ಬೆಂಗಳೂರು:- ಇಂದು 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಮಧ್ಯಾಹ್ನ 12.30ರಿಂದ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ಫಲಿತಾಂಶ ಪರಿಶೀಲಿಸಬಹುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. https://ainkannada.com/this-piles-wedding-delay-fridays-fate-02-may-2025/ ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆದಿದ್ದ SSLC ಪರೀಕ್ಷೆಯ ಫಲಿತಾಂಶ ಪ್ರಕಟಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಕೆಲವೇ ಗಂಟೆಗಳಲ್ಲಿ ರಿಸಲ್ಟ್ ಅನೌನ್ಸ್ ಆಗಲಿದೆ. ಇಂದು ಬೆಳಗ್ಗೆ 11:30 ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಇದೇ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ-1 ನಡೆದಿತ್ತು. ಮಾ.21ರಿಂದ ಏ.4 ರ ವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂದು ಪರೀಕ್ಷೆಯ ಫಲಿತಾಂಶ ಪ್ರಕಟ ಆಗಲಿದ್ದು, ರಿಸಲ್ಟ್ ಏನೇ ಇದ್ದರೂ ಮಕ್ಕಳು ಪಾಸಿಟಿವ್ ಆಗಿರಿ. ಏಕೆಂದರೆ ಅವಕಾಶಗಳು ನಿಮ್ಮ ಮುಂದೆ ಸಾಕಷ್ಟಿದೆ.. ಕುಗ್ಗದೆ…
Author: AIN Author
ಮಂಗಳೂರು : ಬಜ್ಪೆ ಕಿನ್ನಿಪದವು ಎಂಬಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಸಾರ್ವಜನಿಕವಾಗಿ ಸುಹಾಶ್ ಶೆಟ್ಟಿಯ ಕಾರಿಗೆ ಅಪಘಾತ ಮಾಡಿ, ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದೀಗ ಸುಹಾಶ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫಿನೀಶ್ ಎಂಬ ಪೋಸ್ಟ್ ವೊಂದಯ ವೈರಲ್ ಆಗಿದ್ದು, ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. https://ainkannada.com/hindu-activist-suhash-shetty-brutally-murdered-in-mangalore/ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್ಸ್ಟಾಗ್ರಾಂ ಪೇಜ್ನಲ್ಲಿ ‘ಫಿನೀಶ್’ ಎಂಬ ವಿಡಿಯೋ ಹಂಚಿಕೊಂಡಿದ್ದು, ಇದರ ಜೊತೆಗೆ ‘Waiting for next wicket’ ಅಂತ ಪೋಸ್ಟ್ ಮಾಡಲಾಗಿದೆ. ಇತ್ತೀಚಿಗೆ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ನಡೆದಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.
ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಜ್ಪೆ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ತನ್ನ ಸ್ನೇಹಿತರೊಂದಿಗೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ವೇಳೆ, ಮೀನಿನ ಟೆಂಪೋ ಗುದ್ದಿಸಿ ಬಳಿಕ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು ಎನ್ನಲಾಗಿದೆ. ಇನ್ನೂ ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್ ಒಳಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕೂಡಲೇ ಸುಹಾಸ್ನನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ ಮಂಗಳೂರಿನ ಹಲವೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜಿಸಲಾಗಿದೆ. https://ainkannada.com/terrorist-attack-in-pahalgam-karnataka-coast-on-high-alert/ ಯಾರು ಈ ಸುಹಾಶ್ ಶೆಟ್ಟಿ..? ಸುರತ್ಕಲ್ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ…
ಸೂರ್ಯೋದಯ – 5:53 ಬೆ. ಸೂರ್ಯಾಸ್ತ – 6:33 ಸಂಜೆ. ಶಾಲಿವಾಹನ ಶಕೆ -1947 ಸಂವತ್-2081 ವಿಶ್ವಾವಸು ನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ವೈಶಾಖ ಮಾಸ, ವಸಂತ ಋತು, ತಿಥಿ – ಪಂಚಮಿ ನಕ್ಷತ್ರ – ಆರ್ದ್ರೆ ಯೋಗ – ಧೃತಿ ಕರಣ – ಬಾಲವ ಮಳೆ ನಕ್ಷತ್ರ :ಭರಣಿ ರಾಹು ಕಾಲ – 10:30 ದಿಂದ 12:00 ವರೆಗೆ ಯಮಗಂಡ – 03:00 ದಿಂದ 04:30 ವರೆಗೆ ಗುಳಿಕ ಕಾಲ – 07:30 ದಿಂದ 09:00 ವರೆಗೆ ಬ್ರಹ್ಮ ಮುಹೂರ್ತ – 4:17 ಬೆ. ದಿಂದ 5:05 ಬೆ. ವರೆಗೆ ಅಮೃತ ಕಾಲ – ಇಲ್ಲ ಅಭಿಜಿತ್ ಮುಹುರ್ತ – 11:47 ಬೆ. ದಿಂದ 12:38 ಮ. ವರೆಗೆ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ಗುರುಬಲವಿದ್ದು ವೈವಾಹಿಕ ಜೀವನದಲ್ಲಿ ಸಮಸ್ಯೆ ನಿವಾರಣೆ, ನ್ಯಾಯಾಲಯದ ತೀರ್ಪು ನಿಮ್ಮಂತಾಗಲಿದೆ, ಹೊಸ ಪ್ರಯತ್ನ ಲಾಭಗಳಿಸುವಿರಿ, ಉದ್ಯೋಗದಲ್ಲಿ ನಿಮಗೆ…
ಬಲಗೈ ಬೆರಳಿಗೆ ಗಾಯವಾಗಿರುವ ಹಿನ್ನೆಲೆ ಐಪಿಎಲ್ನಿಂದಲೇ ರಾಜಸ್ಥಾನ್ ವೇಗಿ ಸಂದೀಪ್ ಶರ್ಮಾ ಔಟ್ ಆಗಿದ್ದಾರೆ. ರಾಜಸ್ಥಾನ್ ರಾಯಲ್ಸ್, ಆಡಿದ 9 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಮಾತ್ರ ಜಯಗಳಿಸಿದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ತಂಡದ ಅನುಭವಿ ವೇಗದ ಬೌಲರ್ ಸಂದೀಪ್ ಶರ್ಮಾ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದಲೇ ಹೊರಬಿದಿದ್ದಾರೆ. https://ainkannada.com/virat-kohli-virat-seems-to-listen-to-this-song-over-and-over-again-do-you-know-what-it-is/ ಏಪ್ರಿಲ್ 28 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಸಂದೀಪ್ ಶರ್ಮಾ ಗಾಯಗೊಂಡಿದ್ದರು. ಗುಜರಾತ್ ಟೈಟಾನ್ಸ್ ಇನ್ನಿಂಗ್ಸ್ನ 16 ನೇ ಓವರ್ ಎಸೆದಿದ್ದ ಸಂದೀಪ್ ಶರ್ಮಾ ಅವರ ನಾಲ್ಕನೇ ಎಸೆತವನ್ನು ಗಿಲ್ ಚೆಂಡನ್ನು ಡ್ರೈವ್ ಮಾಡಿದರು. ಸಂದೀಪ್ ತನ್ನ ಫಾಲೋ ಥ್ರೂನಲ್ಲಿ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಈ ವೇಳೆ ಅವರ ಬಲಗೈ ಬೆರಳಿಗೆ ಗಾಯವಾಯಿತು. ಇದರ ಹೊರತಾಗಿಯೂ, ಅವರು ಬೌಲಿಂಗ್ ಮುಂದುವರಿಸಿ ನಾಲ್ಕು ಓವರ್ಗಳ ಕೋಟಾವನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ಅವರು 4 ಓವರ್ಗಳಲ್ಲಿ 33 ರನ್ಗಳಿಗೆ ಒಂದು ವಿಕೆಟ್ ಪಡೆದರು. ಮೇ 1…
