Author: AIN Author

ಹುಬ್ಬಳ್ಳಿ:- ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. https://ainkannada.com/ajith-kumar-calls-himself-accidental-actor-reveals-shocking-reason-behind-why-he-joined-films/ ಕೇಂದ್ರ ಬೆಲೆ ಏರಿಕೆ ವಿರುದ್ಧ ಹಾಗೂ ಸಂವಿಧಾನ ರಕ್ಷಣೆಗೆ ಹುಬ್ಬಳ್ಳಿಯ ಗಿರಿನಿಚಾಳ ಮೈದಾನದಲ್ಲಿ ಗುರುವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಕಾರ್ಮಿಕರ ದಿನದಂದು ಕಾರ್ಮಿಕ ಸಚಿವರ ಜಿಲ್ಲೆಯಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ದೇಶಕ್ಕೆ ದೊಡ್ಡ ಸಂದೇಶ ರವಾನೆಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಇದಕ್ಕೆ ಕೊನೆಯಾಡಲು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಆದೇಶದಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಯಿತು.…

Read More

ವಿಜಯಪುರ:- ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ಕೆರೆಯಲ್ಲಿ ಜರುಗಿದೆ. ತುಕಪ್ಪ ಗೌಡರ ( 47) ಸಾವನ್ನಪ್ಪಿರುವ ವ್ಯಕ್ತಿ. https://ainkannada.com/firing-case-notice-issued-to-rikki-rai-to-appear-for-hearing/ ಬೇಸಿಗೆ ಬಿಸಿಲು ಹಿನ್ನೆಲೆ ಕೆರೆಯಲ್ಲಿ ಇಬ್ಬರು ಈಜಲು ತೆರಳಿದ್ದರು. ಇದರಲ್ಲಿ ಓರ್ವ ನೀರು ಪಾಲಾಗಿದ್ದರೆ, ಮತ್ತೊರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಮಾಹಿತಿ ಆಧರಿಸಿ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ಮೃತದೇಹಕ್ಕಾಗಿ ಶೋಧ ನಡೆದಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ರಾಮನಗರ:- ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ಬಿಡದಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. https://ainkannada.com/crazy-update-on-rocky-bhai-toxic-movie-do-you-know-in-how-many-languages-it-will-be-released/ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅವಶ್ಯಕತೆ ಇದ್ದು ಖುದ್ದು ಠಾಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ಬುಧವಾರ ನೋಟಿಸ್ ನೀಡಿದ್ದಾರೆ. ಫೈರಿಂಗ್‌ನ ವೇಳೆ ರಿಕ್ಕಿ ರೈ ಕೈ ಹಾಗೂ ಮೂಗಿನ ಭಾಗಕ್ಕೆ ಗಂಭೀರ ಗಾಯವಾಗಿತ್ತು 2 ಆಪರೇಷನ್‌ಗಳಿಗೆ ಒಳಗಾಗಿದ್ದ ರಿಕ್ಕಿ ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಂಧಿತ ಗನ್‌ಮ್ಯಾನ್ ವಿಠ್ಠಲ್ ಫೈರಿಂಗ್ ಮಾಡಿರುವ ಶಂಕೆ ಇದ್ದು, ಘಟನೆ ಸಂಬಂಧ ವಿಚಾರಣೆಯಲ್ಲಿ ವಿಠ್ಠಲ್ ಯಾವುದೇ ಸತ್ಯ ಬಾಯ್ಬಿಡುತ್ತಿಲ್ಲ. ಹೀಗಾಗಿ ರಿಕ್ಕಿ ರೈ ಹಾಗೂ ಆರೋಪಿ ವಿಠ್ಠಲ್ ಮುಖಾಮುಖಿ ವಿಚಾರಣೆ ನಡೆಸಲು ಪೊಲೀಸರ ಸಿದ್ಧತೆ ನಡೆಸಿದ್ದಾರೆ.

