ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ವಾರ್ಡ್ ನಂಬರ್ 14ರ ಕೆಂಗೇರಿಮಡ್ಡಿಯಲಿ ಸರಿ ಸುಮಾರು ಒಂದು ತಿಂಗಳಾದರೂ ಕುಡಿಯೋಕೆ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ.. ಸಾರ್ವಜನಿಕರು ಅವರ ಗೋಳು ಹೇಳಲ್ಲೂ ಸಂಬಂಧ ಪಟ್ಟ ಅಧಿಕಾರಿಗಳ ಮೊರೆ ಹೋದರು ಸಹ ಕ್ಯಾರೆ ಅನ್ನುತ್ತಿಲ್ಲ…. ಅಲ್ಲಿನ ಮಹಿಳೆಯರು ಚಿಕ್ಕ ಚಿಕ್ಕ ಮಕ್ಕಳನ್ನು ಕರೆದುಕೊಂಡು ಬೇರೆಯವರ ತೋಟಕ್ಕೆ ಹೋಗಿ ಕುಡಿಯಲು ನೀರು ತರೋದು ನೋಡಿದರೆ… ಕರುಳು ಕಿತ್ತು ಬರುತ್ತದೆ.. ಈ ಸುದ್ದಿಯನ್ನು ನೋಡಿಯಾದರು ಸಂಬಂಧ ಪಟ್ಟ ಅಧಿಕಾರಿಗಳ ಮನಸ್ಸು ಕರಗಿ ಇಲ್ಲಿ ವಾಸಿಸುವ ಬಡ ಕುಟುಂಬಗಳಿಗೆ ಕುಡಿಯೋ ನೀರಿನ ಸಮಸ್ಯೆಗೆ ಬ್ರೇಕ್ ಹಾಕುತ್ತಾರೋ ಅತ್ವಾ ಅವರು ಹಾಕುವ ಹಿಡಿ ಶಾಪಕ್ಕೆ ಗುರಿಯಾಗುತ್ತಾರೋ ಎಂದು ಕಾದು ನೋಡೋಣ.. ಪ್ರಕಾಶ ಕುಂಬಾರ ಬಾಗಲಕೋಟೆ
Author: Author AIN
ಐಪಿಎಲ್ 18ನೇ ಋತುವಿನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಪ್ರಭಾವಿತರಾದರು. ಅವರು ಪಂಜಾಬ್ ನಾಯಕನಾಗಿ ತಮ್ಮ ಮೊದಲ ಜಯವನ್ನು ಸಾಧಿಸಿದರು. ಮಂಗಳವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 11 ರನ್ಗಳಿಂದ ಸೋಲಿಸಿತು. ಆದಾಗ್ಯೂ, ಈ ಪಂದ್ಯದ ಸಮಯದಲ್ಲಿ, ಶ್ರೇಯಸ್ ಅಯ್ಯರ್ ತಂಡದ ಸ್ಟಾರ್ ಆಲ್ರೌಂಡರ್ ಮತ್ತು ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್ವೆಲ್ ಅವರಲ್ಲಿ ಕ್ಷಮೆಯಾಚಿಸಿದರು. ಅಯ್ಯರ್ ಕ್ಷಮೆಯಾಚಿಸಲು ಏಕೆ ಬಂದರು ಎಂದು ಈಗ ನೋಡೋಣ.. ಈ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ಬೆನ್ನಟ್ಟುತ್ತಿದ್ದಾಗ, ಅವರ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಉತ್ತಮ ಆರಂಭಿಕ ಪಾಲುದಾರಿಕೆಯ ಜೊತೆಗೆ, ಅವರು ಬಟ್ಲರ್ ಜೊತೆ ಪ್ರಮುಖ ಪಾಲುದಾರಿಕೆಯನ್ನು ರೂಪಿಸಿದರು. ಅವರು 41 ಎಸೆತಗಳಲ್ಲಿ ಒಟ್ಟು 74 ರನ್ ಗಳಿಸಿದರು. ಆದರೆ, ಅಪಾಯಕಾರಿಯಾಗಿ ಆಡುತ್ತಿದ್ದ ಸಾಯಿ ಸುದರ್ಶನ್ ಅವರನ್ನು ಬೇಗನೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಡೆವಿಲ್ ಶೂಟಿಂಗ್ ಭರದಿಂದ ಸಾಗುತ್ತಿದೆ. ಮೈಸೂರಿನಲ್ಲಿ ಶೂಟಿಂಗ್ ಮುಗಿಸಿ ರಾಜಸ್ತಾನದಲ್ಲಿ ಇಡೀ ತಂಡ ಬೀಡುಬಿಟ್ಟಿದೆ. ಡೆವಿಲ್ ಮೂರನೇ ಹಂತದ ಚಿತ್ರೀಕರಣ ರಾಜಸ್ತಾನದ ಉದಯಪುರ್ದಲ್ಲಿ ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ನಟ ದರ್ಶನ್, ನಟಿ ರಚನಾ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ರಾಜಸ್ತಾನದ ಮೊದಲ ದಿನದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟಿ ರಚನಾ ರೈ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹಾಗಂತ ಶೂಟಿಂಗ್ ಫೋಟೋಗಳಲ್ಲ. ಬದಲಾಗಿ ಚಿತ್ರೀಕರಣ ಮುಗಿಯುತ್ತಿದ್ದಂತೆ ಉದಯಪುರದ ಕರ್ಣಿ ಮಾತಾ ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ, ಅಲ್ಲದೇ ಉದಯಪುರ ಸೌಂದರ್ಯಕ್ಕೆ ಫಿದಾ ಆಗಿ, ಉದಯ್ ಪುರ್ ಯು ಸಿಟಿ ಎಂದು ಹಾರ್ಟ್ ಸಿಂಬಲ್ ಆಗಿದ್ದಾರೆ. ಡೆವಿಲ್ ಸಿನಿಮಾ ಮೂಲಕ ರಚನಾ ರೈ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ…
ಬೆಳಗಾವಿ: ದೇಶದಲ್ಲಿ ಹತ್ಯೆಗೊಳಗಾಗಿ ಸಾಯುವವರಿಗಿಂತ, ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಇಂದು ಬೆಳ್ಳಗೆಯಷ್ಟೆ ಎಂಬಿಎ ಪದವೀಧರೆ ಪಿ.ಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಯುವತಿ ನನ್ನ ಸಾವಿಗೆ ನಾನೇ ಕಾರಣವೆಂದು ಗೋಡೆ ಮೇಲೆ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಜಾಹ್ನವಿ(22) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ, ನನ್ನ ಮೇಲೆ ಯಾರೂ ವಿಶ್ವಾಸವಿಡುತ್ತಿಲ್ಲ. ನನಗೆ ಯಾರೂ ಸ್ನೇಹಿತರು ಇಲ್ಲ, ಅಪ್ಪ ಅಮ್ಮ ಕೂಡ ನಂಬುತ್ತಿಲ್ಲ. ಪೋಷಕರು ನನ್ನ ಮಾತಿಗೆ ಸ್ಪಂದಿಸುತ್ತಿಲ್ಲ, ಕಾಳಜಿ ವಹಿಸುತ್ತಿಲ್ಲ. ಮತ್ತೆ ಹುಟ್ಟಿ ಬರುತ್ತೇನೆ ಎಂದು ಗೋಡೆ ಮೇಲೆ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೋಷಕರು ಹಾಸನದಲ್ಲಿ ಕೆಲಸ ಮಾಡುತ್ತಿದ್ದರೆ, ಜಾಹ್ನವಿ ಓದಲು ಬೆಳಗಾವಿಯಲ್ಲಿ ಚಿಕ್ಕಪ್ಪನ ಮನೆ ಮೇಲೆ ರೂಮ್ ಮಾಡಿಕೊಂಡಿದ್ದಳು. ಆದ್ರೆ, ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಮರಣೋತ್ತರ ಪರೀಕ್ಷೆ ನಡೆಸಿ ಜಾಹ್ನವಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿಲಾಗಿದ್ದು,…
