ಬೆಂಗಳೂರು: ಶಾಲಾ ಕಾಲೇಜುಗಳಿಗೆ ಈಗಾಗಲೇ ದಾಖಲಾತಿ ಶುರುವಾಗಿವೆ. ಮಕ್ಕಳಿಗೆ ದಾಖಲಾತಿ ಕೊಡಿಸಲು ಪೋಷಕರು ಹಗಲಿರುಳು ಪರದಾಡುತ್ತಿದ್ದಾರೆ. ಆದ್ರೆ 1ನೇ ತರಗತಿಗೆ ಮಕ್ಕಳನ್ನ ದಾಖಲಾತಿ ಮಾಡಿಸೋಕೆ 6 ವರ್ಷ ಕಡ್ಡಾಯ ಅನ್ನೋ ರೂಲ್ಸ್ ಪೋಷಕರಿಗೆ ಹೊಸ ಟೆನ್ಸನ್ಸ್ ತಂದಿಟ್ಟಿದೆ. ಇನ್ನೂ ಈ ವಿಚಾರವಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ನಗರದಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಮಾಡಿದ ತಪ್ಪಿನಿಂದ ಈ ಗೊಂದಲ ಉಂಟಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಅವರು ಮಾರ್ಗಸೂಚಿಗಳನ್ನು ರೂಪಿಸಿದ್ದರು. ಆದರೆ ನಾವು ಅದನ್ನು ವಿರೋಧಿಸುತ್ತೇವೆ. ಹಾಗಾಗಿ ಈ ವಿಷಯವನ್ನು ಪರಿಶೀಲಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಕಳುಹಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಎಸ್ಇಪಿ ಆಯೋಗದಿಂದ ಮಾರ್ಗಸೂಚಿಗಳನ್ನು ಪಡೆದ ಕೂಡಲೇ ಅದನ್ನು ಜಾರಿಗೆ ತರುವುದಾಗಿ ಅವರು ಹೇಳಿದ್ದಾರೆ.
Author: Author AIN
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ಆಡಿದ 2 ಪಂದ್ಯಗಳಲ್ಲೂ ಸೋತಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 196 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 160 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮುಂಬೈ ಪಡೆ 36 ರನ್ಗಳಿಂದ ಸೋಲೊಪ್ಪಿಕೊಂಡಿತು. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ…
ಹುಬ್ಬಳ್ಳಿ : ಹಿಂದುಗಳ ಹೊಸ ವರ್ಷ ಯುಗಾದಿಯ ಸಂಭ್ರಮ ಎಲ್ಲಡೆ ಕಳೆಗಟ್ಟಿದ್ದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಯುಗಾದಿ ಹಬ್ಬದ ಸಡಗರ ಮನೆ ಮಾಡಿದೆ. ಯುಗಾದಿ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ನಗರದ ಪ್ರಮುಖ ದೇವಾಲಯಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಇಲ್ಲಿನ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದೆ. ಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ಪ್ರತೀತಿ ಹಾಗೂ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆದರು. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ ದೇವಸ್ಥಾನವಾಗಿದ್ದು, ಚತುರ್ಮುಖ ಶಿವಲಿಂಗ ಇಲ್ಲಿನ ವಿಶೇಷವಾಗಿದೆ. ಹುಬ್ಬಳ್ಳಿ ಧಾರವಾಡ ಕೇವಲ ಅಷ್ಟೇ ಅಲ್ಲಾ ಕರ್ನಾಟಕ,ತಮಿಳುನಾಡು ಸೇರಿದಂತೆ ನೆರೆಯ ಮಹಾರಾಷ್ಟ್ರ ಗೋವಾ ರಾಜ್ಯದಿಂದಲೂ…
