Author: Author AIN

ಬಾಗಲಕೋಟೆ ; ಖಾಸಗಿ ವ್ಯಕ್ತಿಯೋರ್ವ ಜಮೀನಿನಲ್ಲಿ ನಿರ್ಮಿಸಿದ್ದ ರಸ್ತೆ ಅಗೆದಿದ್ದು, ಗ್ರಾಮದ ಇತರರ ಜಮೀನುಗಳಿಗೆ ಹೋಗಲು ದಾರಿಯೇ ಇಲ್ಲದಂತಾಗಿದೆ. ಇದರಿಂದಾಗಿ ಆಕ್ರೋಶಗೊಂಡಿರುವ ಗ್ರಾಮಸ್ಥರು ಇಂದು ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಏನಿದು ಘಟನೆ..? ಬಾಗಲಕೋಟೆಯ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದ ರೈತರಿಗೆ ತಮ್ಮ ಜಮೀನಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ. ಅನೇಕ ವರ್ಷಗಳ ಹಿಂದೇಯ ಜಮೀನಿನಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಅದೇ ರಸ್ತೆಯಲ್ಲಿ ಇತರರು ಸಂಚರಿಸುತ್ತಾ ಇದ್ದಾರೆ. ಕಳೆದ  2-3 ವರ್ಷಗಳ ಹಿಂದೆ ಸುಮಾರು 1 ಕೋಟಿ ರೂ. ಅಧಿಕ ವೆಚ್ಚದಲ್ಲಿ ಡಾಂಬರೀಕರಣ ಕಾಮಕಾರಿ ನಡೆದಿದೆ. ಆದರೆ ಇದೀಗ ಜಮೀನು ಖರೀದಿಸಿರುವ ಶಿವಲಿಂಗ ಪರಮಾನಂದ‌ ಲಿಂಗನೂರ ಎಂಬಾತ, ಇದ್ದಕ್ಕಿದ್ದಂತೆ ಡಾಂಬರು ರಸ್ತೆಯನ್ನು ಅಗೆದಿದ್ದು, ಮುಂದಿನ ಜಮೀನುಗಳಿಗೆ ಹೋಗುವ ರಸ್ತೆ ಸಂಪರ್ಕ ಸಂಪೂರ್ಣ ಕಟ್ ಆಗಿದೆ. https://ainkannada.com/https-ainkannada-com-protest-against-police-officer-in-belgaum-district/ ಸುಮಾರು 2 ಕಿಲೋ ಮೀಟರ್‌ ರಸ್ತೆಯನ್ನು ಅಗೆದಿದ್ದು, 400 ಎಕರೆ ಜಮೀನುಗಳಿಗೆ ಸಂಪರ್ಕಿಸುವ ರಸ್ತೆ ಕಟ್ ಆಗಿದ್ದು, ಅಕ್ಕಪಕ್ಕದ ರೈತ…

