ಬೆಂಗಳೂರು:- ಟೀಕೆ ಮಾಡಿದ ಬಿಜೆಪಿಯವರೇ ನಮ್ಮ ಸರ್ಕಾರದ ಗ್ಯಾರಂಟಿ ತಗೊಂಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. https://ainkannada.com/sslc-exam-c-bhavana-of-sri-nilligareshwara-vidyaniketan-school-is-the-state-topper/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಜಾರಿಗೆ ತಂದ ಪಂಚ ಗ್ಯಾರಂಟಿ ಗಳ ಬಗ್ಗೆ ಆರ್ಥಿಕ ವಾಗಿ ಬಿಜೆಪಿ ಅವರು ಟೀಕೆ ಟಿಪ್ಪಣಿ ಮಾಡಿದ್ರು. ಈಗ ಬಿಜೆಪಿಯವರು ಸೇರಿ ಎಲ್ಲರೂ ಗ್ಯಾರಂಟಿ ತಗೊಂಡಿದ್ದಾರೆ. ರಾಹುಲ್ ಗಾಂಧಿ ಯವರು ಹಿಡಿದ ಛಲವನ್ನು ಬಿಡೋದಿಲ್ಲ. ಪಾರ್ಲಿಮೆಂಟ್ ನಲ್ಲಿ ಜಾತಿಗಣತಿ ಬಗ್ಗೆ ಹೇಳಿದ್ರು. ಈಗ ಜಾತಿಗಣತಿ ಗೆ ಕೇಂದ್ರ ಸರ್ಕಾರ ಮುಂದಾಗಿದೆ. ರಾಹುಲ್ ಗಾಂಧಿ ಅವರ ಬೇಡಿಕೆ ಪರಿಗಣಿಸಿದ್ದಕ್ಕೆ ಮೋದಿ ಅವರಿಗೆ ಧನ್ಯವಾದ ತಿಳಿಸ್ತೀನಿ. ನಾವು ಜಾತಿಗಣತಿ ಯನ್ನು ಮಾಡಿದ್ದೀವಿ ಚರ್ಚೆಗೆ ಬಿಟ್ಟಿದ್ದೀ, ನೋಡೋಣ ಮುಂದೆ. ಇದೀಗ ಕೇಂದ್ರ ಸರ್ಕಾರ ಸರ್ವೆಗೆ 500 ಕೋಟಿ ಇಟ್ಟಿದ್ದಾರೆ.ಅದು ಸಾಲಲ್ಲ ಇನ್ನು ಜಾಸ್ತಿ ಹಣ ಇಡಬೇಕಾಗುತ್ತೆ. ಟ್ಯಾಕ್ಸ್ ಕಲೆಕ್ಷನ್ ನಲ್ಲೂ ರಾಜ್ಯಗಳಿಗೆ ನ್ಯಾಯ ಕೊಡುವಂತಹ ಕೆಲಸವನ್ನು ಮೋದಿ ಮಾಡಬೇಕು. ಮೋದಿ ಅವರೇ ಸಿಎಂ…
Author: AIN Author
ದೇವನಹಳ್ಳಿ ; ರಾಜ್ಯದಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ಸಿ.ಭಾವನ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. https://ainkannada.com/sslc-result-belagavi-student-rupa-patil-in-the-toppers-list/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಶ್ರೀ ನೀಲಗಿರೀಶ್ವರ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಸಿ.ಭಾವನ 625ಕ್ಕೆ 625 ಅಂಕಗಳಿಸಿರುವ ಗಳಿಸಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರಿಂದ ಸಿಹಿ ತಿನಿಸಿ ಸಂಭ್ರಮಾಚರಣೆ ನಡೆಸಿದರು. ಮಗಳ ಸಾಧನೆಗೆ ಬಗ್ಗೆ ತಂದೆ ತಾಯಿ ಸಹ ಸಂತಷ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ವಿಧಾನಸೌಧ, ಮೆಜೆಸ್ಟಿಕ್ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. https://ainkannada.com/sslc-result-two-students-from-tumkur-in-the-topper-list/ ನಗರದ ಕೆ.