Author: Author AIN

ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ “ಬ್ರ್ಯಾಟ್” ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹಾಗೂ ನಿರ್ದೇಶಕ ಶಶಾಂಕ್ ಅವರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ. ಆದರೆ ಶಶಾಂಕ್ ಅವರು ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ಈವರೆಗೂ ಮಾಡಿರದ ವಿಭಿನ್ನ ಕಥೆಯುಳ್ಳ ಚಿತ್ರ “ಬ್ರ್ಯಾಟ್”. ನನ್ನ ಪ್ರಕಾರ ಕನ್ನಡದಲ್ಲಿ ತೀರ ಅಪರೂಪವಾದ…

Read More

2025 ಹೀಗಷ್ಟೇ ಆರಂಭವಾದಂತಿದೆ. ಆದರೆ ಮೂರು ತಿಂಗಳು ಕಳೆದು ಹೋಗಿದ್ದೇ ಗೊತ್ತೇ ಆಗಿಲ್ಲ. ಈ ಮೂರು ತಿಂಗಳಲ್ಲಿ ಕನ್ನಡ ಚಿತ್ರರಂಗ ಒಂದೊಳ್ಳೆ ಸಕ್ಸಸ್‌ ಕಂಡಿಲ್ಲ. ಹೊಸಬರ ಚಿತ್ರಗಳು ಬಂದಿದ್ದು ಗೊತ್ತಾಗ್ತಿಲ್ಲ. ಹೋಗಿದ್ದು ಗೊತ್ತಾಗ್ತಿಲ್ಲ ಅನ್ನೋ ಸ್ಥಿತಿಯಲ್ಲಿದೆ ಸ್ಯಾಂಡಲ್‌ ವುಡ್. ಪುನೀತ್‌ ರಾಜ್‌ ಕುಮಾರ್‌ ಅವರ 50 ದಿನಕ್ಕೆ ಬಂದ ಅಪ್ಪು ಅಬ್ಬರ ಬಿಟ್ರೆ..ಮತ್ಯಾವಾ ಚಿತ್ರಗಳ ಸೌಂಡ್‌ ಗಾಂಧಿನಗರ ದಾಟುತ್ತಿಲ್ಲ ಅಂದ್ರೆ ತಪ್ಪಾಗಲಿಕ್ಕಿಲ್ಲ. ಫಸ್ಟ್‌ ಆಫ್‌ ನಲ್ಲಿ ಕನ್ನಡ ಚಿತ್ರರಂಗ ತೀರಾ ಸಪ್ಪೆಯಾದ್ರೂ ಸೆಕೆಂಡ್‌ ಆಫ್‌ ನಲ್ಲಿ ಅಬ್ಬರ ಜೋರಾಗಿದೆ. ಯಾಕಂದ್ರೆ 2025ರ  ಸೆಕೆಂಡ್‌ ಆಫ್‌ ನಲ್ಲಿ ಬಹುನಿರೀಕ್ಷಿತ ಸಿನಿಮಾಗಳು ಅಖಾಡಕ್ಕೆ ಇಳಿಯುತ್ತಿವೆ. ಆ ಪೈಕಿ ಮೊದಲ ಸ್ಥಾನದಲ್ಲಿರುವುದೇ ಕಾಂತಾರ ಪ್ರೀಕ್ವೆಲ್. ಅಕ್ಟೋಬರ್‌ ಗೆ ಕಾಂತಾರ ಪ್ರೀಕ್ವೆಲ್‌ ಡಿವೈನ್‌ ಹಿಟ್‌ ಕಂಡಿರುವ ಕಾಂತಾರ ಚಾಪ್ಟರ್‌ 2 ಸಿನಿಮಾದ ಪ್ರೀಕ್ವೆಲ್‌ ಕಣ್ತುಂಬಿಕೊಳ್ಳೋದಿಕ್ಕೆ ಪ್ಯಾನ್‌ ಇಂಡಿಯಾ ಪ್ರೇಕ್ಷಕ ಕಾತರದಿಂದ ಕಾಯುತ್ತಿದ್ದಾನೆ. ಕಾಡುಬೆಟ್ಟ ಶಿವ ಪ್ರೀಕ್ವೆಲ್‌ ಮೂಲಕ ಕದಂಬರ ಕಥೆಯನ್ನು ಹರವಿಡೋಲು ಹೊರಟ್ಟಿದ್ದು, ಅಕ್ಟೋಬರ್‌ 2ರಂದು ಗಾಂಧಿ…

