Author: AIN Author

ಚಿಕ್ಕಮಗಳೂರು: ಕಾಶ್ಮೀರ ಪಹಲ್ಗಾಮ್‌ನಲ್ಲಿನ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿರುವ 26ಕುಟುಂಬಗಳಿಗೆ ಶೃಂಗೇರಿ ಮಠದ ವತಿಯಿಂದ 2 ಲಕ್ಷ ಪರಿಹಾರ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠದ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಉಗ್ರರ ದಾಳಿಯನ್ನು ಖಂಡಿಸಿದ್ದು, 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದಿದ್ದಾರೆ. https://ainkannada.com/a-family-from-hubballi-was-saved-from-a-terrorist-attack-here-is-the-exciting-story/ ಅಕ್ಷಯ ತೃತೀಯದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಉಗ್ರರ ದಾಳಿಗೆ ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ ಎಂದಿದ್ದಾರೆ.  ಮುಖದಲ್ಲಿರುವ ಕುಟುಂಬದಲ್ಲಿ ಸಂತೋಷ, ಶ್ರೇಯಸ್ಸು ವೃದ್ಧಿಸಲಿ ಎಂದು ಶ್ರೀಗಳು ತಿಳಿಸಿದ್ದಾರೆ.

Read More

ಬೀದರ್: ಅಂಡರ್‌ವರ್ಲ್ಡ್ ಸೇರಿದಂತೆ ಹಲವು ಕಡೆಗಳಿಂದ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್  ಹೇಳಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಪಿಎಫ್‌ಐನಿಂದ ಯುಟಿ ಖಾದರ್‌ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯಿಸಿದರು. ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪನೆ ಮಾಡುವುದು ಬೇಡ, ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ. ಎಲ್ಲಿ ಹುಟ್ಟಬೇಕು? ಎಲ್ಲಿ ಸಾಯಬೇಕು? ಅದನ್ನ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ದೇವರು ಮಾಡಿಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. https://ainkannada.com/illegal-transportation-of-annabhagya-rice-40-tons-of-rice-seized-in-vijayapura/ ಪಹಲ್ಗಾಮ್ ದಾಳಿ ಖಂಡಿಸಿ ಮಾತನಾಡಿದ ಅವರು, ಕೃತ್ಯವನ್ನು ದಾಳಿಕೋರರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಅದರ ಹಿಂದೆ ಯಾರಿದ್ದಾರೋ ಅವರನ್ನು ಮಟ್ಟ ಹಾಕುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಕೇಂದ್ರದಿಂದ ಜನಗಣತಿ ಜೊತೆಗೆ ಜಾತಿಗಣತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ಕೇಂದ್ರ ಮತ್ತು ರಾಜ್ಯಕ್ಕೆ ಬಿಟ್ಟಿದ್ದು, ಆಡಳಿತ ಪಕ್ಷ, ಪ್ರತಿಪಕ್ಷಗಳಿಗೆ ಮಿತ್ರನಾಗಿ ನಾನು ಸ್ಪೀಕರ್ ಆಗಿದ್ದೇನೆ. ನನ್ನ ಬಾಯಿಗೆ…

Read More

ವಿಜಯಪುರ : ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಹೊರಭಾಗದ ಎನ್​ಎಚ್ 50ರಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.   ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. 600ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯದ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. https://ainkannada.com/a-family-from-hubballi-was-saved-from-a-terrorist-attack-here-is-the-exciting-story/ ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ವೇಳೆ ಆಹಾರ ಮತ್ತು ನಾಗರೀಕ ಇಲಾಖೆಯ ಮ್ಯಾನೇಜರ್ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಲಾರಿ ತಡೆಯುತ್ತಲೇ ಚಾಲಕ ಹಾಗೂ ಕ್ಲೀನರ್ ಲಾರಿ ಬಿಟ್ಟು ಓಡಿ ಹೋಗಿದ್ದಾರೆ.  

