Author: Author AIN

ವಿಜಯಪುರ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದ ಪ್ರಸಿದ್ಧ ಸಿದ್ದೇಶ್ವರ ದೇವಸ್ಥಾನದಲ್ಲಿ ಯತ್ನಾಳ್ ಹಾಗೂ ಕುಟುಂಬ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪತ್ನಿ ಶೈಲಜಾ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಭಾಗಿಯಾಗಿದ್ದಾರೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಪೂಜೆ ಬಳಿಕ ಮಂಗಳಾರತಿ ಕಾರ್ಯಕ್ರಮ ಮುಗಿಸಿದ್ದಾರೆ. ನಂತರ ಇದೀಗ ಪ್ರತಿ ವರ್ಷ ಯುಗಾದಿ ಪಾಡ್ಯಾದಂದು ನಡೆಸುವ ಹೋಮ ಹವನ ಪೂಜೆ ಕಾರ್ಯಗಳಲ್ಲಿ ಭಾಗಿ ಆಗಿದ್ದಾರೆ. ಹೋಮ ಮುಗಿದ ನಂತರ ಸಿದ್ದೇಶ್ವರ ಸಂಸ್ಥೆಯಿಂದ ನಿರ್ಮಿಸಿರೋ ದಾಸೋಹ ನಿಲಯ ಹಾಗೂ ಕಟ್ಟಡ ಉದ್ಘಾಟನೆ ಪೂಜಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

Read More

ಬೆಂಗಳೂರು : ತನ್ನ ಬ್ಯಾಗ್‌ನಲ್ಲಿ ಸ್ಫೋಟಕ ವಸ್ತು ಇರಿಸಿಕೊಂಡಿದ್ದ ಆರೋಪದ ಮೇರೆಗೆ ಹೋಟೆಲ್‌ನ ಕೆಲಸಗಾರನೊಬ್ಬನನ್ನು ಪೊಲೀಸರು ಬಂಧಿಸಿದ್ದರು, ಆರೋಪಿಯಿಂದ ಜಪ್ತಿ ಮಾಡಲಾದ ಕೆಂಪು ಬಣ್ಣದ ಬಾಲ್‌ ಆಕಾರದ ಸ್ಫೋಟಕ ವಸ್ತುವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕಳೆದ ಒಂದು ವಾರದಿಂದಲೂ ಕೇಂದ್ರ ತನಿಖಾ ತಂಡಗಳಿಂದ ಅಬ್ದುಲ್ ರೆಹಮಾನ್ ವಿಚಾರಣೆ ನಡೆದಿದ್ದು, ಅರಮನೆ ಮೈದಾನದ ಬಳಿಯೇ ಅಲ್ಲೇ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಇರುತ್ತಿದ್ದ ಆರೋಪಿ ಅಬ್ದುಲ್​​ಗೆ ಪ್ಯಾಲೇಸ್ ಗ್ರೌಂಡ್​ನಲ್ಲಿ ಅನಾಮಿಕ ವ್ಯಕ್ತಿ ಸ್ಫೋಟಕ ಕೊಟ್ಟಿದ್ದು, ಸಿಗರೇಟ್​ ಶಾಪ್​ ಬಳಿ ಸ್ಫೋಟಕ ಇಡಲು ಹೇಳಿದ್ದಾಗಿ ಬಾಯ್ಬಿಟ್ಟಿದ್ದಾನೆ. ಒಂದೊಂದು ಬಾರಿ ಒಂದೊಂದು ಹೆಸರು ಹೇಳುತ್ತಿರುವ ಆರೋಪಿ, ಒಟ್ಟು ಮೂರು ಹೆಸರುಗಳನ್ನು ಹೇಳಿದ್ದಾನೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ರಾಜಣ್ಣ ಎಂಬಾತನೇ ಅರಮನೆ ಮೈದಾನದಿಂದ ಆಟೋದಲ್ಲಿ ಥಣಿಸಂದ್ರದ ಹೋಟೆಲ್​ಗೆ ಹೋಗಿದ್ದಾಗಿ ಅಬ್ದುಲ್ ಮಾಹಿತಿ ನೀಡಿದ್ದು, ಆಟೋ ಚಾಲಕನನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ. ಆರೋಪಿ ಬಗ್ಗೆ ನಮಗೇನೂ ಗೊತ್ತಿಲ್ಲ ಎಂದು ಇಬ್ಬರು ಹೇಳಿದ್ದಾರೆ. ಸದ್ಯ ಅಬ್ದುಲ್ ರೆಹಮಾನ್ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಚುರುಕು…

