ಬೆಂಗಳೂರು: ಏ.5ರಂದು ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ರಾಜ್ಯ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಬೆಲೆ ಏರಿಕೆ ನಿರ್ಧಾರ ವಾಪಸ್ ಪಡೆಯಲು ಹೋರಾಟ ನಡೆಸಲಿದ್ದೇವೆ. ಏ.2ರಂದು ಫ್ರೀಡಂ ಪಾರ್ಕ್ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ. ಹಾಲಿ ಮಾಜಿ ಶಾಸಕರು, ಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗಿಯಾಗುತ್ತಾರೆ. ಏ.2ರಂದು ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ. ಏ.5ರಂದು ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಎಲ್ಲಾ ಜಿಲ್ಲೆಗಳಲ್ಲಿ ರಸ್ತೆಗೆ ಇಳಿದು ಹೋರಾಟ ಮಾಡಲಿದೆ ಎಂದರು. https://ainkannada.com/see-the-importance-history-and-method-of-celebrating-ramadan/ ಲ್ಯಾಬ್ ಶುಲ್ಕ ಜಾಸ್ತಿ ಆಗಿದೆ. ಬಡವರಿಗೂ ಬರೆ ಎಳೆಯೋ ಕೆಲಸ ಈ ಸರ್ಕಾರ ಮಾಡಿದೆ. ನೋಂದಣಿ-ಮುದ್ರಾಂಕ ಶುಲ್ಕ ಜಾಸ್ತಿ ಆಗಿದೆ. ಪ್ರೊಫೆಷನಲ್ ಟ್ಯಾಕ್ಸ್ ಜಾಸ್ತಿ ಮಾಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಆಗಿದೆ. ಬೀಜಗಳ ಬೆಲೆ ಜಾಸ್ತಿ ಮಾಡಿದ್ದಾರೆ.…
Author: Author AIN
ಬೆಂಗಳೂರು: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಆಭರಣ ಅಂಗಡಿ ಮಾಲೀಕ ಸಾಹಿಲ್ ಜೈನ್ ಅವರನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು. ತನಿಖೆಯಲ್ಲಿ ಸಾಹಿಲ್ಗೆ ರನ್ಯಾ ರಾವ್ ಮತ್ತು ತರುಣ್ ರಾಜ್ ಜೊತೆ ಸಂಬಂಧವಿತ್ತು ಎಂದು ತಿಳಿದುಬಂದಿದ್ದು, ತನಿಖೆ ವೇಳೆ ಮತ್ತಷ್ಟು ಮಾಹಿತಿಗಳು ತಿಳಿದು ಬಂದಿದೆ. ಹೌದು ಸಾಹಿಲ್ ವಾಟ್ಸ್ಆ್ಯಪ್ ಚಾಟ್ನಲ್ಲಿ ದುಬೈಗೆ ಹಣ ವರ್ಗಾವಣೆ ಮಾಡಿದ್ದನ್ನು ಡಿಆರ್ಐ ಪತ್ತೆಮಾಡಿದೆ. ಚಿನ್ನ ಮಾರಾಟ ಮಾಡಿದ್ದು ಕೂಡ ವಾಟ್ಸ್ಆ್ಯಪ್ ಚಾಟ್ನಿಂದ ಬಹಿರಂಗವಾಗಿದೆ. ಮಾರ್ಚ್ 3ರಂದು ರನ್ಯಾ ರಾವ್, ದುಬೈ ನಂಬರ್ನಿಂದ ಸಾಹಿಲ್ಗೆ ಕರೆ ಮಾಡಿದ್ದ ವೇಳೆ ಚಿನ್ನ ವಿಲೇವಾರಿ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದು ಪತ್ತೆಯಾಗಿದೆ. https://ainkannada.com/see-the-importance-history-and-method-of-celebrating-ramadan/ ಮತ್ತೊಂದೆಡೆ, ಹವಾಲಾ ದಂಧೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾಗಿ ಜೈನ್ ತನಿಖಾಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾನೆ. ಇದರಿಂದಾಗಿ, ದುಬೈನಲ್ಲಿ ಚಿನ್ನ ಖರೀದಿಗೆ ಹವಾಲಾ ಮೂಲಕ ಹಣ ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ, ಡಿಆರ್ಐ ಅಧಿಕಾರಿಗಳು ಸಾಹಿಲ್ ಜೈನ್ ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಮೈಸೂರು: ಒಂದೆಡೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಡ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಪರಿಸರವಾದಿಗಳುಳು ಮತ್ತು ವನ್ಯಜೀವಿ ಕಾರ್ಯಕರ್ತರು ಈ ಕ್ರಮವನ್ನು ವಿರೋಧಿಸಲು ಮುಂದಗಿದ್ಧಾರೆ. ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಲು ರಾತ್ರಿ ಸಂಚಾರ ನಿಷೇಧವನ್ನು ಮುಂದುವರಿಸಲು ಒತ್ತಾಯಿಸಿ ಅಭಿಯಾನ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಭಾನುವಾರ ಬಂಡೀಪುರದಲ್ಲಿ ಸಭೆ ಸೇರಿ ಉದ್ಯಾನವನ ರಕ್ಷಿಸಲು ತಮ್ಮ ಮುಂದಿನ ಕ್ರಮಗಳ ಬಗ್ಗೆ ಯೋಜಿಸಲು ನಿರ್ಧರಿಸಿದ್ದಾರೆ. ನಿಷೇಧವನ್ನು ತೆಗೆದುಹಾಕುವುದರಿಂದ ಉಂಟಾಗುವ ಸಂಭಾವ್ಯ ಪರಿಣಾಮಗಳ ಬಗ್ಗೆ ಚರ್ಚಿಸಿದ್ದಾರೆ. ಹಿಂದೆ ಇದೇ ರೀತಿಯ ಪ್ರಸ್ತಾಪಗಳನ್ನು ವಿರೋಧಿಸಲು ‘ಬಂಡೀಪುರವನ್ನು ಉಳಿಸಿ’ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು, https://ainkannada.com/attempt-to-escape-by-attacking-police-robber-shot/ ರಾತ್ರಿ ಸಂಚಾರ ನಿಷೇಧವನ್ನು ಪರಿಚಯಿಸಿದಾಗಿನಿಂದ, ಹೆದ್ದಾರಿಯಲ್ಲಿ ಪ್ರಾಣಿಗಳ ಸಾವುನೋವುಗಳಲ್ಲಿ ಗಮನಾರ್ಹ ಇಳಿಕೆಯಾಗಿದೆ. ಹತ್ತಿರದ ಹಳ್ಳಿಗಳಲ್ಲಿ ಮಾನವ-ಪ್ರಾಣಿ ಸಂಘರ್ಷದಲ್ಲಿ ಇಳಿಕೆ ಕಂಡುಬಂದಿದೆ.
ಒಬ್ಬ ಹೆಂಡತಿ ತನ್ನ ಗಂಡನೊಂದಿಗೆ ಸಮಸ್ಯೆ ಎದುರಿಸುತ್ತಿದ್ದ ಕಾರಣ ತನ್ನ ಅತ್ತೆಯ ಮನೆಯಿಂದ ತನ್ನ ಹೆತ್ತವರ ಮನೆಗೆ ಹಿಂತಿರುಗಿದಳು. ಆದರೆ, ಹಿರಿಯರು ಮತ್ತು ಪೊಲೀಸರು ಗಂಡನಿಗೆ ಪಂಚಾಯ್ತಿ ಮಾಡಿ ಹೆಂಡತಿಯನ್ನು ಸೆಟ್ಲ್ಮೆಂಟ್ ಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದಾಗ, ಗಂಡ ತನ್ನ ಹೆಂಡತಿಯನ್ನು ಸೆಟ್ಲ್ಮೆಂಟ್ ಗೆ ಕರೆತಂದನು. ಆದರೆ, ಅಲ್ಲಿಗೆ ಬಂದ ನಂತರ, ಅವಳು ವ್ಯಾಪಾರ ಪ್ರವಾಸದ ಮೇಲೆ ಇಲ್ಲಿಗೆ ಬಂದಿರುವುದಾಗಿ ಹೇಳುವ ಮೂಲಕ ತನ್ನ ಗಂಡನ ಕುಟುಂಬಕ್ಕೆ ಆಘಾತ ನೀಡಿದಳು. ಒಂದು ವಾರದ ನಂತರ, ಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ತನ್ನ ಸಹೋದರನ ಕಾಫಿಗೆ ವಿಷ ಬೆರೆಸಿ ಆತನನ್ನು ಕೊಲ್ಲಲಾಗಿದೆ ಎಂದು ಆಕೆ ಪೊಲೀಸರಿಗೆ ದೂರು ನೀಡಿದಾಗ ಇಡೀ ಪ್ರಕರಣ ಬಹಿರಂಗವಾಯಿತು. ತನ್ನ ಪ್ರಿಯಕರನೊಂದಿಗೆ ಫ್ಲರ್ಟ್ ಮಾಡಲು ಇರುವ ಅಡಚಣೆಯನ್ನು ತೆಗೆದುಹಾಕಲು ಬಯಸಿದ ಪತಿ, ತನ್ನ ಕಾಫಿಗೆ ಆ ಪದಾರ್ಥವನ್ನು ಬೆರೆಸಿ ಕುಡಿದಿರುವ ಕ್ರೂರ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ. ಪೂರ್ಣ ವಿವರಗಳಿಗೆ…
ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆ ಗಾಂಗ್ಯ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ಮಧ್ಯೆ ಈ ಶೂಟೌಟ್ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಎರಡು ಸುತ್ತು ಗುಂಡೇಟು ಹಾರಿಸಿದ್ದು, ಆರೋಪಿ ಜಯಸಿಂಹ ಮೊಡಕೆರ್ ಎಡಗಾಲಿಗೆ ಗುಂಡೇಟು ತಗುಲಿದೆ. https://ainkannada.com/revenge-for-loan-rejection-watch-the-web-series-robbery-plan-this-is-the-story-of-nyamathi-bank-robbery/ ಆರೋಪಿ ಮಂಜುನಾಥ ಮೊಡಕೆರ್, ರಮೇಶ್ ಮೊಡಕೆರ್ ಹಾಗೂ ಜಯಸಿಂಹ ಮೊಡಕೆರ್ರನ್ನು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆತರುತ್ತಿದ್ದರು. ಜಯಸಿಂಹ ಕೈಗೆ ಹಾಕಿದ್ದ ಬೇಡಿಯಿಂದ ಪೊಲೀಸ್ ಸಿಬ್ಬಂದಿ ವೀರೇಶ್ ಬಿಸ್ನಳ್ಳಿ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಮುಂಡರಗಿ ಸಿಪಿಐ ಮಂಜುನಾಥ ಕುಸುಗಲ್ ಅವರು ಆರೋಪಿ ಜಯಸಿಂಹನ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಗಾಯಾಳು ಆರೋಪಿ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಎಸ್.ಪಿ, ಬಿ.ಎಸ್ ನೇಮಗೌಡ ಭೇಟಿ…
ಬೆಂಗಳೂರು: ಯತ್ನಾಳ್ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಕಡೆ ಹೋಗಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ. ಅವರ ಸಿದ್ದಾಂತವೇ ಬೇರೆ ನಮ್ಮ ಸಿದ್ದಾಂತವೇ ಬೇರೆ. ಜೆಡಿಎಸ್ ಕಡೆ ಬೇಕಿದ್ದರೆ ಹೋಗಲು ಚರ್ಚೆ ಮಾಡಬಹುದು. ಇಲ್ಲಿ ಮುಖ್ಯವಾಗಿ ಯತ್ನಾಳ್ ಅವರಿಗೆ ಹೊಸ ಪಕ್ಷ ಕಟ್ಟಿದರೆ ಯಶಸ್ಸು ಸಿಗುತ್ತದೆ ಎಂದು ನನಗಂತೂ ಅನಿಸುವುದಿಲ್ಲ ಎಂದು ಹೇಳಿದರು. https://ainkannada.com/see-the-importance-history-and-method-of-celebrating-ramadan/ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿ ಬಹಳ ದಿನಗಳಾಗಿತ್ತು. ಕೇಂದ್ರದಲ್ಲಿ ವರಿಷ್ಟರನ್ನು ಭೇಟಿ ಮಾಡ್ತಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಯವರನ್ನೂ ಕೂಡ ಸಿಎಂ ಭೇಟಿ ಮಾಡ್ತಾರೆ. ಮುಡಾ ಪ್ರಕರಣ ಆದಮೇಲೆ ಆರೋಗ್ಯ ಸ್ವಲ್ಪ ಏರು ಪೇರಾಗಿ ಬಜೆಟ್ ಕೂಡ ಇದ್ದ ಕಾರಣದಿಂದ ದೆಹಲಿಗೆ ಸಿಎಂ ಹೋಗಿರಲಿಲ್ಲ. ಎಲ್ಲ ವಿಷಯಗಳನ್ನೂ ಚರ್ಚೆ ಮಾಡಿ ಬರ್ತಾರೆ. ಸಿಎಂ ದೆಹಲಿಯಿಂದ ಬಂದ ಮೇಲೆ ಮುಂದಿನ ಹೆಜ್ಜೆ ಏನು ಎಂಬುದು ಗೊತ್ತಾಗುತ್ತದೆ…
