Author: AIN Author

ಆಯುರ್ವೇದದ ಪ್ರಕಾರ, ಪರಂಗಿ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಹಣ್ಣು. ಆದರೆ, ಈ ಹಣ್ಣನ್ನು ಕೆಲವು ಆಹಾರ ಪದಾರ್ಥಗಳ ಜೊತೆ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು. ಹಾಗಿದ್ದರೆ, ಪರಂಗಿಹಣ್ಣಿನ ಜೊತೆ ಯಾವ ಹಣ್ಣುಗಳ ಸೇವನೆಯನ್ನು ತಪ್ಪಿಸಬೇಕು ಎಂದು ತಿಳಿಯೋಣ… https://ainkannada.com/ours-is-a-basavatava-government-committed-to-the-protection-of-all-minister-m-b-patil/ ಪರಂಗಿ ಅಥವಾ ಪಪ್ಪಾಯಿ ಹಣ್ಣು ತಿಂದರೆ ಕಣ್ಣುಗಳಿಗೆ ಒಳ್ಳೆಯದು. ಪರಂಗಿ ಹಣ್ಣಿನಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪರಂಗಿಕಾಯಿ ಇಂದ ಬೇರೆ ಬೇರೆ ಬಗೆಯ ಆಹಾರ ಪದಾರ್ಥಗಳನ್ನು ತಯಾರಿಸಿ ಸೇವಿಸಬಹುದು. ಎಂದೆಲ್ಲಾ ನಮಗೆ ಗೊತ್ತಿರುತ್ತದೆ. ಆದರೆ ಪರಂಗಿ ಎಲೆಗಳ ಆರೋಗ್ಯ ಪ್ರಯೋಜನಗಳು ಅಥವಾ ಅದರ ರುಚಿ ನಮಗೆ ಅಷ್ಟು ಪರಿಚಯವಿರುವುದಿಲ್ಲ. ಆದರೆ ಸರಿಯಾಗಿ ಹೇಳಬೇಕು ಎಂದರೆ ಪರಂಗಿ ಹಣ್ಣು ಮತ್ತು ಪರಂಗಿಕಾಯಿಗಳಿಗೆ ಹೋಲಿಸಿದರೆ ಪರಂಗಿ ಮರದ ಎಲೆಗಳಲ್ಲಿ ನಮಗೆ ಅತಿಹೆಚ್ಚು ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಸಂಶೋಧಕರ ಪ್ರಕಾರ ಪರಂಗಿ ಎಲೆಗಳಲ್ಲಿ ಫೈಟೋನ್ಯೂಟ್ರಿಯೆಂಟ್ಸ್ ಮತ್ತು ಆಂಟಿಆಕ್ಸಿಡೆಂಟ್ ಅಂಶಗಳ ಪ್ರಮಾಣ ತುಂಬಾ ಹೇರಳವಾಗಿ ಕಂಡು ಬರುತ್ತದೆ. ಅನೇಕ ಬಗೆಯ ಆರೋಗ್ಯ ಸಮಸ್ಯೆಗಳಿಗೆ…

Read More

ವಿಜಯಪುರ : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರು, ಕ್ರಮ ಕೈಗೊಳ್ಳಲಾಗುತ್ತೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಯಾಕಾಗಿದೆ ಅನ್ನೋದು ಗೊತ್ತಿಲ್ಲ‌. ಸರ್ಕಾರ ಗಂಭೀರವಾಗಿ ಪರಿಗಣಿಸುತ್ತೆ. ತ ಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೆ ಎಂದರು. ಇನ್ನೂ ಪ್ರಕರಣವನ್ನು ಎನ್‌ಐಎ ವಹಿಸಬೇಕೆಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿ,  ಸುಮ್ಮ ಸುಮ್ಮನೆ ಎಲ್ಲಾನೂ ಎನ್ ಐಎ ಅಂದ್ರೇನು. ಟೆರಿಸ್ಟ್ ಪ್ರಕರಣ ಇದ್ದರೆ ಎನ್ ಐಎ. ರಾಜ್ಯ ಸರ್ಕಾರ ಮಾಡುತ್ತೆ. ಇದರಲ್ಲಿ ಮುಚ್ಚುಮರೆ ಯಾಕೆ. ಸರ್ಕಾರ ಯಾವುದೇ ಇದ್ದರೂ ಪೊಲೀಸರು ಇರ್ತಾರೆ. ನಾವು ಬದಲಾವಣೆ ಆಗ್ತೀವಿ.. ಅಧಿಕಾರಿಗಳು ಅವರೇ ಇರ್ತಾರೆ. ನಾವು ಟೆಂಪರರಿ, ಅವರು ಪರ್ಮಿನೆಂಟ್ ಎಂದರು. https://ainkannada.com/hindu-activist-murdered-strict-action-will-be-taken-against-whoever-is-responsible-for-the-murder-cm-siddaramaiah/ ಇನ್ನೂ ಹಿಂದಿನ ದಿನವೇ ಫೋಟೋ ಹಾಕಿ ಹತ್ಯೆ ಮಾಡ್ತೀವಿ ಎಂಬ ಪೋಸ್ಟ್ ವಿಚಾರವಾಗಿ ಮಾತನಾಡಿ, ತನಿಖೆ ಮಾಡುತ್ತೇವೆ. ನಿರ್ದಾಕ್ಷಿಣ್ಯವಾಗಿ ಉಗ್ರ  ಕ್ರಮ ಕೈಗೊಳ್ಳುತ್ತೇವೆ.  ನಮ್ಮ ಸರ್ಕಾರದಲ್ಲಿ ಎಲ್ಲರಿಗೂ ರಕ್ಷಣೆ ಸಿಗಲಿದೆ. ಎಲ್ಲ ಧರ್ಮ, ಜಾತಿಗಳ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಸಿಬ್ಬಂದಿ ಕಚೇರಿಯಿಮದ ಹೊರ ಬಂದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲಾಧಿಕಾರಿ,ಜಿಲ್ಲಾ ಎಸ್ಪಿ ಸೇರಿದಂತೆ ಬಹುತೇಕ ಸರ್ಕಾರಿ ಅಧಿಕಾರಿಗಳ ಈ ಮೇಲ್ ಗೆ ಬಾಂಬ್ ಬೆದರಿಕೆ ಪತ್ರ ರವಾನೆ ಮಾಡಲಾಗಿದ್ದು, ಈ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆಯಿಂದ ಭಯಭೀತರಾದ ಸರ್ಕಾರಿ ಅಧಿಕಾರಿಗಳು, ಕಚೇರಿಯಿಂದ ಹೊರಗೆ ಬಂದಿದ್ದಾರೆ. https://ainkannada.com/former-union-minister-girija-vyas-dies-after-catching-fire-during-aarti/ ಇನ್ನೂ ಬಾಂಬ್ ಬೆದರಿಕೆ ಹಿನ್ನಲೆ ಮುಂಜಾಗ್ರತಾ ಕ್ರಮಕೈಗೊಂಡ ಪೋಲೀಸ್ ಅಧಿಕಾರಿಗಳು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ , ಶ್ವಾನ ದಳ ಹಾಗೂ ಅಗ್ಮಿಶಾಮಕ ದಳದಿಂದ ಪರೀಶಿಲನೆ ನಡೆಸಲಾಯಿತು. ಜೊತೆಗೆ ಡಿಸಿ ಕಚೇರಿ ಮುಂಭಾಗ ಗೇಟ್ ಬಂದ್ ಮಾಡಿ, ಡಿಸಿ ಆಫೀಸಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಜಿಲ್ಲಾ ಕೇಂದ್ರಕ್ಕೆ ಆಗಮಿಸುವ  ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.  

Read More

ಬೆಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಆಘಾತಕಾರಿ ಘಟನೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. https://ainkannada.com/pakistan-zindabad-is-also-the-reason-for-the-murder-of-hindu-activist-suhas-r-ashoks-explosive-statement/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಆದರೆ ಬಿಜೆಪಿಯವರು ಬೆಂಕಿ ಹಚ್ಚೋದು ಬೇಡ ಎಂದರು. ಕೊಲೆ ಕೇಸ್ ಅತ್ಯಂತ ಆಘಾತಕಾರಿ ಘಟನೆ. ಮೊನ್ನೆ ಅಶ್ರಫ್ ಎಂದು ತೀರಿ ಹೋಗಿದ್ದರು. ಇವತ್ತು ಸುಹಾಸ್ ಶೆಟ್ಟಿ ಕೊಲೆ ಆಗಿರುವುದು ಎಲ್ಲರಿಗೂ ಅಘಾತವಾಗಿದೆ. ಇದು ದುರ್ಘಟನೆ. ನಮ್ಮ ಪೊಲೀಸರು ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕ್ರಮ ತೆಗೆದುಕೊಳ್ಳಲು ಮುಕ್ತ ಅವಕಾಶ ಕೊಟ್ಟಿದ್ದೇವೆ. ಪೊಲೀಸರು ಜವಾಬ್ದಾರಿಯಿಂದ ಉತ್ತಮವಾಗಿ ನಿರ್ವಹಣೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕೋಮಿನ ವಿಷ ಬೀಜ ಹೋಗಲಾಡಿಸಲು ಎಲ್ಲರೂ ಪ್ರಯತ್ನ ಮಾಡಬೇಕು. ಪ್ರಚೋದನಕಾರಿ ಮಾತು ಆಡುವ ಮೂಲಕ, ದ್ವೇಷವನ್ನು ಹೆಚ್ಚಿಸುವ ಮೂಲಕ ಇದಕ್ಕೆ ಕೊನೆಯಿಲ್ಲ. ನಮಗೆ ಶಾಂತಿ, ನೆಮ್ಮದಿ…

