ಭಾರತ ಸರ್ಕಾರ ಆಯೋಜಿಸಿರುವ ವೇವ್ಸ್ ಶೃಂಗಸಭೆ (ವಿಶ್ವ ಆಡಿಯೋ ವಿಷುವಲ್ ಎಂಟರ್ಟೈನ್ಮೆಂಟ್ ಸಮ್ಮಿಟ್) ಇಂದಿನಿಂದ ಪ್ರಾರಂಭವಾಗಿದೆ. ಮುಂಬೈನ ಜಿಯೋ ವರ್ಲ್ಡ್ ಸೆಂಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ವಿಶ್ವದ ಉನ್ನತ ಮಾಧ್ಯಮ ಸಿಇಒಗಳು, ಮನರಂಜನಾ ಐಕಾನ್ಗಳು, ಸೆಲೆಬ್ರಿಟಿಗಳು ಮತ್ತು ಜಗತ್ತಿನಾದ್ಯಂತದ ಸೃಜನಶೀಲ ಮನಸ್ಸುಗಳನ್ನು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೇವ್ಸ್ ಶೃಂಗ ಸಭೆಯಲ್ಲಿ ನಟಿಯರಾದ ಆಲಿಯಾ ಭಟ್, ದೀಪಿಕಾ ಪಡುಕೋಣೆ, ಹೇಮಾ ಮಾಲಿನಿ, ಶಾರುಖ್ ಖಾನ್, ಅಕ್ಷಯ್ ಕುಮಾರ್, ರಜನಿಕಾಂತ್, ಚಿರಂಜೀವಿ, ಮೋಹನ್ ಲಾಲ್ ಸೇರಿದಂತೆ ಬಹುತೇಕ ಸ್ಟಾರ್ಸ್ ಭಾಗಿಯಾಗಿದ್ದಾರೆ. ಆದ್ರೆ ಕನ್ನಡ ಚಿತ್ರರಂಗದ ಯಾವುದೇ ತಾರೆಯರಿಗೆ ಆಹ್ವಾನ ನೀಡಿಲ್ವಾ? ಅಥವಾ ಆಹ್ವಾನವಿದ್ದರೂ ಹೋಗಿಲ್ವಾ ಅನ್ನೋದಂತು ಗೊತ್ತಿಲ್ಲ. ವೇವ್ಸ್ ಶೃಂಗಸಭೆ ಆರಂಭಕ್ಕೂ ಮುನ್ನ ಭಾರತೀಯ ಚಿತ್ರರಂಗದ ಲೆಜೆಂಡರಿಗಳು ಒಂದೇ ಫೋಟೋ ಪ್ರೇಮ್ ನಲ್ಲಿ ಸೆರೆಯಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ, ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್, ನಟಿ ಹೇಮ ಮಾಲಿನಿ ಹಾಗೂ ಮೋಹನ್ ಲಾಲ್, ಮಿಥುನ್ ಚಕ್ರವರ್ತಿ ಒಟ್ಟಿಗೆ ಫೋಟೋಗೆ…
Author: Author AIN
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆದ 2025 ರ ಐಪಿಎಲ್ನ (IPL 2025) 49ನೇ ಪಂದ್ಯದಲ್ಲೂ ಸಿಎಸ್ಕೆ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ 190 ರನ್ ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ಕೊನೆಯ ಓವರ್ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಪಂಜಾಬ್ ಪರ ಪ್ರಭ್ಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್ನಲ್ಲಿ ಮಿಂಚಿದ ಚಾಹಲ್ ಒಂದೇ ಓವರ್ನಲ್ಲಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಪಂಜಾಬ್ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರೆ, ಸಿಎಸ್ಕೆ ತಂಡ ಅಧಿಕೃತವಾಗಿ ಪ್ಲೇಆಫ್ ರೇಸ್ನಿಂದ ಹೊರಬಿತ್ತು. ಈ ಸೋಲಿನ ಬಳಿಕ ಮಾತನಾಡಿದ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಈ ಪಂದ್ಯದಲ್ಲಿ ನಾವು ಚೆನ್ನಾಗಿ ಆಡಿದ್ದೆವು. ಅದರಲ್ಲೂ ನಮ್ಮ ಬ್ಯಾಟಿಂಗ್ ಉತ್ತಮವಾಗಿತ್ತು. ಇದೇ ಮೊದಲ ಬಾರಿಗೆ ನಾವು ಸಾಕಷ್ಟು ರನ್ಗಳಿಸಲು ಯಶಸ್ವಿಯಾದೆವು. https://ainkannada.com/do-you-leave-the-dishes-unwashed-after-dinner-a-story-you-must-watch/…
ಮಿಶಾ ಅಗರ್ವಾಲ್ ಸಾಮಾಜಿಕ ಮಾಧ್ಯಮ ಜಗತ್ತಿನಲ್ಲಿ ತನಗಾಗಿ ಒಂದು ವಿಶಿಷ್ಟ ಗುರುತನ್ನು ಸೃಷ್ಟಿಸಿಕೊಂಡಿದ್ದಾರೆ. ಕೇವಲ 24 ವರ್ಷ ವಯಸ್ಸಿನಲ್ಲೇ ಅವರು ಲಕ್ಷಾಂತರ ಜನರ ಹೃದಯದಲ್ಲಿ ಸ್ಥಾನ ಗಳಿಸಿದ್ದಾರೆ. ಪ್ರಯಾಗ್ರಾಜ್ ನಿವಾಸಿಯಾದ ಮಿಶಾ, ತಮ್ಮ ವಿಶಿಷ್ಟ ಕಾಮಿಕ್ ಕಂಟೆಂಟ್ ಮತ್ತು ತಮಾಷೆಯ ರೀಲ್ಗಳಿಂದ ದೊಡ್ಡ ಅಭಿಮಾನಿಗಳನ್ನು ಗಳಿಸಿದ್ದಾರೆ. ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಚಾನೆಲ್ ‘ದಿ ಮಿಶಾ ಅಗರ್ವಾಲ್ ಶೋ’ ನಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಅನುಯಾಯಿಗಳೊಂದಿಗೆ ಅವರು ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಮೀಶಾ ಕೇವಲ ವಿಷಯ ರಚನೆಕಾರರಲ್ಲ, ಅವರು ಕಾನೂನು ಅಧ್ಯಯನ ಮಾಡುತ್ತಿದ್ದಾರೆ ಮತ್ತು PCSJ ಗೆ ತಯಾರಿ ನಡೆಸುತ್ತಿದ್ದಾರೆ. ಅವರ ಸೃಜನಶೀಲತೆ ಮತ್ತು ಬುದ್ಧಿವಂತಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಯುವಕರಲ್ಲಿ ಅವರನ್ನು ವಿಶೇಷ ಉಪಸ್ಥಿತಿಯನ್ನಾಗಿ ಮಾಡಿದೆ. ಮಿಶಾ ಅವರ ವೀಡಿಯೊಗಳು ಒಂದೆಡೆ ಹಾಸ್ಯ ಮತ್ತು ನಿಜ ಜೀವನದ ಕಥೆಗಳನ್ನು ಒಳಗೊಂಡಿವೆ. ಮತ್ತೊಂದೆಡೆ, ಅವು ಅವಳ ನಿಜವಾದ ಭಾವನೆಗಳನ್ನು ಪ್ರತಿಬಿಂಬಿಸುವಂತೆ ಮಾಡುತ್ತವೆ. ಈ ಕಾರಣದಿಂದಾಗಿ ಅಭಿಮಾನಿಗಳು ಅವರೊಂದಿಗೆ ಹೆಚ್ಚು…
ಇಸ್ಲಾಮಾಬಾದ್: ಪಹಲ್ಗಾಮ್ ನರಮೇಧ ಕನಸಿನಲ್ಲೂ ಬೆಚ್ಚಿ ಬೀಳೋ ಭಯಾನಕ ಕೃತ್ಯ. ದಾಳಿಕೋರರ ಹಿಂದೆ ಬಿದ್ದಿರೋ ಭಾರತೀಯ ಸೇನೆ ರೋಚಕ ಅಂಶಗಳನ್ನು ಕಲೆ ಹಾಕುತ್ತಿದೆ. ಉಗ್ರರು ಅಡಗಿದ್ದ ಮನೆಗಳನ್ನು ಧ್ವಂಸ ಮಾಡಿರುವ ಯೋಧರು, ಪ್ರವಾಸಿಗರ ಮೇಲೆ ಉಗ್ರರು ದಾಳಿ ಮಾಡಿದ್ದು ಹೇಗೆ ಅನ್ನೋ ಇಂಚಿಂಚೂ ರಹಸ್ಯವನ್ನು ಬೇಧಿಸುತ್ತಿದ್ದಾರೆ. ಅದಲ್ಲದೆ ಅಲ್ಲಾಹುನೇ ಈ ಯುದ್ಧ ನಿಲ್ಲಿಸಬೇಕು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಹೇಳಿಕೆ ನೀಡಿದ್ದಾರೆ. ನೆರೆಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಇತರ ದೇಶಗಳು ಪ್ರಯತ್ನಗಳನ್ನು ಮಾಡಿದರೂ, ಕಾಲ ಕಳೆದಂತೆ ಭಾರತದೊಂದಿಗೆ ಸಂಘರ್ಷದ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. https://ainkannada.com/do-you-leave-the-dishes-unwashed-after-dinner-a-story-you-must-watch/ ಇತ್ತೀಚಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಗಮನಹರಿಸಿದಾಗ, ಕಾಲ ಕಳೆದಂತೆ ಸಂಘರ್ಷದ ಸಾಧ್ಯತೆ ಹೆಚ್ಚುತ್ತಿದ್ದು, ಕಡಿಮೆಯಾಗುತ್ತಿಲ್ಲ. ಆದರೂ ಅನೇಕ ದೇಶಗಳು ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸುತ್ತಿವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಪಾಕಿಸ್ತಾನ ದಾಳಿ ಎದುರಿಸಿದರೆ ಸೂಕ್ತ ಪ್ರತಿಕ್ರಿಯೆ ನೀಡುವುದು ನಿಶ್ಚಿತ. ಭಾರತದಿಂದ ಉಲ್ಲಂಘನೆಯಾದರೆ, ನಾವು ಪ್ರತಿಕ್ರಿಯಿಸುತ್ತೇವೆ. ನಮ್ಮ ಪ್ರತಿಕ್ರಿಯೆಯ ಸ್ವರೂಪವು…
ನಿಮ್ಮ ಜೇಬಿನಲ್ಲಿ ಎಟಿಎಂ ಕಾರ್ಡ್ ಇದ್ದರೆ, ನಿಮಗೆ ಎಲ್ಲಿ ಬೇಕಾದರೂ ಹಣವನ್ನು ಹಿಂಪಡೆಯಬಹುದು. ಆದರೆ ಮೇ 1 ರಿಂದ ನೀವು ಎಟಿಎಂನಿಂದ ಹಣ ಹಿಂಪಡೆಯಲು ಅಥವಾ ನಿಮ್ಮ ಬ್ಯಾಲೆನ್ಸ್ ಪರಿಶೀಲಿಸಲು ಮೊದಲಿಗಿಂತ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮದ ಪ್ರಸ್ತಾವನೆಯನ್ನು ಆರ್ಬಿಐ ಅನುಮೋದಿಸಿದ ನಂತರ, ಇತರ ಬ್ಯಾಂಕ್ಗಳ ಎಟಿಎಂಗಳಿಂದ ಹಣವನ್ನು ಹಿಂಪಡೆಯುವುದು ಈಗ ದುಬಾರಿಯಾಗಲಿದೆ. ಮೇ 1, 2025 ರಿಂದ, ನೀವು ಒಂದು ನಿರ್ದಿಷ್ಟ ಮಿತಿಯ ನಂತರ ಬೇರೆ ಬ್ಯಾಂಕಿನ ಎಟಿಎಂನಿಂದ ಹಣವನ್ನು ಹಿಂತೆಗೆದುಕೊಂಡರೆ, ನಿಮಗೆ ರೂ. 17 ಪಾವತಿಸುವ ಬದಲು, ನೀವು ಈಗ ರೂ. 19 ಪಾವತಿಸಬೇಕು. ಬ್ಯಾಲೆನ್ಸ್ ಪರಿಶೀಲಿಸುವ ಶುಲ್ಕವೂ ರೂ. 7 ರಿಂದ ರೂ. 