಆರ್ ಸಿಬಿ ತತ್ತರಿಸಿದ್ದು, ತವರಿನಲ್ಲಿ ಆರ್ ಸಿಬಿ ಮುಖಭಂಗ ಅನುಭವಿಸುವಂತಾಯ್ತು. ಪಂದ್ಯ ಆರಂಭಕ್ಕೂ ಮುನ್ನ ಕರ್ನಾಟಕದ ಖ್ಯಾತ ಗಾಯಕ ವಿಜಯ್ ಸಂಗೀತ ಕಾರ್ಯಕ್ರಮ ನಡೆಸಿಯಿತು. ಈ ಬಾರಿ ಐಪಿಎಲ್ಗೆ ಆತಿಥ್ಯ ವಹಿಸುವ ಎಲ್ಲಾ 13 ನಗರಗಳಲ್ಲೂ ಬಿಸಿಸಿಐ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಿತ್ತು. ಅದರಂತೆ ಬೆಂಗಳೂರಲ್ಲೂ ಪಂದ್ಯಕ್ಕೂ ಮುನ್ನ ಅದ್ಧೂರಿ ಕಾರ್ಯಕ್ರಮ ನಡೆಯಿತು. ವಿಜಯ್ ಪ್ರಕಾಶ್ ಸಂಗೀತ ಸುಧೆ ಹರಿಸಿದ್ದು, ನೆರೆದಿದ್ದ ಆರ್ ಸಿಬಿ ಅಭಿಮಾನಿಗಳು ಕನ್ನಡ ಹಾಡುಗಳನ್ನು ಕೇಳಿ ನಿಂತಲ್ಲೇ ಹೆಜ್ಜೆ ಹಾಕಿದರು. ಚಿನ್ನಸ್ವಾಮಿ ಅಂಗಳದಲ್ಲಿ ಆರ್ ಸಿಬಿಗಾಗಿ ಹಾಡಿ ಕುಣಿದ ಬಂದ ವಿಜಯ್ ಪ್ರಕಾಶ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, ಪಾದದ ಮೂಳೆ ಉಳುಕಿದ್ದು, ಅದೃಷ್ಟವಶಾತ್ ಪ್ರದರ್ಶನದ ನಂತರ ಈ…

Read More

ಗುಜರಾತ್‌ನ ಜಾಮ್‌ನಗರ ಜಿಲ್ಲೆಯ ಸುವರ್ದಾ ಗ್ರಾಮದಲ್ಲಿ ತೆರೆದ ಮೈದಾನದಲ್ಲಿ ಪತನಗೊಂಡ ಭಾರತೀಯ ವಾಯುಪಡೆಯ (IAF) ಎರಡು ಆಸನಗಳ ಜಾಗ್ವಾರ್ ಯುದ್ಧ ವಿಮಾನದ ಪೈಲಟ್‌ಗಳಲ್ಲಿ ಒಬ್ಬರು ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು IAF ಮುಂಜಾನೆ ತಿಳಿಸಿದೆ. ವಿಮಾನದಿಂದ ಜಿಗಿದು ರಕ್ಷಿಸಲ್ಪಟ್ಟ ಮತ್ತೊಬ್ಬ ಪೈಲಟ್ ಜಾಮ್‌ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಾಯುಪಡೆ ಮತ್ತಷ್ಟು ತಿಳಿಸಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ “ಜಾಮ್‌ನಗರ ವಾಯುನೆಲೆಯಿಂದ ಹಾರಿದ IAF ಎರಡು ಆಸನಗಳ ವಿಮಾನವು ರಾತ್ರಿ ಕಾರ್ಯಾಚರಣೆಯ ಸಮಯದಲ್ಲಿ ಅಪಘಾತಕ್ಕೀಡಾಯಿತು. ಪೈಲಟ್‌ಗಳು ತಾಂತ್ರಿಕ ದೋಷವನ್ನು ಎದುರಿಸಿದರು ಮತ್ತು ಎಜೆಕ್ಷನ್ ಅನ್ನು ಪ್ರಾರಂಭಿಸಿದರು, ಇದರಿಂದಾಗಿ ವಾಯುನೆಲೆ ಮತ್ತು ಸ್ಥಳೀಯ ಜನರಿಗೆ ಹಾನಿಯಾಗದಂತೆ ತಪ್ಪಿಸಲಾಯಿತು. ದುರದೃಷ್ಟವಶಾತ್, ಒಬ್ಬ ಪೈಲಟ್ ಗಾಯಗಳಿಂದ ಸಾವನ್ನಪ್ಪಿದರು, ಆದರೆ ಇನ್ನೊಬ್ಬ ಪೈಲಟ್ ಜಾಮ್‌ನಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು IAF ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಿದೆ. “ಜೀವನ ನಷ್ಟಕ್ಕೆ IAF ತೀವ್ರವಾಗಿ ವಿಷಾದಿಸುತ್ತದೆ ಮತ್ತು ದುಃಖಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ವಿಚಾರಣಾ…

