ಬೆಳಗಾವಿ : ತ್ಯಾಗ ಬಲಿದಾನ ಪ್ರೀತಿ ಭಾವೈಕ್ಯತೆಯ ದ್ಯೋತಕವಾದ ರಂಜಾನ ಹಬ್ಬವನ್ನು ಸಹಸ್ರಾರು ಮುಸ್ಲಿಂ ಬಾಂಧವರು ಅದ್ದೂರಿಯಾಗಿ ಆಚರಿಸಿದರು. ರಾತ್ರಿ ವೇಳೆಯಲ್ಲಿ ಕುಡಚಿಯ ಪ್ರಮುಖ ಬಿದಿಯುದ್ಧಕ್ಕೂ ವಿದ್ಯುತ್ ದೀಪದ ಅಲಂಕಾರ ನೋಡುಗರ ಮನಸೆಳೆದಿತ್ತು. ಬೆಳಗ್ಗೆ 9 ಗಂಟೆಗೆ ಪಟ್ಟಣದ ಈದ್ಗ ಮೈದಾನದಲ್ಲಿ ನೆರೆದ ನೂರಾರು ಮಂದಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಸೇರಿದಂತೆ ಅನೇಕರು ಶುಭಾಶಯಗಳು ಕೋರಿದರು. ಇದೆ ಸಂದರ್ಭದಲ್ಲಿ SDPI ಸಂಘಟನೆಯ ಕಾರ್ಯಕರ್ತರು ಮುಸ್ಲಿಂ ರ ಮೇಲೆ ಆಗುತ್ತಿರುವ ದಬ್ಬಾಳಿಕೆ ಹಾಗೂ ಅನಾಚಾರದ ಕುರಿತಾದ ಬಿತ್ತಿಪತ್ರಗಳನ್ನು ಹಿಡಿದು ಜಾಗೃತಿ ಮೂಡಿಸಿದರು. https://ainkannada.com/ramadan-celebrations-mass-prayers-at-chitradurga-eidgah-maidan/ ಈ ಸಂದರ್ಭದಲ್ಲಿ ಕೈ ಶಾಸಕ, ಪುರಸಭೆ ಅಧ್ಯಕ್ಷ ಹಾಗೂ ಸದಸ್ಯರು ಪೊಲೀಸ್ ಇಲಾಖೆ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಹಾಗೂ ಹಿರಿಯರು ಉಪಸ್ಥಿತರಿದ್ದರು.
Author: Author AIN
ಬೆಂಗಳೂರು: ಬಿಬಿಎಂಪಿಯು 2024-25ನೇ ಸಾಲಿನಲ್ಲಿ ಆಸ್ತಿ ತೆರಿಗೆಯಿಂದ 5,210 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿತ್ತು. ಆದರೆ, ಈವರೆಗೆ 4604 ಕೋಟಿ ರೂ (ಶೇ 88.36) ವಸೂಲಾಗಿದೆ. ಇಂದು ಬಾಕಿ ಆಸ್ತಿ ತೆರಿಗೆ ಪಾವತಿಸದಿದ್ದರೆ ಡಬಲ್ ಹಣ ದಂಡದ ರೂಪದಲ್ಲಿ ಪಾವತಿಸಬೇಕಿದೆ. ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನವಾಗಿರುವ ಕಾರಣ ಬಿಬಿಎಂಪಿ ಕಂದಾಯ ಇಲಾಖೆ ಕಚೇರಿಗೆ ರಂಜಾನ್ ರಜೆ ರದ್ದುಗೊಳಿಸಲಾಗಿದೆ. ರಾತ್ರಿ 11 ರ ವರೆಗೆ ಬಿಬಿಎಂಪಿ ಕಂದಾಯ ಇಲಾಖೆ ಕಚೇರಿ ತೆರೆದಿರಲಿದ್ದು, ಆಸ್ತಿ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. https://ainkannada.com/see-the-importance-history-and-method-of-celebrating-ramadan/ ಒಂದು ವೇಳೆ ಗಡುವಿನ ಒಳಗೆ ಆಸ್ತಿ ತೆರಿಗೆ ಪಾವತಿಸಲು ವಿಫಲರಾದರೆ, ಏಪ್ರಿಲ್ 1 ರಿಂದ ದುಪ್ಪಟ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಅದೆ ಜತೆಗೆ, ಶೇ 9 ರ ಬಡ್ಡಿ ಸಹ ಪಾವತಿಸಬೇಕಾಗುತ್ತದೆ. ಬಿಬಿಎಂಪಿ ಕಾಯ್ದೆಯಲ್ಲಿ ತಿದ್ದುಪಡಿ ಹಿನ್ನೆಲೆ ಡಬಲ್ ತೆರಿಗೆ ಪಾವತಿಸಬೇಕಾಗುತ್ತದೆ. ಸದ್ಯ ಪಾಲಿಕೆಗೆ 400 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಬರಬೇಕಿದೆ. ಇವುಗಳಲ್ಲಿ ಕೆಲವು ಸರ್ಕಾರಿ ಕಟ್ಟಡಗಳ ಆಸ್ತಿ…
ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಯತ್ನಾಳ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವುದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಆದ್ರೆ ಅವರು ನಮ್ಮ ಪಕ್ಷಕ್ಕೆ ಯಾವುದೇ ಅರ್ಜಿ ಹಾಕಿಲ್ಲ. ಹಾಕಿದರು ಕೂಡ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಇದೆ. ಅವರು ಒಂದು ಸಮಾಜದ ವಿರುದ್ಧ ಬಹಳಷ್ಟು ಮಾತನಾಡಿದ್ದಾರೆ. ಈ ಕಾರಣ ನಮ್ಮಲ್ಲಿ ಅವರನ್ನ ಸೇರಿಸಿಕೊಳ್ಳುವುದು ಕಷ್ಟ ಅಂತ ಸಚಿವರು ಹೇಳಿದ್ದಾರೆ. https://ainkannada.com/basanagowda-patil-yatnal-invited-to-our-party-mla-raju-kage/ ಇದೇ ವೇಳೆ ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದಿದ್ದಾರೆ.
ಇಂದಿನ ಯುವಕರು ಬೈಕ್ ಸವಾರಿಯನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಈ ಸುಡುವ ಬಿಸಿಲಿನಲ್ಲಿ ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡುವುದು ಕಷ್ಟದ ಕೆಲಸ. ಬಿಸಿಲಿನಲ್ಲಿ ಹೆಲ್ಮೆಟ್ ಧರಿಸುವುದರಿಂದ ತಲೆ ಬೆವರು ಬರಬಹುದು ಮತ್ತು ಅನಾನುಕೂಲವೂ ಆಗಬಹುದು. ಆದ್ದರಿಂದ, ಹೆಚ್ಚಿನ ಜನರು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಾರೆ. ಸಂಚಾರ ಪೊಲೀಸರು ನೋಡಿದರೆ ದಂಡ ಗ್ಯಾರಂಟಿ. ಆದರೆ, ಬೆವರುವಿಕೆಯಿಂದ ಕಿರಿಕಿರಿ ಅನುಭವಿಸುತ್ತಿದ್ದರೂ ಸಹ, ಹೆಲ್ಮೆಟ್ ಧರಿಸಿ ಬಿಸಿಲಿನಲ್ಲಿ ವಾಹನ ಚಲಾಯಿಸುವ ಜನರನ್ನು ನೀವು ನೋಡಬಹುದು. ಈ ಬಿಸಿ ವಾತಾವರಣದಲ್ಲಿ ಯಾವುದೇ ತೊಂದರೆ ಇಲ್ಲದೆ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಲು ನೀವು ಬಯಸಿದರೆ, ಈ ಕೆಳಗಿನ ಸರಳ ಸಲಹೆಗಳನ್ನು ಪ್ರಯತ್ನಿಸಿ. ಏನದು? ಈ ಬಿಸಿ ವಾತಾವರಣದಲ್ಲಿ ಹೆಲ್ಮೆಟ್ ಧರಿಸುವುದು ಅನಾನುಕೂಲವೆನಿಸಿದರೆ, ನಿಮ್ಮ ತಲೆಗೆ ತೆಳುವಾದ ಬಟ್ಟೆಯನ್ನು ಕಟ್ಟಿಕೊಂಡು ಅದರ ಮೇಲೆ ಹೆಲ್ಮೆಟ್ ಧರಿಸುವುದು ಉತ್ತಮ. ನೀವು ಹೆಲ್ಮೆಟ್ ಅನ್ನು ದೀರ್ಘಕಾಲ ಧರಿಸಿದರೆ, ಹೆಲ್ಮೆಟ್ನಲ್ಲಿ ಬೆವರು ಸಂಗ್ರಹವಾಗುತ್ತದೆ. ಆದ್ದರಿಂದ ನಿಮ್ಮ ಕೂದಲನ್ನು ಮುಚ್ಚುವ ಟೋಪಿ ಅಥವಾ ತೆಳುವಾದ…
ದಕ್ಷಿಣ ಭಾರತ ಕಂಡ ಅದ್ಭುತ ನಟಿಮಣಿಯರಲ್ಲಿ ತ್ರಿಷಾ ಕೃಷ್ಣನ್ ಕೂಡ ಒಬ್ಬರು. ವಯಸ್ಸು 40 ಕಳೆದ್ರೂ ಸಿಂಗಲ್ ಆಗಿಯೇ ಉಳಿದಿರುವ ಪವರ್ ಬ್ಯೂಟಿ ಮದುವೆ ಬಗ್ಗೆ ಆಗಾಗಾ ಹೊಸ ವಿಷಯಗಳ ಕೇಳಿ ಬರುತ್ತಲೇ ಇರುತ್ತವೆ. ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿರುವ ತ್ರಿಷಾ ಕೃಷ್ಣನ್ ಸದ್ಯಲ್ಲದೇ ಉಂಗುರ ಬದಲಿಸಿಕೊಂಡ್ರಾ ಎಂಬ ಚರ್ಚೆ ಹುಟ್ಟುಹಾಕಿದೆ. ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಒಂದಲ್ಲ ಒಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಜೊತೆ ಕನೆಕ್ಟ್ ಆಗುತ್ತಾರೆ. ಅಂತೇಯೇ ನಟಿ ಪ್ರೀತಿ ಗೆದ್ದೆ ಗೆಲ್ಲುತ್ತದೆ ಎಂಬ ಕ್ಯಾಪ್ಟನ್ ಕೊಟ್ಟು ಸಾಂಪ್ರದಾಯಿಕ ಹಸಿರು ಸೀರೆಯನ್ನು ಉಟ್ಟು, ಆಕರ್ಷಕ ಉಂಗುರ ಮತ್ತು ಸೊಗಸಾದ ಪೆಂಡೆಂಟ್ ಧರಿಸಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ತ್ರಿಷಾ ಕೃಷ್ಣನ್ ಡೇಟಿಂಗ್ ವಿಚಾರವಾಗಿ ಸದಾ ಸುದ್ದಿಯಲ್ಲಿ ಇರುತ್ತಾರೆ. ಕೆಲ ವರ್ಷಗಳ ಹಿಂದೆ ಉದ್ಯಮಿ ಹಾಗೂ ನಿರ್ಮಾಪಕ ವರುಣ್ ಮಣಿಯನ್ ಜೊತೆ ತ್ರಿಷಾ ಉಂಗುರ ಬದಲಿಸಿಕೊಂಡಿದ್ದರು. ಆ ಬಳಿಕ…
