ನೆಲಮಂಗಲ:- ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ದುರ್ಮರಣ ಹೊಂದಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ. https://ainkannada.com/dolly-dhananjays-film-is-ready-to-come-to-ott-which-film-where-is-it-streaming/ ಕೆಎಸ್ಆರ್ ಟಿಸಿ ಬಸ್, ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿತ್ತು. ಈ ವೇಳೆ ನೆಲಮಂಗಲ ತಾಲೂಕಿನ ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಒಂದೇ ಕುಟುಂಬ ಆಟೋದಲ್ಲಿ ಬರುತ್ತಿತ್ತು. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಕುಟುಂಬಸ್ಥರು ವಾಪಸ್ಸಾಗುತ್ತಿದ್ದರು. ಇದೆ ವೇಳೆ ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಪುಟ್ಟಮ್ಮ 55, ಚಾಲಕ ಶ್ರೀನಿವಾಸ್ 40, ಸಾವನ್ನಪ್ಪಿದ್ದಾರೆ. ಇನ್ನೂ ಲೇಖನ11, ವರ್ಷಿಣಿ13, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ನಾಗರತ್ಮಮ್ಮ 35, ವೆಂಕಟೇಶ್ 37 ಸಣ್ಣಪುಟ್ಟಗಾಯಗಳಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ನೆಲಮಂಗಲ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
Author: AIN Author
ಬೆಂಗಳೂರು ಗ್ರಾಮಾಂತರ : ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಬಳಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಸಂಚರಿಸುತ್ತಿತ್ತು. ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಬರುತ್ತಿದ್ದ ಆಟೋದಲ್ಲಿ ಒಂದೇ ಕುಟುಂಬದ 6 ಮಂದಿ ಬರುತ್ತಿದ್ದರು. ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. https://ainkannada.com/fire-incident-at-kozhikode-medical-college-four-died/ ಪುಟ್ಟಮ್ಮ (55), ಶ್ರೀನಿವಾಸ್ (40)ಮೃತರಾಗಿದ್ದು, ಲೇಖನ (11), ವರ್ಷಿಣಿ(13), ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ನಾಗರತ್ಮಮ್ಮ (35), ವೆಂಕಟೇಶ್ (37) ಸಣ್ಣಪುಟ್ಟಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು:-ಯಾರೇ ಆಗಲಿ ಕೋಮುಭಾವನೆ ಕೆಡಿಸೋ ಹೇಳಿಕೆ ನೀಡಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. https://ainkannada.com/india-bans-all-imports-from-pakistan-tensions-at-the-border/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೋಮುಗಲಭೆ ನಿಗ್ರಹಕ್ಕೆ ಕರಾವಳಿಯಲ್ಲಿ ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಹೀಗಾಗಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಲ್ಲಿ ಭಾಗಿಯಾದ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯನ್ನು ಜನಸಮುದಾಯ ಇಷ್ಟ ಪಡೋದಿಲ್ಲ. ಸುಹಾಸ್ ಹಾಗೂ ಅಶ್ರಫ್ ಕೊಲೆಯಿಂದ ಜಿಲ್ಲೆಯ ಕೋಮುಸೌಹಾರ್ದಕ್ಕೆ ಧಕ್ಕೆಯಾಗಿದೆ. ಸುಹಾಸ್ ಕೊಲೆಯಲ್ಲಿ 8 ಜನ, ಅಶ್ರಫ್ ಕೊಲೆಯಲ್ಲಿ 21 ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಯಾರನ್ನೂ ಕಾನೂನು ಉಲ್ಲಂಘನೆ ಮಾಡಲು ಬಿಡೋದಿಲ್ಲ ಎಂದು ಹೇಳಿದರು ಅವರನ್ನ ಹತ್ತಿಕ್ಕಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದ ಇರಬೇಕು. ಹಿಂದೆ ಈ ಜಿಲ್ಲೆಯಲ್ಲೂ ಶಾಂತಿಗಾಗಿ ನಾವು ಪಾದಯಾತ್ರೆ ನಡೆಸಿದ್ದೆವು. ಸರ್ಕಾರ ಒಂದು ತೀರ್ಮಾನಕ್ಕೆ ಬಂದಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದು ನಾವು ಹೊಸದಾಗಿ…
ನವದೆಹಲಿ/ಇಸ್ಲಾಮಾಬಾದ್:- ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿರ್ಬಂಧ ವಿಧಿಸಿದೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ಹಾಗೂ ಭಾರತದಲ್ಲಿ ಉದ್ವಿಗ್ನತೆ ಸ್ಥಿತಿ ನಿರ್ಮಾಣ ಆಗಿದೆ. ಯಾವುದೇ ಸಮಯದಲ್ಲಿ ಯುದ್ಧ ಘೋಷಣೆ ಆಗುವ ಸಾಧ್ಯತೆ ಇದೆ. ಅಲ್ಲದೇ ಪಾಕ್ ಜೊತೆಗಿನ ಸಂಬಂಧದ ಕೊಂಡಿಯನ್ನು ಸಂಪೂರ್ಣವಾಗಿ ಭಾರತ ಕಳಚಿದೆ. ಈ ನಡುವೆಯೇ ಭಾರತ ದೇಶ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. https://ainkannada.com/pocso-case-businessman-kiran-arrest-crime-news/ ನೆರೆಯ ದೇಶ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ತಿಳಿಸಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ…
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಜೂ.10 ರೊಳಗೆ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಸಚಿವ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ. https://ainkannada.com/chennai-face-bangalore-jujubi-rayudu-angers-rcb-fans/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜೂನ್ 10ರ ಒಳಗೆ ಒಳಮೀಸಲಾತಿ ಘೋಷಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿ ಮೇ 5ರಿಂದ ಒಳಮೀಸಲಾತಿ ಗಣತಿ ಪ್ರಾರಂಭ ಮಾಡಬೇಕು ಎಂದರು. ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಮಾಡಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಒಳಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಸಿದ್ದರಾಮಯ್ಯ ಒಳಮೀಸಲಾತಿ ಕೊಡದೇ ಕುಂಟು ನೆಪ ಹೇಳುತ್ತಿದ್ದಾರೆ. ಈಗ ನಾಗಮೋಹನ್ ದಾಸ್ ಅವರಿಂದ ಗಣತಿ ಮಾಡಿಸೋದಾಗಿ ಹೇಳುತ್ತಿದೆ. ಸರ್ಕಾರದ ಬಳಿಕ ಕಾಂತರಾಜು ವರದಿ ಅಂಕಿಅಂಶಗಳು ಇವೆ. ಅದರ ಆಧಾರದಲ್ಲಿ ಒಳಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿದರು ಇಲ್ಲದೆ ಹೋದರೆ ನಾಗಮೋಹನ್ ದಾಸ್ ಆಯೋಗ ಮೇ 5ರಿಂದ ಒಳಮೀಸಲಾತಿ ಗಣತಿ ಪ್ರಾರಂಭ ಮಾಡುತ್ತಿದೆ. ಇದಕ್ಕೂ ಮೊದಲೇ ಸಿದ್ದರಾಮಯ್ಯ ಜೂನ್10ರ ಒಳಗೆ ಮೀಸಲಾತಿ ಕೊಡುತ್ತೇವೆ ಎಂಬ ಭರವಸೆ ಕೊಟ್ಟು…
ಅಂಬಾಟಿ ರಾಯುಡು.. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ. ಆದ್ರೆ ಇವರಿಗೆ RCB ಬಗ್ಗೆ ಟೀಕೆ-ಟಿಪ್ಪಣಿ ಮಾಡಲಿಲ್ಲ ಅಂದ್ರೆ ತಿಂದ ಅನ್ನ ಜೀರ್ಣ ಆಗೋದಿಲ್ಲ ಅನ್ನಿಸತ್ತೆ. ಯಾವಾಗಲೂ RCBಯನ್ನೇ ಟಾರ್ಗೆಟ್ ಮಾಡುವ ಇವರು ಮತ್ತೊಮ್ಮೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದಾರೆ. https://ainkannada.com/fire-incident-at-kozhikode-medical-college-four-died/ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ನೀಡಿದ ಹೇಳಿಕೆಯು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಚಾನೆಲ್ ಚರ್ಚೆಯೊಂದರಲ್ಲಿ ಮಾತನಾಡಿದ ಅಂಬಾಟಿ ರಾಯುಡು, ಆರ್ಸಿಬಿ ಮತ್ತು ಸಿಎಸ್ಕೆ ನಡುವೆ ಯಾವುದೇ ಪೈಪೋಟಿಯಿಲ್ಲ. ಉಭಯ ತಂಡಗಳಿಂದ ಜಿದ್ದಾಜಿದ್ದಿನ ಕದನ ನಿರೀಕ್ಷೆಯನ್ನು ಸಹ ಮಾಡುವಂತಿಲ್ಲ. ಇಲ್ಲಿ ಆರ್ಸಿಬಿ ತಂಡವನ್ನು ಸಿಎಸ್ಕೆ ತಂಡದ ಸಾಂಪ್ರದಾಯಿಕ ಎದುರಾಳಿಯಾಗಿ ಬಿಂಬಿಸಲಾಗಿದೆ. ಆದರೆ ಅಂತಹದ್ದೇನು ಇಲ್ಲ. ಉಭಯ ತಂಡಗಳ ನಡುವೆ ಅಂತಹದೊಂದು ಪೈಪೋಟಿಯೇ ಇಲ್ಲ. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಲವು…
ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಅವಘಡ ನಡೆದಿದ್ದು, ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತುರ್ತು ವಿಭಾಗದಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಲ್ಲಿದ್ದವರು ತೀವ್ರ ಆತಂಕಕ್ಕೀಡಾದರು. ಯುಪಿಎಸ್ ಕೋಣೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಕೂಡಲೇ ಸುಮಾರು 200 ರೋಗಿಗಳನ್ನು ಅವರ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ತುರ್ತು ವಿಭಾಗದಿಂದ ಸ್ಥಳಾಂತರಿಸಲಾಗಿದೆ. https://ainkannada.com/investigation-of-stampede-case-in-shirgaon-temple-goa-cm-pramod-sawant/ ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಟಿ ಸಿದ್ದಿಕಿ, ಮೃತ ರೋಗಿಗಳ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಶವಗಳನ್ನು ಸ್ಥಳಾಂತರಿಸಲಾಗುತ್ತಿದೆ. ಬೆಂಕಿ ಹೊತ್ತಿಕೊಂಡು ಹೊಗೆಯಿಂದ ಉಸಿರುಗಟ್ಟಿ ನಾಲ್ವರು ಮೃತಪಟ್ಟಿದ್ದಾರೆ ಎಂದರು.
