ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಾಳೆಹಣ್ಣು ತಿಂದರೆ ನಿದ್ರೆ ಚೆನ್ನಾಗಿ ಬರುತ್ತದೆ ಎಂಬ ಸುದ್ದಿ ಹರಡಿತ್ತು. ಈ ಅಭ್ಯಾಸ ಅನುಸರಿಸುವವರು ಕೂಡ ಇದು ನಿಜ ಎಂದಿದ್ದರು. ಅದರಲ್ಲಿಯೂ ಈ ಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಟ್ರಿಪ್ಟೋಫಾನ್ ನಂತಹ ಪೋಷಕಾಂಶಗಳಿರುವುದರಿಂದ ಇದನ್ನು ಸೇವನೆ ಮಾಡಿದರೆ ಉತ್ತಮ ನಿದ್ರೆ ಮಾಡುವುದಕ್ಕೆ ಸಹಾಯವಾಗುತ್ತದೆ ಎಂದು ಹೇಳಲಾಗುತ್ತಿತ್ತು. ಏಕೆಂದರೆ ಈ ಪೋಷಕಾಂಶಗಳು ದೇಹವನ್ನು ವಿಶ್ರಾಂತಿಗೊಳಿಸುತ್ತವೆ ಮತ್ತು ನಿದ್ರೆಯ ಮಟ್ಟವನ್ನು ಹೆಚ್ಚಿಸುತ್ತದೆ. https://ainkannada.com/harshika-poonacha-and-bhuvan-ponnanna-name-their-daughter-as-tridevi/ ನಿದ್ರಾಹೀನತೆ ಬೊಜ್ಜು, ಕೊಲೆಸ್ಟ್ರಾಲ್ ಮತ್ತು ಹೃದಯ ಸಂಬಂಧಿ ಸಮಸ್ಯೆಗೆ ಕಾರಣ ಆಗುತ್ತದೆ. ನಿದ್ದೆ ಮಾಡದೇ ಹೋದರೆ ನೀವು ದಿನವಿಡೀ ಆಲಸ್ಯ ಮತ್ತು ಆಯಾಸ ಪಡಬೇಕಾಗುತ್ತದೆ. ಇದು ನೇರವಾಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀಡುತ್ತದೆ. ನಿದ್ರೆಯ ಕೊರತೆ ನಿಮ್ಮ ಚಯಾಪಚಯವನ್ನು ಕೆಡಿಸುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸಾಕಷ್ಟು ನಿದ್ರೆ ಮಾಡದ ಕಾರಣ ನಿಮ್ಮ ರಕ್ತದೊತ್ತಡ ಅನಿಯಂತ್ರಿತ ಆಗಿರುತ್ತದೆ. ಉತ್ತಮ ನಿದ್ದೆಗಾಗಿ ಬಾಳೆ ಹಣ್ಣು ಸೇವನೆ ಮಾಡಿ ನೀವು ಮಾನಸಿಕ ಸಮಸ್ಯೆ…
Author: AIN Author
ಆರೋಗ್ಯಕರವಾಗಿ ಮತ್ತು ಫಿಟ್ ಆಗಿರಲು, ಪ್ರತಿದಿನ ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ. ನೀರು ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ ಮತ್ತು ಕೊಳೆಯನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಆದರೆ, ದೇಹವನ್ನು ಶುದ್ಧೀಕರಿಸಲು ಎಷ್ಟು ನೀರು ಕುಡಿಯಬೇಕು? ಈ ಪ್ರಶ್ನೆಗೆ ಹೆಚ್ಚಿನ ಜನರ ಬಳಿ ಉತ್ತರ ಇರುವುದಿಲ್ಲ. ಸಾಕಷ್ಟು ಸಂಶೋಧನೆಯ ನಂತರ ನಾವು ನಿಮಗಾಗಿ ಈ ಆರೋಗ್ಯ ಸಲಹೆಯನ್ನು ತಂದಿದ್ದೇವೆ. ನೀರಿನ ಕೊರತೆಯ ಜೊತೆಗೆ ಹೆಚ್ಚು ನೀರು ಕುಡಿಯುವುದು ಸಹ ಹಾನಿಗೆ ಕಾರಣವಾಗಬಹುದು ಎಂಬುದನ್ನು ನೆನಪಿನಲ್ಲಿಡಿ. https://ainkannada.com/heavy-rain-in-bengaluru-rcb-vs-csk-match-cancelled/ ನಿಮಗೆ ಅಗತ್ಯವಿರುವ ನೀರಿನ ಪ್ರಮಾಣವು ನಿಮ್ಮ ವಯಸ್ಸು, ದೈಹಿಕ ಚಟುವಟಿಕೆ, ಲಿಂಗ, ತಾಪಮಾನ ಮತ್ತು ದೇಹದ ತೂಕವನ್ನು ಅವಲಂಬಿಸಿರುತ್ತದೆ ಎಂದು ಹಾರ್ವರ್ಡ್ ವೈದ್ಯಕೀಯ ಶಾಲೆ ಹೇಳುತ್ತದೆ. ಆದರೆ ನಂತರವೂ ಪ್ರತಿ ಗಂಟೆಗೆ 2 ರಿಂದ 3 ಕಪ್ ನೀರು ಕುಡಿಯಲು ತಜ್ಞರು ಶಿಫಾರಸು ಮಾಡುತ್ತಾರೆ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿಯೊಂದು ಜೀವಕೋಶ ಮತ್ತು ಅಂಗವು ಸಾಕಷ್ಟು ನೀರನ್ನು ಪಡೆಯಬೇಕಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ. ನೀರು ದೇಹದಿಂದ…
