Author: AIN Author

ಸೂರ್ಯೋದಯ – 5:52 ಬೆ. ಸೂರ್ಯಾಸ್ತ – 6:33 ಸಂಜೆ ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಷಷ್ಠಿ ನಕ್ಷತ್ರ – ಪುನರ್ವಸು ಯೋಗ – ಶೂಲ ಕರಣ – ತೈತಲೆ ಮಳೆ ನಕ್ಷತ್ರ: ಭರಣಿ ರಾಹು ಕಾಲ – 09:00 ದಿಂದ 10:30 ವರೆಗೆ ಯಮಗಂಡ – 01:30 ದಿಂದ 03:00 ವರೆಗೆ ಗುಳಿಕ ಕಾಲ – 06:00 ದಿಂದ 07:30 ವರೆಗೆ ಬ್ರಹ್ಮ ಮುಹೂರ್ತ – 4:16 ಬೆ. ದಿಂದ 5:04 ಬೆ. ವರೆಗೆ ಅಮೃತ ಕಾಲ – 10:12 ಬೆ.ದಿಂದ 11:46 ಬೆ. ವರೆಗೆ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ. ವರೆಗೆ ಮೇಷ: ವಕೀಲರಿಗೆ ಉತ್ತಮ ಸಮಯ, ವಾಣಿಜ್ಯ ಸಂಸ್ಥೆ ನಡೆಸುವವರು ಮತ್ತು ಲೆಕ್ಕ ಪರಿಶೋಧಕರು ಆದಾಯ ಹೆಚ್ಚಿಸಿಕೊಳ್ಳುತ್ತಾರೆ, ಮಕ್ಕಳಿಗೆ ಸರ್ಕಾರಿ…

Read More

ಬೈಲಹೊಂಗಲ:- ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಲಹೊಂಗಲದ ರೂಪಾ ಚನಗೌಡ ಪಾಟೀಲ್ 625 ಕ್ಕೆ 625 ಅಂಕ ಪಡೆದು ಇಡೀ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದು ಎಲ್ಲರಿಗೂ ಮಾದರಿ ಆಗಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ 625ಕ್ಕೆ 625 ಅಂಕ ಪಡೆದಿರುವ ರೂಪಾ ಚನಗೌಡ ಪಾಟೀಲ್ ಅವರು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾದರಿ ಆಗಿದ್ದಾರೆ. ಈ ಹಿನ್ನೆಲೆ ಹುಕ್ಕೇರಿ ಹಿರೇಮಠದ ಶ್ರೀ ಷ, ಬ್ರ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳವರು ತಾವೇ ಖುದ್ದಾಗಿ ವಿದ್ಯಾರ್ಥಿನಿ ರೂಪಾ ಪಾಟೀಲ್ ಮನೆಗೆ ಭೇಟಿ ನೀಡಿ ಆಶೀರ್ವದಿಸಿದರು. ಶ್ರೀಗಳು ಮನೆಗೆ ಆಗಮಿಸುತ್ತಿದ್ದಂತೆ ರೂಪಾ ಚನಗೌಡ ಪಾಟೀಲ್ ಶ್ರೀಗಳ ಪಾದಪೂಜೆ ಮಾಡಿ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾತನಾಡಿದ ರೂಪಾ ಪಾಟೀಲ್, ಇಂದು ನಮ್ಮ ಮನೆಗೆ ನಮ್ಮ ಗುರುಗಳು ಬಂದು ಆಶೀರ್ವಾದ ಮಾಡಿದ್ದಾರೆ. ಇದು ನನ್ನ ಭಾಗ್ಯ. ನನ್ನ ಬದುಕಿನೊಳಗೆ ಇದೊಂದು ಅವಿಸ್ಮರಣೀಯ ದಿನ. ಗುರುಗಳ ಅಂತಃಕರಣ ಎಷ್ಟು ದೊಡ್ಡದು ಅಂದ್ರೆ ಭಕ್ತರನ್ನು ತಮ್ಮ ಮಕ್ಕಳಂತೆ…