Read More

ಬೀದರ್: ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಬೀದರ್ ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಕೂಡ ಸದಸ್ಯತ್ವ ನೋಂದಣಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕರೆ ನೀಡಿದರು. ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಪಕ್ಷದ ಪ್ರಮುಖರೊಂದಿಗೆ ಬೀದರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಸಭೆ ನಡೆಸಿ ಮಾತನಾಡಿದ ಅವರು, ಪಕ್ಷದ ಮುಖಂಡರು, ಕಾರ್ಯಕರ್ತರೆಲ್ಲರೂ ಸೇರಿ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದರು. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ನಾವು ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗಳಿಗೆ ತೆರಳಿ ಸದಸ್ಯತ್ವ ನೋಂದಣಿ ಮಾಡಿಸುವ ಕೆಲಸ ಮಾಡಬೇಕಾಗಿದೆ. ಹಳ್ಳಿಗಳಲ್ಲಿ ನಮ್ಮ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಮಹತ್ವವಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳು ಶೀಘ್ರವಾಗಿ ಬರಲಿವೆ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಸದಸ್ಯತ್ವ ನೋಂದಣಿ ವಿಷಯದಲ್ಲಿ…

Read More

ಗದಗ: ಬೆಂಕಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋದ ಘಟನೆ ಗದಗ ನಗರದ ಜವಳ ಗಲ್ಲಿ ಪ್ರದೇಶದಲ್ಲಿರುವ ಬಟ್ಟೆ ಅಂಗಡಿ ಹಾಗೂ ಎಲೆಕ್ಟ್ರಾನಿಕ್ ಗೋದಾಮಿನಲ್ಲಿ ನಡೆದಿದೆ. ಘಟನೆ ಪರಿಣಾಮ ಫ್ರಿಜ್, ವಾಶಿಂಗ್ ಮಶಿನ್, ಸ್ಪೀಕರ್ ಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ. ಶಾರ್ಟ್ ಸಕ್ಯೂ೯ಟ್ ನಿಂದ ಬೆಂಕಿ ಹೊತ್ತಿ ಕೊಂಡಿರುವ ಶಂಕೆ ವ್ಯಕ್ತವಾಗಿದೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಉಮೇದಮಲ್ಲ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಗುಜರಾತ್ ಟೈಟಾನ್ಸ್ ಪ್ರಸಕ್ತ ಐಪಿಎಲ್ ಋತುವಿನಲ್ಲಿ ಮೊದಲ ಗೆಲುವು ಸಾಧಿಸಿದರೆ, ಮುಂಬೈ ಇಂಡಿಯನ್ಸ್ ಸತತ ಎರಡನೇ ಪಂದ್ಯದಲ್ಲಿ ಸೋತಿದೆ. ಅಹಮದಾಬಾದ್‌ನಲ್ಲಿ ನಡೆದ 9ನೇ ಪಂದ್ಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಗಿಲ್ ನೇತೃತ್ವದ ಗುಜರಾತ್ ತಂಡವು ಹಾರ್ದಿಕ್ ಪಾಂಡ್ಯ ತಂಡವನ್ನು 36 ರನ್‌ಗಳಿಂದ ಸೋಲಿಸಿತು. ಅಹಮದಾಬಾದ್‌ನಲ್ಲಿ ನಡೆದ ಸತತ ನಾಲ್ಕನೇ ಪಂದ್ಯದಲ್ಲಿ ಗುಜರಾತ್ ಮುಂಬೈ ತಂಡವನ್ನು ಸೋಲಿಸಿತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಮುಂಬೈ ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಗುಜರಾತ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು. ನಂತರ ಬ್ಯಾಟಿಂಗ್ ಗೆ ಇಳಿದ ಮುಂಬೈ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಲಷ್ಟೇ ಶಕ್ತವಾಯಿತು. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಗುಜರಾತ್ ಟೈಟಾನ್ಸ್ ಪರ ಸಾಯಿ ಸುದರ್ಶನ್ 41 ಎಸೆತಗಳಲ್ಲಿ 63 ರನ್ ಗಳಿಸಿದರು. ಅವರು 4 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು…

Read More

ಬೆಂಗಳೂರು: ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಏಪ್ರಿಲ್​ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ. https://ainkannada.com/today-is-the-celebration-of-the-festival-of-ugadi-dont-do-these-things-even-if-you-make-a-mistake/ ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ.ಬೆಂಗಳೂರಿನ ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,…

