ಬೆಂಗಳೂರು:- ಮಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಕೊಲೆ ಪ್ರಕರಣವನ್ನು ಪರಿಷತ್ ಶಾಸಕ ಟಿಎ ಶರವಣ ಖಂಡಿಸಿದ್ದಾರೆ. https://ainkannada.com/hindu-activist-suhash-shetty-murdered-prohibitory-orders-imposed-in-mangalore/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಡಲ ತೀರದಲ್ಲಿ ಮುಸ್ಲಿಂ ಮೂಲಭೂತವಾದ ಮತ್ತೆ ಹೆಡೆ ಎತ್ತಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕಗ್ಗೊಲೆ ಗೃಹ ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಆಗಿದೆ ಎಂದರು. ಮಂಗಳೂರು ಬರ್ಬರ ಹತ್ಯಾಕಾಂಡವನ್ನು ಮತ್ತು ಪಾಕಿಸ್ತಾನ ಪರ ಘೋಷಣೆ ಪ್ರಕರಣವನ್ನು ಬಲವಾಗಿ ಖಂಡಿಸಿರುವ ಶರವಣ ಕರ್ನಾಟಕ ಭಾರತದಲ್ಲಿ ಇದೆಯಾ ಅಥವಾ ಪಾಕಿಸ್ತಾನದಲ್ಲಿ ಇದೆಯಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಶಾಂತಿ, ನೆಮ್ಮದಿ ಇಲ್ಲ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ ಇಲ್ಲ. ಹಿಂದೂ ಸಮುದಾಯಕ್ಕೆ ರಕ್ಷಣೆ ಇಲ್ಲ. ಪೊಲೀಸ್ ವ್ಯವಸ್ಥೆ ಕುಸಿದು ಬಿದ್ದಿವೆ. ಕಾಂಗ್ರೆಸ್ ಗುಂಪುಗಾರಿಕೆಯಿಂದ ಅರಾಜಕತೆ ಉಂಟಾಗಿದೆ. ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂದು ಕೆಂಡ ಕಾರಿದ್ದಾರೆ. ಕರ್ನಾಟಕದಲ್ಲಿ ಜಾತಿ ಧರ್ಮದ ಮೇಲೆ ಸಮುದಾಯವನ್ನು ಒಡೆಯುವ ಕಾಂಗ್ರೆಸ್ ನೀತಿಯೇ ಈ ರಕ್ತದೋಕುಳಿ ಗೆ ಕಾರಣವಾಗಿದ್ದು,…
Author: AIN Author
ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಛತ್ರಪತಿ ಶಿವಾಜಿ ಮಹಾರಾಜ್ ಸಂಘದಿಂದ ಪಹಲ್ಗಾಮದಲ್ಲಿ ನಾಗರಿಕರ ಮೇಲೆ ಉಗ್ರದಿಂದ ಹತ್ಯೆ ಖಂಡಿಸಿ ರಬಕವಿಯ ಹೊಸ ಬಸ್ ನಿಲ್ದಾಣದಿಂದ ಶಂಕರಲಿಂಗ ಆವರ್ಣದವರೆಗೂ ಪಂಜಿನ ಮೆರವಣಿಗೆ ಮಾಡಿದರು. ಈ ವೇಳೆ ಮಾತನಾಡಿದ ತೇರದಾಳ ಶಾಸಕ ಸಿದ್ದು ಸವದಿ, ಈ ದೇಶದಲ್ಲಿರುವಂತ ಭಯೋತ್ಪಾದಕರು ಮತ್ತು ಉಗ್ರರನ್ನ ಕೊಲ್ಲುವುದೇ ನಮ್ಮ ಮೊದಲ ಆದ್ಯತೆ ಮತ್ತು ಉಗ್ರರನ್ನು ಸಂಹಾರ ಮಾಡುತ್ತೇವೆ ಎಂದರು. ಯಾರಾದರೂ ಹೇಡಿತನದ ದಾಳಿ ಮಾಡಿ ಅದು ತಮಗೆ ಸಿಕ್ಕಿದ ದೊಡ್ಡ ಗೆಲುವು ಎಂದು ಭಾವಿಸಿದರೆ ಒಂದು ವಿಷಯವನ್ನು ಅರ್ಥಮಾಡಿಕೊಳ್ಳಿ. ಕೇಂದ್ರದಲ್ಲಿ ಇರುವುದು ನರೇಂದ್ರ ಮೋದಿ ಸರ್ಕಾರ. ಯಾರನ್ನೂ ಬಿಡುವುದಿಲ್ಲ. ಭಾರತ ದೇಶದ ಪ್ರತಿಯೊಂದು ಇಂಚಿನಿಂದಲೂ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವುದು ನಮ್ಮ ಸಂಕಲ್ಪ ಮತ್ತು ಆ ಸಂಕಲ್ಪ ಈಡೇರುತ್ತದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ನಾವು ಎಲ್ಲದಕ್ಕೂ ಬಲವಾದ ಉತ್ತರ ನೀಡಿದ್ದೇವೆ, ಅದು ಈಶಾನ್ಯವಾಗಿರಬಹುದು, ಎಡಪಂಥೀಯ ನಕ್ಸಲ್ ವಾದದ ಪ್ರದೇಶಗಳಾಗಿರಬಹುದು ಅಥವಾ ಕಾಶ್ಮೀರದಲ್ಲಿ…