Read More

ಮಂಡ್ಯ : ಪ್ರಸ್ತಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ಪ್ರೌಢಶಾಲಾ  ಶಾಲೆಯ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ದ್ವಿತೀಯ ಹಾಗೂ ಎಲ್.ಅನನ್ಯ 4ನೇ ಸ್ಥಾನಗಳಿಸಿ ತೇರ್ಗಡೆಯಾಗುವ ಮೂಲಕ ತಾಲೂಕಿಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಬಿಇಒ ಧನಂಜಯ ಮೆಚ್ಚುಗೆ ವ್ಯಕ್ತಪಡಿಸಿದರು. 625ಕ್ಕೆ 624 ಶೇ.(99.84) ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಗಳಿಸಿದ ಸಿ.ಪುನೀತಾ ಹಾಗೂ 622 ಶೇ(99.5) ರಷ್ಟು ಅಂಕಗಳಿಸಿ ರಾಜ್ಯಕ್ಕೆ 4 ನೇ ಸ್ಥಾನಗಳಿಸಿದ ಎಲ್.ಅನನ್ಯ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ತೆರ್ಗಡೆಗೊಂಡ ಶಾಲೆಯ ವಿದ್ಯಾರ್ಥಿಗಳನ್ನು ಶಿವಪುರದ ಪೂರ್ಣಪ್ರಜ್ಞಾ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಅಭಿನಂದಿಸಿದರು. https://ainkannada.com/sslc-result-disha-a-student-from-gadigram-sagar-taluk-secured-5th-rank-99-36-result-for-biligaru-government-high-school/ ಪರೀಕ್ಷೆಗೆ ಹಾಜರಾಗಿದ್ದ ಶಾಲೆಯ ಒಟ್ಟು 175 ವಿದ್ಯಾರ್ಥಿಗಳ ಪೈಕಿ 169 ವಿದ್ಯಾರ್ಥಿಗಳು ಉತ್ತೀಣರಾಗುವ ಮೂಲಕ ಶೇ.96 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಇವರಲ್ಲಿ 15 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕಗಳಿಸಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 58 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಸಂತಸ ವ್ಯಕ್ತಪಡಿಸಿದರು. ಎ.ಸಿಂಧು 617,…

Read More

ಶಿವಮೊಗ್ಗ: ಕುಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ರ್ಯಾಂಕ್‌ ಪಡೆದು ಬಹುದೊಡ್ಡ ಸಾಧನೆ ಮಾಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಟ್ಟಕಡೆಯ ಗಡಿಗ್ರಾಮ, ತಾಲೂಕು ಕೇಂದ್ರದಿಂದ ೬೦ ಕಿ. ಮೀ ದೂರದ ಬಿಳಿಗಾರು ಸರ್ಕಾರಿ ಕನ್ನಡ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ದಿಶಾ ಹೆಚ್ಆರ್‌ 625 ಅಂಕಗಳಲ್ಲಿ 621 ಅಂಕಗಳನ್ನು ಪಡೆಯುವ ಮೂಲಕ ಕೀರ್ತಿಗೆ ಪಾತ್ರಳಾಗಿದ್ದಾಳೆ. ಬಹುತೇಕ ಶರಾವತಿ ಡ್ಯಾಂ ಮುಳುಗಡೆ ಸಂತ್ರಸ್ಥರೇ ಹೊಂದಿರುವ ಬಿಳಿಗಾರು ಸರ್ಕಾರರಿ ಪ್ರೌಢಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ದಿಶಾ ಗಮನಾರ್ಹ ಸಾಧನೆ ಮಾಡಿದ್ದಾಳೆ. https://ainkannada.com/sslc-exam-c-bhavana-of-sri-nilgiriswara-vidyaniketan-school-is-the-state-topper/ ಇಷ್ಟೇ ಅಲ್ಲ,27 ಮಕ್ಕಳು 10ನೇ ತರಗತಿಯಲ್ಲಿ ಓದುತ್ತಿದ್ದು, ಒಟ್ಟು ಶೇ.99.36ರಷ್ಟು ಫಲಿತಾಂಶ ದಾಖಲಿಸಿ ಕುಗ್ರಾಮವಾದ ಬಿಳಿಗಾರು ಸರ್ಕಾರಿ ಪ್ರೌಢಶಾಲೆ ರಾಜ್ಯದ ಗಮನ ಸೆಳೆದಿದೆ. ಬಿಳಿಗಾರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಕೆ.ಪಿ ಶ್ರೀಧರ್‌ ಹಾಗೂ ಶಿಕ್ಷಕರ ತಂಡ ದಿಶಾ ಹಾಗೂ ಉಳಿದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವರ್ಗಾಯಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಈ ಕುರಿತು ಬ್ರಿಜೇಶ್‌ ಚೌಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಘಟನೆಯಿಂದ ನಾನು ದಿಗ್ಭ್ರಮೆಗೊಂಡಿದ್ದು, ಭೀಕರ ಕೊಲೆ ಕೃತ್ಯದ ಕುರಿತು ತೀವ್ರ ಆತಂಕ ಮತ್ತು ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಘಟನೆಯು ಕರಾವಳಿ ಕರ್ನಾಟಕ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರತೆ, ಬಲಗೊಳ್ಳುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳ ಅಟ್ಟಹಾಸಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯು ಕರಾವಳಿ ಮಾತ್ರವಲ್ಲ, ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. https://ainkannada.com/a-situation-has-been-created-where-hindus-have-to-live-in-fear-murdered-suhash-shettys-mother/ ತಮ್ಮ ಮಗನನ್ನು ಕಳೆದುಕೊಂಡಿರುವ ಸುಹಾಸ್ ಶೆಟ್ಟಿ ಅವರ ಕುಟುಂಬವು ದಿಗ್ಭ್ರಾಂತಗೊಂಡು ನ್ಯಾಯಕ್ಕಾಗಿ ಕಾಯುತ್ತಿದೆ. ಈ ಭಾಗದ ಚುನಾಯಿತ ಪ್ರತಿನಿಧಿಯಾಗಿ ಮತ್ತು ಇಲ್ಲಿನ ನೋವು ಹಾಗೂ…