ವಿರಾಟ್ ಕೊಹ್ಲಿ ಈ ಜೆನೆರೇಶನ್ ನ ಅತ್ಯಂತ ಪ್ರತಿಭಾನ್ವಿತ ಭಾರತೀಯ ಕ್ರಿಕೆಟಿಗರಲ್ಲಿ ಒಬ್ಬರು ಮತ್ತು ಜನರು ಅವರನ್ನು ಕಿಂಗ್ ಕೊಹ್ಲಿ ಅಂತಾನೆ ಕರೆಯುತ್ತಾರೆ. ವಿರಾಟ್ ಮೈದಾನದಲ್ಲಿ ತಮ್ಮ ಅದ್ಭುತವಾದ ಬ್ಯಾಟಿಂಗ್ ಮೂಲಕ ಜಗತ್ತನ್ನೆ ಸೆಳೆದಿದ್ದಾರೆ, ಮಾತ್ರವಲ್ಲದೆ, ಅವರ ಫಿಟ್ನೆಸ್ ನೋಡಿ ಅನೇಕ ಜನರು ಆಶ್ಚರ್ಯಚಕಿತರಾಗಿದ್ದಾರೆ. 36 ನೇ ವಯಸ್ಸಿನಲ್ಲಿಯೂ ಅವರು ಮೈದಾನದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ವಿರಾಟ್ ಅವರ ಫಿಟ್ನೆಸ್ ಬಗ್ಗೆ ಜನ ಯಾವಾಗಲೂ ಉತ್ಸುಕರಾಗಿರುತ್ತಾರೆ. ವಿರಾಟ್ ತಮ್ಮ ಫಿಟ್ನೆಸ್ ಕಾಪಾಡಿಕೊಳ್ಳಲು ಹೆಚ್ಚಿನ ಗಮನ ನೀಡುತ್ತಾರೆ. ಹೀಗಾಗಿ ಅವರು ಅಭಿಮಾನಿಗಳನ್ನು ಸೆಳೆಯುತ್ತಾರೆ. https://ainkannada.com/rain-havoc-in-bengaluru-one-death-traffic-jams-in-many-places/ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಸ್ಟಾರ್ ಬ್ಯಾಟರ್ ಆಗಿದ್ದು, ಕಳೆದ 18 ವರ್ಷಗಳಿಂದ ಆರ್ಸಿಬಿ ತಂಡದಲ್ಲಿ ಆಡುತ್ತಿರುವುದು ವಿಶೇಷವಾಗಿದೆ. ಕೊಹ್ಲಿ ಮೈದಾನದಲ್ಲಿ ಅಭ್ಯಾಸ ಮಾಡುವಾಗ, ಏರ್ಪೋರ್ಟ್, ವಿಮಾನದಲ್ಲಿ ಪ್ರಯಾಣ ಮಾಡುವಾಗ ಅದೊಂದು ಸಾಂಗ್ ಅನ್ನು ಪದೇ ಪದೇ ಕೇಳುತ್ತಿರುತ್ತಾರೆ. ಆ ಹಾಡು ಎಂದರೆ ವಿರಾಟ್ಗೆ ತುಂಬಾ ಇಷ್ಟವಂತೆ. ಹೀಗಾಗಿಯೇ ಏರ್ಫೋನ್ ಹಾಕೊಂಡು ಒಂದೇ ಹಾಡನ್ನು ಪದೇ ಪದೇ ಕೇಳುತ್ತಿರುತ್ತಾರೆ.…
ಬೆಂಗಳೂರು:- ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕತ್ರಿಗುಪ್ಪೆಯ ಎಂ.ಎಂ.ಬಾರ್ ಬಳಿ ಜರುಗಿದೆ. https://ainkannada.com/high-alert-at-tourist-destinations-in-uttara-kannada-in-the-wake-of-the-pahalgam-attack/ ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇನ್ನು, ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಏಕಾಏಕಿ ಮಳೆ ಬಂದಿದ್ದರಿಂದ ಬಸ್ ನಿಲ್ದಾಣಗಳಲ್ಲಿ ಜನ ಆಶ್ರಯ ಪಡೆಯುತ್ತಿದ್ದಾರೆ. ಬೈಕ್ ಸವಾರರು ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಬಳಿ ನಿಂತಿದ್ದಾರೆ. ಮಳೆಗೆ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಟ್ರಾಫಿಕ್ಜಾಮ್ ಉಂಟಾಗಿದೆ. ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ :ಕಾಶ್ಮೀರ ದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ನರಮೇದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ಕಾವಲು ಪಡೆ ಹಾಗೂ ಭಾರತೀಯ ತಟರಕ್ಷಕ ದಳ ಅಲರ್ಟ್ ಆಗಿದ್ದು ಎಲ್ಲೆಡೆ ತಪಾಸಣೆ ನಡೆಸಲಗ್ತಾ ಇದೆ ಈ ಕುರಿತು ಒಂದು ಸ್ಟೋರಿ ಇಲ್ಲಿದೆ.. https://ainkannada.com/along-with-the-caste-census-a-social-educational-and-economic-survey-should-also-be-conducted-chief-minister-siddaramaiah-demands/ ಸದ್ಯ ಎಲ್ಲೇಲ್ಲೂ ಸುಡುಬಿಸಿಲು, ಮಕ್ಕಳಿಗೆ ಬೇಸಿಗೆ ರಜೆ.. ಈ ಹಿನ್ನಲೆಯಲ್ಲಿ ಬಹುತೇಕ ಪ್ರವಾಸಿ ತಾಣಗಳು ಈಗ ಫುಲ್ ರಶ್.. ಸದ್ಯ ಉತ್ತರ ಕನ್ನಡ ಜಿಲ್ಲೆಗೂ ಸಹ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಮುರುಡೇಶ್ವರ, ಗೋಕರ್ಣ ಸೇರಿದಂತೆ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಮಾಹಿತಿ ಕಲೆ ಹಾಕುತಿದ್ದು , ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಬರುವ ಪ್ರವಾಸಿಗರ ಮಾಹಿತಿ ಪಡೆಯಲಾಗುತ್ತುದೆ. ಇನ್ನು ಕರಾವಳಿ ಕಾವಲುಪಡೆ ಹಾಗೂ ಭಾರತೀಯ ತಟರಕ್ಷಣಾ ಪಡೆಗಳು ಕರಾವಳಿ ಭಾಗದಲ್ಲಿ ಶತ್ರಗಳು ಒಳ ನುಗ್ಗದಂತೆ ತಡೆಯಲು ಬೋಟುಗಳ ತಪಾಸಣೆ ನಡೆಸುತಿದ್ದು, ಕರಾವಳಿ ಭಾಗದಲ್ಲಿ ಬಿಗಿ ತಪಾಸಣೆ…
ಬೆಂಗಳೂರು, ಮೇ 01: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. https://ainkannada.com/modi-is-relentless-in-misleading-indians-with-lies-cm-siddaramaiahs-sarcasm/ ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ , ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು.…
ಹುಬ್ಬಳ್ಳಿ ಮೇ 1: ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/while-congress-is-helping-the-poor-bjp-is-waiving-the-loans-of-the-rich-dcm-d-k-shivakumar/ ಕೇಂದ್ರ ಸರ್ಕಾರದ ದೇಶ ವಿರೋಧಿ ವರ್ತನೆ, ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆಯ ಜನದ್ರೋಹವನ್ನು ಖಂಡಿಸಿ ನಡೆದ ಜನತಾ ಸಮಾವೇಶದಲ್ಲಿ ಮಾತನಾಡಿದರು. ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಅಕ್ಕಿಯಿಂದ ಚಿನ್ನದವರೆಗೂ ಎಲ್ಲದರ ಬೆಲೆ ಆಕಾಶಕ್ಕೆ ಏರಿದೆ. ದೇಶದ, ರಾಜ್ಯದ ಜನರಿಗೆ ಬಿಜೆಪಿ ಪರಿವಾರದ ಈ ಜನದ್ರೋಹ ಅರ್ಥವಾಗಿದೆ. ಇದನ್ನು ಮರೆ ಮಾಚಲು ತಮ್ಮ ಜನದ್ರೋಹವನ್ನು ಮುಚ್ಚಿಕೊಳ್ಳಲು ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದರು. ಉಪ್ಪು, ಸಕ್ಕರೆ, ಟೀ, ಕಾಫಿ, ಅಕ್ಕಿ, ಬೇಳೆ, ಎಣ್ಣೆ, ಕಾಳು, ಚಿನ್ನ, ಬೆಳ್ಳಿ, ರಸಗೊಬ್ಬರ, ಔಷಧ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿ ಎಲ್ಲದರ ಬೆಲೆ ಆಕಾಶಕ್ಕೆ ಏರಿಸಿರುವ…