Author: Author AIN

ಕಲಬುರಗಿ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕೆಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಲ್ಲಾ ತಾಲೂಕಿನ ಪಿಡಿಓಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ `ಟಾಸ್ಕ್ ಪೋರ್ಸ್’ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಶರಣಪ್ರಕಾಶ್‌ ಪಾಟೀಲ್‌ , ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್‌ವೆಲ್‌ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್‌ವೆಲ್ ಕೊರೆಸಿ, ಇತರೆ ಬೋರ್‌ವೆಲ್‌ಗಳನ್ನು ಫ್ಲಶಿಂಗ್ ಮಾಡಿಸಿ ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದರು. https://ainkannada.com/former-mlc-nagaraj-chhabbi-unhappy-with-minister-lad/ ಪಿಡಿಓಗಳು ಗ್ರಾಮಗಳಿಗೆ ಭೇಟಿ ನೀಡಿ ಒಂದು ವಾರದಲ್ಲಿ ನನಗೆ ವರದಿ ಸಲ್ಲಿಸಬೇಕು. ಹೆಚ್ಚು ಬಿಸಿಲಿದೆ ಎಂದು ಮನೆಯಲ್ಲಿಯೇ ಕುಳಿತು ಮೊಬೈಲ್‌ನಲ್ಲಿ ವರದಿ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

Read More

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಇಂದು ಅಮವಾಸ್ಯೆಯ ಪ್ರಯುಕ್ತ ಅವರು ನಗರದ ಶನಿಮಹಾತ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದಾರೆ. https://ainkannada.com/do-this-to-get-the-blessings-of-goddess-lakshmi-dont-forget-to-light-lamps-in-these-4-places/ ಸದ್ಯ ನಿನ್ನೆ ಅವರು ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆಗೆ ಭೇಟಿ ನೀಡಿದ್ದರು. ಯತ್ನಾಳ್ ವಿರುದ್ಧ ಹೈಕಮಾಂಡ್ ತೆಗೆದುಕೊಂಡಿರುವ ಕ್ರಮದ ಬಗ್ಗೆ ಪುನರ್‌ ಪರಿಶೀಲನೆ ‌ಮಾಡುವಂತೆ ಪತ್ರದ ಮೂಲಕ ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

Read More

ಧಾರವಾಡ : ಸಚಿವ ಸಂತೋಷ್‌ ಲಾಡ್ ವಿರುದ್ಧ ಮಾಜಿ ಎಂಎಲ್‌ಸಿ ನಾಗರಾಜ ಛಬ್ಬಿ ಅಸಮಾಧಾನ ವ್ಯಕ್ತಪಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಣಮಟ್ಟದ ವಿದ್ಯುತ್ ಇಲ್ಲದೇ ಕ್ಷೇತ್ರದ ಜನರು ಸಂಕಷ್ಟದಲ್ಲಿದ್ದಾರೆ.  ಹೆಸ್ಕಾಂನವರು ಟಿಸಿ ಕೇಳಿದರೆ ಮೂರು ತಿಂಗಳು ಕಾಯುವ ಶಿಕ್ಷೆ ಕೊಡುತ್ತಾರೆ. ಇಂತಹ ಯಾವುದೇ ಸಮಸ್ಯೆಗಳು ಸಚಿವ ಸಂತೋಷ್ ಲಾಡ್ ಅವರಿಗೆ ಕಾಣುತ್ತಿಲ್ಲ. ಇತ್ತೀಚೆಗೆ ಅವರು ಕ್ಷೇತ್ರಕ್ಕೆ ಬರುವುದನ್ನೇ ಮರೆತಿದ್ದಾರೆ ಎಂದು ದೂರಿದರು. https://ainkannada.com/street-vendors-fight-over-shop-one-of-them-gets-cut-on-the-head/ ಪ್ರಧಾನಿ ಮೋದಿ ಅವರನ್ನು ಟೀಕಿಸಿದರೆ ದೊಡ್ಡವರಾಗುತ್ತೇವೆ ಎಂದು ಲಾಡ್ ತಿಳಿದಿದ್ದಾರೆ. ಆದರೆ ಅವರು ಕ್ಷೇತ್ರದಲ್ಲಿ ಒಂದೇ ಒಂದು ರಸ್ತೆ ಮಾಡಿಸಿಲ್ಲ. ಕಲಘಟಗಿಗೆ ಈ ಹಿಂದೆ ಮೂರು ಸಬ್ ಡಿವಿಜನ್‌ಗಳನ್ನು ಹಿಂದಿನ ಶಾಸಕ ನಿಂಬಣ್ಣವರ ಮಂಜೂರು ಮಾಡಿಸಿದ್ದರು. ಕಾಂಗ್ರೆಸ್‌ನವರು ಕ್ಷೇತ್ರದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದರು. ಕ್ಷೇತ್ರದ ಜನರ ಸಮಸ್ಯೆ ಬಗೆ ಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಛಬ್ಬಿ ಎಚ್ಚರಿಸಿದರು.