Read More

ಬೆಂಗಳೂರು:- ಟೀಕೆ ಮಾಡಿದ ಬಿಜೆಪಿಯವರೇ ನಮ್ಮ ಸರ್ಕಾರದ ಗ್ಯಾರಂಟಿ ತಗೊಂಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. https://ainkannada.com/sslc-exam-c-bhavana-of-sri-nilligareshwara-vidyaniketan-school-is-the-state-topper/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಜಾರಿಗೆ ತಂದ ಪಂಚ ಗ್ಯಾರಂಟಿ ಗಳ ಬಗ್ಗೆ ಆರ್ಥಿಕ ವಾಗಿ ಬಿಜೆಪಿ ಅವರು ಟೀಕೆ ಟಿಪ್ಪಣಿ ಮಾಡಿದ್ರು. ಈಗ ಬಿಜೆಪಿಯವರು ಸೇರಿ ಎಲ್ಲರೂ ಗ್ಯಾರಂಟಿ ತಗೊಂಡಿದ್ದಾರೆ. ರಾಹುಲ್ ಗಾಂಧಿ ಯವರು ಹಿಡಿದ ಛಲವನ್ನು ಬಿಡೋದಿಲ್ಲ. ಪಾರ್ಲಿಮೆಂಟ್ ನಲ್ಲಿ ಜಾತಿಗಣತಿ ಬಗ್ಗೆ ಹೇಳಿದ್ರು. ಈಗ ಜಾತಿಗಣತಿ ಗೆ ಕೇಂದ್ರ ಸರ್ಕಾರ ಮುಂದಾಗಿದೆ. ರಾಹುಲ್ ಗಾಂಧಿ ಅವರ ಬೇಡಿಕೆ ಪರಿಗಣಿಸಿದ್ದಕ್ಕೆ ಮೋದಿ ಅವರಿಗೆ ಧನ್ಯವಾದ ತಿಳಿಸ್ತೀನಿ. ನಾವು ಜಾತಿಗಣತಿ ಯನ್ನು ಮಾಡಿದ್ದೀವಿ ಚರ್ಚೆಗೆ ಬಿಟ್ಟಿದ್ದೀ, ನೋಡೋಣ ಮುಂದೆ. ಇದೀಗ ಕೇಂದ್ರ ಸರ್ಕಾರ ಸರ್ವೆಗೆ 500 ಕೋಟಿ ಇಟ್ಟಿದ್ದಾರೆ.ಅದು ಸಾಲಲ್ಲ ಇನ್ನು ಜಾಸ್ತಿ ಹಣ ಇಡಬೇಕಾಗುತ್ತೆ. ಟ್ಯಾಕ್ಸ್ ಕಲೆಕ್ಷನ್ ನಲ್ಲೂ ರಾಜ್ಯಗಳಿಗೆ ನ್ಯಾಯ ಕೊಡುವಂತಹ ಕೆಲಸವನ್ನು ಮೋದಿ ಮಾಡಬೇಕು. ಮೋದಿ ಅವರೇ ಸಿಎಂ…

