Author: Author AIN

ಬೆಳಗಾವಿ: ಶಾಸಕ ರಾಜು ಕಾಗೆ ಅವರ ಸಹೋದರನ ಮಗ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ನಡೆದಿದೆ. ಗೋಕಾಕ್ ನ ಬಸವರಾಜ ಪುಡಕಲಕಟ್ಟಿ(22) ಮೃತ ದುರ್ದೈವಿಯಾಗಿದ್ದು,  ಬಸವರಾಜ ಮತ್ತು ಇಬ್ಬರು ಸ್ನೇಹಿತರು ಬೆಳಗಾವಿಯಿಂದ ಕಿತ್ತೂರಿಗೆ ಬೈಕ್ ಮೇಲೆ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕ್‌ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಅಪಘಾತದಲ್ಲಿ ಸಣ್ಣವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತ ಬಸವರಾಜ ಮೃತದೇಹ ಶಿಪ್ಟ್ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಬರೋಬ್ಬರಿ 14 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನಕ್ಕೊಳಗಾಗಿದ್ದು, ಜಾಮೀನು ಸಿಗದ ಟೆನ್ಷನ್ ಮಧ್ಯೆ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪತಿ ಜತಿನ್ ಹುಕ್ಕೇರಿ ರನ್ಯಾಳಿಂದ ವಿಚ್ಛೇದನ ಪಡೆಯಲು ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಮದುವೆ ಬಳಿಕ ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿರುವ ಜತಿನ್, ರನ್ಯಾಳಿಂದ ಅಂತರ ಕಾಯ್ದುಕೊಂಡಿದ್ದಾರೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ 2024 ಅಕ್ಟೋಬರ್ 6 ರಂದು ಬೆಂಗಳೂರಿನ ಬಾಸ್ಟಿನ್ ರೆಸ್ಟೋರೆಂಟ್​ನಲ್ಲಿ ರನ್ಯಾ, ಜತಿನ್​ ಇಬ್ಬರೂ ಮದುವೆ ಬ್ರೋಕರ್ ಮೂಲಕ ಭೇಟಿಯಾಗಿದ್ದರು. 2024 ಅಕ್ಟೋಬರ್ 23ರಂದು ರನ್ಯಾ, ಜತಿನ್ ಎಂಗೇಜ್ ಮೆಂಟ್ ಆಗಿತ್ತು. 2024 ನವೆಂಬರ್ 27 ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಮದುವೆ ಕೂಡ ಆಗಿತ್ತು. ಬಳಿಕ ಲ್ಯಾವೆಲ್ಲೆ ರಸ್ತೆಯ ಅಪಾರ್ಟ್ ಮೆಂಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಮದುವೆಯಾದ ಒಂದೇ ತಿಂಗಳಿಗೆ ರನ್ಯಾ, ಜತಿನ್ ನಡುವೆ ಮನಸ್ತಾಪ ಶುರುವಾಗಿದ್ದು, ಸಂಬಂಧದಲ್ಲಿ ಪಾರದರ್ಶಕತೆ ಇಲ್ಲ, ಮಾತುಕತೆಯೂ ಇರಲಿಲ್ಲವೆಂದು ಪತಿ…

Read More

ಬೆಂಗಳೂರು: ಅರ್ಥಶಾಸ್ತ್ರದ ಬಗ್ಗೆ ಗೊತ್ತಿರುವವರು ಯಾರು ಬೆಲೆ ಏರಿಕೆ ವಿರೋಧಿಸಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ದೇಶಪಾಂಡೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದಕ್ಕೆ ಕಾರಣ ಮೇವಿನ ಬೆಲೆ ಜಾಸ್ತಿ ಆಗಿರುವುದು. ಬೆಲೆ ಏರಿಕೆ ಆದಾಗ ಸ್ವಲ್ಪ ಅಡ್ಜೆಸ್ಟ್ ಮಾಡಿಕೊಳ್ಳಬೇಕು. ಹಣ ಎಲ್ಲಿಂದ ತರಲು ಆಗುತ್ತದೆ. ಸರ್ಕಾರ ಸ್ವಲ್ಪ ಬೆಲೆ ಏರಿಕೆ ಮಾಡಿದೆ ನಿಜ. ಹಾಗಂತ ಜನರನ್ನ ಲೂಟಿ ಮಾಡಲು ಮಾಡಿದೆ ಎಂದು ಹೇಳುವುದು ಸರಿಯಲ್ಲ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಪೆಟ್ರೋಲ್, ಡೀಸೆಲ್ ದರ ಕಂಟ್ರೋಲ್ ಮಾಡುವುದು ಕೇಂದ್ರ ಸರ್ಕಾರ. ಕೆಲವೊಮ್ಮೆ ದರ ಹೆಚ್ಚಳ ಅನಿವಾರ್ಯವಾಗಿರುತ್ತದೆ. ಅರ್ಥಶಾಸ್ತ್ರದ ಬಗ್ಗೆ ಗೊತ್ತಿರುವವರು ಯಾರು ಬೆಲೆ ಏರಿಕೆ ವಿರೋಧಿಸಲ್ಲ ಇದು ರಿಯಾಲಿಟಿ. ಇದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