Read More

ಬೆಂಗಳೂರು: ಬೆಂಗಳೂರಿನಲ್ಲಿ ಯುವಕರ ವ್ಹೀಲಿಂಗ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಅದಕ್ಕೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಕ್ರಮ ಹಾಗೂ ಕಾರ್ಯಾಚರಣೆ ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವ್ಹೀಲಿಂಗ್ ಮಾಡ್ತಿದ್ದ ಯುವಕ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿತ್ತು. ಅಲ್ಲದೆ ಅಪಾಯದ ಬಗ್ಗೆ ಅರಿವಿದ್ದರೂ ಯುವಕರು ವ್ಹೀಲಿಂಗ್ ಮಾಡುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ. ವ್ಹೀಲಿಂಗ್ ಮಾಡುತ್ತ ತಮ್ಮ ಜೀವವನ್ನೂ ಅಪಾಯದಲ್ಲಿಟ್ಟು ಇತರ ಸವಾರರ ಜೀವಕ್ಕೂ ಕುತ್ತಾಗುತ್ತಿದ್ದಾರೆ. ಹೀಗಾಗಿ ಬೆಂಗಳೂರಿನ ಸಂಚಾರಿ ಪೊಲೀಸರು ಕಠಿಣ ಕ್ರಮ ಆರಂಭಿಸಿದ್ದಾರೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಬೆಂಗಳೂರು ನಗರದಾದ್ಯಂತ ಚುರುಕಿನ ಕಾರ್ಯಾಚರಣೆ ನಡೆಸಲಾಗುತ್ತಿದೆ. ಒಂದೇ ತಿಂಗಳಲ್ಲಿ 398 ಪ್ರಕರಣಗಳು ದಾಖಲಾಗಿವೆ. ಕಾರ್ಯಾಚರಣೆ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಒಟ್ಟಾರೆಯಾಗಿ 398 ಪ್ರಕರಣ ದಾಖಲಾಗಿದ್ದು, 324 ಮಂದಿ ಪುಂಡರನ್ನು ಬಂಧಿಸಲಾಗಿದೆ. 397 ಬೈಕ್​ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ವ್ಹೀಲಿಂಗ್ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದಾರೆ. 40 ಮಂದಿ ಪುಂಡರ ಚಾಲನಾ ಪರವಾನಗಿ (ಡಿಎಲ್) ತಾತ್ಕಾಲಿಕ ರದ್ದುಗೊಳಿಸಲಾಗಿದೆ. 197 ಆರ್​​ಸಿ ರದ್ದತಿಗೆ ಪತ್ರ ಬರೆಯಲಾಗಿದೆ…

Read More

ಮೇರು ನಟ ಡಾ.ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ನಿಂಬಿಯಾ ಬನದ‌ ಮ್ಯಾಗ” ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ಎಂದು ಮಾತನಾಡಿದ ನಾಯಕ ಷಣ್ಮುಖ,‌ “ನಿಂಬಿಯಾ ಬನದ ಮ್ಯಾಗ” ಚಿತ್ರ ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ‌ – ಮಗನ ಬಾಂಧವ್ಯದ ಕಥೆ. ಅಶೋಕ್ ಕಡಬ ನಿರ್ದೇಶನ, ವಿ.ಮಾದೇಶ ಅವರ…

Read More

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಭೂಕಂಪನದ ಅನುಭವವಾಗಿದೆ. ಇದ್ದಕ್ಕಿದ್ದಂತೆ ಜೋರಾದ ಶಬ್ದ ಕೇಳಿಸಿದ್ದು, ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡೋಡಿ ಬಂದಿದ್ದಾರೆ. ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಮಲಕನದೇರಹಟ್ಟಿ, ಹುಬನೂರ, ಟಕ್ಕಳಕಿ, ಘೋಣಸಗಿ, ಕಳ್ಳಕವಟಗಿ, ಬಾಬಾ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವಿಸಿದ ಅನುಭವವಾಗಿದೆ.  ಮಧ್ಯಾಹ್ನ 2:14ರಿಂದ 2:15 ಸಮಯದಲ್ಲಿ ಭೂಮಿಯಿಂದ ಜೋರಾದ ಶಬ್ದವಾಗಿದೆ. https://ainkannada.com/protest-against-police-officer-in-belgaum-district/ ಕಳೆದ ವರ್ಷ ಇದೇ ರೀತಿ ನಾಲ್ಕೈದು ಬಾರಿ ಭೂಮಿ ಕಂಪಿಸಿದ ಘಟನೆ ನಡೆದಿತ್ತು. ಈ ವರ್ಷ ಇದೇ  ಮೊದಲ ಭೂಕಂಪನ ಅನುಭವವಾಗಿದೆ. ಭೂಮಿ ಕಂಪಿಸಿದ್ದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

