Author: Author AIN

ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸೋದರ 5 ಲಕ್ಷ ರೂ.ಸುಪಾರಿ ನೀಡಿದ್ದು ಪೊಲೀಸ್ ತನಿಖೆಯಿಂದ ಸಾಬೀತಾಗಿದೆ ಎಂದು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಶಾಸಕರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫಾಜಿಲ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿತ್ತು. ಈ ಪರಿಹಾರದ ಹಣವನ್ನು ಫಾಜಿಲ್ ಕುಟುಂಬ ಕೊಲೆಗೆ ಬಳಸಿಕೊಂಡಿದೆ. ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ಸೋದರ 5 ಲಕ್ಷ ರೂ.ಸುಪಾರಿ ನೀಡಿದ್ದು ಪೊಲೀಸ್ ತನಿಖೆಯಿಂದ ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಸರ್ಕಾರ ನೀಡಿದ ಈ ಪರಿಹಾರ ಇನ್ನೆಷ್ಟು ಕೊಲೆಗೆ ಬಳಕೆಯಾಗಬೇಕು? ಮೊದಲು ಬಡ್ಡಿ ಸಹಿತ ಈ ಹಣ ವಸೂಲಿಯಾಗಲಿ. ಸರ್ಕಾರ ರಚಿಸುವ ಆ್ಯಂಟಿ ಕಮ್ಯುನಲ್ ಫೋರ್ಸ್ (ಎಸಿಎಫ್) ಅಸ್ತಿತ್ವಕ್ಕೆ ಬಂದ ತಕ್ಷಣ ಮೊದಲು ಮಾಡಬೇಕಾದ ಕೆಲಸ ಇದಾಗಲಿ. ಇಲ್ಲವಾದರೆ ಎಸಿಎಫ್ ರಚನೆಯ ಉದ್ದೇಶ ಹಿಂದುತ್ವದ ದಮನ ಎಂಬುದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ…

Read More

ಬೆಂಗಳೂರು: ಫಾಜಿಲ್ ಕುಟುಂಬದ ಸಮರ್ಥನೆ ಮಾಡಲು ಹೋಗಿ ಖಾದರ್ ಅವರು ಬೆತ್ತಲಾಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಸುಹಾಸ್ ಕೊಲೆಯಲ್ಲಿ ಫಾಜಿಲ್ ಕುಟುಂಬದ ಪಾತ್ರ ಇಲ್ಲ ಎಂಬ ಸ್ಪೀಕರ್ ಹೇಳಿಕೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿ, ಫಾಜಿಲ್ ಕುಟುಂಬದ ಸಮರ್ಥನೆ ಮಾಡಲು ಹೋಗಿ ಖಾದರ್ ಅವರು ಬೆತ್ತಲಾಗಿದ್ದಾರೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಕಮಿಷನರ್ ಅವರೇ ಸುದ್ದಿಗೋಷ್ಠಿ ಮಾಡಿ ಫಾಜಿಲ್ ಸಹೋದರ ಆದಿಲ್ ಸುಪಾರಿ ಕೊಟ್ಟ ವಿಚಾರ ಹೇಳಿದ್ದಾರೆ. ಸ್ಪೀಕರ್ ಖಾದರ್ ಅವರಿಗೆ ಮಂಗಳೂರು ಕಮಿಷನರ್ ಅವರೇ ಕಪಾಳಮೋಕ್ಷ ಮಾಡಿದ್ದಾರೆ. ಖಾದರ್ ಈಗ ತಪ್ಪಿತಸ್ಥ ಸ್ಥಾನದಲ್ಲಿದ್ದಾರೆ. ಪ್ರಕರಣ ಮುಚ್ಚಿ ಹಾಕಲು ಖಾದರ್ ಪ್ರಯತ್ನ ಪಟ್ಟಿದ್ದಾರೆ. ಅವರಿಗೆ ಸತ್ಯ ಏನು ಅಂತ ಗೊತ್ತಿದೆ. ಸರ್ಕಾರವು ಕೂಡಲೇ ಖಾದರ್ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

