ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ಹೋರಾಟದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರು, ಎಂಎಲ್ಸಿಗಳು ಭಾಗಿಯಾಗಿ ಸ್ಪೀಕರ್ ಯುಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಪ್ಲೇ ಕಾರ್ಡ್ ಹಿಡಿದು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಸುನಿಲ್ ಕುಮಾರ್, ಸಿ.ಟಿ ರವಿ, ಜನಾರ್ದನ ರೆಡ್ಡಿ, ಸಿಸಿ ಪಾಟೀಲ್, ಬೈರತಿ ಬಸವರಾಜ್ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
Author: Author AIN
ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/…
ಗರ್ಭಕಂಠದ ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಇದು ಮಹಿಳೆಯರ ಗರ್ಭಾಶಯದಲ್ಲಿರುವ ಗರ್ಭಕಂಠದ (ಗರ್ಭಕೋಶದ ಗರ್ಭಾಶಯದ) ಜೀವಕೋಶಗಳಲ್ಲಿ ವೇಗವಾಗಿ ಬೆಳೆಯಲು ಆರಂಭಿಸುತ್ತದೆ. ಗರ್ಭಕಂಠದ ಕ್ಯಾನ್ಸರ್ನ ಲಕ್ಷಣಗಳನ್ನು ಗುರುತಿಸುವುದು ಕೂಡ ಕಷ್ಟಕರ. ಮಹಿಳೆಯರ ಗರ್ಭಕೋಶದ ಕಂಠದ ಭಾಗದಲ್ಲಿ ಈ ಕ್ಯಾನ್ಸರ್ ಬೆಳೆಯುತ್ತದೆ. ಸಾಮಾನ್ಯವಾದ ರೋಗ ನಿರೋಧಕ ವ್ಯವಸ್ಥೆ ಹೊಂದಿರುವ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಬೆಳವಣಿಗೆಯಾಗಲು 15ರಿಂದ 20 ವರ್ಷ ಬೇಕಾಗುತ್ತದೆ. ಆದರೆ, ರೋಗ ನಿರೋಧಕ ಶಕ್ತಿ ದುರ್ಬಲ ಆಗಿರುವ ಮಹಿಳೆಯರಲ್ಲಿ 5ರಿಂದ 10 ವರ್ಷಗಳಲ್ಲಿ ಕ್ಯಾನ್ಸರ್ ಬೆಳೆಯುತ್ತದೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವವರಿಗೆ ಮಾತ್ರ ಈ ಕ್ಯಾನ್ಸರ್ ಆರಂಭಿಕ ಹಂತದಲ್ಲೇ ಗೊತ್ತಾಗುತ್ತದೆ. ಇದು ಮೊದಲು ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಹೀಗಾಗಿ, ಬಹುತೇಕ ರೋಗಿಗಳಿಗೆ ತಮಗೆ ಕ್ಯಾನ್ಸರ್ ಬಂದಿದೆ ಎಂದು ಗೊತ್ತಾಗುವಷ್ಟರಲ್ಲಿ ಆ ಕ್ಯಾನ್ಸರ್ ಕೋಶಗಳು ತೀವ್ರವಾಗಿ ಹರಡಿರುತ್ತದೆ. ಇಂತಹ ಸಂದರ್ಭದಲ್ಲಿ ಬದುಕುವ ಸಾಧ್ಯತೆ ಬಹಳ ಕಡಿಮೆ. ಈ ಗರ್ಭಕಂಠದ ಕ್ಯಾನ್ಸರ್ಗೆ ಅಸುರಕ್ಷಿತ ಲೈಂಗಿಕ ಕ್ರಿಯೆ ಪ್ರಮುಖವಾದ ಕಾರಣವಾಗಿದೆ. ಗರ್ಭಕಂಠದ ಕ್ಯಾನ್ಸರ್ ಎಂಬುದು ಗರ್ಭಕಂಠದಲ್ಲಿ ಪ್ರಾರಂಭವಾಗುವ…
ದೇಶದ ಪ್ರಸಿದ್ಧ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರ ಇಚ್ಛೆ ಬಹಿರಂಗವಾಗಿದೆ. ಅದರಂತೆ, ಅವರು ತಮ್ಮ ಆಸ್ತಿಯ ಬಹುಭಾಗವನ್ನು ದಾನ ಮಾಡಿದರು. ಅವರ ಆಸ್ತಿಗಳು ಸುಮಾರು ರೂ. 3,800 ಕೋಟಿ. ಇದರಲ್ಲಿ ಟಾಟಾ ಸನ್ಸ್ ಷೇರುಗಳು ಮತ್ತು ಇತರ ಹಲವು ಆಸ್ತಿಗಳು ಸೇರಿವೆ. ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಅವರು ತಮ್ಮ 3800 ಕೋಟಿ ರೂಪಾಯಿ ಸಂಪತ್ತಿನ ದೊಡ್ಡ ಭಾಗವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ‘ರತನ್ ಟಾಟಾ ಎಂಡೋಮೆಂಟ್ ಫೌಂಡೇಶನ್’ ಮತ್ತು ‘ರತನ್ ಟಾಟಾ ಎಂಡೋಮೆಂಟ್ ಟ್ರಸ್ಟ್’ ಗೆ ದಾನ ಮಾಡಿದ್ದಾರೆ. https://ainkannada.com/one-cup-of-french-fries-is-equivalent-to-smoking-25-cigarettes-do-you-know-how-dangerous-it-is-for-you/ ಟಾಟಾ ಸನ್ಸ್ನಲ್ಲಿ ರತನ್ ಟಾಟಾ ಅವರ ಶೇಕಡಾ 70 ರಷ್ಟು ಪಾಲನ್ನು ರತನ್ ಟಾಟಾ ಎಂಡೋಮೆಂಟ್ ಫೌಂಡೇಶನ್ (RTEF) ಗೆ ಮತ್ತು ಉಳಿದ ಶೇಕಡಾ 30 ರಷ್ಟು ಪಾಲನ್ನು ರತನ್ ಟಾಟಾ ಎಂಡೋಮೆಂಟ್ ಟ್ರಸ್ಟ್ (RTET) ಗೆ ನೀಡಲಾಯಿತು. ಕುಟುಂಬ ಮತ್ತು ಸ್ನೇಹಿತರು ಕೂಡ.. ಅವನು ತನ್ನ ವಿಲ್ ಮಾಡುವಾಗ, ತನ್ನ ಕುಟುಂಬ, ಆಪ್ತ ಸ್ನೇಹಿತರು…
ಬಿಳಿ ಬಂಗಾರ (ವೈಟ್ ಗೋಲ್ಡ್) ಎಂದು ಕರೆಸಿಕೊಳ್ಳುವ ಹತ್ತಿ, ಕರ್ನಾಟಕ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದ 4 ಲಕ್ಷ ಹೆಕ್ಟೇರ್ಗೂ ಅಧಿಕ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. ಸಾಮಾನ್ಯವಾಗಿ ಮೇ-ಜೂನ್ ತಿಂಗಳ ಅವಧಿಯಲ್ಲಿ ಹತ್ತಿ ಬಿತ್ತನೆ ಮಾಡಲಾಗುತ್ತದೆ. ಆದರೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ಅಸಮತೋಲನದಿಂದಾಗಿ ಕೆಲವೆಡೆ ಮೇ ಆರಂಭದಲ್ಲೇ ಬಿತ್ತನೆ ಕಾರ್ಯ ಕಯಗೊಂಡಿದ್ದರೆ, ಇನ್ನೂ ಕೆಲವೆಡೆ ಜೂನ್ ಅಂತ್ಯ ಮತ್ತು ಜುಲೈ ಆರಂಭದ ವಾರಗಳಲ್ಲಿ ಹತ್ತಿ ಬಿತ್ತನೆ ಮಾಡಲಾಗಿದೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ರೈತರು ಹತ್ತಿ ಬೆಳೆಯುವ ಮೂಲಕ ಹೆಚ್ಚಿನ ಲಾಭ ಗಳಿಸಬಹುದು. ಭಾರತದ ಅನೇಕ ಭಾಗಗಳಲ್ಲಿ ಹತ್ತಿಯನ್ನು ಬೆಳೆಯಲಾಗುತ್ತದೆ. ಇದು ಪ್ರಪಂಚದ ಪ್ರಮುಖ ಬೆಳೆಗಳಲ್ಲಿ ಒಂದಾಗಿದೆ. ಹತ್ತಿಯನ್ನು ಬೆಳೆಯಲು ಉತ್ತಮ ಸಮಯವೆಂದರೆ ಏಪ್ರಿಲ್ ಮತ್ತು ಮೇ. ಈ ಸಮಯದಲ್ಲಿ ನೀವು ಹತ್ತಿಯನ್ನು ಬಿತ್ತಬಹುದು. ಹತ್ತಿ ಕೃಷಿಗಾಗಿ, ಉತ್ತಮ ಮರಳು ಮಿಶ್ರಿತ ಲೋಮ್ ಅಥವಾ ಮಧ್ಯಮ ಕಪ್ಪು ಮಣ್ಣನ್ನು ಆಯ್ಕೆ ಮಾಡಲಾಗುತ್ತದೆ. ಹತ್ತಿ ಬೆಳೆಯ ಬೆಳವಣಿಗೆಗೆ ಗೊಬ್ಬರ ಮತ್ತು ರಸಗೊಬ್ಬರಗಳನ್ನು…
