Author: AIN Author

ಚಾಮರಾಜನಗರ : ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಯಾರು ಆತಂಕಪಡುವ ಅಗತ್ಯ ಇಲ್ಲ ಎಂದು  ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಂಬ್ ಇಟ್ಟಿರುವುದಾಗಿ ನಮಗೆ ಮೇಲ್ ಬಂದಿದೆ. ಸೆನ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ನೌಕರರನ್ನು ಹೊರಗೆ ಕಳಿಸಿದ್ದೇವೆ. ಜಿಲ್ಲಾಡಳಿತ ಭವನದಲ್ಲಿ ತಪಾಸಣೆ ಮಾಡಲಾಗುತ್ತಿದೆ ಸಾರ್ವಜನಿಕರು ಮಧ್ಯಾಹ್ನ 3 ನಂತರ ಡಿಸಿ ಕಚೇರಿಗೆ ಬರಬಹುದು ಎಂದರು. https://ainkannada.com/bomb-threat-call-to-chamarajanagar-district-administration-building-intensive-investigation-underway/ ಇನ್ನೂ ಚಾಮರಾಜನಗರ ಎಸ್ಪಿ ಡಾ ಕವಿತಾ ಅವರು ಮಾತನಾಡಿ, ಡಿಸಿ ಕಚೇರಿಗೆ ಮೇಲ್ ಬಂದಿದೆ. ಮೂರು ಗಂಟೆಯೊಳಗೆ ಖಾಲಿ ಮಾಡಬೇಕು, ಮದ್ಯಾಹ್ನ 3 ಗಂಟೆಯೊಳಗೆ ಬಾಂಬ್ ಬ್ಲಾಸ್ಟ್ ಮಾಡ್ತೀವಿ ಅಂತ ಮೇಲ್ ‌ನಲ್ಲಿ ತಿಳಿಸಲಾಗಿದೆ. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ನೌಕರರನ್ನು ಸಾರ್ವಜನಿಕರನ್ನು ಡಿಸಿ ಕಚೇರಿಯಿಂದ ಹೊರ ಕಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಿಂದ ಶೋಧ ಕಾರ್ಯ ನಡೆಸಲಾಗಿದೆ.…

Read More

ರಾಯಚೂರು : ಚಾಮರಾಜನಗರ ಬಳಿಕ ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬೆದರಿಕೆ ಇಮೇಲ್ ಬಂದಿದೆ. ಅಪರಿಚಿತರಿಂದ ಜಿಲ್ಲಾಧಿಕಾರಿಗಳಿಗೆ ಇಮೇಲ್ ಮುಖಾಂತರ ಬೆದರಿಕೆ ಹಾಕಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಬಂದಿದ್ದು, ಎಲ್ಲೆಡೆಯೂ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಸಿಬ್ಬಂದಿ ಮತ್ತು ಅಲ್ಲಿದ್ದ ಜನರು ಹೊರ ಓಡಿ ಬಂದಿದ್ದಾರೆ. https://ainkannada.com/bomb-threat-call-to-chamarajanagar-district-administration-building-intensive-investigation-underway/ ಪಹಲ್ಗಾಮ್ ದಾಳಿ, ನಕ್ಸಲ್ ಹತ್ಯೆ ಹಿನ್ನೆಲೆಯಲ್ಲಿ ಬೆದರಿಕೆ ಬಂದಿರುವ ಶಂಕೆ ಬಾಂಬ್‌ ಸ್ಕ್ವಾಡ್‌ ಮತ್ತು ಶ್ವಾನದಳ ಸಿಬ್ಬಂದಿ ಇಡೀ ಕಚೇರಿ ಪೂರ್ತಿ ಹುಡುಕಾಟ ನಡೆಸಿದ್ದಾರೆ.

Read More

ಬೆಂಗಳೂರು, ಮೇ 2: “ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. https://ainkannada.com/mp-jagadish-shettar-showed-humanity-by-taking-accident-victims-to-hospital/ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಕೇಳಿದಾಗ, “ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ” ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

Read More

ಬೆಳಗಾವಿ : ಸಂಸದ ಜಗದೀಶ್‌ ಶೆಟ್ಟರ್‌  ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಅನಿಗೋಳ ಗ್ರಾಮದಲ್ಲಿ ಪರಸ್ಪರ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿ ಕಾರ್ಯಕರ್ತನ ಮದುವೆಗೆಂದು ಅದೇ ಮಾರ್ಗದಲ್ಲಿ ಹೋಗುತ್ತಿದ್ದರು. ಈ ವೇಳೆ ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ಬೈಕ್ ಸವಾರನನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. https://ainkannada.com/bomb-threat-call-to-chamarajanagar-district-administration-building-intensive-investigation-underway/ ನವಲಗುಂದ ತಾಲೂಕಿನ ಬಸವರಾಜ್ ರಾಗಿ,  ಶಾಂತವೀರ ಪಾಟೀಲ್ ಎಂಬುವರನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಬೈಲಹೊಂಗಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು, ಮೇ 02: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://ainkannada.com/not-only-the-bark-but-its-leaves-are-equally-beneficial/ ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ.ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ರಾಹುಲ್ ಗಾಂಧಿ ಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ…

