Author: Author AIN

ಮಂಗಳೂರು: MV ವ್ಯಾನ್ ಹೈ 503 ಸಿಂಗಾಪುರ ಕಂಟೇನರ್ ಹಡಗಿನಲ್ಲಿ ಕೇರಳ ಕರಾವಳಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರಲ್ಲಿದ್ದ 22 ಸಿಬ್ಬಂದಿಗಳಲ್ಲಿ 18 ಜನರನ್ನು ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ರಕ್ಷಿಸಿದೆ. ಅವರನ್ನು ಭಾರತೀಯ ನೌಕಾಪಡೆಯ ಹಡಗು INS ಸೂರತ್ ಮಂಗಳೂರು ಬಂದರಿಗೆ ಕರೆದೊಯ್ದಿದೆ. 18 ಜನರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ 16 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕುಂಟಿಕಾನದ AJ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಕ್ಷಣಾ ಸಚಿವಾಲಯದ ಮೂಲಗಳ ಪ್ರಕಾರ, ಸೋಮವಾರ ಬೆಳಿಗ್ಗೆ 9.20 ಕ್ಕೆ ಕಣ್ಣೂರು ಜಿಲ್ಲೆಯ ಅಜಿಕ್ಕಲ್ ಬಂದರಿನ ಬಳಿ ಕಂಟೇನರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ಹಡಗಿನಲ್ಲಿದ್ದ 22 ಸಿಬ್ಬಂದಿಗಳಲ್ಲಿ 18 ಮಂದಿ ಸಮುದ್ರಕ್ಕೆ ಹಾರಿದ್ದಾರೆ. ಅವರನ್ನು ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ರಕ್ಷಿಸಿದೆ. ಅವರನ್ನು INS ಸೂರತ್‌ನಲ್ಲಿರುವ ಮಂಗಳೂರು ಬಂದರಿಗೆ ಕರೆದೊಯ್ಯಲಾಗುತ್ತಿದೆ. ಇನ್ನೂ ನಾಲ್ವರು ಕಾಣೆಯಾಗಿದ್ದಾರೆ. ಹಡಗಿನಲ್ಲಿರುವ ಕಂಟೇನರ್‌ಗಳು ಸುಡುವ ಘನ, ದ್ರವ…

Read More

ಬೆಂಗಳೂರು: ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಸಂತಸದಲ್ಲಿ, ಆರ್ಸಿಬಿ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ಭವ್ಯವಾದ ಗೆಲುವಿನ ರ್ಯಾಲಿಯನ್ನು ಆಯೋಜಿಸಿತು. ಆದರೆ, ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರಿಂದ ಕಾಲ್ತುಗಳಿತ ಉಂಟಾಗಿ, 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತಕರ ಘಟನೆ ದೇಶಾದ್ಯಂತ ತೀವ್ರ ಆಘಾತವನ್ನುಂಟು ಮಾಡಿತ್ತು. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತಂಡ ಸ್ಪೋಟಕ ಮಾಹಿತಿ ಕಲೆ ಹಾಕಿದೆ. https://www.facebook.com/ainkannada/videos/1029341255990387 ಕಾಲ್ತುಳಿತ ಆಗ್ತಿದ್ರೂ ಕೆಎಸ್ ಸಿಎ ಸಿಬ್ಬಂದಿಯಿಂದ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಕೆಎಸ್ ಸಿಎ ಮುಖ್ಯಸ್ಥರು ಸ್ಟೇಡಿಯಂ ಒಳಗೆ ಕ್ಲಬ್ ನಲ್ಲಿ ಪಾರ್ಟಿ ಮಾಡ್ತಿದ್ರಾ ಎಂಬ ಪ್ರಶ್ನೆ ಮೂಡಿದೆ. ಸಿಐಡಿ ತಂಡ ಪ್ರತ್ಯಕ್ಷ ದರ್ಶಿಗಳಿಂದ ಮಾಹಿತಿ ಕಲೆ ಹಾಕಿದ್ದು, ಸಿಸಿಟಿವಿ, ಮೊಬೈಲ್ ವೀಡಿಯೋಗಳನ್ನ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ಕೆಎಸ್ಸಿಎ ಕಚೇರಿಗೆ ಭೇಟಿ ನೀಡಿ ತನಿಖಾ ತಂಡ ಮಾಹಿತಿ ಪಡೆದಿದ್ದು, ಈ ವೇಳೆ ಕೆಎಸ್ಸಿಎ, ಡಿಎನ್ ಎ ಸಿಬ್ಬಂದಿ ವಿಚಾರಣೆ ಮಾಡಿದ್ದಾರೆ ಎಂದು ತಿಳಿದು…

Read More

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮಾಡಿದ ಹೈಕೋರ್ಟ್, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ ನೀಡದೇ ಅರ್ಜಿಗಳ ವಿಚಾರಣೆಯನ್ನು ಜೂ.12 ಮಧ್ಯಾಹ್ನ 2.30ಕ್ಕೆ ಮುಂದೂಡಿದೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ಹೈಕೋರ್ಟ್ ನ್ಯಾಯಾಧೀಶರ ಮುಂದೆ ತನಿಖಾ ವರದಿ ಸಲ್ಲಿಕೆಗೆ ಎಜಿ ಸಮಯಾವಕಾಶ ಕೋರಿ ವಾದ ಮಂಡಿಸಿದ್ರು. ಜ್ಯುಡಿಷಿಯಲ್ ತನಿಖೆ ನಡೀತಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಆಗ್ತಿದೆ ಎಂದಿದ್ದಾರೆ. ಈ ವೇಳೆ ಪೀಠ, ಈಗ ಕೇಳಿದ್ದ ವರದಿ ಸಲ್ಲಿಕೆ ಮಾಡೋದಿಲ್ವಾ? ವರದಿ ಸಲ್ಲಿಸಲು ಏನು ಕಷ್ಟ ಎಂದು ಹಂಗಾಮಿ ಮುಖ್ಯ ನ್ಯಾ. ಕಾಮೇಶ್ವರ ರಾವ್ ಪ್ರಶ್ನೆ ಮಾಡಿದ್ದಾರೆ. ಕಾಲ್ತುಳಿತ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದ್ದು, ಸಿಐಡಿ ತನಿಖೆ ಆರಂಭವಾಗಿದೆ ಎಂದ ಎಜಿ, ತನಿಖೆ ಮುಗಿಯಲು ಒಂದು ತಿಂಗಳು ಬೇಕು. ಕೆಲ ಆರೋಪಿಗಳನ್ನ ಬಂಧಿಸಿ‌ ತನಿಖೆ ನಡೆಸಲಾಗುತ್ತಿದೆ…

Read More

ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಮತ್ತೊಬ್ಬ ಸ್ಟಾರ್ ಆಟಗಾರ ನಿವೃತ್ತಿ ಘೋಷಿಸಿದ್ದಾರೆ. ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಮೂರು ಸ್ವರೂಪಗಳಿಂದಲೂ ನಿವೃತ್ತಿ ಘೋಷಿಸಿದ್ದಾರೆ. 29 ನೇ ವಯಸ್ಸಿನಲ್ಲಿ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಜಗತ್ತಿಗೆ ಆಘಾತ ನೀಡಿದರು. ವೆಸ್ಟ್ ಇಂಡೀಸ್ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ನಿಕೋಲಸ್ ಪೂರನ್ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಆದಾಗ್ಯೂ, ಅವರು ಫ್ರಾಂಚೈಸ್ ಕ್ರಿಕೆಟ್ ನಲ್ಲಿ ಮುಂದುವರಿಯುವುದಾಗಿ ಬಹಿರಂಗಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಹೆನ್ರಿಕ್ ಕ್ಲಾಸೆನ್ ನಿವೃತ್ತಿ ಘೋಷಿಸಿದ ಕೆಲವೇ ದಿನಗಳಲ್ಲಿ ಪೂರನ್ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರೆ ಎಂಬುದು ಗಮನಾರ್ಹ. ಪೂರನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಇದನ್ನು ಪೋಸ್ಟ್ ಮಾಡಿದ್ದಾರೆ. ಇದು ತುಂಬಾ ಕಷ್ಟಕರವಾದ ನಿರ್ಧಾರ ಎಂದು ಅವರು ಬರೆದಿದ್ದಾರೆ, ಆದರೆ ಅವರು ಸಾಕಷ್ಟು ಯೋಚಿಸಿದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ‘ಬಹಳಷ್ಟು ಯೋಚಿಸಿದ ನಂತರ, ನಾನು ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ನಾವು ತುಂಬಾ ಪ್ರೀತಿಸುವ ಈ ಆಟ…

Read More

ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಸರಣಿ ಡ್ರೋನ್ ದಾಳಿ ಮುಂದುವರೆದಿದೆ. ಉಕ್ರೇನ್ ವಿರುದ್ಧ ರಷ್ಯಾ 479 ಡ್ರೋನ್‌ಗಳೊಂದಿಗೆ ಪ್ರತೀಕಾರದ ದಾಳಿ ನಡೆಸಿದ್ದು, ಅದು ಅನಿರೀಕ್ಷಿತವಾಗಿ ತನ್ನ ವಾಯುಪಡೆಯ ನೆಲೆಗಳನ್ನು ಹೊಡೆದಿದೆ. ಇದರೊಂದಿಗೆ, ಕೀವ್ ಮಾಸ್ಕೋ ವಿರುದ್ಧವೂ ಪ್ರತಿದಾಳಿ ನಡೆಸಿದೆ. ಈ ಸಂದರ್ಭದಲ್ಲಿ, ಮಾಸ್ಕೋದಲ್ಲಿ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಾಸ್ಕೋಗೆ ಸೇವೆ ಸಲ್ಲಿಸುವ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ರಷ್ಯಾದ ನಾಗರಿಕ ವಿಮಾನಯಾನ ಕಂಪನಿ ರೊಸಾವಿಯಾಟ್ಸಿಯಾ ತಿಳಿಸಿದೆ. ಉಕ್ರೇನ್ ರಷ್ಯಾದ ಮೇಲೆ ಡ್ರೋನ್‌ಗಳೊಂದಿಗೆ ದಾಳಿ ಮಾಡುತ್ತಿದೆ ಎಂದು ರಕ್ಷಣಾ ಸಚಿವಾಲಯ ಘೋಷಿಸಿದ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ಸೋಮವಾರ ಮಧ್ಯರಾತ್ರಿ ಕೇವಲ ಎರಡು ಗಂಟೆಗಳಲ್ಲಿ ರಷ್ಯಾದ ವಾಯುಪ್ರದೇಶದಲ್ಲಿ 76 ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಲಾಯಿತು ಎಂದು ಕ್ರೆಮ್ಲಿನ್ ಬಹಿರಂಗಪಡಿಸಿದೆ. ಉಕ್ರೇನ್ ಅನಿರೀಕ್ಷಿತವಾಗಿ ರಷ್ಯಾದ ವಾಯುಪಡೆಯ ನೆಲೆಗಳನ್ನು ಹೊಡೆದುರುಳಿಸಿದೆ ಎಂದು ತಿಳಿದಿದೆ. ಇದರೊಂದಿಗೆ, ರಷ್ಯಾ ತನ್ನ ಪ್ರತೀಕಾರದ ದಾಳಿಯನ್ನು ತೀವ್ರಗೊಳಿಸಿದೆ.…

Read More

ಬೆಂಗಳೂರು: ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ವೈ.ವಿಜಯೇಂದ್ರ ಬರೆದ ಪತ್ರದಲ್ಲೇನಿದೆ? ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ. ಕುಟುಂಬ ಬೆಳಗಬೇಕಿದ್ದ. ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ ಎಂದಿದ್ದಾರೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ, ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ. ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ…

Read More

ವಾಷಿಂಗ್ಟನ್: ಅಮೆರಿಕದಲ್ಲಿ ಮತ್ತೊಬ್ಬ ಚೀನಾದ ಸಂಶೋಧಕನನ್ನು ಬಂಧಿಸಲಾಗಿದೆ. ವುಹಾನ್ ಪ್ರಯೋಗಾಲಯದಲ್ಲಿ ಕೆಲಸ ಮಾಡುವ ಸಂಶೋಧಕ ಜೈವಿಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಕೇವಲ ಒಂದು ವಾರದಲ್ಲಿ ಇದು ಎರಡನೇ ಘಟನೆಯಾಗಿದೆ. ಪಿಎಚ್‌ಡಿ ವಿದ್ಯಾರ್ಥಿನಿ ಚೆಂಗ್‌ಜಾನ್ ಹಾನ್ ಅವರನ್ನು ಡೆಟ್ರಾಯಿಟ್‌ನಲ್ಲಿ ಎಫ್‌ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ ಅವರು ನಾಲ್ಕು ರೀತಿಯ ಜೈವಿಕ ವಸ್ತುಗಳನ್ನು ಪಾರ್ಸಲ್ ಮಾಡಿದ್ದಾರೆ ಎಂದು ನಂಬಲಾಗಿದೆ. ಜೈವಿಕ ವಸ್ತುಗಳನ್ನು ತೆಗೆದುಕೊಂಡ ವ್ಯಕ್ತಿ ಸುಳ್ಳು ಹೇಳುತ್ತಿದ್ದಾರೆ ಎಂದು ಎಫ್‌ಬಿಐ ಮುಖ್ಯಸ್ಥ ಕಾಶ್ ಪಟೇಲ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಕಳ್ಳಸಾಗಣೆಗಾಗಿ ಪ್ರಕರಣ ದಾಖಲಿಸಲಾದ ಮೂರನೇ ವ್ಯಕ್ತಿ ಅವರು. ಜೂನ್ 4 ರಂದು ಚೀನಾದ ದಂಪತಿಯನ್ನು ಬಂಧಿಸಲಾಗಿದೆ ಎಂದು ತಿಳಿದಿದೆ. ಅವರು ಅಪಾಯಕಾರಿ ಜೈವಿಕ ರೋಗಕಾರಕವನ್ನು ಕಳ್ಳಸಾಗಣೆ ಮಾಡಿದ್ದಾರೆ. ಅದನ್ನು ಕೃಷಿ-ಭಯೋತ್ಪಾದನಾ ಆಯುಧವಾಗಿ ಬಳಸುವ ಸಾಧ್ಯತೆಯಿದೆ. ಕೋವಿಡ್ ವೈರಸ್ ವುಹಾನ್‌ನಿಂದ ಹರಡಿದೆ ಎಂದು ತಿಳಿದಿದೆ. ಚೀನಾದ ಸಂಶೋಧಕಿಯೊಬ್ಬರು ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ನಾಲ್ಕು ಜನರಿಗೆ ನಾಲ್ಕು ಪಾರ್ಸೆಲ್‌ಗಳನ್ನು ಕಳುಹಿಸಿದ್ದಾರೆ…

