ನವದೆಹಲಿ: ಬ್ರ್ಯಾಂಡ್ ಬೆಂಗಳೂರು ಅಂತಾರೆ. ಆದರೆ ಎಲ್ಲಿ ನೋಡಿದರೂ ಕಸದ ರಾಶಿ ಎಂದು ರಾಜ್ಯ ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕಸ ಸಂಗ್ರಹಣೆಗೂ ಸೆಸ್ ವಿಧಿಸಲಾಗುತ್ತಿದೆ. ಬ್ರ್ಯಾಂಡ್ ಬೆಂಗಳೂರು ಅಂತಾರೆ. ಆದರೆ ಎಲ್ಲಿ ನೋಡಿದರೂ ಕಸದ ರಾಶಿ. ಜನರು ಶಾಪ ಹಾಕುತ್ತಿದ್ದಾರೆ. ಹಿಮಾಲಯದಲ್ಲಿ ಶೌಚಾಲಯಕ್ಕೂ ಟ್ಯಾಕ್ಸ್ ಹಾಕಿದ್ದರು. ಹಾಗೇ ರಾಜ್ಯದಲ್ಲಿ ಉಸಿರಾಡುವ ಗಾಳಿಗೆ ಟ್ಯಾಕ್ಸ್ ಹಾಕಬಹುದು ಎಂದು ಲೇವಡಿ ಮಾಡಿದ್ದಾರೆ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಕೋರ್ಟ್ ಕೇಸ್ ನಿಮಿತ್ಯ ದೆಹಲಿಗೆ ಬಂದಿದ್ದೆ. ಹಾಗೆಯೇ ಬಿಜೆಪಿ ಕಚೇರಿಗೆ ಭೇಟಿ ಮಾಡಿ ಬಂದೆ. ಯತ್ನಾಳ್ ವಿಚಾರಕ್ಕೆ ಸಂಬAಧಿಸಿ ಏನೂ ಮಾತನಾಡಲ್ಲ. ಎಲ್ಲವನ್ನು ಕಾಲಕ್ಕೆ ಬಿಡುತ್ತೇನೆ. ಈಗ ಏನ್ ಮಾಡಿದ್ರೂ ತಪ್ಪಾಗುತ್ತೆ. ಯತ್ನಾಳ್ ಹೊಸ ಪಕ್ಷ ಈಗಲೇ ಏನು ಹೇಳಲು ಸಾಧ್ಯವಿಲ್ಲ. ಸಮಯ ಎಲ್ಲವನ್ನು ನಿರ್ಧಾರ ಮಾಡಲಿದೆ. ಬಿಜೆಪಿ ಕಾಂಗ್ರೆಸ್ ಯಾರಿಗೆ ಎಫೆಕ್ಟ್ ಆಗುತ್ತೆ ಗೊತ್ತಿಲ್ಲ. ಹಿಂದೆಯೂ ಬಹಳ ಜನರು ಪಕ್ಷ ಸ್ಥಾಪಿಸಿದವರು ಯಶಸ್ವಿಯಾಗಿಲ್ಲ, ಡ್ಯಾಮೇಜ್ ಮಾಡಬಹುದು ಎಂದು ತಿಳಿಸಿದ್ದಾರೆ.
Author: Author AIN
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಡಗಳ್ಳಿ ಗೇಟಿನ ಸಮೀಪ ಪೆಟ್ರೋಲ್ ಬಂಕ್ ಬಳ್ಳಿ ಭೀಕರ ಅಪಘಾತ ಸಂಭವಿಸಿದೆ. ಗುಂಡ್ಲುಪೇಟೆ ಕಡೆಯಿಂದ ಮೈಸೂರಿನ ಹೋಗುತ್ತಿದ್ದ ಕಾರಿಗೂ ಮತ್ತು ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನಕ್ಕೂ ಮುಖಾಮುಖಿ ಡಿಕ್ಕಿಯಾಗಿದೆ. ಭೀಕರ ಅಪಘಾತದ ಪರಿಣಾಮವಾಗಿ ಕೇರಳ ಮೂಲದ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. https://ainkannada.com/quarrel-over-auto-rental-driver-attacked/ ಇನ್ನು ಅಪಘಾತದಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೇಗೂರು ಪೋಲಿಸರು ಭೇಟಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿ ಕ್ರಮಕೈಗೊಂಡಿದ್ದಾರೆ.