Read More

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸಿದ ನಂತರ ಆರ್‌ಸಿಬಿಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಐಪಿಎಲ್‌ನ ಉದ್ಘಾಟನಾ ವರ್ಷದಲ್ಲಿ ಚೆಪಾಕ್‌ನಲ್ಲಿ ಸಿಎಸ್‌ಕೆ ತಂಡವನ್ನು ಸೋಲಿಸಿದ್ದ ಆರ್‌ಸಿಬಿ, ಇಷ್ಟು ವರ್ಷಗಳ ನಂತರ ಈಗ ಮತ್ತೆ ಚೆಪಾಕ್‌ನಲ್ಲಿ ಸಿಎಸ್‌ಕೆ ವಿರುದ್ಧ ಜಯ ಸಾಧಿಸಿದೆ. ಆದರೆ, ಈ ಪಂದ್ಯದಲ್ಲಿ ಧೋನಿ ತಡವಾಗಿ ಬಂದು ಬ್ಯಾಟಿಂಗ್ ಮಾಡಿದ್ದಕ್ಕಾಗಿ ಟೀಕೆಗೆ ಗುರಿಯಾಗುತ್ತಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಕೂಡ ಧೋನಿಯನ್ನು ಕೆಟ್ಟದಾಗಿ ಟ್ರೋಲ್ ಮಾಡಿದ್ದರು. “ಅವರು ತುಂಬಾ ಬೇಗ ಬ್ಯಾಟಿಂಗ್ ಮಾಡಲು ಬಂದರು” ಎಂದು ಹೇಳುವ ಮೂಲಕ ಅವರು ಧೋನಿಯನ್ನು ವ್ಯಂಗ್ಯವಾಡಿದರು. ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಧೋನಿ, 7 ವಿಕೆಟ್‌ಗಳನ್ನು ಕಳೆದುಕೊಂಡ ನಂತರ 9 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದಿರುವುದು ಒಳ್ಳೆಯದಲ್ಲ ಎಂದು ಭಾವಿಸಿದರು. ಕೊನೆಯ ಎರಡು ಓವರ್‌ಗಳಲ್ಲಿ ಸ್ವಾಭಾವಿಕವಾಗಿ ಬ್ಯಾಟಿಂಗ್ ಮಾಡಲು ಬರುವ ಧೋನಿ ಈ ಬಾರಿ ಸ್ವಲ್ಪ ಮುಂಚಿತವಾಗಿ ಬ್ಯಾಟಿಂಗ್ ಮಾಡಲು ಬಂದರು ಎಂದು…

Read More

ಉಡುಪಿ: ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅಪಹರಣ ನಡೆದಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಒಂದೆಡೆ ಮುಸ್ಲಿಂ ಸಮುದಾಯದ ಯುವಕನೋರ್ವನ ಯುವತಿಯ ಕರೆದೊಯ್ದಿದ್ದು ಮದುವೆಯಾಗಲು ನೋದಂಣಿ ಮಾಡಿಸಿದ್ದಾನೆ. ಇನ್ನೊಂದೆಡೆ ತನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ತಂದೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂಡುಬಿದಿರೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ತನ್ನ ಮಗಳು ತನ್ನ ಚಿಕ್ಕಮ್ಮನ ಮನೆಗೆ ನಡೆದು ಹೋಗುತ್ತಿದ್ದಾಗ ಅಕ್ರಮ್ ಮೊಹಮ್ಮದ್ ಎಂಬ ವ್ಯಕ್ತಿ ತನ್ನ ಸ್ಕೂಟರ್ ನಲ್ಲಿ ಆಕೆಯನ್ನು ಅಪಹರಿಸಿದ್ದಾನೆ ಎಂದು ಗಾಡ್ವಿನ್ ದೇವದಾಸ್ ಎಂಬುವವರು, ದೂರು ನೀಡಿದ್ದಾರೆ. ಕಳೆದ ಮಾ.20ರಂದು ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. https://www.youtube.com/watch?v=dashV_C7m1M ಇದಲ್ಲದೇ ದೇವದಾಸ್ ಅವರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದು, ತಮ್ಮ ಮಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಉಡುಪಿ ನಗರ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಶುಕ್ರವಾರ ಅರ್ಜಿಯ ವಿಚಾರಣೆ…