Read More

ಐಪಿಎಲ್ 2025 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಇಂದಿನ ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಕ್ಕೂ ಮುನ್ನವೇ ರಾಜಸ್ಥಾನ ರಾಯಲ್ಸ್ ತಂಡ ಟೂರ್ನಿಯಿಂದ ನಿರ್ಗಮಿಸಿತು. ಈ ಕಾರಣದಿಂದಾಗಿ, ಈ ಪಂದ್ಯವು ರಾಜಸ್ಥಾನಕ್ಕೆ ಈಗ ಹೆಚ್ಚಿನ ಮಹತ್ವವನ್ನು ಹೊಂದಿಲ್ಲ. ಈಗ ರಾಜಸ್ಥಾನ ತಂಡದ ಏಕೈಕ ಗುರಿ ತಮ್ಮ ಗೌರವವನ್ನು ರಕ್ಷಿಸಿಕೊಳ್ಳುವುದು. ಆದರೆ, ಈ ಪಂದ್ಯ ಕೆಕೆಆರ್ ತಂಡಕ್ಕೆ ಖಂಡಿತವಾಗಿಯೂ ನಿರ್ಣಾಯಕ. ಕೆಕೆಆರ್ ಪ್ಲೇಆಫ್‌ಗೆ ತಲುಪಬೇಕಾದರೆ, ಈ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಇದುವರೆಗೆ 10 ಪಂದ್ಯಗಳನ್ನು ಆಡಿದ್ದು, 4 ರಲ್ಲಿ ಗೆದ್ದು 5 ರಲ್ಲಿ ಸೋತಿದೆ. ಮಳೆಯಿಂದಾಗಿ ಒಂದು ಪಂದ್ಯದ ಫಲಿತಾಂಶ ನಿರ್ಧಾರವಾಗಿರಲಿಲ್ಲ. ಇದರೊಂದಿಗೆ ತಂಡವು ಪ್ರಸ್ತುತ 9 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ರಾಜಸ್ಥಾನ ರಾಯಲ್ಸ್ ತಂಡವು ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 3…

Read More

ಬಾಗಲಕೊಟೆ: ರಾಜಕಾರಣ, ಪ್ರಕೃತಿ ವಿಕೋಪ, ರಾಜ್ಯ ರಾಜಕಾರಣ, ದೇಶದ ರಾಜಕಾರಣ, ದೇಶ ವಿದೇಶದ ಸಂಘರ್ಷಗಳು, ಬಾಂಬ್ ಸ್ಫೋಟ ಇತ್ಯಾದಿಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿಯುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಗೌರಿಶಂಕರ ಶಿಖರ ಶಿವಾ ಶಿವಾ ಎಂದೀತು. ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಬಾಗಲಕೊಟೆಯಲ್ಲಿಂದು ಮಾತನಾಡಿರುವ ಕೋಡಿಮಠದ ಸ್ವಾಮೀಜಿ, ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದೆ. ಜಗತ್ತಿನ ಎರಡು ‌ಮೂರು ಜನ ಮಹಾನ್ ನಾಯಕರಿಗೆ ಅಪಮೃತ್ಯುವಿದೆ. ಕೊಲ್ಲಬಹುದು ಅಥವಾ ಅಪಘಾತದಲ್ಲಿ ಅವರು ‌ಸಾಯಬಹುದು ಎಂದು ಆಘಾತಕಾರಿ ಭವಿಷ್ಯ ಹೇಳಿದ್ದಾರೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ರಾಜ್ಯ ರಾಜಕಾರಣದಲ್ಲಿನ ಬದಲಾವಣೆ ಬಗ್ಗೆ ಮಾರ್ಮಿಕ ಭವಿಷ್ಯ ನುಡಿದಿದ್ದಾರೆ. ಭವಿಷ್ಯದಲ್ಲಿ ಎರಡು ಒಂದು ಯುಗಾದಿ ಭವಿಷ್ಯ,ಇನ್ನೊಂದು ಸಂಕ್ರಾಂತಿ ಭವಿಷ್ಯ. ಯುಗಾ ಭವಿಷ್ಯ ಪ್ರಕೃತಿಗೆ…

