ಇರಾನ್ ಮೇಲೆ ನಡೆದ ದಾಳಿ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಆದರೆ ಈ ದಾಳಿಗೂ ಇಸ್ರೇಲ್ಗೂ ಇರುವ ನಂಟು ಸಾಬೀತಾಗಿಲ್ಲ ಎಂದು ಇರಾನ್ನ ವಿದೇಶ ಸಚಿವ ಹುಸೇನ್ ಅಮೀರಬ್ದೊಲ್ಲಾಹಿಯಾನ್ ಹೇಳಿದ್ದಾರೆ. ಡ್ರೋನ್ಗಳು ಇರಾನ್ನೊಳಗೆ ಹಾರಾಟ ನಡೆಸಿ ಕೆಲವು ನೂರು ಮೀಟರ್ ಸಾಗಿದ ನಂತರ ಅವುಗಳನ್ನು ಹೊಡೆದುರುಳಿಸಲಾಯಿತು ಎಂದು ಅವರು ಹೇಳಿದ್ದಾರೆ. ಅವು ನಮ್ಮ ಮಕ್ಕಳು ಆಡುವ ಆಟಿಕೆಗಳಂತಿದ್ದವು, ಡ್ರೋನ್ಗಳಲ್ಲ ಎಂದು ಅವರು ಹೇಳಿದರು. ದಾಳಿ ಕುರಿತು ಮಾಧ್ಯಮ ವರದಿಗಳು ನಿಖರವಾಗಿಲ್ಲ ಎಂದು ಅವರು ಹೇಳಿದರು. ಇಸ್ರೇಲ್ ಪ್ರತೀಕಾರದ ಕ್ರಮಕೈಗೊಂಡರೆ ಮತ್ತು ಇರಾನ್ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕಾರ್ಯಾಚರಿಸಿದರೆ ನಮ್ಮ ಮುಂದಿನ ಪ್ರತಿಕ್ರಿಯೆ ತಕ್ಷಣ ಮತ್ತು ಗರಿಷ್ಠ ಮಟ್ಟದ್ದಾಗಿರಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಇರಾನ್ ಮಾಧ್ಯಮ ಮತ್ತು ಕೆಲ ಅಧಿಕಾರಿಗಳ ಪ್ರಕಾರ ಕೆಲವೊಂದು ಸಣ್ಣ ಸಂಖ್ಯೆಯ ಸ್ಫೋಟಗಳು ಸಂಭವಿಸಿದ್ದು ವಾಯು ಪಡೆಗಳು ಕೇಂದ್ರ ಇರಾನ್ನ ಇಸ್ಫಾಹನ್ ಎಂಬಲ್ಲಿ ಮೂರು ಡ್ರೋನ್ಗಳನ್ನು ಹೊಡೆದುರುಳಿಸಿದ್ದರಿಂದ ಸಂಭವಿಸಿವೆ. ಈ ದಾಳಿ “ನುಸುಳುಕೋರರಿಂದ” ನಡೆದಿದೆ, ಇಸ್ರೇಲ್ನಿಂದ ಅಲ್ಲ ಎಂಬ ಅರ್ಥದಲ್ಲಿ ಕೆಲ…
Author: Author AIN
ಬ್ಲೂ ವೇಲ್ ಚಾಲೆಂಜ್ ಆನ್ಲೈನ್ ಆಟಕ್ಕೆ ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಬಲಿಯಾಗಿದ್ದಾನೆ. ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮಾರ್ಚ್ 8 ರಂದು ಶವವಾಗಿ ಪತ್ತೆಯಾಗಿದ್ದಾನೆ. ಬ್ರಿಸ್ಟಲ್ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿಯ ವಕ್ತಾರ ಗ್ರೆಗ್ ಮಿಲಿಯೊಟ್, ಇದು ಆತ್ಮಹತ್ಯೆ ಎಂದು ಹೇಳಿದ್ದು, ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ಆನ್ಲೈನ್ ಆಟ ಬ್ಲೂವೇಲ್ಗೆ ದಾಸನಾಗಿದ್ದ ಎನ್ನಲಾಗಿದೆ. ಆಟದ ಭಾಗವಾಗಿ ವಿದ್ಯಾರ್ಥಿ 2 ನಿಮಿಷಗಳ ಕಾಲ ಉಸಿರನ್ನು ಬಿಗಿಹಿಡಿದುಕೊಂಡಿದ್ದ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಗೇಮ್ನ್ನು ನಿಷೇಧಿಸಲು ಭಾರತ ಸರ್ಕಾರ ಮುಂದಾಗಿತ್ತು. ಬ್ಲೂ ವೇಲ್ ಗೇಮ್ (ಆತ್ಮಹತ್ಯೆ ಆಟ) ಆತ್ಮಹತ್ಯೆಗೆ ಪ್ರಚೋದನೆಯಾಗಿದೆ ಎಂದು ಐಟಿ ಸಚಿವಾಲಯವು 2017 ರಲ್ಲಿ ತಿಳಿಸಿತ್ತು.
ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತದ ಭೇಟಿ ಮುಂದೂಡಿರುವುದಾಗಿ ಟೆಸ್ಲಾ ಕಂಪನಿಯ ಸಿಇಒ ಎಲೋನ್ ಮಸ್ಕ್ ತಿಳಿಸಿದ್ದಾರೆ. ಇದೇ ಏಪ್ರಿಲ್ 21 ಮತ್ತು 22ರಂದು ಎಲೋನ್ ಮಸ್ಕ್ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೇ ಭಾರತದಲ್ಲಿ ಟೆಸ್ಲಾ ಕಂಪನಿಯ ಘಟಕದ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದ್ರೆ ಎಲಾನ್ ಮಸ್ಕ್ ಭಾರತದ ಭೇಟಿ ಮುಂದೂಡಿದ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ದುರಾದೃಷ್ಟವಶಾತ್, ಕಂಪನಿಯ ಕೆಲಸದಲ್ಲಿ ನಿರತರಾಗಿರುವುದರಿಂದ ಭಾರತಕ್ಕೆ ಭೇಟಿ ನೀಡಲಾಗುತ್ತಿಲ್ಲ. ಆದರೆ ಇದೇ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ಎಲೋನ್ ಮಸ್ಕ್ ಬರೆದುಕೊಂಡಿದ್ದಾರೆ. ಸದ್ಯ ಭಾರತದಲ್ಲಿ ಎಲೋನ್ ಮಸ್ಕ್ ಟೆಸ್ಲಾ ಕಾರು ಉತ್ಪಾದನಾ ಘಟಕ ಸ್ಥಾಪಿಸಲು 2-3 ಶತಕೋಟಿ ಡಾಲರ್ ಹೂಡಿಕೆ ಮಾಡುತ್ತಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. 2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ…
ಕಳೆದ ಕೆಲ ದಿನಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಬಳಿಕ ಸಲ್ಲು ಮನೆಗೆ ಮತ್ತಷ್ಟು ಭದ್ರತೆ ಒದಗಿಸಲಾಗಿದೆ. ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇದೀಗ ಮತ್ತೊಂದು ಪ್ರಕರಣ ನಡೆದಿದೆ. ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಸಲ್ಲು ಮನೆಗೆ ಕ್ಯಾಬ್ ಬುಕ್ ಮಾಡಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉತ್ತರ ಪ್ರದೇಶದ ಗಾಜಿಯಾಬಾದ್ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ವಾಸವಾಗಿರುವ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ ಬಳಿ ಬಂದಿದ್ದಾನೆ. ‘ಲಾರೆನ್ಸ್ ಬಿಷ್ನೋಯ್ ಕ್ಯಾಬ್ ಬುಕ್ ಮಾಡಿದ್ದಾರೆ’ ಎಂದು ಸೆಕ್ಯುರಿಟಿ ಬಳಿ ಹೇಳಿದ್ದಾರೆ. ಇದನ್ನು ಕೇಳಿ ಸೆಕ್ಯುರಿಟಿ ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಪೊಲೀಸರು ತನಿಖೆ ನಡೆಸಿದಾಗ ಇದು ಫೇಕ್…
ಕಳೆದ ಎರಡು ದಿನಗಳ ಹಿಂದೆ ಸಹಪಾಠಿಯಿಂದ ಭೀಕರವಾಗಿ ಕೊಲೆಯಾಗಿರುವ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿರುವ ನಟಿ, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಹೇಳಿದ್ದಾರೆ. ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ರಚಿತಾ ರಾಮ್ ಒತ್ತಾಯಿಸಿದ್ದಾರೆ.
ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದ ಕೆಲಸಗಳ ಜೊತೆಗೆ ಸದ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರ ಪರವಾಗಿ ದರ್ಶನ್ ಬಹೃತ್ ರೋಡ್ ಶೋ ನಡೆಸಲಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಯಶವಂತರ ಪುರ ಮಾರ್ಕೆಟ್, ಲಗ್ಗೆರೆ ಸರ್ಕಲ್, ಕೊಟ್ಟಿಗೆ ಪಾಳ್ಯ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ, ವೀವರ್ಸ್ ಕಾಲೋನಿ, ಕೊಟ್ಟಿಗೆರೆ ವಾರ್ಡ್ ಗಳಲ್ಲಿ ಇಂದು ದರ್ಶನ್ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ಇನ್ನೂ ದರ್ಶನ್ ಸುಮಲತಾ ಅವರನ್ನು ಬಿಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದು ಸಾಕಷ್ಟು ಸುದ್ದಿಯಾಗಿತ್ತು. ಸ್ವತಃ ಸುಮಲತಾ ಅವರೇ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ…
ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಭರದಿಂದ ಸಾಗುತ್ತಿದ್ದು, ಖ್ಯಾತ ತೆಲುಗು ಚಿತ್ರನಟ ಹಾಗೂ ಹಿಂದೂಪುರಂ ತೆಲುಗು ದೇಶಂ ಪಕ್ಷದ ಶಾಸಕ ನಂದಮೂರಿ ಬಾಲಕೃಷ್ಣ ಮತ್ತೊ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿತ್ತಿದ್ದಾರೆ. ಈ ಹಿಂದೆ ಎರಡು ಭಾರಿ ಬಾಲಕೃಷ್ಣ ಹಿಂದೂಪುರಂ ಕ್ಷೇತ್ರದಿಂದ ಗೆದ್ದಿದ್ದಾರೆ. ಬಾಲಯ್ಯ ಹಿಂದೂಪುರಂ ಮತ್ತು ರಾಯಲಸೀಮಾ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಬಾಲಕೃಷ್ಣ ಶುಕ್ರವಾರ ಸಾಕಷ್ಟು ಸಂಖ್ಯೆಯ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬಾಲಕೃಷ್ಣ ಪತ್ನಿ ವಸುಂಧರಾ ಅವರೊಂದಿಗೆ ಹಿಂದೂಪುರಂ ಆರ್ಡಿಒ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ನಂದಮೂರಿ ಬಾಲಕೃಷ್ಣ ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಆಸ್ತಿ ಮತ್ತು ಸಾಲವನ್ನು ಬಹಿರಂಗಪಡಿಸಿದ್ದಾರೆ. ಬಾಲಕೃಷ್ಣ ಅಫಿಡವಿಟ್ನಲ್ಲಿ 81.63 ಕೋಟಿ ಎಂದು ಘೋಷಿಸಿಕೊಂಡಿದ್ದಾರೆ. ಇನ್ನು ಬಾಲಯ್ಯ ಪತ್ನಿ ವಸುಂಧರಾ ಅವರ ಆಸ್ತಿ 140 ಕೋಟಿ 38 ಲಕ್ಷ 83 ಸಾವಿರ ಎಂದು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಚುನಾವಣಾ ದಾಖಲೆಯಲ್ಲಿ ತಮಗೆ 9 ಕೋಟಿ ಸಾಲವಿದೆ ಬಾಲಯ್ಯ ತಿಳಿಸಿದ್ದಾರೆ.…
ಕಚೇರಿಯ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ ಕಾರಣಕ್ಕೆ ಪ್ರತಿಭಟನಾನಿರತರನ್ನು ಸೇವೆಯಿಂದ ವಜಾಗೊಳಿಸಿದ ಘಟನೆ ಗೂಗಲ್ ಕಚೇರಿಯಲ್ಲಿ ನಡೆದಿದೆ. ಸಮಸ್ಯೆಗಳು ಹಾಗೂ ರಾಜಕೀಯ ವಾಗ್ವಾದಗಳಿಗೆ ಕಚೇರಿಯಲ್ಲಿ ಸ್ಥಳವಿಲ್ಲ ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ಹೇಳಿದ್ದಾರೆ. ಇಸ್ರೇಲ್ ನೊಂದಿಗೆ ಗೂಗಲ್ 1.2 ಶತಕೋಟಿ ಮೌಲ್ಯದ ಒಪ್ಪಂದಗಳಿಗೆ ಸಹಿ ಮಾಡಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ 28 ಮಂದಿಯನ್ನು ಕೆಲಸದಿಂದ ಕಿತ್ತೊಗೆಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸುಂದರ್ ಪಿಚ್ಚೈ, ಇದು ಕೇವಲ ವ್ಯವಹಾರ. ಈ ವಿಷಯದಲ್ಲಿ ಸಹೋದ್ಯೋಗಿಗಳಿಗೆ ತೊಂದರೆ ನೀಡಲು ಹಾಗೂ ಅಸುರಕ್ಷಿತ ವಾತಾವರಣ ಮೂಡಿಲು ಯಾರಿಗೂ ಅವಕಾಶವಿಲ್ಲ ಎಂದರು.
ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಎರಡು ದಿನಗಳ ಹಿಂದೆ ಜ್ವಾಲಾಮುಖಿ ಸ್ಟೋಟಗೊಂಡಿದ್ದು, ಇಲ್ಲಿಯವರೆಗೆ ಪರ್ವತದ ತಪ್ಪಲಿನಲ್ಲಿದ್ದ ಸುಮಾರು 1,200ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಪರ್ವತಕ್ಕೆ ಸಮುದ್ರ ಹೊಂದಿಕೊಂಡಿರುವದರಿಂದ ಸುನಾಮಿ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೇ ಪರ್ವತದ ಸುತ್ತಮುತ್ತ ಬಿಸಿ ಬೂದಿ ಹರಡುವ ಸಾಧ್ಯತೆಯೂ ಇದೆ. ಜ್ವಾಲಾಮುಖಿಗೆ ಬಂಡೆಗಳು ಜಾರುವ ಸಂಭವವನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ. ಆದ್ದರಿಂದ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಅವರು ಹೇಳಿದರು. ಶುಕ್ರವಾರ ಮಧ್ಯಾಹ್ನದಿಂದ ಕನಿಷ್ಠ ಮೂರು ಬಾರಿ ಸ್ಟೋಟಗೊಂಡಿದೆ. ಲಾವಾ ಹಾಗೂ ಬಿಸಿ ಬೂದಿ 1,200 ಮೀಟರ್ ಎತ್ತರಕ್ಕೆ ಚಿಮ್ಮಿದೆ ಎಂದು ಇಂಡೋನೇಷ್ಯಾದ ಜ್ವಾಲಾಮುಖಿ ಅಧ್ಯಯನ ಕೇಂದ್ರ ತಿಳಿಸಿದೆ. ‘ಜ್ವಾಲಾಮುಖಿ ಬೂದಿಯು ಪಶ್ಚಿಮ, ವಾಯುವ್ಯ, ಈಶಾನ್ಯ ಮತ್ತು ಆಗ್ನೇಯ ದಿಕ್ಕುಗಳಿಗೆ ಹರಡುತ್ತಿದೆ ಎಂದು ಉಪಗ್ರಹ ಚಿತ್ರಗಳಿಂದ ತಿಳಿದುಬಂದಿದೆ. ಜ್ವಾಲಾಮುಖಿ ಕುರಿತ ಬೆಳವಣಿಗೆಗಳ ಬಗ್ಗೆ ನಾವು ಮೇಲ್ವಿಚಾರಣೆ ಮಾಡುತ್ತಿದ್ದೆವೆ. ಸುರಕ್ಷತಾ ಕ್ರಮ, ಪುನರ್ವಸತಿ ಬಗ್ಗೆಯೂ ಕಾಳಜಿ ವಹಿಸಲಾಗಿದೆ’ ಎಂದು ಇಂಡೋನೇಷ್ಯಾದ ಸಾರಿಗೆ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ. ಗುರುವಾರ…
ಹುಬ್ಬಳ್ಳಿ ಕಾಲೇಜೀನಲ್ಲಿ ನಡೆದ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಹತ್ಯೆಯ ಕುರಿತು ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಏ.18ರಂದು ಹುಬ್ಬಳ್ಳಿ- ಧಾರಾವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ಅವರ ಪುತ್ರಿ ಹತ್ಯೆ ನಡೆದಿತ್ತು. ನೇಹಾ ಹತ್ಯೆಗೈದ ಆರೋಪಿ ಫಯಾಜ್ ಬಂಧನವಾಗಿದ್ದು ಆರೋಪಿಗೆ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯ ಕೇಳಿ ಬಂದಿದೆ.