Read More

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಹೊಸ ಬೆಳವಣಿಗೆಯಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ಕೊಲ್ಕತ್ತಾ ಹೈಕೋರ್ಟ್‌ಗೆ ತಿಳಿಸಿದ್ದು, ವಿಧಿವಿಜ್ಞಾನ ವರದಿಯು ಯಾವುದೇ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಮತ್ತು ಒಬ್ಬ ವ್ಯಕ್ತಿ ಮಾತ್ರ ಘೋರ ಅಪರಾಧದಲ್ಲಿ ಭಾಗಿಯಾಗಿದ್ದಾನೆ ಎಂದು ಬಹಿರಂಗಪಡಿಸಿದೆ. https://ainkannada.com/do-this-to-get-the-blessings-of-goddess-lakshmi-dont-forget-to-light-lamps-in-these-4-places/ ಹೈಕೋರ್ಟ್ ಎರಡು ವಾರಗಳಲ್ಲಿ ಕೋಲ್ಕತ್ತಾ ಪೊಲೀಸರಿಂದ ಪೊಲೀಸ್ ದಾಖಲೆಗಳು ಮತ್ತು ಸಾಕ್ಷಿಗಳ ಪಟ್ಟಿಯನ್ನು ಕೋರಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 23 ಕ್ಕೆ ನಿಗದಿಪಡಿಸಲಾಗಿದೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆಗೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸರು ಆರಂಭದಲ್ಲಿ ಸಿದ್ಧಪಡಿಸಿದ ಪ್ರಕರಣದ ಡೈರಿಯನ್ನು ಸಲ್ಲಿಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶಿಸಿದೆ. ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರ ಏಕಸದಸ್ಯ ಪೀಠವು ಪ್ರಕರಣದಲ್ಲಿ ಸಂದರ್ಶಿಸಲಾದ ವ್ಯಕ್ತಿಗಳ ಪಟ್ಟಿಯನ್ನು ಪ್ರಸ್ತುತಪಡಿಸುವಂತೆ ಸಿಬಿಐಗೆ ಸೂಚನೆ ನೀಡಿದೆ. ಆಗಸ್ಟ್ 9, 2024 ರಂದು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ವೈದ್ಯರ ಶವ ಪತ್ತೆಯಾದ ಘಟನೆಯ ಕುರಿತು ನಡೆಯುತ್ತಿರುವ ತನಿಖೆಯ…

Read More

ದಾಂಡೇಲಿ: ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ ಶಾಸಕರಾದ ಆರ್.ವಿ.ದೇಶಪಾಂಡೆ ವಿರೋಧ ವ್ಯಕ್ತಪೆಡಿಸಿದ್ದಾರೆ.   ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. https://www.youtube.com/watch?v=dashV_C7m1M ಅಲ್ಲದೇ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