ರಿಷಬ್ ಶೆಟ್ಟಿ ನಟಿಸಿದ ಕಾಂತಾರ ಚಿತ್ರ ಎಷ್ಟು ದೊಡ್ಡ ಹಿಟ್ ಆಯ್ತು ಅಂತ ಹೇಳಬೇಕಾಗಿಲ್ಲ. ಕನ್ನಡದಲ್ಲಿ ಕಡಿಮೆ ಬಜೆಟ್ನಲ್ಲಿ ನಿರ್ಮಿಸಲಾದ ಈ ಚಿತ್ರವು ಅದ್ಭುತ ಯಶಸ್ಸನ್ನು ಕಂಡಿತು. ಕಾಂತಾರ ಚಿತ್ರ ತೆಲುಗಿನಲ್ಲೂ ಉತ್ತಮ ಯಶಸ್ಸನ್ನು ಕಂಡಿತು. ಈಗ, ‘ಕಾಂತಾರ ಅಧ್ಯಾಯ 1’ ಚಿತ್ರವು ಕಾಂತಾರ ಚಿತ್ರದ ಪೂರ್ವಭಾವಿಯಾಗಿ ಬರುತ್ತಿದೆ. ರಿಷಬ್ ಶೆಟ್ಟಿ ಆ ಕೆಲಸಗಳಲ್ಲಿ ನಿರತರಾಗಿದ್ದಾರೆ. ಚಿತ್ರದ ಇಡೀ ಕಥೆ ಕದಂಬ ಯುಗದಲ್ಲಿ ನಡೆದಂತೆ ತೋರುತ್ತದೆ. ಈಗ ಕಾಂತಾರ ಚಿತ್ರದಲ್ಲಿ ಒಬ್ಬ ಸ್ಟಾರ್ ಹೀರೋ ಆ ಪಾತ್ರವನ್ನು ನಿರ್ವಹಿಸುತ್ತಿರುವಂತೆ ಕಾಣುತ್ತಿದೆ. ಕಾಂತಾರ ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆಯಾಯಿತು ಮತ್ತು ನಂತರ ಇತರ ಭಾಷೆಗಳಲ್ಲಿ ಬಿಡುಗಡೆಯಾಯಿತು. ಈಗ ಕಾಂತಾರ ಅಧ್ಯಾಯ 1 ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾಗಲಿದೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಏತನ್ಮಧ್ಯೆ, ಮಲಯಾಳಂನ ಸ್ಟಾರ್ ಹೀರೋ ಮೋಹನ್ ಲಾಲ್ ‘ಕಾಂತಾರ: ಅಧ್ಯಾಯ 1’ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳು ಈಗ ಹರಿದಾಡುತ್ತಿವೆ. ರಿಷಭ್ ತಂದೆಯ ಪಾತ್ರದಲ್ಲಿ ಮೋಹನ್ ಲಾಲ್ ನಟಿಸುತ್ತಿರುವ ಬಗ್ಗೆ ಸಾಕಷ್ಟು ಪ್ರಚಾರ…
ಬೆಂಗಳೂರಲ್ಲಿ ಪದೇ ಪದೇ ಈ ರೀತಿಯ ಕೊಲೆಗಳು ನಡೆಯುತ್ತಿದ್ದು, ಭಯಾನಕ ಘಟನೆಗೆ ಬೆಂಗಳೂರು ಜನರು ಬೆಚ್ಚಿಬಿದ್ದಿದ್ದಾರೆ. ಇದೀಗ ಮೊನ್ನೆಯಷ್ಟೆ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಮೃತದೇಹವನ್ನು ತುಂಡುತುಂಡು ಮಾಡಿ ಸೂಟ್ಕೇಸ್ನಲ್ಲಿಟ್ಟು ಪರಾರಿಯಾಗಿದ್ದ ಭಯಾನಕ ಘಟನೆ ಸದ್ಯ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧೀಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿನ್ನೆ ರಾತ್ರಿ ಆರೋಪಿಯನ್ನು ಬೆಂಗಳೂರಿಗೆ ಕರೆತಂದಿದ್ದ ಪೊಲೀಸರು ಇಂದು ಕೋರಮಂಗಲ ಎನ್ಜಿವಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದರು. ಬಳಿಕ ರಾಕೇಶ್ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಸದ್ಯ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ಪತ್ನಿಯನ್ನು (ಗೌರಿ ಅನಿಲ್ ಸಾಂಬೆಕರ್) ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿದ ಬಳಿಕ ಆರೋಪಿ ರಾಕೇಶ್ ಮಹಾರಾಷ್ಟ್ರಕ್ಕೆ ತೆರಳಿದ್ದ. ಗುರುವಾರ ಆತ ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಸಮೀಪದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ. ನಂತರ…
ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್ಎಸ್ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಆರ್ಎಸ್ ಸಂಸ್ಥಾಪಕ ಡಾ. ಕೇಶವ್ ಬಲಿರಾಮ್ ಹೆಗ್ಡೆವಾರ್ಗೆ ಪುಷ್ಪನಮನ ಸಲ್ಲಿಸಿದ್ದಾರೆ. ಆರ್ಎಸ್ಎಸ್ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರೇಶಿಮ್ ಭಾಗ್ನಲ್ಲಿರುವ ಸ್ಮೃತಿ ಮಂದಿರಕ್ಕೆ ಮೋದಿ ಭೇಟಿ ನೀಡಿ ಆರ್ಎಸ್ಎಸ್ ಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ಹಾಗೂ ಎರಡನೇ ಸರಸಂಘ ಸಂಚಾಲಕ ಎಂ.ಎಸ್ ಗೋಲ್ವಾಲ್ಕರ್ ಅವರ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದರು. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಕೇಶವ್ ಬಲಿರಾಮ್ ಹೆಡಗೇವಾರ್ ಮತ್ತು ಗೋಲ್ವಾಲ್ಕರ್ ಸ್ಮಾರಕಗಳಿಗೆ ಗೌರವ ಸಲ್ಲಿಸಿದ ಬಳಿಕ ಮೋದಿ ಅವರು ಸಂದರ್ಶಕರ ಪುಸ್ತಕದಲ್ಲಿ ಹಿಂದಿಯಲ್ಲಿ ಸಂದೇಶ ಬರೆದರು. ಆರ್ಎಸ್ಎಸ್ನ ಎರಡು ಬಲವಾದ ಸ್ತಂಭಗಳ ಸ್ಮಾರಕವು ರಾಷ್ಟ್ರದ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡ ಲಕ್ಷಾಂತರ ಸ್ವಯಂಸೇವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದು…
ಬಾಗಲಕೋಟೆ: ನೀರಿನ ಸಮಸ್ಯೆ ವಿರುದ್ಧ ರೊಚ್ಚಿಗೆದ್ದ ಇಲಕಲ್ ನಗರದ ಜನ್ರಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಇಲಕಲ್ ನಗರದಲ್ಲಿ ಪ್ರೀ ಅಕ್ಕಿ ಬೇಡ, ನೀರು ಬೇಕು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ನಗರದ ವಾಲ್ಮೀಕಿ ಸರ್ಕಲ್ ನಲ್ಲಿ ಖಾಲಿ ಕೊಡಗಳನ್ನ ಹಿಡಿದು ನಗರಸಭೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲಹೊತ್ತು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ರಸ್ತೆಯಲ್ಲಿ ಕುಳಿತು ಅಧಿಕಾರಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ಸಮಸ್ಯೆ ಅಧಿಕಾರಿಗಳ ಗಮನಕ್ಕಿದ್ರೂ,ಸಮಸ್ಯೆ ಪರಿಹರಿಸಿದ ಅಧಿಕಾರಿಗಳು. ಬಡವರಿಗೆ ಪ್ರೀ ಅನ್ನ ಭಾಗ್ಯ ಬೇಡ, ಕುಡಿಯುವ ನೀರು ಪುರೈಸಿ ಎಂದು ಪ್ರತಿಭಟನೆ ನಡೆಸಲಾಯಿತು.