ಬೆಂಗಳೂರು:- ಇಂದು ನಗರಾದ್ಯಂತ ಸುರಿಯುತ್ತಿರುವ ಗುಡುಗು ಸಹಿತ ಮಳೆ, ಮುಂದಿನ 03 ದಿನ ಹೀಗೆ ಸುರಿಯಲಿದೆ. ತಂಪು ವಾತಾವರಣ ಕಂಡು ಬರಲಿದ್ದು, ತಾಪಮಾನದಲ್ಲಿ ಇಳಿಕೆ ಆಗಲಿದೆ. https://ainkannada.com/hindu-activist-suhas-murder-case-eight-people-taken-into-police-custody/ ಶುಕ್ರವಾರ ಸಂಜೆ ಆಗುತ್ತಿದ್ದಂತೆ ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಯಲಹಂಕ, ಬೆಳ್ಳಂದೂರು, ಮೆಜೆಸ್ಟಿಕ್, ವಿದ್ಯಾರಣ್ಯಪುರ, ರಾಜಾಜಿನಗರ, ಜಯನಗರ, ಚಾಮರಾಪೇಟೆ, ಯಶವಂತಪುರ, ಎಲೆಕ್ಟ್ರಾನಿಕ್ ಸಿಟಿ, ಬೆಳ್ಳಂದೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ದಾಖಲಾಗಿದೆ. ಅದರಂತೆ ಇಂದು ಕೂಡ ಭಾರೀ ಮಳೆ ಆಗಲಿದೆ. ಹೀಗಾಗಿ ಇಂದು ಬೆಂಗಳೂರು vs ಚೆನ್ನೈ ಪಂದ್ಯಕ್ಕೂ ಮಳೆ ಎದುರಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದ್ದು, ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಆಗುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಕಳೆದ ತಿಂಗಳು ತವರಲ್ಲಿ ಪಂಜಾಬ್ ವಿರುದ್ಧ ಆರ್ಸಿಬಿ ಹ್ಯಾಟ್ರಿಕ್ ಮುಖಭಂಗ ಅನುಭವಿಸಿತ್ತು. ಆಗ ಕೂಡ ಬೆಂಗಳೂರಲ್ಲಿ ಮಳೆಯಾಗಿತ್ತು.…
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಚುರುಲುಗೊಳಿಸಿದ್ದು, ಹತ್ಯೆ ನಡೆದ 24 ಗಂಟೆಯಲ್ಲೇ ಎಂಟು ಮಂದಿಯನ್ನು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ ಸುಹಾಶ್ ಹತ್ಯೆ ಪ್ರಕರಣದ ತನಿಖೆಗೆ ಐದು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದು, ಕೊಲೆ ಕೇಸ್ ಸಂಬಂಧ ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲಾ ಶಂಕಿತ ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. https://ainkannada.com/teradala-mla-sidhu-savadi-alleges-against-congress-government/ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದ್ದು, ಹತ್ಯೆ ಹಿಂದೆ 20 ಜನರ ಕೈವಾಡವಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಸದ್ಯ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೇಧಿಸಲು ಪೊಲೀಸರು ಐದು ತಂಡಗಳಾಗಿ ತನಿಖೆ ಕೈಗೊಂಡಿದ್ದಾರೆ.
