ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್ ಫೇಕ್ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡಿಪ್ ಫೇಕ್ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ ಕಿಡಿಗೇಡಿಗಳು ಮತ್ತೆ ಅದೇ ಕೆಲಸ ಮಾಡಿದ್ದಾರೆ. ಮಾಡೆಲ್ ಕಂ ಕಂಟೆಂಟ್ ಕ್ರಿಯೇಟರ್ ಡೇನಿಯಾಲ ವಿಲ್ಲಾರ್ರಿಯಲ್ ಅವರ ವಿಡಿಯೋಗೆ ರಶ್ಮಿಕಾರ ಮುಖವನ್ನು ಅಂಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿದೆ. ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋವನ್ನು ಮೂಲತಃ ವೀಡಿಯೊವನ್ನು ಏಪ್ರಿಲ್ 19, 2024 ರಂದು ತನ್ನ Instagram ಪ್ರೊಫೈಲ್ನಲ್ಲಿ ಪೋಸ್ಟ್ ಮಾಡಲಾಗಿದೆ. ಅದೇ ಬಿಕಿನಿಯಲ್ಲಿರುವ ವಿಲ್ಲಾರ್ರಿಯಲ್ ಅವರ ಇತರ ಚಿತ್ರಗಳು ಮತ್ತು ವೀಡಿಯೊಗಳ ಜೊತೆಗೆ ವಿಡಿಯೋದಲ್ಲಿರುವುದು ಮೂಲ ವ್ಯಕ್ತಿಯೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ ಎನ್ನುವುದು ರಿವೀಲ್ ಆಗಿದೆ. ವಿಡಿಯೋವನ್ನು ಫೇಸ್ಬುಕ್ , ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಂತಹ ಪ್ಲಾಟ್ಫಾರ್ಮ್ಗಳಲ್ಲಿ ಹಂಚಿಕೊಳ್ಳಲಾಗಿದೆ . ಒಂದು ಪೋಸ್ಟ್ 45,000 ಕ್ಕೂ ಹೆಚ್ಚು ಇಷ್ಟಗಳನ್ನು ಮತ್ತು ಸುಮಾರು 300 ಶೇರ್ಗಳನ್ನು ಗಳಿಸಿದೆ. ಡೀಪ್ ಫೇಕ್ ಅನ್ನು ಸೀರಿಯಸ್ ಆಗಿ ತೆಗೆದುಕೊಂಡಿದೆ…
Author: Author AIN
ಅಮೆರಿಕದ ಮಧ್ಯ ಭಾಗದಲ್ಲಿರುವ ಟೆಕ್ಸಾಸ್, ಒಕ್ಲಹೋಮಾ ಮತ್ತು ಅರ್ಕಾನ್ಸಸ್ನಲ್ಲಿ ತೀವ್ರ ಹವಾಮಾನ ವೈಪರೀತ್ಯ ಉಂಟಾಗಿದೆ. ಪ್ರಬಲವಾದ ಸುಂಟರಗಾಳಿ ಮತ್ತು ಬಿರುಗಾಳಿಯಿಂದಾಗಿ ಕನಿಷ್ಠ 19 ಜನರು ಸಾವಿಗೀಡಾಗಿದ್ದಾರೆ. ಗಾಳಿಯ ರಭಸಕ್ಕೆ ಅನೇಕ ಮನೆಗಳು ಹಾನಿಗೊಳಗಾಗಿದ್ದು, ಬಹುತೇಕ ಕಡೆ ವಿದ್ಯುತ್ ಕಡಿತಗೊಂಡಿದೆ. ಟೆಕ್ಸಾಸ್ನ ಕೂಕ್ ಕೌಂಟಿಯಲ್ಲಿ ಏಳು ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ಎರಡು ಮತ್ತು ಐದು ವರ್ಷ ವಯಸ್ಸಿನ ಇಬ್ಬರು ಮಕ್ಕಳು ಮತ್ತು ಒಂದೇ ಕುಟುಂಬದ ಮೂವರು ಸೇರಿದ್ದಾರೆ. ನಾಪತ್ತೆಯಾಗಿರುವ ಹಲವರಿಗಾಗಿ ಭಾನುವಾರದಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೂಕ್ ಕೌಂಟಿ ಶೆರಿಫ್ ರಾಯ್ ಸಪ್ಪಿಂಗ್ಟನ್ ಕಳವಳ ವ್ಯಕ್ತಪಡಿಸಿದ್ದಾರೆ. ಶನಿವಾರದ ಭೀಕರ ಸುಂಟರಗಾಳಿಯಿಂದಾಗಿ 100 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುವುದು ಕಷ್ಟವಾಗಿದೆ. 200ಕ್ಕೂ ಹೆಚ್ಚು ಮನೆಗಳು ಹಾಗೂ ಇತರ ಅನೇಕ ಕಟ್ಟಡಗಳೂ ಹಾನಿಗೊಳಗಾಗಿವೆ ಎಂದು ಟೆಕ್ಸಾಸ್ ಗವರ್ನರ್ ಗ್ರೆಗ್ ಅಬಾಟ್ ತಿಳಿಸಿದ್ದಾರೆ. ಡೆಂಟನ್ ಕೌಂಟಿಯಲ್ಲಿ ಅನೇಕ ಗಾಯಾಳುಗಳನ್ನು ಹೆಲಿಕಾಪ್ಟರ್ ಹಾಗೂ ಆಯಂಬುಲೆನ್ಸ್…