Video: ನಾನು ಒಬ್ಬ ಮನುಷ್ಯನೆ ಆಗ ನನಗು ಭಯ ಆಗಿತ್ತು, ಶಿವಣ್ಣ ಭಾವುಕ | AIN kannada https://www.youtube.com/watch?v=8b7GvOtGObM
ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ 2025 ರ ಐಪಿಎಲ್ನ ತನ್ನ ಮೂರನೇ ಪಂದ್ಯವನ್ನು ಗೆದ್ದು ತನ್ನ ಮೊದಲ ಅಂಕಗಳನ್ನು ಗಳಿಸಿತು. ಮುಂಬೈ ತಂಡ ಕಳೆದ ಎರಡು ಪಂದ್ಯಗಳಲ್ಲಿ ಸೋತಿದೆ. ಕೆಕೆಆರ್ ವಿರುದ್ಧದ ಮೂರನೇ ಪಂದ್ಯದಲ್ಲಿ ಅವರು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದರು. ಆದಾಗ್ಯೂ, ಈ ಸಂತೋಷದ ಆಚರಣೆಯ ನಡುವೆ, ಆಘಾತಕಾರಿ ಸುದ್ದಿ ಹೊರಹೊಮ್ಮಿತು. ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ ತಂಡವು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇಲ್ಲದೆ ಆಡುವುದನ್ನು ಮುಂದುವರಿಸಬೇಕಾಗುತ್ತದೆ. ವರದಿಗಳ ಪ್ರಕಾರ ಜಸ್ಪ್ರೀತ್ ಬುಮ್ರಾ ಮುಂದಿನ ಎರಡು ವಾರಗಳ ಕಾಲ ಐಪಿಎಲ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಅವರು ಬೌಲಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದರೂ, ಅವರಿಗೆ ಇನ್ನೂ ಫಿಟ್ನೆಸ್ ಕ್ಲಿಯರೆನ್ಸ್ ಸಿಕ್ಕಿಲ್ಲ. https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಬುಮ್ರಾ ಅವರನ್ನು ಬಿಸಿಸಿಐ ವೈದ್ಯಕೀಯ ತಂಡ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಕ್ರೀಡಾ ವಿಜ್ಞಾನ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದ…
Kiccha Sudeep | ಮಗು ಚಿಕಿತ್ಸೆಗೆ ಬೇಕು 16 ಕೋಟಿ..ಮಿಡಿದ ಕಿಚ್ಚನ ಹೃದಯ | AIN Kannada https://www.youtube.com/watch?v=X-Szg0dMacc
ರಶ್ಮಿಕಾ ಮಂದಣ್ಣ ಯಶಸ್ಸಿನ ನಾಗಲೋಟಕ್ಕೆ ಬ್ರೇಕ್ ಬಿದ್ದಿದೆ. ಅದಕ್ಕೆ ಕಾರಣ ಆ ನಿರ್ದೇಶಕ ಅನ್ನೋ ಚರ್ಚೆ ಶುರುವಾಗಿದೆ. ಛಾವಾ, ಪುಷ್ಪ ಸರಣಿ ಸಿನಿಮಾ ಹಾಗೂ ಅನಿಮಲ್ ಮೂಲಕ ಹ್ಯಾಟ್ರಿಕ್ ಹಿಟ್ ಬಾರಿಸಿದವರು ಇದೇ ಹುಡ್ಗಿ ಈಗ ಹಿಂದಿ ಚಿತ್ರರಂಗದ ಮೊದಲ ಸೋಲಿನ ರುಚಿ ಕಂಡಿದ್ದಾರೆ. ಎ.