ಗೋವಾ : ಶಿರ್ಗಾಂವ್ ದೇವಸ್ಥಾನದ ಜಾತ್ರ ಮಹೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಏಳ್ವರು ದುರ್ಮರಣಕ್ಕೀಡಾಗಿದ್ದಾರೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಶತಮಾನಗಳ ಐತಿಹ್ಯವಿರುವ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಜಾತ್ರೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜ ನೆರೆದಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ 7 ಜನರು ಸಾವನವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿದೆ. ಕೂಡಲೇ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ದೌಡಾಯಿಸಿ, ಜನರನ್ನು ಸುರಕ್ಷಿತ ಸ್ಥಳಕ್ಕ ರವಾನಿಸಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರಿಗೆ ಮಾಪುಸಾದ ಗೋವಾ ವೈದ್ಯಕೀಯ ಕಾಲೇಜು ಮತ್ತು ಉತ್ತರ ಗೋವಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. https://ainkannada.com/a-terrible-tragedy-in-ingali-village-3-children-drown-in-an-agricultural-well-and-die/ ಇನ್ನು ಘಟನೆ ಬಗ್ಗೆ ಸಿಎಂ ಪ್ರಮೋದ್ ಸಾವಂತ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಶಿರ್ಗಾಂವ್ನ ಲೈರೈ ಜತ್ರಾದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ತೀವ್ರ ದುಃಖಿತನಾಗಿದ್ದೇನೆ. ನಾನು ಆಸ್ಪತ್ರೆಗೆ…
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಏಪ್ರಿಲ್ 25-26ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಆರೋಪದ ಮೇಲೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ್ ಎ. ಅವರು ಈ ದೂರು ಸಲ್ಲಿಸಿದ್ದರು. https://ainkannada.com/teradala-mla-sidhu-savadi-alleges-against-congress-government/ ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಂ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ. ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಂ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿವಾದದ ಬಗ್ಗೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು, ‘ಸೋನು ನಿಗಂ ಒಬ್ಬ…
ಬಾಗಲಕೋಟೆ : ಕರ್ನಾಟಕ ರಾಜ್ಯದಲ್ಲಿ ಉಗ್ರಗಾಮಿಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ ಹೊರತು ಬೇರೆ ಏನೂ ಇಲ್ಲ. ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರ ಕೊಲೆ ನಡೆಯುತ್ತಿದೆ. ರಾಜ್ಯದಲ್ಲಿ ಜಿಹಾದಿ ಮುಸ್ಲಿಮರನ್ನು ಬಳಸಿಕೊಂಡು, ಹತ್ಯೆಗಳನ್ನು ಮಾಡ್ತಾ ಇದೆ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ದಾನಮ್ಮ ದೇವಿ ಸರ್ಕಲ್ ದಲ್ಲಿ ಮಂಗಳೂರಿನ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದು ಸವದಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರನ್ನ ಕೊಲೆ ಮಾಡುವುದು ಸರ್ವೇಸಾಮಾನ್ಯವಾಗಿದೆ. ಜಿಹಾದಿ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾನ್ಯ ಜನರಿಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಯಾವುದೇ ರಕ್ಷಣೆ ಇಲ್ಲದಂತಾಗಿದೆ. ಹಿಂದೂ ಕಾರ್ಯಕರ್ತರ ಎಷ್ಟೇ ಕೊಲೆಗಳು ನಡೆದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