9ಕ್ಕೆ ಏರಿಕೆಯಾಗಿದೆ. ಬ್ಯಾಂಕ್ ತನ್ನ ಗ್ರಾಹಕರಿಗೆ ಮೆಟ್ರೋ ನಗರಗಳಲ್ಲಿನ ಇತರ ಎಟಿಎಂಗಳಲ್ಲಿ ತಿಂಗಳಿಗೆ 5 ಉಚಿತ ವಹಿವಾಟುಗಳ ಮಿತಿಯನ್ನು ಮತ್ತು ಮೆಟ್ರೋ ಅಲ್ಲದ ಎಟಿಎಂಗಳಲ್ಲಿ 3 ಉಚಿತ ವಹಿವಾಟುಗಳ ಮಿತಿಯನ್ನು ನೀಡುತ್ತದೆ. ಇದಲ್ಲದೆ, ನೀವು ವಹಿವಾಟಿನ ಮೇಲೆ ಈ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾನ್ಸ್ ಇಂದು ಬೆಳಂ ಬೆಳಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಮ್ಯಾಕ್ಸ್ ಬಳಿಕ ಕಿಚ್ಚನ ಭತ್ತಳಿಕೆಯಿಂದ ಬರ್ತಿರುವ ಮತ್ತೊಂದು ಸಿನಿಮಾ ಬಿಲ್ಲ ರಂಗ ಬಾಷಾ ಚಿತ್ರತಂಡ ಸ್ಪೆಷಲ್ ವಿಡಿಯೋವೊಂದನ್ನು ರಿಲೀಸ್ ಮಾಡಿದೆ. ಏಪ್ರಿಲ್ 16ರಿಂದ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಬೆಂಗಳೂರಿನಲ್ಲಿ ಭರದಿಂದ ಶೂಟಿಂಗ್ ಸಾಗುತ್ತಿದೆ. ‘ಹೊರಾಂಗಣ ಹಾಗೂ ಒಳಾಂಗಣ ಎರಡೂ ಕಡೆ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 20 ದಿನಗಳ ಚಿತ್ರೀಕರಣ ನಡೆಸಲಾಗುತ್ತದೆ. ಬ್ರೇಕ್ ಬಳಿಕ ಎರಡನೇ ಹಂತದ ಚಿತ್ರೀಕರಣ ಚಾಲುವಾಗಲಿದೆ. ಬೆಂಗಳೂರಿನ ಕಂಠೀರವ ಸ್ಟುಡೀಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣದಲ್ಲಿ ಭಾಗಿಯಾಗುವ ಟೆಕ್ನಿಷಿಯನ್ಸ್ ಗೆ ಐಡಿ ಕಾರ್ಡ್ ನೀಡಲಾಗಿದೆ. ಈ ಐಡಿ ಕಾರ್ಡ್ ಇದ್ದರೆ ಮಾತ್ರ ಒಳಗೆ ಎಂಟ್ರಿ. ಇನ್ನೂ ಮೇಕಪ್ ಹಚ್ಚಿ ಕಿಚ್ಚ ಕ್ಯಾಮೆರಾ ಮುಂದೆ ಬರುವ ಶೂಟಿಂಗ್ ಪ್ರೊಸೆಸ್ ವಿಡಿಯೋವನ್ನು ಚಿತ್ರತಂಡ ಹಂಚಿಕೊಂಡಿದೆ. ಬಿಲ್ಲ ರಂಗ ಬಾಷಾ ಚಿತ್ರ ಬಹಳ ದೊಡ್ಡದಾಗಿಯೇ ತಯಾರಾಗುತ್ತಿದ್ದು, ಇದಕ್ಕಾಗಿ ಇಡೀ ತಂಡ ಬಹಳ ಶ್ರಮ ಹಾಕುತ್ತಿದೆ. ಈ…
ಕನ್ನಡ ನಟಿ ಲಾಸ್ಯ ನಾಗರಾಜ್ ಕೌಟುಂಬಿಕ ಕಲಹವೀಗ ಬೀದಿಗೆ ಬಿದ್ದಿದೆ. ಲಾಸ್ಯ ತಾಯಿ ಡಾ.ಸುಧಾ ನಾಗರಾಜ್ ಅವರ ಮೇಲೆ ಅವರ ಸ್ವತಃ ತಂಗಿ ಮಂಗಳ ಶಶಿಧರ್ ಮತ್ತು ಅವರ ಪತಿ ಶಶಿಧರ್ ದೈಹಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಸವೇಶ್ವರನಗರದ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಒಂದೇ ಕಟ್ಟಡದ ಎರಡು ಮಹಡಿಗಳಲ್ಲಿ ಅಕ್ಕ-ತಂಗಿಯ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಮೊದಲ ಮಹಡಿ ಮನೆಯಲ್ಲಿ ನಟಿ ಲಾಸ್ಯ ಮತ್ತು ತಾಯಿ ವಾಸವಾಗಿದ್ದಾರೆ. ಸುಧಾ ನಾಗರಾಜ್ ಮೂಲತಃ ಕ್ಲಾಸಿಕಲ್ ಡ್ಯಾನ್ಸರ್ ಆಗಿದ್ದು ಗ್ರೌಂಡ್ ಫ್ಲೋರ್ನ ಪಾರ್ಕಿಂಗ್ ಜಾಗದಲ್ಲಿ ಹಲವು ವರ್ಷಗಳಿಂದ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದಾರೆ. ಇದೇ ವಿಚಾರಕ್ಕೆ ಪದೇ ಪದೇ ಕಿರಿಕ್ ಮಾಡುತ್ತಿದ್ದ ತಂಗಿ ಮಂಗಳ, ನಿನ್ನೆ ಪತಿಯ ಜೊತೆ ಸೇರಿ ಅಕ್ಕ ಸುಧಾ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕೆನಾಡದಲ್ಲಿದ್ದ ಲಾಸ್ಯ ವಿಷಯ ತಿಳಿದು ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ. ನಿನ್ನೆ ರಾತ್ರಿ ಮನೆಯ ಮುಂದಿನ ಜಾಗದ ವಿಚಾರವಾಗಿ ತಂಗಿ ಹಾಗೂ ತಂಗಿಯ ಗಂಡ…
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ. ನಾವು ತಿನ್ನುವ ಆಹಾರ, ಒತ್ತಡ, ಮಾನಸಿಕ ಖಿನ್ನತೆ ಇತ್ಯಾದಿಗಳಿಂದಾಗಿ, ಮನುಷ್ಯ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಹೀಗಾಗಿ ಕೆಲವು ಆರೋಗ್ಯಕರ ನಿಯಮಗಳನ್ನು ಪಾಲಿಸಿದರೆ, ಸದಾ ನಾವು ಆರೋಗ್ಯವಂತರಾಗಿರಬಹುದು ಎಂದು ತಜ್ಞರು ಹೇಳಿದ್ದಾರೆ. ಅದರಲ್ಲೂ ಪ್ರತಿದಿನ ವಿವಿಧ ರೀತಿಯ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದು ಉತ್ತಮ. https://ainkannada.com/do-you-leave-the-dishes-unwashed-after-dinner-a-story-you-must-watch/ ಅದರಲ್ಲೂ ಜ್ಯೂಸ್ ರೂಪದಲ್ಲಿ ಇವುಗಳನ್ನು ಕುಡಿಯುವುದು ಸೂಕ್ತ. ಹೆಚ್ಚಿನ ಜನರು ಬೀಟ್ರೂಟ್ ಅನ್ನು ಇಷ್ಟಪಡುವುದಿಲ್ಲ. ಆದರೆ ಬೀಟ್ರೂಟ್ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹೀಗಾಗಿ ಬೀಟ್ರೂಟ್ ತಿನ್ನಲು ಇಷ್ಟಪಡದವರು ಅದನ್ನು ಜ್ಯೂಸ್ ರೂಪದಲ್ಲಿ ಬೆಳಿಗ್ಗೆ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಅನೇಕ ಪ್ರಯೋಜನಗಳಿವೆ. ಪೋಷಕಾಂಶಗಳು : ಬೀಟ್ರೂಟ್ನಲ್ಲಿ ವಿಟಮಿನ್ ಬಿ6, ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣ, ಫೈಬರ್, ಮ್ಯಾಂಗನೀಸ್, ಪೊಟ್ಯಾಸಿಯಮ್ ಮುಂತಾದ ಅನೇಕ ಅಗತ್ಯ ಪೋಷಕಾಂಶಗಳು ಹೇರಳವಾಗಿವೆ. ಇದರಲ್ಲಿ ಕೊಬ್ಬಿನ ಅಂಶ ಕಡಿಮೆಯಿದೆ. ಶೇ.88ರಷ್ಟು ನೀರಿನ ಅಂಶ ಹೊಂದಿರುತ್ತದೆ. ಇದರಲ್ಲಿ ಅಜೈವಿಕ ನೈಟ್ರೇಟ್ಗಳಾದ ವಲ್ಗಾಕ್ಸಾಂಥಿನ್ ಬೆಟಾನಿನ್ ಮುಂತಾದ ವರ್ಣದ್ರವ್ಯಗಳಿವೆ. ರಕ್ತದೊತ್ತಡವನ್ನು…