ತುಮಕೂರು: ರಾಜೇಂದ್ರ ಹತ್ಯೆಗೆ ಸುಪಾರಿ ಪ್ರಕರಣದಲ್ಲಿ ಇದೀಗ ಸುಪಾರಿ ಸಂಚಿನ ಇಂಚಿಂಚು ಮಾಹಿತಿಯ ಆಡಿಯ್ ಲಭ್ಯವಾಗಿದೆ. ಇದೇ ಆಡಿಯೋದಿಂದ ರಾಜೇಂದ್ರ ಅವರಿಗೆ ಸುಪಾರಿ ಸಂಚು ಗೊತ್ತಾಗಿದ್ದು. ರಾಜೇಂದ್ರ ಅವರು ದೂರಿನಲ್ಲಿ ಉಲ್ಲೇಖಿಸಿ ಪೆನ್ ಡ್ರೈವ್ ನಲ್ಲಿ ನೀಡಿದ್ದ ಆಡಿಯೋ ಲಭ್ಯವಾಗಿದ್ದು, ಚರ್ಚಗೆ ಗ್ರಾಸವಾಗಿದೆ. ಈ ಆಡೀಯೋದಲ್ಲಿ ಮಹಿಳೆಯೊಬ್ಬಳು ರಾಜೇಂದ್ರ ಹತ್ಯೆಗೆ ಸುಪಾರಿ ಬಗ್ಗೆ ಆಡಿಯೋದಲ್ಲಿ ಇಂಚಿಂಚು ವಿವರಿಸಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಪುಷ್ಪ ಹಾಗೂ ರಾಕಿ ಎನ್ನುವವರ ನಡುವೆ ನಡೆದ ಸಂಭಾಷಣೆಯ ಆಡಿಯೋ ಇದಾಗಿದ್ದು, ಪ್ರಕರಣದ ಎ1 ಆರೋಪಿ ಸೋಮನ ಪ್ಲಾನ್ ಬಗ್ಗೆ ಇಂಚಿಂಚು ವಿವರಿಸಿದ್ದಾಳೆ. https://ainkannada.com/deal-for-70-lakhs-5-lakhs-advance-explosive-audio-secret-of-rajendras-attempted-murder-case/ ಪುಷ್ಪ ಎಂಬ ಮಹಿಳೆ ಆರೋಪಿ ಜೈಪುರ ಸೋಮನಿಗೆ ಪರಿಚಯಸ್ಥಳಾಗಿದ್ದು, ಆತ ರಾಜೇಂದ್ರರನ್ನ ಹತ್ಯೆ ಮಾಡಲು ಸುಪಾರಿ ಪಡೆದಿರೋದಾಗಿ ಪುಷ್ಪಾಳ ಬಳಿ ಹೇಳಿಕೊಂಡಿದ್ದನು. ಆ ಬಳಿಕ ಸೋಮನ ಜೊತೆಗಿದ್ದುಕೊಂಡೇ ಕೊಲೆ ಸಂಚಿನ ಮಾಹಿತಿ ಕಲೆಹಾಕಿದ್ದ ಪುಷ್ಪ, ಬಳಿಕ ಕೊಲೆ ಸಂಚಿನ ವಿಚಾರವನ್ನು ರಾಜೇಂದ್ರರಿಗೆ ತಿಳಿಸಿದ್ದಾಳೆ. ರಾಜೇಂದ್ರ ಗೆ ವಿಚಾರ ಮುಟ್ಟಿಸಲು ರಾಕಿ…
ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಮೃತದೇಹವನ್ನು ತುಂಡುತುಂಡು ಮಾಡಿ ಸೂಟ್ಕೇಸ್ನಲ್ಲಿಟ್ಟು ಪರಾರಿಯಾಗಿದ್ದ ಭಯಾನಕ ಘಟನೆ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಕೊಲೆ ಮಾಡಿ ಪಶ್ಚಾತ್ತಾಪದಲ್ಲಿದ್ದಾನೆ. ಪತ್ನಿ ಗೌರಿಯನ್ನು ಕೊಂದು ಸೂಟ್ಕೇಸ್ಗೆ ತುಂಬಿದ್ದ ಆರೋಪಿ ಟೆಕ್ಕಿ ರಾಕೇಶ್ ಮಹಾರಾಷ್ಟ್ರಕ್ಕೆ ಎಸ್ಕೇಪ್ ಆಗಿದ್ದ. ಶನಿವಾರ ರಾತ್ರಿಯೇ ಪೊಲೀಸರು ಆತನನ್ನ ಕೋರಮಂಗಲದ ಮ್ಯಾಜಿಸ್ಟ್ರೇಟ್ ನಿವಾಸದಲ್ಲಿ ಹಾಜರು ಪಡಿಸಿದ್ದಾರೆ. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ಏ. 1ರಂದು ಓಪನ್ ಕೋರ್ಟ್ನಲ್ಲಿ ಬಾಡಿ ವಾರಂಟ್ ಮೇಲೆ ಅರ್ಜಿ ಸಲ್ಲಿಸಿ ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. https://ainkannada.com/see-the-importance-history-and-method-of-celebrating-ramadan/ ಆರೋಪಿ ರಾಕೇಶ್, ಪತ್ನಿಯನ್ನು ಕೊಲೆ ಮಾಡಿ ಕಾರಿನಲ್ಲಿ ಮಹಾರಾಷ್ಟ್ರ ಕಡೆ ಹೊರಟಿದ್ದ. ಕರ್ನಾಟಕ-ಮಹಾರಾಷ್ಟ್ರ ಗಡಿಯ ಕಾಗಲ್ ಎಂಬಲ್ಲಿ ವಿಷ ಖರೀದಿಸಿದ್ದ. ಫಿನಾಯಿಲ್, ಜಿರಲೆ ಔಷಧಿಯನ್ನ ಖರೀದಿಸಿ ಮುಂದೆ ಶಿರವಾಲ್ಗೆ ಹೋಗುವ ದಾರಿಯಲ್ಲಿ ಖಂಬಟ್ಕಿ ಎಂಬಲ್ಲಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದ. ವಿಷ ಸೇವಿಸಿದ ಕೂಡಲೇ ಆರೋಗ್ಯದಲ್ಲಿ…
ಚಾಮರಾಜನಗರ : ರಾಮಸಮುದ್ರ ಗ್ರಾಮದಲ್ಲಿ ಇಂದು ಯುಗಾದಿ ಹಬ್ಬದ ಪ್ರಯುಕ್ತ ಮಂಟೇಸ್ವಾಮಿ ಕೊಂಡೋತ್ಸವವು ವಿಜೃಂಭಣೆಯಿಂದ ಜರುಗಿತು. ರಾಮಸಮುದ್ರದ ದುರ್ಗೀಗುಡಿ ಬೀದಿಯಲ್ಲಿರುವ ಮಂಟೇಸ್ವಾಮಿ ದೇವಾಲಯದ ಮುಂಭಾಗ ಸೋಮವಾರ ಮುಂಜಾನೆ 6 ಗಂಟೆಯಲ್ಲಿ ಕೊಂಡೋತ್ಸವ ನಡೆಯಿತು. https://ainkannada.com/equality-rath-yatra-equality-awareness-program-in-gadag/ ಯುಗಾದಿ ಹಬ್ಬದ ರಾತ್ರಿ ಭಾನುವಾರ ರಾತ್ರಿ 11 ಗಂಟೆಯಲ್ಲಿ ಮಂಟೇಸ್ವಾಮಿ ಒಕ್ಕಲಿನವರು ಸಂಗ್ರಹಿಸಿದ್ದ ಮರದ ಕಟ್ಟಿಗೆಗಳಿಗೆ ಪೂಜೆ ಸಲ್ಲಿಸಿ ಕೊಂಡಕ್ಕೆ ಸಿದ್ದತೆ ನಡೆಸಿ ಭಕ್ತಿಯಿಂದ ಪೂಜೆ ಸಲ್ಲಿಸಿ ಬೆಂಕಿ ಹಚ್ಚಿದರು. ಮುಂಜಾನೆಯವರಿಗೂ ಉರಿಯಿತು. ಬಳಿಕ ಮಂಟೇಸ್ವಾಮಿ ಗುಡ್ಡರು ಕೆಂಡಕ್ಕೆ ಸೋಮವಾರ ನಸುಕಿನ ಜಾವ ಭಕ್ತಿಭಾವದಿಂದ ಪೂಜೆ ಸಲ್ಲಿಸಿ ಮುಂಗಾರು ಮಳೆ ಉತ್ತಮವಾಗಿ ರೈತಾಪಿ ವರ್ಗಕ್ಕೆ ಒಳಿತಾಗಲಿ ಎಂದು ಹರಸಿ ಕೊಂಡೋತ್ಸವದಲ್ಲಿ ಪಾಲ್ಗೊಂಡರು. ಮಂಟೇಸ್ವಾಮಿ ಕೊಂಡೋತ್ಸವದಲ್ಲಿ ಗ್ರಾಮದ ನೂರಾರು ಭಕ್ತರು ಪಾಲ್ಗೊಂಡು ಭಕ್ತಿಯ ಪರಾಕಾಷ್ಠೆ ಮೆರೆದರು.