ಭಾರತೀಯ ಅಡುಗೆ ಮನೆಯಲ್ಲಿ ಟೊಮೆಟೊಗೆ ವಿಶಿಷ್ಟವಾದ ಸ್ಥಾನಮಾನವಿದೆ. ಪ್ರತಿಯೊಬ್ಬರ ಮನೆಯಲ್ಲೂ ಇದ್ದೇ ಇರುವ ತರಕಾರಿ ಅಂದರೆ ಅದು ಟೊಮೆಟೊ. ಒಗ್ಗರಣೆಯಿಂದ ಹಿಡಿದು ನಾನಾ ಭಕ್ಷ್ಯಗಳ ತಯಾರಿಕೆಗೆ ಈರುಳ್ಳಿಯಂತೆಯೇ ಟೊಮೆಟೊವನ್ನು ಸೇರಿಸಲಾಗುತ್ತದೆ. ಏಕೆಂದರೆ ಟೊಮೆಟೊ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ಆರೋಗ್ಯಕ್ಕೂ ಕೂಡ ಟೊಮೆಟೊ ಬಹಳ ಒಳ್ಳೆಯದು. https://ainkannada.com/a-terrible-tragedy-in-ingali-village-3-children-drown-in-an-agricultural-well-and-die/ ಇಷ್ಟೆಲ್ಲಾ ಗುಣಗಳನ್ನು ಹೊಂದಿರುವ ನಮ್ಮೆಲ್ಲರ ಅಚ್ಚುಮೆಚ್ಚಿನ ಟೊಮೆಟೊ ಕೆಂಪು ಬಣ್ಣದಲ್ಲಿರುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಆದರೆ ಎಂದಾದರೂ ನೀವು ಕಪ್ಪು ಬಣ್ಣದ ಟೊಮೆಟೊ ನೋಡಿದ್ದೀರಾ? ಹೌದು ಅನೇಕ ಮಂದಿಗೆ ಕಪ್ಪು ಟೊಮೆಟೊ ಬಗ್ಗೆಯೇ ತಿಳಿದಿಲ್ಲ. ಕಪ್ಪು ಟೊಮೆಟೊಗಳು ವಿಶಿಷ್ಟ ಬಣ್ಣಕ್ಕಾಗಿ ಮಾತ್ರವಲ್ಲ ಆರೋಗ್ಯ ಪ್ರಯೋಜನಗಳಿಂದಾಗಿ ಸ ಹ ಸಾಕಷ್ಟು ಮನ್ನಣೆಯನ್ನು ಗಳಿಸಿವೆ. ಅವು ಸಾಮಾನ್ಯ ಕೆಂಪು ಟೊಮೆಟೊಗಳಿಗಿಂತ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳು ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುತ್ತವೆ. ಕಪ್ಪು ಟೊಮೆಟೊಗಳ ಐದು ಪ್ರಮುಖ ಆರೋಗ್ಯ ಪ್ರಯೋಜನಗಳನ್ನು ನೋಡೋಣ ಮತ್ತು ಅವು ನಿಮ್ಮ ಆಹಾರವನ್ನು ಪೌಷ್ಟಿಕವಾಗಿಸಲು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ನೋಡೋಣ. ಕಪ್ಪು…
ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ 114 ಹಳ್ಳಿಗಳಿದ್ದು, ಇವುಗಳಲ್ಲಿ 140 ಮಂದಿರಗಳನ್ನು ಕಳೆದ 7 ವರ್ಷದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ತುರಮುರಿ ಗ್ರಾಮದಲ್ಲಿ ಶುಕ್ರವಾರ ನೂತನ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ, ಮೂರ್ತಿ ಪ್ರತಿಷ್ಟಾಪನೆ ಮತ್ತು ಕಳಸಾರೋಹಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ಯಾವುದೇ ಜಾತಿ, ಭಾಷೆ, ಧರ್ಮ ಯಾವುದನ್ನೂ ನೋಡದೆ ಎಲ್ಲ ಗ್ರಾಮಗಳಲ್ಲಿ ಜನರ ಬೇಡಿಕೆಯಂತೆ ಮಂದಿರಗಳನ್ನು ನಿರ್ಮಾಣ ಮತ್ತು ಜೀರ್ಣೋದ್ಧಾರ ಮಾಡಲಾಗಿದೆ ಎಂದರು. ಜನರ ಪ್ರೀತಿ ಮತ್ತು ಸಹಕಾರದಿಂದಾಗಿ ಕ್ಷೇತ್ರದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದಧಿ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಯೋಜನೆ ಹೊಂದಿದ್ದೇನೆ. ಎಲ್ಲರ ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ಅವರು ವಿನಂತಿಸಿದರು. ಕಾರ್ಯಕ್ರಮದಲ್ಲಿ ಯುವರಾಜ ಕದಂ, ಸುಹಾಸ್ ಜಾಧವ್, ಜ್ಞಾನೇಶ್ವರ ಜಾಧವ್, ವೈಶಾಲಿ ಕಾಂಡೇಕರ್, ಬಾಬು ಬೆಳಗಾಂವ್ಕರ್, ಉಮೇಶ ಜಾಧವ್,…
ಚಿಕ್ಕೋಡಿ : ಕೃಷಿಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋದಾಗ ಹೊಂಡದಲ್ಲಿ ಈ ದುರಂತ ಸಂಭವಿಸಿದೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಮೂವರು ಬಾಲಕರು ಮನೆಗೆ ಬಾರದಿದ್ದಾಗ ಪೋಷಕರಿಂದ ಹುಡುಕಾಟ ಆರಂಭಿಸಿದ್ದಾರೆ. ಕೃಷಿಹೊಂಡದಲ್ಲಿ ಬಿದ್ದ ಸಾವನ್ನಪ್ಪಿರುವ ವಿಚಾರವಾಗಿ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ರವಾನಿಸುವ ಕಾರ್ಯವನ್ನ ಪೊಲೀಸರು ಮಾಡಿದ್ದಾರೆ. https://ainkannada.com/hindu-activist-suhas-shetty-murder-case-should-be-transferred-to-nia-mp-cllr-brijesh-chowta/ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳ ರವಾನಿಸಲಾಗಿದೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