Read More

ಬೆಂಗಳೂರು:- ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. https://ainkannada.com/former-union-minister-girija-vyas-dies-after-catching-fire-during-aarti/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನೇಹಾ ಹತ್ಯೆಯಾದಾಗ, ಲವ್ ಜಿಹಾದ್ ಆದಾಗ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಥರ ಕೊಲೆಗಳಾಗುತ್ತಿವೆ. ಇಡೀ ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಯಿಂದ ಬೆಚ್ಚಿಬಿದ್ದಿದೆ. ಇಂದು ಮಂಗಳೂರು ಬಂದ್‌ಗೂ ಕರೆ ಕೊಡಲಾಗಿದೆ. ಈಥರದ ಘಟನೆಗಳು ಹಿಂದೆ ಕಾಂಗ್ರೆಸ್ ಇದ್ದಾಗಲೂ ಆಗಿವೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ 56 ಹಿಂದೂ ಕಾರ್ಯಕರ್ತರ ಕೊಲೆ ಆಗಿದೆ. ಕಾಂಗ್ರೆಸ್ ಬಂದಾಗೆಲ್ಲ ಪಾಕ್ ಜಿಂದಾಬಾದ್ ಕೂಗುವರು, ಪಾಕ್ ಬಾವುಟ ಪ್ರದರ್ಶನ ಮಾಡುವವರು ಹೆಚ್ಚಾಗಿದ್ದಾರೆ. ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮ ಕೈಗೊಳುತ್ತಿಲ್ಲ. ದೇಶದ್ರೋಹಿಗಳ ವಿರುದ್ಧ ಗುಂಡು ಹೊಡೆದು ಸಾಯಿಸುವ ಕಾನೂನು ಬರಬೇಕು. ಸುಹಾಸ್ ಕೊಲೆ ಹಿಂದೂ ಕಾರ್ಯಕರ್ತರಿಗೆ…

Read More

ನವದೆಹಲಿ: ಆರತಿ ವೇಳೆ ಬೆಂಕಿ ತಗುಲಿ ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್ ನಿಧನರಾಗಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕಿ ಗಿರಿಜಾ ವ್ಯಾಸ್‌ ಅವರ ನಿಧನದ ಕುರಿತು ಸಹೋದರ ಗೋಪಾಲ್ ಶರ್ಮಾ ಖಚಿತಪಡಿಸಿದ್ದಾರೆ. ಕಳೆದ ಏ.2ರಂದು ಗಿರಿಜಾ ವ್ಯಾಸ್‌ ಅವರು ಉದಯಪುರದಲ್ಲಿರುವ ತಮ್ಮ ಮನೆಯಲ್ಲಿ ದೇವರಿಗೆ ಆರತಿ ಮಾಡುವ ವೇಳೆ ಅವರ ಬಟ್ಟೆಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಾಗಿತ್ತು. ಕೂಡಲೇ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾಋ ಆಸ್ಪತ್ರೆಯಲ್ಲೇ ಗಿರಿಜಾ ವ್ಯಾಸ್ ಕೊನೆಯುಸಿರೆಳೆದಿದ್ದಾರೆ. https://ainkannada.com/heavy-rains-in-national-capital-delhi-four-killed-as-house-collapses/ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥೆಯೂ ಆಗಿದ್ದ ಗಿರಿಜಾ ವ್ಯಾಸ್ ರಾಜ್ಯ ಮತ್ತು ಕೇಂದ್ರ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು. 1991ರಲ್ಲಿ ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದ ಗಿರಿಜಾ, ಅಂದಿನ ಪ್ರಧಾನಿಯಾಗಿದ್ದ ನರಸಿಂಹ ರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಕೇಮದ್ರ ಸಚಿವೆಯಾಗಿದ್ದರು

Read More

ಬೆಂಗಳೂರು:- ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಅನ್ನೋ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainkannada.com/sslc-result-announced-62-34-result-this-time-education-minister-madhu-bangarappa-announces/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯ ಹತ್ಯೆ ಮಾಡಿದವರು ಯಾರೇ ಆಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಲಿದೆ. ನಿನ್ನೆ ರಾತ್ರಿ 8:30ರ ಸುಮಾರಿಗೆ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈಗಾಗಲೇ ನಾವು ಆಕ್ಷನ್ ತೆಗೆದುಕೊಂಡಿದ್ದೇವೆ. ಯಾರು ಈ ಕೆಲಸ ಮಾಡಿದ್ದಾರೆ ಅವರಿಗೆ ಕಾನೂನು ಕ್ರಮ ಆಗಲಿದೆ. ಇದು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ ಎಂದರು. ನಾಲ್ಕು ತಂಡಗಳನ್ನು ರಚನೆ ಮಾಡಿ ತನಿಖೆಗೆ ಕಳುಹಿಸಿದ್ದೇವೆ. ಈ ರೀತಿ ಘಟನೆ ಆಗೋದಕ್ಕೆ ಬಿಡಲ್ಲ. ಮಂಗಳೂರು ಜನ ಶಾಂತಿ ಕಾಪಾಡಿ. ಸರ್ಕಾರ ನಿಮ್ಮ ಜೊತೆ ಇರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರಿಗೆ ತಿಳಿಸಿದ್ದೇವೆ. ತನಿಖೆ ಮುಂದುವರೆದಿದ್ದು, ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮ ಆಗಲಿದೆ. ಇದನ್ನು ಯಾವುದೇ…

Read More

ಮಂಡ್ಯ: ಹಿಂದೂ ಕಾರ್ಯಕರ್ತನ ಹತ್ಯೆಗೆ ಕಾರಣ ಗೊತ್ತಿಲ್ಲ ಆದರೆ ತನಿಖೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಂಡ್ಯದ ತೂಬಿನಕೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಹತ್ಯೆ ಯಾಕೆ ನಡೆದಿದೆ ಗೊತ್ತಿಲ್ಲ. ಮೃತ ವ್ಯಕ್ತಿ ರೌಡಿಶೀಟರ್ ಅಂತ ಹೇಳುತ್ತಿದ್ದಾರೆ. ಹಂತಕರು ಯಾರೇ ಆಗಿದ್ರು ಕೂಡಲೇ ಕ್ರಮ ಆಗಬೇಕು. ಶೀಘ್ರ ಆರೋಪಿಗಳ ಪತ್ತೆಗೆ ಕ್ರಮವಹಿಸಬೇಕು. ಇಂತಹ ಘಟನೆಗಳಿಗಾಗಿಯೇ ಬಿಜೆಪಿಯವರು ಕಾಯುತ್ತಿದ್ದಾರೆ ಎಂದು ಕಿಡಿಕಾರಿದರು. ಪಹಲ್ಗಾಮ್‌ ದಾಳಿ ವೇಳೆ 26 ಜನ ಮೃತಪಟ್ಟರು‌. ಪಹಲ್ಗಾಮ್‌‌ಗೆ ಪ್ರಧಾನಮಂತ್ರಿ ಹೋಗಿದ್ದಾರ? ಆ ಘಟನೆಗೆ ಭದ್ರತಾ ವೈಫಲ್ಯ ಕಾರಣ ಅಲ್ಲವಾ..? ನೂರಾರು ಪ್ರವಾಸಿಗರು ಹೋಗುವ ಜಾಗದಲ್ಲಿ ಪೊಲೀಸರು ಇಲ್ಲ, ಸೆಕ್ಯೂರಿಟಿ ಕೂಡ ಇಲ್ಲ ಎಂದು ಪ್ರಶ್ನಿಸಿದರು. ಇನ್ನೂ ಸ್ಪೀಕರ್‌‌ ಯ.ಟಿ.ಖಾದರ್‌ಗೆ ಬೆದರಿಕೆ ಕರೆ ಬಂದ ವಿಚಾರವಾಗಿ ಪ್ರತಿಕ್ರಿಯಿಸಿ, ನನಗೂ ಬೆದರಿಕೆ ಕರೆಗಳು ಬರುತ್ತವೆ, ಬಂದಿವೆ. ಸ್ಪೀಕರ್‌‌ಗೆ ಬಂದ ಬೆದರಿಕೆ ಕರೆ ಬಗ್ಗೆ ಪತ್ತೆ ಹಚ್ಚಿ ಕ್ರಮವಹಿಸಲು ಸೂಚಿಸಲಾಗಿದೆ ಎಂದರು.   https://ainkannada.com/hindu-activist-suhash-shetty-murdered-prohibitory-orders-imposed-in-mangalore/ ಇದೇ ವೇಳೆ RSS ಯಾವತ್ತು ಮೀಸಲಾತಿ ಒಪ್ಪಿಲ್ಲ.…