Read More

ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು “ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವಕ್ಕಾಗಿ” ಮಾಡಿದ ಪ್ರಯತ್ನಗಳಿಗಾಗಿ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ವಕಾಲತ್ತು ಗುಂಪು ತಿಳಿಸಿದೆ.  ಕಳೆದ ಡಿಸೆಂಬರ್‌ನಲ್ಲಿ ಸ್ಥಾಪನೆಯಾದ ಮತ್ತು ನಾರ್ವೇಜಿಯನ್ ರಾಜಕೀಯ ಪಕ್ಷ ಪಾರ್ಟಿಯೆಟ್ ಸೆಂಟ್ರಮ್‌ನೊಂದಿಗೆ ಸಂಯೋಜಿತವಾಗಿರುವ ವಕಾಲತ್ತು ಗುಂಪು ಪಾಕಿಸ್ತಾನ್ ವರ್ಲ್ಡ್ ಅಲೈಯನ್ಸ್ (ಪಿಡಬ್ಲ್ಯೂಎ) ಈ ಘೋಷಣೆ ಮಾಡಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ನಾಮನಿರ್ದೇಶನ ಮಾಡುವ ಹಕ್ಕು ಹೊಂದಿರುವ ಯಾರೊಂದಿಗಾದರೂ ಮೈತ್ರಿ ಮಾಡಿಕೊಂಡು, ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಕುರಿತಾದ ಅವರ ಕೆಲಸಕ್ಕಾಗಿ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಪಾರ್ಟಿಯೆಟ್ ಸೆಂಟ್ರಮ್ ಪರವಾಗಿ ಘೋಷಿಸಲು ನಮಗೆ ಸಂತೋಷವಾಗಿದೆ” ಎಂದು ಪಾರ್ಟಿಯೆಟ್ ಸೆಂಟ್ರಮ್  X ನಲ್ಲಿ ಹೇಳಿದರು. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ “ಅರ್ಹ ನಾಮನಿರ್ದೇಶಿತರು” ಯಾರನ್ನಾದರೂ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು. ರಾಷ್ಟ್ರೀಯ ಸಭೆಗಳು ಮತ್ತು ಸರ್ಕಾರಗಳ ಸದಸ್ಯರು ಸೇರಿದಂತೆ ಅರ್ಹ ನಾಮನಿರ್ದೇಶಿತರಲ್ಲಿ ಹಲವಾರು ವರ್ಗಗಳಿವೆ.…

Read More

ಗುಜರಾತ್‌ನ ಬನಸ್ಕಂತ ಜಿಲ್ಲೆಯ ದೀಸಾ ಪ್ರದೇಶದಲ್ಲಿ ಮಂಗಳವಾರ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 13 ಜನರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಬನಸ್ಕಂತ ಜಿಲ್ಲಾಧಿಕಾರಿ ಮಿಹಿರ್ ಪಟೇಲ್ ಘಟನೆಯ ಬಗ್ಗೆ ವಿವರಗಳನ್ನು ಹಂಚಿಕೊಂಡರು ಮತ್ತು “ಬನಸ್ಕಂತದಲ್ಲಿರುವ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿಯಿಂದ ರಚನೆಯ ಸಂಪೂರ್ಣ ಸ್ಲ್ಯಾಬ್ ಬೇರ್ಪಟ್ಟಿದೆ. 13 ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಸ್ಥಳದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿರುವುದರಿಂದ, ನಾವು ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದೇವೆ” ಎಂದು ಹೇಳಿದರು.”ನಾಲ್ಕು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರನ್ನು ದೀಸಾದ ಸಿವಿಲ್ ಆಸ್ಪತ್ರೆಗೆ ಮತ್ತು ಇನ್ನಿಬ್ಬರನ್ನು ಪಾಲಂಪುರ ಸಿವಿಲ್ ಆಸ್ಪತ್ರೆಗೆ ಉಲ್ಲೇಖಿಸಲಾಗಿದೆ” ಎಂದು ಅವರು ಹೇಳಿದರು. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಬೆಳಿಗ್ಗೆ 9.45 ರ ಸುಮಾರಿಗೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಮಗೆ ಮಾಹಿತಿ ಸಿಕ್ಕಿದ್ದು, ಇದರಿಂದಾಗಿ ಇಡೀ ರಚನೆಯೇ ಕುಸಿದು ಬಿದ್ದಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. “ಇಂದು ಬೆಳಿಗ್ಗೆ, ದೀಸಾದ ಕೈಗಾರಿಕಾ ಪ್ರದೇಶದಲ್ಲಿ ದೊಡ್ಡ ಸ್ಫೋಟ ಸಂಭವಿಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಅಗ್ನಿಶಾಮಕ ದಳದವರು ಸ್ಥಳಕ್ಕೆ…

