Author: Author AIN

ಕಲೆಗೆ ಯಾವುದೇ ಭಾಷೆ, ಧರ್ಮವಿಲ್ಲ. ಇಲ್ಲಿ ಅಭಿನಯವೇ ಎಲ್ಲಾ..ದಕ್ಷಿಣ ಭಾರತ ಮಾತ್ರವಲ್ಲ ಬಾಲಿವುಡ್‌ ಅಂಗಳದಲ್ಲಿಯೂ ಮಿಂಚುತ್ತಿರುವ ನಟಿ ಸಮಂತಾ. ಈ ನಟಿಗಾಗಿ ಅಭಿಮಾನಿಯೊಬ್ಬ ದೇಗುಲ ಕಟ್ಟಿಸಿದ್ದಾರೆ. ಮೊನ್ನೆಯಷ್ಟೇ ಸಮಂತಾ ಹುಟ್ಟುಹಬ್ಬದ ದಿನದಂದು ಇಲ್ಲಿ ವಿಶೇಷ ಪೂಜೆ ಮಾಡಿ ಮಕ್ಕಳಿಗೆ ಅನ್ನದಾಸೋಹ ಮಾಡಲಾಗಿದ್ದು, ಆ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಸಮಂತಾ ಅಭಿಮಾನಿಯೊಬ್ಬರು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಅಲಪಾಡು ಗ್ರಾಮದಲ್ಲಿ ಅವರಿಗಾಗಿ ದೇವಾಲಯವನ್ನು ನಿರ್ಮಿಸಿದ್ದಾರೆ. ಅಲ್ಲಿ ಸಮಂತಾ ಎರಡು ಮೂರ್ತಿ ಸ್ಥಾಪಿಸಿ ಪೂಜೆ ಮಾಡುತ್ತಿದ್ದಾರೆ ಸಂದೀಪ್‌ ಎಂಬ ಅಭಿಮಾನಿ. https://twitter.com/i/status/1916853228634767544 ಸಮಂತಾ ಕ್ರಿಶ್ಚಿಯನ್ ಧರ್ಮದವರು. ಆದ್ರೆ ಹಿಂದೂ ದೇಗುಲಗಳಿಗೆ ಅವರು ಹೆಚ್ಚಾಗಿ ಭೇಟಿ ಕೊಡ್ತಾರೆ. ನೆಮ್ಮದಿ ಶಾಂತಿ ಅರಸಿ ದೇವರ ಮೊರೆ ಹೋಗುತ್ತಾರೆ. ಸದ್ಯ ಸಮಂತಾ ನಟನೆ ಜೊತೆಗೆ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ‘ಶುಭಂ’ ಸಿನಿಮಾಗೆ ಅವರು ಬಂಡವಾಳ ಹೂಡಿದ್ದಾರೆ. ಅಲ್ಲದೇ ಅತಿಥಿ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಆಯಿತು. ಮೇ 9ರಂದು ‘ಶುಭಂ’ ಸಿನಿಮಾ ರಿಲೀಸ್ ಆಗಲಿದೆ.

Read More

ಎಸ್ ರಮೇಶ್ ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ & ಧರ್ಮ ಕೀರ್ತಿರಾಜ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಸಿಂಧೂರಿ” ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರು ನಗರದ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಅಕ್ಷಯ ತೃತೀಯದ ಶುಭದಿನದಂದು ಅದ್ದೂರಿಯಾಗಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. ನಿರ್ದೇಶಕನಾಗಿ ಇದು ನನಗೆ ನಾಲ್ಕನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಶಂಕರ್ ಕೋನಮಾನಹಳ್ಳಿ, ಮೇ 10 ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಸಕಲೇಶಪುರ ಮುಂತಾದ ಕಡೆ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ. ಶೀರ್ಷಿಕೆ ಕೇಳಿದರೆ, ರೋಹಿಣಿ ಸಿಂಧೂರಿ ಮತ್ತು ಡಿ.ಕೆ. ರವಿ ಅವರ ಕಥೆಯಾ? ಎಂದು ಹಲವರು ಕೇಳಿದ್ದಾರೆ. ಆದರೆ ರೋಹಿಣಿ ಸಿಂಧೂರಿ ಅವರಿಗೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದೊಂದು ಕಾಲ್ಪನಿಕ ಕಥೆ. ಇದೊಂದು ಮರ್ಡರ್ ಮಿಸ್ಟ್ರಿ. ಇಲ್ಲಿ ರಾಗಿಣಿ ಮತ್ತು ಧರ್ಮ ಕೀರ್ತಿರಾಜ್ ಜೋಡಿಯಾಗಿ…

Read More

ಬೆಂಗಳೂರು: ನಾಡಿನೆಲ್ಲೆಡೆ ಅಕ್ಷಯ ತೃತೀಯ ಸಂಭ್ರಮ ಮನೆಮಾಡಿದ್ದು, ನಗರದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು. ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಿ ಅಕ್ಷಯ ತೃತೀಯವನ್ನ ಬರಮಾಡಿಕೊಳ್ಳಲಾಯಿತು. ಅಕ್ಷಯ ತೃತೀಯ ಅಂಗವಾಗಿ ಇಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕ ಹಾಗೂ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಟಿ ಅನುಷಾ ರೈ ಅವರು ಭಾಗಿಯಾಗಿದ್ದರು. ಸದ್ಯ ಬಸವನಗುಡಿಯಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಹಬ್ಬದ ವಾತಾವರಣವೇ ಕಳೆಗಟ್ಟಿದೆ. ಹಲವು ಆಫರ್ಗಳನ್ನು ಇಲ್ಲಿ ನೀಡಲಾಗುತ್ತಿದೆ. ಅದರಂತೆ ಸಾಕಷ್ಟು ಗ್ರಾಹಕರು ಅಕ್ಷಯ ತೃತೀಯ ಅಂಗವಾಗಿ ಚಿನ್ನವನ್ನು ಖರೀದಿಸಿದ್ದಾರೆ.

Read More

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2025 ರ 48 ನೇ ಪಂದ್ಯದಲ್ಲಿ, ಎರಡೂ ತಂಡಗಳ ನಾಯಕರು ಗಾಯಗೊಂಡರು. ದೆಹಲಿ ತಂಡದ ನಾಯಕ ಅಕ್ಷರ್ ಪಟೇಲ್ ಮತ್ತು ಕೋಲ್ಕತ್ತಾ ತಂಡದ ನಾಯಕ ಅಜಿಂಕ್ಯ ರಹಾನೆ ಇಬ್ಬರೂ ಕೈಗಳಿಗೆ ಗಾಯಗಳಾಗಿವೆ. ಪಂದ್ಯದ ನಂತರ, ಇಬ್ಬರೂ ತಾರೆಯರು ತಮ್ಮ ಗಾಯಗಳ ಕುರಿತು ಪ್ರಮುಖ ಮಾಹಿತಿಯನ್ನು ನೀಡಿದರು. ದೆಹಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಅಕ್ಷರ್ ಪಟೇಲ್ ತಂಡವು 14 ರನ್‌ಗಳಿಂದ ಸೋಲನ್ನು ಅನುಭವಿಸಬೇಕಾಯಿತು. ಫೀಲ್ಡಿಂಗ್ ಮಾಡುವಾಗ ಅಕ್ಷರ್ ಬೆರಳಿಗೆ ಗಾಯವಾಯಿತು. ಇನ್ನಿಂಗ್ಸ್‌ನ 18 ನೇ ಓವರ್‌ನಲ್ಲಿ, ರೋವ್‌ಮನ್ ಪೊವೆಲ್ ಚೆಂಡನ್ನು ಮಿಡ್-ವಿಕೆಟ್ ಕಡೆಗೆ ಬಲವಾಗಿ ಹೊಡೆದರು. ದೆಹಲಿ ನಾಯಕ ಚೆಂಡನ್ನು ಹಿಡಿಯಲು ಡೈವ್ ಮಾಡಿದರು. ಈ ಪ್ರಕ್ರಿಯೆಯಲ್ಲಿ ಅಕ್ಷರ್ ಅವರ ಬೆರಳಿಗೆ ಗಾಯವಾಯಿತು. ನಂತರ ಅವರಿಗೆ ಮೈದಾನದಲ್ಲಿಯೇ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಯಿತು. ಪಂದ್ಯದ ನಂತರ, ಅಕ್ಷರ್ ತಮ್ಮ ಗಾಯದ ಬಗ್ಗೆ ಮಾತನಾಡುತ್ತಾ, ಬ್ಯಾಟಿಂಗ್ ಮಾಡುವಾಗ ನೋವುಂಟಾಗಿತ್ತು ಮತ್ತು ಮುಂದಿನ ಪಂದ್ಯದ ವೇಳೆಗೆ…

Read More

ಆನೇಕಲ್ ತಾಲೂಕಿನ ಶ್ರೀರಾಮ ಕುಟೀರದಲ್ಲಿ ಐದು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ದ್ವಿಚಕ್ರ ವಾಹನಗಳ ಮೇಳ ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ. ಇನ್ನು ಬಸವಣ್ಣ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ವೆಂಕಟೇಶ್ವರ ಮೋಟರ್ಸ್ ಮಾಲೀಕರಾದ ನಂಜುಂಡಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇನ್ನು ಡ್ರೈವ್ ಎಕ್ಸ್ ಮತ್ತು ವೆಂಕಟೇಶ್ವರ ಮೋಟರ್ಸ್ ಮಾಲೀಕರಾದ ನಂಜುಂಡಪ್ಪ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಇನ್ನು ಐದು ದಿನಗಳ ಹಿಂದೆ ನೆತ್ರಾ ತಪಾಸನ ಮಾಡಲಾಗಿತ್ತು, ಅ ವೇಳೆ ಯಾರಿಗೆಲ್ಲ ಕನ್ನಡಕದ ಅವಶ್ಯಕತೆ ಇತ್ತು ಅಂತವರಿಗೆ 300ಕ್ಕೂ ಹೆಚ್ಚು ಜನರಿಗೆ ಉಚಿತ ಕನ್ನಡಕ ನೀಡಲಾಯಿತು.. ಇನ್ನು ಐದು ದಿನಗಳಿಂದ ಸಾವಿರಾರು ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿದ್ದು , ದ್ವಿಚಕ್ರ ವಾಹನಗಳ ಮೇಳದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ ಈ ವೇಳೆ ಮಾತನಾಡಿದ ವೆಂಕಟೇಶ್ವರ ಮೋಟರ್ಸ್ ಮಾಲೀಕರ ನಂಜುಂಡಪ್ಪ ಮಾತನಾಡಿ ಐದು ದಿನಗಳಿಂದ ಉಚಿತ ಆರೋಗ್ಯ ಶಿಬಿರ ಮತ್ತು ದ್ವಿಚಕ್ರ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರ್​ ಮಳೆಯಾಗಿದೆ. ಬೇಸಿಗೆ ಬಿರು ಬಿಸಿಲಿನಿಂದ ಬಳಲಿದ್ದ ಬೆಂಗಳೂರಿಗರಿಗೆ ವರುಣನ ಸಿಂಚನವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಸಿಕ್ಕಂತಾಗಿದೆ. ಕಾರ್ಪೋರೇಷನ್, ಶಾಂತಿನಗರ, ಕೆ.ಆರ್.ಮಾರ್ಕೆಟ್, ಸಂಪಂಗಿರಾಮನಗರ, ಅವೆನ್ಯೂ ರೋಡ್ ಸೇರಿದಂತೆ ಕೆಲವೆಢ ಮಳೆ ಸುರಿಯುತ್ತಿದೆ. https://ainkannada.com/what-is-the-reason-for-buying-gold-like-akshay-trithiya-here-is-the-information/ ಮುಂದಿನ ಮೂರು ಗಂಟೆಗಳ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈಗಾಗಲೇ ಅನೇಕ ಕಡೆಗಳಲ್ಲಿ ಮಳೆ ಆರಂಭಗೊಂಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಯಲ್ಲಿ ಮಳೆ ಸಾಧ್ಯತೆ. ಗುಡುಗು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೂ ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ‌ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Read More

