ಮೈಸೂರು: ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಮೋದಿ ಸರ್ಕಾರ ಬಂದು 11 ವರ್ಷ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್ ಎಂದಿದ್ದಾರೆ. ಮೋದಿ ಪ್ರಚಾರಕ್ಕಷ್ಟೇ ಇರೋದು ಎಂದಿದ್ದಾರೆ. https://ainkannada.com/is-your-laptop-running-out-of-charge-quickly-if-so-do-this/ ಜೊತೆಗೆ ಮೋದಿ ಸರ್ಕಾರ ಡಿ ಮಾನೀಟೈಜೇಶನ್ ಮಾಡಿದ್ರು ಏನಾದ್ರೂ ಆಯ್ತಾ?, ಯಾರಿಗೆ ಅನುಕೂಲ ಆಯ್ತು? ಅಚ್ಚೆ ದಿನ್ ಆಯೆಗಾ ಅಂದ್ರು.. ಅಚ್ಚೆ ದಿನ್ ಬಂತಾ? ರೈತರ ಸಮಸ್ಯೆ ಬಗೆಹರಿಸುತ್ತೇನೆ ಅಂದ್ರು. ಡೆಲ್ಲಿ ರೈತರು 1 ವರ್ಷ ಚಳುವಳಿ ಮಾಡಿದ್ರು ಆದರೂ ಏನು ಆಗಲಿಲ್ಲ ಎಂದು ಹೀಗೆ ಮೋದಿ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮೋದಿ ಸರ್ಕಾರ ಈವರೆಗೂ ಏನು ಮಾಡಿಲ್ಲ. ಮೋದಿ ಹೇಳಿದ್ದು ಒಂದು ಕೂಡ ಮಾಡಲಿಲ್ಲ. 11 ವರ್ಷ ತುಂಬಿದೆ ಅಷ್ಟೇ. ಆದರೆ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ ಎಂದು ಮೋದಿ…
Author: Author AIN
ಬೆಂಗಳೂರು: RCB ವಿಜಯೋತ್ಸವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸೌಧ ಭದ್ರತಾ ಡಿಸಿಎಂ ಅವರು ವಿಧಾನಸೌಧದ ಮುಂದಿನ ಕಾರ್ಯಕ್ರಮದ ಬಗ್ಗೆ ಅಸಹಾಯಕತೆ ವ್ಯಕ್ತ ಪಡಿಸಿ ಬರೆದ ಪತ್ರವೇ ನನಗೆ ಗೊತ್ತಿಲ್ಲ ಎಂದು ಸಿಎಂ ಹೇಳಿದ್ದಾರೆ. ಖುದ್ದು ಮುಖ್ಯಮಂತ್ರಿಗಳೇ ತಮ್ಮ ನಾಯಕತ್ವದ ರಾಜ್ಯದಲ್ಲಿ ಮುಖ್ಯ ಸಂಗತಿಗಳೇ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿರುವುದು ಆಡಳಿತ ವ್ಯವಸ್ಥೆಯ ಮೇಲೆ ಅವರ ಹಿಡಿತ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಅದಲ್ಲದೆ ಎರಡನೇ ಬಾರಿಗೆ ಸಿಎಂ ಆಗಿರುವ ಸಿದ್ದರಾಮಯ್ಯ ಆಡಳಿತದ ಮೇಲಿನ ನಿಯಂತ್ರಣ ಕಳೆದು ಕೊಂಡಿದ್ದಾರೆ. ಎಂದು ಕಿಡಿಕಾರಿದ್ದಾರೆ. ಇಡೀ ಕಾರ್ಯಕ್ರಮಗಳ ಬಗ್ಗೆ ಗೃಹ ಮಂತ್ರಿಗೆ ಗೊತ್ತೇ ಇಲ್ಲ ಎನ್ನುವುದು ಇನ್ನಷ್ಟು ನಾಚಿಕೆಗೇಡಿನ ಸಂಗತಿ. ಒಬ್ಬ ಗೃಹ ಸಚಿವರಾಗಲು ಅರ್ಹತೆ ಕೆಳೆದುಕೊಂಡಿರುವ ಡಾ.ಪರಮೇಶ್ವರ್ ಯಾವ ಅರ್ಹತೆಯ ಮೇಲೆ ಅಧಿಕಾರದಲ್ಲಿಮುಂದುವರೆಯುತ್ತಾರೆಯೋ ಅವರೇ ಹೇಳಬೇಕು.