Read More

ಯುಗಾದಿ ಮರಳಿ ಮರಳಿ ಬರುತಿದೆ ಎಂಬಂತೆ ಇದೀಗ ಮತ್ತೆ ಮರಳಿ ಬಂದಿದೆ.  ಯುಗಾದಿ ಅಥವಾ ಯುಗದ ಆದಿಯು ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿದೆ, ಇದರರ್ಥ ಹೊಸ ಯುಗದ ಆರಂಭ. ಹಬ್ಬವು ವಸಂತ ಋತುವಿನ ಆರಂಭವನ್ನು ಸೂಚಿಸುತ್ತದೆ. ಇದನ್ನು ಭಾರತದಾದ್ಯಂತ ವಿವಿಧ ಹೆಸರುಗಳು, ಆಚರಣೆಗಳು, ನಂಬಿಕೆಗಳು ಮತ್ತು ಆಚರಣೆಗಳೊಂದಿಗೆ ಆಚರಿಸಲಾಗುತ್ತದೆ. ಇದನ್ನು ಕರ್ನಾಟಕದಲ್ಲಿ ಯುಗಾದಿ ಎಂದರೆ, ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ ಎಂದು ಆಚರಿಸಲಾಗುತ್ತದೆ. ಯುಗಾದಿ ಹಬ್ಬದ ದಿನ ಈ ಕೆಲಸ ಮಾಡಿ; ಹೊಸ ವರ್ಷದ ಮೊದಲ ದಿನದ ಬೆಳಿಗ್ಗೆ ಪೂಜೆಯನ್ನು ಮುಗಿಸಿ ಬಳಿಕ, ಇಡೀ ಮನೆಗೆ ಗಂಗಾ ಜಲ ಸಿಂಪಡಿಸಿ. ಇದಾದ ಬಳಿಕ ದುರ್ಗಾ ಮಾತೆಯನ್ನು ಧ್ಯಾನಿಸಿ. ಹೀಗೆ ಮಾಡುವುದರಿಂದ, ಮನೆಯಲ್ಲಿ ಸಂತೋಷ, ಸಮೃದ್ಧಿ ಯಾವಾಗಲೂ ಇರುತ್ತದೆ ಜೊತೆಗೆ ನಿಮ್ಮ ಇಡೀ ವರ್ಷ ಉತ್ತಮವಾಗಿರುತ್ತದೆ. ಹಬ್ಬದ ದಿನ ಬ್ರಹ್ಮ ಮುಹೂರ್ತದಲ್ಲಿ ಎದ್ದು ನಿತ್ಯಕ್ರಮಗಳನ್ನು ಪಾಲಿಸಿ. ದೇವರ ಬಳಿ ಹೂವು, ಧೂಪದ್ರವ್ಯ, ತುಪ್ಪದ ದೀಪ ಇತ್ಯಾದಿ ವಸ್ತುಗಳಿಂದ ದೇವರ ಮನೆಯನ್ನು ಸಿಂಗರಿಸಿ. ಮೊದಲು ಗಣೇಶನನ್ನು ಪೂಜಿಸಿ. ನಂತರ…

Read More

ದಕ್ಷಿಣ ಭಾರತದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ಇನ್ನಿತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಯುಗಾದಿ ಹಬ್ಬವನ್ನು ಹಲವೆಡೆ ಉಗಾದಿ ಎಂತಲೂ ಕರೆಯುತ್ತಾರೆ. ಈ ಹಬ್ಬವನ್ನು ಹಿಂದೂಗಳು ಚೈತ್ರ ಮಾಸದ ಮೊದಲ ದಿನದಂದು ಆಚರಿಸುತ್ತಾರೆ. ಈ ಹಬ್ಬವು ವಸಂತ ಕಾಲದ ಆಗಮನವನ್ನು ಸೂಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಹಳ ವಿಜೃಂಭಣೆಯಿಂದ ಯುಗಾದಿಯನ್ನು ಆಚರಿಸುತ್ತಾರೆ. ಯುಗ ಮತ್ತು ಆದಿ ಎನ್ನುವ ಎರಡು ಸಂಸ್ಕೃತ ಪದಗಳಿಂದ ರೂಪುಗೊಂಡ ಈ ಯುಗಾದಿಯು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಈ ವರ್ಷ ಯುಗಾದಿಯನ್ನು   ಏಪ್ರಿಲ್‌ 09 ರಂದು ಮಂಗಳವಾರ ಆಚರಿಸಲಾಗುವುದು. ಈ ದಿನದ ಶುಭ ಮುಹೂರ್ತ, ಮಹತ್ವ ಮತ್ತು ಪೂಜೆ ವಿಧಿ – ವಿಧಾನಗಳು ಹೀಗಿವೆ.. ಹಿಂದೂ ಪುರಾಣಗಳ ಪ್ರಕಾರ, ಈ ದಿನ, ಬ್ರಹ್ಮ ದೇವನು ಬ್ರಹ್ಮಾಂಡದ ಸೃಷ್ಟಿಯನ್ನು ಪ್ರಾರಂಭಿಸಿದನು. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ ಮತ್ತು ಈ ದಿನದಂದು…