ಮಂಗಳೂರು: ಬಜ್ಪೆ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ಕೊಟ್ಟಿವೆ. ಈ ಬಗ್ಗೆ ವಿಹೆಚ್ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್ ವೆಲ್ ತಮ್ಮ ಫೇಸ್ಬುಕ್ ನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್ ಕರೆ ಕೊಟ್ಟಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನೊಂದೆಡೆ ಸುಹಾಶ್ ಶೆಟ್ಟಿ ಕೊಲೆ ಬಳಿಕ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲು ನಿಷೇಧಾಜ್ಞೆ ಜಾರಿಗೊಳಿಸಿ ಎಸ್ಪಿ ಯತೀಶ್ ಆದೇಶ ಹೊರಿಡಿಸಿದ್ದಾರೆ. https://ainkannada.com/finish-post-goes-viral-in-wake-of-hindu-activist-suhash-shettys-murder/ ಇನ್ನೊಂದಡೆ ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.
ಇಂದಿನ ದಿನಗಳಲ್ಲಿ ಎಲ್ಲವೂ ಡಿಜಿಟಲ್ ಮಯವಾಗಿದೆ. ಮೊಬೈಲ್ ಮತ್ತು ಲ್ಯಾಪ್ಟಾಪ್, ಕಂಪ್ಯೂಟರ್ ಬಳಕೆ ಹೆಚ್ಚಿದೆ. ಮಕ್ಕಳು, ವಯಸ್ಕರರು, ವೃದ್ಧರು ಹೀಗೆ ಎಲ್ಲಾ ವಯೋಮಾನದವರು ಮೊಬೈಲ್ ಗೆ ಅಂಟಿಕೊಂಡಿದ್ದಾರೆ. ಇವು ಜೀವನದ ಅವಿಭಾಜ್ಯ ಅಂಗಗಳಾಗಿವೆ. 100 ಪ್ರತಿಶತ ಜನರು ಈ ಗ್ಯಾಜೆಟ್ಗಳ ಮೇಲೆ ಅವಲಂಬಿತರಾಗಿದ್ದಾರೆ. ಪ್ರತಿಯೊಂದು ವರ್ಗದವರು ಮೊಬೈಲ್, ಲ್ಯಾಪ್ಟಾಪ್ ಜೊತೆಗೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಆದರೆ ಹೀಗೆ ದೀರ್ಘಕಾಲ ಪರದೆಯ ಮುಂದೆ ಕುಳಿತುಕೊಳ್ಳುವುದು ಹೆಚ್ಚು ಕಾಯಿಲೆಗಳ ಉತ್ಪತ್ತಿಗೂ ಕಾರಣವಾಗುತ್ತಿದೆ. ನಿದ್ರಾಹೀನತೆ, ಫ್ಯಾಟ್, ಹೊಟ್ಟೆಯ ಸುತ್ತಳತೆ ಹೆಚ್ಚಳ, ಚಟುವಟಿಕೆ ಇಲ್ಲದ ದೇಹ, ಜೀರ್ಣಕ್ರಿಯೆ ಸಮಸ್ಯೆ ಹೀಗೆ ಹಲವು ಕಾಯಿಲೆಗಳು ಸುತ್ತುವರೆಯುತ್ತಿವೆ. https://ainkannada.com/sonu-nigam-loses-his-cool-at-bengaluru-concert-after-fan-demands-kannada-song-pahalgam-mein-jo-hua/ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಳಕೆಯಿಂದಾಗಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರುವುದು. ಅದರಲ್ಲೂ ಕೆಲವರಲ್ಲಿ ಬೆನ್ನು ನೋವು, ಸೊಂಟ ನೋವು ಹಾಗೂ ಕುತ್ತಿಗೆ ನೋವಿನ ಸಮಸ್ಯೆಗಳು ಬರಬಹುದು. ಇದಕ್ಕೆ ಮುಖ್ಯ ಕಾರಣ ನಾವು ಬಳಕೆ ಮಾಡುತ್ತಿರುವ ಮೊಬೈಲ್ ಹಾಗೂ ಲ್ಯಾಪ್ ಟಾಪ್. ಇಂತಹ ನೋವುಗಳನ್ನು ಕಡೆಗಣಿಸಿದರೆ, ಆಗ ಇದು…