Read More

ಗದಗ:- ನವ ದಂಪತಿಯ ಆತ್ಮಹತ್ಯೆ ಘಟನೆ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ಜರುಗಿದೆ. ವಿಕ್ರಮ ಶಿರಹಟ್ಟಿ (30) ಹಾಗೂ ಪತ್ನಿ ಶಿಲ್ಪಾ (28) ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. https://ainkannada.com/rain-news-heavy-rain-in-karnataka-for-the-next-three-days/ ತಮ್ಮ ವೈಯಕ್ತಿಕ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ದಂಪತಿಗಳು ಮಾನಸಿಕವಾಗಿ ಹತಾಶರಾಗಿದ್ದ ಶಂಕೆ ವ್ಯಕ್ತವಾಗಿದೆ. ಶಿಲ್ಪಾಗೆ ಬಲ ಕಣ್ಣಿನ ಸಮಸ್ಯೆ ಇದ್ದರೆ, ವಿಕ್ರಮಗೆ ಉಸಿರಾಟದ ತೊಂದರೆ ಇದ್ದುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ ಜೀವನದಲ್ಲಿ ನಿರಾಸೆಯ ಅನುಭವಕ್ಕೆ ಒಳಗಾದ ದಂಪತಿ ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/may-day-rally-held-at-chandapura-circle-on-the-occasion-of-labor-day/ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

Read More

ಬೆಂಗಳೂರು:- ಇಂದು ಸಿಐಟಿಯು ಆನೇಕಲ್ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ತಾಲ್ಲೂಕಿನ ಚಂದಾಪುರ ಸರ್ಕಲ್ ನಲ್ಲಿ ಮೇ ಡೇ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಕೈಗಾರಿಕಾ ಕಾರ್ಮಿಕರು,ಕಟ್ಟಡ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು,ರೈತ ಮುಖಂಡರುಗಳು ಮೆರವಣಿಗೆಯಲ್ಲಿ ಕಾರ್ಮಿಕರು ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ಬಹಿರಂಗ ಸಭೆಯ ಸ್ವಾಗತವನ್ನು ಸಿಐಟಿಯು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಸುನೀಲ್ ಜಿ.ಪಿ. ಮಾಡಿದರು. ಧ್ವಜಾರೋಹಣವನ್ನು ಸಿಐಟಿಯು ತಾಲ್ಲೂಕು ಅಧ್ಯಕ್ಷರಾದ ಪಿ.ಸುರೇಶ ನೆರವೇರಿಸಿ ಮಾತನಾಡಿದರು. ತಾಲೂಕು ಉಪಾಧ್ಯಕ್ಷರಾದ ಡಿ.ಮಹದೇಶ್ ಮಾತನಾಡಿದರು.ಸಿಐಟಿಯು ರಾಜ್ಯ ಕಾರ್ಯದರ್ಶಿ ಕಾಂ” ಬಿ.ಎನ್. ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಕೆ. ಬಾಲರಾಜ್ ರವರು ಮಾತನಾಡಿದರು.ತಾಲ್ಲೂಕಿನ ಭೂಸ್ವಾಧೀನ ಹೋರಾಟ ಸಮಿತಿ ಮುಖಂಡರು ಚಂದ್ರಾರೆಡ್ಡಿ ಭಾಗವಹಿಸಿ ಮಾತನಾಡಿದರು. ತಾಲೂಕು ಖಜಾಂಚಿ ಜಿ.ಡಿ. ಚನ್ನಪ್ಪ ರವರು ವಂದನಾರ್ಪಣೆಯನ್ನು ಸಲ್ಲಿಸಿದರು.