Read More

ಬೆಂಗಳೂರು: ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಕಿಡಿಕಾರಿರುವ ಅವರು, ಸಿಎಂ ಹೇಳಿಕೆ ಖಂಡಿಸಿದ್ದಾರೆ. ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು. ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ. https://ainkannada.com/to-flatten-your-fat-stomach-mix-2-spoons-of-this-in-a-glass-of-water-then-see-the-miracle/ 11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದರು. ಆದರೂ ಕೂಡ ಮುಖ್ಯಮಂತ್ರಿಗಳ ಪ್ರತಿಕ್ರಿಯೆ? ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ. ಕ್ರೀಡಾಂಗಣವು ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಇದು ನಿಮ್ಮ ರಾಜ್ಯ, ನಿಮ್ಮ ನಗರ, ನಿಮ್ಮ ಜನರು. ನೀವು ರಾಜ್ಯವನ್ನು ಮುನ್ನಡೆಸಲು ಆಯ್ಕೆಯಾದವರು, ಕಾರ್ಯಕ್ರಮದಲ್ಲಿ ಅತಿಥಿಯಂತೆ ವರ್ತಿಸುವುದನ್ನು ಮೊದಲು ನಿಲ್ಲಿಸಿ. ಫೋಟೋ-ಶೋಗಳಿಗಾಗಿ ನಿಮ್ಮನ್ನು ನೇಮಿಸಲಾಗಿಲ್ಲ. ಜನರ ಜೀವಗಳನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ನೀವು ಮಾತ್ರ ಜನರ ಜೀವಗಳನ್ನು ರಕ್ಷಿಸಲು ವಿಫಲರಾಗಿದ್ದಿರಿ ಎಂದು…

Read More

ಮಂಡ್ಯ : ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಜಮಾವಣೆಗೊಂಡ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಉಳಿವು ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/is-your-laptop-running-out-of-charge-quickly-if-so-do-this/ ಪ್ರತಿಭಟನೆ ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಮದ್ದೂರು ಪುರಸಭೆಯನ್ನು ರಾಜ್ಯ ಸರ್ಕಾರವು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆದರೆ, ಸೋಮನಹಳ್ಳಿ ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು. ಗ್ರಾಮ ಪಂಚಾಯಿತಿಯನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಅದಲ್ಲದೇ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲೂ ಸರ್ವ ಸದಸ್ಯರು…

Read More

ನವದೆಹಲಿ: “ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಈ ಮಾದರಿ ಅಳವಡಿಸುವ ಬಗ್ಗೆ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿ ಮುನಿಸಿಪಲ್ ಕಾರ್ಪೋರೇಷನ್ ನ (MCD) ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಇದುವರೆಗೂ ಪರಿಶೀಲನೆ ಮಾಡಿರುವ ಕಸ ವಿಲೇವಾರಿ ಕೇಂದ್ರಗಳ ಪೈಕಿ ಇದು ಅತ್ಯಾಧುನಿಕ ತಂತ್ರಜ್ಞಾನ ಹೊಂದಿದೆ. ಅತಿ ಕಡಿಮೆ ಪ್ರದೇಶದಲ್ಲಿ ಅತ್ಯುತ್ತಮವಾಗಿ ಕಸ ವಿಲೇವಾರಿ ಕೇಂದ್ರವನ್ನು ನಿರ್ವಹಿಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಈ ಹಿಂದೆ ಪ್ರಯೋಗಿಸಿದ್ದ 10ರಿಂದ 15 ಮೆ.ವ್ಯಾಟ್ ವಿದ್ಯುತ್ ಉತ್ಪಾದನಾ ಕೇಂದ್ರಗಳು ವಿಫಲವಾಗಿದ್ದವು. ಆದರೆ ಇಲ್ಲಿ 25 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ” ಎಂದು ವಿವರಿಸಿದರು. https://ainkannada.com/is-your-laptop-running-out-of-charge-quickly-if-so-do-this/ “ಇಂತಹ ಅತ್ಯುತ್ತಮ ಕೇಂದ್ರವನ್ನು ಅಳವಡಿಸಿರುವ ಜಿಂದಾಲ್ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ಇಲ್ಲಿ ಅನಿಲ ಉತ್ಪಾದನೆಯನ್ನೂ ಮಾಡಲಾಗುತ್ತಿದೆ. ನಾನು ಈ ವಿಚಾರವಾಗಿ…

Read More