Read More

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪ್ರಸ್ತುತ ಪರಿಸ್ಥಿತಿ ಹೇಗಿದೆ ಎಂದರೆ, ಯಾವುದೇ ಕ್ಷಣದಲ್ಲಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಬಹುದು ಅಥವಾ ಎರಡೂ ದೇಶಗಳ ನಡುವೆ ಯುದ್ಧ ನಡೆಯಬಹುದು. ಪ್ರಧಾನಿ ಮೋದಿ ಈಗಾಗಲೇ ಹಲವಾರು ಕಠಿಣ ಎಚ್ಚರಿಕೆಗಳನ್ನು ನೀಡಿದ್ದು, 26 ಭಾರತೀಯ ನಾಗರಿಕರ ಸಾವಿಗೆ ಕಾರಣರಾದ ಭಯೋತ್ಪಾದಕರ ಮೇಲೆ ನಾವು ಸೇಡು ತೀರಿಸಿಕೊಳ್ಳುತ್ತೇವೆ ಮತ್ತು ಅವರ ಹಿಂದಿರುವವರನ್ನು ಸಹ ಬಿಡುತ್ತೇವೆ ಎಂದು ಹೇಳಿದ್ದಾರೆ. ಭಾರತ ಸರ್ಕಾರವು ಈಗಾಗಲೇ ಪಾಕಿಸ್ತಾನದ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದು, ಸಿಂಧೂ ನದಿ ನೀರಿನ ಹರಿವನ್ನು ನಿಲ್ಲಿಸುವುದು, ಪಾಕಿಸ್ತಾನಿ ನಾಗರಿಕರಿಗೆ ವೀಸಾ ರದ್ದುಗೊಳಿಸುವುದು, ಗಡಿಗಳನ್ನು ಮುಚ್ಚುವುದು ಮತ್ತು ಆಮದುಗಳನ್ನು ನಿಲ್ಲಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಮತ್ತೊಂದೆಡೆ, ಪಾಕಿಸ್ತಾನವು ಭಾರತದ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸಿದೆ. ಎರಡೂ ದೇಶಗಳು ತಮ್ಮ ಗಡಿಗಳಲ್ಲಿ ಭಾರೀ ಸೈನಿಕರನ್ನು ನಿಯೋಜಿಸುವ ಮೂಲಕ ಮತ್ತು ಮಿಲಿಟರಿ…

Read More

ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ ಪೊಲೀಸರು, ಎಂಟು ಮಂದಿಯ ಹೆಡೆಮುರಿ ಕಟ್ಟಿದ್ದಾರೆ. ಇದರ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ‘5/5/2025 ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ’ ಮಾಡುವುದಾಗಿ ಪೋಸ್ಟ್ ಹರಿಬಿಡಲಾಗಿದೆ. ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು. ಎಸ್‌ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲು. 2017ರ ಜೂನ್ 21 ರಂದು ಅಶ್ರಫ್ ಹತ್ಯೆಯಾಗಿತ್ತು. ಬಂಟ್ವಾಳದ ಬೆಂಜನಪದವು ಎಂಬಲ್ಲಿ ಅಶ್ರಫ್ ಬರ್ಬರವಾಗಿ ಹತ್ಯೆಗೀಡಾಗಿದ್ದ. ಎಸ್‌ಡಿಪಿಐನಲ್ಲಿ ಅಶ್ರಫ್ ಮುಂಚೂಣಿಯಲ್ಲಿದ್ದ. ಆತನ ಹತ್ಯೆ ಬಳಿಕ…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದಾಗ ಸೇನಾ ವಾಹನವೊಂದು ಕಣಿವೆಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಯೋಧರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡರು. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚಿನ ಉದ್ವಿಗ್ನತೆ ಇರುವ ನಡುವೆ ಸೇನೆಯು ದಾಳಿಗೆ ಸಿದ್ಧತೆ ನಡೆಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ. ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.

Read More

‘ಹಿಟ್ಲರ್ ಕಲ್ಯಾಣ’ ಸೀರಿಯಲ್ ಖ್ಯಾತಿಯ ಶೌರ್ಯ ಶಶಾಂಕ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಸಾಂಪ್ರದಾಯಿಕವಾಗಿ ನಟನ ನಿಶ್ಚಿತಾರ್ಥ ಕಾರ್ಯಕ್ರಮ ಜರುಗಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ದಿಶಾ ಜಾದವ್ ಮತ್ತು ಶೌರ್ಯ ಶಶಾಂಕ್ ಉಂಗುರ ಬದಲಿಸಿಕೊಂಡಿದ್ದಾರೆ. ಇದೀಗ ಈ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಬೆಂಗಳೂರಿನ ಹುಡುಗಿ ದಿಶಾ ಜೊತೆ ಎಂಗೇಜ್ ಆಗಿರುವ ಶೌರ್ಯ ಸದ್ಯದಲ್ಲೇ ಮದುವೆ ದಿನಾಂಕದ ಬಗ್ಗೆ ರಿವೀಲ್ ಮಾಡಲಿದ್ದಾರೆ. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಅಂದಹಾಗೆ, ಪ್ರಸ್ತುತ ‘ಭಾಗ್ಯಲಕ್ಷ್ಮಿ’ ಸೀರಿಯಲ್‌ನಲ್ಲಿ ಶೌರ್ಯ ನಟಿಸುತ್ತಿದ್ದಾರೆ. ಈ ಹಿಂದೆ ‘ಹಿಟ್ಲರ್ ಕಲ್ಯಾಣ’ ಸೀರಿಯಲ್‌ನಲ್ಲಿ ನೆಗೆಟಿವ್ ಪೊಲೀಸ್ ದೇವ್ ಪಾತ್ರದಲ್ಲಿ ನಟಿಸಿದ್ದರು.