ಆನೇಕಲ್: ಸ್ನೇಹಿತರೊಡನೆ ಎಣ್ಣೆ ಕುಡಿಯಲು ಬಂದು ವೇಳೆ ರೌಡಿಶೀಟರ್ ಒಬ್ಬರನ್ನ ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ . ಹತ್ಯೆಯಾದ ರೌಡಿಶೀಟರ್ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ ವೇಳೆ, ಎರಡು ಬೈಕ್ನಲ್ಲಿ ಬಂದ ಹಂತಕರ ಪಡೆ ಕ್ಷಣಮಾತ್ರದಲ್ಲಿ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದೆ. ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. https://ainkannada.com/see-the-importance-history-and-method-of-celebrating-ramadan/ ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.ಇನ್ನು ಕೊಲೆಯಾದ ನೇಪಾಳಿ ಮಂಜ ರೌಡಿಸಂ ಸಹವಾಸ ಬೇಡ ಎಂದು ಇತ್ತೀಚೆಗೆ ಕುಟುಂಬ ಸಮೇತ ದೂರದ ಕುಣಿಗಲ್ಗೆ ಶಿಫ್ಟ್ ಆಗಿದ್ದ. ಯುಗಾದಿ ಹಬ್ಬ ಹಿನ್ನೆಲೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಲು ಊರಿಗೆ…
ಕಳೆದ ವರ್ಷ ದೇಶಾದ್ಯಂತ ಸಂಚಲನ ಮೂಡಿಸಿದ್ದ ಬಿಷ್ಣೋಯ್ ಗ್ಯಾಂಗ್ ಈಗ ಮತ್ತೊಂದು ಕೊಲೆಗೆ ಯೋಜನೆ ರೂಪಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ತಾರಿಕ್ ಖಾನ್ ಅವರಿಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಹಿರಂಗಪಡಿಸಿರುವುದು ಸಂಚಲನ ಸೃಷ್ಟಿಸುತ್ತಿದೆ. ಕಳೆದ ಎರಡು ತಿಂಗಳಿನಿಂದ ಬಿಷ್ಣೋಯ್ ಗ್ಯಾಂಗ್ನ ವ್ಯಕ್ತಿಯೊಬ್ಬ ಫೋನ್ ಕರೆಗಳ ಮೂಲಕ ಬೆದರಿಕೆ ಹಾಕುತ್ತಿದ್ದರೂ, ಅವನು ಗಮನ ಹರಿಸಿಲ್ಲ ಎಂದು ಅವರು ಹೇಳಿದರು. ಆದರೆ.. ಈಗ ಕೆಲವರು ಮತ್ತೆ ಕರೆ ಮಾಡಿದ್ದಾರೆ.. ಮುಂದೆ ನಿನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.. ಮತ್ತು ಎರಡು ದಿನ ಕಾಯ್ದರೆ ಅವರು ಏನು ಮಾಡುತ್ತಾರೆಂದು ನಿಮಗೆ ತಿಳಿಯುತ್ತದೆ ಎಂದು ಎಚ್ಚರಿಸಿದ್ದಾರೆ. ಈ ವಿಷಯದ ಬಗ್ಗೆ ಜಿಲ್ಲಾ ಎಸ್ಪಿ ಮತ್ತು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದ್ದೇನೆ ಎಂದು ಅವರು ಹೇಳಿದರು. https://ainkannada.com/see-the-importance-history-and-method-of-celebrating-ramadan/ ತಾರಿಕ್ ಖಾನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ರಮಾನಂದ ಪ್ರಸಾದ್, ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹೇಳಿದರು.…
ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪೊಲೀಸರ ವಿಚಾರಣೆಯಲ್ಲಿ ದರೋಡೆಗೆ ಕಾರಣವೇನು, ಸಂಚು ಹೇಗೆ ಮಾಡಿದ್ದರು, ಚಿನ್ನ ಮುಟ್ಟಿದ್ದೇಗೆ ಅನ್ನೋದರ ಬಗ್ಗೆ ಬಾಯ್ಬಿಟ್ಟಿದ್ದಾರೆ. ಘಟನೆ ನಡೆದ ಆರು ತಿಂಗಳ ಬಳಿಕ ಪ್ರಕರಣದಲ್ಲಿ 6 ಜನ ಆರೋಪಿಗಳ ಬಂಧಿಸಲಾಗಿದ್ದು, ಬಂಧಿತರಿಂದ 17 ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ. ಇನ್ನೂ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ಎನ್ನಲಾಗಿದ್ದು, ಈತ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ. ಅನ್ನೋದನ್ನು ಪೊಲೀಸರ ವಿಚಾರಣೆಯಲ್ಲಿ ಬಹಿರಂಗಪಡಿಸಿದ್ದಾರೆ. https://ainkannada.com/friends-quarrel-in-a-drunken-state-one-of-them-kills-another-person-in-a-bar-and-flees/ ಅಲ್ಲದೇ ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್ನಲ್ಲಿ ಇಟ್ಟಿದ್ದರು ಅನ್ನೋದನ್ನು ಬಾಯ್ ಬಿಟ್ಟಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯಂತ ಯಶಸ್ವಿ ತಂಡವಾದ ಮುಂಬೈ ಇಂಡಿಯನ್ಸ್, ಈ ಋತುವಿನಲ್ಲಿ ಮೊದಲ ಬಾರಿಗೆ ತವರಿನಲ್ಲಿ ಆಡಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಎರಡೂ ತಂಡಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ವಾಂಖೆಡೆ ಕ್ರೀಡಾಂಗಣದಲ್ಲಿ ಇದು ರೋಮಾಂಚಕ ಪಂದ್ಯವೆಂದು ತೋರುತ್ತದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ಋತುವು ಉತ್ತಮವಾಗಿ ನಡೆದಿಲ್ಲ. ಅವರು ಮೊದಲ ಎರಡು ಪಂದ್ಯಗಳಲ್ಲಿ ಸೋತರು. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದ್ದ ತಂಡ, ಎರಡನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 36 ರನ್ಗಳಿಂದ ಸೋತಿತ್ತು. ಅಂತಹ ಪರಿಸ್ಥಿತಿಯಲ್ಲಿ, ಸತತ ಎರಡು ಸೋಲುಗಳ ನಂತರ, ಅವರು ಈಗ ಋತುವಿನ ಮೊದಲ ಗೆಲುವು ದಾಖಲಿಸುವ ಉದ್ದೇಶದಿಂದ ತಮ್ಮ ತವರು ನೆಲಕ್ಕೆ ಬರಲಿದ್ದಾರೆ. https://ainkannada.com/see-the-importance-history-and-method-of-celebrating-ramadan/ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಬಗ್ಗೆ ಹೇಳುವುದಾದರೆ, ಋತುವಿನ ಉದ್ಘಾಟನಾ ಪಂದ್ಯದಲ್ಲಿ…