ಗೋವಾ : ಗೋವಾದ ಶಿರ್ಗಾಂವ್ನಲ್ಲಿನ ಲೈರೈ ದೇವಿ ದೇವಸ್ಥಾನದ ಜಾತ್ರ ಮಹೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಶನಿವಾರ ನಸುಕಿನ ಜಾವದಲ್ಲಿ 3 ಗಂಟೆ ಸುಮಾರಿಗೆ ದೇವಾಲಯದಲ್ಲಿ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ ಆರು ಜನರು ಮೃತಪಟ್ಟು 30ಕ್ಕೂ ಅಧಿಕ ಜನರು ಗಾಯಗೊಂಡರು. ಕಾಲ್ತುಳಿತದ ಸ್ಥಳಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ನೀಡಿದ್ದು, ಇಂದು ಬೆಳಗಿನ ಜಾವ ಆರು ಜನರು ಮೃತಪಟ್ಟ ಕಾಲ್ತುಳಿತ ಪ್ರಕರಣ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದು, ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ. https://ainkannada.com/seven-killed-in-stampede-during-fair-in-shirgaon-goa/ ಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ನಾನು ಕೇಳಿದ್ದೇನೆ. ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ. ಇಂತಹ ಘಟನೆಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ ದೇವಾಲಯ ಉತ್ಸವಗಳಿಗೆ ಭವಿಷ್ಯದಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಸೋನು ನಿಗಮ್.. ಭಾರತೀಯ ಖ್ಯಾತ ಗಾಯಕ. ಇವರ ಹಾಡುಗಳಿಗೆ ಮನಸೋತವರಿಲ್ಲ. ಅದ್ಬುತ ಗಾಯಕ. ಇವರು ಕನ್ನಡದಲ್ಲೂ ಸಾಕಷ್ಟು ಹಾಡುಗಳನ್ನು ಕೊಟ್ಟಿದ್ದು, ಇವು ಸಾಕಷ್ಟು ಹಿಟ್ ಮಾಡಿದೆ. ಅಲ್ಲದೇ ಕರ್ನಾಟಕದಲ್ಲೂ ಸೋನು ನಿಗಮ್ ಅವರಿಗೆ ಸಾಕಷ್ಟು ಅಭಿಮಾನಿ ಬಳಗವಿದೆ. https://ainkannada.com/ipl-2025-sunrisers-burning-for-gujarat-arbhatka-mirror-of-lightning/ ಆದರೆ ಇದೇ ಸೋನು ನಿಗಮ್ ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿ ಆಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದಾನೆ. ಆಗ ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಮಾತಾಡುವ ಭರದಲ್ಲಿ ಪಹಲ್ಗಾಮ್ ದಾಳಿ ಹಾಗೂ ಕರ್ನಾಟಕದ ಬಗ್ಗೆ ಮಾತಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆದರೆ ದಿ ಬೆಸ್ಟ್ ಸಾಂಗ್ಸ್ ಹಾಡಿರೋದು ಹೆಚ್ಚು ಕನ್ನಡದಲ್ಲಿ. ಕರ್ನಾಟಕಕ್ಕೆ ಬರುವಾಗ ತುಂಬಾ ಖುಷಿಯಾಗುತ್ತೆ. ತುಂಬಾ ಆಸೆಯಿಂದಲೇ ಇಲ್ಲಿ…
ಐಪಿಎಲ್ 2025ರ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು. https://ainkannada.com/ready-to-go-to-war-against-pakistan-minister-zameer-ahmed-khan/ ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಸಾಯಿ ಸುದರ್ಶನ್, ಶುಭಮನ್ ಗಿಲ್ ಮತ್ತು ಜೋಸ್ ಬಟ್ಲರ್ ಗುಜರಾತ್ ಟೈಟಾನ್ಸ್ಗೆ ಆಸರೆಯಾದರು. ಸಾಯಿ ಸುದರ್ಶನ್ 23 ಎಸೆತಗಳಲ್ಲಿ 48 ರನ್ ಗಳಿಸಿದರೆ, ಶುಭಮನ್ ಗಿಲ್ 38 ಎಸೆತಗಳಲ್ಲಿ 10 ಬೌಂಡರಿ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು. ಜೋಸ್ ಬಟ್ಲರ್ 37 ಎಸೆತಗಳಲ್ಲಿ 64 ರನ್ ಗಳಿಸಿ ಮಿಂಚಿದರು. ವಾಷಿಂಗ್ಟನ್ ಸುಂದರ್ 21 ರನ್ ಗಳಿಸಿದರು. ಸನ್ರೈಸರ್ಸ್ ಹೈದರಾಬಾದ್ ಪರ ಜಯದೇವ್ ಉನದ್ಕತ್ ಮಾತ್ರ 3 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು. 225 ರನ್ಗಳ…