Read More

ನಮ್ಮಲ್ಲಿರುವ ಅನೇಕ ತರಕಾರಿಗಳು, ಮಸಾಲೆ ಪದಾರ್ಥಗಳು ಬರೀ ನಮ್ಮ ಅಡುಗೆಗೆ ರುಚಿ ಕೊಡುವುದಲ್ಲದೆ, ಅನೇಕ ರೀತಿಯ ಆರೋಗ್ಯಕರ ಪ್ರಯೋಜನಗಳನ್ನು ಸಹ ಹೊಂದಿದೆ. ಅದರಲ್ಲಿಯೂ ಶುಂಠಿ, ಬೆಳ್ಳುಳ್ಳಿ ಅಂತಹ ಆಹಾರ ಪದಾರ್ಥಗಳು ಅನೇಕ ಶತಮಾನಗಳಿಂದ ಅಡುಗೆಮನೆಯ ಭಾಗವಾಗಿದೆ. ಅಷ್ಟೇ ಅಲ್ಲದೆ, ಈ ಮೂಲಿಕೆಯು ಅದರ ಬ್ಯಾಕ್ಟೀರಿಯಾ ಮತ್ತು ನಂಜುನಿರೋಧಕ ಗುಣದಿಂದಾಗಿ ಗುಣಪಡಿಸುವ ಮತ್ತು ಔಷಧೀಯ ಗುಣಗಳನ್ನು ಹೊಂದಿದೆ. https://ainkannada.com/discord-in-actress-lasya-nagarajs-family-mother-physically-attacked-by-her-own-sister/ ಬೆಳ್ಳುಳ್ಳಿಯನ್ನು ಸಾಮಾನ್ಯವಾಗಿ ಹಸಿಯಾಗಿ ತಿನ್ನಲು ಯಾರೂ ಕೂಡ ಇಷ್ಟಪಡುವುದಿಲ್ಲ. ಏಕೆಂದರೆ ಇದರ ಗಾಢವಾದ ವಾಸನೆ ಯಾರಿಗೂ ಇಷ್ಟವಾಗುವುದಿಲ್ಲ. ಅದೂ ಅಲ್ಲದೆ ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿನ್ನಬಾರದು ಎಂದು ಹೇಳುತ್ತಾರೆ. ಇದು ಹೊಟ್ಟೆಯಲ್ಲಿ ಅಲ್ಸರ್ ಸೇರಿದಂತೆ ಇನ್ನು ಅನೇಕ ಬಗೆಯ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ. ಏನೆಲ್ಲಾ ಆರೋಗ್ಯ ತೊಂದರೆಗಳು ಮಿತಿಮೀರಿದ ಬೆಳ್ಳುಳ್ಳಿ ಸೇವನೆಯಿಂದ ಉಂಟಾಗುತ್ತವೆ ಎಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಹಲವು ಬಗೆಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುವಲ್ಲಿ ಬೆಳ್ಳುಳ್ಳಿಯ ಪಾತ್ರ ಪ್ರಮುಖವಾಗಿರುತ್ತದೆ. ಹಾಗೆಂದು ಅತಿಯಾಗಿ ತಿನ್ನಲು ಹೋದರೆ ಬೆಳ್ಳುಳ್ಳಿಯಿಂದ ಆರೋಗ್ಯ ಸಮಸ್ಯೆಗಳು ಕಂಡುಬರುತ್ತವೆ. ಬೆಳ್ಳುಳ್ಳಿಯಲ್ಲಿ…