Read More

ಮಂಡ್ಯ : ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ… ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಇಂದು ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು. ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ.  ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು. ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ…

Read More

ಆಯುರ್ವೇದದ ಪ್ರಕಾರ, ಪರಂಗಿ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಆದರೆ, ಈ ಹಣ್ಣನ್ನು ಕೆಲವು ಆಹಾರ ಪದಾರ್ಥಗಳ ಜೊತೆ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು. ಹಾಗಿದ್ದರೆ, ಪರಂಗಿಹಣ್ಣಿನ ಜೊತೆ ಯಾವ ಹಣ್ಣುಗಳ ಸೇವನೆಯನ್ನು ತಪ್ಪಿಸಬೇಕು ಎಂದು ತಿಳಿಯೋಣ… https://ainkannada.com/ours-is-a-basavatava-government-committed-to-the-protection-of-all-minister-m-b-patil/ ಪರಂಗಿ ಅಥವಾ ಪಪ್ಪಾಯಿ ಹಣ್ಣು ತಿಂದರೆ ಕಣ್ಣುಗಳಿಗೆ ಒಳ್ಳೆಯದು. ಪರಂಗಿ ಹಣ್ಣಿನಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪರಂಗಿಕಾಯಿ ಇಂದ ಬೇರೆ ಬೇರೆ ಬಗೆಯ ಆಹಾರ ಪದಾರ್ಥಗಳನ್ನು ತಯಾರಿಸಿ ಸೇವಿಸಬಹುದು. ಎಂದೆಲ್ಲಾ ನಮಗೆ ಗೊತ್ತಿರುತ್ತದೆ. ಆದರೆ ಪರಂಗಿ ಎಲೆಗಳ ಆರೋಗ್ಯ ಪ್ರಯೋಜನಗಳು ಅಥವಾ ಅದರ ರುಚಿ ನಮಗೆ ಅಷ್ಟು ಪರಿಚಯವಿರುವುದಿಲ್ಲ. ಆದರೆ ಸರಿಯಾಗಿ ಹೇಳಬೇಕು ಎಂದರೆ ಪರಂಗಿ ಹಣ್ಣು ಮತ್ತು ಪರಂಗಿಕಾಯಿಗಳಿಗೆ ಹೋಲಿಸಿದರೆ ಪರಂಗಿ ಮರದ ಎಲೆಗಳಲ್ಲಿ ನಮಗೆ ಅತಿಹೆಚ್ಚು ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಸಂಶೋಧಕರ ಪ್ರಕಾರ ಪರಂಗಿ ಎಲೆಗಳಲ್ಲಿ ಫೈಟೋನ್ಯೂಟ್ರಿಯೆಂಟ್ಸ್ ಮತ್ತು ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ತುಂಬಾ ಹೇರಳವಾಗಿ ಕಂಡು ಬರುತ್ತದೆ. ಅನೇಕ ಬಗೆಯ ಆರೋಗ್ಯ ಸಮಸ್ಯೆಗಳಿಗೆ…