ಸ್ಯಾಂಡಲ್ವುಡ್ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಹಾಗೂ ವಿತರಕ ಸ್ವಾಗತ್ ಬಾಬು ನಿಧನರಾಗಿದ್ದಾರೆ. ಮೃತ ಸ್ವಾಗತ ಬಾಬು ಚಂದ್ರಮುಖಿ ಪ್ರಾಣಸಖಿ, ಶ್ರೀರಸ್ತು ಶುಭಮಸ್ತು, ಸ್ಮೈಲ್ ಸೇರಿದಂತೆ ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಕನ್ನಡ ಚಿತ್ರರಂಗದಲ್ಲಿ ಸುದೀರ್ಘ 35 ವರ್ಷಗಳ ಅನುಭವ ಹೊಂದಿದ್ದರು. ಚಿತ್ರ ನಿರ್ಮಾಣದ ಜೊತೆ ವಿತರಣೆಯಲ್ಲಿಯೂ ಸ್ವಾಗತ್ ಬಾಬು ತೊಡಗಿಕೊಂಡಿದ್ದರು. ಸ್ವಾಗತ್ ಬಾಬು ನಿಧನಕ್ಕೆ ಕುಟುಂಬಸ್ಥರು, ಆಪ್ತರು, ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ.
ಮಾಯಿ ಮತ್ತು ದಿವಾನ್ನಂತಹ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ ಸೂರ್ಯ ಪ್ರಕಾಶ್ ಹೃದಯಾಘಾತದಿಂದ ನಿಧನರಾದರು. ಈ ಬಗ್ಗೆ ನಟ ಹಾಗೂ ರಾಜಕಾರಣಿ ಆರ್ ಶರತ್ ಕುಮಾರ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ನಿನ್ನೆಯಷ್ಟೇ ದಿವಾನ್ ನಿರ್ದೇಶಕರ ಜೊತೆ ಮಾತಿಗಿಳಿದಿದ್ದು, ಅವರ ನಿಧನ ತಮಗೆ ತೀವ್ರ ದುಃಖ ತಂದಿದ್ದಾರೆ. “ಅವರ ನಷ್ಟದಿಂದ ದುಃಖಿತರಾಗಿರುವ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಳವಾದ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ. ಶರತ್ ಕುಮಾರ್ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. 56ನೇ ವಯಸ್ಸಿಗೆ ಸೂರ್ಯ ಪ್ರಕಾಶ್ ಸಾವಿನ ಸುದ್ದಿ ಕೇಳಿ ಸುದ್ದಿ ಕೇಳಿ ಕುಟುಂಬಸ್ಥರು, ಅಭಿಮಾನಿಗಳಿಗೆ ಆಘಾತವಾಗಿದೆ. ಅಂತಿಮ ವಿಧಿವಿದಾನಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ವಿವರ ಸಿಗಬೇಕಿದೆ. ಅಂದಹಾಗೆ, ಮಾಯಿ, ಮಣಿಕ್ಕಂ, ದಿವಾನ್, ಭರತಸಿಂಹ ರೆಡ್ಡಿ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಸೂರ್ಯ ಪ್ರಕಾಶ್ ಖ್ಯಾತಿ ಘಳಿಸಿದ್ದರು.
ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣ ಮೂಲದ ಯುವತಿ ಮೃತಪಟ್ಟಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ. ಮೃತರನ್ನು ಯಾದಾದ್ರಿ ಭೋಂಗಿರ್ ಜಿಲ್ಲೆಯ ಯಾದಗರಿಪಲ್ಲಿ ಮೂಲದ ಸೌಮ್ಯಾ ರೆಡ್ಡಿ ಎಂದು ಗುರುತಿಸಲಾಗಿದೆ. ಸೌಮ್ಯಾ ರೆಡ್ಡಿ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫ್ಲೋರಿಡಾ ಅಟ್ಲಾಂಟಿಕ್ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದ್ದ ಸೌಮ್ಯ ಅಲ್ಲೇ ಉದ್ಯೋಗ ಹುಡುಕುತ್ತಿದ್ದರು. ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಸೌಮ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌಮ್ಯಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಆಕೆಯ ಮೃತದೇಹವನ್ನು ಭಾರತಕ್ಕೆ ತರುವಂತೆ ಆಕೆಯ ಪೋಷಕರಾದ ಕೋಟೇಶ್ವರ ರಾವ್ ಮತ್ತು ಬಾಲಾಮಣಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ತೆಲಂಗಾಣ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಸೌಮ್ಯಾ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಆಕೆಯ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.