ವಿಜಯಪುರ: ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ತಮ್ಮನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಬಗ್ಗೆ ಮಾತನಾಡಿದ್ದಾರೆ. ವಿಜಯೇಂದ್ರ ಒಬ್ಬ ಮಹಾ ಭ್ರಷ್ಟ. ಇವನನ್ನು ನಮ್ಮ ಮೇಲೆ ಏಕೆ ಹೇರುತ್ತಿರಿ? ಇವನಿಂದಾಗಿ ಬಿಎಸ್ವೈ ಜೈಲಿಗೆ ಹೋಗಬೇಕಾಯಿತು. ನಕಲಿ ಸಹಿ ಮಾಡಿದ ಆರೋಪ ವಿಜಯೇಂದ್ರ ಮೇಲೆ ಇದೆ. 40% ಸೇರಿದಂತೆ ಸಾಕಷ್ಟು ಹಗರಣಗಳಲ್ಲಿ ವಿಜಯೇಂದ್ರ ಹೆಸರಿದೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಹೀಗೆ ಹಗರಣ ಮಾಡಿರುವ ಒಂದು ಕುಟುಂಬವನ್ನ ಪಕ್ಷದಲ್ಲಿ ಮುಂದುವರೆಸುದಾದರೆ ಹಿಂದುತ್ವವಾದಿಗಳು ಹಿಂದೂ ಜನತೆ ಒಂದು ನಿರ್ಣಯ ಕೈಗೊಳ್ಳಬೇಕಾಗುತ್ತೆ. ಆ ಬಗ್ಗೆ ಇಂದಿನಿಂದಲೇ ಆ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸುತ್ತೇವೆ ಎಂದು ಹೇಳಿದರು. ಜನರ ಅಭಿಪ್ರಾಯ ಸಂಗ್ರಹಿಸಿ ಒಂದು ಹಿಂದೂ ಪಕ್ಷ ಆಸ್ತಿತ್ವ ತರಬೇಕಾಗುತ್ತೆ. ಬಹಳಷ್ಟು ಜನರು ಬಿಜೆಪಿಯಿಂದ ಹಿಂದೂ ರಕ್ಷಣೆ ಮಾಡುತ್ತಿಲ್ಲವೆಂದು ಆಳಲು ತೋಡಿಕೊಂಡಿದ್ದಾರೆ. ಹಲವು ಹಿಂದೂ ಕಾರ್ಯಕರ್ತರು ಸಾವನಪ್ಪಿದ್ದರು ಎನ್ಕೌಂಟರ್ ಮಾಡುವಂತಹ ದಿಟ್ಟ…
ರೋಶ್ನಿ ಅವರ ತಂದೆ ಶಿವ ನಾಡರ್ ಅವರು HCL ಟೆಕ್ನಾಲಜೀಸ್ನಲ್ಲಿ 47 ಪ್ರತಿಶತ ಪಾಲನ್ನು ನೀಡಿದ ನಂತರ ಅವರು ಭಾರತದ ಅತ್ಯಂತ ಶಕ್ತಿಶಾಲಿ ಬಿಲಿಯನೇರ್ಗಳಲ್ಲಿ ಒಬ್ಬರಾದರು. ೨೦೨೫ ರ ವೇಳೆಗೆ ಅವರು ಭಾರತದ ಮೂರನೇ ಶ್ರೀಮಂತ ವ್ಯಕ್ತಿಯಾಗುವ ನಿರೀಕ್ಷೆಯಿದೆ. ರೋಶ್ನಿ ನಾಡರ್ ಅವರು ೪೮ ಬಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಪ್ರಮುಖ ಜಾಗತಿಕ ತಂತ್ರಜ್ಞಾನ ಕಂಪನಿಯಾದ ಎಚ್ಸಿಎಲ್ ಟೆಕ್ನಾಲಜೀಸ್ನ ಅಧ್ಯಕ್ಷೆ. ಅವರು ನಿಗಮದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಮಂಡಳಿ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ. ರೋಶ್ನಿ ನಾಡರ್ ಅವರು