ಆರ್. ಮುರುಗದಾಸ್ ನಿರ್ದೇಶನದ, ಸಲ್ಮಾನ್ ಖಾನ್ ನಾಯಕನಾಗಿ , ರಶ್ಮಿಕಾ ನಾಯಕಿಯಾಗಿ ಸಿಕಂದರ್ ಚಿತ್ರ. ಈದ್ ಹಬ್ಬದ ಮುನ್ನಾದಿನ ಬಿಡುಗಡೆಯಾಗಿತ್ತು. ಆದ್ರೆ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಮೋಡಿ ಮಾಡುವಲ್ಲಿ ವಿಫಲವಾಗಿದೆ. ಸಿಕಂದರ್ ಸಿನಿಮಾ ಮೊದಲ ದಿನದ ಕಲೆಕ್ಷನ್ ಕೇಳಿ ಸಲ್ಲು ಫ್ಯಾನ್ಸ್ ದಂಗಾಗಿ ಹೋಗಿದ್ದಾರೆ. ಅದಕ್ಕೆ ಕಾರಣ ಸಲ್ಮಾನ್ ಖಾನ್ ವೃತ್ತಿ ಜೀವದಲ್ಲಿ ಅತಿ ಕಡಿಮೆ ಗಳಿಕೆ ಮಾಡಿದ ಚಿತ್ರ ಅನ್ನೋ ಮುದ್ರೆ ಬಿದ್ದಿದೆ. ಸಿಕಂದರ್ ಚಿತ್ರ ಮೊದಲ ದಿನ ಕೇವಲ 26 ಕೋಟಿ ಗಳಿಸಿದೆ. ಇದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇದರ ಮುಖ್ಯ ಕಾರಣ ಕಥೆಯಲ್ಲಿನ ಸತ್ವದ ಕೊರತೆ ಇರುವುದು. ಘಜನಿಯಂತಹ ಹಿಟ್…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಹನಿ ಕಹಾನಿ ಜೋರು ಸದ್ದು ಮಾಡುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ, ಬಹಳ ದಿನಗಳ ನಂತರ ನಾಳೆ ದೆಹಲಿಗೆ ತೆರಳುತ್ತಿದ್ದಾರೆ. ಇತ್ತೀಚೆಎ ಅನಾರೋಗ್ಯ ಕಾರಣದಿಂದ ನಡೆಯಲೂ ಆಗದೇ ವಿಶ್ರಾಂತಿ ತೆಗೆದುಕೊಂಡು ಇದೀಗ ವ್ಹೀಲ್ ಚೇರ್ ನಲ್ಲಿ ಓಡಾಡುತ್ತಿರುವ ಸಿಎಮ ಸಿದ್ದರಾಮಯ್ಯ, ಹೈಕಮಾಂಡ್ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಮುಡಾ ಹಗರಣ ಬಹಳವಾಗಿ ಕಾಡಿತ್ತು. ಅದಾದ ಬಳಿಕ ಬಜೆಟ್ ಮಂಡನೆ, ಅಧಿವೇಶನ ಸೇರಿ ಹಲವು ಕಾರಣಗಳಿಂದ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿರಲಿಲ್ಲ. ಕಳೆದ ವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು. ವಿಶ್ರಾಂತಿ ಪಡೆದ ಬಳಿಕ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದರು. ಸದ್ಯ ಬೆನ್ನು ನೋವಿನಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬಹಳ ದೂರ ನಡೆಯಲು ಆಗದಿದ್ದರೂ ವ್ಹೀಲ್ ಚೇರ್ ನಲ್ಲೇ ಓಡಾಡುತ್ತಿದ್ದಾರೆ. ಒಂದು ಕಡೆ ಅಧಿವೇಶನ, ರಾಜ್ಯ ಬಜೆಟ್ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಸಚಿವ ಕೆ.ಎನ್ ರಾಜಣ್ಣ ವಿರುದ್ಧ ನಡೆದ…
ದಾವಣಗೆರೆ: ಆಟೋ ಬಾಡಿಗೆ ವಿಚಾರಕ್ಕೆ ಗಲಾಟೆ ನಡೆಸಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಾವಣಗೆರೆಯ ನಿಟ್ಟುವಳ್ಳಿಯಲ್ಲಿನಡೆದಿದೆ. ಕೊಳೆನಹಳ್ಳಿ ಚಂದ್ರಯ್ಯ (27) ಹಲ್ಲೆಗೊಳಗಾದ ಆಟೋ ಚಾಲಕ. ಕಳೆದ ಸೋಮವಾರ ರಾತ್ರಿ ಬಾರ್ನಲ್ಲಿ ಕುಡಿದು ಮನೆಗೆ ಹೋಗಲು ಇಬ್ಬರು ಕುಡುಕರು ಆಟೋ ಏರಿದ್ದಾರೆ. ಬಳಿಕ ಬಾಡಿಗೆ ಹಣ ಜಾಸ್ತಿ ಹೇಳ್ತಿದ್ದೀಯಾ ಎಂದು ಆಟೋ ಚಾಲಕನನ್ನು ಥಳಿಸಿ, ಬಾಟಲ್ನಿಂದ ತಲೆಯ ಮೇಲೆ ಹಲ್ಲೆ ಮಾಡಿದ್ದಾರೆ. https://ainkannada.com/quarterly-progress-review-meeting-chaired-by-minister-k-venkatesh/ ಕೂಡಲೇ ಸ್ಥಳೀಯರು ಹಲ್ಲೆಗೊಳಗಾದ ಆಟೋ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಂದ್ರಯ್ಯಗೆ ಚಿಕಿತ್ಸೆ ನೀಡಲಾಗುತ್ತಿದೆ.ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ನವದೆಹಲಿ: ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವುದನ್ನು ಗುರಿಯಾಗಿಸಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರ ಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ. ನೀರು, ಮೆಟ್ರೋ ರೈಲು, https://ainkannada.com/50-thousand-in-one-siege-honeytrap-threat-for-asking-for-money-back-three-people-including-a-teacher-arrested/ ಕೆಎಸ್ಆರ್ಟಿಸಿ ಬಸ್ ಟಿಕೆಟ್, ಹಾಲು(3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರ್ಕಾರ ಎಂದು ದೂರಿದ್ದಾರೆ. ಇಷ್ಟು ಸಾಲದೆಂಬಂತೆ ಜನರ ಮೇಲೆ ಏ. 1ರಿಂದ ಕಸದ ಸೆಸ್ ಹೇರುತ್ತಿದೆ ದರ ಬೀಜಾಸುರ ಸರ್ಕಾರ. ಕಸದ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ…
ರೀಲ್ಸ್ ಹುಚ್ಚಿಗೆ ಬಿದ್ದು ಮಚ್ಚು ಹಿಡಿದು ಜೈಲು ಸೇರಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಕನ್ನಡದ ಬಿಗ್ ಬಾಸ್ ಹೋಗಿ ಬಂದ ಬಹುತೇಕ ಮಂದಿ ಇಂತಹ ಕಂಟ್ರವರ್ಸಿಗಳಿಂದಲೇ ಸುದ್ದಿಯಾಗುತ್ತಾರೆ. ಅದರಲ್ಲಿಯೂ ʼಡಿ ಪಡೆʼ ಅಂತಾನೇ ವಿನಯ್ ಹಾಗೂ ರಜತ್ ಅವರನ್ನು ಕರೆಯಲಾಗುತ್ತಿದೆ. ಜೈಲಿನಿಂದ ಹೊರಬರುವ ವೇಳೆ ರಜತ್, ವಿನಯ್ ಸೇಬು ತಿನ್ನುತ್ತಾ ಬಂದಿದ್ದನ್ನು ಗಮನಿಸಿದ ಹಲವರು ʼಡಿ ಗ್ಯಾಂಗ್ʼ ಎಂದು ಕರೆದಿದ್ದರು. ಪರಪ್ಪನ ಅಗ್ರಹಾರದಿಂದ ಹೊರ ಬರುತ್ತಿದ್ದಂತೆ ವಿಡಿಯೋ ಮಾಡಿ ವಿನಯ್ ಕ್ಷಮೆಯಾಚಿಸಿದ್ದರು. ಇತ್ತೀಚೆಗೆ ಖಾಸಗಿ ಸಂದರ್ಶನವೊಂದರಲ್ಲಿ ತಮಗೆ ಸಿಕ್ಕಿರುವ ಡಿ ಗ್ಯಾಂಗ್ ಪಟ್ಟಕ್ಕೂ ವಿನಯ್ ಗೌಡ ಕ್ಲಾರಿಟಿ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ವಿನಯ್ ಗೌಡ, “ಇಲ್ಲಿ ʻಡಿ ಗ್ಯಾಂಗ್ʼ ವಿಷ್ಯನೇ ಬರೋದಿಲ್ಲ. ಇದು ನನ್ನ ವೃತ್ತಿ, ಬೆಳಗ್ಗೆ ಎದ್ದರೆ ನಾನು ಕೆಲಸಕ್ಕೆ ಹೋಗ್ತೀನಿ. ಯಾವ ಗ್ಯಾಂಗ್ ಕೆಲಸಕ್ಕೂ ನಾನು ಹೋಗೋದಿಲ್ಲ. ನಾನು ನನ್ನ ಕುಟುಂಬಕ್ಕಾಗಿ ದುಡಿತಿದ್ದೀನಿ, ಗ್ಯಾಂಗ್ಗೋಸ್ಕರ ಅಲ್ಲ, ನನ್ನ ಹೆಂಡತಿ ಮತ್ತು…