ಕಾರಿನಿಂದ ಏನನ್ನೋ ಕದಿಯಲು ಹೋದವರನ್ನು ಪ್ರಶ್ನೆ ಮಾಡಲು ಮುಂದಾದ ಹಾಲಿವುಡ್ ನಟ ಜಾನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಲಿದ್ದಾರೆ. 37 ವರ್ಷಷದ ಹಾಲಿವುಡ್ ನಟ ಜಾನಿ ವ್ಯಾಕ್ಟರ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮೃತ ವೆಕ್ಟರ್ ಅನೇಕ ಸಿನಿಮಾ ಹಾಗೂ ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿದ್ದರು. ವೆಕ್ಟರ್ ತಾಯಿ ಕೂಡ ಮಗನ ಸಾವನ್ನು ಖಚಿತಪಡಿಸಿದ್ದಾರೆ. ‘ಜನರಲ್ ಹಾಸ್ಪಿಟಲ್’ ಸಿನಿಮಾದಲ್ಲಿ ವೆಕ್ಟರ್ ನಟಿಸಿದ್ದರು. ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಈ ಘಟನೆ ನಡೆದಿದೆ. ಜಾನಿ ವ್ಯಾಕ್ಟರ್ ಶನಿವಾರ ಬೆಳಿಗ್ಗೆ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಅವರ ಸ್ನೇಹಿತರೊಬ್ಬರ ಗಮನ ನಟನ ಕಾರಿನತ್ತ ಹೋಯಿತು. ಕಾರಿನ ಬಳಿ ಮೂವರು ಅಪರಿಚಿತ ವ್ಯಕ್ತಿಗಳು ಇದ್ದರು. ಅವರು ನಟನ ಕಾರಿನಿಂದ ಏನನ್ನೋ ಕದಿಯಲು ಪ್ರಯತ್ನಿಸುತ್ತಿದ್ದರು. ಇದನ್ನು ಪ್ರಶ್ನೆ ಮಾಡಲು ಹೋದ ಜಾನಿ ಮೇಲೆ ಅವರು ಗುಂಡು ಹಾರಿಸಿದರು. ನಟನ ಮೇಲೆ ಶೂಟ್ ಮಾಡಿದ ಮೂವರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಜಾನಿ ಅವರನ್ನು ಆಸ್ಪತ್ರೆಗೆ ದಾಖಲು…
ಸ್ಯಾಂಡಲ್ವುಡ್ ನಟ ನಟ ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಹಾಗೂ ಆಪ್ತ ಪ್ರಶಾಂತ್ ಪೂಜಾರಿ ಅವರ ಮೇಲೆ ಹಲ್ಲೆ ನಡೆದಿರುವ ಘಟನೆ ನಗರದ ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ಅಪರಿಚಿತರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪ್ರಶಾಂತ್ ಬನಶಂಕರಿ ಪೊಲೀಸರಿಗೆ ಪ್ರಶಾಂತ್ ಮಾಹಿತಿ ನೀಡಿದ್ದು, ಸದ್ಯ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಡಿಗೇಡಿಗಳು ಲಾಂಗ್ ನಲ್ಲಿ ಪ್ರಶಾಂತ್ ಕಾಲಿಗೆ ಹೊಡೆದಿದ್ದು, ಕಾಲಿಗೆ 15 ಸ್ಟಿಚ್ ಹಾಕಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆಸ್ಪತ್ರೆಗೆ ಬಂದು ಪ್ರಶಾಂತ್ ಹೇಳಿಕೆ ದಾಖಲಿಸಿದ್ದಾರೆ. ಹಾಕಿ ಸ್ಟಿಕ್, ಮಚ್ಚು ಲಾಂಗ್ ಗಳಿಂದ ಪ್ರಶಾಂತ್ ಮೇಲೆ ಹಲ್ಲೆ ಮಾಡಲಾಗಿದೆ. ಲವ್ ಕೇಸ್ ನಲ್ಲಿ ಪ್ರಶಾಂತ್ ಮೇಲೆ ಹಲ್ಲೆ ಆಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ನಟ ಧ್ರುವ ಸರ್ಜಾ, ವೈಯಕ್ತಿಕ ವಿಚಾರಕ್ಕೆ ಪ್ರಶಾಂತ್ ಮೇಲೆ ಹಲ್ಲೆಯಾಗಿದೆ. ಆತ ನಮ್ಮ ಹುಡುಗ, ಅವನ ಜೊತೆಗಿರುತ್ತೇನೆ ಎಂದಿದ್ದಾರೆ.…
ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ನಾಡ ಅದಿದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ದೇವಸ್ಥಾನದ ಹೊರಾಂಗಣದಲ್ಲಿ ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್ ಕಂಡೊಡನೆ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್ ʻಮ್ಯಾಕ್ಸ್ʼ ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದೆ ಎಂದು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್. ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಶೀಘ್ರದಲ್ಲೇ ಈ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಸಿನಿಮಾದಲ್ಲಿ ಅವರು ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಸಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್ನಲ್ಲಿ ಭರ್ಜರಿ…
ಯುದ್ಧಪೀಡಿತ ಗಾಝಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 35 ಮಂದಿ ಹತ್ಯೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಗಾಝಾದಲ್ಲಿ ಸ್ಥಳಾಂತರಿತ ನಾಗರಿಕರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ಡೇರೆಯ ಮೇಲೆ ಈ ದಾಳಿ ನಡೆದಿದೆ. ಹೊತ್ತಿ ಉರಿಯುತ್ತಿರುವ ಅವಶೇಷಗಳಡಿ ಹಲವು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ. ಹತ್ತಾರು ಮಂದಿ ಗಾಯಗೊಂಡಿದ್ದು, ಮೃತಪಟ್ಟವರಲ್ಲಿ ಬಹುತೇಕ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ರಫಾ ದಲ್ಲಿ ಮಿಲಿಟರಿ ದಾಳಿಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ ನೀಡಿದ ಎರಡು ದಿನಗಳಲ್ಲೇ ಇಸ್ರೇಲ್ ನ ಈ ಅಮಾನವೀಯ ದಾಳಿ ನಡೆದಿದೆ. ಇಸ್ರೇಲ್ ದಾಳಿ ಆರಂಭಕ್ಕೆ ಮುನ್ನ ಗಾಝಾದ ಅರ್ಧದಷ್ಟು ಜನ ಈ ಭಾಗದಲ್ಲಿ ಆಸರೆ ಪಡೆದಿದ್ದರು ಈ ಅತ್ಯಂತ ಭಯಾನಕ ದಾಳಿಯ ದೃಶ್ಯಾವಳಿಗಳು, ಭಾರಿ ಹಾನಿಯುಂಟಾಗಿರುವುದನ್ನು ತೋರಿಸುತ್ತವೆ. ಇಸ್ರೇಲ್ ಕೂಡಾ ಈ ದಾಳಿಯನ್ನು ದೃಢಪಡಿಸಿದ್ದು, ಹಮಾಸ್ ನ ಸ್ಥಾವರಗಳನ್ನು ಗುರಿ ಮಾಡಿ ನಡೆಸಿದ ದಾಳಿಯಲ್ಲಿ ಇಬ್ಬರು…
ಪಪುವಾ ನ್ಯೂಗಿನಿ ದೇಶದ ಉತ್ತರ ಭಾಗದಲ್ಲಿರುವ ಹಳ್ಳಿಯೊಂದರಲ್ಲಿ ಸಂಭವಿಸಿದ ಭೂಕುಸಿತದಲ್ಲಿ 2,000 ಕ್ಕೂ ಹೆಚ್ಚು ಜನರು ಸಮಾಧಿಯಾಗಿದ್ದಾರೆ ಎಂದು ಪಪುವಾ ನ್ಯೂಗಿನಿ ರಾಷ್ಟ್ರೀಯ ವಿಪತ್ತು ಕೇಂದ್ರ ತಿಳಿಸಿದೆ. “ಭೂಕುಸಿತವು 2,000 ಕ್ಕೂ ಹೆಚ್ಚು ಜನರನ್ನು ಜೀವಂತವಾಗಿ ಸಮಾಧಿ ಮಾಡಿದ್ದು, ಕಟ್ಟಡಗಳು, ಆಹಾರ ತೋಟಗಳು ವ್ಯಾಪಕ ನಾಶಕ್ಕೆ ಗುರಿಯಾಗಿದೆ. ಈ ದುರ್ಘಟನೆಯಿಂದಾಗಿ ದೇಶದ ಆರ್ಥಿಕ ಜೀವನಾಧಾರದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ” ಎಂದು ರಾಷ್ಟ್ರೀಯ ವಿಪತ್ತು ಕೇಂದ್ರದ ಅಧಿಕಾರಿಯೊಬ್ಬರು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.