ವಿಜಯಪುರ : ಯಾರು ಏನೇ ಹೇಳಿದ್ರು, 2028ಕ್ಕೆ ಸಿಎಂ ನಾನೇ ಎಂದು ಯತ್ನಾಳ್ ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನೋಡ್ತಾ ಇರ್ರಿ ನಾನೇ ಸಿಎಂ ಆಗ್ತೀನಿ, ಇವತ್ತೆ ಹೆಡಲೈನ್ ಬರೆದು ಇಟ್ಟುಕೊಳ್ಳಿ ಎಂದಿದ್ದಾರೆ. ಹಿಂದುತ್ವ ಗೋಮಾತೇ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡ್ತೇನೆ. ಇಂದು ವಿಜಯೆಂದ್ರ ಪರ ಕೆಲ ಮಾಧ್ಯಮಗಳು ಕೆಲಸ ಮಾಡುತ್ತೇವೆ. ಅಂತಹ ಮಾಧ್ಯಮಗಳು ಸಹ ಮುಂದೆ ನನ್ನ ಬಗ್ಗೆ ಬರೆಯುತ್ತೇವೆ. ಯಡಿಯೂರಪ್ಪ ಅವಧಿಯಲ್ಲಿ ನಾನು ಸಚಿವ ಆಗಲಿಲ್ಲ. ಭ್ರಷ್ಟನ ಕೈಕೆಳಗೆ ಕೆಲಸ ಮಾಡಬಾರದು ಅನ್ನೋ ಕಾರಣಕ್ಕೆ ಮಂತ್ರಿ ಆಗಲಿಲ್ಲ. ಹಿಂದೆ ಬೊಮ್ಮಾಯಿ ಮಂತ್ರಿ ಆಗಿ ಅಂದ್ರು ನಾನು ಅಭಿವೃದ್ಧಿಗೆ ಹಣ ಕೊಡಿ ಮಂತ್ರಿಗಿರಿ ಬೇಡ ಅಂದೆ. ನನಗೆ ಕಾರ್ ಮೇಲೆ ಕೆಂಪು ಗೂಟ ಹಾಕಿಕೊಂಡು ಅಡ್ಡಾಡೋ ಶೋಕಿ ಇಲ್ಲ ಎಂದು ಬಿಎಸ್ವೈಗೆ ತಿರುಗೇಟು ನೀಡಿದರು. https://ainkannada.com/ramesh-jarkiholis-surprising-statement-about-yatnal-forming-a-new-party/ ಬಿಜೆಪಿ ಪಕ್ಷಕ್ಕೆ ವಾಪಸ್ ವಿಚಾರವಾಗಿ ಮಾತನಾಡಿ, ನಾನು ಪಕ್ಷಕ್ಕೆ ತೆಗೆದುಕೊಳ್ಳಿ ಎಂದು ಕೈ ಮುಗಿಯಲ್ಲ. ಯಾವುದೇ ಹೈಕಮಾಂಡ್ ನಾಯಕರನ್ನ ನಾನು ಭೇಟಿ ಮಾಡೋದಿಲ್ಲ.…
ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. ನೋವು ಅನುಭವಿಸುತ್ತಿರುವ ಎಲ್ಲರೂ ಪಕ್ಷಭೇದ ಮರೆತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಹಾಗೂ ಹೋರಾಟ ಯಶಸ್ವಿ ಮಾಡುವಂತೆ ವಿನಂತಿಸಿದರು. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಅವರಿಗೆ ಮುಖ್ಯವೇ ಹೊರತು ಜನರು ಪ್ರಮುಖರಲ್ಲ ಎಂದು ಟೀಕಿಸಿದರು. ಬಿಜೆಪಿಯ ಹೋರಾಟ ಇನ್ನೂ ಅನೇಕ ದಿನ ನಡೆಯಲಿದೆ. ಮೈಸೂರಿನಲ್ಲಿ ನಡೆಯುವ ಹೋರಾಟದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಭಾಗವಹಿಸುತ್ತಾರೆ…
ಬೆಂಗಳೂರು: 134 ಶಾಸಕರನ್ನ ಹೊಂದಿರುವ ರಾಜ್ಯ ಕಾಂಗ್ರೆಸ್ ಮೀಸಲಾತಿ ವಿಚಾರದಲ್ಲಿ ತಾರತಮ್ಯ ಮಾಡ್ತಿದೆ. 