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದ್ದು, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ನಿಮದ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್ಗೆ ಅವರ ಉತ್ತರದಿಂದ ಸೂಕ್ತ ಉತ್ತರ ಸಿಕ್ಕಿಲ್ಲವೆಂದು ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ. ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಬಿಜೆಪಿ ಶಾಸಕ ಯತ್ನಾಳ್ ಸದಾ ಪಕ್ಷದ ಬಗ್ಗೆ ಆಗಲಿ, ನಾಯಕರ ಬಗ್ಗೆ ಆರೋಪಗಳನ್ನು ಮಾಡುತ್ತಲೇ ಇದ್ದರು. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ…
ದುನಿಯಾ ವಿಜಯ್ ಕುಮಾರ್ ತಾವೊಬ್ಬ ಅದ್ಭುತ ಸಿನಿಮಾಕರ್ಮಿ ಅನ್ನೋದನ್ನು ಸಲಗ, ಭೀಮ ಮೂಲಕ ಪ್ರೋವ್ ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ಬ್ಲಾಕ್ ಕೋಬ್ರಾ ಹ್ಯಾಟ್ರಿಕ್ ಬಾರಿಸುವ ಹುಮ್ಮಸ್ಸಿನಲ್ಲಿದ್ದಾರೆ. ಒಂದ್ಕಡೆ ನಟನೆ ಮತ್ತೊಂದ್ಕಡೆ ನಿರ್ದೇಶನ..ಇವರೆಡರ ಜೊತೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಸ್ಯಾಂಡಲ್ ವುಡ್ ಸಿನಿಮಾಪ್ರೇಮಿಗಳ ಮುಂದೆ ತರುವ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ಅಭಿನಯಿಸುತ್ತಿರುವ ಸ್ಯಾಂಡಲ್ ವುಡ್ ಸಿಂಗಲ್ ಸಲಗ ʼಸಿಟಿ ಲೈಟ್ಸ್ʼ ಎಂಬ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕವೇ ವಿಜಯ್ ಎರಡನೇ ಪುತ್ರಿ ಮೋನಿಷಾ ನಾಯಕಿಯಾಗಿ ಮೆರವಣಿಗೆ ಹೊರಡುತ್ತಿದ್ದಾರೆ. ಅದು ಕೂಡ ದೊಡ್ಮನೆ ಹುಡ್ಗ ವಿನಯ್ ರಾಜ್ ಕುಮಾರ್ ಗೆ ಜೋಡಿಯಾಗಿ ಅನ್ನೋದು ವಿಶೇಷ. ಕಳೆದ ತಿಂಗಳಷ್ಟೇ ಸಿಟಿ ಲೈಟ್ಸ್ ಸಿನಿಮಾ ಅದ್ಧೂರಿಯಾಗಿ ಸೆಟ್ಟೇರಿತ್ತು. ಬೆಂಗಳೂರಿನ ಬಂಡೇ ಮಹಾಕಾಳಿ ದೇವಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ತಂಡ ಕಟ್ಟಿಕೊಂಡು ಇಳಿದಿದ್ದ ದುನಿಯ್ ವಿಜಯ್ ಕುಮಾರ್ ಈಗ ಪ್ರೇಕ್ಷಕರಿಗೆ ಸ್ಪೆಷಲ್ ಆಗಿ ಕುಕ್ಕಿಂಗ್ ಮಾಡ್ತಿದ್ದಾರೆ…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳ ಮಂಜೂರು ವಿಚಾರದಲ್ಲಿ ಸಿದ್ದು ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾಗಿದೆ. ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ ಜಾಗವನ್ನು ಕಾಂಗ್ರೆಸ್ ಕಚೇರಿ ಸ್ಥಾಪನೆಗೆ ನೀಡಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಹೌದು ಮಹಾನಗರ ಪಾಲಿಕೆ ಸ್ಥಳವನ್ನು ಅತ್ಯಂತ ಕಡಿಮೆ ಬೆಲೆ ಖರೀದಿಸಿ ಬಳಿಕ ಅಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿತ್ತು. ಆದ್ರೆ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತಡೆ ನೀಡಿದೆ. ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಕಡಾ 5 ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕುನ್ನು ಪಡೆಯಲು ಕ್ಯಾಬಿನೆಟ್ ತೀರ್ಮಾನ ಮಾಡಿತ್ತು. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಸಂಪುಟದ ಈ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ…
ತುಮಕೂರು: ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ವರದಿಯಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಮೂರು ವರ್ಷದ ಮಗುವನ್ನು ಕೊಲೆ ಮಾಡಿ ಹಾವು ಕಚ್ಚಿ ಸಾವನ್ನಪ್ಪಿದೆ ಎಂದು ನಾಟಕವಾಡಿದ್ದ 24 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿದ್ದಾರೆ. ಮಿಥುನ್ಗೌಡ (4) ಕೊಲೆಯಾದ ಮಗುವಾಗಿದ್ದು, ಚಾಮರಾಜನಗರ ಮೂಲದ ಚಂದ್ರಶೇಖರ್ ಮತ್ತು ಕಾವ್ಯಾ ತುಮಕೂರು ತಾಲೂಕಿನ ಸಿದ್ಧಲಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದರು.. ಕಾವ್ಯ ಮಂಡ್ಯ ಜಿಲ್ಲೆ, ಬೆಳ್ಳೂರು ಕ್ರಾಸ್ ಮೂಲದವಳಾಗಿದ್ದು, ಕಾವ್ಯಾಗೆ ಈಗಾಗಲೇ ಅಶೋಕ ಎಂಬುವರ ಜತೆ ಮದುವೆಯಾಗಿತ್ತು. ಪ್ರೆಗ್ನೆಂಟ್ ಇದ್ದಾಗಲೇ ಚಂದ್ರಶೇಖರ್ ಜೊತೆ ಓಡಿ ಬಂದಿದ್ದ ಕಾವ್ಯ, ಬಳಿಕ ಮಿಥುನ್ ಗೌಡಗೆ ಜನ್ಮ ನೀಡಿದ್ದಳು. ನಂತರ ಮಗುವಿನ ವಿಚಾರವಾಗಿ ಈ ಜೋಡಿ ಮಧ್ಯೆ ಜಗಳವಾಗುತ್ತಿತ್ತು. ಮಗುವಿನ ವಿಷಯವಾಗಿ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಮಾರ್ಚ್ 20ರಂದು, ಕಾವ್ಯ ಕೆಲಸಕ್ಕೆ ಹೋದ ಸಮಯದಲ್ಲಿ ಚಂದ್ರಶೇಖರ್ ಮಗುವಿಗೆ (ಮಿಥುನ್ ಗೌಡ) ಹಲ್ಲೆ ನಡೆಸಿದ್ದ. ಇದರಿಂದ, ತೀವ್ರ ಗಾಯಗೊಂಡ ಮಿಥುನ್ ಪ್ರಜ್ಞೆ ತಪ್ಪಿಬಿದ್ದಿದ್ದ. ಇದನ್ನು ಮುಚ್ಚಿಹಾಕಲು, ಮಗುವಿಗೆ ಹಾವು ಕಚ್ಚಿದೆ ಎಂದು…
ನಮಗೆಲ್ಲರಿಗೂ ಟೀಮ್ ಇಂಡಿಯಾ ಕ್ರಿಕೆಟಿಗ ಮತ್ತು ನಮ್ಮ ಹೈದರಾಬಾದ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಬಗ್ಗೆ ತಿಳಿದಿದೆ. ಅವರು ಭಾರತೀಯ ತಂಡದಲ್ಲಿ ಅತ್ಯಂತ ಅರ್ಹ ಬ್ಯಾಚುಲರ್. ಪ್ರಸ್ತುತ ಕ್ರಿಕೆಟ್ ಮೇಲೆ ಗಮನ ಕೇಂದ್ರೀಕರಿಸಿದ್ದರೂ, ಅವರು ಶೀಘ್ರದಲ್ಲೇ ಮನೆಮಾತಾಗುವ ಲಕ್ಷಣಗಳು ಕಂಡುಬರುತ್ತಿವೆ. ಒಳ್ಳೆಯ ಹುಡುಗಿಯನ್ನು ನೋಡಿದ ನಂತರ ಮನೆಯಲ್ಲಿರುವವರು ಮನೋನನ್ನು ಮದುವೆಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಸಿರಾಜ್ ಭಾಯ್ ಈಗಾಗಲೇ ಒಬ್ಬ ಹುಡುಗಿಯನ್ನು ಪ್ರೀತಿಸುತ್ತಿರುವಂತೆ ತೋರುತ್ತದೆ. ಆ ಹುಡುಗಿ ಸಾಮಾನ್ಯ ಹುಡುಗಿಯಲ್ಲ.. ವಿಶ್ವಾದ್ಯಂತ ಮನ್ನಣೆ ಪಡೆದ ಗ್ಲಾಮರ್ ಹುಡುಗಿ. ಸಿರಾಜ್ ಪ್ರಸ್ತುತ ಐಪಿಎಲ್ನಲ್ಲಿ ಬ್ಯುಸಿಯಾಗಿರುವುದು ತಿಳಿದಿದೆ. ಮಿಯಾ ಭಾಯ್ ಈ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿದ್ದಾರೆ. https://ainkannada.com/if-a-cat-of-this-color-comes-to-your-house-it-is-a-sign-of-good-luck/ ಆದರೆ.. ಇತ್ತೀಚೆಗೆ ಸಿರಾಜ್ ಇನ್ಸ್ಟಾಗ್ರಾಮ್ನಲ್ಲಿ ಒಬ್ಬ ಹುಡುಗಿಯ ಫೋಟೋವನ್ನು ಲೈಕ್ ಮಾಡಿದ್ದಾರೆ. ಸಾಮಾನ್ಯವಾಗಿ, ಕ್ರಿಕೆಟಿಗರು ಎಷ್ಟೇ ಸಣ್ಣ ಕೆಲಸ ಮಾಡಿದರೂ ಅದು ಹೈಲೈಟ್ ಆಗುತ್ತದೆ ಮತ್ತು ತಕ್ಷಣವೇ ನೆಟಿಜನ್ಗಳ ಗಮನ ಸೆಳೆಯುತ್ತದೆ. ಈಗ ಸಿರಾಜ್ ಒಬ್ಬ ಸುಂದರ ಹುಡುಗಿಯ ಫೋಟೋವನ್ನು ಲೈಕ್ ಮಾಡಿದ್ದು ಕೂಡ…
ದೇಶದಲ್ಲಿ ಆದಾಯ ತೆರಿಗೆದಾರರು ಈಗ ತೆರಿಗೆ ಉಳಿಸಲು ಧಾವಿಸುತ್ತಾರೆ. ಆದಾಯ ತೆರಿಗೆ ಉಳಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ತೆರಿಗೆ ಉಳಿಸಲು ಕೆಲವು ಉತ್ತಮ ಮಾರ್ಗಗಳಿವೆ. ಇದು ತೆರಿಗೆಗಳನ್ನು ಉಳಿಸುವುದಲ್ಲದೆ ಹೂಡಿಕೆಗಳನ್ನು ಹೆಚ್ಚಿಸುತ್ತದೆ. ಇದಕ್ಕಾಗಿ ಮಾರ್ಚ್ 31 ರೊಳಗೆ ಹೂಡಿಕೆ ಮಾಡಬೇಕು. 2024-25ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ನಿಯಮಗಳ ಸೆಕ್ಷನ್ 80C ಅಡಿಯಲ್ಲಿ ನೀವು ವಿನಾಯಿತಿ ಪಡೆಯುತ್ತೀರಿ. ಈ ವಿನಾಯಿತಿ ರೂ. 1.5 ಲಕ್ಷದವರೆಗೆ. ಹಳೆಯ ಆದಾಯ ತೆರಿಗೆ ವ್ಯವಸ್ಥೆಯನ್ನು ಒಪ್ಪಿಕೊಳ್ಳುವವರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದೆ. https://ainkannada.com/dont-make-these-mistakes-even-when-youre-stuck-at-home-these-will-affect-your-life/ ತೆರಿಗೆ ಉಳಿಸಲು ನೀವು ಬ್ಯಾಂಕಿನಲ್ಲಿ 5 ವರ್ಷಗಳ ತೆರಿಗೆ ಉಳಿತಾಯ ಬ್ಯಾಂಕ್ ಠೇವಣಿ ಕೂಡ ಮಾಡಬಹುದು. ನೀವು ಇದರಲ್ಲಿ 5 ವರ್ಷಗಳ ಕಾಲ ಹಣವನ್ನು ಹೂಡಿಕೆ ಮಾಡಬಹುದು. ಆದಾಗ್ಯೂ, ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ನಂತರ ಐದು ವರ್ಷಗಳವರೆಗೆ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ. ತೆರಿಗೆ ಉಳಿಸುವ ಮಾರ್ಗಗಳು ಯಾವುವು? ಸುಕನ್ಯಾ ಸಮೃದ್ಧಿ ಯೋಜನೆ: ಸುಕನ್ಯಾ ಸಮೃದ್ಧಿ ಯೋಜನೆ (SSY) ಆದಾಯ ತೆರಿಗೆ…