ಈ ಬಾರಿ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜೆರ್ಸ್‌ ಬೆಂಗಳೂರು ಅಬ್ಬರ ಜೋರಾಗಿದೆ. ಪಾಯಿಂಟ್‌ ಟೇಬಲ್‌ನಲ್ಲಿ ಆರ್‌ಸಿಬಿ ನಂಬರ್‌ 1 ಸ್ಥಾನದಲ್ಲಿದ್ದು, ಕಪ್‌ ಕೂಡ ಗೆಲ್ಲುವ ಎಂಬ ಭರವಸೆ ಇದೆ. ಆರ್‌ಸಿಬಿ ಐಪಿಎಲ್‌ ಕಣದಲ್ಲಿ ರೋಚಕ ಆಟ ಮುಂದುವರೆಸುತ್ತಿದ್ದು, ಈ ನಡುವೆ ಇಂದು ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್, ವಿಕೆಟ್‌ ಕೀಪರ್ ಜಿತೇಶ್‌ ಶರ್ಮಾ ಹಾಗೂ‌ ಆರ್‌ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ತಿರುಪತಿ ತಿಮ್ಮಪ್ಪನಿ ದರ್ಶನ ಪಡೆದಿದ್ದಾರೆ. ಆರ್‌ಸಿಬಿ 10 ಪಂದ್ಯಗಳಿಂದ 7 ಗೆಲುವುಗಳ ಅದ್ಭುತ ದಾಖಲೆಯೊಂದಿಗೆ, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 0.521 ನೆಟ್‌ ರನ್‌ ರೇಟು ಪಡೆದುಕೊಂಡಿದೆ. ಶನಿವಾರ ಚಿನ್ನಸ್ವಾಮಿಯಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ ಸೆಣೆಸಾಡಲಿದ್ದು, ಅದಕ್ಕೂ ಮುನ್ನ ನಾಯಕ ರಜತ್‌ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. https://twitter.com/i/status/1917505676277870766

Read More

ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ. ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ವಿ.ಸೋಮಣ್ಣನವರು ಆಹ್ವಾನಿಸಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಕಿರಣ ರಿಜಿಜು, ರೇಲ್ವ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಮತ್ತು ನೂತನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಸಚಿವ ಶ್ರೀ ಪ್ರಹ್ಹಾದ್ ಜೋಶಿ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ರೇಲ್ವೆ ರಾಜ್ಯ ಖಾತೆಯ ಸಚಿವ ಶ್ರೀ ರವನೀತ ಸಿಂಗ್, ಜಲಶಕ್ತಿ ರಾಜ್ಯ ಖಾತೆಯ ಸಚಿವ ಶ್ರೀ ರಾಜಬೂಷಣ್ ಚೌಧರಿ, https://ainkannada.com/what-is-the-reason-for-buying-gold-like-akshay-trithiya-here-is-the-information/ ಸಂಸದರಾದ ಪಿ.ಸಿ.ಗದ್ದಿಗೌಡರ, ಶ್ರೀ ತೇಜಸ್ವಿ ಸೂರ್ಯ, ಮಾಜಿ…