Read More

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ “ಠಾಣೆ” ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ “ಬಾಳಿನಲ್ಲಿ ಭರವಸೆಯ ಬೆಳಕು” ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಟ್ರೆಂಡಿಂಗ್ ನಲ್ಲಿದೆ.  ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡಿಗೆ ಕನ್ನಡ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ಅವರಿಗೂ ಸಹ ಈ ಹಾಡು ಅಚ್ಚುಮೆಚ್ಚಂತೆ. ಬಾಲ ಪ್ರತಿಭೆಗಳ ಗಾಯನದಲ್ಲಿ ಮೂಡಿಬಂದಿರುವ ಈ ಹಾಡನ್ನು ಮೆಚ್ಚಿಕೊಂಡ ನಾರಾಯಣ ಗೌಡ ಅವರು ಚಿತ್ರತಂಡದವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಅಭಿನಂದಿಸಿದರು. ಬಾಲ ಪ್ರತಿಭೆಗಳು ಹಾಡಿರುವ “ಠಾಣೆ” ಚಿತ್ರದ ಅರ್ಥಗರ್ಭಿತ ಈ ಹಾಡನ್ನು ನಾನು ದಿನಕ್ಕೆ ನಾಲ್ಕೈದು ಬಾರಿ ಕೇಳುತ್ತಲೇ ಇರುತ್ತೇನೆ. ಅಷ್ಟು ಇಷ್ಟವಾಗಿದೆ ನನಗೆ ಈ…

Read More

ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್‌ನಲ್ಲಿ ಶುಕ್ರವಾರ ಸಂಭವಿಸಿದ ಸರಣಿ ಭೂಕಂಪಗಳು ಸಾವುನೋವುಗಳಿಗೆ ಕಾರಣವಾಯಿತು. ನೂರಾರು ಕಟ್ಟಡಗಳು ಕುಸಿದವು. ಅವಶೇಷಗಳ ಕೆಳಗೆ ಜನರು ಪಕ್ಷಿಗಳಂತೆ ಪುಡಿಪುಡಿಯಾದರು. ಏತನ್ಮಧ್ಯೆ, ಶುಕ್ರವಾರ ರಾತ್ರಿ 11:56 ರ ಸುಮಾರಿಗೆ ಮ್ಯಾನ್ಮಾರ್‌ನಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಇನ್ನೂ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದ್ದು, 1,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವಶೇಷಗಳ ಅಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ. ರಸ್ತೆಗಳಲ್ಲೇ ಚಿಕಿತ್ಸೆ: ಮ್ಯಾನ್ಮಾರ್‌ನಲ್ಲಿ ಉಂಟಾದ ಭೀಕರ ಭೂಕಂಪ ಸಾಕಷ್ಟು ಸಾವು-ನೋವು ಉಂಟುಮಾಡಿದೆ. ಒಂದೆಡೆ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂ ನೂರಾರು ಮಂದಿ ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಮತ್ತೊಂದೆಡೆ ಜೀವ ಉಳಿಸಬೇಕಾದ ಆಸ್ಪತ್ರೆಗಳೇ ಕಣ್ಣೀರಿನ ಕಥೆ ಹೇಳುತ್ತಿವೆ. ಸಾವಿರಾರು ಹಾಸಿಗೆ ಸೌಲಭ್ಯ ಹೊಂದಿರುವ ಆಸ್ಪತ್ರೆಗಳು ನಾಮಾವಶೇಷವಾಗಿದ್ದು, ನೊಂದ ಸಂತ್ರಸ್ತರಿಗೆ ರಸ್ತೆಯಲ್ಲೇ ಚಿಕಿತ್ಸೆ…

Read More

2019 ರಲ್ಲಿ, ಕೇಂದ್ರ ಸರ್ಕಾರವು ರೈತರಿಗೆ ಸಹಾಯ ಮಾಡಲು PM-KISAN ಯೋಜನೆಯನ್ನು ಪ್ರಾರಂಭಿಸಿತು. ಆದರೆ, ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾದ ಈ ಯೋಜನೆಯ ಲಾಭವನ್ನು ಅನೇಕ ಅನರ್ಹ ಜನರು ಪಡೆದುಕೊಂಡಿದ್ದಾರೆ. ಆದಾಗ್ಯೂ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚೆಗೆ ಸಂಸತ್ತಿನಲ್ಲಿ ಮಾತನಾಡಿ, ಪಿಎಂ-ಕಿಸಾನ್ ಅಡಿಯಲ್ಲಿ ಸರ್ಕಾರ ಅನರ್ಹ ರೈತರಿಂದ 416 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಹೇಳಿದರು. ಈ ಯೋಜನೆ ಆರಂಭವಾದಾಗಿನಿಂದ ಕೇಂದ್ರ ಸರ್ಕಾರವು ರೂ.ಗೂ ಹೆಚ್ಚು ಹಣವನ್ನು ವಿತರಿಸಿದೆ ಎಂದು ಅವರು ಸ್ಪಷ್ಟಪಡಿಸಿದರು. ರೈತರಿಗೆ 19 ಕಂತುಗಳಲ್ಲಿ 3.68 ಲಕ್ಷ ಕೋಟಿ ರೂ. https://ainkannada.com/do-this-to-get-the-blessings-of-goddess-lakshmi-dont-forget-to-light-lamps-in-these-4-places/ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ, 1000 ಕೋಟಿ ರೂ.ಗಳ ಆರ್ಥಿಕ ಪ್ರಯೋಜನವನ್ನು ಪಡೆಯಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು. ಅರ್ಹ ಭೂಹೀನ ರೈತರ ಆಧಾರ್-ಸಂಬಂಧಿತ ಬ್ಯಾಂಕ್ ಖಾತೆಗಳಿಗೆ ವರ್ಷಕ್ಕೆ 6,000 ರೂಪಾಯಿಗಳನ್ನು ಮೂರು ಸಮಾನ ಕಂತುಗಳಲ್ಲಿ ವರ್ಗಾಯಿಸಲಾಗುತ್ತಿದೆ. ಪಿಎಂ-ಕಿಸಾನ್ ಯೋಜನೆಯನ್ನು ಆರಂಭದಲ್ಲಿ ನಂಬಿಕೆ ಆಧಾರಿತ ವ್ಯವಸ್ಥೆಯಲ್ಲಿ ಪ್ರಾರಂಭಿಸಲಾಯಿತು ಮತ್ತು ರಾಜ್ಯಗಳು…