ಕೋಲಾರ : ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡುವೆ ಗಲಾಟೆ ನಡೆದಿದ್ದು, ಕಬ್ಬಿಣದ ಕಂಬಿಯಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ. ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಗಂಗಾ ಭೈರವೇಶ್ವರ ಬಾರ್ ನಲ್ಲಿ ಕುಡಿದ ಅಮಲಿನಲ್ಲಿದ್ದ ಸ್ನೇಹಿತರು ಲ್ಲಕ ಕಾರಣಕ್ಕೆ ಜಗಳವಾಡಿದ್ದಾರೆ. ಈ ವೇಳೆ ವ್ಯಕ್ತಿಯನ್ನು ಕಬ್ಬಿಣದ ಕಂಬಿಯಿಂದ ಚುಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. https://ainkannada.com/a-dispute-over-a-plate-a-man-was-attacked-by-his-friends-after-being-invited-home-for-dinner/ ಮೃತ ವ್ಯಕ್ತಿಯನ್ನು ಹೈದರಿ ನಗರದ ನಿವಾಸಿ (28) ವರ್ಷದ ಮದೀನ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ನೇತೃತ್ವದಲ್ಲಿ, ಹಿಂದುತ್ವದ ಆಧಾರದಲ್ಲಿ ಪಕ್ಷ ಕಟ್ಟುವ ಸಂಕಲ್ಪ ಮಾಡಿದ್ದೇವೆ. ಸಂಕಲ್ಪ ಸಾಕಾರ ಮಾಡಲು ವಿಜಯೇಂದ್ರ ನೇತೃತ್ವದಲ್ಲಿ ಕೆಲಸ ಮಾಡೋಣ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ಭವಿಷ್ಯ ನುಡಿದರು. https://ainkannada.com/see-the-importance-history-and-method-of-celebrating-ramadan/ 2023ರ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರದಲ್ಲಿ ನಾವು 7 ಜನ ಸೋತಿದ್ದೆವು. ಯತ್ನಾಳ್ ಅವರೊಬ್ಬರು ಗೆದ್ದಿದ್ದರು. ಎಂಪಿ ಚುನಾವಣೆಗೆ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಮಾಡಿದ್ದೆವು. ಯತ್ನಾಳ್ ಆ ಸಭೆಗೆ ಬಂದಿರಲಿಲ್ಲ. ಸೋತವರು ಚುನಾವಣೆ ಗೆಲ್ಲಿಸುತ್ತೇವೆ ಅಂತ ಹೇಳಿದ್ದೆವು ಅದರಂತೆ ಗೆದ್ದೆವು. ವಿಜಯಪುರದಲ್ಲಿ ಲೀಡ್ ಕೊಟ್ಟು, ಹಿಂದೂ ಹುಲಿ ಕ್ಷೇತ್ರದಲ್ಲಿ 10 ಸಾವಿರ ಲೀಡ್ ಕಾಂಗ್ರೆಸ್ಗೆ ಹೋಯಿತು. ಯತ್ನಾಳ್ ಹುಲಿನೂ ಅಲ್ಲ, ಇಲಿನೂ ಅಲ್ಲ. ಈಗ ಅದು ಬಿಲ ಸೇರಿಕೊಂಡಿದೆ ಎಂದು ಕಿಡಿಕಾರಿದರು.