Read More

ನೀವು ಎಂದಾದರೂ ಆಕಸ್ಮಿಕವಾಗಿ ನಿಮ್ಮ ಮೊಬೈಲ್‌ನಿಂದ ಎಲ್ಲಾ ಸಂಖ್ಯೆಗಳನ್ನು ಅಳಿಸಿದ್ದರೆ ಅಥವಾ ಹೊಸ ಫೋನ್ ಖರೀದಿಸಿದ ನಂತರ ನಿಮ್ಮ ಹಳೆಯ ಡೇಟಾವನ್ನು ಕಳೆದುಕೊಂಡಿದ್ದರೆ, ಭಯಪಡುವ ಅಗತ್ಯವಿಲ್ಲ. ಇಂದಿನ ಕಾಲದಲ್ಲಿ ತಂತ್ರಜ್ಞಾನ ಸಾಕಷ್ಟು ಮುಂದುವರೆದಿದೆ. ನಿಮ್ಮ ಹಳೆಯ ಸಂಪರ್ಕಗಳನ್ನು ನೀವು ಕೆಲವೇ ಹಂತಗಳಲ್ಲಿ ಮರುಪಡೆಯಬಹುದು. ಅದೂ ಯಾವುದೇ ಸೈಬರ್ ಕೆಫೆಗೆ ಹೋಗದೆ. ಆಂಡ್ರಾಯ್ಡ್ ಫೋನ್‌ನಲ್ಲಿ ಸಂಪರ್ಕಗಳನ್ನು ಮರುಪಡೆಯುವುದು ಹೇಗೆ ನೀವು ಆಂಡ್ರಾಯ್ಡ್ ಫೋನ್ ಹೊಂದಿದ್ದು, ನಿಮ್ಮ ಸಂಖ್ಯೆಗಳನ್ನು ಕಳೆದುಕೊಂಡಿದ್ದರೆ, ಮೊದಲು ನಿಮ್ಮ ಸಂಪರ್ಕಗಳು ನಿಮ್ಮ Google ಖಾತೆಯೊಂದಿಗೆ ನವೀಕರಿಸಲಾಗಿದೆಯೇ ಎಂದು ಪರಿಶೀಲಿಸಬೇಕು. ಹಾಗಿದ್ದಲ್ಲಿ, ಈ ಹಂತಗಳನ್ನು ಅನುಸರಿಸುವ ಮೂಲಕ ನೀವು ಅವುಗಳನ್ನು ಮರಳಿ ಪಡೆಯಬಹುದು. ನಿಮ್ಮ ಮೊಬೈಲ್ ಸೆಟ್ಟಿಂಗ್‌ಗಳಿಗೆ ಹೋಗಿ. ಅಲ್ಲಿಂದ, Google ವಿಭಾಗಕ್ಕೆ ಹೋಗಿ ಮತ್ತು ನಿಮ್ಮ Google ಖಾತೆಯನ್ನು ನಿರ್ವಹಿಸಿ ಮೇಲೆ ಟ್ಯಾಪ್ ಮಾಡಿ. ಈಗ ಜನರು ಮತ್ತು ಹಂಚಿಕೆ ಆಯ್ಕೆಯನ್ನು ತೆರೆಯಿರಿ ಮತ್ತು ಸಂಪರ್ಕಗಳಿಗೆ ಹೋಗಿ. ಇದಾದ ನಂತರ, ಯಾವುದೇ ಬ್ರೌಸರ್‌ಗೆ ಹೋಗಿ contacts.google.com ತೆರೆಯಿರಿ ಮತ್ತು ನಿಮ್ಮ…

Read More

ಹಾನಗಲ್ಲ : ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. https://ainkannada.com/has-hair-fall-increased-after-having-a-baby-if-so-be-sure-to-include-this-ingredient-in-your-diet/ ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗು ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ವಿಜಯನಗರ ಜಿಲ್ಲೆಯಲ್ಲಿ…

Read More