ವಾಯುವ್ಯ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ಅವರು ಕೆಲ್ಲಾಗ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ನಿಂದ ಎಂಬಿಎ ಪದವಿ ಪಡೆದರು. ಆದರೆ ಅವಳು ತನ್ನ ದಾನಧರ್ಮದಲ್ಲಿಯೂ ತನ್ನ ಒಳ್ಳೆಯ ಸ್ವಭಾವವನ್ನು ತೋರಿಸಿದಳು. ಅವರ ಪ್ರಯತ್ನಗಳನ್ನು ಗುರುತಿಸಿ 2023 ರಲ್ಲಿ ಅವರಿಗೆ ಶಾಫ್ನರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಅವರು ಶಿವ ನಾಡರ್ ಪ್ರತಿಷ್ಠಾನದ ಟ್ರಸ್ಟಿಯಾಗಿದ್ದಾರೆ. ಇದು ನಾಯಕತ್ವ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ $1.2…
‘ದಿ ಫ್ಯಾಮಿಲಿ ಮ್ಯಾನ್ ಸೀಸನ್ 1 ಮತ್ತು 2 ಸೂಪರ್ ಹಿಟ್ ಆಗಿದ್ದವು. ವಿಶೇಷವಾಗಿ ಸಮಂತಾ ನಟಿಸಿದ ಸೀಸನ್ 2 ಬ್ಲಾಕ್ಬಸ್ಟರ್ ಪ್ರತಿಕ್ರಿಯೆಯನ್ನು ಪಡೆಯಿತು. ಸ್ವಾಭಾವಿಕವಾಗಿಯೇ, ಚಲನಚಿತ್ರ ಅಭಿಮಾನಿಗಳು ಮೂರನೇ ಸೀಸನ್ಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ವೆಬ್ ಸರಣಿಯ ಮೂರನೇ ಸೀಸನ್ ಒಟಿಟಿಯಲ್ಲಿ ಯಾವಾಗ ಬರುತ್ತದೆ? ಅವರು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಕೊನೆಗೂ, ಉತ್ತರ ಸಿಕ್ಕಿದೆ. ಈ ವೆಬ್ ಸರಣಿಯ ನಾಯಕ ನಟ ಮನೋಜ್ ಬಾಜ್ಪೇಯಿ ಕಾರ್ಯಕ್ರಮವೊಂದರಲ್ಲಿ ಈ ಪ್ರಶ್ನೆಗೆ ಉತ್ತರಿಸಿದ್ದಾರೆ. ಈ ಸರಣಿಗಾಗಿ ನಾವು ಇನ್ನೂ ಕೆಲವು ತಿಂಗಳು ಕಾಯಬೇಕಾಗುತ್ತದೆ ಎಂದು ಹೇಳುವ ಮೂಲಕ ಅವರು ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದರು. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ‘ಫ್ಯಾಮಿಲಿ ಮ್ಯಾನ್ ಸೀಸನ್ 2’ ನಲ್ಲಿ ಸಮಂತಾ ಖಳನಾಯಕಿ ಪಾತ್ರದಲ್ಲಿ ನಟಿಸಿದ್ದರು. ಈ ಸೀಸನ್ ಪೂರ್ಣಗೊಳ್ಳುವ ಮೊದಲೇ ಮೂರನೇ ಸೀಸನ್ನ ಲಿಂಕ್ ಅನ್ನು ನೀಡಲಾಯಿತು. ಅಲ್ಲದೆ, ಮೂರನೇ ಸೀಸನ್ನಲ್ಲಿ, ಶತ್ರುಗಳು ಬಾಂಬ್ಗಳ ಮೂಲಕವಲ್ಲ, ವೈರಸ್ಗಳ ಮೂಲಕ ದಾಳಿ ಮಾಡುತ್ತಾರೆ ಎಂದು ತೋರಿಸಲಾಯಿತು. ಕಾಗಾ ಫ್ಯಾಮಿಲಿ ಮ್ಯಾನ್ ಸೀಸನ್ 3…