Read More

ಬೆಂಗಳೂರು: ನಾನು ಅಧ್ಯಕ್ಷನಾದ ಬಳಿಕ ಯತ್ನಾಳ್ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರ ಆಕ್ಷೇಪಾರ್ಹ ವರ್ತನೆ ಕುರಿತು ಕೇಂದ್ರದ ವರಿಷ್ಠರು ಹಲವಾರು ಬಾರಿ ನೋಟಿಸ್ ನೀಡಿದ್ದರು. ನಾನು ಅಧ್ಯಕ್ಷನಾದ ಬಳಿಕ ರವಿಕುಮಾರ್ ಮೂಲಕ ಯತ್ನಾಳ್ ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದೆ. ಆದರೆ ಯತ್ನಾಳ್ ಅವರನ್ನು ನಾನು ಸದನ ನಡೆಯುವಾಗ ಭೋಜನಕ್ಕೂ ಆಹ್ವಾನಿಸಿದ್ದೆ. ಏನೇ ಇದ್ದರೂ ಸರಿಪಡಿಸಿಕೊಳ್ಳೋಣ ಬನ್ನಿ ಎಂದಿದ್ದೆ‌ ಎಂದು ಹೇಳಿದರು. https://ainkannada.com/do-this-to-get-the-blessings-of-goddess-lakshmi-dont-forget-to-light-lamps-in-these-4-places/ ಯತ್ನಾಳ್ ಅವರನ್ನು ನಾನು ರಾಜಕೀಯದಲ್ಲಿ ಹೋಲಿಸಲಾಗದು ಎಂದು ಹೇಳಿದ ಬಿ ವೈ ವಿಜಯೇಂದ್ರ, ಯತ್ನಾಳ್‌ಗೆ ಹೋಲಿಸಿಕೊಂಡರೆ ನಾನು ರಾಜಕೀಯದಲ್ಲಿ ತುಂಬಾ ಚಿಕ್ಕವನು. ರಾಜ್ಯದ ಅಧ್ಯಕ್ಷನಾಗಿ ಎಲ್ಲರನ್ನೂ ಒಟ್ಟಾಗಿ ತಗೊಂಡು ಹೋಗುವ ಪ್ರಯತ್ನ ಮಾಡಿದ್ದೇನೆ. ನಾನು ಹಿಂದೊಂದು ಮುಂದೊಂದು ಮಾತಾಡುವ ವ್ಯಕ್ತಿ ಅಲ್ಲ. ನನ್ನ ಕಡೆಯಿಂದ ಎಲ್ಲವೂ ಸರಿಯಾಗಬೇಕೆಂದು ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ವಿಧಿಯಾಟನೋ ಏನೋ ಗೊತ್ತಿಲ್ಲ ಹೈಕಮಾಂಡ್ ನಾಯಕರು ಕೊನೆಗೆ ತೀರ್ಮಾನ ಮಾಡಿದ್ದಾರೆ…

Read More

ಬೀದರ್: ತಂಗಿಯ ಪ್ರೀತಿಸಿದ ಎಂಬ ಕಾರಣಕ್ಕೆ ಯುವಕನನ್ನೇ ಹತ್ಯೆಗೈದ ಘಟನೆ ನಡೆದಿದೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ.   25 ವರ್ಷದ ಪ್ರಶಾಂತ್‌ ಬಿರಾದರ್ ಬರ್ಬರವಾಗಿ ಕೊಲೆಯಾಗಿದ್ದಾನೆ. ಮೃತ ಯುವಕ ಮತ್ತು ಆರೋಪಿಗಳ ಸಹೋದರಿ ಪ್ರೀತಿ  ನಡುವೆ ಕೆಲ ವರ್ಷಗಳಿಂದ ಪ್ರೇಮಾಂಕುರವಾಗಿತ್ತು. ಇದೇ ವಿಚಾರಕ್ಕೆ ಶುಕ್ರವಾರ ರಾತ್ರಿ ನಿರಗುಡಿ ಗ್ರಾಮದಲ್ಲಿ ಮೃತ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಬರ್ಬರವಾಗಿ ಹತ್ಯೆಗೈದಿದ್ದಾರೆ. https://ainkannada.com/laborers-coming-to-town-for-the-ugadi-festival-are-stranded-in-masana/ ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿದ ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಎಂಬ ಇಬ್ಬರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Read More