Read More

ಐಪಿಎಲ್ 2025 ರ ಋತುವಿನ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಹಲವು ದಿನಗಳ ಚರ್ಚೆಯ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅಂತಿಮವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ನಡುವಿನ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಘೋಷಿಸಿದೆ. ಎಲ್ಲಾ ಊಹಾಪೋಹಗಳು ಮತ್ತು ವದಂತಿಗಳ ಹೊರತಾಗಿಯೂ, ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಘೋಷಿಸಲಾಗಿದೆ. https://ainkannada.com/do-this-to-get-the-blessings-of-goddess-lakshmi-dont-forget-to-light-lamps-in-these-4-places/ ಈಗ ಈ ಪಂದ್ಯದ ದಿನಾಂಕವನ್ನು ಬದಲಾಯಿಸಲಾಗಿದೆ. ಮಾರ್ಚ್ 28 ರ ಶುಕ್ರವಾರ, ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಏಪ್ರಿಲ್ 6 ರಂದು ನಿಗದಿಯಾಗಿದ್ದ ಪಂದ್ಯವನ್ನು ಏಪ್ರಿಲ್ 8 ರಂದು ನಡೆಸಲಾಗುವುದು ಎಂದು ಘೋಷಿಸಿತು. ಅಂದರೆ, ಪಂದ್ಯದ ದಿನಾಂಕವನ್ನು ಬದಲಾಯಿಸಲಾಗಿದೆ. ಆದರೆ, ಸ್ಥಳದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರಿಂದಾಗಿ, ಬದಲಾವಣೆಗಳು… ಐಪಿಎಲ್ 2025 ರ 19 ನೇ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ನಡುವೆ ನಡೆಯಲಿದೆ. ಈ ಪಂದ್ಯ ಏಪ್ರಿಲ್ 6 ರಂದು ಕೋಲ್ಕತ್ತಾದ ತವರು ಮೈದಾನ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.…

Read More

ಬೆಳಗಾವಿ : ರಸ್ತೆ ಬದಿಯಲ್ಲಿ ಅಂಗಡಿ ಇಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನ ಮೂಗನ್ನೇ ಕತ್ತರಿಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಡೇ ಬಜಾರ್‌ನ ಖಂಜಾರ್‌ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಬೀದಿಬದಿ ವ್ಯಾಪಾರಿಗಳ ನಡುವೆ ಅಂಗಡಿ ಇಡುವ ವಿಚಾರಕ್ಕೆ ಆರಂಭವಾದ ಚಕಮಕಿ ಬಳಿಕ ಹೊಡೆದಾಟ ಬಡಿದಾಟಕ್ಕೆ ತಿರುಗಿದೆ. ಈ ವೇಳೆ ಇಬ್ಬರ ಮೇಲೆ ಹಲ್ಲೆ ಮಾಡಲಾಗಿದ್ದು, ಓರ್ವನ ಮೂಗೇ ಕಟ್‌ ಆಗಿದ್ದು, ಮತ್ತೋರ್ವನಿಗೆ ಗಾಯಗಳಾಗಿವೆ. https://ainkannada.com/protest-in-muddebihal-for-yatal-outrage-as-bsys-portrait-burned/ ಸುಫಿಯಾನ್‌ ಫಠಾಣ್‌ (42)ನ ಮೂಗು ಕಟ್‌ ಆಗಿದ್ದು, ಸಮೀರ್‌ ಪಠಾಣ್‌ ಎಂಬುವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಫಿಯಾನ್‌ ಮತ್ತು ಅಯಾನ್‌ ಮಧ್ಯೆ ಅಂಗಡಿ ಇಡುವ ವಿಚಾರಕ್ಕೆ ಗಲಾಟೆಯಾಗಿದ್ದು, ಅಯಾನ್‌ ಸುಫಿಯಾನ್‌ ಮೂಗನ್ನೇ ಕತ್ತಿರಿಸಿದ್ದಾರೆನ. ಬೆಳಗಾವಿ ಮಾರ್ಕೆಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ವಿಜಯಪುರ : ಯತ್ನಾಳ್ ಉಚ್ಚಾಟನೆ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.  ಮುದ್ದೇಬಿಹಾಳದಲ್ಲಿ ಪ್ರತಿಭಟನೆ ನಡೆಸಿದ ಯತ್ನಾಳ್‌ ಬೆಂಬಲಿಗರು, ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಒದಲ್ಲದೇ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನೆ ನಡೆಯಿತು. ಪಂಚಮಸಾಲಿ ಸಮಾಜದ ಅಭಿಮಾನಿಗಳು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಭಿಮಾನಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಬಿಎಸ್‌ವೈ, ವಿಜಯೇಂದ್ರ ಭಾವಚಿತ್ರಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/yatnals-expulsion-resolution-passed-by-vijayapura-district-bjp-core-committee/ ಇದೇ ವೇಳೆ ಮಾತನಾಡಿದ ಪಂಚಮಸಾಲಿ ಸಮಾಜ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ್ ಕೊಟ್ರಶೆಟ್ಟಿ, ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಂದು ಸಮಾಜಕ್ಕೆ ಸೀಮಿತವಾಗದೆ ಇಡೀ ಹಿಂದೂ ಸಮಾಜಕ್ಕೆ ಶಕ್ತಿಯಾಗಿದ್ದಾರೆ.  ಬಿಜೆಪಿ ಅವರನ್ನು ಹೊರಹಾಕಿದ್ದು ಖಂಡನೀಯ. ಮುಂದಿನ ದಿನಗಳಲ್ಲಿ ಯತ್ನಾಳ್ ಅವರ ಶಕ್ತಿ ಏನೆಂದು ತೋರಿಸುತ್ತೇವೆ ಎಂದರು. ಪಂಚಮಸಾಲಿ ಸಮಾಜದ ವಿನಾಯಕರು ಮತ್ತು ಯತ್ನಾಳ್‌ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Read More