ಕಲೆಗೆ ಯಾವುದೇ ಭಾಷೆ, ಧರ್ಮವಿಲ್ಲ. ಇಲ್ಲಿ ಅಭಿನಯವೇ ಎಲ್ಲಾ..ದಕ್ಷಿಣ ಭಾರತ ಮಾತ್ರವಲ್ಲ ಬಾಲಿವುಡ್ ಅಂಗಳದಲ್ಲಿಯೂ ಮಿಂಚುತ್ತಿರುವ ನಟಿ ಸಮಂತಾ. ಈ ನಟಿಗಾಗಿ ಅಭಿಮಾನಿಯೊಬ್ಬ ದೇಗುಲ ಕಟ್ಟಿಸಿದ್ದಾರೆ. ಮೊನ್ನೆಯಷ್ಟೇ ಸಮಂತಾ ಹುಟ್ಟುಹಬ್ಬದ ದಿನದಂದು ಇಲ್ಲಿ ವಿಶೇಷ ಪೂಜೆ ಮಾಡಿ ಮಕ್ಕಳಿಗೆ ಅನ್ನದಾಸೋಹ ಮಾಡಲಾಗಿದ್ದು, ಆ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸಮಂತಾ ಅಭಿಮಾನಿಯೊಬ್ಬರು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಲಪಾಡು ಗ್ರಾಮದಲ್ಲಿ ಅವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ. ಅಲ್ಲಿ ಸಮಂತಾ ಎರಡು ಮೂರ್ತಿ ಸ್ಥಾಪಿಸಿ ಪೂಜೆ ಮಾಡುತ್ತಿದ್ದಾರೆ ಸಂದೀಪ್ ಎಂಬ ಅಭಿಮಾನಿ. https://twitter.com/i/status/1916853228634767544 ಸಮಂತಾ ಕ್ರಿಶ್ಚಿಯನ್ ಧರ್ಮದವರು. ಆದ್ರೆ ಹಿಂದೂ ದೇಗುಲಗಳಿಗೆ ಅವರು ಹೆಚ್ಚಾಗಿ ಭೇಟಿ ಕೊಡ್ತಾರೆ. ನೆಮ್ಮದಿ ಶಾಂತಿ ಅರಸಿ ದೇವರ ಮೊರೆ ಹೋಗುತ್ತಾರೆ. ಸದ್ಯ ಸಮಂತಾ ನಟನೆ ಜೊತೆಗೆ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ‘ಶುಭಂ’ ಸಿನಿಮಾಗೆ ಅವರು ಬಂಡವಾಳ ಹೂಡಿದ್ದಾರೆ. ಅಲ್ಲದೇ ಅತಿಥಿ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಆಯಿತು. ಮೇ 9ರಂದು ‘ಶುಭಂ’ ಸಿನಿಮಾ ರಿಲೀಸ್ ಆಗಲಿದೆ.
ಎಸ್ ರಮೇಶ್ ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಸಿಂಧೂರಿ” ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. ನಿರ್ದೇಶಕನಾಗಿ ಇದು ನನಗೆ ನಾಲ್ಕನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಶಂಕರ್ ಕೋನಮಾನಹಳ್ಳಿ, ಮೇ 10 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಸಕಲೇಶಪುರ ಮುಂತಾದ ಕಡೆ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಶೀರ್ಷಿಕೆ ಕೇಳಿದರೆ, ರೋಹಿಣಿ ಸಿಂಧೂರಿ ಮತ್ತು ಡಿ.ಕೆ. ರವಿ ಅವರ ಕಥೆಯಾ? ಎಂದು ಹಲವರು ಕೇಳಿದ್ದಾರೆ. ಆದರೆ ರೋಹಿಣಿ ಸಿಂಧೂರಿ ಅವರಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಕಾಲ್ಪನಿಕ ಕಥೆ. ಇದೊಂದು ಮರ್ಡರ್ ಮಿಸ್ಟ್ರಿ. ಇಲ್ಲಿ ರಾಗಿಣಿ ಮತ್ತು ಧರ್ಮ ಕೀರ್ತಿರಾಜ್ ಜೋಡಿಯಾಗಿ…