Read More

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧವೇ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಬೆಳಗಾವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆಯಾ ಅನ್ನೋ ಪ್ರಶ್ನೆ ಮೂಡಿದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಶರಣ ಅವಜಿ ವಿರುದ್ಧ ಸಾರ್ವಜನಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ಸ್‌ಪೆಕ್ಟರ್ ಶಿವಶರಣ ಅವಜಿ ಅವರು ದಲಿತರ ಬಳಿ  ಕೇಸ್ ಸಂಬಂಧಿಸಿದಂತೆ ಒಂದು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದ್ದು, ದಲಿತ ವಿರೋಧಿ ಇನ್ಸ್‌ಪೆಕ್ಟರ್ ಶಿವಶರಣ ಅವಜಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainkannada.com/food-workers-take-to-the-streets-to-demand-water-from-narayanpur-dam/ ನಗರದ ಪುರಸಭೆಯಿಂದ ಪೊಲೀಸ್ ಸ್ಟೇಷನ್‌ವರೆಗೂ ಪಾದಯಾತ್ರೆ ನಡೆಸಿದ ದಲಿತ ಪರ ಸಂಘಟನೆ ಕಾರ್ಯಕರ್ತರು ಪೊಲೀಸ್ ಸ್ಟೇಷನ್ ಎದುರು ಪ್ರತಿಭಟನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆಗಮಿಸುವಂತೆ ಪಟ್ಟು ಹಿಡಿದಿದ್ದರು.

Read More

ಬೆಂಗಳೂರು: ಇಂಡಿಯನ್​ ಪ್ರೀಮಿಯರ್​ ಲೀಗ್ ನಲ್ಲಿ ನಾಳೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಗುಜರಾತ್​ ಟೈಟಾನ್ಸ್​ ತಂಡಗಳು ಮುಖಾಮುಖಿ ಆಗುತ್ತಿವೆ. ಈ ಮೆಗಾಫೈಟ್​​ಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಿಕೊಳ್ಳುತ್ತಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ತವರು ಮೈದಾನದಲ್ಲಿ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಇನ್ನೂ ನಾಳೆ ನಡೆಯಲಿರುವ ಪಂದ್ಯಾವಳಿಯ ಪ್ರಯುಕ್ತ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಈ ಬಗ್ಗೆ ಬಿಎಂಆರ್​​ಸಿಎಲ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಮಾಹಿತಿ ನೀಡಿದೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಕ್ರಿಕೆಟ್ ಪ್ರೇಮಿಗಳಿಗೆ ಶುಭಸುದ್ದಿ- ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ ಎಂದು ಎಕ್ಸ್​​ ಸಂದೇಶದಲ್ಲಿ ಬಿಎಂಆರ್​ಸಿಎಲ್ ಉಲ್ಲೇಖಿಸಿದೆ. ಐಪಿಎಲ್: ಮೆಟ್ರೋ ರೈಲು ಸಮಯ ವಿಸ್ತರಣೆ ವಿವರ ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ,…