ಬೆಂಗಳೂರು/ಮಂಗಳೂರು:- ಗುರುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷವು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. https://ainkannada.com/congress-seems-to-be-trying-to-turn-karnataka-into-a-kashmir-situation-by-vijayendra-attacks/ ಬಿವೈ ವಿಜಯೇಂದ್ರ ಹೇಳಿದ್ದೇನು!! ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಹಾಸ್ ಬರ್ಬರ ಹತ್ಯೆ ನಡೆದಿದ್ದು, ಇದು ಪೂರ್ವನಿಯೋಜಿತ ಕೃತ್ಯವಾಗಿದೆ. ಇತ್ತೀಚೆಗೆ ಕಾಶ್ಮೀರದಲ್ಲಿ ಹಿಂದುಗಳ ಹತ್ಯೆಯಾಗಿತ್ತು. ಇದು ಮಾಸುವ ಮುನ್ನವೆ ಮತ್ತೆ ಮಂಗಳೂರಿನಲ್ಲಿ ಹಿಂದುವಿನ ಹತ್ಯೆಯಾಗಿದೆ.. ಸಿದ್ದರಾಮಯ್ಯ ಸರ್ಕಾರ ಬಂದಮೇಲೆ ಎನ್ ಮಾಡಿದ್ರೂ ನಡೆಯುತ್ತದೆ ಅನ್ನೋ ಮನೋಭಾವನೆ ಬಂದಿದೆ. ಅದಕ್ಕೆ ಈ ಘಟನೆ ನಡೆಯುತ್ತಿದೆ. ನಾವು ಹೇಳೋದು ಇಷ್ಟೇ.. ಗೃಹಸಚಿವರು ಬದುಕಿಲ್ಲವಾ..? ಹಿಂದು ಕಾರ್ಯಕರ್ತನ ಜೀವಕ್ಕೆ ಬೆದರಿಕೆ ಇದೆ ಎಂದು ಗೊತ್ತಿದೆ ಆದ್ರೂ ಘಟನೆ ಆಗಿದೆ ಇದಕ್ಕೆ ಏನು ಹೇಳೋಣ ಎಂದು ವಾಗ್ದಾಳಿ ನಡೆಸಿದರು. ಸುಹಾಸ್ ಕೊಲೆಯನ್ನು ನಾವು ಖಂಡಿಸುತ್ತೆನೆ. ಬಿಜೆಪಿ ಇಂದು ರಾಜ್ಯಾವ್ಯಾಪಿ ಹೋರಾಟಕ್ಕೆ ಕರೆ ಕೊಡುತ್ತೆನೆ.…
ಬೆಂಗಳೂರು/ ಮಂಗಳೂರು- ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ. https://ainkannada.com/driver-loses-control-private-bus-overturns-passengers-leg-amputated/ ಈ ಸಂಬಂಧ X ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧದ ಸುದ್ದಿ ಹಸಿಯಾಗಿರುವಾಗಲೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆಯನ್ನು ನೋಡಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ…
ಹಾವೇರಿ : ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿದ್ದು, 7 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಈ ಅವಘಡದಲ್ಲಿ ಓರ್ವ ಪ್ರಯಾಣಿಕನ ಕಾಲು ಕಟ್ ಆಗಿದೆ. ಬಸ್ ನಲ್ಲಿದ್ದ 23 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. https://ainkannada.com/finish-post-goes-viral-in-wake-of-hindu-activist-suhash-shettys-murder/ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ್ಟಿತ್ತು. ಚಾಲಕನ ನಿದ್ರೆಯ ಮಂಪರಿನಲ್ಲಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನೂ ಗಾಯಾಳುಗಳನ್ನು ರಾಣೇಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ರ 50 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿತು https://ainkannada.com/this-piles-wedding-delay-fridays-fate-02-may-2025/ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಕೇವಲ 2 ವಿಕೆಟ್ ನಷ್ಟಕ್ಕೆ 217 ರನ್ ಹೊಡೆಯಿತು. ಕಠಿಣ ಸವಾಲನ್ನು ಪಡೆದ ರಾಜಸ್ಥಾನ 