Read More

ಬೆಂಗಳೂರು: ಅತಿ ಹೆಚ್ಚು ಜನದಟ್ಟಣೆ ಇರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಿ ಜೀವನ ಮಾಡೋದು ಕಷ್ಟ ಮರ್ರೆ. ಬರುವ ಸಂಬಳದಲ್ಲಿ ಅರ್ಧ ಬಾಡಿಗೆಗೆ ಹೋದ್ರೆ ಜೀವನ ಮಾಡೋದು ಹೇಗೆ ಎಂದು ಸಾಕಷ್ಟು ಮಂದಿ ಲೀಸ್ ಗೆ ಹೋಗ್ತಾರೆ. ಆದರೆ ಲೀಸ್ ಗೆ ನೀವ್ ಬ್ರೋಕರ್ ಗಳನ್ನು ನಂಬಿ ಹೋಗ್ತಿದ್ದೀರಾ!? ಹಾಗಿದ್ರೆ ಎಚ್ಚರ ವಹಿಸಿ ಜನರೇ. ಎಸ್, ಯಾರದ್ದೋ ಮನೆ ತೋರಿಸಿ ನಾನೇ ಓನರ್ ಎಂದು ಈ ಬ್ರೋಕರ್ ಗಳು ಯಾಮಾರಿಸ್ತಾರೆ. ಇದೀಗ ಅಂತದ್ದೇ ಪ್ರಕರಣ ಒಂದು ನಗರದಲ್ಲಿ ಬೆಳಕಿಗೆ ಬಂದಿದೆ. ಕೊಡಿಗೆ ಹಳ್ಳಿ ಸಮೀಪವಿರುವ ಶ್ರೀ ಸಾಯಿ‌ ಬಾಲಾಜಿ ಮಿಡೋಸ್ ಅಪಾರ್ಟ್ಮೆಂಟ್ ನಲ್ಲಿ  ಪದ್ಮಪ್ರಭಾಕರ್ , 2023 ರಲ್ಲಿ ರಘು ಎನ್ನುವವರಿಂದ ಪ್ಲಾಟ್ ನಂ 305 & 405 ನ್ನು 25 ಲಕ್ಷಕ್ಕೆ ಲೀಸ್ ಗೆ ಪಡೆದುಕೊಂಡಿದ್ರಂತೆ,  2024 ರ ಜನವರಿ ತಿಂಗಳಲ್ಲಿ ಸಾಯಿ ಪ್ರಶಾಂತ್ ಅನ್ನೋ ವ್ಯಕ್ತಿ ಬಂದು ಈ ಪ್ಲಾಟ್ ಓನರ್ ನಾನು ಮನೆಯನ್ನು ಖಾಲಿ ಮಾಡಿ ಎಂದು…

Read More

ಕಲಬುರಗಿ: ಕಾಂಗ್ರೆಸ್ ಮುಖಂಡ ಹೆಚ್ ಕೆ ಇ ಸೊಸೈಟಿ ಮಾಜಿ ಅಧ್ಯಕ್ಷನ ಮನೆ ಮೇಲೆ ಇಡಿ ದಾಳಿ ಮಾಡಲಾಗಿದೆ. ಕಲಬುರಗಿಯ ರಿಂಗ್ ರೋಡ್ ಬಳಿಯಿರೋ ಭೀಮಾಶಂಕರ್ ಬಿಲಗುಂದಿ ಕಾಂಗ್ರೆಸ್ ಮುಖಂಡ ಹೆಚ್ ಕೆ ಇ ಸೊಸೈಟಿ ಮಾಜಿ ಅಧ್ಯಕ್ಷನ ಮನೆ ಮೇಲೆ ನಾಲ್ವರು ಅಧಿಕಾರಿಗಳ ತಂಡದಿಂದ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ. ಎಂಆರ್‌ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯವೇತನ ಹಗರಣ ವಿಚಾರವಾಗಿ ಈ ದಾಳಿ ನಡೆದಿದೆ. 2018 ರಿಂದ 2024ರ ವರೆಗೆ ಎರಡು ಅವಧಿಗೆ ಭೀಮಾಶಂಕರ್ ಅಧ್ಯಕ್ಷರಾಗಿದ್ದರು. https://ainkannada.com/what-is-the-reason-for-buying-gold-like-akshay-trithiya-here-is-the-information/ 700 ಜನ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 80 ಕೋಟಿ ರೂ.ಗೂ ಅಧಿಕ ಹಣ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಭೀಮಾಶಂಕರ್ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Read More