Read More

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ನಿನ್ನೆಯೇ ಕರ್ನಾಟಕ ಭವನ-೧ ಉದ್ಘಾಟನೆಗೆಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಸೇರಿದಂತೆ ಹೈಕಮಾಂಡ್‌ ನಾಯಕರ ಭೇಟಿ ಫಿಕ್ಸ್‌ ಆಗಿದೆ. ಕಳೆದವಾರ ಸಿಎಂ ಆರೋಗ್ಯ ವಿಚಾರಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿಗೆ ಬನ್ನಿ ಮಾತನಾಡೋಣ ಎಂದು ಸೂಚಿಸಿದ್ದರಂತೆ. ಹೀಗಾಗಿ ರಾಹುಲ್‌ ಗಾಂಧಿ ಭೇಟಿ ಬಳಿಕ ಇದೀಗ ಖರ್ಗೆ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುವ ಸಾಧ್ಯತೆ ಇದೆ. ಜತೆಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಚಿವ ಕೆ.ಎನ್‌ ರಾಜಣ್ಣಗೆ ಹನಿಟ್ರ್ಯಾಪ್‌ ಯತ್ನ, ಖಾಲಿ ಇರುವ ವಿಧಾನಪರಿಷತ್‌ ಸ್ಥಾನಗಳಿಗೆ ನಾಮನಿರ್ದೇಶನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೈಕಮಾಂಡ್‌ ನಾಯಕರಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆಯಂತೆ. ಹೀಗಾಗಿ ಸಿದ್ದರಾಮಯ್ಯ- ರಾಹುಲ್‌ ಗಾಂಧಿ ಭೇಟಿ ಹಲವು ರಾಜಕೀಯ ಊಹಾಪೋಹಗಳಿಗೆ…