…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೆಟ್ಟಿಲುಗಳಿಂದ ಬೀಳುವ ಹಂತಕ್ಕೆ ತಲುಪಿದ್ದರು. ನ್ಯೂಜೆರ್ಸಿಯ ಮಾರಿಸ್ಟೌನ್ನಲ್ಲಿರುವ ಮಾರಿಸ್ಟೌನ್ ಮುನ್ಸಿಪಲ್ ವಿಮಾನ ನಿಲ್ದಾಣದಲ್ಲಿ ಶನಿವಾರ ಈ ಘಟನೆ ನಡೆದಿದೆ. ಟೇಕ್ ಆಫ್ ಸಮಯದಲ್ಲಿ ಏರ್ ಫೋರ್ಸ್ ಒನ್ ಹತ್ತುತ್ತಿದ್ದ ಟ್ರಂಪ್, https://twitter.com/Acyn/status/1931812369849864361 ಇದ್ದಕ್ಕಿದ್ದಂತೆ ಮೆಟ್ಟಿಲುಗಳ ಮೇಲೆ ನಿಯಂತ್ರಣ ಕಳೆದುಕೊಂಡರು. ಆದಾಗ್ಯೂ, ಅವರು ಬೇಗನೆ ಚೇತರಿಸಿಕೊಂಡು ಎದ್ದರು. ಅವರು ರೇಲಿಂಗ್ ಹಿಡಿದು ವಿಮಾನ ಹತ್ತಿದರು. ಈ ಘಟನೆಯಲ್ಲಿ ಅಧ್ಯಕ್ಷರಿಗೆ ಯಾವುದೇ ಗಾಯಗಳಾಗಿಲ್ಲ. ಟ್ರಂಪ್ ಜೊತೆ ಏರ್ ಫೋರ್ಸ್ ಒನ್ ಹತ್ತುವಾಗ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕೂಡ ಎಡವಿ ಬಿದ್ದರು. ಅಧ್ಯಕ್ಷ ಟ್ರಂಪ್ ಬೀಳಲಿರುವ ವಿಡಿಯೋ ಪ್ರಸ್ತುತ ವೈರಲ್ ಆಗುತ್ತಿದೆ. ಇದನ್ನು ನೋಡಿದ ನೆಟಿಜನ್ಗಳು ವಿವಿಧ ರೀತಿಯ ಕಾಮೆಂಟ್ಗಳನ್ನು ಮಾಡುತ್ತಿದ್ದಾರೆ. https://ainkannada.com/is-your-laptop-running-out-of-charge-quickly-if-so-do-this/ ಅವರು ಟ್ರಂಪ್ ಅವರನ್ನು ಮಾಜಿ ಅಧ್ಯಕ್ಷ ಜೋ ಬಿಡನ್ ಅವರಿಗೆ ಹೋಲಿಸುತ್ತಿದ್ದಾರೆ. ‘ಇದು ಬೈಡನ್ ಆಗಿದ್ದರೆ, ಮಾಧ್ಯಮ ಜಾಲದಲ್ಲಿ ಇಷ್ಟೊತ್ತಿಗಾಗಲೇ ದೊಡ್ಡ ಬ್ರೇಕಿಂಗ್ ನ್ಯೂಸ್ ಹೊರಬರುತ್ತಿತ್ತು’, ‘ಟ್ರಂಪ್ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿಲ್ಲ.. ಅವರು…
ದೊಡ್ಡಬಳ್ಳಾಪುರ: ಗ್ರಾಮಗಳು ಅಭಿವೃದ್ಧಿ ಆಗಬೇಕು ಎಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷ ಜನರ ಪರ ಕೆಲಸ ಮಾಡಬೇಕು. ಆದರೆ ಅಧ್ಯಕ್ಷನ ಅಪ್ಪಣೆ ಇಲ್ಲದೆ ಯಾವುದೇ ಫೈಲ್ ಮುಂದಕ್ಕೆ ಹೋಗುವಂತಿಲ್ಲ ಗ್ರಾಮಪಂಚಾಯ್ತಿಯ ಹಣೆಬರಹ.. ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸತೀಶ್ ಕುಮಾರ್ ಮತ್ತು ಪಿಡಿಓ ಶಿವಾನಂದ ಮರಕೇರಿಯದ್ದೇ ದರ್ಬಾರ್ ಆಗಿದೆ. ಅದಕ್ಕೆ ತಾಜಾ ಉದಾಹರಣೆ ಎಂದರೆ ಪಂಚಾಯತಿ ಒಳಕ್ಕೆ ಹೋಗುತ್ತಿದ್ದಂತೆ ಮೊದಲು ಕಾಣುವುದು ಅಧ್ಯಕ್ಷರ ಅಪ್ಪಣೆ ಪತ್ರಗಳು. ಪಿಡಿಓ ಕಚೇರಿಯ ಬಾಗಿಲಿನಲ್ಲಿಯೇ ಆದೇಶವನ್ನು ಅಂಟಿಸಿದ್ದಾರೆ. ಒಂದು ಈ ಖಾತೆ ಮಾಡಿಸಲು ಕನಿಷ್ಠ 25 ಸಾವಿರ ಹಣ ಕೊಡಬೇಕಂತೆ. ಹಣ ಕೊಟ್ಟವರಿಗೆ ಕೇವಲ 15 ದಿನದಲ್ಲೇ ಈ ಖಾತೆ ಬರುತ್ತದೆ. ಚೌಕಾಸಿ ಮಾಡಿದವರಿಗೆ ತಡವಾಗುತ್ತದೆ ಎಂದು ಅರ್ಜಿದಾರರು ಚೆನ್ನಲಕ್ಷ್ಮಯ್ಯ ಆರೋಪ ಮಾಡಿದ್ದಾರೆ. ಇವರು AIN ಕನ್ನಡದ ಜೊತೆ ಮಾತನಾಡಿ ಮಳೆ ಬಂದರೆ ನಮ್ಮ ಮನೆಗೆ ನೀರು ನುಗ್ಗುತ್ತಿತ್ತು.ಇದರಿಂದ ಬೇಸತ್ತು ಮನೆ ಕಟ್ಟಬೇಕೆಂದು ಮೂರು ತಿಂಗಳ ಹಿಂದೆ ಈ ಖಾತೆ ಮಾಡಿಸಲು…
ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಿಲ್ಲ. ಇದರಿಂದ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಯಶಸ್ಸು ಪಡೆಯಲು ವಿಫಲವಾಗಿದೆ. ಕನ್ನಡದ ಮೂಲ ತಮಿಳು ಎಂದು ಹೇಳಿದ್ದ ಅವರು, ಕ್ಷಮೆ ಕೇಳಲು ನಿರಾಕರಿಸಿದ್ದರು. ಇದು ಅವರ ಸಿನಿಮಾಗೆ ದೊಡ್ಡ ಹೊಡೆತ ಕೊಟ್ಟಿದೆ. ಇದರ ನಡುವೆ ಹೈಕೋರ್ಟ್ನಲ್ಲಿ ಪ್ರಕರಣ ವಿಚಾರಣೆಯಲ್ಲಿದ್ದರೂ, ಸುಪ್ರೀಂಕೋರ್ಟ್ನಲ್ಲಿ ಅವರು ಮನವಿ ಮಾಡಿದ್ದಾರೆ. ಆದರೆ, ಅಲ್ಲಿ ಅವರಿಗೆ ಹಿನ್ನಡೆ ಆಗಿದೆ. ಮನವಿಯನ್ನು ನೋಡಿದ ಸುಪ್ರೀಂಕೋರ್ಟ್ ಹೈಕೋರ್ಟ್ನತ್ತ ಬೆರಳು ಮಾಡಿದೆ. ಹೀಗಾಗಿ ಕಮಲ್ಅವರು ಹೈಕೋರ್ಟ್ ಆದೇಶ ಬರುವವರೆಗೆ ಕಾಯಲೇಬೇಕಿದೆ. https://ainkannada.com/is-your-laptop-running-out-of-charge-quickly-if-so-do-this/ ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಎಲ್ಲ ಕಡೆಗಳಲ್ಲಿ ವಿರೋಧ ವ್ಯಕ್ತವಾಯಿತು. ಈ ಹೇಳೆಯನ್ನು ಕನ್ನಡಿಗರು ಬಹುವಾಗಿ ಖಂಡಿಸಿದರು. ಈ ಕಾರಣದಿಂದಲೇ ಅವರ ನಟನೆಯ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಿರಲು ನಿರ್ಧರಿಸಲಾಯಿತು. ಈ ವಿಚಾರ ಕಮಲ್ನ ಕೆರಳಿಸಿದೆ. ಆರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಅವರು, ಸಿನಿಮಾ ರಿಲೀಸ್ ವೇಳೆ ಭದ್ರತೆಗೆ ಮನವಿ…
ಬೆಂಗಳೂರು: ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆಯಾಗಿರುವ ಘಟನೆ ಸಿಲಕಾನ್ ಸಿಟಿ ಬೆಮಗಳೂರಿನ ಪೂರ್ಣ ಪ್ರಜ್ಞಾಲೇಔಟ್ ಹೋಟೆಲ್ ಓಯೋ ರೂಮ್’ನಲ್ಲಿನಡೆದಿದೆ. ಹರಿಣಿ (36) ಕೊಲೆಯಾದ ಪ್ರಿಯತಮೆಯಾಗಿದ್ದು, ಟೆಕ್ಕಿ ಯಶಸ್ (25) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇಬ್ಬರೂ ಕೆಂಗೇರಿ ನಿವಾಸಿಗಳಾಗಿದ್ದು, ಕಳೆದ ಆರು ವರ್ಷಗಳಿಂದ ಇಬ್ಬರಿಗೂ ಪರಿಚಯ ಇದ್ದು, ಕಳೆದ ಒಂದು ವರ್ಷದಿಂದ ಕ್ಲೋಸ್ ಆಗಿದ್ದರು. ಆದರೆ ಹರಿಣಿಗೆ ಈಗಾಗ್ಲೇ ಮದುವೆಯಾಗಿ ಎರಡು ಮಕ್ಕಳಿದ್ದವು. ಅಷ್ಟೇ ಅಲ್ಲದೇ ಅನೈತಿಕ ಸಂಬಂಧದ ವಿಷಯ ಗೊತ್ತಾಗಿ ಹರಿಣಿ ಪತಿಪ್ರಿಯಕರ್ ಯಶಸ್ ಗೆ ವಾರ್ನಿಂಗ್ ಕೂಡ ಮಾಡಿದ್ದರು. https://ainkannada.com/is-your-laptop-running-out-of-charge-quickly-if-so-do-this/ ಬಳಿಕ ಪ್ರಿಯಕರ ಯಶಸ್ ಕೊಲೆ ಮಾಡುವ ಉದ್ದೇಶದಿಂದಲೇ ಓಯೋ ರೂಂಗೆ ಕರೆಸಿಕೊಂಡು ದೇಹದ ವಿವಿಧ ಭಾಗಗಳಿಗೆ 17 ಬಾರಿ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಕೊಲೆ ಮಾಡಿರುವುದಾಗಿ ಕೆಂಗೇರಿ ಪೊಲೀಸ್ ಠಾಣೆಗೆ ಹೋಗಿದ್ದಾನೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಶಸ್ ನನ್ನು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ ಎರಡು ಬಾರಿ ಆತಹತ್ಯೆಗೆ ಯತ್ನಿಸಿದ್ದು ಸದ್ಯ…
ತುಮಕೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಜೀವ ಕಳೆದುಕೊಂಡಿದ್ದ ಮೃತ ಯುವಕ ಮನೋಜ್ ಅವರ ಅಜ್ಜಿ ನಿಧನ ಹೊಂದಿದ್ದಾರೆ. ಮನೋಜ್ ಅಜ್ಜಿ ದೇವೀರಮ್ಮ (70) ಮೃತಪಟ್ಟ ವೃದ್ಧೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಮಂದಿ ಆರ್ಸಿಬಿ ಅಭಿಮಾನಿಗಳ ಪೈಕಿ ತುಮಕೂರಿನ ಮನೋಜ್ ಕೂಡ ಒಬ್ಬ. https://ainkannada.com/is-your-laptop-running-out-of-charge-quickly-if-so-do-this/ ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರದ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ಮನೋಜ್ ಯಲಹಂಕದಲ್ಲಿ ತಂದೆ, ತಾಯಿ ಹಾಗೂ ತಂಗಿ ಜೊತೆ ವಾಸವಿದ್ದ. ಆರ್ಸಿಬಿ ವಿಜಯೋತ್ಸವ ದಿನ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ ಮನೋಜ್ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದ. ಇದೀಗ ಮೊಮ್ಮಗನ ಅಗಲಿಕೆ ನೋವಲ್ಲೇ ಅಜ್ಜಿ ಕೂಡ ನಿಧನರಾಗಿದ್ದಾರೆ. ಇನ್ನು ಮೃತ ಮನೋಜ್ ಕುಟುಂಬಕ್ಕೆ ಡಿಸಿ ಶುಭಕಲ್ಯಾಣ್ ಭಾನುವಾರ 25 ಲಕ್ಷ ಪರಿಹಾರದ ಚೆಕ್ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದ್ದಾರೆ. ಚೆಕ್ ಕೊಟ್ಟರೆ ಮಗಾ ಬರ್ತಾನಾ? ಇದ್ದೋನು ಒಬ್ಬನೇ ಮಗ. 25 ಲಕ್ಷ ಚೆಕ್ ಕೊಟ್ಟಿದ್ದಾರೆ. ಈ ಹಣ…
ಬೆಂಗಳೂರು: ದೇಶದಲ್ಲಿ ಕೋವಿಡ್-19 ಹರಡುವಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ, ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೆ, 358 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಇತ್ತೀಚಿನ ಪ್ರಕರಣಗಳನ್ನು ಒಳಗೊಂಡಂತೆ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,491 ಕ್ಕೆ ಏರಿದೆ. https://ainkannada.com/is-your-laptop-running-out-of-charge-quickly-if-so-do-this/ ಕೇಂದ್ರ ಆರೋಗ್ಯ ಸಚಿವಾಲಯದ (ಭಾರತೀಯ ಆರೋಗ್ಯ ಸಚಿವಾಲಯ) ಅಂಕಿಅಂಶಗಳ ಪ್ರಕಾರ. ಕೇರಳದಲ್ಲಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು 1,957 ಇವೆ. ಅದರ ನಂತರ, ಗುಜರಾತ್ನಲ್ಲಿ 980 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 747 ಪ್ರಕರಣಗಳು, ದೆಹಲಿಯಲ್ಲಿ 728 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 607 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 423 ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಸಾವು ದಾಖಲಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ಈ ವರ್ಷದ ಜನವರಿಯಿಂದ ದೇಶದಲ್ಲಿ ಕೊರೊನಾ ವೈರಸ್ನಿಂದ 65 ಜನರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಸನ್ನದ್ಧತೆಯನ್ನು ಪರಿಶೀಲಿಸಲು ಕೇಂದ್ರವು ಅಣಕು ಕಸರತ್ತುಗಳನ್ನು ನಡೆಸುತ್ತಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ,…
ಕೋಲಾರ: ನೂತನ ಚೆನೈ- ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರ್ ಡಿಕ್ಕಿಯಗಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಎಡಗಿನಬೆಲೆ ಟೋಲ್ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಹುಂಡೈ ಕಾರ್ ಪುಡಿಪುಡಿಯಾಗಿದೆ. https://ainkannada.com/is-your-laptop-running-out-of-charge-quickly-if-so-do-this/ ಮೃತರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತರು ಉತ್ತರ ಭಾರತ ಮೂಲದವರು ಎನ್ನಲಾಗಿದೆ. ಕಾರಿನಲ್ಲಿ ಗುಟ್ಕಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೀವನ ಪಯಣ ಪುಸ್ತಕ ರೂಪ ತಾಳಿದ್ದು, ಇಂದು ಆ ಪುಸ್ತಕವನ್ನು ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋ ಬಿಡುಗಡೆ ಮಾಡಲಾಗಿದೆ. ಸ್ಟೈಲೀಶ್ ಆಗಿ ಕೋಟು ತೊಟ್ಟು ಶಿವಣ್ಣ ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಭಾಗಿಯಾಗಿದ್ದಾರೆ. ಶಿವಣ್ಣ ಮನೆಯವರಿಂದ, ಸ್ನೇಹಿತರು ಸಿನಿಮಾ ಇಂಡಸ್ಟ್ರಿಯವರಿಂದಲೇ ಶಿವಣ್ಣ ಬಗೆಗಿನ ಮಾಹಿತಿ ಕಲೆ ಹಾಕಿ ಬಯೋಗ್ರಫಿ ರಚಿಸಲಾಗಿದೆ. ಅದನ್ನೆ ಆಧರಿಸಿಯೇ ಈ ಪುಸ್ತಕವನ್ನ ಬರೆಯಲಾಗಿದೆ. ನಿವೇದನಾ ಆರ್ಟ್ಸ್ ಆನಂದ್ ನೇತೃತ್ವದಲ್ಲಿಯೇ ಈ ಪುಸ್ತಕ ತಯಾರಾಗಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಶಿವಣ್ಣ ತಮ್ಮಿಷ್ಟದ ಹಾಡು ಹಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ.