Author: Author AIN

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬಕ್ಕೆ ಇನ್ನೂ ಎರಡು ದಿನ ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಈಗಿನಿಂದಲೇ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅಪ್ಪು ನಟನೆಯ ಜಾಕಿ ಸಿನಿಮಾ ರಿರೀಲಿಸ್ ಆಗುತ್ತಿದೆ. ಅದಕ್ಕಾಗಿ ಅನೇಕ ಚಿತ್ರಮಂದಿರಗಳು ತಯಾರಾಗಿವೆ. ದುನಿಯಾ ಸೂರಿ ನಿರ್ದೇಶನದಲ್ಲಿ ಜಾಕಿ ಸಿನಿಮಾ ಮೂಡಿ ಬಂದಿದ್ದು, ಬಾಕ್ಸ್ ಆಫೀಸಿನಲ್ಲಿ ಸೂಪರ್ ಹಿಟ್ ಆಗಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಅಲ್ಲದೇ, ಈ ಸಿನಿಮಾದ ಹಾಡುಗಳು ಕೂಡ ಹೊಸ ರೀತಿಯಲ್ಲಿ ಕೇಳಿಸಿದ್ದವು. ಹಾಗಾಗಿ ಅಪ್ಪು ಡಾನ್ಸ್ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು. ಚಿತ್ರದ ಕಥೆ, ಅಪ್ಪು ಡಾನ್ಸ್, ಹಾಡು ಹಾಗೂ ಸಾಹಸ ಸನ್ನಿವೇಶಗಳಿಂದ ಜಾಕಿ ಸಿನಿಮಾ ಗಮನ ಸೆಳೆದಿತ್ತು. ಚಿತ್ರದಲ್ಲಿ ಪುನೀತ್ ಗೆ ಜೋಡಿಯಾಗಿ ನಟಿ ಭಾವನಾ ನಟಿಸಿದ್ದು ಈ ಸಿನಿಮಾ ಭಾವನಾಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಈ ಸೂಪರ್ ಹಿಟ್ ಸಿನಿಮಾಗೆ ಪಾರ್ವತಮ್ಮ ರಾಜ್ ಕುಮಾರ್ ಬಂಡವಾಳ ಹೂಡಿದ್ದರು. ಜಾಕಿ ಚಿತ್ರವನ್ನು ಮತ್ತಷ್ಟು ಅಪ್ ಗ್ರೇಡ್ ಮಾಡಿ ರಿಲೀಸ್…

Read More

ಕನ್ನಡದ ಹುಡುಗಿ ನಟಿ ಶ್ರೀಲೀಲಾ ಟಾಲಿವುಡ್‌ನಲ್ಲಿ ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಚಿತ್ರರಂಗ್ಕಕೆ ಎಂಟ್ರಿಕೊಟ್ಟ ಕೆಲವೇ ಕೆಲವು ವರ್ಷಗಳಲ್ಲಿ ಸ್ಟಾರ್ ನಟರ ಜೊತೆ ನಟಿಸುವ ಮೂಲಕ ಸಖತ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಹೀಗಿರುವಾಗ ಗೋಲ್ಡನ್ ಚಾನ್ಸ್‌ವೊಂದನ್ನು ನಟಿ ಮಿಸ್ ಮಾಡಿಕೊಂಡಿದ್ದಾರೆ.  ‘ಗುಂಟೂರು ಖಾರಂ’ ಸಿನಿಮಾ ಸಕ್ಸಸ್ ಆದ್ರೂ ಶ್ರೀಲೀಲಾಗೆ ಲಕ್ ಕೈಕೊಟ್ಟಂತಿದೆ, ಮೆಗಾಸ್ಟಾರ್ ಚಿರಂಜೀವಿ ಪುತ್ರ, ಆರ್ ಆರ್ ಆರ್ ಖ್ಯಾತಿಯ ಸ್ಟಾರ್ ನಟ ರಾಮ್ ಚರಣ್ ಜೊತೆ ಡ್ಯುಯೇಟ್ ಹಾಡುವ ಅವಕಾಶವನ್ನು ನಟಿ ಶ್ರೀಲೀಲಾ ಮಿಸ್ ಮಾಡಿಕೊಂಡಿದ್ದಾರೆ. ರಾಮ್ ಚರಣ್ ನಟನೆಯ 16ನೇ ಸಿನಿಮಾವನ್ನು ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರದಲ್ಲಿ ನಟ ಶಿವರಾಜ್ ಕುಮಾರ್ ಕೂಡ ಕಾಣಿಸಿಕೊಳ್ತಿದ್ದಾರೆ. ಈ ಸಿನಿಮಾದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಶ್ರೀಲೀಲಾ ನಟಿಸ್ತಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ನಟಿಯ ಜೊತೆ ಚಿತ್ರತಂಡ ಮಾತುಕತೆ ಕೂಡ ನಡೆಸಿತ್ತು. ಆದರೆ ಏಕಾಏಕಿ ಶ್ರೀಲೀಲಾ ಜಾಗಕ್ಕೆ ನಟಿ ಜಾನ್ವಿ ಕಪೂರ್ ಎಂಟ್ರಿಕೊಟ್ಟಿದ್ದಾರೆ. ಬಾಲಯ್ಯ, ಮಹೇಶ್ ಬಾಬುರಂತಹ…

Read More

2024ರ ಲೋಕಸಭಾ ಚುನಾವಣೆಯ ಬಿಸಿ ಜೋರಾಗಿದೆ. ಈಗಾಗ್ಲೆ ಗಟಾನುಘಟಿಗಳನ್ನು ಕಣಕ್ಕಿಳಿಸಲು ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಮಧ್ಯೆ ತೆಲುಗು ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್‌ಗೆ ಜಗನ್ ಬಿಗ್ ಶಾಕ್ ಕೊಟ್ಟಿದ್ದಾರೆ. ವಿಜಯವಾಡ ಲೋಕಸಭಾ ಕ್ಷೇತ್ರದಿಂದ ಅಕ್ಕಿನೇನಿ ನಾಗಾರ್ಜುನ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಟಿಡಿಪಿ-ಜನಸೇನಾ ಮೈತ್ರಿ ಎದುರಿಸಲು ಅಕ್ಕಿನೇನಿ ಕುಟುಂಬದ ನಾಗಾರ್ಜುನಗೆ ಮಣೆ ಹಾಕಿದ್ದಾರೆ. ವೈ.ಎಸ್.ಆರ್ ಕಾಂಗ್ರೆಸ್ ಪಕ್ಷಕ್ಕೆ ತೆಲುಗು ನಟ ನಾಗಾರ್ಜುನ ಸಾಥ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚಿನ ಕ್ಷೇತ್ರಗಳು ಗೆಲ್ಲಲೇಬೇಕು. ಜನಸೇನಾ, ಟಿಡಿಪಿ ಮೈತ್ರಿಯನ್ನು ಸೋಲಿಸಲೇಬೇಕು ಎಂಬುದು ಜಗನ್ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗಾರ್ಜುನ್ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ. ಈ ಮೂಲಕ ಪವನ್ ಕಲ್ಯಾಣ್‌ಗೆ ಬಿಗ್ ಕಾಂಪೀಟ್ ನೀಡಲು ಮುಂದಾಗಿದ್ದಾರೆ. ವಿಜಯವಾಡ ಲೋಕಸಭಾ ಕ್ಷೇತ್ರದಿಂದ ಅಕ್ಕಿನೇನಿ ನಾಗಾರ್ಜುನ ಅವರನ್ನು ಕಣಕ್ಕಿಳಿಸಲು ವೈಎಸ್‌ಆರ್ ಕಾಂಗ್ರೆಸ್ ನಿರ್ಧರಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ…

Read More

ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತೋಷ್ ಇತ್ತೀಚೆಗೆ ದುಬಾರಿ ಕಾರು ಖರೀದಿಸಿದ್ದರು. ಆದರೆ ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಅಪಘಾತ ಸಂಭವಿಸಿತ್ತು. ನಿನ್ನೆ ಅಂದರೆ ಮಾರ್ಚ್ 13ರ ಸಂಜೆ ತುಕಾಲಿ ಸಂತೋಷ್ ಅವರ ಕಾರು ಹಾಗೂ ಆಟೋ ಮಧ್ಯೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡ ಆಟೋ ಚಾಲಕ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ತುಕಾಲಿ ಸಂತೋಷ್ ಪತ್ನಿ ಮಾನಸ ಜೊತೆ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್​ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ. ಆಟೋ ಬಹುತೇಕ ನಜ್ಜುಗುಜ್ಜಾಗಿತ್ತು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಅಪಘಾತ ನಡೆದಿದೆ. ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು…

Read More

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಗೆ ಕರೆ ನೀಡಿರುವ ಬೆಲಾರಸ್ ನ ವಿದೇಶಾಂಗ ಸಚಿವ ಸೆರ್ಗೆಯ್ ಅಲೆನಿಕ್ ಅವರು ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ನೀಡುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಭೇಟಿ ನೀಡಿದ ವೇಳೆ ಈ ವಿಷಯ ಪ್ರಸ್ತಾಪಿಸಿರುವ ಅವರು, ಬೆಲರೂಸಿಯನ್ ವಿದೇಶಾಂಗ ಸಚಿವರು ವಿಶ್ವಸಂಸ್ಥೆಯ ಸುಧಾರಣೆಗಳ ತುರ್ತುಸ್ಥಿತಿಯನ್ನು ಒತ್ತಿ ಹೇಳಿದರು. ನಾವು ಸಾಮಾನ್ಯ ಸಭೆಯ 78 ನೇ ಅಧಿವೇಶನದಲ್ಲಿ ನಮ್ಮ ನಿಲುವನ್ನು ವ್ಯಕ್ತಪಡಿಸಿದ್ದೇವೆ ಮತ್ತು ಸಾಮಾನ್ಯ ಅಸೆಂಬ್ಲಿಯ 78 ನೇ ಅಧಿವೇಶನದಲ್ಲಿ ನಮ್ಮ ಅ„ಕೃತ ಹೇಳಿಕೆಯಲ್ಲಿ, ನಾವು ಭದ್ರತಾ ಮಂಡಳಿಗೆ ಭಾರತದ ಪ್ರವೇಶವನ್ನು ಬೆಂಬಲಿಸುತ್ತೇವೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ ಎಂದಿದ್ದಾರೆ. ಎಸ್ ಜೈಶಂಕರ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡಿದ ಅಲೆನಿಕ್ ಅವರು, ನಾವು ಹೆಚ್ಚು ನ್ಯಾಯಯುತ, ನ್ಯಾಯೋಚಿತ ಮತ್ತು ಬಹುಧ್ರುವೀಯ ವಿಶ್ವ ಕ್ರಮವನ್ನು ರಚಿಸುವ ದೃಷ್ಟಿಕೋನವನ್ನು ಹಂಚಿಕೊಳ್ಳುತ್ತೇವೆ. ಅಂತರಾಷ್ಟ್ರೀಯ ಸಂಬಂಧಗಳ ತತ್ವಗಳ ಬಗ್ಗೆ ನಾವು ಅದೇ ಅಭಿಪ್ರಾಯಗಳನ್ನು ಹೊಂದಿದ್ದೇವೆ. ಆದ್ದರಿಂದ ಮುಖ್ಯ ತತ್ವಗಳು ಸಮಾನತೆಗಳಾಗಿವೆ ಎಂದಿದ್ದಾರೆ. ಎಸ್ಸಿಒಗೆ ಬೆಲಾರಸ್ನ ಪ್ರವೇಶದ…