ವಾಸ್ತು ಶಾಸ್ತ್ರದ ಪ್ರಕಾರ, ಶನಿವಾರದಂದು ಕೆಲವು ವಿಶೇಷ ಸ್ಥಳಗಳಲ್ಲಿ ದೀಪ ಹಚ್ಚಿದರೆ, ಒಬ್ಬರ ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ. ಶನಿದೇವರ ಅನುಗ್ರಹದಿಂದ ಕರ್ಮದ ಪರಿಣಾಮಗಳು ಕಡಿಮೆಯಾಗಬಹುದು ಮತ್ತು ಶುಭ ಫಲಗಳನ್ನು ಅನುಭವಿಸಬಹುದು ಎಂದು ಹಿರಿಯರು ಹೇಳುತ್ತಾರೆ. ಈ ನಂಬಿಕೆಯನ್ನು ಅನುಸರಿಸಿ, ಅನೇಕ ಜನರು ಶನಿವಾರ ದೀಪ ಹಚ್ಚುವುದಕ್ಕೆ ವಿಶೇಷ ಪ್ರಾಮುಖ್ಯತೆಯನ್ನು ನೀಡುತ್ತಾರೆ. ವಾಸ್ತು ತಜ್ಞರ ಪ್ರಕಾರ, ಶನಿವಾರದಂದು ಈ ನಾಲ್ಕು ಸ್ಥಳಗಳಲ್ಲಿ ದೀಪಗಳನ್ನು ಹಚ್ಚುವುದು ವಿಶೇಷವಾಗಿ ಶುಭವಾಗಿದೆ. ಆ ಸ್ಥಳಗಳ ಬಗ್ಗೆ ಈಗ ತಿಳಿದುಕೊಳ್ಳೋಣ. ಶನಿ ದೇವನನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ. ಕರ್ಮಗಳಿಗೆ ಫಲ ನೀಡುವ ಶನಿ ದೇವನನ್ನು ಮೆಚ್ಚಿಸಲು ಶನಿವಾರ ದೇವಾಲಯದಲ್ಲಿ ದೀಪ ಹಚ್ಚುವುದು ಬಹಳ ಮುಖ್ಯ ಎಂದು ಹಿರಿಯರು ಹೇಳುತ್ತಾರೆ. ಸಂಜೆ ಶನಿ ದೇವಸ್ಥಾನಕ್ಕೆ ಹೋಗಿ ಸಾಸಿವೆ ಎಣ್ಣೆಯಿಂದ ದೀಪ ಹಚ್ಚಿದರೆ, ಪಾಪಗಳು ಪರಿಹಾರವಾಗುತ್ತವೆ ಮತ್ತು ಹಿಂದಿನ ಜನ್ಮದ ಕರ್ಮದ ಪರಿಣಾಮಗಳು ಕಡಿಮೆಯಾಗುತ್ತವೆ ಎಂದು ನಂಬಲಾಗಿದೆ. ಇದು ಕೆಲಸ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ಆರೋಗ್ಯ…

Read More