Read More

ಬಾಗಲಕೋಟೆ:  ಶ್ರೀ ಬಸವಣ್ಣನವರು ಮಾನವ ಕುಲಕ್ಕೆ ಮಾದರಿಯಾದವರು ಬಸವಣ್ಣನವರು ಹೇಳಿದ ಒಂದು ವಚನ ಭಯೋತ್ಪಾದಕರಿಗೆ ಅರ್ಥವಾಗಿದ್ದರೆ, ಜಮ್ಮು ಕಾಶ್ಮೀರ್ ಜಿಲ್ಲೆಯ ಅನಂತನಾಗ್ ಪುರದ ಪಹಲ್ಗಾಮದಲ್ಲಿ ನಾಗರಿಕರ ಹತ್ಯೆ ಆಗುತ್ತಿರಲಿಲ್ಲ ಎಂದು ಶ್ರೀ ಕುಂ ವೀರಭದ್ರಪ್ಪ ಹಿರಿಯ ಸಾಹಿತಿ ಹೇಳಿದರು. ಜಾತಿ ರಹಿತ, ವರ್ಣರಹಿತ  ಹಾಗೂ ಮೇಲೂ ಕೀಳೆಂಬುದನ್ನು  ಕಿತ್ತೆಸೆದು  ಸಮ ಸಮಾಜವನ್ನು ಕಟ್ಟಿದ ಮಹಾನಪುರುಷ   ಬಸವಣ್ಣನವರು. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳಬೇಕೆಂಬ ಸಂದೇಶ ಮೂಲಕ ಬಸವಣ್ಣನವರು ಕೊಡುಗೆ ನೀಡಿದ್ದಾರೆ.  ಜಾತಿ ತಾರತಮ್ಯ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಎಲ್ಲಾ ಶರಣರು ವಚನಗಳಿಂದ ಸಮಾಜ ಸುಧಾರಣೆಗೆ ಹೆಚ್ಚು ಒತ್ತುಕೊಟ್ಟು ಸಮಾನತೆಗೆ ಮುನ್ನಡೆ ಬರೆದಿದ್ದಾರೆ.  ಇಡೀ ವಿಶ್ವವೇ ಬಸವಣ್ಣನವರನ್ನು ಕಾಯಕಯೋಗಿ ಸಂದೇಶ ಪ್ರೇರಣೆಯಾಗಿದೆ  ಎಂದರು. https://ainkannada.com/terrorist-attack-in-pahalgam-sringeri-math-announces-rs-2-lakh-compensation-for-families-of-deceased/ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ಶಿವದಾಶಿವಯ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (ರಿ) ದೊಡ್ಡಬಳ್ಳಾಪುರ ಬೆಂಗಳೂರು ಬಾಗಲಕೋಟೆ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಯಕ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ…

Read More

ಗದಗ : ಪ್ರೀತಿ ಮಾಡೋದಾಗಿ ಹೇಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.   ಆರೋಪಿ ಕಳೆದ ಏಪ್ರಿಲ್ ‌19ರಂದು ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್​ಗೆ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಸ್ನೇಹಿತ ಬಾಲಕಿ ಮೇಲೆ ಅತ್ಯಾಚಾರ ಎಸಗುವ ದೃಶ್ಯವನ್ನು ಮತ್ತೋರ್ವ ತನ್ನ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬಯಲಿಗೆ ಬಂದಿದ್ದು, ಸದ್ಯ ಪೊಲೀಸರು, ಆರೋಪಿಗಳಾದ ಸಮೀರ್, ಉಮರ್ ಹಾಗೂ ಲಾಡ್ಜ್ ಬುಕ್ ಮಾಡಿ ಸಹಕರಿಸಿದ್ದ ಜಾಕೀರ್ ಹುಸೇನ್​ ನನ್ನು ಪೊಲೀಸರು ಬಂಧಿಸಿದ್ದಾರೆ. https://ainkannada.com/the-reason-for-the-clash-in-mangalore-was-the-shouting-of-pro-pakistan-slogans/ ಈ ಸಂಬಂಧ ಗದಗ ಎಸ್ಪಿ ಬಿ ಎಸ್ ನೇಮಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅಪ್ರಾಪ್ತೆ ಹುಡುಗಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಸಮೀರ್, ಏಪ್ರಿಲ್ ‌19ರಂದು ಆಕೆಯನ್ನು ಪುಸಲಾಯಿಸಿ ಲಾಡ್ಜ್​​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಇದೇ ವೇಳೆ ಸಮೀರ್​ನ ಗೆಳೆಯ…

Read More

ಹಾವೇರಿ:  ಪ್ರಯಾಣಿಕರ ಸೀಟ್ ಮೇಲೆ ಕುಳಿತು ನಮಾಝ್ ಮಾಡಿದ್ದ ಕೆ ಎಸ್ ಆರ್ ಟಿಸಿ ಚಾಲಕನನ್ನು ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ ಈ ಘಟನೆ ನಡೆದಿದ್ದು, ಈತ ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ. https://ainkannada.com/ksrtc-driver-prays-namaz-while-sitting-on-passenger-seat/ ಕಳೆದ ಏಪ್ರಿಲ್ 29ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ಸನ್ನು ಮಾರ್ಗ ಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರು ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ನಮಾಜ್‌ ಮಾಡಿದ್ದಾನೆ. ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Read More