ಆರ್.ವೃತ್ತ, ಕಾರ್ಪೊರೇಷನ್, ವಿಧಾನಸೌಧ, ಮೆಜೆಸ್ಟಿಕ್, ಗಾಂಧಿನಗರ, ಓಕಳಿಪುರಂ, ರಾಜಾಜಿನಗರ, ಗಿರಿನಗರ, ಬಸವೇಶ್ವರ ನಗರ, ಮಲ್ಲೇಶ್ವರಂ, ಆರ್.ಆರ್.ನಗರ, ವಿಜಯನಗರ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ : ರಾಜ್ಯಾದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ದೇವಲಪುರ ಗ್ರಾಮದ ವಿದ್ಯಾರ್ಥಿನಿ ರೂಪಾ ಚನಗೌಡ ಪಾಟೀಲ ರಾಜ್ಯದ ಟಾಪರ್ಗಳಲ್ಲಿ ಒಬ್ಬರಾಗಿದ್ದಾರೆ. ಇತ್ತೀಚಿಗೆ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 625 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. https://ainkannada.com/sslc-result-two-students-from-tumkur-in-the-topper-list/ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡ ರೂಪಾ ಪಾಟೀಲ ಕೃಷಿ ಕುಟುಂಬದಿಂದ ಬಂದು, ಈಗ ಸಾಧನೆ ಮಾಡಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎನ್. ಪ್ಯಾಟಿ ಅವರು ರೂಪಾ ಪಾಟೀಲ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ತುಮಕೂರು : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ತುಮಕೂರು ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯದ ಟಾಪರ್ ಪಟ್ಟಿಯಲ್ಲಿದ್ದಾರೆ. ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಿಂದ ತಲಾ ಒಬ್ಬರು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು ಜಿಲ್ಲೆಗೆ ಕೀರ್ತಿ ತಂದಿದೆ. ತುಮಕೂರಿನ ಚೇತನ ವಿದ್ಯಾ ಮಂದಿರ ಶಾಲೆಯ ಮಹಮದ್ ಮನ್ಸೂರ್ ಅದಿಲ್, ಮಧುಗಿರಿಯ ಚಿರಾಕ್ ಪಬ್ಲಿಕ್ ಶಾಲೆಯ ಯಶ್ವಿತಾ ರೆಡ್ಡಿ ಕೆ ಬಿ. ಟಾಪರ್ ಪಟ್ಟಿಯಲ್ಲಿದ್ದಾರೆ. https://ainkannada.com/sslc-results-declared-two-students-scored-625-out-of-625/ ಕೆ ವಿ ಬಾಬು ರೆಡ್ಡಿ ಹಾಗೂ ಸಂಧ್ಯಾ ರೆಡ್ಡಿ ಪುತ್ರಿ ಯಶ್ವಿತಾ ರೆಡ್ಡಿ ಮತ್ತು ಅದಿಲ್ ಹಾಗೂ ಅಫ್ರೋಜ್ ಜಹಾನ್ ದಂಪತಿಯ ಪುತ್ರ ಮಹಮದ್ ಮನ್ಸೂರ್ ಇಬ್ಬರು 625 ಕ್ಕೆ 625 ಅಂಕಗಳಿಸಿ ರಾಜ್ಯ ಪ್ರಥಮ ಸ್ಥಾನ ಪಡೆದಿದ್ದಾರೆ. ಚೇತನಾ ಶಾಲೆ ಹಾಗೂ ಚಿರಾಕ್ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದೆ.