Read More

ಚಿಕ್ಕಬಳ್ಳಾಪುರ : ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಸಿಎಂಸಿ ಬಡಾವಣೆಯಲ್ಲಿ ನಡೆದಿದೆ.23 ವರ್ಷ ಎಸ್. ಝಾನ್ಸಿ ಮೃತ ಗೃಹಿಣಿ. ಗಂಡ ಈಶ್ವರ್ ಮನೆಗೆ ಬಂದಾಗ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈಶ್ವರ್‌ ಕ್ರೇನ್‌ ವಾಹನದ ಅಪರೇಟರ್ ಹಾಗೂ ಮಾಲೀಕನಾಗಿದ್ದು ಮನೆಗೆ ಬಂದಾಗ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮೃತಳಿಗೆ 1 ವರ್ಷ 2 ತಿಂಗಳ ಹೆಣ್ಣು ಮಗುವಿದ್ದು ಮಗುವಿನ ಮುಂದೆಯೇ ತಾಯಿ ಸಾವಿನ ಮನೆ ಸೇರಿದ್ದಾಳೆ. ತಾಯಿಯ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ರೆ ಮಗು ತಾಯಿಯ ಕಾಲುಗಳ ಬಳಿ ಮಲಗಿತ್ತಂತೆ.. ಮಗು ಬಿಟ್ಟು ತಾಯಿ ಅದ್ಯಾಕೆ ಆತ್ಮಹತ್ಯೆ ಮಾಡಿಕೊಂಡಳು ಎಂಬುವುದೇ ನಿಗೂಢವಾಗಿದೆ. https://ainkannada.com/woman-arrested-for-sharing-video-claiming-to-be-d-k-sureshs-wife/ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು. ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

Read More

ರಾಮನಗರ : ನಾನು ಮಾಜಿ ಸಂಸದ ಡಿ.ಕೆ.ಸುರೇಶ್‌ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.   ಮಹಿಳೆಯೊಬ್ಬರು ಡಿಕೆ ಸುರೇಶ್ ಜೊತೆಗಿರುವ ರೀತಿ ಫೋಟೋ ಎಡಿಟ್ ಮಾಡಿ ಏ.8 ರಂದು ಫೇಸ್ ಬುಕ್, ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದು, ನಾನು ಡಿ.ಕೆ.ಸುರೇಶ್‌ ಪತ್ನಿ ಎಂದು ಹೇಳಿಕೊಂಡಿದ್ಳು. ಈ ಸಂಬಂಧ ಡಿ.ಕೆ.ಸುರೇಶ್ ಪರ ವಕೀಲ ಪ್ರದೀಪ್ ದೂರು ನೀಡಿದ್ದು, ದೂರಿನ ಹಿನ್ನೆಲೆ ರಾಮನಗರ ಸೆನ್ ಠಾಣೆಯಲ್ಲಿ ಎಫ್ಐಆರ್​​ ದಾಖಲಿಸಿದ್ದಾರೆ. ಅಲ್ಲದೇ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದ ಮಹಿಳೆ ಪವಿತ್ರ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. https://ainkannada.com/a-family-from-hubballi-was-saved-from-a-terrorist-attack-here-is-the-exciting-story/   ಡಿಕೆ ಸುರೇಶ್ ಪರ ವಕೀಲರ ದೂರು ಏನು..? ಮಹಿಳೆ ಡಿಕೆ ಸುರೇಶ್ ರವರ ಪತ್ನಿ ಎಂಬ ಸೋಗಿನಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದರಿಂದ ಸಾರ್ವಜನಿಕವಾಗಿ ತಪ್ಪು ಸಂದೇಶವನ್ನು ಹಬ್ಬಿಸುತ್ತಿದ್ದಾರೆ. ಸುಳ್ಳು ಮಾಹಿತಿಯನ್ನು ನಿಜವೆಂದು ಸಾರ್ವಜನಿಕರು ನಂಬುವಂತೆ ಕೇಡುಬಯಸುವ ದುರುದ್ದೇಶದಿಂದ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳಲಾಗಿದೆ. ಆದ್ದರಿಂದ ಮಹಿಳೆ ವಿರುದ್ಧ ಕಲಂ…