Read More

ಬೆಂಗಳೂರು: ರಾಜ್ಯದಲ್ಲಿ ಒಂದೊಂದಾಗಿ ಎಲ್ಲರದ ದರದಲ್ಲೂ ಏರಿಕೆ ಆಗುತ್ತಿದೆ. ಮೊನ್ನೆಯಷ್ಟೆ ಹಾಲಿನ ಬೆಲೆ ಏರಿಕೆಯಾಯ್ತು. ಇದೀಗ ಬೆಂಗಳೂರಿನ ಅನೇಕ ದರ್ಶಿನಿಗಳಲ್ಲಿ, ಹೋಟೆಲ್​ಗಳಲ್ಲಿ ಹಾಗೂ ಅಂಗಡಿಗಳಲ್ಲಿ ಕಾಫಿ ಮತ್ತು ಚಹಾ ದರ ಏರಿಕೆಯಾಗಿದೆ. 3 ರೂಪಾಯಿಯಿಂದ ತೊಡಗಿ 5 ರೂಪಾಯಿವರೆಗೆ ದರ ಹೆಚ್ಚಳವಾಗಿದೆ. ಆದರೆ, ಕಾಫಿ ಮತ್ತು ಚಹಾ ದರ ಏರಿಕೆ ವಿಚಾರವಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಈವರಿಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ನಂದಿನಿ ಹಾಲಿನ ದರ ಪ್ರತಿ ಲೀಟರ್​​ಗೆ ನಾಲ್ಕು ರೂಪಾಯಿ ಹೆಚ್ಚಳವಾಗಿರುವುದರಿಂದ ಅನಿವಾರ್ಯವಾಗಿ ಕಾಫಿ ಮತ್ತು ಚಹಾದ ದರ ಹೆಚ್ಚಳ ಮಾಡಬೇಕಾಗಿದೆ. ಅದೇ ರೀತಿ ಇತರ ಹಾಲಿನ ಉತ್ಪನ್ನಗಳ ದರ ಕೂಡ ಏರಿಕೆ ಮಾಡಬೇಕಾಗುತ್ತದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಕೆಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಕಾಫಿ ಪುಡಿಯ ದರ ಕೂಡ ಕೆಲವು ವಾರಗಳ ಹಿಂದೆ ಹೆಚ್ಚಾಗಿತ್ತು. ಇದು ಕೂಡ ಕಾಫಿ ದರ ಏರಿಕೆಗೆ ಕಾರಣವಾಗಿದೆ. ಫೆಬ್ರವರಿ ಕೊನೆಯ ವಾರದ…

Read More

ತೆಲುಗು ಸಿನಿ ಪ್ರಿಯರು ನಟಿ ರಾಧಿಕಾ ಶರತ್‌ಕುಮಾರ್ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಅವರು ಒಂದು ಕಾಲದಲ್ಲಿ ದಕ್ಷಿಣ ಚಿತ್ರರಂಗದಲ್ಲಿ ಸ್ಟಾರ್ ನಾಯಕಿಯಾಗಿದ್ದರು. ಟಾಪ್ ಹೀರೋಗಳ ಜೊತೆ ಪರದೆ ಹಂಚಿಕೊಳ್ಳುವಾಗ ಒಂದು ಬೆಳಕು ಮೂಡಿತು. ಅವರು ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಆ ಕಾಲದಲ್ಲಿ ಟಾಪ್ ಹೀರೋಯಿನ್ ಆಗಿ ಉದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದ ರಾಧಿಕಾ, ಈಗ ಪೋಷಕ ನಟಿಯಾಗಿ ಹೆಸರು ಮಾಡುತ್ತಿದ್ದಾರೆ. ಅವರು ಯುವ ನಾಯಕರು ಮತ್ತು ನಾಯಕಿಯರಿಗೆ ತಾಯಿ ಮತ್ತು ಚಿಕ್ಕಮ್ಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದಲ್ಲದೆ, ಅವರು ರಾಜಕೀಯದಲ್ಲಿಯೂ ಸಕ್ರಿಯರಾಗಿದ್ದಾರೆ. ಏತನ್ಮಧ್ಯೆ, ರಾಧಿಕಾ ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಅನೇಕ ಜನರಿಗೆ ತಿಳಿದಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಆದರೆ ಅನೇಕ ಜನರಿಗೆ ತಿಳಿದಿಲ್ಲದ ಒಂದು ವಿಷಯವಿದೆ. ಅವರ ಅಳಿಯ ಟೀಮ್ ಇಂಡಿಯಾ ಕ್ರಿಕೆಟಿಗ. ಅವನೇ ಅಭಿಮನ್ಯು ಮಿಥುನ್. 2009-10ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕರ್ನಾಟಕದ ಕ್ರಿಕೆಟಿಗ…