ಬೇಸಿಗೆಯಲ್ಲಿ ಬಿಸಿಲು ಮತ್ತು ತೇವಾಂಶದಿಂದ ಜನರು ಚಡಪಡಿಕೆ, ನಿರ್ಜಲೀಕರಣ ಮತ್ತು ತಲೆನೋವಿನಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವರಿಗೆ ಬೇಸಿಗೆಯಲ್ಲೂ ಶೀತ ಮತ್ತು ಕೆಮ್ಮಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದು ಋತು ಬದಲಾದಾಗಲೆಲ್ಲಾ ಜನರಲ್ಲಿ ಕಂಡುಬರುವ ಒಂದು ರೀತಿಯ ಕಾಲೋಚಿತ ಅಲರ್ಜಿಯ ಪ್ರತಿಕ್ರಿಯೆಯಾಗಿದೆ. ಇದರಿಂದ ಮೂಗು ಸೋರುವಿಕೆ, ಕೆಮ್ಮು, ಗಂಟಲು ಬಿಗಿತ ಮತ್ತು ಕಫದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. https://ainkannada.com/chardham-yatra-in-uttarakhand-begins-today/ ಬೇಸಿಗೆಯಲ್ಲಿ ನೆಗಡಿ ಮತ್ತು ಕೆಮ್ಮಿನ ಸಮಸ್ಯೆಯಿಂದ ಅನೇಕರು ತೊಂದರೆಗೊಳಗಾಗುತ್ತಾರೆ. ಬೇಸಿಗೆಯಲ್ಲಿ ಶೀತ ಆಗುತ್ತದೆ ಎಂದರೆ ವಿಪರ್ಯಾಸವೆನಿಸಬಹುದು. ಆದರೆ ಇದು ಸತ್ಯ. ಬೇಸಿಗೆಯಲ್ಲೂ ಶೀತ, ನೆಗಡಿಯ ಸಮಸ್ಯೆ ಹೊಂದಿರುವವರು ಅನೇಕರಿದ್ದಾರೆ. ಹೀಗಿರುವಾಗ ಬೇಸಿಗೆಯಲ್ಲಿ ನೆಗಡಿ, ಕೆಮ್ಮು ಏಕೆ ಬರುತ್ತಿದೆ ಎಂಬ ಪ್ರಶ್ನೆಯೂ ಜನರ ಮನಸ್ಸಿನಲ್ಲಿ ಮೂಡುವುದು ಸಹಜ. ಬೇಸಿಗೆಯಲ್ಲಿ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಅಸಡ್ಡೆ ಹೊಂದುತ್ತಾರೆ ಎಂದು ವೈದ್ಯರು ಹೇಳುತ್ತಾರೆ, ಇದರಿಂದಾಗಿ ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ವ್ಯಕ್ತಿಯ ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಂಡಾಗ, ಅವನು ಬೇಗನೆ ಸೋಂಕುಗಳು ಮತ್ತು ರೋಗಗಳಿಗೆ…
ಕೋಲಾರ : ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಾಕಷ್ಟು ಹಿಂದೂ ಹೋರಾಟಗಾರರ ಕೊಲೆಗಳಿಗೆ ರಾಜ್ಯದ ಜನತೆ ತಕ್ಕ ಪಾಠವನ್ನು ಕಲಿಸಿದ್ದರು. ಕಳೆದ ಎರಡು ವರ್ಷಗಳಿಂದ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು, ಜಿಹಾದಿ ಮುಸ್ಲಿಂ ಯುವಕರನ್ನು ಬಳಸಿಕೊಂಡು, ಕೊಲೆಗಳು ನಡೆಯುತ್ತಿದ್ದು, ನಾವು ಕರ್ನಾಟಕ ರಾಜ್ಯದಲ್ಲಿ ಇದ್ದೇವಾ, ಇಲ್ಲ ಪಾಕಿಸ್ತಾನ ದೇಶದಲ್ಲಿ ಇದ್ದೇವೆ ಎಂದು ತಿಳಿಯುತ್ತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದ ಡೂಂಲೈಟ್ ವೃತ್ತದಲ್ಲಿ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಕೋಲಾರ ಜಿಲ್ಲಾ ಬಿಜೆಪಿ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ನಂತರ ಮಾತಮಾಡಿದರು, ರಾಜ್ಯದಲ್ಲಿ ಬೆಳ ಗಾದರೆ, ಹಿಂದೂ ಯುವಕರ ಕೊಲೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸರ್ವೇ ಸಾಮಾನ್ಯವಾಗಿದೆ. https://ainkannada.com/three-stabbed-in-the-wake-of-the-gruesome-murder-of-hindu-activist-suhas-shetty/ ಜಿಹಾದಿ ಕಾಂಗ್ರೆಸ್ ಸರಕಾರದಲ್ಲಿ ಸಾಮಾನ್ಯ ಜನರಿಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಯಾವುದೇ ರಕ್ಷಣೆ ಇಲ್ಲವಾಗಿದ್ದು, ಎಷ್ಟೇ ಕೊಲೆ ಗಳು ಆದರೂ ಸಹ…
ನವದೆಹಲಿ:- ನಮ್ಮ ದೇಶಕ್ಕೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವಿದೆ, ಇದು ದುರ್ದೈವ ಎಂದು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. https://ainkannada.com/deepika-padukone-joins-prabhas-in-sandeep-reddy-vangas-spirit/ ಈ ಸಂಬಂಧ ಮಾತನಾಡಿದ ಅವರು, ಪಾಕಿಸ್ತಾನದ ಇತಿಹಾಸದ ಬಗ್ಗೆ ಹೇಳುವುದಾದರೆ ಪಾಕಿಸ್ತಾನಕ್ಕೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವಿದೆ ಎಂಬುದು ರಹಸ್ಯವೇನಲ್ಲ ಅದು ಇತಿಹಾಸವಾಗಿದೆ. ಆದರೆ ಇಂದು ನಾವು ಅದರಲ್ಲಿ ಭಾಗಿಯಾಗಿಲ್ಲ. ಇದು ನಮ್ಮ ಇತಿಹಾಸದ ದುರದೃಷ್ಟಕರ ಭಾಗವಾಗಿದೆ ಎಂಬುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ದೇಶವು ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ಮತ್ತು ಧನಸಹಾಯ ನೀಡಿದೆ ಎಂದು ಒಪ್ಪಿಕೊಂಡಿದ್ದರು. ಅಮೆರಿಕಕ್ಕಾಗಿ ನಾವು ಕೊಳಕು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಬಿಲಾವಲ್ ಭುಟ್ಟೋ ಜರ್ದಾರಿ ಹೇಳಿಕೆ ಪುಷ್ಠಿಕರಿಸಿದೆ. ಭಯೋತ್ಪಾದನೆಗೆ ಬೆಂಬಲ ನೀಡಿದಕ್ಕೆ ಪಾಕಿಸ್ತಾನ ಸಾಕಷ್ಟು ಅನುಭವಿಸಿದೆ. ನಾವು ಉಗ್ರವಾದದ ಹಲವು ಅಲೆಗಳನ್ನು ಎದುರಿಸಿದ್ದೇವೆ. ನಾವು ಅನುಭವಿಸಿದ ಪರಿಣಾಮವಾಗಿ ನಾವು ಸಾಕಷ್ಟು ಪಾಠಗಳನ್ನು ಸಹ ಕಲಿತಿದ್ದೇವೆ. ಈ…
ಉತ್ತರಾಖಂಡ್ : ಇಂದಿನಿಂದ ಉತ್ತರಖಂಡದ ಚಾರ್ಧಾಮ್ ಯಾತ್ರೆ ಆರಂಭವಾಗಿದ್ದು, ನಾಲ್ಕು ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಾಲಯದ ಬಾಗಿಲು ತೆರೆಯಲಾಗಿದೆ. ಕೇದಾರನಾಥ ದೇವಾಲಯದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಪ್ರತೀವರ್ಷವೂ ಆರು ತಿಂಗಳ ಕಾಲ ಚಾರ್ ಧಾಮ್ ಯಾತ್ರೆ ಇರುತ್ತದೆ. ಇನ್ನುಳಿದ ಆರು ತಿಂಗಳ ಕಾಲ ಹಿಮಪಾತವಾಗುವುದರಿಂದ ಆ ಸಮಯದಲ್ಲಿ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ. ದೀಪಾವಳಿ ಹಬ್ಬದ ಎರಡು ದಿನಗಳ ನಂತರ ಭಾಯಿ ದೂಜ್ ದಿನದಂದು ಕೇದಾರನಾಥ ದೇವಾಲಯವನ್ನು ಮುಚ್ಚಲಾಗುತ್ತದೆ. ಕೇದಾರನಾಥ ಧಾಮ ಯಾತ್ರೆಗೆ ಹೆಲಿಕಾಪ್ಟರ್ ಸೇವೆಗಳು ಮೇ.1ರಿಂದ ಉತ್ತರಾಖಂಡದ ಸೋನ್ಪ್ರಯಾಗದಿಂದ ಪ್ರಾರಂಭವಾಗಿವೆ. ಹೆಲಿಕಾಪ್ಟರ್ ಮೂಲಕ ಭಕ್ತರು ಸುಲಭವಾಗಿ ದೇವಾಲಯವನ್ನು ತಲುಪಬಹುದು. ಅಕ್ಷಯತೃತೀಯದಂದು (ಬುಧವಾಋ ಏ.30) ಬೆಳಗ್ಗೆ ಗಂಗೋತ್ರಿ ದೇವಾಲಯದ ಬಾಗಿಲನ್ನು ಬೆಳಗ್ಗೆ 10:30 ಕ್ಕೆ ವಿಶೇಷ ಪೂಜೆ ಮತ್ತು ಅಭಿಷೇಕದೊಂದಿಗೆ ತೆರೆಯಲಾಯಿತು. ಇನ್ನೂ ಯಮುನೋತ್ರಿ ಧಾಮದ ಬಾಗಿಲನ್ನು ಇದೇ ದಿನ ಬೆಳಿಗ್ಗೆ 11:55 ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಕ್ತರಿಗಾಗಿ ತೆರೆಯಲಾಯಿತು. https://ainkannada.com/only-by-cultivating-culture-ethics-and-yoga-can-we-survive-shiva-shankaracharya/ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಗಂಗೋತ್ರಿ ಮತ್ತು ಯಮುನೋತ್ರಿ…
ಬೆಂಗಳೂರು:- ಯತ್ನಾಳ್ ಸವಾಲು ಸ್ವೀಕರಿಸಿ ತಮ್ಮ ಶಾಸಕ ಸ್ಥಾನಕ್ಕೆ ಇಂದು ಶಿವಾನಂದ ಪಾಟೀಲ್ ಅವರು ರಾಜೀನಾಮೆ ಕೊಟ್ಟಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, ಯತ್ನಾಳ್ ಅವರ ಸವಾಲು ಸ್ವೀಕಾರ ಮಾಡಿ ಸ್ಪೀಕರ್ ಅವರಿಗೆ ರಾಜೀನಾಮೆ ನೀಡಿದ್ದೇನೆ. ಪಕ್ಷಕ್ಕೂ, ಸಿಎಂಗೂ ಇದು ಸಂಬಂಧಿಸಿಲ್ಲ ಎಂದು ಹೇಳಿದರು. https://ainkannada.com/only-by-cultivating-culture-ethics-and-yoga-can-we-survive-shiva-shankaracharya/ ಡೆಡ್ ಲೈನ್ ಫಿಕ್ಸ್ ಮಾಡಿದ್ದು ಯತ್ನಾಳ್. ಶುಕ್ರವಾರದೊಳಗೆ ರಾಜೀನಾಮೆ ಕೊಡದಿದ್ದರೆ ಅವರಪ್ಪನಿಗೆ ಹುಟ್ಟಿಲ್ಲ ಎಂದಿದ್ದರು. ಅದಕ್ಕೆ ಈಗ ನಾನು ರಾಜೀನಾಮೆ ನೀಡಿದ್ದೇನೆ. ಹೀಗಾಗಿ ಯತ್ನಾಳ್ ಕೂಡ ರಾಜೀನಾಮೆ ಕೊಡಲಿ. ವಿಜಯಪುರದಲ್ಲಾದ್ರೂ ಸರಿ, ಬಸವನಬಾಗೇವಾಡಿಯಲ್ಲಾದ್ರೂ ಸರಿ ಅವರ ಎದುರು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು. ಯತ್ನಾಳ್ ಅವರ ತಂದೆ ತಾಯಿಗಳಿಗೆ ಹುಟ್ಟಿದ್ದಾರೆ. ನಾನು ಆ ಮಾತುಗಳನ್ನ ಆಡಲ್ಲ. ಆದರೆ ನನ್ನ ಪೂರ್ವಜರ ಬಗ್ಗೆ ಪಾಟೀಲ್ ಹೆಸರಿನ ಬಗ್ಗೆ ಮಾತನಾಡಿದ್ದಕ್ಕೆ ನೋವಾಗಿದೆ ಎಂದು ಬೇಸರ ಹೊರ ಹಾಕಿದರು. ನನ್ನ ಪೂರ್ವಜರು ಹಿಂದೆ ಬೇರೆ ಅಡ್ಡ ಹೆಸರು ಇಟ್ಟುಕೊಂಡಿರಬಹುದು ಗೊತ್ತಿಲ್ಲ. ನನಗೆ ಹುಟ್ಟಿನಿಂದ ಪಾಟೀಲ್ ಅಂತಾ…