Read More

ದೇವನಹಳ್ಳಿ  ; ರಾಜ್ಯದಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಸಿ.ಭಾವನ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. https://ainkannada.com/sslc-result-belagavi-student-rupa-patil-in-the-toppers-list/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಸಿ.ಭಾವನ 625ಕ್ಕೆ 625 ಅಂಕಗಳಿಸಿರುವ ಗಳಿಸಿದ್ದು,  ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರಿಂದ ಸಿಹಿ ತಿನಿಸಿ ಸಂಭ್ರಮಾಚರಣೆ ನಡೆಸಿದರು. ಮಗಳ ಸಾಧನೆಗೆ ಬಗ್ಗೆ ತಂದೆ ತಾಯಿ ಸಹ ಸಂತಷ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ವಿಧಾನಸೌಧ, ಮೆಜೆಸ್ಟಿಕ್ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. https://ainkannada.com/sslc-result-two-students-from-tumkur-in-the-topper-list/ ನಗರದ ಕೆ.ಆರ್​.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Read More

ಬೆಳಗಾವಿ : ರಾಜ್ಯಾದಲ್ಲಿ ಎಸ್‌ ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಪುರ ಗ್ರಾಮದ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ ರಾಜ್ಯದ ಟಾಪರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇತ್ತೀಚಿಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. https://ainkannada.com/sslc-result-two-students-from-tumkur-in-the-topper-list/ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡ ರೂಪಾ ಪಾಟೀಲ ಕೃಷಿ ಕುಟುಂಬದಿಂದ ಬಂದು, ಈಗ ಸಾಧನೆ ಮಾಡಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.  ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎನ್. ಪ್ಯಾಟಿ ಅವರು ರೂಪಾ ಪಾಟೀಲ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More

ತುಮಕೂರು : ಇಂದು ಎಸ್ ಎಸ್‌ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ತುಮಕೂರು ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯದ ಟಾಪರ್ ಪಟ್ಟಿಯಲ್ಲಿದ್ದಾರೆ. ತುಮಕೂರು‌ ಹಾಗೂ ಮಧುಗಿರಿ ಶೈಕ್ಷಣಿಕ‌ ಜಿಲ್ಲೆಯಿಂದ ತಲಾ ಒಬ್ಬರು ರಾಜ್ಯಕ್ಕೆ‌ ಪ್ರಥಮ ಸ್ಥಾನ ಬಂದಿದ್ದು ಜಿಲ್ಲೆಗೆ ಕೀರ್ತಿ ತಂದಿದೆ. ತುಮಕೂರಿನ ಚೇತನ ವಿದ್ಯಾ ಮಂದಿರ ಶಾಲೆಯ ಮಹಮದ್ ಮನ್ಸೂರ್ ಅದಿಲ್,  ಮಧುಗಿರಿಯ ಚಿರಾಕ್ ಪಬ್ಲಿಕ್‌ ಶಾಲೆಯ ಯಶ್ವಿತಾ ರೆಡ್ಡಿ ಕೆ ಬಿ. ಟಾಪರ್‌ ಪಟ್ಟಿಯಲ್ಲಿದ್ದಾರೆ. https://ainkannada.com/sslc-results-declared-two-students-scored-625-out-of-625/ ಕೆ ವಿ ಬಾಬು ರೆಡ್ಡಿ ಹಾಗೂ ಸಂಧ್ಯಾ ರೆಡ್ಡಿ ಪುತ್ರಿ ಯಶ್ವಿತಾ ರೆಡ್ಡಿ ಮತ್ತು ಅದಿಲ್ ಹಾಗೂ ಅಫ್ರೋಜ್ ಜಹಾನ್ ದಂಪತಿಯ ಪುತ್ರ‌ ಮಹಮದ್ ಮನ್ಸೂರ್ ಇಬ್ಬರು 625 ಕ್ಕೆ 625 ಅಂಕ‌ಗಳಿಸಿ  ರಾಜ್ಯ ಪ್ರಥಮ ಸ್ಥಾನ ಪಡೆದಿದ್ದಾರೆ. ಚೇತನಾ ಶಾಲೆ ಹಾಗೂ ಚಿರಾಕ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದೆ.

Read More