Read More

ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ “ಬ್ರ್ಯಾಟ್” ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹಾಗೂ ನಿರ್ದೇಶಕ ಶಶಾಂಕ್ ಅವರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ. ಆದರೆ ಶಶಾಂಕ್ ಅವರು ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ಈವರೆಗೂ ಮಾಡಿರದ ವಿಭಿನ್ನ ಕಥೆಯುಳ್ಳ ಚಿತ್ರ “ಬ್ರ್ಯಾಟ್”. ನನ್ನ ಪ್ರಕಾರ ಕನ್ನಡದಲ್ಲಿ ತೀರ ಅಪರೂಪವಾದ…

Read More

2025 ಹೀಗಷ್ಟೇ ಆರಂಭವಾದಂತಿದೆ. ಆದರೆ ಮೂರು ತಿಂಗಳು ಕಳೆದು ಹೋಗಿದ್ದೇ ಗೊತ್ತೇ ಆಗಿಲ್ಲ. ಈ ಮೂರು ತಿಂಗಳಲ್ಲಿ ಕನ್ನಡ ಚಿತ್ರರಂಗ ಒಂದೊಳ್ಳೆ ಸಕ್ಸಸ್‌ ಕಂಡಿಲ್ಲ. ಹೊಸಬರ ಚಿತ್ರಗಳು ಬಂದಿದ್ದು ಗೊತ್ತಾಗ್ತಿಲ್ಲ. ಹೋಗಿದ್ದು ಗೊತ್ತಾಗ್ತಿಲ್ಲ ಅನ್ನೋ ಸ್ಥಿತಿಯಲ್ಲಿದೆ ಸ್ಯಾಂಡಲ್‌ ವುಡ್. ಪುನೀತ್‌ ರಾಜ್‌ ಕುಮಾರ್‌ ಅವರ 50 ದಿನಕ್ಕೆ ಬಂದ ಅಪ್ಪು ಅಬ್ಬರ ಬಿಟ್ರೆ..ಮತ್ಯಾವಾ ಚಿತ್ರಗಳ ಸೌಂಡ್‌ ಗಾಂಧಿನಗರ ದಾಟುತ್ತಿಲ್ಲ ಅಂದ್ರೆ ತಪ್ಪಾಗಲಿಕ್ಕಿಲ್ಲ. ಫಸ್ಟ್‌ ಆಫ್‌ ನಲ್ಲಿ ಕನ್ನಡ ಚಿತ್ರರಂಗ ತೀರಾ ಸಪ್ಪೆಯಾದ್ರೂ ಸೆಕೆಂಡ್‌ ಆಫ್‌ ನಲ್ಲಿ ಅಬ್ಬರ ಜೋರಾಗಿದೆ. ಯಾಕಂದ್ರೆ 2025ರ  ಸೆಕೆಂಡ್‌ ಆಫ್‌ ನಲ್ಲಿ ಬಹುನಿರೀಕ್ಷಿತ ಸಿನಿಮಾಗಳು ಅಖಾಡಕ್ಕೆ ಇಳಿಯುತ್ತಿವೆ. ಆ ಪೈಕಿ ಮೊದಲ ಸ್ಥಾನದಲ್ಲಿರುವುದೇ ಕಾಂತಾರ ಪ್ರೀಕ್ವೆಲ್. ಅಕ್ಟೋಬರ್‌ ಗೆ ಕಾಂತಾರ ಪ್ರೀಕ್ವೆಲ್‌ ಡಿವೈನ್‌ ಹಿಟ್‌ ಕಂಡಿರುವ ಕಾಂತಾರ ಚಾಪ್ಟರ್‌ 2 ಸಿನಿಮಾದ ಪ್ರೀಕ್ವೆಲ್‌ ಕಣ್ತುಂಬಿಕೊಳ್ಳೋದಿಕ್ಕೆ ಪ್ಯಾನ್‌ ಇಂಡಿಯಾ ಪ್ರೇಕ್ಷಕ ಕಾತರದಿಂದ ಕಾಯುತ್ತಿದ್ದಾನೆ. ಕಾಡುಬೆಟ್ಟ ಶಿವ ಪ್ರೀಕ್ವೆಲ್‌ ಮೂಲಕ ಕದಂಬರ ಕಥೆಯನ್ನು ಹರವಿಡೋಲು ಹೊರಟ್ಟಿದ್ದು, ಅಕ್ಟೋಬರ್‌ 2ರಂದು ಗಾಂಧಿ…

Read More