Read More

ಹುಬ್ಬಳ್ಳಿ: ಕಾಶ್ಮೀರದ ಪೆಹಲ್ಗಾಮ್‌ನಲ್ಲಿನ ಉಗ್ರರ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಉಗ್ರರು ದಾಳಿ ನಡೆಸಿದ ಇದೇ ಪ್ರದೇಶದಲ್ಲೇ ಇಡೀ ದಿನ ಸಮಯ ಕಳೆದಿದ್ದ ಹುಬ್ಬಳ್ಳಿ ಮೂಲದ ಕುಟುಂಬವೊಂದು ಕೂದಲೇಳೆಯ ಅಂತರದಲ್ಲಿ ಬಚಾವ್‌ ಆಗಿ ಮರಳಿದೆ. ಕಾಶ್ಮೀರದತ್ತ ಟ್ರಿಪ್‌ ಮಾಡಿದ್ದ ಹುಬ್ಬಳ್ಳಿಯ ಕಲ್ಯಾಣ ಶೆಟ್ಟರ್ ಕುಟುಂಬ, ದೈವ ಕೃಪೆಯಿಂದ ಉಗ್ರರ ದಾಳಿಯಿಂದ ಬಚಾವ್ ಆಗಿ ಬಂದಿದ್ದಾರೆ. ಹುಬ್ಬಳ್ಳಿಯ ಕಲ್ಯಾಣ ಶೆಟ್ಟರ್ ಕುಟುಂಬಸ್ಥರು ಮತ್ತು ಸಂಬಂಧಿಕರು ಸೇರಿ ಒಟ್ಟು 45 ಜನ ಜಮ್ಮು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು.  ಇವರು ಹುಬ್ಬಳ್ಳಿಯಿಂದ ಏಫ್ರಿಲ್‌ 11ರಂದು ಬಸ್ ಮೂಲಕ ಕಾಶ್ಮೀರದತ್ತ ಪ್ರಯಾಣ ಬೆಳಿಸಿದ್ದರು. ಏಪ್ರಿಲ್ 18ರಂದು ಪೆಹಲ್ಗಾಮ್‌ನಲ್ಲಿ ಇಡೀ ದಿನ ಎಂಜಾಯ್ ಮಾಡಿದ್ದಾರೆ. ದುರ್ಗಮ ಮಾರ್ಗದಲ್ಲಿ 7 ಕಿ.ಮಿ ಬೆಟ್ಟ, ಗುಡ್ಡದಲ್ಲಿ ಕುದುರೆ ಸವಾರಿ ಮಾಡಿ ಪೆಹಲ್ಗಾಮ್ ಸೇರಿಕೊಂಡಿದ್ದಾರೆ.  ಬೆಳಗ್ಗೆಯಿಂದ ಸಂಜೆಯ ತನಕವೂ ಪೆಹಲ್ಗಾಮ್ ಸ್ಥಳದಲ್ಲಿ ಆಟವಾಡಿದ್ದರು. https://ainkannada.com/drunk-clash-youth-killed-three-policemen-suspended/ ದಾಳಿ ಆಗುವ ಎರಡು ದಿನದ ಹಿಂದೆನೇ ನಾವು ಪೆಹಲ್ಗಾಮ್ ದಿಂದ ರಿಟರ್ನ್ ಆಗಿದ್ದಿವಿ. ಆದ್ರೆ ಉಗ್ರರು…

Read More

ಮಂಗಳೂರು: ಕುಡುಪು ಬಳಿ ನಡೆದಿದ್ದ ಘರ್ಷಣೆಯಲ್ಲಿ ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ. ಪಿ ಮತ್ತು ಕಾನ್ಸ್‌ಟೇಬಲ್‌ ಯಲ್ಲಾಲಿಂಗ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. https://ainkannada.com/the-reason-for-the-clash-in-mangalore-was-the-shouting-of-pro-pakistan-slogans/ ಆರಂಭದಲ್ಲಿ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಶಿವಕುಮಾರ್‌ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ದೂರು ನೀಡಿದ್ದು, ಈ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190,…

Read More

ಕೋಲಾರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವೀರಶೈವ ಲಿಂಗಾಯತ ಸಮುದಾಯ ಇವರ ಸಂಯುಕ್ತ ಆಶ್ರಯದಲ್ಲಿ ಮಹಾಶರಣ, ವಿಶ್ವಮಾನವ, ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವದ ಅಂಗವಾಗಿ ಅದ್ದೂರಿ ಮೆರವಣಿಗೆಯನ್ನು ನಡೆಸಲಾಯಿತು. ಮೆರವಣಿಗೆಗೆ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ನಗರಸಭಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಚಾಲನೆ ನೀಡಿದರು.‌ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. https://ainkannada.com/labor-day-celebration-under-the-auspices-of-the-a-j-mudhol-fans-association/ ಪ್ರತಿ ವರ್ಷದಂತೆ ಈ ವರ್ಷವೂ ಸಹ ವೀರಶೈವ ಸಮುದಾಯದವರು ಶ್ರದ್ಧಾ ಭಕ್ತಿಗಳಿಂದ ಬಸವೇಶ್ವರರ ಜಯಂತಿಯನ್ನು ಆಚರಿಸುತ್ತಿದ್ದು. ಇನ್ನು ಮೆರವಣಿಗೆಯಲ್ಲಿ ವೀರಗಾಸೆ ಹಾಗೂ ತಮಟೆ ವಾದ್ಯಗಳು ನೋಡುಗರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಡಾ.ನಯನ, ಉಪ ವಿಭಾಗಾಧಿಕಾರಿ ಮೈತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಮುಂತಾದವರು ಉಪಸ್ಥಿತರಿದ್ದರು.