ಬೆಂಗಳೂರು: ಯುಗಾದಿ ಪ್ರತಿವರ್ಷ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಹಬ್ಬದ ಸಮಯದಲ್ಲಿ ಮಾರುಕಟ್ಟೆ ಜನ ಜಂಗಳಿಯಿಂದ ಕೂಡಿರುತ್ತದೆ. ಖರೀದಿ ಭರಾಟೆ ಜೋರಾಗಿರುತ್ತದೆ. ಯುಗಾದಿ ಹಬ್ಬದ ಆಚರಣೆ ಹಿನ್ನೆಲೆ ನಾಡಿದಾದ್ಯಂತ ಖರೀದಿ ಬರದಿಂದ ಸಾಗುತ್ತಿದೆ. https://ainkannada.com/do-this-to-get-the-blessings-of-goddess-lakshmi-dont-forget-to-light-lamps-in-these-4-places/ ಹೂವು, ಹಣ್ಣು-ಹಂಪಲು, ತರಕಾರಿಯ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ, ಹಣ್ಣುಗಳ ದರ ಕೊಂಚ ದುಬಾರಿಯಾಗಿದ್ದು, ಹೂವುಗಳ ದರ ಗಗನ ಕುಸುಮವಾಗಿದೆ. ಇನ್ನು ತರಕಾರಿ ದರ ಯಥಾಸ್ಥಿತಿ ಇದೆ. ಬೆಲೆ ಏರಿಕೆಯಾದರೂ ಗ್ರಾಹಕರು ಬೇರೆ ವಿಧಿಯಿಲ್ಲದೆ ದುಬಾರಿ ಬೆಲೆ ತೆತ್ತು ಖರೀದಿಸುತ್ತಿದ್ದಾರೆ. ಯಾವ ಹೂವಿನ ಬೆಲೆ ಎಷ್ಟಿದೆ?  ಕನಕಾಂಬರ ಮಾರು 600ರೂ, ಸೇವಂತಿ ಮಾರು 300ರೂ, ಮಲ್ಲಿಗೆ ಹೂವಿನ ಒಂದು ದಿಂಡಿಗೆ 200ರೂ, ಮಾವಿನ ಎಲೆ, ಬೇವಿನ ಎಲೆ ಒಂದು ಕಟ್ಟು 25-30 ರೂಪಾಯಿ ಇದೆ. ಹಬ್ಬದ ಹಿನ್ನೆಲೆ ಹೂವು, ಹಣ್ಣಿನ ಬೆಲೆ ಡಬಲ್ ಆಗಿದೆ ಅಂತ ಗ್ರಾಹಕರು ಕಂಗಾಲು. ಫುಲ್​ ಜಾಮ್ ಜಾಮ್​ ಯುಗಾದಿ  ಮತ್ತು ರಂಜಾನ್​ ಹಬ್ಬ ಒಂದರ ಹಿಂದೆ ಒಂದು ಬಂದ ಹಿನ್ನೆಲೆಯಲ್ಲಿ…

Read More

ಕೋಲಾರ : ಕೋಲಾರದಲ್ಲಿಅರಣ್ಯ ಇಲಾಖೆಯ ಕಚೇರಿ ಎದುರು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಲಾಢ್ಯರು ಮತ್ತು ರಾಜಕೀಯ ವ್ಯಕ್ತಿಗಳು ಅತಿಕ್ರಮಿಸಿರುವ ಸಾವಿರಾರು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವಿನ ತಂಟೆಗೆ ಹೋಗದ ಅರಣ್ಯ ಇಲಾಖೆಯು ಬಡವರ ಬೆಳೆಗಳ ಮೇಲೆ ಜೆಸಿಬಿ ಹರಿಸಿ ಪ್ರತಾಪ‌ ತೋರಿಸುವುದು ಸರಿಯಲ್ಲ ಪ್ರತಿಭಟನೆ ನಡೆಸಿ ಉಪ ಅರಣ್ಯಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್ ಅವರಿಗೆ ಮನವಿ ಸಲ್ಲಿಸಲಾಯಿತು. https://ainkannada.com/action-should-be-taken-against-those-who-encroached-on-government-land-sr-hiremath-demands/ ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ, ಅರಣ್ಯ ಅಧಿಕಾರಿಗಳು ಅಮಾಯಕ ರೈತರು ಬೆಳೆಗಳ ಕಟಾವಿಗೂ ಅವಕಾಶ ನೀಡದೆ ಜೆಸಿಬಿಗಳನ್ನು ನುಗ್ಗಿಸುತ್ತಿರುವುದು ಸರಿಯಲ್ಲ. ರೈತರ ಮೇಲೆ ಪ್ರತಾಪ ತೋರಿಸುವ ಅರಣ್ಯಧಿಕಾರಿಗಳು ರಾಜಕೀಯ ಹಿನ್ನೆಲೆಯುಳ್ಳ ಬಲಾಡ್ಯರ ಬಳಿಗೂ ಸುಳಿಯದೇ ಇರುವುದು ಸರಿಯೇ ಕಾನೂನಿನಲ್ಲಿ ಬಡವರಿಗೆ ಒಂದು ನ್ಯಾಯ, ಶ್ರೀಮಂತರಿಗೆ ಪ್ರತ್ಯೇಕ ನ್ಯಾಯವಿದೆಯೇ ಎಂದು ಪ್ರಶ್ನಿಸಿದರು.

Read More