Read More

ಯಾದಗಿರಿ : ನಾರಾಯಣಪುರ ಡ್ಯಾಂ ನೀರಿಗಾಗಿ ಅನ್ನದಾತರರು ಬೀದಿಗಿಳಿದಿದ್ದಾರೆ. ರೈತರ ಪ್ರತಿಭಟನೆಯಿಂದಾಗಿ ಕೆಬಿಜೆಎನ್ಎಲ್ ಕಚೇರಿಯಿಂದ ನೂರು‌ ಮೀಟರ್ ಅಂತರದಲ್ಲೇ ಎರಡು ಬ್ಯಾರಿಕೇಡ್ ಅಳವಡಿಸಲಾಗಿದೆ. ಬೀದರ್ – ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು, ರಾಜ್ಯ ಹೆದ್ದಾರಿಯಲ್ಲೇ ಧರಣಿ ಕುಳಿತಿದ್ದಾರೆ. ಮಾಜಿ ಸಚಿವ ರಾಜುಗೌಡ, ಅಮಿನ್ ರೆಡ್ಡಿ ಯಾಳಗಿ ಸಹ ರೈತರೊಂದಿಗೆ ರಸ್ತೆಯಲ್ಲೇ ಕುಳಿತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/fatal-accident-between-tt-and-car-two-dead-five-in-critical-condition/ ಅನ್ನದಾತರ ಪ್ರತಿಭಟನೆ ಹಿನ್ನೆಲೆ ಭಾರೀ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. 1 ಎಎಸ್ಪಿ, 4 ಡಿವೈಎಸ್ಪಿ, 12 ಸಿಪಿಐ, 20 ಪಿಎಸ್ಐ ಸೇರಿ 25 ಎಎಸ್ಐ, 2 ಕೆಎಸ್ಆರ್‌ಪಿ, 5 ಡಿಎಆರ್ ತುಕ್ಕಡಿ ಸೇರಿ 500 ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿತ್ತು.

Read More

ಪಂಜಾಬ್‌ನಲ್ಲಿ ಸ್ವಯಂ ಘೋಷಿತ “ಪ್ರವಾದಿ” ಎಂದು ಹೇಳಿಕೊಳ್ಳುವ ಪಾದ್ರಿ ಬಜಿಂದರ್ ಸಿಂಗ್ ಅವರನ್ನು 2018 ರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೋಷಿ ಎಂದು ಮೊಹಾಲಿ ನ್ಯಾಯಾಲಯ ಘೋಷಿಸಿದೆ. ಐದು ಸಹ-ಆರೋಪಿಗಳನ್ನು ಖುಲಾಸೆಗೊಳಿಸಿದಾಗ, ಮೊಹಾಲಿ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಮಾರ್ಚ್ 19 ರಂದು ನಡೆದ ವಿಚಾರಣೆಯ ನಂತರ ತೀರ್ಪು ನೀಡಲಾಗಿದ್ದು, ಪಂಜಾಬ್‌ನ ಜಿರಾಕ್‌ಪುರದ ಮಹಿಳೆಯೊಬ್ಬರು ಸಲ್ಲಿಸಿದ್ದ ಆರೋಪಗಳನ್ನು ಪರಿಹರಿಸಲು ಸಿಂಗ್ ಮತ್ತು ಐವರು ಸಹ-ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಚಂಡೀಗಢದ ಸೆಕ್ಟರ್ 63 ನಲ್ಲಿರುವ ತನ್ನ ನಿವಾಸದಲ್ಲಿ ಸಿಂಗ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಆ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾನೆ ಎಂದು ಬದುಕುಳಿದ ಮಹಿಳೆ ಸಾಕ್ಷ್ಯ ನುಡಿದಿದ್ದಾರೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಘಟನೆಯನ್ನು ವರದಿ ಮಾಡಿದರೆ ಅಥವಾ ಅವನ ಬೇಡಿಕೆಗಳನ್ನು ಪೂರೈಸಲು ನಿರಾಕರಿಸಿದರೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸಿಂಗ್‌ಗೆ ಈ ಹಿಂದೆ ಜಾಮೀನು ನೀಡಲಾಗಿತ್ತು. “ಯಶು ಯಶು” ಧರ್ಮೋಪದೇಶಗಳಿಗೆ ಹೆಸರುವಾಸಿಯಾದ…

Read More