Read More

ರಾಯಚೂರು: ಇಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದರು. ಮಠದ ಅಧಿಕಾರಿಗಳು ಅವರನ್ನು ಸ್ವಾಗತಿಸಿ ರಾಯರ ದರ್ಶನಕ್ಕೆ ಕರೆದೊಯ್ದರು. ನಂತರ, ಪರಮಪೂಜ್ಯ ಸ್ವಾಮೀಜಿ ಅವರು ಶೇಷವಸ್ತ್ರ, ಸ್ಮರಣಿಕೆ ಮತ್ತು ಫಲಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು. ರಾಯರ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ರಾಯರ ದರ್ಶನದ ಬಳಿಕ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರನ್ನು ಭೇಟಿಯಾಗಿ ಮೊಮ್ಮಗನ ಮದುವೆ ಆಹ್ವಾನಿಸಿದರು. ಈ ವೇಳೆ ಶ್ರೀಗಳು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. https://ainkannada.com/coastal-festival-in-hubballi-exhibition-and-sale-of-items-in-50-stores-from-today-dinesh-shetty/

Read More

ಹುಬ್ಬಳ್ಳಿ : ಉತ್ತರ ಕರ್ನಾಟಕ ದಿ.ಎ.ಜೆ ಮುಧೋಳ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಕಾರ್ಮಿಕ ದಿನಾಚರಣೆ ನಡೆಸಲಾಯಿತು. ಇಂದು ಬೆಳಗ್ಗೆ 11, 00ಘಂಟೆಗೆ ನಗರದ ಹಳೇ ಹುಬ್ಬಳ್ಳಿ ರಸ್ತೆಯಲ್ಲಿರುವ ದಿ.ಎ.ಜೆ.ಮುಧೋಳ ಭವನದಿಂದ ಶ್ರೀಯುತರ ಭಾಚಚಿತ್ರದೊಂದಿಗೆ ಟ್ರ್ಯಾಕ್ಟರ್ ಮೂಲಕ ಹೊರಟ ಮೆರವಣಿಗೆಯು ಪಿ ಬಿ ರಸ್ತೆಯಿಂದ ಸಂಚರಿಸಿ ನಗರದ ಇಂದಿರಾ ಗ್ಲಾಸ್‌ ಹೌಸ್‌ ಆವರಣದಲ್ಲಿ ಮುಕ್ತಾಯಗೊಂಡಿತು. https://ainkannada.com/coastal-festival-in-hubballi-exhibition-and-sale-of-items-in-50-stores-from-today-dinesh-shetty/ ಡೊಳ್ಳು ಕುಣಿತ ಮತ್ತು ಕರಡಿ ಮಜಲು ದೊಂದಿಗೆ ಹೊರಟ ಮೆರವಣಿಗೆಯಲ್ಲಿ ಕಾರ್ಮಿಕ ನಾಯಕ ಬಾಬಾಜಾನ್ ಮುಧೋಳ , ರಾಜಶೇಖರ್‌ ಮೆಣಸಿನಕಾಯಿ, ಬಿ ಎ ಮುಧೋಳ್ ಯೂಸುಫ್ ಬೆಳ್ಳಾರಿ, ಪಿ ಡಿ ನದಾಫ ಬೀರಪ್ಪ, ಕೋಟಗಿ ಇಜಾಜ್ , ಮುಧೋಳ ಸಾಯಿನಾಜ್ ಅಮರಗೋಳ್ , ಫಾತಿಮಾ ತಡಕೋಡ ಸೇರಿದಂತೆ ಬಿಡಿ ಮತ್ತು ಅಸಂಘಟಿತ ಕಾರ್ಮಿಕರು, ರಾಷ್ಟ್ರೀಯ ಮಹಿಳಾ ಫೆಡರೇಷನ್ ಧಾರವಾಡ ಜಿಲ್ಲಾ ಆಟೋ ಚಾಲಕರ ಸಂಘ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರೊಂದಿಗೆ ನೂರಾರು ಜನ ಭಾಗವಹಿಸಿದ್ದರು.

Read More