16.1 ಓವರ್ಗಳಲ್ಲಿ 117 ರನ್ ಗಳಿಸಿ ಆಲೌಟ್ ಆಗಿದೆ. ಸತತ 6 ಜಯದೊಂದಿಗೆ ಉತ್ತಮ ರನ್ ರೇಟ್ ಹೊಂದಿರುವ ಕಾರಣ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ ಮೊದಲ ಸ್ಥಾನಕ್ಕೆ ಏರಿದರೆ ಅಷ್ಟೇ ಅಂಕ ಪಡೆದಿರುವ ಆರ್ಸಿಬಿ ಎರಡನೇ ಸ್ಥಾನಕ್ಕೆ ಜಾರಿದೆ. ರಾಜಸ್ಥಾನ್ ತಂಡವು ಆರಂಭಿಕ ಹಂತದಲ್ಲೇ ಆಘಾತ ಅನುಭವಿಸಿತು. ಗುಜರಾತ್ ವಿರುದ್ಧ ಆಡಿದ ಕಳೆದ ಪಂದ್ಯದಲ್ಲಿ ಆರಂಭಿಕರಾದ ಯಶಸ್ವಿ ಜೆಸ್ವಾಲ್…
ಬೆಂಗಳೂರು:- ಇಂದು 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಮಧ್ಯಾಹ್ನ 12.30ರಿಂದ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ಫಲಿತಾಂಶ ಪರಿಶೀಲಿಸಬಹುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. https://ainkannada.com/this-piles-wedding-delay-fridays-fate-02-may-2025/ ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಪ್ರಕಟಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಕೆಲವೇ ಗಂಟೆಗಳಲ್ಲಿ ರಿಸಲ್ಟ್ ಅನೌನ್ಸ್ ಆಗಲಿದೆ. ಇಂದು ಬೆಳಗ್ಗೆ 11:30 ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದೇ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆದಿತ್ತು. ಮಾ.21ರಿಂದ ಏ.4 ರ ವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂದು ಪರೀಕ್ಷೆಯ ಫಲಿತಾಂಶ ಪ್ರಕಟ ಆಗಲಿದ್ದು, ರಿಸಲ್ಟ್ ಏನೇ ಇದ್ದರೂ ಮಕ್ಕಳು ಪಾಸಿಟಿವ್ ಆಗಿರಿ. ಏಕೆಂದರೆ ಅವಕಾಶಗಳು ನಿಮ್ಮ ಮುಂದೆ ಸಾಕಷ್ಟಿದೆ.. ಕುಗ್ಗದೆ…
ಮಂಗಳೂರು : ಬಜ್ಪೆ ಕಿನ್ನಿಪದವು ಎಂಬಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಸಾರ್ವಜನಿಕವಾಗಿ ಸುಹಾಶ್ ಶೆಟ್ಟಿಯ ಕಾರಿಗೆ ಅಪಘಾತ ಮಾಡಿ, ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದೀಗ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫಿನೀಶ್ ಎಂಬ ಪೋಸ್ಟ್ ವೊಂದಯ ವೈರಲ್ ಆಗಿದ್ದು, ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. https://ainkannada.com/hindu-activist-suhash-shetty-brutally-murdered-in-mangalore/ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್ಸ್ಟಾಗ್ರಾಂ ಪೇಜ್ನಲ್ಲಿ ‘ಫಿನೀಶ್’ ಎಂಬ ವಿಡಿಯೋ ಹಂಚಿಕೊಂಡಿದ್ದು, ಇದರ ಜೊತೆಗೆ ‘Waiting for next wicket’ ಅಂತ ಪೋಸ್ಟ್ ಮಾಡಲಾಗಿದೆ. ಇತ್ತೀಚಿಗೆ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ನಡೆದಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.