ತೆಲುಗಿನಲ್ಲಿ ಬಾಸ್, ಶ್ರೀರಾಮ್, ನೇನುನ್ನಾನು, ಆಟ ಸೇರಿದಂತೆ ಹಲವು ಹಿಟ್ ಚಿತ್ರ ನಿರ್ದೇಶಿಸಿರುವ ಪ್ರತಿಭಾನ್ವಿತ ನಿರ್ದೇಶಕ ಡಾ. ವಿ.ಎನ್. ಆದಿತ್ಯ ಈಗ ‘ಫಣಿ’ ಎಂಬ ಗ್ಲೋಬಲ್ ಸಿನಿಮಾ ಮಾಡುತ್ತಿದ್ದಾರೆ. ಓಎಂಜಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಡಾ. ಮೀನಾಕ್ಷಿ ಅನಿಪಿಂಡಿ ಚಿತ್ರ ನಿರ್ಮಿಸುತ್ತಿದ್ದು, ಎಯು & ಐ ಸ್ಟುಡಿಯೋ ಪ್ರಸ್ತುತಪಡಿಸುತ್ತಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ನಟಿ ಕ್ಯಾಥರೀನ್ ಟ್ರೆಸಾ ‘ಫಣಿ’ಯಲ್ಲಿ ಪ್ರಮುಖ ಪಾತ್ರಕ್ಕೆ ಜೀವ ತುಂಬಲಿದ್ದು, ಮಹೇಶ್ ಶ್ರೀರಾಮ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.. ಹಿಂದಿ ಜೊತೆಗೆ, ಫಣಿ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಇತರ ಜಾಗತಿಕ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೆಜೆಂಡರಿ ನಿರ್ದೇಶಕ ಕೆ. ರಾಘವೇಂದ್ರ ರಾವ್ ಇಂದು ಹೈದರಾಬಾದ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಫಣಿ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ. ರಾಘವೇಂದ್ರ ರಾವ್, “ಆದಿತ್ಯ ಎಂದರೆ ಸೂರ್ಯ. ಎಲ್ಲಾ ದೇಶಗಳಲ್ಲಿ ಸೂರ್ಯ ಉದಯಿಸುತ್ತಾನೆ, ಹೀಗಾಗಿ, ವಿ.ಎನ್. ಆದಿತ್ಯ ಫಣಿ ಚಿತ್ರವನ್ನು ಜಾಗತಿಕ ಸಿನಿಮಾ ಮಾಡುತ್ತಿದ್ದಾರೆ. ಆದಿತ್ಯ ನನ್ನೊಂದಿಗೆ ಕೆಲಸ…
Author: Author AIN
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆಯಾಗಿದೆ. ಯಶವಂತಪುರ , ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ ಮಳೆಯಾಗಿದೆ. ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಾಸರಹಳ್ಳಿ, ಪೀಣ್ಯ, ಎಂಟನೇ ಮೈಲಿ ಸುತ್ತಮುತ್ತ ತುಂತುರು ಮಳೆಯಾಗಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು…
ಬೀದರ್: ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ನಡೆದಿದೆ. ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ಘಟನೆ ನಡೆದಿದೆ. ಮನೆಗೆ ನುಗ್ಗಿದ ಖದೀಮರು ಸುಮಾರು 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಬೀದರ್ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್ಸಿ ಜಡ್ಜ್ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ. ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದರು. ಈ ವೇಳೆ ಮನೆ ನುಗ್ಗಿದ ಕಳ್ಳರು ಬರೋಬ್ಬರಿ ಏಳೂವರೆ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ಇನ್ನೂ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://ainkannada.com/fight-between-two-groups-in-benkipura-five-arrested/ ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುಂಟೂರು ಕಾರಮ್ ನಂತರ ದೀರ್ಘ ಅಂತರ ತೆಗೆದುಕೊಂಡಿದ್ದ ಶ್ರೀಲೀಲಾ ಪುಷ್ಪಾ, 2ನೇ ವಿಶೇಷ ಹಾಡಿನಲ್ಲಿ ಮಿಂಚಿದರು. ಅವಳು “ಮುತ್ತು” ಎಂದು ಹೇಳುವ ಮೂಲಕ ಹುಡುಗನ ಹೃದಯವನ್ನು ಗೆದ್ದಳು. ಈಗ ಅವರು ರಾಬಿನ್ ಹುಡ್ ಚಿತ್ರದ ಮೂಲಕ ಮತ್ತೆ ನಾಯಕಿಯಾಗಿ ನಮ್ಮ ಮುಂದೆ ಬಂದಿದ್ದಾರೆ. ವೆಂಕಿ ಕುಡುಮುಲ ನಿರ್ದೇಶನದ ಈ ಚಿತ್ರದಲ್ಲಿ ಯುವ ನಟ ನಿತಿನ್ ನಾಯಕನಾಗಿ ನಟಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಮಿಂಚಿದರು. ಯುಗಾದಿ ಉಡುಗೊರೆಯಾಗಿ ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾದ ರಾಬಿನ್ ಹುಡ್ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ಶ್ರೀಲೀಲಾಳನ್ನು ಮತ್ತೊಮ್ಮೆ ನಿರಾಶೆಗೊಳಿಸಿತು. ಆದರೆ, ಸರಣಿ ಸೋಲುಗಳ ಹೊರತಾಗಿಯೂ, ಯುವ ಸೌಂದರ್ಯದ ಕ್ರೇಜ್ ಕಡಿಮೆಯಾಗುತ್ತಿಲ್ಲ. ಸಿನಿಮಾ ಅವಕಾಶಗಳು ಒಂದರ ಹಿಂದೆ ಒಂದರಂತೆ ಬರುತ್ತಿವೆ. ಈ ಮುದ್ದಾದ ಹುಡುಗಿಗೆ, ವಿಶೇಷವಾಗಿ ಬಾಲಿವುಡ್ನಲ್ಲಿ ಆಫರ್ಗಳು ಹರಿದು ಬರುತ್ತಿವೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಈ ಸುಂದರ ನಟಿ ಪ್ರಸ್ತುತ ಬಾಲಿವುಡ್ನ ಸ್ಟಾರ್ ಹೀರೋಗಳಲ್ಲಿ ಒಬ್ಬರಾದ ಕಾರ್ತಿಕ್ ಆರ್ಯನ್ ಎದುರು…
ತುಮಕೂರು : ಮಧುಗಿರಿಯ ಬೆಂಕಿಪುರದಲ್ಲಿ ಎರಡು ಗುಂಪುಗಳ ನಡುವೆ ಜಗಳ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಈ ಬಗ್ಗೆ ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಮಾಹಿತಿ ನೀಡಿದ್ದಾರೆ. ಯುವಕರ ಗುಂಪೊಂದು ಹಳೆ ದ್ವೇಷಕ್ಕೆ ಪರಸ್ಪರ ಜಗಳ ಮಾಡಿಕೊಂಡು ಹಲ್ಲೆ ಮಾಡಿಕೊಂಡಿದ್ದರು. ತುಮಕೂರು ಜಿಲ್ಲೆಯ ಮಧುಗಿರಿಯ ಬೆಂಕಿಪುರ ಹಾಗೂ ಸಿದ್ದಾಪುರ ಕಾಲೋನಿ ಹುಡುಗರ ಮಧ್ಯೆ ಗಲಾಟೆ ಆಗಿತ್ತು. ಹಣಕಾಸಿನ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದರು. ಸಿದ್ದಾಪುರದ ಮಂಜುನಾಥ್ ಹಾಗೂ ಬೆಂಕಿಪುರದ ಮಾರುತಿ ಎಂಬುವವರ ನಡುವೆ ಕಳೆದ ಎರಡು ತಿಂಗಳ ಹಿಂದೆ ಜಗಳ ನಡೆದಿತ್ತು.. https://ainkannada.com/mes-row-at-the-border-again-decision-to-build-smriti-bhavan/ ಹಳೆ ದ್ವೇಷದಿಂದ ಬೆಂಕಿಪುರದ ಮಾರುತಿ,ಆದಿ,ಶಿವ,ಪುನೀತ್ ,ಸೀನು,ಮಂಜು,ಮೇಸ್ತ್ರಿ ಸೂರಿ ಒಟ್ಟು 7 ಜನರ ಗುಂಪು ಕೊಲೆ ಪ್ರಯತ್ನ ಮಾಡಿದ್ದಾರೆಂದು ಆರೋಪಿಸಿದ್ದ ಗಾಯಾಳು ಮಂಜುನಾಥ್ ದೂರು ನೀಡಿದ್ದರು. ಈ ಸಂಬಂಧ ಒಟ್ಟು 7 ಜನರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿತ್ತು. ಈಗಾಗಲೇ ಐವರನ್ನು ಬಂಧಿಸಲಾಗಿದ್ದು,ಇನ್ನಿಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಕಿಡ್ನಾಪ್ ಗ್ಯಾಂಗ್ ವಿರುದ್ದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಮೊಹಮ್ಮದ್ ಝಬಿ ಹಾಗು ಗ್ಯಾಂಗ್ ನಿಂದ ಉದ್ಯಮಿ ಕೈಲಾಶ್ ಕುಮಾರ್ ಎಂಬಾತನ ಕಿಡ್ನಾಪ್ ಮಾಡಿ ಹಲ್ಲೆ ಮಾಡಲಾಗಿದ್ದು, ಬಟ್ಟೆ ವ್ಯಾಪಾರಿ ಕೈಲಾಶ್ ಕುಮಾರ್ ,ರವಿ ಎಂಬಾತನ ಜೊತೆ ವ್ಯವಹಾರವಿತ್ತು. 