Read More

ವಿಜಯಪುರ : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರು, ಕ್ರಮ ಕೈಗೊಳ್ಳಲಾಗುತ್ತೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಯಾಕಾಗಿದೆ ಅನ್ನೋದು ಗೊತ್ತಿಲ್ಲ‌. ಸರ್ಕಾರ ಗಂಭೀರವಾಗಿ ಪರಿಗಣಿಸುತ್ತೆ. ತ ಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೆ ಎಂದರು. ಇನ್ನೂ ಪ್ರಕರಣವನ್ನು ಎನ್‌ಐಎ ವಹಿಸಬೇಕೆಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿ,  ಸುಮ್ಮ ಸುಮ್ಮನೆ ಎಲ್ಲಾನೂ ಎನ್ ಐಎ ಅಂದ್ರೇನು. ಟೆರಿಸ್ಟ್ ಪ್ರಕರಣ ಇದ್ದರೆ ಎನ್ ಐಎ. ರಾಜ್ಯ ಸರ್ಕಾರ ಮಾಡುತ್ತೆ. ಇದರಲ್ಲಿ ಮುಚ್ಚುಮರೆ ಯಾಕೆ. ಸರ್ಕಾರ ಯಾವುದೇ ಇದ್ದರೂ ಪೊಲೀಸರು ಇರ್ತಾರೆ. ನಾವು ಬದಲಾವಣೆ ಆಗ್ತೀವಿ.. ಅಧಿಕಾರಿಗಳು ಅವರೇ ಇರ್ತಾರೆ. ನಾವು ಟೆಂಪರರಿ, ಅವರು ಪರ್ಮಿನೆಂಟ್ ಎಂದರು. https://ainkannada.com/hindu-activist-murdered-strict-action-will-be-taken-against-whoever-is-responsible-for-the-murder-cm-siddaramaiah/ ಇನ್ನೂ ಹಿಂದಿನ ದಿನವೇ ಫೋಟೋ ಹಾಕಿ ಹತ್ಯೆ ಮಾಡ್ತೀವಿ ಎಂಬ ಪೋಸ್ಟ್ ವಿಚಾರವಾಗಿ ಮಾತನಾಡಿ, ತನಿಖೆ ಮಾಡುತ್ತೇವೆ. ನಿರ್ದಾಕ್ಷಿಣ್ಯವಾಗಿ ಉಗ್ರ  ಕ್ರಮ ಕೈಗೊಳ್ಳುತ್ತೇವೆ.  ನಮ್ಮ ಸರ್ಕಾರದಲ್ಲಿ ಎಲ್ಲರಿಗೂ ರಕ್ಷಣೆ ಸಿಗಲಿದೆ. ಎಲ್ಲ ಧರ್ಮ, ಜಾತಿಗಳ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಸಿಬ್ಬಂದಿ ಕಚೇರಿಯಿಮದ ಹೊರ ಬಂದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲಾಧಿಕಾರಿ,ಜಿಲ್ಲಾ ಎಸ್ಪಿ ಸೇರಿದಂತೆ ಬಹುತೇಕ ಸರ್ಕಾರಿ ಅಧಿಕಾರಿಗಳ ಈ ಮೇಲ್ ಗೆ ಬಾಂಬ್ ಬೆದರಿಕೆ ಪತ್ರ ರವಾನೆ ಮಾಡಲಾಗಿದ್ದು, ಈ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ಭಯಭೀತರಾದ ಸರ್ಕಾರಿ ಅಧಿಕಾರಿಗಳು, ಕಚೇರಿಯಿಂದ ಹೊರಗೆ ಬಂದಿದ್ದಾರೆ. https://ainkannada.com/former-union-minister-girija-vyas-dies-after-catching-fire-during-aarti/ ಇನ್ನೂ ಬಾಂಬ್ ಬೆದರಿಕೆ ಹಿನ್ನಲೆ ಮುಂಜಾಗ್ರತಾ ಕ್ರಮಕೈಗೊಂಡ ಪೋಲೀಸ್ ಅಧಿಕಾರಿಗಳು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ , ಶ್ವಾನ ದಳ ಹಾಗೂ ಅಗ್ಮಿಶಾಮಕ ದಳದಿಂದ ಪರೀಶಿಲನೆ ನಡೆಸಲಾಯಿತು. ಜೊತೆಗೆ ಡಿಸಿ ಕಚೇರಿ ಮುಂಭಾಗ ಗೇಟ್ ಬಂದ್ ಮಾಡಿ, ಡಿಸಿ ಆಫೀಸಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಜಿಲ್ಲಾ ಕೇಂದ್ರಕ್ಕೆ ಆಗಮಿಸುವ  ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.  

Read More

ಬೆಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಆಘಾತಕಾರಿ ಘಟನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. https://ainkannada.com/pakistan-zindabad-is-also-the-reason-for-the-murder-of-hindu-activist-suhas-r-ashoks-explosive-statement/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಆದರೆ ಬಿಜೆಪಿಯವರು ಬೆಂಕಿ ಹಚ್ಚೋದು ಬೇಡ ಎಂದರು. ಕೊಲೆ ಕೇಸ್ ಅತ್ಯಂತ ಆಘಾತಕಾರಿ ಘಟನೆ. ಮೊನ್ನೆ ಅಶ್ರಫ್ ಎಂದು ತೀರಿ ಹೋಗಿದ್ದರು. ಇವತ್ತು ಸುಹಾಸ್ ಶೆಟ್ಟಿ ಕೊಲೆ ಆಗಿರುವುದು ಎಲ್ಲರಿಗೂ ಅಘಾತವಾಗಿದೆ. ಇದು ದುರ್ಘಟನೆ. ನಮ್ಮ ಪೊಲೀಸರು ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕ್ರಮ ತೆಗೆದುಕೊಳ್ಳಲು ಮುಕ್ತ ಅವಕಾಶ ಕೊಟ್ಟಿದ್ದೇವೆ. ಪೊಲೀಸರು ಜವಾಬ್ದಾರಿಯಿಂದ ಉತ್ತಮವಾಗಿ ನಿರ್ವಹಣೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕೋಮಿನ ವಿಷ ಬೀಜ ಹೋಗಲಾಡಿಸಲು ಎಲ್ಲರೂ ಪ್ರಯತ್ನ ಮಾಡಬೇಕು. ಪ್ರಚೋದನಕಾರಿ ಮಾತು ಆಡುವ ಮೂಲಕ, ದ್ವೇಷವನ್ನು ಹೆಚ್ಚಿಸುವ ಮೂಲಕ ಇದಕ್ಕೆ ಕೊನೆಯಿಲ್ಲ. ನಮಗೆ ಶಾಂತಿ, ನೆಮ್ಮದಿ…

Read More