Read More

ಬಾಲಿವುಡ್ ಚಿತ್ರರಂಗದಲ್ಲಿ ಇತ್ತೀಚೆಗೆ ವಿವಾದಿತ ಸಿನಿಮಾಗಳು ಹೆಚ್ಚು ಹೆಚ್ಚು ತೆರೆಗೆ ಬರ್ತಿವೆ. ಅವು ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗ್ತಿವೆ ಕೂಡ. ಅಂತಹ ಚಿತ್ರಗಳ ಸಾಲಿಗೆ ಇದೀಗ  ಜೆಎನ್.ಯು ಸಿನಿಮಾ ಸೇರಿಕೊಂಡಿದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಭಾರೀ ಪರ ಮತ್ತು ವಿರೋಧ ಹುಟ್ಟಿಹಾಕಿದೆ. ಜೆ.ಎನ್.ಯು ಅಂದರೆ ಜವಾಹರಲಾಲ್ ನೆಹರೂ ಯೂನಿವರ್ಸಿಟಿ. ಈ ವಿಶ್ವವಿದ್ಯಾಲಯ ನಾನಾ ಕಾರಣಗಳಿಂದ ಸದ್ದು ಮಾಡುತ್ತಲೇ ಇದೆ. ಎಡ ಮತ್ತು ಬಲ ವಿದ್ಯಾರ್ಥಿ ಸಂಘಟನೆಗಳು ಕಾರಣದಿಂದಾಗಿ ಬೇಡದ ವಿಷಯಕ್ಕೆಲ್ಲ ವಿಶ್ವ ವಿದ್ಯಾಲಯವನ್ನು ಬಳಸಿಕೊಳ್ಳಲಾಗಿದೆ. ಇದನ್ನೇ ಇಟ್ಟುಕೊಂಡು ಜೆಎನ್.ಯು ಸಿನಿಮಾ ಮಾಡಲಾಗಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ  ಜೆಎನ್.ಯು ಅಂದರೆ ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ ಎಂದು ತೋರಿಸಲಾಗಿದೆ. ಪೋಸ್ಟರ್ ಮಧ್ಯ ಭಾರತದ ನಕ್ಷೆ ಇದ್ದು, ಒಂದು ಶೈಕ್ಷಣಿಕ ಸಂಸ್ಥೆ ರಾಷ್ಟ್ರವನ್ನು ಒಡೆಯಬಹುದೆ? ಎನ್ನುವ ಪ್ರಶ್ನೆಯನ್ನೂ ಮಾಡಲಾಗಿದೆ. ಈ ಸಾಲುಗಳೇ ಅನೇಕರನ್ನು ಕೆರಳಿಸಿವೆ. ಹಾಗಾಗಿ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಜರದಿದ್ದಾರೆ. ಏಪ್ರಿಲ್ 5ರಂದು ಈ ಸಿನಿಮಾವನ್ನು…

Read More

ಸೀತಾ ರಾಮಂ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಮೃಣಾಲ್ ಠಾಕೂರ್ ಸಾಕಷ್ಟು ಅವಕಾಶವನ್ನು ಭಾಚಿಕೊಳ್ಳುತ್ತಿದ್ದಾರೆ. ಸದ್ಯ ಬಾಲಿವುಡ್ ಹಾಗೂ ದಕ್ಷಿಣ ಭಾರತ ಎರಡರಲ್ಲೂ ಬ್ಯುಸಿ ಆಗಿರುವ ಮೃಣಾಲ್ ಇದೀಗ ಸ್ಟಾರ್ ನಟ ಪ್ರಭಾಸ್ ಜೊತೆ ಕೆಲಸ ಮಾಡೋ ಅವಕಾಶ ಅವರಿಗೆ ಸಿಕ್ಕಿದೆ. ಈ ಚಿತ್ರಕ್ಕೆ ಸೀತಾ ರಾಮಂ ಖ್ಯಾತಿಯ ಹನು ರಾಘವಪುಡಿ ನಿರ್ದೇಶನ ಮಾಡುತ್ತಿದ್ದಾರೆ. ಕಿರುತೆರೆಯಿಂದ ಬಣ್ಣದ ಜರ್ನಿ ಆರಂಭಿಸಿದ ಮೃಣಾಲ್ ಠಾಕೂರ್ 2014ರಲ್ಲಿ ಮರಾಠಿ ಸಿನಿಮಾಗಳಲ್ಲಿ ನಟಿಸಿದರು. 2018ರಲ್ಲಿ ‘ಲವ್ ಸೋನಿಯಾ’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೃಣಾಲ್ ಆ ಬಳಿಕ ಮತ್ತಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದರು. ಮೃಣಾಲ್ ಅದೃಷ್ಟ ಬದಲಾಗಿದ್ದು 2022ರಲ್ಲಿ ತೆರೆಕಂಡ ಸೀತಾ ರಾಮಂ ಚಿತರದ ಮೂಲಕ. ಈಗ ಅವರಿಗೆ ಮತ್ತೊಂದು ದಕ್ಷಿಣದ ಆಫರ್ ಸಿಕ್ಕಿದೆ. ಹನು ರಾಘವಪುಡಿ ಅವರು ಪ್ರಭಾಸ್​ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಸೀತಾ ರಾಮಂ’ ಸಿನಿಮಾ ನಿರ್ದೇಶನ ಮಾಡಿದ ಖ್ಯಾತಿ ಅವರಿಗೆ ಇದೆ. ಪ್ರಭಾಸ್​ ಜೊತೆ ನಟಿಸಲು ಮೃಣಾಲ್…

Read More

ಇಂದು ಸಾಕಷ್ಟು ಕ್ಷೇತ್ರದಲ್ಲಿ ಕೃತಕ ಬುದ್ದಿಮತ್ತೆ (AI) ಗಳು ಆರಂಭವಾಗಿದೆ. ಮಾನವಿಗೆ ಸೆಡ್ಡೆ ಹೊಡೆಯಲು ಮುಂದಾಗಿರುವುದು ಸಾಕಷ್ಟು ತಲೆ ನೋವಿಗೆ ಕಾರಣವಾಗಿದೆ. ಈ ಕೃತಕ ಬುದ್ದಿಮತ್ತೆ ಮುಂದಿನ ದಿನಗಳಲ್ಲಿ ಮಾನವ ಬುದ್ಧಿಮತ್ತೆಯನ್ನ ಮೀರಿಸುತ್ತದೆ ಎಂಬ ಕಲ್ಪನೆಯು ದಶಕಗಳಿಂದ ತಂತ್ರಜ್ಞರು, ವಿಜ್ಞಾನಿಗಳು ಮತ್ತು ಭವಿಷ್ಯವಾದಿಗಳಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಉತ್ಪಾದಕ ಎಐ ಪರಿಚಯದಿಂದಾಗಿ, ಈಗ ಗೂಗಲ್, ಮೆಟಾ, ಅಮೆಜಾನ್ ಮತ್ತು ಮೈಕ್ರೋಸಾಫ್ಟ್ನಂತಹ ದೊಡ್ಡ ಟೆಕ್ ಕಂಪನಿಗಳು ಪ್ರಸ್ತುತ ತಮ್ಮದೇ ಆದ ಭಾಷಾ ಮಾದರಿಗಳನ್ನ ನಿರ್ಮಿಸಲು ಮತ್ತು ತಮ್ಮ ಎಐ ಪ್ಲಾಟ್ಫಾರ್ಮ್ಗಳನ್ನ ಪರಿಷ್ಕರಿಸಲು ತೀವ್ರ ಸ್ಪರ್ಧೆಯಲ್ಲಿವೆ. ಎಐ ಕುರಿತು ಪ್ರತಿಕ್ರಿಯಿಸಿರುವ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್ 2029ರಲ್ಲಿ ಎಐ ಮಾನವರಿಗಿಂತ ಹೆಚ್ಚು ಬುದ್ಧಿವಂತರಾಗುವ ಸಮಯಾವಧಿ ದೂರವಿಲ್ಲ ಎಂದಿದ್ದಾರೆ.

Read More

ಕೆನಡಾದಿಂದ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ ಮೂವರು ಭಾರತೀಯರು ಸೇರಿದಂತೆ ನಾಲ್ಕು ಜನರನ್ನು ನ್ಯೂಯಾರ್ಕ್ ಗಡಿಯಲ್ಲಿ ಬಂಧಿಸಲಾಗಿದೆ. ಬಫೆಲೊ ನಗರದ ಬಳಿ ಚಲಿಸುತ್ತಿದ್ದ ರೈಲಿನಿಂದ ಅಂತರರಾಷ್ಟ್ರೀಯ ಗಡಿಗೆ ಧುಮುಕಿದ ಓರ್ವ  ಮಹಿಳೆ ಸೇರಿ ನಾಲ್ವರನ್ನು ಅಮೆರಿಕ ಗಡಿ ಭದ್ರತಾ ಪಡೆ ಬಂಧಿಸಿದೆ. ಬಂಧಿತರಲ್ಲಿ ಓರ್ವ ಡೊಮಿನಿಕ್ ರಿಪಬ್ಲಿಕ್‌ ಮೂಲದವನು ಎಂದು ಗೊತ್ತಾಗಿದೆ. ಗಾಯಗೊಂಡಿದ್ದ ಮಹಿಳೆ ನಡೆಯಲು ಸಾಧ್ಯವಾಗದ್ದರಿಂದ ಆಕೆಯನ್ನು ಅಲ್ಲಿಗೆ ಬಿಟ್ಟು ತೆರಳಾಗಿತ್ತು. ಪೊಲಿಸರು ಆಕೆಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ಸಮಯದಲ್ಲೇ ಉಳಿದ ಮೂವರನ್ನೂ ಬಂಧಿಸಲಾಗಿದೆ. ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರಣೆ ವೇಳೆ ಈ ನಾಲ್ವರೂ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ್ದು ದೃಢಪಟ್ಟಿದೆ. ಉಳಿದ ಮೂವರನ್ನು ವಲಸೆ ಮತ್ತು ರಾಷ್ಟ್ರೀಯತೆ ಕಾಯ್ದೆಯ ಸೆಕ್ಷನ್ 212 ಹಾಗೂ 237 ಅಡಿಯಲ್ಲಿ ಗಡೀಪಾರು ಮಾಡಲು ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

Read More

ವಾಟರ್ ಕ್ರಾಫ್ಟ್ ಓಡಿಸುತ್ತಿದ್ದ ವೇಳೆ 27 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾ ರಾಜ್ಯದಲ್ಲಿ ನಡೆದಿದೆ. ತೆಲಂಗಾಣದ ವೆಂಕಟರಮಣ ಪಿಟ್ಟಲ ಮೃತ ಭಾರತೀಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಪಿಟ್ಟಲ ಬಾಡಿಗೆಗೆ ಪಡೆದ ಯಮಹಾ ಪರ್ಸನಲ್ ವಾಟರ್ ಕ್ರಾಫ್ಟ್ (ಪಿಡಬ್ಲ್ಯೂಸಿ) ಓಡಿಸುತ್ತಿದ್ದರು, ಅದು ಮತ್ತೊಂದು ವಾಟರ್ ಕ್ರಾಫ್ಟ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಪಿಟ್ಟಲ ಅವರು ಇಂಡಿಯಾನಾಪೊಲಿಸ್‍ನ ಇಂಡಿಯಾನಾ ಯೂನಿವರ್ಸಿಟಿ ಪಡ್ರ್ಯೂ ವಿಶ್ವವಿದ್ಯಾನಿಲಯದಲ್ಲಿ ಪದವಿ ವಿದ್ಯಾರ್ಥಿಯಾಗಿದ್ದು, ಮೇ ತಿಂಗಳಲ್ಲಿ ಪದವಿ ಪಡೆಯಲು ನಿರ್ಧರಿಸಿದ್ದರು ಎನ್ನಲಾಗಿದೆ.

Read More