Read More

ಬೆಂಗಳೂರು:- ದ್ವಿತೀಯ ಪಿಯುಸಿ ಫಲಿತಾಂಶದ ಬಳಿಕ ತಮ್ಮ ಫಲಿತಾಂಶದ ಕಡೆ ಹೆಚ್ಚು ಟೆನ್ಷನ್ ತೆಗೆದುಕೊಂಡಿದ್ದ SSLC ವಿದ್ಯಾರ್ಥಿಗಳು ಕೊನೆಗೂ ರಿಲೀಫ್ ಆಗುವ ಕ್ಷಣ ಬಂದೇ ಬಿಟ್ಟಿದೆ. ಮಾರ್ಚ್ ಏಪ್ರಿಲ್ ನಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ 66.14% ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. https://ainkannada.com/simple-star-rakshit-shetty-finally-gives-good-news/ ಎಂದಿನಂತೆ ಬಾಲಕರಿಗಿಂತ ಬಾಲಕಿಯರು ಹೆಚ್ಚು ಪ್ರತಿಶತದಷ್ಟು ಫಲಿತಾಂಶ ಪಡೆದಿದ್ದಾರೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ. ಫಲಿತಾಂಶ ಹೀಗಿದೆ! ಹಾಜರಾದ ವಿದ್ಯಾರ್ಥಿಗಳು 842173 ಉತ್ತೀರ್ಣರಾದರು 524984 ಶೇಕಡಾ 66.14% ಫೇಲ್ ಆದವರು – 317,189 ಕರ್ನಾಟಕ SSLC ಫಲಿತಾಂಶ ದಿನಾಂಕ ಮತ್ತು ಸಮಯವನ್ನು ಪರೀಕ್ಷಾ ಮಂಡಳಿಯು ಅಧಿಕೃತವಾಗಿ ಘೋಷಿಸಿದೆ. 2024-25ನೇ ಸಾಲಿನ ಎಸ್​​ಎಸ್​ಎಲ್‌​​ಸಿ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.…

Read More

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಜಾಫ್‌ಗಢ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಶುಕ್ರವಾರ ನಸುಕಿನ ಜಾವ ಈ ಅವಘಡ ಸಂಭವಿಸಿದೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು, ಈ ಅವಘಡ ಸಂಭವಿಸಿದೆ. 26 ವರ್ಷದ ಜ್ಯೋತಿ ಮತ್ತು ಆಕೆಯ ಮೂರು ಮಕ್ಕಳು ಮೃತಪಟ್ಟಿದ್ದಾರೆ. ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದು, ನಾಲ್ವರನ್ನೂ ಅವಶೇಷಗಳಿಂದ ಹೊರತೆಗೆದಿದ್ದಾರೆ. ಇನ್ನೂ ಘಟನೆಯಲ್ಲಿ ಜ್ಯೋತಿ ಅವರ ಪತಿ ಅಜಯ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ​https://ainkannada.com/rain-havoc-in-bengaluru-one-death-traffic-jams-in-many-places/ ಭಾರತ ಹವಾಮಾನ ಇಲಾಖೆ ನಗರದಲ್ಲಿ ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನಗರದ ಹಲವಾರು ಭಾಗಗಳಲ್ಲಿ ನೀರು ನಿಂತಿರುವುದು ಮತ್ತು ಮರಗಳು ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 1 ರಿಂದ ಮೇ 7 ರವರೆಗೆ ಬಿರುಗಾಳಿ ಮತ್ತು ಮಳೆಯಾಗುವ ನಿರೀಕ್ಷೆಯಿದೆ.

Read More