3A, 3B ಬಿ ವರ್ಗದವರು ಏನು ದ್ರೋಹ ಮಾಡಿದ್ದಾರೆ. ಚುನಾವಣೆಯಲ್ಲಿ ಉಳಿದ ಸಮುದಾಯಗಳು ನಿಮ್ಮ ಜತೆ ನಿಲ್ಲಲಿಲ್ಲವೇ.? ನಿಮ್ಮಲ್ಲಿರುವ ಅಜೆಂಡಾ ಹೇಳಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು. ಈ ಬಗ್ಗೆ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಗುತ್ತಿಗೆಯಲ್ಲಿ 4% ಮೀಸಲಾತಿಯನ್ನ 2B ವರ್ಗದವರಿಗೆ ಕೊಟ್ಟಿದ್ದಿರಲ್ಲಾ. ಆರ್ಥಿಕವಾಗಿ ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ನಿಮ್ಮ ನಾಯಕರು ಸಂವಿಧಾನದವನ್ನ ಉಳಿಸುತ್ತೇವೆ ಎಂದು ಸಂವಿಧಾನದ ಪುಸ್ತಕವನ್ನ ಕೈಯಲ್ಲಿ ಇಡಿದು ಗಂಟೆ ಅಲ್ಲಾಡಿಸಿದಂಗೆ ಅಲ್ಲಾಡಿಸುವುದನ್ನ ನೋಡಿದ್ದೇವೆ. ಈ ರೀತಿ ಓಲೈಕೆ ರಾಜಕೀಯ ಮಾಡಿ ಏಕ ಸಮುದಾಯವನ್ನ ಮೆಚ್ಚಿಸುವುದಕ್ಕೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ನಿಮ್ಮ ಅಜೆಂಡ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆಯಲ್ಲಿ 4% ಮೀಸಲಾತಿಯನ್ನು ಒಂದು ಸಮುದಾಯಕ್ಕೆ ಕೊಡಬೇಡಿ ಎಂದು ನಾವು ವಿರೋಧ…
ಬೆಂಗಳೂರು: ಸದ್ಯ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಸಿಕ್ಕಾಪಟ್ಟೆ ಟ್ರೆಂಡ್ನಲ್ಲಿ ಇದ್ದಾರೆ. ಒಂದು ಕೆಟ್ಟ ಕಾರಣಕ್ಕೆ ಸುದ್ದಿ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲುಪಾಲಾಗಿದ್ದು, ಇದೀಗ ಜಾಮೀನು ನೀಡುವಂತೆ ಆಗ್ರಹಿಸಿ ನಟಿ ರನ್ಯಾ ರಾವ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾದಲ್ಲಿದ್ದಾರೆ.
ಬೆಂಗಳೂರು: ಮನೆಯಿಂದ ಹೊರಗಡೆ ನಾಯಿಯನ್ನ ಓಡಾಡಲು ಬಿಡುವ ಮುನ್ನ ಎಚ್ಚರವಾಗಿರುವುದು ಒಳ್ಳೆಯದು. ವಾಕಿಂಗ್ ಕರೆದುಕೊಂಡು ಹೋಗುವಾಗಲು ಎಚ್ಚರವಾಗಿರಬೇಕು.. ಯಾಕಂದ್ರೆ ನಾಯಿಯನ್ನು ಸಹ ಕಳ್ಳತನ ಮಾಡಿ ಎಸ್ಕೇಪ್ ಆಗ್ತಾರೆ. ಹೌದು ಕಳೆದ ತಿಂಗಳು ಮಾ. 12ರ ರಾತ್ರಿ ಜಯನಗರದ 9ನೇ ಬ್ಲಾಕ್ನಲ್ಲಿ ನಾಯಿಯನ್ನು ವಾಕಿಂಗ್ಗೆ ಕರೆದೊಯ್ದ ವೇಳೆ ಕಳ್ಳರು ನಾಯಿಯನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಮಧುರಾ ಎಂಬುವವರು ರೀಚಿ ಎಂಬ ಹೆಸರಿನ ನಾಯಿಯನ್ನು ವಾಕಿಂಗ್ಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಹೆಲ್ಮೆಟ್ ಹಾಕಿ ಬೈಕ್ನಲ್ಲಿ ಬಂದ ಅಪರಿಚಿತರು ಕೈಯಲ್ಲಿ ಹಿಡಿದಿದ್ದ ನಾಯಿಯನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಸಿಸಿಟಿವಿಯಲ್ಲಿ ನಾಯಿ ಕಿತ್ತುಕೊಂಡು ಹೋಗಿರುವ ದೃಶ್ಯ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾಯಿಯ ಮಾಲೀಕರು ತಿಲಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ದೂರಿನಲ್ಲಿ 10,000 ಸಾವಿರ ರೂ. ಬೆಲೆ ಬಾಳುವ ನಾಯಿ ಎಂದು ಉಲ್ಲೇಖಿಸಲಾಗಿದೆ.