Read More

ಬೆಳಗಾವಿ: ರಜೆ ನೀಡಿದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿಯೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಬಾಲಚಂದ್ರ ಹುಕೋಜಿ ನೇಣಿಗೆ ಶರಣಾದ ಚಾಲಕನಾಗಿದ್ದು, ಮನೆಯಲ್ಲಿ ಅಕ್ಕನ ಮಗಳ ಮದುವೆಯಿದ್ದ ಕಾರಣ ಕಳೆದ ಮೂರು ದಿನಗಳ ಹಿಂದೆ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ರಜೆ ನೀಡದ ಹಿನ್ನೆಲೆ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಂಧಿ ನಗರದಲ್ಲಿವಾಸವಿದ್ದ ಮೃತ ಚಾಲಕ, ಬೆಳಿಗ್ಗೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಸರಣಿ ವೈಫಲ್ಯಗಳನ್ನು ಅನುಭವಿಸುತ್ತಿದ್ದಾರೆ. ಅವರು ಇಲ್ಲಿಯವರೆಗೆ ಆಡಿರುವ ಮೂರು ಪಂದ್ಯಗಳಲ್ಲಿ ಯಾವುದೇ ನಿರ್ದಿಷ್ಟ ಪರಿಣಾಮ ಬೀರಲು ಸಾಧ್ಯವಾಗಿಲ್ಲ. ಇದರೊಂದಿಗೆ, ಲಕ್ನೋ ತಂಡವು ರೂ. ಅವರು 27 ಕೋಟಿಗೆ ಸರಿಯಾದ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಐಪಿಎಲ್ 2025 ಋತುವಿನ ಮೊದಲ ಮೂರು ಪಂದ್ಯಗಳಲ್ಲಿ ಕೇವಲ 17 ರನ್ ಗಳಿಸುವ ಮೂಲಕ ಅವರು ಭಾರಿ ನಿರಾಶೆ ಮೂಡಿಸಿದರು. ಐಪಿಎಲ್ 2025 ರಲ್ಲಿ ಅತ್ಯಂತ ದುಬಾರಿ ಆಟಗಾರ ಈ ರೀತಿ ಪ್ರದರ್ಶನ ನೀಡುತ್ತಿದ್ದಾನೆ ಎಂದು ಫ್ರಾಂಚೈಸಿ ಮತ್ತು ಅಭಿಮಾನಿಗಳು ಇಬ್ಬರೂ ಒಪ್ಪುತ್ತಾರೆ. ಅವರನ್ನು ನಾಯಕನಾಗಿ ಬಡ್ತಿ ನೀಡಬೇಕು ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಐಪಿಎಲ್‌ನ ಅತ್ಯಂತ ದುಬಾರಿ ಆಟಗಾರನನ್ನು ಮ್ಯಾಕ್ಸ್‌ವೆಲ್ ಔಟ್ ಮಾಡಿದರು. ಟಾಸ್ ಸೋತು ಬ್ಯಾಟಿಂಗ್ ಆಯ್ದುಕೊಂಡ ಲಕ್ನೋ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಹಂತದಲ್ಲಿ ಮಿಚೆಲ್ ಮಾರ್ಷ್ ಶೂನ್ಯಕ್ಕೆ ಪೆವಿಲಿಯನ್ ತಲುಪಿದರು. ನಂತರ ಐಡೆನ್ ಮಾರ್ಕ್ರಾಮ್ ಬೌಂಡರಿಗಳನ್ನು ಹೊಡೆಯಲು ಪ್ರಾರಂಭಿಸಿದರು. ಆದರೆ…

Read More

ಬಾಲಿವುಡ್‌ ಮಿಸ್ಟರ್‌ ಫರ್ಪೆಕ್ಷನಿಸ್ಟ್‌ ಅಂತಾ ಕರೆಸಿಕೊಳ್ಳುವ ಆಮೀರ್‌ ಖಾನ್‌ ಮಾಜಿ ಪತ್ನಿ ಕಿರಣ್‌ ರಾವ್‌ ವಿರುದ್ಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಅದಕ್ಕೆ ಕಾರಣ ಆಸ್ಕರ್‌ ಅಂಗಳಕ್ಕೆ ಹೋಗಿದ್ದ ಲಾಪತಾ ಲೇಡೀಸ್‌ ಎಂಬ ಚಿತ್ರ. ಇದು ಕಿರಣ್‌ ರಾವ್‌ ನಿರ್ದೇಶನದ ಚಿತ್ರ. 2024ರಲ್ಲಿ ಪ್ರೇಕ್ಷಕರು ಹಾಗೂ ವಿಮರ್ಷಕರ ವಲಯದಿಂದಲೂ ಭಾರೀ ಮೆಚ್ಚುಗೆ ಪಡೆದಿದ್ದ ಸಿನಿಮಾ ಲಾಪತಾ ಲೇಡೀಸ್‌. ಆದ್ರೆ ಇದು ಕದ್ದ ಮಾಲು ಅನ್ನೋದು ಈಗ ಬಹಿರಂಗವಾಗಿದೆ. ಮದುವೆ ಮಾಡಿಕೊಂಡು ಗಂಡನ ಮನೆಗೆ ಹೋಗುವಾಗ ಮಾರ್ಗಮಧ್ಯದಲ್ಲಿ ಇಬ್ಬರು ಹುಡುಗಿಯರು ಕಾಣೆಯಾಗುತ್ತಾರೆ. ಬೇರೊಬ್ಬ ಮಹಿಳೆಯನ್ನು ಕಥಾನಾಯಕ ತನ್ನ ಮನೆಗೆ ಕರೆದುಕೊಂಡು ಬಂದಿರುತ್ತಾನೆ. ಕಾರಣ, ಮಹಿಳೆಯರು ಅದರಲ್ಲಿ ಬುರ್ಖಾ ಧರಿಸಿರುತ್ತಾರೆ. ಮುಂದೆ ಪೊಲೀಸ್‌, ಕಂಪ್ಲೇಂಟ್..‌ ಎಲ್ಲವೂ ಮಾಮೂಲಿ. ಈ ಸಾಗುವ ರೋಚಕ ಕಥೆಯೇ ಲಾಪತಾ ಲೇಡೀಸ್‌. ‘ಲಾಪತಾ ಲೇಡೀಸ್’ ಸಿನಿಮಾದ ಕಥೆಯನ್ನು 2019ರಲ್ಲಿ ಈ ಕಿರುಚಿತ್ರ ಬಿಡುಗಡೆಯಾಗಿದ್ದ ಅರೇಬಿಕ್ ಭಾಷೆಯ ‘ಬುರ್ಕಾ ಸಿಟಿ’ ಕಿರುಚಿತ್ರದಿಂದ ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಎರಡೂ ಸಿನಿಮಾದಲ್ಲೂ ಒಂದೇ…

Read More

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಅತ್ಯುತಮ ಕಾರ್ಯನಿರ್ವಹಣೆಯಿಂದ ಇಡೀ ರಾಷ್ಟ್ರದಲ್ಲಿ ಮನ್ನಣೆ ಗಳಿಸಿದೆ. ಕರ್ನಾಟಕದ ಪೊಲೀಸ್ ಇಲಾಖೆಯು ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ನಿವೃತ್ತ ಪೊಲೀಸ್ ಸಬ್ ಇನ್ಸಪೆಕ್ಟರ್ ಎಸ್.ಎಸ್.ಜಕ್ಕನಗೌಡ್ರ ಹೇಳಿದರು.ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯದಿಂದ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿರಿಯ ಕಿರಿಯ ಅಧಿಕಾರಿಗಳನ್ನು ಒಗ್ಗೂಡಿಸಿ, ಅವರಿಗೆ ಧೈರ್ಯ ತುಂಬುವ ಕಾರ್ಯಕ್ರಮ ಇದಾಗಿದೆ. 1965 ಪೊಲೀಸ್ ಕಾಯ್ದೆ ಜಾರಿಗೆ ಬಂದ ಹಿನ್ನೆಲೆಯಲ್ಲಿ ಪ್ರತಿವರ್ಷ ಏಪ್ರೀಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನವನ್ನು ನಿವೃತ್ತರ ಕಲ್ಯಾಣ ದಿನ ಎಂದು ಕರೆಯಬಹುದಾಗಿದೆ. ಯಾವುದೇ ಭೇದಭಾವ ಮಾಡದೇ ಎಲ್ಲರನ್ನೂ ಸಮಾನರಂತೆ ಕಾಣಲಾಗುತ್ತದೆ. ಸುಮಾರು 41 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ ಎಂದರು. ಪೊಲೀಸ್ ಧ್ವಜಗಳನ್ನು ಸಾರ್ವಜನಿಕರಿಗೆ ವಿತರಿಸಿ, ಅದರಿಂದ ಬಂದ ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ಬಳಸಲಾಗುತ್ತದೆ.…

Read More

ಸ್ಯಾಂಡಲ್ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಸಿನಿಮಾರಂಗಕ್ಕೆ ವಿದಾಯ ಹೇಳಿ ಪತಿ-ಮಕ್ಕಳು ಅಂತಾ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಮಾಲ್ಡೀವ್ಸ್ ನಲ್ಲಿ ಪ್ರತ್ಯಕ್ಷರಾಗಿದ್ದ ಅಮ್ಮು ಈಗ ಹಿಮದ ರಾಶಿ ಮಧ್ಯೆ ಕೂಲ್ ಕೂಲ್ ಪೋಸ್ ಕೊಟ್ಟಿದ್ದಾರೆ. ಬೀಸಿಗೆ ಬಿಸಿಲಿಗೆ ಜನ ಬಸವಳೆದಿದ್ದು, ಇನ್ನೂ ಬೆಂಗಳೂರಿನಲ್ಲಿಯೂ ಸೂರ್ಯ ನೆತ್ತಿ ಸುಡುತ್ತಿದ್ದಾನೆ. ಹೀಗಾಗಿ ಕೂಲ್ ವೆದರ್ ಬಯಸಿ ಅಮೂಲ್ಯ ಹಿಮ ತುಂಬಿದ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದಾರೆ. ಯಾವುದು ಆ ಹಿಮದ ರಾಶಿಯ ಜಾಗ ಅನ್ನೋದನ್ನು ರಿವೀಲ್ ಮಾಡದ ಹಿಮಗಳ ರಾಶಿ ಮಧ್ಯೆ ನಿಂತು ಚೆಂದದ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಹಳದಿ ಹಾಗೂ ಕಪ್ಪು ಬಣ್ಣದ ಬಟ್ಟೆ ತೊಟ್ಟು ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು, ಗೋಲ್ಡನ್ ಕ್ವೀನ್ ಗೆ ಗೆಳತಿ ಕೂಡ ಸಾಥ್ ಕೊಟ್ಟಿದ್ದಾರೆ. ಇಬ್ಬರ ಮಕ್ಕಳ ತಾಯಿಯಾದರೂ ಅಮೂಲ್ಯ ಫಿಟ್ ಅಂಡ್ ಫೈನ್ ಆಗಿದ್ದು, ಅಭಿಮಾನಿಗಳು ಮತ್ತೆ ಸಿನಿಮಾಕಡೆ ಮುಖ ಮಾಡಿ ಅಂತಾ ಬೇಡಿಕೆ ಇಡುತ್ತಿದ್ದಾರೆ.

Read More

ನೀವು ಸೋಂಕುಗಳು, ಮಧುಮೇಹ, ಹೃದ್ರೋಗ ಅಥವಾ ನೋವಿಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಈಗ ಅವುಗಳನ್ನು ಖರೀದಿಸಲು ನೀವು ಹಿಂದೆಂದಿಗಿಂತಲೂ ಹೆಚ್ಚು ಖರ್ಚು ಮಾಡಬೇಕಾಗುತ್ತದೆ. ಏಪ್ರಿಲ್ 1 ರಿಂದ 900 ಕ್ಕೂ ಹೆಚ್ಚು ಅಗತ್ಯ ಔಷಧಿಗಳು ದುಬಾರಿಯಾಗಿವೆ. ಈ ಔಷಧಿಗಳ ಬೆಲೆಗಳು ಶೇ.1.74 ರಷ್ಟು ಹೆಚ್ಚಾಗಿದೆ. ಔಷಧಿಗಳ ಬೆಲೆಗಳನ್ನು ಸರ್ಕಾರದ ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ (NPPA) ನಿರ್ಧರಿಸುತ್ತದೆ. ಕಳೆದ ವರ್ಷದ ಸಗಟು ಬೆಲೆ ಸೂಚ್ಯಂಕ (ಡಬ್ಲ್ಯೂಪಿಐ) ಪ್ರಕಾರ, ಬೆಲೆಗಳು ಪ್ರತಿ ವರ್ಷವೂ ಬದಲಾಗುತ್ತವೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಈ ಎಲ್ಲಾ ಔಷಧಿಗಳು ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಭಾಗವಾಗಿದೆ. ಇದರಲ್ಲಿ ಪ್ಯಾರಸಿಟಮಾಲ್, ಅಜಿಥ್ರೊಮೈಸಿನ್, ರಕ್ತಹೀನತೆ ಮತ್ತು ಜೀವಸತ್ವಗಳು ಸೇರಿವೆ, ಇವುಗಳನ್ನು ಅರಿವಳಿಕೆ, ಅಲರ್ಜಿಗಳು, ನರವೈಜ್ಞಾನಿಕ ಅಸ್ವಸ್ಥತೆಗಳು, ಹೃದ್ರೋಗ, ಕಿವಿ, ಮೂಗು ಮತ್ತು ಗಂಟಲು ಮುಂತಾದ ದೈನಂದಿನ ಔಷಧಿಗಳಿಗೆ ಬಳಸಲಾಗುತ್ತದೆ. ಯಾವ ಔಷಧಿಗಳು ಹೆಚ್ಚು ದುಬಾರಿಯಾಗುತ್ತವೆ? ➦ ಪ್ರತಿಜೀವಕ ಅಜಿಥ್ರೊಮೈಸಿನ್: 250 ಮಿಗ್ರಾಂ ಟ್ಯಾಬ್ಲೆಟ್ ಈಗ ರೂ.ಗೆ ಲಭ್ಯವಿದೆ. ೧೧.೮೭, ೫೦೦ ಮಿಗ್ರಾಂ ರೂ. 23.98.…

Read More

ಹುಬ್ಬಳ್ಳಿ: ನೇಹಾ ಹಿರೇಮಠ ಪ್ರಕರಣಕ್ಕೆ ಒಂದು ವರ್ಷ ತುಂಬುವಷ್ಟರಲ್ಲಿ ಮತ್ತೊಂದು ಘಟನೆ ಅದೇ ಹುಬ್ಬಳ್ಳಿಯಲ್ಲಿ ಕೇಳಿ ಬಂದಿದೆ. ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಯುವಕನಿಂದ ಯುವತಿಗೆ ಟಾರ್ಚರ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದರಿಂದ ಮನನೊಂದು ಯುವತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ. ಧಾರವಾಡ ಜಿಲ್ಲೆ ಕುಂದಗೋಳ ನಿವಾಸಿ ವಿದ್ಯಾ( ಹೆಸರು ಬದಲಾವಣೆ ಮಾಡಲಾಗಿದೆ) ಎಂಬ ಯುವತಿ ಆತ್ಮಹತ್ಯೆಗೆ ಯತ್ನ ಮಾಡಲಾಗಿದ್ದು, ಕುಂದಗೋಳ ಪಟ್ಟಣದ ಸಿರಾಜ್ ಎಂಬ ಮುಸ್ಲಿಂ ಯುವಕ ‌ಕೊಲೆಗೆ ಯತ್ನಿಸಿದ್ದಾನೆ. ವಿದ್ಯಾನಗರದ ಸುಶ್ರುತ ಕಾಲೇಜಿನಲ್ಲಿ ಮೆಡಿಕಲ್‌ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ನಲ್ಲಿ ವಿದ್ಯಾ ಓದುತ್ತಿದ್ದು, ಸಿರಾಜ್, ವಿದ್ಯಾ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪವಿದೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಅಲ್ಲದೆ ರಂಜಾನ್ ಹಬ್ಬದಂದು ಕಾಲೇಜಿಗೆ ಬಂದು ವಿದ್ಯಾ ಮೇಲೆ ಮಾರಣಾಂತಿಕವಾಗಿ ಸಿರಾಜ್ ಹಲ್ಲೆ ನಡೆಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಸಿರಾಜ್ ಕಾಟಕ್ಕೆ ಬೇಸತ್ತು ವಿದ್ಯಾ (ಬೇರೆ ಹೆಸರು) ಆತ್ಮಹತ್ಯೆಗೆ ಯತ್ನಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More