Read More

ಹುಬ್ಬಳ್ಳಿ : ಅನ್ಯಕೋಮಿನ ಯುವಕನ ಟಾರ್ಚರ್ ನಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಪ್ರಮೋದ್‌ ಮುತಾಲಿಕ್‌  ಯುವತಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ. ಹುಬ್ಬಳ್ಳಿ  ಕಿಮ್ಸ್ ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಯುವತಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. https://ainkannada.com/constant-torture-by-a-foreign-young-man-for-rejecting-love-young-woman-attempts-suicide/ ಕಳೆದ ಎರಡು ದಿನಗಳ ಹಿಂದೆ ಅನ್ಯಕೋಮಿನ ಯುವಕ ಸಿರಾಜ್ ನಿಂದ ಯುವತಿಗೆ ಟಾರ್ಚರ್ ನೀಡಲಾಗಿತ್ತುಧಾರವಾಡ ಜಿಲ್ಲೆಯ ಕುಂದಗೋಳ ನಿವಾಸಿ ವಿದ್ಯಾಗೆ ಆಕೆಯ  ಫೋಟೋ ಇಟ್ಕೊಂಡು ಟಾರ್ಚರ್ ನೀಡಲಾಗಿತ್ತು. ಇದರಿಂದ ಮನನೊಂದು ವಿದ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಳು. ಟ್ಯಾಬ್ಲೆಟ್ ತಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾ ಇದೀಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Read More

ಬೆಳಗಾವಿ : ಪಾರ್ಟಿ ಮಾಡುವ ನೆಪದಲ್ಲಿ ಕರೆದು ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ  ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಬಲ‌ಒಗಿ ಗ್ರಾಮದ ಶಿವನಗೌಡ ಪಾಟೀಲ್ (43) ಕೊಲೆಯಾದ ವ್ಯಕ್ತಿ. ಮನೆಯವರಿಗೆ ಹುಬ್ಬಳ್ಳಿಗೆ ಹೋಗಿ ಬರೋದಾಗಿ ಹೇಳಿದ್ದ ಶಿವನಗೌಡ ರಾತ್ರಿಯಾದ್ರೂ ಮನೆಗೆ ಬರದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಆದರೆ ಶಿವನಗೌಡ ಪತ್ತೆಯಾಗಿಲ್ಲ. https://ainkannada.com/gold-jewellery-stolen-from-judges-house-cctv-footage-captured/ ಇಂದು ಬೆಳಗ್ಗೆ ನಿರ್ಜನ ಪ್ರದೇಶದಲ್ಲಿ ಶವ ಕಂಡು ರೈತರೊಬ್ಬರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪರಿಚಯಸ್ಥರೇ ಕರೆದು ಕುಡಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆತನ ಕೊಂದು ಬೈಕ್ ಅಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನು ರವಾನನಿಸಲಾಗಿದೆ. ಈ ಸಂಬಂಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ವಕ್ಫ್ ಕಾಯ್ದೆ ತಿದ್ದುಪಡಿಯಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತನ್ನ ಓಲೈಕೆ ರಾಜಕಾರಣಕ್ಕಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಯಾವ ಜಮೀನನ್ನು ಬೇಕಾದರೂ ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳುವ ಅವಕಾಶ ಕೊಟ್ಟಿತ್ತು. ಇದರಿಂದ ರೈತರ ಜಮೀನು, ದೇವಸ್ಥಾನ, ಮಠ-ಮಂದಿರಗಳ ಆಸ್ತಿ ಎಲ್ಲ ಕಬಳಿಕೆ ಆಗುತ್ತಿತ್ತು. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಈಗ ಎನ್ ಡಿಎ ಸರ್ಕಾರ ತಂದಿರುವ ತಿದ್ದುಪಡಿಯಿಂದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಮಠ ಮಾನ್ಯಗಳ ಜಮೀನು ಸುರಕ್ಷಿತವಾಗಿ ಉಳಿಯಲಿದೆ. ಇದಕ್ಕಾಗಿ ಪ್ರಧಾನಮಂತ್ರಿಗಳಿಗೆ, ಕೇಂದ್ರ ಗೃಹ ಸಚಿವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಎಂದರು.

Read More