3.45 ಲಕ್ಷ ವ್ಯವಹಾರದಲ್ಲಿ ಈಗಾಗಲೇ1.5 ಲಕ್ಷ ಹಣ ವಾಪಸ್ ಕೊಟ್ಟಿದ್ದರು. ಉಳಿದ 1.95 ಲಕ್ಷ ಹಣ ವ್ಯವಹಾರದ ನಷ್ಟದಿಂದ ಐದು ಕಂತಿನಂತೆ ಕೊಡೊದಾಗಿ ಮಾತುಕತೆ ಆಗಿತ್ತು. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಆದ್ರು ಕೂಡ ನಿನ್ನೆ ಬೆಳಿಗ್ಗೆ 11 ಗಂಟೆಗೆ, ಆರಿಫ್ ಡಾನ್, ಜಬಿ, ರವಿ, ರೋಲ್ಕಲ್ ಇಮ್ರಾನ್ ಮತ್ತು ಆಸಿಡ್ ಮಂಜ ಎಂಬಾತರಿಂದ ಉದ್ಯಮಿ ಕೈಲಾಶ್ ಕಿಡ್ನಾಪ್ ಮಾಡಿ ಮಾಗಡಿ ರಸ್ತೆಯಲ್ಲಿರುವ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಮನಬಂದಂತೆ ಹಲ್ಲೆ ಮಾಡಿ ಚಾಕು ತೋರಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ. ತಲೆಗೆ ಗನ್ ಇಟ್ಟು ಮೂರು ದಿನಗಳಲ್ಲಿ 20 ಲಕ್ಷ…
ಬೆಳಗಾವಿ : ಮತ್ತೆ ಗಡಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ ಮೆರೆದಿದ್ದು, ಬೆಳಗಾವಿಯಲ್ಲಿ ಸ್ಮೃತಿ ಭವನ ನಿರ್ಮಿಸಲು ನಿರ್ಧಾರ ಮಾಡಿದೆ. ಎಂಇಎಸ್ ನ ಸ್ಮೃತಿ ಭವನಕ್ಕೆ ಸರ್ಕಾರ ಬ್ರೇಕ್ ಹಾಕಬೇಕೆಂಬ ಆಗ್ರಹ ಕೇಳಿಬಂದಿದೆ. ಮಹಾರಾಷ್ಟ್ರ ಸರ್ಕಾರದಿಂದ ಹಣಕಾಸಿನ ನೆರವು ಪಡೆದು ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. ಗ್ರಾಮದ ಖಾಸಗಿ ಜಾಗದಲ್ಲಿ ಸ್ಮೃತಿ ಭವನ ನಿರ್ಮಿಸಲು ಈಗಾಗಲೇ ಭೂಮಿ ಪೂಜೆ ಮಾಡಿದೆ. 1986 ರಲ್ಲಿ ಬೆಳಗಾವಿಯಲ್ಲಿ ನಡೆದ ಸೀಮಾ ಲಢಾಯಿ (ಗಡಿ ಚಳುವಳಿ) ಕಾಲಕ್ಕೆ ನಡೆದ ಹಿಂಸಾಚಾರ ನೆನಪಿಗಾಗಿ ಸ್ಮೃತಿ ಭವನ ನಿರ್ಮಾಣಕ್ಕೆ ಮುಂದಾಗಿದೆ. ಅಂದು ಎನ್.ಸಿಪಿ ನಾಯಕ ಶರದ್ ಪವಾರ್ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸೀಮಾ ಲಡಾಯಿ ನಡೆದಿತ್ತು. ಮಹಾರಾಷ್ಟ್ರದಿಂದ ನಾಯಕರು, ಬೆಂಬಲಿಗರು ಬೆಳಗಾವಿಗೆ ನುಗ್ಗಿದ್ದರು. ಈ ವೇಳೆ ಭಾರೀ ಪ್ರಮಾಣದಲ್ಲಿ ಹಿಂಸಾಚಾರ ನಡೆದಿತ್ತು. ಕರ್ನಾಟಕ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ಗೋಲಿಬಾರನಲ್ಲಿ 9 ಜನ ಹಿಂಸಾಚಾರಿಗಳು ಸಾವನ್ನಪ್ಪಿದರು. ಈ ಹಿಂಸಾಚಾರಿಗಳನ್ನ ಹುತಾತ್ಮರೆಂದು ಬಿಂಬಿಸುತ್ತಿರೋ ಎಂಇಎಸ್ ಪುಂಡರು, ಪ್ರತಿ ವರ್ಷ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಣ್ಣನ ಜೊತೆ ಹೊರಟಿದ್ದ ತಂಗಿಯನ್ನ ಎಳೆದೊಯ್ದು ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರ ರೈಲು ನಿಲ್ದಾಣ ಸಮೀಪ ನಿನ್ನೆ ರಾತ್ರಿ 1.30 ರಲ್ಲಿನಡೆದಿದೆ. ಬಿಹಾರ ಮೂಲದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರ ಮಾಡಲಾಗಿದೆ. ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಇದಕ್ಕೂ ಮುನ್ನ, ತನ್ನ ದೊಡ್ಡಮ್ಮನ ಮಗನಿಗೆ ಕರೆ ಮಾಡಿ, ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಳು. ಅಣ್ಣನ ಸೂಚನೆಯಂತೆ ಕೆ.ಆರ್.ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಳು. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಬಳಿಕ, ಊಟಕ್ಕಾಗಿ ಮಹದೇವಪುರ ಕಡೆಗೆ ತನ್ನ ಅಣ್ಣನೊಂದಿಗೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ಬೈಕ್ ಅಡ್ಡಗಟ್ಟಿದ್ದಾರೆ. ಅಪರಿಚಿತರು ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ಅಪಹರಿಸಿದ್ದಾರೆ. ನಂತರ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ದುಷ್ಕೃತ್ಯದ ವೇಳೆ ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಒಬ್ಬ…
ಮಾಸ್ಕೋ: ರಷ್ಯಾದ ಅಧಿಕಾರಿಗಳು ನಿಗೂಢ ವೈರಸ್ ಹರಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ಈ ವೈರಸ್ಗೆ ತೀವ್ರ ಜ್ವರ ಮತ್ತು ರಕ್ತಸಿಕ್ತ ಕೆಮ್ಮಿನಂತಹ ಲಕ್ಷಣಗಳಿವೆ. ಸುದ್ದಿ ವರದಿಗಳ ಪ್ರಕಾರ, ಸೋಂಕಿತರು ಒಂದೇ ರೀತಿಯ ಲಕ್ಷಣಗಳನ್ನು ಅನುಭವಿಸುತ್ತಿದ್ದಾರೆ, ಏಕೆಂದರೆ ಅನಾರೋಗ್ಯವು ಜ್ವರದಂತೆ ದೇಹದ ನೋವಿನೊಂದಿಗೆ ಪ್ರಾರಂಭವಾಗಿ ವೇಗವಾಗಿ ಹದಗೆಡುತ್ತದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಹೌದು ಅಲ್ಲಿನ ಪ್ರಜೆಗಳು ತೀವ್ರ ಸ್ವರೂಪದ ಶ್ವಾಸಕೋಶ ಸಂಬಂಧಿ ರೋಗಗಳು, ದೀರ್ಘಕಾಲಿಕ ಜ್ವರದಿಂದ ಬಳಲುತ್ತಿದ್ದಾರೆ. ವೈರಸ್ ಕಾರಣದಿಂದ ಅವರು ಕೆಮ್ಮುವಾಗ ರಕ್ತ ಕೂಡ ಬೀಳುತ್ತಿದೆ. ಹಲವು ನಗರಗಳಲ್ಲಿ ಈ ವೈರಸ್ ತೀವ್ರ ವೇಗದಲ್ಲಿ ಹಬ್ಬುತ್ತಿದೆ. ವೈದ್ಯರು ಕೋವಿಡ್ ಟೆಸ್ಟ್ ಮಾಡಿದಾಗ ನೆಗೆಟಿವ್ ಎಂದು ಬಂದಿದೆ. ಹೀಗಾಗಿ ಇದು ಹೊಸ ವೈರಸ್ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಈ ವರದಿಗಳನ್ನು ರಷ್ಯಾ ತಳ್ಳಿ ಹಾಕಿದೆ. ಮಿಸ್ಟರಿ ವೈರಸ್ ಕುರಿತ ವರದಿಗಳು ಆಧಾರರಹಿತ. ಅಂಥಾದ್ದೇನು ನಮ್ಮ ದೇಶದಲ್ಲಿ ಕಂಡುಬಂದಿಲ್ಲ ಎಂದು ರಷ್ಯಾ ತಿಳಿಸಿದೆ.
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಗಾಳಿ 30-40 ಕಿ,ಮೀ ವೇಗದಲ್ಲಿ ಬೀಸಿದರೆ, ಉತ್ತರ ಒಳನಾಡಿನಲ್ಲಿ 50-60 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. https://ainkannada.com/attention-diabetics-eat-this-dry-fruit-on-an-empty-stomach-to-control-sugar/ ಬೆಂಗಳೂರಿನ ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ…